ವಿರಾಜಪೇಟೆ ಜ.5 NEWS DESK : ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೀವಶಾಸ್ತ್ರ ಉಪನ್ಯಾಸಕಿಯಾಗಿ ಹಾಗೂ ಕಾಲೇಜಿನ ಪ್ರಾಂಶುಪಾಲೆಯಾಗಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ಅವರನ್ನು ಕಾಲೇಜಿನ ವತಿಯಿಂದ ಬೀಳ್ಕೊಡುಗೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಚಿಲ್ಲವಂಡ ಕಾವೇರಪ್ಪ, ಪ್ರಾಂಶುಪಾಲರ ಶಿಸ್ತು ಹಾಗೂ ಕರ್ತವ್ಯ ನಿಷ್ಠೆ ಸಂಸ್ಥೆಯ ಬೆಳವಣಿಗೆಗೆ ಭದ್ರ ಬುನಾದಿಯನ್ನು ಹಾಕಿದೆ. ಅವರ ಮಾರ್ಗದರ್ಶನದಲ್ಲಿ ಸಾವಿರಾರು ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ಕಂಡುಕೊಂಡಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಾಂಶುಪಾಲೆ ಜ್ಯೋತಿ ಪ್ರಕಾಶ್, ತಮ್ಮ ಸುದೀರ್ಘವಾದ ವೃತ್ತಿ ಜೀವನದ ಅನುಭವಗಳನ್ನು ಹಂಚಿಕೊಂಡು ಸಹೋದ್ಯೋಗಿಗಳ ಸಹಕಾರ ಹಾಗೂ ವಿದ್ಯಾರ್ಥಿಗಳ ಪ್ರೀತಿಯನ್ನು ಸ್ಮರಿಸಿ ಭಾವುಕರಾದರು. ಪ್ರಾಂಶುಪಾಲೆ ಜ್ಯೋತಿ ಅವರ ತಾಯಿ ನಾಮೇರ ಜಾನಕಿ ಕುಟ್ಟಪ್ಪ, ಕುಟುಂಬಸ್ಥರು, ಸಹ ಉಪನ್ಯಾಸಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ರೈಮಂಡ್ ಸ್ವಾಗತಿಸಿದರು, ಉಪನ್ಯಾಸಕಿ ಚೈತ್ರ ನಿರೂಪಿಸಿದರು, ಉಪನ್ಯಾಸಕಿ ಗಾಯತ್ರಿ…
ಲೇಖಕ: admin
ವಿರಾಜಪೇಟೆ ಜ.5 NEWS DESK : ವಿರಾಜಪೇಟೆ ಸಮೀಪದ ಬೇಟೋಳಿ ಗ್ರಾಮದ ಬಿ.ಬಿ.ರವಿನಂದನ್ ಬೋರ್ಕರ್ ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಜರ್ನಲಿಸಂ ಹಾಗೂ ಮಾಸ್ ಕಮ್ಯುನಿಕೇಷನ್ ವಿಭಾಗದ ಪ್ರಾಧ್ಯಾಪಕಿ ಪ್ರೊ.ಸಪ್ನಾ ಎಂ.ಎಸ್. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ integrity and Teaching Data Journalisam in Indian Universities: An empirical study of status,challenges and strategies ಎಂಬ ಮಹಾ ಪ್ರಬಂಧದಕ್ಕೆ ಬಿ.ಬಿ.ರವಿನಂದನ್ ಬೋರ್ಕರ್ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಡಾ.ಬಿ. ಬಿ.ರವಿನಂದನ್ ಬೋರ್ಕರ್ ರವರು ಬೆಂಗಳೂರಿನ ಸೆಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಜರ್ನಲಿಸಂ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಪ್ರಸ್ತುತ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ. ಇವರು ವಿರಾಜಪೇಟೆ ಬೇಟೋಳಿ ಗ್ರಾಮದ ನಿವೃತ್ತ ಸೈನಿಕರಾದ ಬಿ.ಎನ್. ಬಾಲಕೃಷ್ಣ ಬೋರ್ಕರ್ ಹಾಗೂ ಸುಲೋಚನ ಬೋರ್ಕರ್ ದಂಪತಿಗಳ ಪುತ್ರ.
ಮಡಿಕೇರಿ ಜ.5 NEWS DESK : ಕರ್ನಾಟಕದ ರಾಜ್ಯ ಸರ್ಕಾರವು ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಜಾರಿಗೊಳಿಸಿರುವ ‘ಅಕ್ಕಪಡೆ’ ವಿಶೇಷ ಯೋಜನೆಯನ್ನು ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದು ಮಣಿ ಉದ್ಘಾಟಿಸಿದರು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ.ದಿನೇಶ್ ಕುಮಾರ್, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, ಗೃಹರಕ್ಷಕರು, ಸೇಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು.
ಮೈಸೂರು ಜ.5 NEWS DESK : ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮುರಿಯಲಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ. ಅರಸು ರವರು ಮೈಸೂರಿನವರೇ ಆಗಿರುವುದು ಸಂತೋಷದ ಸಂಗತಿ. ತಾಲ್ಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಸಚಿವನಾಗುವ ಮತ್ತು ಮುಖ್ಯಮಂತ್ರಿಯಾಗುವ ನಿರೀಕ್ಷೆಯಿರಲಿಲ್ಲ. 13 ಚುನಾವಣೆಗಳನ್ನೂ ಎದುರಿಸಿ 8ಕ್ಕೂ ಹೆಚ್ಚು ಬಾರಿ ಗೆಲುವು ಸಾಧಿಸಿದ್ದೇನೆ ಎಂದರು. :: ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ :: ಕಡಿಮೆ ಜನಸಂಖ್ಯೆಯ ಅರಸು ಸಮುದಾಯದವರಾಗಿದ್ದ ದೇವರಾಜ ಅರಸು ಅವರು ಜನಪ್ರಿಯ ನಾಯಕರಾಗಿದ್ದರು. ಅಂತಹ ಮಹಾನ್ ನಾಯಕನಿಗೂ ಮತ್ತು…
ಮಡಿಕೇರಿ ಜ.5 NEWS DESK : ಕಾಸರಗೋಡಿನ ಪ್ರತಿಷ್ಠಿತ ಕನ್ನಡ ಭವನ ಸಂಘಟನೆಯು ಜ.18 ರಂದು ರಜತ ಮಹೋತ್ಸವ ಆಚರಿಸುತ್ತಿದ್ದು, ಈ ಸಂದರ್ಭ ಹಲವು ರಾಜ್ಯಗಳ ಕನ್ನಡ ಹರಿಕಾರರು, ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದೆ ಎಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ವಾಮನ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ. ಪ್ರತಿಷ್ಠಿತ ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿಗೆ ಶಕ್ತಿಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ಅವರನ್ನು ಆಯ್ಕೆ ಮಾಡಲಾಗಿದೆ. ಹಲವು ಪ್ರಶಸ್ತಿಗಳಿಗೆ ಭಾಗಜರಾಗಿರುವ ಬಿ.ಜಿ.ಅನಂತಶಯನ ಅವರನ್ನು ಆಯ್ಕೆ ಮಾಡಲಾಗಿದೆ. “ಕನ್ನಡ ಪಯಶ್ವಿನಿ” ಅಂತರರಾಜ್ಯ ಪ್ರಶಸ್ತಿಯನ್ನು ಕೊಡಗಿನ ಹಿರಿಯ ಸಾಹಿತಿ, ನಿವೃತ್ತ ಸೇನಾನಿ ಕಿಗ್ಗಾಲು ಗಿರೀಶ್, ಸಾಹಿತಿ ಭಾರಧ್ವಜ್ ಕೆ.ಆನಂದತೀರ್ಥ ಬರಹ ಮತ್ತು ಸಿನಿಆ ಕ್ಷೇತ್ರಗಳಲ್ಲಿ ಪ್ರಶಸ್ತಿಗಳಿಗೆ ಭಾಜನರಾಗಿರುವ ಈರಮಂಡ ಹರಿಣಿ ವಿಜಯ್, ಲೇಖಕಿ, ನಿರೂಪಕಿ, ಪ್ರಾಧ್ಯಾಪಕಿ ಪ್ರತಿಮಾ ರೈ, ಗೌರಮ್ಮ ಪ್ರಶಸ್ತಿ ವಿಜೇತೆ ಸಾಹಿತಿ ಸಂಗೀತ ರವಿರಾಜ್ ಅವರುಗಳಿಗೆ ನೀಡಿ ಗೌರವಿಸಲಾಗುತ್ತಿದೆ. ಜಿಲ್ಲೆಯ ಮಾಧ್ಯಮ ಹಾಗೂ ಇತರ ಕ್ಷೇತ್ರಗಳಲ್ಲಿರುವ…
ಮಡಿಕೇರಿ ಜ.5 NEWS DESK : ಕೊಡಗು ಗೌಡ ಯುವ ವೇದಿಕೆ ವತಿಯಿಂದ ಏ.27 ರಿಂದ ಮೇ 17ರವರೆಗೆ ‘ಗೌಡ ಕುಟುಂಬಗಳ’ ಸಮ್ಮಿಲನ ಕ್ರೀಡಾಕೂಟ ಮತ್ತು ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕೊಡಗು ಗೌಡ ಯುವ ವೇದಿಕೆಯ ಕಾರ್ಯದರ್ಶಿ ಪುದಿಯನೆರವನ ರಿಶಿತ್ ಮಾದಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌಡ ಜನಾಂಗದ ಒಗ್ಗಟ್ಟು, ಅಭಿವೃದ್ಧಿ, ಹಕ್ಕೊತ್ತಾಯ, ಕ್ರೀಡೆ, ಸಾಮಾಜಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗಾಗಿ ಕಳೆದ ಹಲವು ವರ್ಷಗಳಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ಇದೀಗ ಬಾಳಾಡಿ ಮನೋಜ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕೊಡಗು ಗೌಡ ವೇದಿಕೆಯ ನೂತನ ಸಮಿತಿ ರಚನೆಯಾಗಿದ್ದು, ಈ ಸಮಿತಿ ವತಿಯಿಂದ ಹಲವು ವಿಭಿನ್ನ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲು ಯೋಜನೆ ರೂಪಿಸಲಾಗಿದೆ ಎಂದರು. 10 ಕುಟುಂಬ 18 ಗೋತ್ರದ ಗೌಡ ಜನಾಂಗದ 27ನೇ ವರ್ಷದ ‘ಗೌಡ ಕುಟುಂಬಗಳ’ ಸಮ್ಮಿಲನ ಕ್ರೀಡಾಕೂಟವು ಏ.27 ರಿಂದ ಮೇ 17ರವರೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ರೀಡಾಕೂಟದಲ್ಲಿ ಕುಟುಂಬವಾರು ಟೆನ್ನಿಸ್…
ಮಡಿಕೇರಿ ಜ.5 NEWS DESK : ಮಡಿಕೇರಿಯಲ್ಲಿ ‘ನೀನಾಸಂ ತಿರುಗಾಟ’ ನಾಟಕ ಪ್ರದರ್ಶನವನ್ನು ಜ.9 ಮತ್ತು 10 ರಂದು ನಗರದ ಓಂಕಾರೇಶ್ವರ ದೇವಾಲಯ ರಸ್ತೆಯಲ್ಲಿನ ಭಾರತೀಯ ವಿದ್ಯಾಭವನ ಕೊಡಗು ಕೇಂದ್ರದಲ್ಲಿ ಆಯೋಜಿಸಲಾಗಿದೆ. ಶುಕ್ರವಾರ ಸಂಜೆ 6.30 ಕ್ಕೆ ಬಾನು ಮುಷ್ತಾಕ್ ಅವರ ಕಥೆಯನ್ನು ಆಧರಿಸಿದ ರಂಗಪ್ರಸ್ತುತಿ ‘ಹೃದಯದ ತೀರ್ಪು’ ಪ್ರದರ್ಶನ ಇದ್ದು ರಂಗರೂಪಕ್ಕೆ ಡಾ. ಎಂ ಗಣೇಶ್ ನಿರ್ದೇಶನ ಇದೆ. ಜ.10 ರಂದು ಸಂಜೆ 6.30 ಗಂಟೆಗೆ ಜಿ. ಶಂಕರ ಪಿಳ್ಳೆ ರಚನೆಯ, ದಾಮೋದರ ಶೆಟ್ಟಿ ಕನ್ನಡಕ್ಕೆ ಅನುವಾದಿಸಿರುವ ಶಂಕರ ವೆಂಕಟೇಶ್ವರನ್ ನಿರ್ದೇಶನದ ಅವತರಣಮ್ ಭ್ರಾಂತಾಲಯಮ್ ನಾಟಕ ಪ್ರದರ್ಶನ ಇದೆ. ಎರಡೂ ನಾಟಕಗಳಿಗೂ ಉಚಿತ ಪ್ರವೇಶ ಇರುತ್ತದೆ ಎಂದು ಭಾರತೀಯ ವಿದ್ಯಾಭವನ ಕೊಡಗು ಕೇಂದ್ರದ ಕಾರ್ಯದರ್ಶಿ ಬಾಲಾಜಿ ಕಶ್ಯಪ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಪೋಕ್ಲು ಜ.5 NEWS DESK : ದೆಹಲಿಯಲ್ಲಿ ಜರುಗಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ಕೊಡಗಿನ ಜೆ.ಡಿ.ಸ್ವಾತಿ ಆಯ್ಕೆಯಾಗಿದ್ದಾರೆ. ಮೈಸೂರಿನ ಸೆಂಟ್ ಫಿಲೋಮಿನಾಸ್ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಸ್ವಾತಿ ಎನ್ ಸಿ ಸಿ ಇಂದ ಜೂನಿಯರ್ ಅಂಡರ್ ಆಫೀಸರ್ ಆಗಿ ಜ.26 ರಂದು ದೆಹಲಿಯಲ್ಲಿ ಜರುಗಲಿರುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾಳೆ. ಜೆ.ಡಿ.ಸ್ವಾತಿ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ನೂರಂವಾಡ ಮಠದ ದೇವರಾಜು ಹಾಗೂ ನಯನ ದಂಪತಿಗಳ ಪುತ್ರಿ. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಜ.5 NEWS DESK : ಚೇರಂಬಾಣೆ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪುಟಾಣಿ ವಿಜ್ಞಾನ ಬಳಗದ ವತಿಯಿಂದ ಅಂತಾರಾಷ್ಟ್ರೀಯ ಗಣಿತ ಪ್ರತಿಭಾ ಪರೀಕ್ಷೆಯನ್ನು ಆಯೋಜಿಸಲಾಯಿತು. ಪರೀಕ್ಷೆಯಲ್ಲಿ ಶ್ರೀ ರಾಜರಾಜೇಶ್ವರಿ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದಿಂದ ಒಟ್ಟು 40 ವಿದ್ಯಾರ್ಥಿಗಳು ಹಾಜರಾಗಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಡಿಂಪನ ಬಿ.