ಮಡಿಕೇರಿ ಫೆ.17 : 2023-24ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3,09,182 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕೊಡಗು ಜಿಲ್ಲೆಯ ಜನರು ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ 2023-24ನೇ ಸಾಲಿನ ಆಯವ್ಯಯದಲ್ಲಿ. ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗಾಗಿ ವಿಶೇಷ ಪ್ಯಾಕೇಜ್ ಮಂಜೂರು ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದರು.
ಲೇಖಕ: admin
ಮಡಿಕೇರಿ ಫೆ.16 : ಅಂತಾರ್ಜಾಲದ ತೊಡಕು ಇರುವ ಕೊಡಗಿನಲ್ಲಿ ರೇಡಿಯೋ ಪರಿಣಾಮಕಾರಿಯಾಗಿ ಸುದ್ದಿಯನ್ನು ಮುಟ್ಟಿಸುತ್ತಿದ್ದು, ಸರ್ಕಾರಿ ಇಲಾಖೆಗಳನ್ನೂ ಸೇರಿಕೊಂಡು ಖಾಸಗಿ ಸಂಸ್ಥೆಗಳಿಗೂ ಪ್ರಯೋಜನವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರಾದ ಶಬನಾ ಎಂ ಶೇಕ್ ನುಡಿದರು. ಮಡಿಕೇರಿ ಆಕಾಶವಾಣಿ ಕೇಂದ್ರವು ಹಮ್ಮಿಕೊಂಡ ರೇಡಿಯೋ ಕಿಸಾನ್ ದಿನದ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದರು. ಕೃಷಿ ಪ್ರಧಾನವಾದ ಜಿಲ್ಲೆಯಲ್ಲಿ ಕೃಷಿಕರಿಗೆ ಉಪಯುಕ್ತವಾದ ವಿಚಾರಗಳು ಪ್ರಸಾರವಾಗುತ್ತಿದೆ. ಕೃಷಿ ಇಲಾಖೆಯ ಯೋಜನೆಗಳ ಮಾಹಿತಿಯನ್ನು ತಿಳಿಸಲು ಅನುಕೂಲವಾಗಿದೆ. ಇತರೇ ಜಿಲ್ಲೆಗಳಿಗಿಂತ ಕೊಡಗಿನ ಪರಿಸರ ಭಿನ್ನವಾಗಿದೆ. ಇಲ್ಲಿಯೂ ಸಾಧಕ ರೈತರು ಇದ್ದಾರೆ. ಕೃಷಿ ಇಲಾಖೆಯು ಹಾಲಿ ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನವನ್ನು ನೀಡುತ್ತಿದ್ದು, ಕೇಂದ್ರ ಸರ್ಕಾರದ ಕೃಷಿ ಸಮ್ಮಾನ್ ಯೋಜನೆಗೆ ರೈತರು ನೋಂದಾಯಿಸಿಕೊಂಡು ಪ್ರಯೋಜನ ಮಾಡಿಕೊಳ್ಳಬೇಕೆಂದು ಕರೆ ನೀಡಿದರು. ಕೊಡಗು ಜಿ.ಪಂ ಉಪ ಕಾರ್ಯದರ್ಶಿ ಜಿ. ಧನರಾಜ್ ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆ ಅಡಿ ನೂರಾರು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅವಕಾಶ ಇದೆ. ರೈತರ ಹತ್ತಾರು ಕೆಲಸಗಳಿಗೆ ಈ ಮೂಲಕ ಸಹಾಯವಾಗಲಿದೆ ಎಂದರು. ಆಕಾಶವಾಣಿಯ ಕಾರ್ಯಕ್ರಮ…
