ಮಡಿಕೇರಿ ಡಿ.2 NEWS DESK : 66/11 ಕೆ.ವಿ ಶನಿವಾರಸಂತೆ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್3-ಶನಿವಾರಸಂತೆ ಟೌನ್ ಫೀಡರ್ನಲ್ಲಿ ಡಿ.3 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಸದರಿ ಫೀಡರ್ನಿಂದ ಹೊರಹೊಮ್ಮುವ ಶನಿವಾರಸಂತೆ ಪಟ್ಟಣ, ಗುಡುಗಳಲೆ, ಕೆ.ಆರ್.ಸಿ ಸರ್ಕಲ್, ಅಡ್ಡಶೆಟ್ಟಳ್ಳಿ, ಶೆಟ್ಟಿಗನಹಳ್ಳಿ, ಮಾದ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಲೇಖಕ: admin
ಮಡಿಕೇರಿ ಡಿ.2 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿಯಾಗಿ ನಿರ್ದೇಶಕರಾಗಿ ಚುನಾಯಿತಗೊಂಡಿದ್ದ ಸುನಿಲ್ ಪೊನ್ನೆಟ್ಟಿ ಅವರನ್ನು ನೇಮಕ ಮಾಡಲಾಯಿತು. ಸಂಘದ ಅಧ್ಯಕ್ಷರಾದ ಬಾಚರಣಿಯಂಡ ಅನು ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಖಾಲಿಯಿದ್ದ ಖಜಾಂಚಿ ಹಾಗೂ ವಿವಿಧ ಸ್ಥಾನಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಿತು. ರಾಷ್ಟ್ರೀಯ ಸಮಿತಿ ಸದಸ್ಯರಾಗಿ ಪಳೆಯಂಡ ಪಾರ್ಥ ಚಿಣ್ಣಪ್ಪ, ಖಜಾಂಚಿ ಆಯ್ಕೆಯಿಂದ ತೆರವಾಗಿದ್ದ ನಿರ್ದೇಶಕ ಸ್ಥಾನಕ್ಕೆ ಕೆ. ಶಿವಕುಮಾರ್, ನಾಮನಿರ್ದೇಶಿತ ಸದಸ್ಯರುಗಳಾಗಿ ಬೊಳ್ಳಜಿರ ಅಯ್ಯಪ್ಪ, ರಾಜು ರೈ ಹಾಗೂ ವಿ.ವಿ. ಅರುಣ್ ಕುಮಾರ್ ಅವರನ್ನು ನೇಮಿಸಲಾಯಿತು. :: ಉಪಸಮಿತಿ ರಚನೆ :: ಸಂಘದ ಕ್ರೀಡಾ ಸಮಿತಿ ಸಂಚಾಲಕರಾಗಿ ಸಂತೋಷ್ ರೈ, ಸಹ ಸಂಚಾಲಕರಾಗಿ ರಿಜ್ವಾನ್ ಹುಸೈನ್, ನವೀನ್ ಸುವರ್ಣ, ಪತ್ರಕರ್ತರ ಸಾಂಸ್ಕೃತಿಕ ವೇದಿಕೆ ಸಂಚಾಲಕರಾಗಿ ಟಿ.ಆರ್. ಪ್ರಭುದೇವ್, ಸಹ ಸಂಚಾಲಕರಾಗಿ ಮಲ್ಲಿಕಾರ್ಜುನ್, ಪ್ರವಾಸ ಸಮಿತಿ ಸಂಚಾಲಕರಾಗಿ ಅಜ್ಜಮಾಡ ರಮೇಶ್ ಕುಟ್ಟಪ್ಪ, ಸಹ ಸಂಚಾಲಕರಾಗಿ ರೆಜಿತ್ ಕುಮಾರ್, ಆರ್. ಸುಬ್ರಮಣಿ, ಕಾರ್ಯಚಟುವಟಿಕೆ ಸಮಿತಿ…
