ಮಡಿಕೇರಿ ಮಾ.21 : ನಗರದ ಪ್ರಸಿದ್ಧ ಪ್ರವಾಸಿತಾಣ ರಾಜಾಸೀಟು ಅಭಿವೃದ್ಧಿಯ ಸಂದರ್ಭ ದುರುಪಯೋಗ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ನ ರಾಜೀವ್ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಈ ಸಂಬಂಧ ಉಪ ಲೋಕಾಯುಕ್ತರಿಗೆ ದೂರು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 4.55 ಕೋಟಿ ವೆಚ್ಚದ ಗ್ರೇಟರ್ ರಾಜಾಸೀಟು ಯೋಜನೆಯಡಿ ದೊಡ್ಡ ಮೊತ್ತದ ದುರುಪಯೋಗವಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮತ್ತು ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸುವಂತೆ ಲೋಕಾಯುಕ್ತಕ್ಕೆ ನೀಡಿರುವ ದೂರಿನಲ್ಲಿ ಕೋರಲಾಗಿದೆ ಎಂದರು. ಮಡಿಕೇರಿ ರಾಜಾಸೀಟಿನ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ಇಲಾಖೆಗೆ ರಾಜ್ಯ ಸರ್ಕಾರ 2016-17 ನೇ ಸಾಲಿನಲ್ಲಿ 4.55 ಕೋಟಿ ರೂ.ಗಳನ್ನು ಒದಗಿಸಿತ್ತು. ಇದರ ಕಾಮಗಾರಿಯನ್ನು 2020-21 ರಲ್ಲಿ ಲೋಕೋಪಯೋಗಿ ಇಲಾಖೆಗೆ ವಹಿಸಿಕೊಟ್ಟ ಬಳಿಕ, 2020 ರ ಜೂ.30 ರಿಂದ ಕಾಮಗಾರಿ ಆರಂಭಗೊಂಡಿತು. ಈ ಹಂತದಲ್ಲಿ ಮಾಜಿ ಸಚಿವ ಎಂ.ಸಿ. ನಾಣಯ್ಯ, ಅಂದಿನ ಎಂಎಲ್ಸಿ ವೀಣಾ ಅಚ್ಚಯ್ಯ ಅವರು ಸ್ಥಳಕ್ಕೆ ಭೇಟಿಯನ್ನಿತ್ತು ಕಾಮಗಾರಿ ನಡೆಯುತ್ತಿದ್ದ ರೀತಿಯ ಬಗ್ಗೆ ತಮ್ಮ…
ಲೇಖಕ: admin
ಚೆಯ್ಯಂಡಾಣೆ ಮಾ.21 : ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಕಕ್ಕಬೆಯ ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಸಾಮಾಜಿಕ ಸಬಲೀಕರಣ ದಿನಾಚರಣೆ ಆಚರಿಸಲಾಯಿತು. ಡಾ. ಬಿ.ಆರ್. ಅಂಬೇಡ್ಕರ್ ರವರು ತಮ್ಮ ಬಹಿಷ್ಕೃತ ಹಿತಕಾರಿಣಿ ಸಭಾ ವತಿಯಿಂದ ಮೊದಲ ಬಾರಿಗೆ ಮಹಾರಾಷ್ಟ್ರ ದ ಮಹಾಡ್ ನಗರದಲ್ಲಿ ಚೌಡಾರ್ ಕೆರೆ ಆಂದೋಲನ ನಡೆಸಿದ್ದು, ಇದು ಅಸ್ಪೃಶ್ಯತೆ ಆಚರಣೆ ವಿರುದ್ಧ ಜಾಗೃತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅರಿವು ಕಾರ್ಯಕ್ರಮವನ್ನು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಅಶೋಕ್ ಆಗಮಿಸಿ ದಿನದ ಮಹತ್ವದ ಕುರಿತು ಉಪನ್ಯಾಸ ಹಾಗೂ ಜಾಗೃತಿ ಮೂಡಿಸಿದರು. ಈ ಸಂದರ್ಭ ಸ್ಥಳೀಯ ಗ್ರಾ.