ಮಡಿಕೇರಿ ಫೆ.17 : ಎಲ್ಲಾ ಕ್ಷೇತ್ರ ಮತ್ತು ಎಲ್ಲಾ ವರ್ಗದ ಜನರಿಗೂ ತೃಪ್ತಿಯಾಗಬಲ್ಲ ಅದ್ಭುತವಾದ ಬಜೆಟ್ ನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಡಿಸಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ ತಿಳಿಸಿದ್ದಾರೆ. ಕೊಡಗಿನ ಶಾಸಕರುಗಳ ಮನವಿಗೆ ಸ್ಪಂದಿಸಿ ರಸ್ತೆಗಳ ಅಭಿವೃದ್ಧಿಗಾಗಿ ಸುಮಾರು 100 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ನ್ನು ಘೋಷಿಸಿದ್ದಾರೆ. ಮಹಿಳೆಯರು, ವಿದ್ಯಾರ್ಥಿಗಳು, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಹಾಗೂ ಕಾರ್ಮಿಕ ವರ್ಗಕ್ಕೆ ಬರಪೂರ ಕೊಡುಗೆಗಳನ್ನು ನೀಡಿದ್ದಾರೆ. ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆಯಡಿ ವಾರ್ಷಿಕ 10ಸಾವಿರ ರೂ., ಶೂನ್ಯ ಬಡ್ಡಿ ದರದಲ್ಲಿ ರೂ.3 ಲಕ್ಷದಿಂದ 5 ಲಕ್ಷದ ವರೆಗೆ ರೈತರಿಗೆ ಸಾಲ, ಆಕಸ್ಮಿಕವಾಗಿ ಮೃತಪಡುವ ರೈತರಿಗೆ ಜೀವನ ಜ್ಯೋತಿ ವಿಮೆಯಡಿ ರೂ.2 ಲಕ್ಷ ನೆರವು, ಕೃಷಿ ಯಂತ್ರೋಕರಣಗಳಿಗೆ ಆರ್ಥಿಕ ನೆರವು, ವಿದ್ಯಾರ್ಥಿನಿಯರಿಗೆ ಹಾಗೂ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್, ಅಂಗನವಾಡಿ ಕಾರ್ಯಕರ್ತರಿಗೆ ರೂ.50 ಸಾವಿರ ಸಹಾಯಧನ, ಮಹಿಳೆಯರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಸೇರಿದಂತೆ ಅನೇಕ…
ಲೇಖಕ: admin
ವಿರಾಜಪೇಟೆ ಫೆ.16 : ವಿರಾಜಪೇಟೆಯ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನಾ ಸಂಸ್ಥೆಯಿಂದ ಕ್ಷಯ ರೋಗದ ಬಗ್ಗೆ ಸಾರ್ವಜನಿಕರಿಗೆ ಸಮಗ್ರ ಮಾಹಿತಿಯನ್ನು ಎಲ್ಇಡಿ ಪರದೆಯ ಮೂಲಕ ಪ್ರದರ್ಶಿಸಲಾಯಿತು. ಈ ಸಂದರ್ಭ ಸಾರ್ವಜನಿಕ ಆಸ್ಪತ್ರೆ ವಿರಾಜಪೇಟೆಯ ಆಡಳಿತ ವೈದ್ಯಾಧಿಕಾರಿ ಡಾ. ಶ್ರೀನಿವಾಸ್, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ನಾಪೋಕ್ಲು ಫೆ.17 : ಶೌರ್ಯ ವಿಪತ್ತು ಘಟಕದ ವತಿಯಿಂದ ಮಹಾ ಶಿವರಾತ್ರಿ ಪ್ರಯುಕ್ತ ಪಾಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸ್ವಚ್ಛತಾ ಶ್ರಮದಾನ ಮಾಡಲಾಯಿತು. ಘಟಕದ ಪದಾಧಿಕಾರಿಗಳು ದೇವಾಲಯದ ಆವರಣದಲ್ಲಿದ್ದ ಕಸ, ಕಡ್ಡಿಗಳನ್ನು ತೆಗೆದು ಶುಚಿಗೊಳಿಸಿದರು. ಸಾಮಾಜಿಕ ಕಳಕಳಿ ಹೊಂದಿ, ಹತ್ತು ಹಲವು ಜನಪರ ಸೇವಾ ಕಾರ್ಯಗಳನ್ನು ನಿರ್ವಹಿಸುತ್ತಿರುವ ಈ ಘಟಕವು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ. ಘಟಕದ ಉಮಾಲಕ್ಷ್ಮಿ ಅವರ ನೇತೃತ್ವದಲ್ಲಿ ಸಂಯೋಜಕಿ ಬಾಳೆಯಡ ದಿವ್ಯ, ಶಂಕರ, ದಿಲೀಶ್, ಶ್ಯಾಮಲಾ, ಚಂದ್ರಕಲಾ, ಗೀತಾ, ರವಿ, ರಾಹುಲ್ ಸೇವೆಯಲ್ಲಿ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಫೆ.17 : ನಗರದ ಶ್ರೀ ಮುನೀಶ್ವರ ಯುವಕ ಸಂಘ ಮತ್ತು ಅಮೆಚೂರು ಕಬಡ್ಡಿ ಅಸೋಸಿಯೇಷನ್ ವತಿಯಿಂದ ಫೆ.18 ರಂದು ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಪಿ.ಟಿ.ಉಣ್ಣಿಕೃಷ್ಣ ಅಕಾಲಿಕವಾಗಿ ನಿಧನರಾದ ಸುದರ್ಶನ ಬಡಾವಣೆಯ ನಿವಾಸಿಗಳಾದ ಪಂದಿಯಂಡ ಆಶಾ, ರೋಶನ್ ಶೆಟ್ಟಿ ಹಾಗೂ ಶಶಾಂಕ್ ಗೌಡ ಅವರ ಸ್ಮರಣಾರ್ಥ ಎ.ಆರ್.ಎಸ್. ಮೆಮೋರಿಯಲ್ ಟ್ರೋಫಿ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದರು. ಮುನೀಶ್ವರ ದೇವಸ್ಥಾನದ ಕ್ರೀಡಾ ಮೈದಾನದಲ್ಲಿ ಸಂಜೆ 7 ಗಂಟೆಗೆ ಬಂಟರ ಸಂಘದ ಅಧ್ಯಕ್ಷ ಜಗದೀಶ್ ರೈ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ವಾರ್ಡ್ನ ನಗರಸಭಾ ಸದಸ್ಯರುಗಳು ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರು. ಕ್ರೀಡಾ ಪ್ರೇಮಿಗಳಿಗಾಗಿ 2 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ರಾತ್ರಿ 9 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶಾಸಕರುಗಳಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಸಮಾಜ ಸೇವಕ ಡಾ.ಮಂತರ್ ಗೌಡ, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್…
ಮಡಿಕೇರಿ ಫೆ.17 : ಯುಗಾದಿ ಹಬ್ಬದ ಪ್ರಯುಕ್ತ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಮಾ.24 ರಿಂದ 26ರ ವರೆಗೆ ಹಿಂದೂ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಹಾಗೂ ಹಗ್ಗಜಗ್ಗಾಟ ಪಂದ್ಯಾವಳಿ ನಡೆಯಲಿದೆ ಎಂದು ಭಜರಂಗದಳದ ಸಂಚಾಲಕ ರಾಧಾಕೃಷ್ಣ ರೈ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಪೋಕ್ಲುವಿನ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮಾ.24 ರಂದು ಬೆಳಿಗ್ಗೆ 9.30 ಗಂಟೆಗೆ ಪಂದ್ಯಾವಳಿಗೆ ಚಾಲನೆ ದೊರೆಯಲಿದ್ದು, ಮಾ.26 ರಂದು ಸಂಜೆ 5.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಎಂದರು. ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ರೂ.50 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನದ ತಂಡಕ್ಕೆ 25 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಹಗ್ಗಜಗ್ಗಾಟ ಪಂದ್ಯಾವಳಿಯ ವಿಜೇತರಿಗೆ ರೂ.15 ಸಾವಿರ ನಗದು ಹಾಗೂ ಟ್ರೋಫಿ, ದ್ವಿತೀಯ ಸ್ಥಾನ ರೂ.10 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಅಲ್ಲದೆ ವೈಯಕ್ತಿಕ ಬಹುಮಾನ ವಿತರಿಸಲಾಗವುದೆಂದು ತಿಳಿಸಿದರು. ಆಸಕ್ತರು ರೂ.2ಸಾವಿರ ಪ್ರವೇಶ…
