ಮಡಿಕೇರಿ ಫೆ.16 : ಭಾಗಮಂಡಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ಕರಾಟೆ ಪರೀಕ್ಷೆಯಲ್ಲಿ ಪದಕ ಮತ್ತು ವಿವಿಧ ಹಂತದ ಬೆಲ್ಟ್ ಗಳನ್ನು ಪಡೆದುಕೊಂಡಿದ್ದಾರೆ. ಅಂತರಾಷ್ಟ್ರೀಯ ಶಾವೊಲಿನ್ ಕುಂಗ್-ಫು ಕರಾಟೆ ಶಾಲೆಯ ವತಿಯಿಂದ ನಡೆಸಲಾದ ಕರಾಟೆ ಪರೀಕ್ಷೆಯಲ್ಲಿ 13 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕಿ ಶ್ವೇತ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪದಕ ಮತ್ತು ಕರಾಟೆ ಬೆಲ್ಟ್ ಗಳನ್ನು ವಿತರಿಸಿದರು. ಅಂತರಾಷ್ಟ್ರೀಯ ಶಾವೊಲಿನ್ ಕುಂಗ್-ಫು ಕರಾಟೆ ಶಾಲೆಯ ಭಾರತದ ಮುಖ್ಯ ತರಬೇತುದಾರ ಶಿಪು ಇಂದ್ರಜಿತ್ ಪರೀಕ್ಷಕರಾಗಿ ಭಾಗವಹಿಸಿದ್ದರು. ಈ ಸಂದರ್ಭ ಭಾಗಮಂಡಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ತರಬೇತುದಾರ ನಾಟೋಳಂಡ ನಂಜುಂಡ ಮತ್ತು ಶಾಲಾ ಶಿಕ್ಷಕ ಕಿಶೋರ್ ಕುಮಾರ್ ಹಾಜರಿದ್ದರು.
ಲೇಖಕ: admin
ಮಡಿಕೇರಿ ಫೆ.16 : ಭಾರತೀಯ ಬೌದ್ಧ ಮಹಾಸಭಾ ಮೈಸೂರು ಜಿಲ್ಲಾ ಶಾಖೆ ವತಿಯಿಂದ ಫೆ.26 ರಂದು ಮೈಸೂರಿನಲ್ಲಿ ರಾಜ್ಯಮಟ್ಟದ ಬೌದ್ಧ ಮಹಾ ಸಮ್ಮೇಳನ ನಡೆಯಲಿದೆ ಎಂದು ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವರಾಜ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30ಕ್ಕೆ ಮೈಸೂರಿನ ಪುರಭವನದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅವರ ಮೊಮ್ಮಗ ಡಾ.ಭೀಮ್ರಾವ್ ಯಶವಂತರಾವ್ ಅಂಬೇಡ್ಕರ್ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ರಾಷ್ಟ್ರೀಯ ಹಾಗೂ ರಾಜ್ಯದ ಸಮತಾ ಸೈನಿಕ ದಳದ ಸದಸ್ಯರಿಂದ ಧಮ್ಮ ನಡಿಗೆ ಪಥಸಂಚಲನ ವೇದಿಕೆಯವರೆಗೆ ಸಾಗಲಿದೆ ಎಂದು ಮಾಹಿತಿ ನೀಡಿದರು. ಬೆಳಿಗ್ಗೆ 11.30ಕ್ಕೆ ಮೈಸೂರಿನ ಲಲಿತ ಮಹಲ್ ಅರಮನೆ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಬೌದ್ಧ ಬಿಕ್ಕುಗಳು ಹಾಗೂ ಡಾ.