ಮಡಿಕೇರಿ ಫೆ.15 : ಹಿಂದೂ ಕ್ರಿಕೆಟ್ ಕ್ಲಬ್ ವತಿಯಿಂದ ಮಾ.4 ಮತ್ತು 5 ರಂದು ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 3ನೇ ವರ್ಷದ ‘ಹಿಂದೂ ಕ್ರಿಕೆಟ್ ಕಪ್-2023’ ನಡೆಯಲಿದೆ. ಸುದ್ದಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕ್ಲಬ್ ಸದಸ್ಯ ಎನ್.ವಿನಯ್ ಕುಮಾರ್, ವಿವಿಧ ಸಮಾಜಗಳು ತಮ್ಮ ಸಮೂಹಕ್ಕೆ ಸೀಮಿತವಾದ ಪಂದ್ಯಾವಳಿಗಳನ್ನು ಆಯೋಜಿಸಿಕೊಂಡು ಬರುತ್ತಿವೆ. ಆದರೆ, ಹಿಂದೂ ಕ್ರಿಕೆಟ್ ಕ್ಲಬ್ ವತಿಯಿಂದ ಹಿಂದೂ ಸಮಾಜದ ಎಲ್ಲರನ್ನೂ ಸಂಘಟಿಸುವ ಚಿಂತನೆಗಳಡಿ ಹಿಂದೂ ಕ್ರಿಕೆಟ್ ಕಪ್ ಆಯೋಜಿಸುತ್ತಿದೆ. ಪಂದ್ಯಾವಳಿಯಲ್ಲಿ ರಾಜ್ಯವ್ಯಾಪ್ತಿಯ 40 ರಿಂದ 45 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇರುವುದಾಗಿ ತಿಳಿಸಿದರು. ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಆಟಗಾರರು ತಮ್ಮ ಗುರುತಿನ ಐಡಿ ಕಾರ್ಡ್ನ್ನು ಹಾಜರು ಪಡಿಸುವುದು ಕಡ್ಡಾಯವಾಗಿದೆ. ಪಂದ್ಯಾವಳಿ ನಾಕ್ ಔಟ್ ಮಾದರಿಯಲ್ಲಿ ನಡೆಯಲಿದೆ. ಆಸಕ್ತ ತಂಡಗಳು ಫೆ.28 ರ ಒಳಗೆ ಮೈದಾನ ಶುಲ್ಕ 3 ಸಾವಿರ ರೂ.ಗಳೊಂದಿಗೆ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಹೇಳಿದರು. ಪಂದ್ಯಾವಳಿ ವಿಜೇತರಿಗೆ ನೀಡಲು ಅತ್ಯಂತ ವಿಶಿಷ್ಟವಾದ ಟ್ರೋಫಿಗಳನ್ನು ಸಿದ್ಧಪಡಿಸಲಾಗಿದೆ.…
ಲೇಖಕ: admin
ಮಡಿಕೇರಿ ಫೆ.15 : ಕೊಡಗು ಪತ್ರಕರ್ತರ ಸಂಘದ ವತಿಯಿಂದ ಹಿರಿಯ ಪತ್ರಕರ್ತ ನರೇಶ್ಚಂದ್ರ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಪತ್ರಿಕಾ ಭವನದಲ್ಲಿ ನಡೆದ ಸಂತಾಪ ಸಭೆಯಲ್ಲಿ ನರೇಶ್ಚಂದ್ರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು. ಸಭೆಯಲ್ಲಿ ಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ, ಕೊಡಗು ಪತ್ರಕರ್ತರ ಸಂಘದ ಉಪಾಧ್ಯಕ್ಷ ಜಿ.ವಿ.ರವಿಕುಮಾರ್, ಸಲಹೆಗಾರ ಬಿ.ಜಿ.ಅನಂತಶಯನ, ಪತ್ರಿಕಾಭವನ ಟ್ರಸ್ಟಿ ಶ್ರೀಧರ್ ಹೂವಲ್ಲಿ ನುಡಿನಮನ ಸಲ್ಲಿಸಿದರು. ಪತ್ರಿಕಾ ಭವನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಉಮೇಶ್, ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್, ಸಹಕಾರ್ಯದರ್ಶಿ ಪ್ರಸಾದ್ ಸಂಪಿಗೆಕಟ್ಟೆ, ಸಹ ಖಜಾಂಚಿ ಸಯ್ಯದ್ ಇರ್ಫಾನ್, ನಿರ್ದೇಶಕರಾದ ಹೆಚ್.ಎಸ್.ಲಕ್ಷ್ಮೀಶ್, ಸದಸ್ಯರಾದ ಪ್ರವೀಣ್, ಪಿ.ಎಂ.ರವಿ, ಸಲಹೆಗಾರ ಅನಿಲ್ ಹೆಚ್.ಟಿ, ಕುಶಾಲನಗರ ತಾಲ್ಲೂಕು ಅಧ್ಯಕ್ಷ ವಿಘ್ನೇಶ್ ಭೂತನಕಾಡು, ಪತ್ರಿಕಾ ಭವನ ವ್ಯವಸ್ಥಾಪಕಿ ಯಮುನಾ, ಸಿಬ್ಬಂದಿ ಸವಿತಾ, ಅಲ್ಲಾರಂಡ ರಂಗಚಾವಡಿಯ ಸಂಚಾಲಕ ವಿಠಲ್ ನಂಜಪ್ಪ ಮತ್ತಿತರರು ಉಪಸ್ಥಿತರಿದ್ದರು.