ನಾಪೋಕ್ಲು ನ.17 : ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯ ಹೇಳಿದರು. ನಗರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಾಲಕ ಬಾಲಕಿಯರಿಗೆ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಎರಡು ದಿನಗಳ ವಿವಿಧ ಕ್ರೀಡಾ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಶಿಬಿರದಿಂದ ದೊರಕುವ ಮಾಹಿತಿಯನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಅಥ್ಲೆಟಿಕ್ಸ್ ಹಿರಿಯ ತರಬೇತುದಾರ ಅಂತೋನಿ ಡಿಸೋಜಾ ಮಾತನಾಡಿ, ಕ್ರೀಡಾ ಶಿಬಿರದ ಉದ್ದೇಶ ಕ್ರೀಡೆಯ ಮಹತ್ವ ಹಾಗೂ ಸಾಧಕ ಕ್ರೀಡಾಪಟುಗಳ ಬಗ್ಗೆ ಮಾಹಿತಿ ನೀಡಿದರು. ಹಾಕಿ ತರಬೇತುದಾರರಾದ ಕೆ.ಕೆ.ಬಿಂದಿಯಾ, ಅಥ್ಲೆಟಿಕ್ಸ್ ತರಬೇತುದಾರ ಮಹಾಬಲ, ಸಿಬ್ಬಂದಿ ವರ್ಗ ಮೇಲ್ವಿಚಾರಕರು ಹಾಗೂ ವಿವಿಧ ಶಾಲೆಗಳಿಂದ ಆಗಮಿಸಿದ್ದ ದೈಹಿಕ ಶಿಕ್ಷಕರು ಪಾಲ್ಗೊಂಡಿದ್ದರು. ಶಿಬಿರದಲ್ಲಿ ಪಾಲ್ಗೊಂಡಿದ್ದ 75 ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಫೆ.17 : ಹೋರಾಟದ ಸಂದರ್ಭ ಬಿಸಿಯೂಟದ ನೌಕರರನ್ನು ಬೆಂಗಳೂರಿನಲ್ಲಿ ತಡೆದು ಬಂಧಿಸಿದನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿ.ಐ.ಟಿ.ಯು ನೇತೃತ್ವದಲ್ಲಿ ಕೊಡಗು ಜಿಲ್ಲಾ ಬಿಸಿಯೂಟ ನೌಕರರ ಸಂಘ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಘೋಷಣೆಗಳನ್ನು ಕೂಗಿ ಬೇಡಿಕೆಯ ಈಡೇರಿಕೆಗೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಪ್ರಮೀಳಾ ಮಾತನಾಡಿ, ಇಂದಿನ ಸರ್ಕಾರ ಹೆಣ್ಣು ಮಕ್ಕಳನ್ನು ಬೀದಿಗೆ ತಳ್ಳಿದೆ. ಬೆಳಗ್ಗೆ 9 ಗಂಟೆಗೆ ಶಾಲೆಗೆ ತೆರಳಿದರೆ, ಸಂಜೆ 4 ಗಂಟೆಗೆ ಮನೆಗೆ ಹಿಂದಿರುಗುತ್ತೇವೆ. ಆದರೆ, ಸರ್ಕಾರ ನಮಗೆ ರೂ.3,600 ರಿಂದ 3,700 ಮಾತ್ರ ಗೌರವ ಧನ ನೀಡುತ್ತದೆ. ಈ ವೇತನದಲ್ಲಿ ಜೀವನ ಹೇಗೆ ಸಾಗಿಸಲು ಸಾಧ್ಯ ಎಂದು ಪ್ರಶ್ನಿಸಿದ ಅವರು, ತಿಂಗಳ ವೇತನ ಕೂಡ ಸರಿಯಾದ ಸಮಯಕ್ಕೆ ಲಭ್ಯವಾಗುತ್ತಿಲ್ಲ. ಸರ್ಕಾರ ನಮ್ಮನ್ನು ಕಡಿಗಣಿಸಿದೆ ಎಂದು ದೂರಿದರು. ಸರ್ಕಾರ ನಮ್ಮ ಕೆಲಸದ ಸಮಯ ವಿಸ್ತರಣೆ ಮಾಡಿದರೂ ಸಮಸ್ಯೆಯಿಲ್ಲ. ಆದರೆ,…