ಮಡಿಕೇರಿ ಡಿ.2 NEWS DESK : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಕೆಎಆರ್ಟಿಇಟಿ-2025)ಯು ಡಿ.7 ರಂದು ಮೊದಲನೇ ಅಧಿವೇಶನ ಬೆಳಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆ ಹಾಗೂ 2ನೇ ಅಧಿವೇಶನ 2 ಗಂಟೆಯಿಂದ 4.30 ರವರೆಗೆ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಕೇಂದ್ರಗಳಾದ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಬ್ಲಾಕ್-1)(ಅಭ್ಯರ್ಥಿಯ ಸಂಖ್ಯೆ ಬೆಳಗ್ಗೆ 228, ಮಧ್ಯಾಹ್ನ 276), ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು(ಪ್ರೌಢ ಶಾಲೆ ವಿಭಾಗ(ಬ್ಲಾಕ್-2)(ಅ.ಸಂ.ಬೆಳಗ್ಗೆ 228, ಮಧ್ಯಾಹ್ನ 276), ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಅ.ಸಂ.ಮಧ್ಯಾಹ್ನ 236), ಮಡಿಕೇರಿ ಸಂತ ಮೈಕಲರ ಪ್ರೌಢಶಾಲೆ(ಅ.ಸಂ.ಬೆಳಗ್ಗೆ 227, ಮಧ್ಯಾಹ್ನ 276) ಹಾಗೂ ಮಡಿಕೇರಿ ಸಂತ ಮೈಕಲರ ಪದವಿ ಪೂರ್ವ ಕಾಲೇಜು(ಅ.ಸಂ.ಮಧ್ಯಾಹ್ನ 239) ಒಟ್ಟು ಅಭ್ಯರ್ಥಿಗಳ ಸಂಖ್ಯೆ ಬೆಳಗ್ಗೆ 683 ಮತ್ತು ಮಧ್ಯಾಹ್ನ 1303. ಹೆಚ್ಚಿನ ಮಾಹಿತಿಗೆ ಕಚೇರಿಯ ಪರೀಕ್ಷಾ ನೋಡಲ್ ಅಧಿಕಾರಿ ಬಿಂದು ಕೆ.ಆರ್. ಅವರ ಮೊ.ಸಂ.9611720320 ಹಾಗೂ ಸಹಾಯವಾಣಿ ಸಂಖ್ಯೆ ಉಪ ನಿರ್ದೇಶಕರು(ಆಡಳಿತ) 9448999344 ನ್ನು ಸಂಪರ್ಕಿಸಬಹುದು…
ಮಡಿಕೇರಿ ಡಿ.2 NEWS DESK : ಹಿರಿಯ ನಾಗರಿಕರ ವೇದಿಕೆಯ ಸ್ನೇಹಕೂಟ ಸಮಾರಂಭವು ನಗರದ ಬಾಲಭವನದ ಆವರಣದಲ್ಲಿ ಸಂಭ್ರಮದಿಂದ ನಡೆಯಿತು. ವೈದ್ಯರಾದ ಡಾ.ಚೇತನ್ ಜಿ.ಡಿ. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಹಿರಿಯ ನಾಗರಿಕರಿಗೆ ಉಪಯುಕ್ತವಾದ ಆರೋಗ್ಯ ಸಲಹೆಯನ್ನು ಪವರ್ ಪಾಯಿಂಟ್ ಮೂಲಕ ತಿಳಿಸಿದರು. ವೇದಿಕೆಯ ಅಧ್ಯಕ್ಷರಾದ ಕೊಂಗಾಂಡ ಎ.ತಿಮ್ಮಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪ್ರಾಸ್ತವಿಕವಾಗಿವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಿಗ್ಗಟ್ಟು ನಾಡು ಹಿರಿಯ ನಾಗರಿಕರ ವೇದಿಕೆಯ ಸ್ಥಾಪಕ ಅಧ್ಯಕ್ಷ ಕಾಟಿಮಾಡ ಜಿಮ್ಮಿ ಅಣ್ಣಯ್ಯ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಆಟೋಟ ಸ್ಪರ್ಧೆಯನ್ನು ವಸಂತಿ ಪೂಣಚ್ಚ ಹಾಗೂ ವಿಜು ನಂಜಪ್ಪ ಅವರು ನಡೆಸಿಕೊಟ್ಟರು. ಶೋಭಾ ಸುಬ್ಬಯ್ಯ ಅವರು ಪ್ರಾರ್ಥಿಸಿದರು. ಉಪಾಧ್ಯಕ್ಷರಾದ ಲೀಲಾ ಚಿಣ್ಣಪ್ಪ, ಉಪಕಾರ್ಯದರ್ಶಿ ಗಂಗಮ್ಮ, ಬಾಬು ಸೋಮಯ್ಯ, ಕಿಗ್ಗಟ್ಟುನಾಡು ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷರಾದ ಸೋಮಣ್ಣ ಹಾಗೂ ಅವರ ಆಡಳಿತ ಮಂಡಳಿಯ ಸದಸ್ಯರು ಹಾಗೂ ಇತರರು ಭಾಗವಹಿಸಿದ್ದರು. ವೇದಿಕೆಯ ಸದಸ್ಯರಿಗೆ ಆಟೋಟ ಸ್ಪರ್ಧೆ ಏರ್ಪಡಿಸಲಾಗಿತ್ತು. ಇದರಲ್ಲಿ ಸದಸ್ಯರು ಉತ್ಸಾಹದಿಂದ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಪಿ.ಪಿ.ಸೋಮಣ್ಣ…
ಮಡಿಕೇರಿ ಡಿ.2 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಕೊಡಗು ಶಾಖೆ ಮತ್ತು ವಿಶೇಷಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ವಿಶೇಷ ಮಕ್ಕಳ ಶಾಲೆಗಳು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಶೇಷಚೇತನರ ದಿನಾಚರಣೆಯು ‘ಸಾಮಾಜಿಕ ಪ್ರಗತಿ ಸಾಧಿಸಲು ವಿಶೇಷ ಚೇತನರನ್ನು ಒಳಗೊಂಡ ಸಮಾಜ ರೂಪಿಸುವುದು’ ಎಂಬ ಘೋಷವಾಕ್ಯದೊಂದಿಗೆ ಡಿ.3 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಓಂಕಾರ ಸದನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಡಿ.2 NEWS DESK : 2025-26ನೇ ಶೈಕ್ಷಣಿಕ ವರ್ಷಕ್ಕೆ ಗುತ್ತಿಗೆ ಆಧಾರದ ಮೇಲೆ ಟಿಜಿಟಿ ವಿಜ್ಞಾನ, ಟಿಜಿಟಿ ಕಂಪ್ಯೂಟರ್ ವಿಜ್ಞಾನ, ಕುಕ್ ಮತ್ತು ಎಂಟಿಎಸ್, ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಕೊಡಗು ಜಿಲ್ಲೆಯ ಮಡಿಕೇರಿಯ ಗಾಳಿಬೀಡಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಡಿ.5 ರಂದು ಬೆಳಗ್ಗೆ 10.30 ಗಂಟೆಗೆ ಕೇಂದ್ರ ಸರ್ಕಾರದ ಶಿಕ್ಷಣ ನೇಮಕಾತಿಯ ಪ್ರಕಾರ, ಕಾರ್ಮಿಕ ಸಚಿವಾಲಯದ ಮಾನದಂಡಗಳ ಪ್ರಕಾರ ನೇರ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗೆ 9611862835 ಮತ್ತು 9448215623 ನ್ನು ಸಂಪರ್ಕಿಸಬಹುದು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.