ಮಡಿಕೇರಿ ಫೆ.15 : ಕರಿಕೆ ಗ್ರಾ.ಪಂ ವ್ಯಾಪ್ತಿಯ ವಿವಿಧ ರಸ್ತೆಗಳ ಅಭಿವೃದ್ಧಿಗೆ ಕೊಡಗು ಜಿಲ್ಲಾ ಪಂಚಾಯಿತಿಯಿಂದ ಹೆಚ್ಚಿನ ಅನುದಾನ ಮಂಜೂರು ಮಾಡಿ ಶೀಘ್ರ ಕಾಮಗಾರಿ ಆರಂಭಿಸಬೇಕೆಂದು ಗ್ರಾ.ಪಂ ಉಪಾಧ್ಯಕ್ಷ ಎನ್.ಬಾಲಚಂದ್ರ ನಾಯರ್ ಒತ್ತಾಯಿಸಿದ್ದಾರೆ. ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು, ಕರಿಕೆ ಗ್ರಾಮದಲ್ಲಿ ಶೇ.70 ರಷ್ಟು ಮಂದಿ ಹಿಂದುಳಿದ ವರ್ಗಕ್ಕೆ ಸೇರಿದವರು ವಾಸವಾಗಿದ್ದಾರೆ. ಇಲ್ಲಿನ ವಿವಿಧ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ವಾಹನಗಳ ಸಂಚಾರಕ್ಕೆ ಯೋಗ್ಯವಾಗಿಲ್ಲ. ಆದ್ದರಿಂದ ಜಿ.ಪಂ ಮೂಲಕ ಹೆಚ್ಚಿನ ಅನುದಾನ ನೀಡಬೇಕೆಂದು ಗಮನ ಸೆಳೆದರು. ಆನೆಪಾರೆ ಎಸ್.ಸಿ.ಕಾಲೋನಿ ರಸ್ತೆ, ಬೀಟಿಯಾಡಿ ಎಸ್.ಸಿ.ಕಾಲೋನಿ ರಸ್ತೆ, ತೋಟಂ ಆನೆಪಾರೆ ರಸ್ತೆ, ಚೆಂಬೇರಿ ಆನೆಪಾರೆ ರಸ್ತೆ, ಕೊಚ್ಚಿ ಎಸ್.ಸಿ.ಕಾಲೋನಿ ರಸ್ತೆ, ಕುಂಡಡ್ಕ ಎಸ್.ಸಿ.ಕಾಲೋನಿ ರಸ್ತೆ, ಮಾರಾಟಿಮೂಲೆ ಎಸ್.ಸಿ.ಕಾಲೋನಿ ರಸ್ತೆ, ಮಡೆಕಾನ ಎಸ್.ಸಿ.ಕಾಲೋನಿ ರಸ್ತೆ, ಕುಡಿಯಂಕಲ್ಲು ಎಸ್.ಟಿ.ಕಾಲೋನಿ ರಸ್ತೆ, ಕೊಳಂಗರೆ ಎಸ್.ಟಿ.ಕಾಲೋನಿ ರಸ್ತೆ, ಪೊಂಗಾನ ಎಸ್.ಟಿ.ಕಾಲೋನಿ ರಸ್ತೆ, ಕುಂಡತ್ತಿಕಾನ ಎಸ್.ಟಿ.ಕಾಲೋನಿ ರಸ್ತೆ, ಹಳೆಮನೆ ಕುಂಡತ್ತಿಕಾನ ರಸ್ತೆ, ಪಚ್ಚೆಪಿಲಾವು ಎಸ್.ಟಿ.ಕಾಲೋನಿ ರಸ್ತೆ, ಆಲತ್ತಿಕಡವು ಎಸ್.ಸಿ.ಕಾಲೋನಿ ರಸ್ತೆ,…
ಮಡಿಕೇರಿ ಫೆ.15 : ಮಡಿಕೇರಿ ನಗರದ ದಾಸವಾಳ ಬಡಾವಣೆಯಲ್ಲಿರುವ ಶ್ರೀವೀರಭದ್ರ ಮುನೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಮಹಾಶಿವರಾತ್ರಿ ಮಹೋತ್ಸವ ಫೆ.18 ರಂದು ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ದೇವಾಲಯದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು ಅಂದು ಬೆಳಿಗ್ಗೆ 7 ಗಂಟೆಗೆ ಮಡಿವಾಳರ ಅಭಿವೃದ್ಧಿ ಸಂಘದ ಸಹಭಾಗಿತ್ವದಲ್ಲಿ ಮಹಾಗಣಪತಿ ಹೋಮ, 9 ಗಂಟೆಗೆ ನಗರದ ಗಣಪತಿ ಬೀದಿಯಿಂದ ಬನ್ನಿಮಂಟಪ, ಮಹದೇವಪೇಟೆ, ಖಾಸಗಿ ಬಸ್ ನಿಲ್ದಾಣ ವೃತ್ತದಿಂದ ಜೂನಿಯರ್ ಕಾಲೇಜು ರಸ್ತೆ ಮಾರ್ಗವಾಗಿ ದೇವಾಲಯಕ್ಕೆ ವೀರಭದ್ರ ಉತ್ಸವ ಮೂರ್ತಿಯ ಮೆರವಣಿಗೆ ಸಾಗಲಿದೆ ಎಂದು ತಿಳಿಸಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಲಿದ್ದು, ಸಂಜೆ 6 ರಿಂದ ಮರುದಿನ ಬೆಳಿಗ್ಗೆ 5 ಗಂಟೆಯವರೆಗೆ ಜಾಮ ಪೂಜೆ ಮತ್ತು ಸಂಜೆ 7 ಗಂಟೆಗೆ ರಂಗಪೂಜೆ ಜರುಗಲಿದೆ. ಜಾಗರಣೆ ಪ್ರಯುಕ್ತ ರಾತ್ರಿ 8 ಗಂಟೆಗೆ ಮಹಾಮೃತ್ಯುಂಜಯ ಹೋಮ ನಡೆಯಲಿದೆ. 10 ಗಂಟೆಗೆ ಸಭಾ ಕಾರ್ಯಕ್ರಮದ ನಂತರ ಮರುದಿನ ಬೆಳಿಗ್ಗೆ 5…
ನಾಪೋಕ್ಲು ಫೆ.15 : ಕಕ್ಕಬೆಯ ಪಾಡಿ ಶ್ರೀ ಇಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರು ಕಲಾಡ್ಚ ಉತ್ಸವ ಮಾ.7ರಂದು ನಡೆಯಲಿದೆ. ಅಂದು ಬೆಳಿಗ್ಗೆ ಜೋಡತ್ತು ಪೋರಾಟ ಹಾಗೂ ವಿವಿಧ ಪೂಜಾ ವಿಧಿ ವಿಧಾನಗಳು ಜರುಗಲಿದ್ದು, ಅಪರಾಹ್ನ ದೇವರ ಉತ್ಸವ ಮೂರ್ತಿಯನ್ನು ಮಲ್ಮ ಬೆಟ್ಟಕ್ಕೆ ಕೊಂಡೊಯ್ದು ದೇವ ಕಟ್ಟು ಸಡಿಲಿಸಿ, ಸಂಜೆ ನೃತ್ಯ ಬಲಿ ಮೂಲಕ ಉತ್ಸವ ಸಂಪನ್ನಗೊಳ್ಳಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವತಕ್ಕರಾದ ಪರದಂಡ ಕುಟುಂಬಸ್ಥರು ಕೋರಿದ್ದಾರೆ. ಸತ್ಯನಾರಾಯಣ ಪೂಜೆ ಹೊರತುಪಡಿಸಿ ಎಲ್ಲಾ ರೀತಿಯ ಪೂಜೆಗಳನ್ನು, ತುಲಾಭಾರ ಸೇವೆಗಳನ್ನು ಈ ಸಂದರ್ಭದಲ್ಲಿ ನಡೆಸಲಾಗುವುದು. ಹಿಂದಿನಿಂದ ನಡೆದುಕೊಂಡು ಬಂದ ಪದ್ಧತಿಯಂತೆ ಫೆ.21ರ ಮಂಗಳವಾರ ಮಲ್ಮ ಬೆಟ್ಟದಲ್ಲಿ ದೇವಕಟ್ಟು ವಿಧಿಸಲಾಗುವುದು. ಆ ಬಳಿಕ ಮಾ.7ರಂದು ಉತ್ಸವ ಸಂಪನ್ನ ವಾಗುವವರೆಗೆ ಭಕ್ತರು ಪ್ರಾಣಿ ಹಿಂಸೆ, ಮದುವೆ ಮುಂತಾದ ಸಮಾರಂಭಗಳನ್ನು ನಡೆಸದಂತೆ ದೇವತಕ್ಕರು ಕೋರಿದ್ದಾರೆ. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಫೆ.15 : ಕೊಡಗಿನ ಆದಿ ಗ್ರಂಥ ಪಟ್ಟೋಳೆ ಪಳಮೆಯನ್ನು ಆಧರಿಸಿದ ಪೌರಾಣಿಕ ಕೊಡವ ಚಲನಚಿತ್ರ ಕಲ್ಲಕೆರೆ ಮಾದೇವಿ ನಾಪೋಕ್ಲುವಿನ ಕೊಡವ ಸಮಾಜದಲ್ಲಿ ಪ್ರದರ್ಶನಗೊಳ್ಳುತ್ತಿದ್ದು, ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಶಾಲಾ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಚಲನಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಪಿ ಅಂಡ್ ಜಿ ಕ್ರಿಯೇಷನ್ ಚಲನಚಿತ್ರ ನಿರ್ದೇಶಕ ಬಾಳೆಯಡ ಪ್ರತೀಶ್ ಪೂವಯ್ಯ ತಿಳಿಸಿದ್ದಾರೆ. ನಾಪೋಕ್ಲುವಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಲಕೆರೆ ಮಾದೇವಿ ಚಲನಚಿತ್ರ ಕೊಡಗಿನ ಪ್ರಥಮ ಪೌರಾಣಿಕ ಕಥೆಯಾಗಿ ಮೂಡಿ ಬಂದಿದ್ದು, ಮೂರ್ನಾಡು, ನೆಲಜಿ ಮತ್ತಿತರ ಭಾಗಗಳಲ್ಲಿ ಪ್ರದರ್ಶನಕ್ಕೆ ಬೇಡಿಕೆ ಬಂದಿದೆ ಎಂದರು. ಪಿ ಅಂಡ್ ಜಿ ಕ್ರಿಯೇಷನ್ ಚಲನಚಿತ್ರ ನಿರ್ದೇಶಕರಾದ ಆಚೆಯಡ ಗಗನ್ ಗಣಪತಿ ಮಾತನಾಡಿ, ಚಿತ್ರತಂಡ ಆಸಕ್ತಿಯಿಂದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು, ತಂಡದ ಎಲ್ಲಾ ಸದಸ್ಯರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಚಿತ್ರದಲ್ಲಿ ವಿಶೇಷ ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಸಾರ್ವಜನಿಕರು ಚಲನಚಿತ್ರವನ್ನು ವೀಕ್ಷಿಸಿ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು. ನಟ ಚೇನಂಡ ಗಿರೀಶ್ ಉತ್ತಮ ಪೌರಾಣಿಕ ಕೊಡವ ಚಲನಚಿತ್ರವೊಂದು ಬಿಡುಗಡೆಗೊಂಡಿದೆ.…