ಮಡಿಕೇರಿ ಫೆ.17 : ಹೆಬ್ಬೆಟ್ಟಗೇರಿ-ದೇವಸ್ತೂರು ಗ್ರಾಮಗಳಿಗೆ ತೆರಳುವ ರಸ್ತೆ ದುರಸ್ತಿಗೆ ಒತ್ತಾಯಿಸಿ ಗ್ರಾಮಸ್ಥರು ರಸ್ತೆ ತಡೆ ಪ್ರತಿಭಟನೆ ನಡೆಸಿದರು. ನಂದಿಮೊಟ್ಟೆ ಜಂಕ್ಷನ್ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಜಿಲ್ಲಾಡಳಿತ, ಜನಪ್ರತಿನಿಧಿ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಹೆಬ್ಬೆಟ್ಟಗೇರಿ ಗ್ರಾಮಸ್ಥರಾದ ರಮೇಶ್, ನಂದಿಮೊಟ್ಟೆ ಜಂಕ್ಷನ್ನಿಂದ ಹೆಬ್ಬೆಟ್ಟಗೇರಿ ಹಾಗೂ ದೇವಸ್ತೂರು ಗ್ರಾಮಗಳಿಗೆ ತೆರಳುವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಈ ಗ್ರಾಮಗಳಲ್ಲಿ ಶಾಲೆ ಮುಚ್ಚಲ್ಪಟ್ಟಿರುವುದರಿಂದ ಹಾಗೂ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಕೂಡ ಇಲ್ಲದಿರುವುದರಿಂದ ಬಹುತೇಕ ಮಂದಿ ಖಾಸಗಿ ವಾಹನಗಳಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ಆದರೆ, ರಸ್ತೆ ಹದಗಟ್ಟಿರುವುದರಿಂದ ಆಟೋ ಹಾಗೂ ಖಾಸಗಿ ವಾಹನಗಳು ಈ ರಸ್ತೆಯಲ್ಲಿ ಬರಲು ಹಿಂದೇಟು ಹಾಕುತ್ತಿದ್ದಾರೆ. ಬರುವ ವಾಹನಗಳಿಗೆ ದುಬಾರಿ ಬಾಡಿಗೆ ನೀಡಬೇಕಾದ ಅನಿವಾರ್ಯತೆ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ತುರ್ತು ಪರಿಸ್ಥಿತಿಯಲ್ಲಿ ಆಂಬ್ಯುಲೆನ್ಸ್ ಕೂಡ ಈ ರಸ್ತೆಯಲ್ಲಿ ಸಂಚರಿಸಲಾಗದಷ್ಟು ರಸ್ತೆಯಲ್ಲಿ ಗುಂಡಿ ಬಿದ್ದಿದೆ. ಇದೇ ರಸ್ತೆಯ ಮೂಲಕ ಪ್ರವಾಸಿ ತಾಣ ಮಾಂದಲ್ಪಟ್ಟಿಗೆ…
ಮಡಿಕೇರಿ ಫೆ.17 : ರಾಷ್ಟ್ರಮಟ್ಟದಲ್ಲಿ ನೂರು ವರ್ಷ ಪೈರೈಸಿದ ಐದು ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ ಕರ್ನಾಟಕದ ಮೂರು ಕೃಷಿ ಪತ್ತಿನ ಸಹಕಾರ ಸಂಘಗಳು ಪ್ರಶಸ್ತಿಗೆ ಆಯ್ಕೆಯಾಗಿದ್ದು, ಕೊಡಗಿನ ಭಾಗಮಂಡಲದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಶಾಂತಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಪ್ರಶಸ್ತಿಗೆ ಭಾಜನವಾಗಿದೆ. ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರುಗಳ ಸಭೆಯಲ್ಲಿ ಕೆಡಿಸಿಸಿ ಬ್ಯಾಂಕಿನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ಉಪಾಧ್ಯಕ್ಷ ಹರೀಶ್ ಪೂವಯ್ಯ ಹಾಗೂ ಸಹಕಾರ ಸಂಘಗಳ ಉಪ ನಿಬಂಧಕ ಎಂ.ಎಸ್.ಕೃಷ್ಣ ಪ್ರಸಾದ್ ಅವರು ಭಾಗಮಂಡಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೊಸೂರು ಜೆ.ಎಸ್.ನಂಜುಡಪ್ಪ ಅವರಿಗೆ ಹಸ್ತಾಂತರಿಸಿದರು.