ಜೆ ಹಾಗೂ 7ನೇ ತರಗತಿ ವಿದ್ಯಾರ್ಥಿ ದುಶ್ಯಂತ್ ಎಂ.ಎಸ್ ರಾಜ್ಯಮಟ್ಟದಲ್ಲಿ ಐದನೇ ಸ್ಥಾನ ಹಾಗೂ 6ನೇ ತರಗತಿ ವಿದ್ಯಾರ್ಥಿ ವರ್ಧನ್ ತಾಲ್ಲೂಕು ಮಟ್ಟದಲ್ಲಿ ಐದನೇ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಶಾಲೆಯ ಗಣಿತ ಶಿಕ್ಷಕರಾಗಿರುವ ಅನಿಲ್ ಯು.ಎಂ, ಬೃಂದಾಕವನ್ ಕುದುಪಜೆ ಹಾಗೂ ಡಿ.ಎಂ.ರಾಜೇಶ್ವರಿ ಮುಖ್ಯ ಶಿಕ್ಷಕರಾದ ಕವನ್ ಕುದುಪಜೆ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸ್ವರೂಪ್ ಕೆ.ಬಿ.ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜ.5 NEWS DESK : ಪಿಎಸ್ಎ ಪ್ರಾಯೋಜಕತ್ವದಲ್ಲಿ ಆರ್ಜಿ ಆಶೀರ್ವಾದ್ ಟರ್ಫ್ ಮೈದಾನದಲ್ಲಿ ನಡೆದ ಪ್ರಥಮ ವರ್ಷದ ನ್ಯಾನೋ ಕ್ರಿಕೆಟ್ ಲೀಗ್ ಸೀಸನ್ 1 ಅತ್ಯಂತ ಯಶಸ್ವಿಯಾಗಿ ನಡೆಯಿತು. ಲೀಗ್ನ ರೋಚಕ ಅಂತಿಮ ಪಂದ್ಯದಲ್ಲಿ ಮೊಹಮ್ಮದ್ ಮುಸ್ತಫ ಅವರ ಮಾಲೀಕತ್ವದ ಬ್ರದರ್ಸ್ ಕ್ರಿಕೆಟ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ತೀವ್ರ ಪೈಪೋಟಿಯಿಂದ ಕೂಡಿದ ಫೈನಲ್ ಪಂದ್ಯದಲ್ಲಿ ಸಿಯಾಬ್ ಅವರ ಮಾಲೀಕತ್ವದ ಸ್ಟ್ರೈಕರ್ಸ್ ಅಂಬಟ್ಟಿ ತಂಡ ರನ್ನರ್-ಅಪ್ ಸ್ಥಾನವನ್ನು ಪಡೆದುಕೊಂಡು ಪ್ರಶಂಸೆಗೆ ಪಾತ್ರವಾಯಿತು. ಪಂದ್ಯಾವಳಿಯ ವೈಯಕ್ತಿಕ ಪ್ರಶಸ್ತಿಗಳಲ್ಲಿ ಸಜೀರ್ ಎ.ಎಸ್. ಅವರು ಟೂರ್ನಮೆಂಟ್ ಅವಧಿಯಲ್ಲಿನ ಶ್ರೇಷ್ಠ ಸರ್ವಾಂಗೀಣ ಪ್ರದರ್ಶನಕ್ಕಾಗಿ ‘ಸರಣಿಯ ಶ್ರೇಷ್ಠ ಆಟಗಾರ (Man of the Series)’ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಜೊತೆಗೆ ಅತ್ಯುತ್ತಮ ಬ್ಯಾಟ್ಸ್ಮನ್, ಅತ್ಯುತ್ತಮ ಬೌಲರ್ ಹಾಗೂ ಅತ್ಯಧಿಕ ಫೋರ್ಗಳನ್ನು ಬಾರಿಸಿದ ಆಟಗಾರ ಎಂಬ ಮೂರು ಪ್ರಮುಖ ಪ್ರಶಸ್ತಿಗಳನ್ನೂ ಪಡೆದುಕೊಂಡರು. ಅತ್ಯುತ್ತಮ ಕ್ಯಾಚ್ ಪ್ರಶಸ್ತಿಯನ್ನು ಆಶಿಕ್ ಪಡೆದರೆ, ಉತ್ತಮ ಫೀಲ್ಡರ್ ಪ್ರಶಸ್ತಿಯನ್ನು ನಿಹಾಲ್ ಎಂ.ಎಸ್. ಅವರು ತಮ್ಮ ಪಾಲಾಗಿಸಿಕೊಂಡರು.…