ಪಂ ಅಧ್ಯಕ್ಷ ಸಂಪನ್ ಅಯ್ಯಪ್ಪ ಮತ್ತಿತರರು ಇದ್ದರು. ಮುಖ್ಯ ಶಿಕ್ಷಕಿ ಸುಮಯ್ಯ ಕೆ.ಎಂ. ಸ್ವಾಗತಿಸಿ, ವಂದಿಸಿದರು. ವರದಿ : ಅಶ್ರಫ್
ಶ್ರೀಮಂಗಲ ಮಾ.21 : ಕೊಡವ ಟಗ್ ಆಫ್ ವಾರ್ ಅಕಾಡೆಮಿಯ ಮಾನ್ಯತೆ ಪಡೆದ, ಕೊಡವ ಒಕ್ಕಡೊಕ್ಕಡ ಕೇರ್ ಬಲಿಪ ನಮ್ಮೆ ಚೆಟ್ಟಂಗಡ ಕಪ್ -2023 ಕ್ಕೆ “ಕೇರ್ ಪೂಜೆ” ನೆಮ್ಮಲೆ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಶಾಸ್ತ್ರೋತ್ತವಾಗಿ ಜರುಗಿತು. ಕೊಡವ ಕೌಟುಂಬಿಕ ಹಗ್ಗಜಗ್ಗಾಟ ಉತ್ಸವದ ಎರಡನೇ ವರ್ಷದ ಆತಿಥ್ಯ ವಹಿಸಿಕೊಂಡಿರುವ ನೆಮ್ಮಲೆ ಗ್ರಾಮದ ಚೆಟ್ಟಂಗಡ ಕುಟುಂಬವು ಹಗ್ಗಜಗ್ಗಾಟ ಪಂದ್ಯಾವಳಿಗೆಂದೇ ಕೇರಳ ರಾಜ್ಯದ ಪರಿಣಿತ ಹಗ್ಗ ತಯಾರಿಸುವವರಿಂದ ವಿಶೇಷವಾಗಿ ತಯಾರಿಸಿಕೊಂಡು ತಂದಿರುವ ಹಗ್ಗಗಳಿಗೆ ಕುಟುಂಬದ ಹಿರಿಯರು, ಅಧ್ಯಕ್ಷ, ಆಡಳಿತ ಮಂಡಳಿ ಹಾಗೂ ಕುಟುಂಬದ ಸದಸ್ಯರ ಸಮ್ಮುದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಹಗ್ಗಜಗ್ಗಾಟರ ಸಂದರ್ಭ ಯಾವುದೇ ಕ್ರೀಡಾಪಟುಗಳಿಗೂ ಕಿಂಚಿತ್ತೂ ತೊಂದರೆಯಾಗದೆ ಕೇರ್ ಬಲಿಪ ನಮ್ಮೆ ಯಶಸ್ವಿಯಾಗಲೆಂದು ಪ್ರಾರ್ಥಿಸಿದರು. ಆರಂಭದಲ್ಲಿ ಚೆಟ್ಟಂಗಡ ಕುಟುಂಬದ ಗುರುಕಾರೋಣರ ಸನ್ನಿಧಿಯಾದ ಕೈಮಡದಲ್ಲಿ ನೂತನವಾಗಿ ತಯಾರಿಸಿದ ಹಗ್ಗಗಳನ್ನಿಟ್ಟು ಒಕ್ಕಣೆ ಕಟ್ಟಿ ಒಗ್ಗಟ್ಟಿನಿಂದ ಅತ್ಯುತ್ತಮವಾಗಿ ಕೇರ್ ಬಲಿಪ ನಮ್ಮೆ ನಡೆಸಲು ಕುಟುಂಬ ಸದಸ್ಯರಿಗೆ ಶಕ್ತಿ ಹಾಗೂ ಸೌಕರ್ಯ ನೀಡುವಂತೆ ಚೆಟ್ಟಂಗಡ ಕುಟುಂಬದ ಗುರುಕಾರೋಣರನ್ನು ಬೇಡಿಕೊಂಡು…
ಮಡಿಕೇರಿ ಮಾ.21 : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ಪ್ರಜಾವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಾದ ಮೋಹನ್ ರಾಜ್ ಮತ್ತು ಸಂಜನಾ ಭಾಗವಹಿಸಿ ಪ್ರಶ್ನೆಗಳನ್ನು ಕೇಳಿದರು.