ಮಡಿಕೇರಿ ಫೆ.15 : ದಕ್ಷಿಣ ಕೊಡಗಿನ ಬಾಡಗರಕೇರಿ ಗ್ರಾಮದ ಶ್ರೀ ಮೃತ್ಯುಂಜಯ ದೇವಾಲಯದ ವಾರ್ಷಿಕೋತ್ಸವವು ಇದೇ ಮಾ.1 ರಿಂದ 11 ರವರೆಗೆ ನಡೆಯಲಿದೆ. ಮಾ.1 ರಾತ್ರಿ 8 ಗಂಟೆಗೆ ಕೊಡಿಮರ ನಿಲ್ಲಿಸುವ ಮೂಲಕ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಲಾಗುವುದು. 2ರಂದು ಬೆಳಗ್ಗೆ 11 ಗಂಟೆಯಿoದ ನಿತ್ಯ ಪೂಜೆ, ಸಂಜೆ 7 ಗಂಟೆಗೆ ತೂಚಂಬಲಿ, 3ರಂದು ಪ್ರಾತ:ಕಾಲ 5 ಗಂಟೆಗೆ ಉತ್ಸವ ಮೂರ್ತಿ ದರ್ಶನ, 11 ಯಿಂದ ನಿತ್ಯ ಪೂಜೆ, ಸಂಜೆ 7 ಗಂಟೆಗೆ ತೂಚಂಬಲಿ, 4 ರಂದು ಪ್ರಾತ:ಕಾಲ 5 ಗಂಟೆಗೆ ಉತ್ಸವಮೂರ್ತಿ ದರ್ಶನ, ಬೆಳಗ್ಗೆ 10 ಗಂಟೆಗೆ ಭಂಡಾರ ಬರುವುದು, 11 ಗಂಟೆಯಿoದ ನಿತ್ಯ ಪೂಜೆ ಸಂಜೆ 7 ಗಂಟೆಗೆ ತೂಚಂಬಲಿ, ಮಾ.5 ರಂದು ಪ್ರಾತಃಕಾಲ 5 ಗಂಟೆಗೆ ಇರುಬಳಕು, 11 ಗಂಟೆಯಿoದ ನಿತ್ಯಪೂಜೆ ಮತ್ತು ತುಲಾಭಾರ ಸೇವೆ ಮತ್ತು ಸಂಜೆ 7 ಗಂಟೆಗೆ ತೂಚಂಬಲಿ ನಡೆಯಲಿದೆ. ಮಾ.6 ರಂದು ಪ್ರಾತ:ಕಾಲ 5 ಗಂಟೆಗೆ ಇರುಬಳಕು, ಬೆಳಗ್ಗೆ 11 ಗಂಟೆಯಿoದ ನಿತ್ಯ…
ಮಡಿಕೇರಿ ಫೆ.15 : ಭಾರತ ಸ್ಕೌಟ್ಸ್ ಮತ್ತು ಗೈಡ್ನ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಕೊಡಗು ಜಿಲ್ಲೆಗೆ ಹೊಸದಾಗಿ ಆಗಮಿಸಿರುವ ಪೊಲೀಸ್ ವರಿಷ್ಠಾಧಿಕಾರಿಗಳು ಆದ ಗೈಡ್ಸ್ ಸಂಸ್ಥೆಯ ಉಪಾಧ್ಯಕ್ಷರೂ ಆಗಿರುವ ಕೆ.ರಾಮರಾಜನ್ ಅವರನ್ನು ನಗರದ ಎಸ್.ಪಿ. ಕಚೇರಿಯಲ್ಲಿ ಭೇಟಿ ಮಾಡಿದ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಗೈಡ್ನ ಸ್ಕಾರ್ಫ್ ಧರಿಸುವುದರ ಮೂಲಕ ಆತ್ಮೀಯವಾಗಿ ಸ್ವಾಗತಿಸಿದರು. ಜಿಲ್ಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದ ಬೇಬಿ ಮ್ಯಾಥ್ಯೂ ಸಂಸ್ಥೆಯ ಚಟುವಟಿಕೆಗಳಿಗೆ ಸಹಕರಿಸುವಂತೆ ಎಸ್.ಪಿ.ಅವರಲ್ಲಿ ಮನವಿ ಮಾಡಿದರು. ಈ ಸಂದರ್ಭ ಸ್ಕೌಟ್ಸ್ ಆಯುಕ್ತರಾದ ಜಿಮ್ಮಿ ಸ್ವಿಕೇರಾ, ಸ್ಥಾನಿಕ ಆಯುಕ್ತ ಹೆಚ್.ಆರ್ ಮುತ್ತಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎಂ ವಸಂತಿ, ಜಿಲ್ಲಾ ಸಂಘಟಕರಾದ ಯು.ಸಿ.ದಮಯಂತಿ ಹಾಗೂ ಜಿಲ್ಲಾ ಸಹಕಾರ್ಯದರ್ಶಿ ಬೊಳ್ಳಜಿರ ಬಿ. ಅಯ್ಯಪ್ಪ ಹಾಜರಿದ್ದರು.