ಮಡಿಕೇರಿ ಫೆ.16 : 16ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಗೋಣಿಕೊಪ್ಪಲಿನಲ್ಲಿ ಇದೇ ಮಾರ್ಚ್ 4 ಮತ್ತು 5 ರಂದು ನಡೆಯಲಿದೆ ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗಾಗಿ ಕವಿಗೋಷ್ಠಿ ಏರ್ಪಡಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ದಿನಾಂಕ 18.02.2023ರ ಒಳಗಾಗಿ ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಕವನವನ್ನು ವಾಟ್ಸಪ್ ಮೂಲಕ ಈ ಸಂಖ್ಯೆಗಳಿಗೆ 9945794414, 7619270529 ಕಳುಹಿಸಬಹುದೆಂದು ಸಮ್ಮೇಳನ ಸ್ವಾಗತ ಸಮಿತಿಯ ಮಹಾ ಪ್ರಧಾನ ಕಾರ್ಯದರ್ಶಿ ಕೋಳೇರ ದಯಾ ಚಂಗಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಶಾಲನಗರ, ಫೆ.16 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಾಂಸ್ಕೃತಿಕ ಸಮಿತಿ ವತಿಯಿಂದ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಾ.8 ರಂದು ಕುಶಾಲನಗರದಲ್ಲಿ ಮಹಿಳಾ ಪತ್ರಕರ್ತರು, ಪತ್ರಕರ್ತರ ಕುಟುಂಬ ಸದಸ್ಯರು ಮತ್ತು ಸಾರ್ವಜನಿಕ ಮಹಿಳೆಯರನ್ನೊಳಗೊಂಡಂತೆ ಜಿಲ್ಲಾ ಮಟ್ಟದ ವಿಶ್ವ ಮಹಿಳಾ ದಿನ ಆಚರಿಸಲು ನಿರ್ಧರಿಸಲಾಯಿತು. ಕುಶಾಲನಗರ ಪತ್ರಿಕಾ ಭವನದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರಮೋಹನ್ ಅವರನ್ನು ಕಾರ್ಯಕ್ರಮದ ಸಂಚಾಲಕರನ್ನಾಗಿ ಆಯ್ಕೆ ಮಾಡಲಾಯಿತು. ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಕಾರ್ಯಕ್ರಮದ ರೂಪುರೇಷೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಊಟೋಪಚಾರ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಸಭೆಯಲ್ಲಿ ಪಾಲ್ಗೊಂಡಿದ್ದವರು ಮಹತ್ವಪೂರ್ಣ ಸಲಹೆಗಳನ್ನು ನೀಡಿದರು. ಕಾರ್ಯಕ್ರಮ ಸಂಚಾಲಕರಾದ ವನಿತಾ ಚಂದ್ರಮೋಹನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘದ ಆಧ್ಯಕ್ಷ ಎಂ.ಎನ್. ಚಂದ್ರಮೋಹನ್, ಖಜಾಂಚಿ ಕುಡೆಕಲ್ ಗಣೇಶ್, ಕಾರ್ಯದರ್ಶಿ ಕೆ.ಕೆ. ನಾಗರಾಜ ಶೆಟ್ಟಿ, ನಿರ್ದೇಶಕರಾದ ಕೆ…
ನಾಪೋಕ್ಲು ಫೆ.16 : ಕುಂಜಿಲ ಕಕ್ಕಬೆ ಗ್ರಾ.ಪಂ ವ್ಯಾಪ್ತಿಯ ಮರಂದೊಡ ಗ್ರಾಮದ ನಿವಾಸಿ ಬಾರಿಕೆ ಆರ್. ಮಾದಪ್ಪ(71) ಅವರು ತಿರುಪತಿ ದರ್ಶನದ ಸಮಯದಲ್ಲಿ ಕುಟುಂಬದವರಿಂದ ಫೆ.12ರ ಮುಂಜಾನೆ ಆಕಸ್ಮಿಕವಾಗಿ ಬೇರ್ಪಟ್ಟು ನಾಪತ್ತೆಯಗಿರುತ್ತಾರೆ. ಈ ಸಂದರ್ಭ ಬಿಳಿ ಚೆಕ್ಸ್ ಶರ್ಟ್ ಹಾಗೂ ಕಪ್ಪು ಪ್ಯಾಂಟ್ ಧರಿಸಿರುತ್ತಾರೆ. ಕೊಡಗಿನಿಂದ ತಿರುಪತಿಗೆ ಹೋಗುವವರು/ಹೋಗಿರುವವರು ಇವರ ಸುಳಿವು ಸಿಕ್ಕಿದ ತಕ್ಷಣ ಈ ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸುವಂತೆ ಕುಟುಂಬದ ಸದಸ್ಯರು ಮನವಿ ಮಾಡಿದ್ದಾರೆ. ದೂರವಾಣಿ: 9008584767, 8105491545, 9731295363 (ವರದಿ : ದುಗ್ಗಳ ಸದಾನಂದ)