ಭೀಮ್ರಾವ್ ಮಾತನಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬುದ್ಧ ಧಮ್ಮ ಕೃತಿಗಳ ಬಿಡುಗಡೆಯಾಗಲಿದ್ದು, ನಂತರ ಧಮ್ಮ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು. ಕಾರ್ಯಕ್ರಮಕ್ಕೆ ಸುಮಾರು 20 ಸಾವಿರದಿಂದ 30 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ…
ಮಡಿಕೇರಿ ಫೆ.16 : ಮೂರ್ನಾಡು ಸಮೀಪದ ಕೊಂಡಂಗೇರಿ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮವು ಫೆ.17 ರಿಂದ 21ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸುನ್ನಿ ಮುಸ್ಲಿಂ ಜಮಅತ್ ನ ಸದಸ್ಯ ಪಿ.ಎಂ.ಹನೀಫ್ ಸಖಾಫಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಐದು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಫೆ.17 ರಂದು ಅಪರಾಹ್ನ 2 ಗಂಟೆಗೆ ಸಯ್ಯಿದ್ ಹಸನ್ ಆಟಕೋಯ ತಂಙಳ್ ಆದೂರು ಹಾಗೂ ತಕ್ಕ ಮುಖ್ಯಸ್ಥರು ದರ್ಗಾ ಅಲಂಕಾರ ಮತ್ತು ಸಾಮೂಹಿಕ ಪ್ರಾರ್ಥನೆಯ ಮೂಲಕ ಉರೂಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು. ಜಮಾಅತ್ ಅಧ್ಯಕ್ಷರಾದ ಪಿ.ಇ.ಮೊಹಮ್ಮದ್ ಹಾಜಿ ಧ್ವಜಾರೋಹಣ ನೆರವೇರಸಲಿದ್ದು, ರಾತ್ರಿ 7 ಗಂಟೆಗೆ ಸಯ್ಯಿದ್ ಜಾಫರ್ ಸಾದಿಖ್ ಕುಂಬೋಲ್ ಅವರ ನೇತೃತ್ವದಲ್ಲಿ “ಜಲಾಲಿಯ್ಯ ರಾತೀಬ್” ಆದ್ಯಾತ್ಮಿಕ ಕಾರ್ಯಕ್ರಮ ಮೂಡಿಬರಲಿದೆ ಎಂದು ತಿಳಿಸಿದರು. ಫೆ.18 ರಂದು ರಾತ್ರಿ 7 ಗಂಟೆಗೆ “ಅಂತರ್ಜಾಲದ ಬಳಕೆ ಮತ್ತು ಯವ್ವನ” ಎಂಬ ವಿಷಯದಲ್ಲಿ ವಾಗ್ಮಿಗಳಾದ ಅನಸ್…