ಮಡಿಕೇರಿ ಮಾ.21 : ಈ ಬಾರಿ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ ರೈತ ಸಂಘದ ಅಂಗ ಪಕ್ಷವಾದ ಸರ್ವೋದಯ ಕರ್ನಾಟಕ ಪಕ್ಷದಿಂದ ಕಾಡ್ಯಮಾಡ ಮನು ಸೋಮಯ್ಯ ಸ್ಪರ್ಧಿಸುವುದು ಖಚಿತವಾಗಿದ್ದು, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ರೈತ ಸಂಘದ ಪ್ರಮುಖರು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜೈ ಬೋಪಯ್ಯ, ರಾಷ್ಟ್ರೀಯ ಪಕ್ಷಗಳು ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಸ್ಪರ್ಧೆಯಿಂದ ಹಿಂದೆ ಸರಿಯುತ್ತಾರೆ ಎಂದು ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಮನು ಸೋಮಯ್ಯ ಅವರು ಸರ್ವೋದಯ ಕರ್ನಾಟಕ ಪಕ್ಷದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಆದರೆ ರಾಷ್ಟ್ರೀಯ ಪಕ್ಷಗಳು ಮನು ಸೋಮಯ್ಯ ಅವರ ವ್ಯಕ್ತಿತ್ವ ಮತ್ತು ಅಪಾರ ಜನ ಬೆಂಬಲವನ್ನು ಗಮನಿಸಿ ಇಲ್ಲ ಸಲ್ಲದ ಅಪಪ್ರಚಾರ ನಡೆಸುತ್ತಿದ್ದಾರೆ. ರೈತ ಸಂಘ ಬೆಳೆಗಾರರು, ಕಾರ್ಮಿಕರು, ದಲಿತರ ಪರವಾಗಿ ಜಿಲ್ಲೆಯಲ್ಲಿ ಹಲವಾರು ಹೋರಾಟ ಮಾಡಿದ್ದು, ಜನಪರ ಕಾರ್ಯಕ್ರಮಗಳನ್ನು ನಡೆಸಿದೆ. ಈ ಎಲ್ಲಾ ವಿಚಾರಗಳು…
ಮಡಿಕೇರಿ ಮಾ.21 : ಮುಂದಿನ ಸಾಲಿಗೆ ಒಟ್ಟು 73,13,48,792 ರೂಪಾಯಿ ಗಾತ್ರದ ಆಯವ್ಯಯವನ್ನು ನಗರಸಭೆ ಅಧ್ಯಕ್ಷತೆ ನೆರವಂಡ ಅನಿತಾ ಪೂವಯ್ಯ ಮಂಡಿಸಿ ಅನುಮೋದನೆ ಪಡೆದುಕೊಂಡರು. ನಗರಸಭೆ ಸಭಾಂಗಣದಲ್ಲಿ ನಡೆದ ಆಯವ್ಯಯ ಅಂದಾಜುಪಟ್ಟಿಯನ್ನು ಅಧ್ಯಕ್ಷೆ ಸಭೆಯ ಮುಂದಿಟ್ಟು ಅಭಿವೃದ್ಧಿ ಕಾರ್ಯದ ಬಗ್ಗೆ ವಿವರಿಸಿದರು. 2023-24ನೇ ಸಾಲಿನಲ್ಲಿ ಆರಂಭ ಶಿಲ್ಕು 12,09,89,630 ರೂಪಾಯಿ ಹೊಂದಿದ್ದು, ರೂ.61,03,59,162 ಸ್ವೀಕೃತಿಯೊಂದಿಗೆ ರೂ.73,13,48,792 ನಿರೀಕ್ಷಿತ ಆಯವ್ಯಯವನ್ನು ಸಿದ್ಧಪಡಿಸಲಾಗಿದೆ. ಈ ಪೈಕಿ ರೂ.66,88,08,000 ವೆಚ್ಚವಾಗಲಿದ್ದು, 6,25,40,792 ರೂಪಾಯಿ ಉಳಿಕೆಯಾಗಲಿದೆ ಎಂದು ಮಾಹಿತಿ ಒದಗಿಸಿದರು. ನಗರಸಭೆಯ ಸ್ವಂತ ಮೂಲಗಳಿಂದ ಬರುವ ನಿರೀಕ್ಷಿತ ಆದಾಯದ ಬಗ್ಗೆ ವಿವರಿಸಿದ ಅನಿತಾ ಪೂವಯ್ಯ, ಆಸ್ತಿ ತೆರಿಗೆ, ದಂಡಗಳಿಂದ ರೂ.3.85 ಕೋಟಿ, ನೀರಿನ ಶುಲ್ಕ ಠೇವಣಿಯಿಂದ ರೂ.96.50 ಲಕ್ಷ ಮಳಿಗೆಗಳ ಬಾಡಿಗೆಯಿಂದ ರೂ.1.25 ಕೋಟಿ, ರಾಜಾಸೀಟ್ ಹಾಗೂ ಬಸ್ ನಿಲ್ದಾಣದಲ್ಲಿ ವಾಹನ ನಿಲುಗಡೆಗಳ ಹಾರಾಜಿನಿಂದ ರೂ.50 ಲಕ್ಷ, ಉದ್ದಿಮೆ ಸೇರಿದಂತೆ ಇತರ ಪರವಾನಗಿಯಿಂದ ರೂ.81 ಲಕ್ಷ, ಕಟ್ಟಡ ಪರವಾಗಿ, ಅಭಿವೃದ್ಧಿ ಶುಲ್ಕದಿಂದ ರೂ.50 ಲಕ್ಷ, ವಾಹನ ನಿಲುಗಡೆ…