ಮಡಿಕೇರಿ ಡಿ.2 NEWS DESK : ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ವತಿಯಿಂದ ತಾಲ್ಲೂಕು ಸಂಘಗಳ ಸಹಯೋಗದೊಂದಿಗೆ ವಿಪ್ರ ಬಾಂಧವರಿಗಾಗಿ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದ ‘ವಿಪ್ರ ಕ್ರೀಡೋತ್ಸವ’ವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ರಾಮಚಂದ್ರ ಮೂಗೂರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿಪ್ರ ಬಾಂಧವರಿಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಸೌಹಾರ್ದಯುತವಾಗಿ ಬೆರೆಯಲು ಇದೊಂದು ಸದವಕಾಶವಾಗಿದ್ದು, ವಿಪ್ರ ಬಾಂಧವರು ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಪ್ರ ಕ್ರೀಡೋತ್ಸವವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್ ಮಾತನಾಡಿ, ಡಿ.7ರಂದು ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನ್ನಿಸ್ ಸ್ಪರ್ಧೆಗಳು ಬೆಳಗ್ಗೆ 9 ಗಂಟೆಗೆ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣ(ಮ್ಯಾನ್ಸ್ ಕಾಂಪೌಂಡ್)ದÀಲ್ಲಿ ವಿವಿಧ ವಿಭಾಗಗಳಲ್ಲಿ ನಡೆಯಲಿದೆ ಎಂದು ತಿಳಿಸಿದರು. ಪುರುಷರ ವಿಭಾಗ ಹಾಗೂ ಮಹಿಳೆಯರ ವಿಭಾಗದಲ್ಲಿ ಸಿಂಗಲ್ಸ್ ಹಾಗೂ ಡಬಲ್ಸ್, 50 ವರ್ಷ ಮೇಲ್ಪಟ್ಟವರ ವಿಭಾಗ, ಬಾಲಕ-ಬಾಲಕಿಯರ ವಿಭಾಗದಲ್ಲಿ ಪಂದ್ಯಾವಳಿ ನಡೆಯಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವವರು ಅದೇ ದಿನ…
ಮಡಿಕೇರಿ ಜ.2 NEWS DESK : ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಕಳೆದ ಮೂರು ದಿನಗಳಿಂದ ನಡೆದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಸಮಾರೋಪಗೊಂಡಿತು. ದಕ್ಷಿಣ ವಲಯ ಪೊಲೀಸ್ ಉಪ ಮಹಾನಿರೀಕ್ಷಕ ಬೋರಲಿಂಗಯ್ಯ ಪಾಲ್ಗೊಂಡು ಮಾತನಾಡಿ ಕ್ರೀಡೆ ಇರಲಿ, ಯಾವುದೇ ಸನ್ನಿವೇಷ ಇರಲಿ ಸವಾಲನ್ನು ಸಮತೋಲನದಲ್ಲಿ ತೆಗೆದುಕೊಂಡು ಹೋಗುವ ಮನಸ್ಥಿತಿ ಎಲ್ಲರಲ್ಲೂ ಇರಬೇಕೆಂದು ಸಲಹೆ ನೀಡಿದರು. ನಮ್ಮ ಆರೋಗ್ಯವನ್ನು ಕಾಪಾಡಲು ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ. ಕ್ರೀಡೆ ಹಾಗೂ ಇತರೆ ಕಾರ್ಯಕ್ರಮಗಳಲ್ಲಿ ಗೆದ್ದಾಗ ಸಂತೋಷಪಡುತ್ತೇವೆ. ಆದರೆ ಸೋಲನುಭವಿಸಿದಾಗ ಅದನ್ನುಸವಾಲಾಗಿತೆಗೆದುಕೊಳ್ಳುವ ಮನಸ್ಥಿತಿ ಕಡಿಮೆಯಿದೆ. ಆದ್ದರಿಂದ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕೆಂದು ಕರೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಇದ್ದರು. ಪುರುಷರಿಗೆ ನಡೆದ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಧರ್ಮ ವಿರಾಜಪೇಟೆ ಪ್ರಥಮ, ಸಂಜು ಮಡಿಕೇರಿ ದ್ವಿತೀಯ, ಡಿಎಆರ್ನ ವಿಜಯ್ ತೃತೀಯ ಬಹುಮಾನ ಗಳಿಸಿದರು. ಮಹಿಳೆಯರಿಗೆ ನಡೆದ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಭವ್ಯ ಮಡಿಕೇರಿ…