ಮಡಿಕೇರಿ ಫೆ.16 : ವಿರಾಜಪೇಟೆಯ ನಲ್ವತೋಕ್ಲು-ಚೊಕಂಡಳ್ಳಿ ಗ್ರಾಮದ ಅಲ್ ಹಿದಾಯ ಸಮಿತಿ ವತಿಯಿಂದ ಫೆ.19 ರಂದು ಮಜ್ಲಿಸ್ನೂರ್ ಹಾಗೂ ಧಾರ್ಮಿಕ ಮತಪ್ರಭಾಷಣ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿಯ ಕಾರ್ಯದರ್ಶಿ ಝಿಯಾಉದ್ದೀನ್ ಬಾಖವಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 4 ಗಂಟೆಗೆ ಮರ್ಹೂಂ ಸೈಯ್ಯಿದ್ ಆಟ್ಟಕೋಯ ತಂಙಳ್ ಅವರ ಖಬರ್ ಝಿಯಾರತ್ನೊಂದಿಗೆ ಕಾರ್ಯಕ್ರಮ ಆರಂಭವಾಗಲಿದ್ದು, 4.30ಕ್ಕೆ ಧ್ವಜಾರೋಹಣ ನಡೆಯಲಿದೆ ಎಂದು ಮಾಹಿತಿ ನೀಡಿದರು. ಸಂಜೆ 7 ಗಂಟೆಗೆ ಸಯ್ಯಿದ್ ಇಬ್ರಾಹಿಂ ಬಾದ್ ಷಾ ತಂಙಳ್ ಅಲ್ ಬುಖಾರಿ ಅಲ್ ಅಝ್ಹರಿ ಮಂಗಳೂರು ಅವರ ನೇತೃತ್ವದಲ್ಲಿ ಮಜ್ಲಿಸ್ನೂರ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ರಾತ್ರಿ 8 ಗಂಟೆಗೆ ನಲ್ವತೋಕ್ಲು ಮಹಲ್ ಅಧ್ಯಕ್ಷ ಜನಾಬ್ ಡಿ.ಹೆಚ್.ಸೂಫಿಹಾಜಿ ಅವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಮತ ಪ್ರವಚನ ಕಾರ್ಯಕ್ರಮ ಪ್ರಾರಂಭಗೊಳ್ಳಲಿದ್ದು, ಕೊಡಗು ಜಿಲ್ಲೆಯ ನಾಯಿಬ್ ಖಾಝಿಗಳಾದ ಉಸ್ತಾದ್ ಶಾದುಲಿ ಫೈಝಿ ಪ್ರಾರ್ಥನೆ ನಡೆಸಲಿದ್ದಾರೆ. ಜಿಲ್ಲೆಯ ನಾಯಿಬ್ ಖಾಝಿ ಹಾಗೂ ಸಮಸ್ತ ಕೇಂದ್ರ ಮುಶಾವರ ಸದಸ್ಯರುಗಳಾದ ಎಂ.ಎಂ.ಅಬ್ದುಲ್ಲ…
ಮಡಿಕೇರಿ ಫೆ.16 : ಹೊದ್ದೂರು ಗ್ರಾಮದ ಐತಿಹಾಸಿಕ ಶ್ರೀ ಶಾಸ್ತ-ಈಶ್ವರ ದೇವಾಲಯದ 2ನೇ ವಾರ್ಷಿಕೋತ್ಸವ ಹಾಗೂ ವಿಷ್ಣುಮೂರ್ತಿ ಕೋಲ ಫೆ.17 ರಿಂದ ಆರಂಭಗೊಳ್ಳಲಿದೆ. ಬೆಳಿಗ್ಗೆ 9 ಗಂಟೆಗೆ ಗಣಹೋಮ, ಸಹಸ್ರ ನಾಮ ಅರ್ಚನೆ, ಶ್ರೀ ಬೇಟೆ ಅಯ್ಯಪ್ಪ ಹಾಗೂ ಶ್ರೀ ವಿಷ್ಣುಮೂರ್ತಿ ದೈವ ಸನ್ನಿಧಿ ಅಭಿಷೇಕ ಪೂಜೆ, ಮಂಗಳಾರತಿ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ. ಸಂಜೆ 6 ಗಂಟೆಗೆ ದೇವರ ವಿವಿಧ ನೃತ್ಯ ಬಲಿ, ಸಂಪ್ರೋಕ್ಷಣೆ ಅನ್ನದಾನ ನಂತರ ಶ್ರೀ ವಿಷ್ಣುಮೂರ್ತಿ ದೈವದ ತೆರೆ ನಡೆಯಲಿದೆ. ಫೆ.18 ರಂದು ವಾರ್ಷಿಕೋತ್ಸವ ಹಾಗೂ ತೆರೆ ಸಂಪನ್ನಗೊಳ್ಳಲಿದೆ ಎಂದು ಕೂಡಂಡ ರಾಜೇಂದ್ರ ಅಯ್ಯಮ್ಮ ತಿಳಿಸಿದ್ದಾರೆ.