ಮಡಿಕೇರಿ ಮಾ.21 : ಬರಹಗಾರ, ನಟ, ನಿರ್ದೇಶಕ, ನಿರ್ಮಾಪಕ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಬರೆದಿರುವ ಕೊಡವ ಮಕ್ಕಡ ಕೂಟದ 63ನೇ ಪುಸ್ತಕ “ಹೊಂಬೆಳಕು” ಇಂದು ಬಿಡುಗಡೆಗೊಂಡಿತು. ನಗರದ ಪತ್ರಿಕಾಭವನದಲ್ಲಿ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಹಿರಿಯ ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ, ಸಾಮಾಜಿಕ ಕಳಕಳಿಯ ಪುಸ್ತಕ ಇದಾಗಿದೆ ಎಂದರು. ಮಕ್ಕಳಿಲ್ಲದ ಮನಸ್ಸುಗಳ ತುಡಿತ, ದತ್ತು ಶಿಶು ಸ್ವೀಕಾರದ ಸಾಮಾಜಿಕ ಜಾಗೃತಿ, ಜಾತಿಯನ್ನು ಮೀರಿದ ಮಾನವೀಯತೆ, ಪ್ರೀತಿ, ಸೌಹಾರ್ದತೆ, ಕುತೂಹಲ ಸೇರಿದಂತೆ ಅನೇಕ ಭಾವನಾತ್ಮಕ ವಿಚಾರಧಾರೆಗಳಿಗೆ ಒತ್ತು ನೀಡಿ ಕಥೆಯನ್ನು ಬರೆಯಲಾಗಿದೆ. ಇದು ಪ್ರಗತಿಪರ ಚಿಂತನೆಯ ಪುಸ್ತಕವಾಗಿದ್ದು, ಕೊಡವ ಸಾಹಿತ್ಯ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. “ಹೊಂಬೆಳಕು” ಪುಸ್ತಕ ರಚನೆಕಾರ ಚಿತ್ರ ನಿರ್ದೇಶಕ, ನಟ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಮಾತನಾಡಿ, ನಾನು ಸ್ವತ: ಕಂಡ ಕೆಲವು ಘಟನೆಗಳನ್ನು ಪುಸ್ತಕದ ರೂಪದಲ್ಲಿ ಹೊರತಂದಿದ್ದೇನೆ. ಮೊಬೈಲ್ ಪ್ರಪಂಚದಲ್ಲಿ ಕಾದಂಬರಿಗಳು ಬಾಂಧವ್ಯ ವೃದ್ಧಿಸುವ ಕೆಲಸ ಮಾಡುತ್ತಿದ್ದು, ಸಾಹಿತ್ಯದ ಬಗ್ಗೆ ಅಭಿರುಚಿ ಇರುವವರು ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವಂತಾಗಬೇಕು…
ವಿರಾಜಪೇಟೆ ಮಾ.21 : ತಾಲ್ಲೂಕು ಬಂಟರ ಸಂಘದ ಅಧ್ಯಕ್ಷ ಬಿ.ಎಂ.ದುಶ್ಯಂತ್ ರೈ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಬಂಟರ ಸಂಘದ ಮಹಾಸಭೆಯು ಮಾ. 26 ರಂದು ಪಟ್ಟಣದ ಗೋಣಿಕೊಪ್ಪಲು ರಸ್ತೆಯಲ್ಲಿನ ಮಂಜುನಾಥ ಹೊಟೇಲ್ನಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯಕಾರಿ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ. ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಮಹಾಸಭೆಯಲ್ಲಿ ಬಂಟರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಡಿ.ಜಗದೀಶ್ ರೈ ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಮುಂದಿನ ಸಾಲಿನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕಿನ ಸಮುದಾಯ ಬಾಂಧವರು ಸಭೆಗೆ ಆಗಮಿಸಿ ಸಲಹೆ ಸೂಚನೆಗಳನ್ನು ನೀಡುವ ಮೂಲಕ ಸಭೆಯನ್ನು ಯಶಸ್ವಿಗೊಳಿಸುವಂತೆ ಸಂಘದ ಪ್ರಕಟಣೆಯಲ್ಲಿ ಕೋರಲಾಗಿದೆ.