ಸುಂಟಿಕೊಪ್ಪ,ಫೆ.16: ದೂರದೃಷ್ಟಿ ಮತ್ತು ಪ್ರಾಮಾಣಿಕತೆಯಿಂದ ನಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡಿ ಜೀವನದಲ್ಲಿ ಯಶಸ್ಸು ಕಾಣಬೇಕೆಂದು ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಹೇಳಿದರು. ಕೊಡಗು ಜಿ.ಪಂ ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ ಹಾಗೂ ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಸರಕಾರಿ ಶಾಲೆ ಶಿಕ್ಷಣದ ಗುಣಮಟ್ಟ, ಮಕ್ಕಳಲ್ಲಿ ಲೋಕ ಜ್ಞಾನ, ಸಂಸ್ಕೃತಿ, ಸಂಸ್ಕಾರ ಕಲಿಸುವ ಅತ್ಯುತ್ತಮ ವೇದಿಕೆಯಾಗಿದ್ದು, ಪೋಷಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಪ್ರತಿಯೊಬ್ಬರೂ ತಮ್ಮ ಕೆಲಸಗಳಲ್ಲಿ ಒಳ್ಳೆಯ ಉದ್ದೇಶ ಹೊಂದಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ವಿಶ್ಲೇಷಿದ ಅವರು ಜೀವನದಲ್ಲಿ ವಿವೇಚನೆ, ಪ್ರಾಮಾಣಿಕ ಪ್ರಯತ್ನಗಳು ಮುಖ್ಯ ಎಂದು ಹೇಳಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಪಿ.ಆರ್.ಸುಕುಮಾರ್, ಶಾಲೆಗೆ 23 ವರ್ಷಗಳ ಇತಿಹಾಸವಿದ್ದು, ಶಾಲೆಯ ಆವರಣ ಮತ್ತು ಬೆಳೆದು ಬಂದ ವಿವರವಾದ ಮಾಹಿತಿಯನ್ನು ನೀಡಿದರು. ಶಾಲೆಗೆ ಅತೀ ಅವಶ್ಯಕವಾಗಿರುವ ಮೂಲ ಸೌಲಭ್ಯಗಳ ಬಗ್ಗೆ ಬೇಡಿಕೆಯನ್ನು ಸಲ್ಲಿಸಿದರು.…
ಮಡಿಕೇರಿ ಫೆ.16 : ಶನಿವಾರಸಂತೆ 66 ಕೆವಿ ವಿದ್ಯುತ್ ವಿತರಣಾ ಕೇಂದ್ರಲ್ಲಿ ಶಕ್ತಿ ಪರಿವರ್ತಕದ ಕಾಮಗಾರಿ ಮತ್ತು ನಿರ್ವಹ ಣೆ ದುರಸ್ತಿ ಕಾರ್ಯವನ್ನು ಕೆಪಿಟಿಸಿಎಲ್ ರವರು ನಿರ್ವಹಿಸಬೇಕಿರುವುದರಿಂದ ಫೆಬ್ರವರಿ, 17 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಹಂಡ್ಲಿ, ಕೊಡ್ಲಿಪೇಟೆ, ಶನಿವಾರಸಂತೆ, ಆಲೂರು, ಗೋಪಲಪುರ, ಬಲ್ಲಾರಳ್ಳಿ, ಕಿತ್ತೂರು ಗೌಡಳ್ಳಿ, ನಿಡ್ತ, ಮಣಜೂರು, ಬೀಟಿಕಟ್ಟೆ, ಅಂಕನಹಳ್ಳಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಅವರು ಕೋರಿದ್ದಾರೆ.