ಮಡಿಕೇರಿ ಫೆ.16 : ಕಂದಾಯ ಇಲಾಖೆಯಲ್ಲಿರುವ ಮೂಲ ಸಮಸ್ಯೆಗಳನ್ನು ಬಗೆಹರಿಸಬೇಕಾದ ಕಂದಾಯ ಸಚಿವರು ವಿನಾಕಾರಣ ಕೊಡಗಿನ ಜಮ್ಮಾ ಜಾಗದ ವಿಚಾರದಲ್ಲಿ ಹೊಸ ಸಮಸ್ಯೆಯನ್ನು ಸೃಷ್ಟಿಸಲು ಮುಂದಾಗಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಆರೋಪಿಸಿದ್ದಾರೆ. ಪತ್ರಿಕಾ ಪ್ರಕರಣ ನೀಡಿರುವ ಅವರು ಇತ್ತೀಚೆಗೆ ರಾಜ್ಯ ಕಂದಾಯ ಸಚಿವರು ಜಮ್ಮಾ ಜಾಗವನ್ನು ಗುತ್ತಿಗೆ ಆಧಾರದಲ್ಲಿ ನೀಡುವುದಾಗಿ ಹೇಳುವ ಮೂಲಕ ಕೊಡಗಿನ ಬೆಳೆಗಾರರಲ್ಲಿ ಆತಂಕ ಮತ್ತು ಗೊಂದಲವನ್ನು ಮೂಡಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಕಂದಾಯ ಇಲಾಖೆಯನ್ನು ಕಾಡುತ್ತಿರುವ ಸಮಸ್ಯೆಗಳನ್ನು ಬಗೆಹರಿಸದೆ ಇದೀಗ ಜಮ್ಮಾ ವಿಚಾರದಲ್ಲಿ ಮತ್ತೊಂದು ಸಮಸ್ಯೆಯನ್ನು ಸೃಷ್ಟಿಸಲು ಮುಂದಾಗಿರುವುದು ಖಂಡನೀಯವೆಂದು ತಿಳಿಸಿದ್ದಾರೆ. ಜಿಲ್ಲೆಯ ರೈತರು ಕೃಷಿ ಚಟುವಟಿಕೆ ಬಿಟ್ಟು ಸರ್ವೇ, ಪಹಣಿ, ತಿದ್ದುಪಡಿ ಇತ್ಯಾದಿಗಾಗಿ ದಿನವಿಡೀ ನಾಡ ಕಚೇರಿ ಮತ್ತು ತಾಲ್ಲೂಕು ಕಚೇರಿಗೆ ಅಲೆಯುತ್ತಿದ್ದಾರೆ. ಎರಡು ವರ್ಷಗಳ ಹಿಂದೆ ಪೌತಿಖಾತೆಗೆ ಆದೇಶ ಬಂದಿದ್ದರು ಇನ್ನೂ ಬಹಳ ಕಡೆ ಅನುಷ್ಠಾನಗೊಂಡಿಲ್ಲ. ಜನ ದಿನವಿಡೀ ಕಚೇರಿಗೆ ಹೋಗಿ ಬರುವುದನ್ನೇ ಮಾಡುತ್ತಿದ್ದು, ದುಡಿಮೆ ಮಾಡುವುದೇ ಕಷ್ಟವಾಗಿದೆ.…
ಮಡಿಕೇರಿ ಫೆ.16 : ಇತ್ತೀಚಿನ ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ವನ್ಯಜೀವಿಗಳ ಉಪಟಳ ಮಿತಿ ಮೀರಿದ್ದು, ಮಾನವ ಜೀವಹಾನಿ ನಿರಂತರವಾಗಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಖ್ಯಮಂತ್ರಿಗಳು ಕೊಡಗಿನಲ್ಲಿ ವಿಶೇಷ ಸಭೆ ನಡೆಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ಬ್ರಿಜೇಶ್ ಕಾಳಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ಇತ್ತೀಚೆಗೆ ಇಬ್ಬರು ಅಮಾಯಕರು ಹುಲಿ ದಾಳಿಗೆ ಬಲಿಯಾಗಿದ್ದಾರೆ. ಕಳೆದ 3- 4 ವರ್ಷಗಳಿಂದ ಕೊಡಗಿನಲ್ಲಿ ವನ್ಯಜೀವಿಗಳ ದಾಳಿ ಮಿತಿ ಮೀರಿದ್ದರೂ ರಾಜ್ಯ ಸರ್ಕಾರ ಮತ್ತು ಸ್ಥಳೀಯ ಜನಪ್ರತಿನಿಧಿಗಳು ಗಂಭೀರವಾಗಿ ಪರಿಗಣಿಸದೆ ಅಸಡ್ಡೆ ತೋರಿದ ಪರಿಣಾಮ ಜನ ನಿತ್ಯ ಬವಣೆ ಅನುಭವಿಸುವಂತ್ತಾಗಿದೆ ಎಂದು ಆರೋಪಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಅರಣ್ಯ ಸಚಿವರು ಗಂಭೀರ ಸಮಸ್ಯೆಯಾಗಿರುವ ವನ್ಯಜೀವಿಗಳ ದಾಳಿ ಕುರಿತು ಕೊಡಗಿನಲ್ಲಿ ವಿಶೇಷ ಸಭೆ ನಡೆಸಿಲ್ಲ. ಜಿಲ್ಲೆಯ ಕೃಷಿಕ ವರ್ಗವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇಲ್ಲಿನ ಸಮಸ್ಯೆಗಳ ಬಗ್ಗೆ ಗಂಭೀರ ಚಿಂತನೆಯನ್ನು ಮಾಡಿಲ್ಲ್ಲ. ವನ್ಯಜೀವಿ ಉಪಟಳ ತಡೆಗೆ ಶಾಶ್ವತ…
ಚೆಟ್ಟಳ್ಳಿ ಫೆ.16 : ಜರ್ಮನ್ನಿಂದ ಮೈಸೂರಿಗೆ ಆಗಮಿಸಿದ ಕಾಯ, ಜೋಹಾನಿ, ಲಿನ್ಯೂಸ್, ಲೂಹಿಸ್, ಜಾಶ್ಮಿನ್ ಎಂಬ ವಿದೇಶಿಯರು ಕೊಡಗಿನ ಕಾಫಿ ಕುಯ್ಲು ಅನುಭವಿಸಲು ಕೊಡಗಿಗೆ ಬಂದಿಳಿದರು. ಚೆಟ್ಟಳ್ಳಿಯ ಮುಳ್ಳಂಡ ಅಂಜನ್ ಮುತ್ತಪ್ಪ ಅವರನ್ನು ಸಂಪರ್ಕಿಸಿ ಚೆಟ್ಟಳ್ಳಿಯ ಕಾಫಿ ತೋಟದಲ್ಲೆಲ್ಲ ಸುತ್ತಾಡಿದ ವಿದೇಶಿಗರು, ಅಂಜನ್ನಿಂದ ಕಾಫಿ ವೈಶಿಷ್ಯದ ಬಗ್ಗೆ ಮಾಹಿತಿ ಪಡೆದರು. ಅಲ್ಲದೆ ಬೆಳಗಿನಿಂದ ಮಧ್ಯಾಹ್ನದ ವರೆಗೆ ಕಾಫಿ ಕುಯಿದು ಆನಂದಿಸಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ವಿದೇಶಿಗರು ಕೊಡಗಿನ ಹಸಿರು ಪರಿಸರದಲ್ಲಿನ ಕಾಫಿಯನ್ನು ಕುಯಿದು ತುಂಬಾನೆ ಆನಂದಿಸಿದ್ದೇವೆ. ಇಂದು ನಮಗೆ ಹೊಸ ಅನುಭವವನ್ನು ನೀಡಿದೆ ಎಂದು ತಿಳಿಸಿದರು. ಕೊಡಗಿನ ಕಾಫಿಯನ್ನು ಸವಿದು, ಕೊಡಗಿನ ಕಾಫಿ ಹಿಂದೆ ಹಲವರ ಪರಿಶ್ರಮವಿದೆ. ಇಲ್ಲಿನ ಪರಿಸರ ಆಕರ್ಷಣೀಯವಾಗಿದ್ದು, ಮತ್ತೆ ಬರುವುದಾಗಿ ಹೇಳಿ ತೆರಳಿದರು. ವರದಿ-ಪುತ್ತರಿರ ಕರುಣ್ ಕಾಳಯ್ಯ
ಮಡಿಕೇರಿ ಫೆ.16 : ಮಾದಾಪುರದ ಶ್ರೀಮತಿ ಡಿ ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭ ನಡೆಯಿತು. ಸುಂಟಿಕೊಪ್ಪದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಾನ್ ಪರೀಕ್ಷೆಗೆ ಸೂಕ್ತ ತಯಾರಿ ಹಾಗೂ ಪರೀಕ್ಷೆಯನ್ನು ಆತ್ಮ ವಿಶ್ವಾಸದಿಂದ ಎದುರಿಸುವ ಕುರಿತು ಉಪನ್ಯಾಸ ಮತ್ತು ಬದಲಾದ ಹೊಸ ಮಾದರಿ ಪ್ರಶ್ನೆ ಪತ್ರಿಕೆಯ ಬಗ್ಗೆ ಮಾಹಿತಿ ನೀಡಿದರು. ಚೆನ್ನಮ್ಮ ಸಂಸ್ಥೆಯ ಪ್ರಾಂಶುಪಾಲರಾದ ಸಿ ಜಿ ಮಂದಪ್ಪ ಮಾತನಾಡಿ ಸುಂಟಿಕೊಪ್ಪ ಪದವಿ ಪೂರ್ವ ಕಾಲೇಜನ್ನು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಕೇಂದ್ರವನ್ನಾಗಿ ರೂಪಿಸುವಲ್ಲಿ ಕೊಡಗು ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಟ್ಟರಾಜು , ಜಾನ್ ರವರ ಪಾತ್ರ ಮಹತ್ವ ಪೂರ್ಣವಾದುದು ಎಂದು ಶಾಘಿಸಿದರು. ದೂರದ ಊರಿನಿಂದ ಬರುವ ವಿದ್ಯಾರ್ಥಿ ಗಳಿಗೆ ಇದರಿಂದ ಬಹಳ ಅನುಕೂಲವಾಗಿದೆ ಎಂದರು. ಶ್ರೀಮತಿ ಡಿ ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಕರ್ನಲ್ ಬಿಜಿವಿ ಕುಮಾರ್ ಮತ್ತು…
ಮಡಿಕೇರಿ ಫೆ.16 – ಚೆಂಬು ಗ್ರಾಮ ಪಂಚಾಯಿತಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆಯ ಸ್ಥಳೀಯ ಸಂಸ್ಥೆಗಳ ಆಶ್ರಯದಲ್ಲಿ ಭಗವಾನ್ ಯುವಕ ಸಂಘ ಚೆಂಬು ,ಮಿತ್ರಕೂಟ ಕ್ರೀಡಾ ಸಂಘ ಚೆಂಬು ಇವರ ಸಹಯೋಗದೊಂದಿಗೆ ಮಡಿಕೇರಿಯ ರಕ್ತ ನಿಧಿ ಕೇಂದ್ರದವರು *’ರಕ್ತದಾನ ಶಿಬಿರ’* ಆಯೋಜಿಸಿದ್ದರು. ಕಾರ್ಯಕ್ರಮವನ್ನು ಚೆಂಬು ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಕುಸುಮ ಯೋಗೇಶ್ವರ್ ಸಸಿಗೆ ನೀರೆರೆಯುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ಇಂತಹ ಕಾರ್ಯಕ್ರಮ ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಂಡಿರುವುದು ಶ್ಲಾಘನೀಯ.ಇಂದಿನ ಕಾಲಮಾನದಲ್ಲಿ ಯುವಕರು ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳುವುದು ಬಹಳ ಒಳ್ಳೆಯ ವಿಚಾರ . ಗ್ರಾಮೀಣ ಭಾಗದ ಜನತೆ ಇಂತಹ ಶಿಬಿರದ ಬಗ್ಗೆ ಅರಿವು ಮೂಡಿಸಿ ಕೊಳ್ಳುವುದು ಅತೀ ಅವಶ್ಯ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಮಾತನಾಡಿದ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ।। ಕರುಂಬಯ್ಯ ಕೆ. ಪಿ. , ರಕ್ತದಾನದ ಮಹತ್ವ , ಪ್ರಯೋಜನ ಮತ್ತು ಸಾರ್ಥಕ ಮನೋಭಾವದ ಬಗ್ಗೆ ಅರಿವು ನೀಡಿದರು. ವಿದ್ಯಾರ್ಥಿಗಳು ಬಾಲ್ಯದಲ್ಲೇ ರಕ್ತದಾನದ ಬಗ್ಗೆ ಅರಿತುಕೊಳ್ಳಬೇಕು. ಜೀವನದಲ್ಲಿ…