ವಿರಾಜಪೇಟೆ ಮಾ.21 : 5 ಮತ್ತು 8ನೇ ತರಗತಿಯ ಮೌಲ್ಯಾಂಕನದಲ್ಲಿ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವುದಿಲ್ಲ, ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ, ವಿರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 5 ಮತ್ತು 8ನೇ ತರಗತಿಯ ಮೌಲ್ಯಾಂಕನವು ವಾರ್ಷಿಕ ಪರೀಕ್ಷೆಯಾಗಿರುವುದಿಲ್ಲ. ಇದು ಕೇವಲ ಮೌಲ್ಯಾಂಕನವಾಗಿರುತ್ತದೆ. ಈ ಮೌಲ್ಯಾಂಕನದ ಮೂಲಕ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ, ಕಲಿಕಾ ನ್ಯೂನ್ಯತೆ, ಕಲಿಕಾ ಪ್ರಗತಿಗಳನ್ನು ತಿಳಿದುಕೊಂಡು ಮುಂದಿನ ಶೈಕ್ಷಣಿಕ ವರ್ಷಕ್ಕೆ ಕಲಿಕಾ ಕೊರತೆಯನ್ನು ನೀಗಿಸಲು ಶೈಕ್ಷಣಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು ಇದರ ಉದ್ದೇಶವಾಗಿದೆ ಎಂಬುದನ್ನು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತಿಳಿಸಲಾಗಿದೆ. ಈ ಮೌಲ್ಯಾಂಕನದ ಫಲಿತಾಂಶವನ್ನು ಸಂಬಂಧಿಸಿದ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಲಾಗುವುದು. ಆ ಮೂಲಕ ಫಲಿತಾಂಶದ ಗೌಪ್ಯತೆಯನ್ನು ಕಾಪಾಡಲಾಗುವುದು. ಪಠ್ಯಪುಸ್ತಕವನ್ನಾಧರಿಸಿ ಮೌಲ್ಯಾಂಕನಕ್ಕೆ ಪ್ರಶ್ನೆಗಳನ್ನು ಸಿದ್ಧಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಂಟಿಕೊಪ್ಪ,ಮಾ.21: ಕೆದಕಲ್ ಗ್ರಾಮ ಪಂಚಾಯಿತಿಯ ರಾಷ್ಟ್ರೀಯ ಹೆದ್ದಾರಿ 275ರ ರಸ್ತೆ ಬದಿಯಲ್ಲಿ ಪ್ರವಾಸಿಗರು ಹಾಗೂ ಕೆಲವು ಗ್ರಾಮಸ್ಥರು ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯಗಳನ್ನು ಸುರಿಯುತ್ತಿದ್ದು, ಅಶುಚಿತ್ವದ ವಾತಾವರಣ ಸೃಷ್ಟಿಯಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ವಚ್ಚ ಭಾರತ ಯೋಜನೆಗೆ ಕೇಂದ್ರ ಸರಕಾರ ಗ್ರಾ.ಪಂ.ಗೆ ಅನುದಾನ ಬಿಡುಗಡೆಗೊಳಿಸುತ್ತಿದೆ. ಆದರೆ ಗ್ರಾ.ಪಂ. ನಿರ್ಲಕ್ಷ್ಯದಿಂದ ರಾಶಿಗಟ್ಟಲೆ ತ್ಯಾಜ್ಯವನ್ನು ರಸ್ತೆ ಬದಿಯಲ್ಲಿ ತಂದು ಹಾಕಲಾಗುತ್ತಿದೆ. ಗ್ರಾ.ಪಂ ದಿವ್ಯ ಮೌನಕ್ಕೆ ಶರಣಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ವಚ್ಛತೆ ಕಾಪಾಡಲು ಪ್ರತಿಯೊಂದು ಗ್ರಾ.ಪಂ ಗೂ ಕಸ ವಿಲೇವಾರಿಗಾಗಿ ಗೂಡ್ಸ್ ವಾಹನವನ್ನು ನೀಡಲಾಗಿದೆ. ವಾಹನಗಳ ಮೂಲಕ ಕಸಗಳನ್ನು ವಿಲೇವಾರಿಗೊಳಿಸದೆ, ತಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂಬಂತೆ ಗ್ರಾ.ಪಂ ವರ್ತಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಕ್ಷಣ ರಸ್ತೆ ಬದಿ ಕಸ ಹಾಕದಂತೆ ಸೂಚನಾ ಫಲಕಗಳನ್ನು ಅಳವಡಿಸಿ ಜಾಗೃತಿ ಮೂಡಿಸಲಿ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.