ಕಾರ್ಕಳ ಡಿ.2 NEWS DESK : ಪ್ರಸ್ತುತ ದಿನಮಾನಗಳಲ್ಲಿ ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಗ್ನಿ ಅವಘಡ, ಪ್ರಕೃತಿ ವಿಕೋಪಗಳಿಂದ ಸಂಭವಿಸಬಹುದಾದ ದುರ್ಘಟನೆಗಳಿಂದ ನಾವು ಹೇಗೆ ಸುರಕ್ಷಿತರಾಗಿ ನಮ್ಮನ್ನು ಕಾಪಾಡಿಕೊಳ್ಳಬೇಕು ಎಂಬ ಅರಿವನ್ನು ಮೂಡಿಸುವಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ‘ಸುರಕ್ಷತೆ ಮೊದಲು’ಎಂಬ ಜನಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರಿನ ವೃತ್ತಿಪರ ಅಗ್ನಿಶಾಮಕ ಮತ್ತು ಸುರಕ್ಷತಾ ಅಧಿಕಾರಿಯಾದ ಸತ್ಯರಾಜ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಾತ್ಯಕ್ಷಿಕೆಗಳ ಮೂಲಕ ಸುರಕ್ಷತೆಯ ಬಗ್ಗೆ ಅರಿವನ್ನು ಮೂಡಿಸಿದರು. ಬೆಂಕಿಯಿಂದ, ನೀರಿನಿಂದ ಮತ್ತು ಅಪಘಾತಗಳು ಸಂಭವಿಸಿದಾಗ ಯಾವ ರೀತಿಯಾಗಿ ಪ್ರತಿಕ್ರಿಯೆಸಬೇಕು ಎಂಬುವುದನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿ ಭಯ ಮುಕ್ತರಾಗಿ ಅದನ್ನು ಎದುರಿಸುವಲ್ಲಿ ನಾವು ಹೇಗೆ ಸಿದ್ಧರಿರಬೇಕೆಂಬುದನ್ನು ತಿಳಿಯಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಹ ಸಂಸ್ಥಾಪಕರು ಮತ್ತು ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್, ತುರ್ತು ಸಂದರ್ಭದಲ್ಲಿ ಸರಿಯಾಗಿ ಪ್ರತಿಕ್ರಿಯಿಸಿದ್ದಲ್ಲಿ ಮಾತ್ರ ಜೀವ ಉಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ನಮಗೆ ಮುಂಜಾಗೃತ ಕ್ರಮಗಳ ಬಗ್ಗೆ ತಿಳುವಳಿಕೆ…
ಮಡಿಕೇರಿ ಡಿ.2 NEWS DESK : ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ವತಿಯಿಂದ ಬ್ಯಾಂಕ್ ನ ನಿರ್ದೇಶಕರಾದ ಎಸ್.ಸಿ.ಸತೀಶ್ ಅವರನ್ನು ಸನ್ಮಾನಿಸಲಾಯಿತು. ಏಲಕ್ಕಿ ಮಾರಾಟ ಸಹಕಾರ ಸಂಘದ ಚುನಾವಣೆಯಲ್ಲಿ ಎಸ್.ಸಿ.ಸತೀಶ್ ಅವರು ಜಯಶಾಲಿ ಆದ ಕಾರಣ ಬ್ಯಾಂಕಿನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಸತೀಶ್ ಪೈ ಅವರ ಅಧ್ಯಕ್ಷತೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿ. ಇವರ ರಾಜಕೀಯ ಜೀವನ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಸತೀಶ್ ಪೈ ಹಾರೈಸಿದರು. ಸಮಾರಂಭದಲ್ಲಿ ಉಪಾಧ್ಯಕ್ಷರಾದ ಕೆ.ಆರ್.ನಾಗೇಶ್, ಬ್ಯಾಂಕಿನ ನಿರ್ದೇಶಕರುಗಳಾದ ರಾಜೇಶ್ ಯಲ್ಲಪ್ಪ, ಬಿ.ಕೆ.ಜಗದೀಶ್, ಸಿ.ಕೆ.ಬಾಲಕೃಷ್ಣ, ಕನ್ನಂಡ ಸಂಪತ್, ಬಿ.ಯಂ.ರಾಜೇಶ್, ಗಿರೀಶ್, ರೋಶನ್, ಮಹೇಶ್ ಜೈನಿ, ಗೋಪಾಲ ಕೃಷ್ಣ, ಪ್ರತಿಭಾ ಶೆಟ್ಟಿ, ಮಾಚಮ್ಮ ಮತ್ತು ಬ್ಯಾಂಕ್ ನ ಮೆನೇಜರ್ ಪದ್ಮನಾಭ ಕಿಣಿ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಹಾಜರಿದ್ದರು.