ನಾಪೋಕ್ಲು ಫೆ.15 : ಸಮಾಜದಲ್ಲಿ ಎಲ್ಲಾ ಧರ್ಮದ ಜನಾಂಗದವರು ಯಾವುದೇ ಬೇಧ ಭಾವವಿಲ್ಲದೆ ಸೌಹಾರ್ದತೆಯಿಂದ ಇದ್ದರೆ ಮಾತ್ರ ಶಾಂತಿ ಕಾಣಲು ಸಾಧ್ಯ ಎಂದು ಶುಹೈಬ್ ಫೈಝಿ ಹೇಳಿದರು. ನಾಪೋಕ್ಲುವಿನ ಇತಿಹಾಸ ಪ್ರಸಿದ್ಧ ಚೆರಿಯಪರಂಬು ಮಖಾಂ ಉರೂಸ್ ಸಮಾರಂಭದ ಸರ್ವಧರ್ಮ ಸಮ್ಮೇಳನ ಕಾರ್ಯಕ್ರಮದಲ್ಲಿ ಮುಖ್ಯ ಪ್ರಭಾಷಣಗಾರರಾಗಿ ಪಾಲ್ಗೊಂಡು ಮಾತನಾಡಿದರು. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ನಮ್ಮ ಭಾರತ ದೇಶದಲ್ಲಿ ಎಲ್ಲಾ ಧರ್ಮದ ವಿವಿಧ ಜಾತಿಯ ಜನರು ದೇಶದ ಸಂವಿಧಾನದ ಅಡಿಯಲ್ಲಿ ಜೀವನ ನಡೆಸುತ್ತಿದ್ದಾರೆ. ಜಗತ್ತಿನಲ್ಲಿ ಉದಯಿಸಿ ಬಂದಂತಹ ಯಾವುದೇ ಧರ್ಮದ ಪ್ರವಾದಿಗಳಿರಲಿ, ಸಂತರಿರಲಿ, ಪವಾಡ ಪುರುಷರಾಗಿರಲಿ, ಯಾವುದೇ ಪಂಡಿತರಿರಲಿ ಯಾರೂ ಸಹ ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಹೇಲಿಲ್ಲ. ನಾವೆಲ್ಲರೂ ಭಾರತೀಯರು ನಮ್ಮಲ್ಲಿ ಯಾವುದೇ ಧರ್ಮ ಭೇದವಿಲ್ಲ ನಾವೆಲ್ಲರೂ ಸಹೋದರರಂತೆ ಜೀವನ ನಡೆಸಬೇಕು. ಪ್ರಸ್ತುತ ಕಾಲದಲ್ಲಿ ಕೆಲವು ಸಮಾಜಘಾತುಕ ಶಕ್ತಿಗಳು ಕೆಲವು ಸಂಘಟನೆಗಳ ಹೆಸರಿನಲ್ಲಿ ಧರ್ಮಗಳ ಮದ್ಯೆ ಒಡಕನ್ನು ತಂದು ಜನರ ಸೌಹಾರ್ದತೆಗೆ ದಕ್ಕೆಬರುವಂತ ಕೃತ್ಯ ನಡೆಸುತ್ತಿದೆ. ಅಂತವರ ವಿರುದ್ಧ ಧ್ವನಿ ಎತ್ತಬೇಕಿದೆ ಎಂದು ಹೇಳಿದರು.…
ಮಡಿಕೇರಿ ಫೆ.15 : ಶನಿವಾರಸಂತೆಯ ದಿ.ಗಂಗಪ್ಪ ಕರ್ಕೇರ ಅವರ ಮಗ ಹಾಗೂ ಶಕ್ತಿ ದಿನ ಪತ್ರಿಕೆಯ ಹಿರಿಯ ಪತ್ರಕರ್ತ ನರೇಶ್ ಚಂದ್ರ ದೈವಾಧೀನರಾಗಿದ್ದಾರೆ. ಕಳೆದ 32 ವರ್ಷಗಳಿಗೂ ಹೆಚ್ಚು ಕಾಲ ಪತ್ರಕರ್ತರಾಗಿ ಈ ಭಾಗದಲ್ಲಿ ಸೇವೆ ಸಲ್ಲಿಸಿದರು. ಇವರ ಹಲವಾರು ಸಾಮಾಜಿಕ ಲೇಖನಗಳಿಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿ ಲಭಿಸಿದೆ.