ಮಡಿಕೇರಿ ಫೆ.16 : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಫೆಬ್ರವರಿ, 21 ರಂದು ನಗರದ ಸುದರ್ಶನ ಅತಿಥಿ ಗೃಹದಲ್ಲಿ ಮತ್ತು ಫೆಬ್ರವರಿ, 22 ರಂದು ಕುಶಾಲನಗರದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ಫೆ.16 : ಜಿಲ್ಲೆಯಲ್ಲಿ ಫಲಾನುಭವಿಗಳ ಆಧಾರಿತ ಯೋಜನೆಯ ಎಲ್ಲಾ ಅರ್ಹ ಫಲಾನುಭವಿಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲೆಯ ಶಾಸಕರ ಉಪಸ್ಥಿತಿಯಲ್ಲಿ ‘ಫಲಾನುಭವಿಗಳ ಸಮ್ಮೇಳನ’ ಆಯೋಜಿಸಲು ಸರ್ಕಾರ ಉದ್ದೇಶಿಸಿದ್ದು, ಆ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಸಮಾಜ ಕಲ್ಯಾಣ, ಐಟಿಡಿಪಿ, ಹಿಂದುಳಿದ ವರ್ಗ, ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಕಂದಾಯ, ಜಿಲ್ಲಾ ಪಂಚಾಯತ್, ಸಹಕಾರ, ಬೃಹತ್ ಮತ್ತು ಸಣ್ಣ ನೀರಾವರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವಿವಿಧ ನಿಗಮಗಳು ಹೀಗೆ ಹಲವು ಇಲಾಖೆಗಳು ತಮ್ಮ ಇಲಾಖೆ ವ್ಯಾಪ್ತಿಯಲ್ಲಿನ ಫಲಾನುಭವಿಗಳನ್ನು ಸಮ್ಮೇಳನಕ್ಕೆ ಆಹ್ವಾನಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಬಜೆಟ್ ಅಧಿವೇಶನ ನಂತರ ಮುಖ್ಯಮಂತ್ರಿ ಅವರು ಕೊಡಗು ಜಿಲ್ಲೆಗೆ ಆಗಮಿಸುವ ಸಾಧ್ಯತೆ ಇದೆ. ಆ ನಿಟ್ಟಿನಲ್ಲಿ ‘ಫಲಾನುಭವಿಗಳ ಸಮ್ಮೇಳನ’ ಮತ್ತು ವಿವಿಧ ಇಲಾಖೆಗಳ ಕಾಮಗಾರಿಗಳಿಗೆ…
ವಿರಾಜಪೇಟೆ ಫೆ.16 : ಮೈಸೂರಿನ ನಾರಾಯಣ ಆಸ್ಪತ್ರೆ ಮತ್ತು ವಿರಾಜಪೇಟೆಯ ದಂತ ವೈದ್ಯಕೀಯ ಕಾಲೇಜು ಸಹ ಭಾಗಿತ್ವದಲ್ಲಿ ವಿರಾಜಪೇಟೆಯ ವಿಶ್ವ ಕ್ಯಾನ್ಸರ್ ದಿನಾಚರಣೆ ಪ್ರಯುಕ್ತ ಅರಿವು ಮೂಡಿಸುವ ಸಲುವಾಗಿ ಜಾಗೃತಿ ಜಾಥಾ ನಡೆಯಿತು. ನಗರದ ಮಾರಿಯಮ್ಮ ದೇವಾಲಯದಿಂದ ತೆಲುಗರಬೀದಿ, ದೊಡ್ಡಟ್ಟಿ ಚೌಕಿ, ಎಪ್.ಎಂ.ಸಿ ರಸ್ತೆ, ಮುಖ್ಯ ರಸ್ತೆಯ ಮೂಲಕ ಮೆರವಣಿಗೆ ಖಾಸಾಗಿ ಬಸ್ ನಿಲ್ದಾಣ, ಸರ್ಕಾರಿ ಬಸ್ ನಿಲ್ದಾಣದ ರಸ್ತೆಯ ಮೂಲಕ ಸಾಗಿ ಸಂದೇಶ ನೀಡಿದರು. ಜಾತಕ್ಕೆ ಡಾ. ಕಾರ್ಯಪ್ಪ ಧ್ವಜ ತೋರಿಸುವ ಮೂಲಕ ಚಾಲನೆ ನೀಡಿದರು. ಡಾ.ಸುನೀಲ್ ಮುದ್ದಯ್ಯ ಹಸಿರು ನಿಶಾನೆ ತೋರಿದರು. ಮೈಸೂರಿನ ನಾರಾಯಣ ಆಸ್ಪತ್ರೆಯ ಕ್ಯಾನ್ಸರ್ ತಜ್ಞ ಡಾ. ನವೀನ್ ಅಣ್ವೇಕರ್ ಮಾತನಾಡಿ, ಜನರು ಕ್ಯಾನ್ಸರ್ ಕಾಯಿಲೆಗೆ ಭಯಪಡುವ ಅವಶ್ಯಕತೆ ಇಲ್ಲ. ಈಗ ವಿಜ್ಞಾನ ತಂತ್ರಜ್ಞಾನ ತುಂಬಾ ಮುಂದುವರಿದಿದೆ. ತಕ್ಷಣಕ್ಕೆ ರೋಗಿಗಳಿಗೆ ಚಿಕಿತ್ಸೆ ನೀಡಲು ಎಲ್ಲಾ ರೀತಿಯ ವ್ಯವಸ್ಥೆ ಇದೆ ಮತ್ತು ಜನರು ದುಶ್ಚಟಗಳಿಂದ ದೂರವಾಗಬೇಕು ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ನಾರಾಯಣ ಆಸ್ಪತ್ರೆಯ ವೈದ್ಯರಾದ…