ಮಡಿಕೇರಿ ಫೆ.17 : ಕೊಡಗು ಸಿರಿಗನ್ನಡ ವೇದಿಕೆ ಹಾಗೂ ಜಿಲ್ಲಾ ಮತ್ತು ಮಡಿಕೇರಿ ತಾಲೂಕು ಮಹಿಳಾ ಘಟಕದ ಸಹಯೋಗದಲ್ಲಿ ಶಿವರಾತ್ರಿಯ ಪ್ರಯುಕ್ತ ಕೊಡಗಿನ ಕವಿಗಳಿಗೆ ನಡೆದ ಕವನ ಸ್ಪರ್ಧೆಯ ವಿಜೇತರ ಪಟ್ಟಿಪ್ರಕಟವಾಗಿದೆ. ಸ್ಪರ್ಧೆಯಲ್ಲಿ ಮೂರ್ನಾಡು ಕೋಡಂಬೂರು ಗ್ರಾಮದ ಕೆ.ಜಿ.ರಮ್ಯಾ ಪ್ರಥಮ, ಸೋಮವಾರಪೇಟೆಯ ಎಲಿಜಬೆತ್ ಲೋಬೊ ದ್ವಿತೀಯ, ಮಡಿಕೇರಿಯ ಬಿ.ಜಿ.ಅನಂತ ಶಯನ ತೃತೀಯ ಸ್ಥಾನ ಪಡೆದುಕೊಂಡಿದ್ದು ನಾಲ್ಕನೇ ಸ್ಥಾನವನ್ನು ಮಡಿಕೇರಿಯ ಕೆ.ಶೋಭಾ ರಕ್ಷಿತ್, ಹುದಿಕೇರಿಯ ಚಕ್ಕೇರ ತ್ಯಾಗರಾಜ ಅಪ್ಪಯ್ಯ, ಬೋಯಿಕೇರಿ ಗ್ರಾಮದ ಪಿ.ಎಸ್. ವೈಲೇಶ್ ಪಡೆದುಕೊಂಡಿದ್ದಾರೆ. ಸ್ಪರ್ಧೆಯ ವಿಜೇತರಿಗೆ ಹಾಗೂ ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೆ ಮುಂದೆ ತಾಲೂಕಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ( ದಿನಾಂಕ ಮತ್ತು ಸ್ಥಳ ನಂತರ ತಿಳಿಸಲಾಗುವುದು ) ಕವನ ವಚನ ಮಾಡಲು ಅವಕಾಶ ಕಲ್ಪಿಸಲಾಗುವುದು, ಹಾಗೂ ಕಳುಹಿಸಿದ ಎಲ್ಲಾ ಕವನವನ್ನು ಪುಸ್ತಕ ರೂಪದಲ್ಲಿ ಪ್ರಕಟವಾಗುವುದು, ಎಲ್ಲಾ ಭಾಗವಹಿಸಿದ ಸ್ಪರ್ಧಿಗಳಿಗೆ ಮೆಚ್ಚುಗೆ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು. ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ಸಿರಿಗನ್ನಡ ವೇದಿಕೆಯ ಜಿಲ್ಲಾಧ್ಯಕ್ಷ ಅಲ್ಲಾರಂಡ ವಿಠಲ್ ನಂಜಪ್ಪ ಪತ್ರಿಕಾ…






