ಲೇಖಕ: admin

ನಾಪೋಕ್ಲು ಜ.14 : ರೈತರ ಬೆಳವಣಿಗೆಯಲ್ಲಿ ದವಸ ಭಡಾರಗಳ ಪಾತ್ರ ಮಹತ್ವವಾಗಿದ್ದು, ಅವುಗಳ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಸಹಕಾರಿ ಸಂಘಗಳನ್ನು ಬೆಳೆಸುವಲ್ಲಿ ಅನೇಕ ಹಿರಿಯ ಚೇತನಗಳು ತಮ್ಮದೇ ಆದ ಪಾತ್ರವನ್ನು ವಹಿಸಿದ್ದಾರೆ ಎಂದು ಶಾಸಕ ಕೆ.ಜಿ.ಬೋಪಯ್ಯ ಹೇಳಿದರು. ನಂ. 94ನೇ ನೆಲಜಿ ಸಹಕಾರ ದವಸ ಭಂಡಾರ ನಿಯಮಿತದ ನವೀಕೃತಗೊಂಡ ಕಟ್ಟಡ ಸಂಕೀರ್ಣಗಳ ಹಾಗೂ ಶತಮಾನೋತ್ಸವ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಬೋಪಯ್ಯ, ಜಿಲ್ಲೆಯಲ್ಲಿ 53 ದವಸ ಭಂಡಾರಗಳು ಅಸ್ತಿತ್ವದಲ್ಲಿದೆ. ಸಹಕಾರಿ ಸಂಸ್ಥೆಗಳು ಸ್ವಾಯತ್ತಿಕ ಸಂಸ್ಥೆಗಳಾಗಬೇಕು. ಯಾವುದೇ ರಾಜಕೀಯ ಹಸ್ತಕ್ಷೇಪ ಇರಬಾರದು ಎಂದರು. ಸುಲಭದಲ್ಲಿ ರೈತರಿಗೆ ಸಹಕಾರಿ ಸಂಘಗಳ ಮೂಲಕ ಸಾಲ ಸೌಲಭ್ಯ ಸಿಗುತ್ತಿದ್ದು, ರೈತರ ಬೆಳವಣಿಗೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ತರವಾದುದಾಗಿದೆ. ಇಂತಹ ಸಹಕಾರಿ ಸಂಘಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದು ಎಂದರು. ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಹೊರ ಸಭಾಂಗಣ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ರೈತರ ಅಭಿವೃದ್ಧಿ ಆಗಬೇಕಾದರೆ ಸಹಕಾರಿ ಸಂಘಗಳ ಅಗತ್ಯವಿದೆ. ಗ್ರಾಮೀಣ ರೈತರ…

Read More

ವಿರಾಜಪೇಟೆ ಫೆ.14 : ಗ್ರಾಮೀಣ ಪ್ರದೇಶದ  ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯದ 30 ಸಾವಿರ ಮಹಿಳೆಯರಿಗೆ ಸ್ವ ಉದ್ಯೋಗಕ್ಕಾಗಿ ರೂ,600 ಕೋಟಿ ಸಾಲ ನೀಡಲಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ವಸಂತ ಸಾಲಿಯಾನ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ಮಹಿಳಾ ಜ್ಞಾನ ವಿಕಾಸ ಕೇಂದ್ರಗಳು ಮತ್ತು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿರುವ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ‘ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯಲ್ಲಿ ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದರು. ಈಗಾಗಲೇ ತಂತ್ರಜ್ಞಾನ ಬಹಳಷ್ಟು ಮುಂದುವರಿದಿದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಎಲ್ಲಾ ರಂಗದಲ್ಲಿಯೂ ಮುಂದೆ ಇದ್ದಾರೆ. ಅಗತ್ಯತೆಗಳ ಬಗ್ಗೆ ತಿಳಿದುಕೊಂಡು ಬಹಳಷ್ಟು ಯಶಸ್ವಿಯಾಗಿದ್ದಾರೆ. ಗ್ರಾಮೀಣ ಭಾಗದ ಅಸಕ್ತ ಮಹಿಳೆಯರನ್ನು ಗುರುತಿಸಿ ತರಬೇತಿ ನೀಡಲಾಗುತ್ತಿದೆ. ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಲ ನೀಡುತ್ತಿಲ್ಲ ಬ್ಯಾಂಕ್ ಸಾಲ ನೀಡುತ್ತಿದೆ ಎಂದ ವಸಂತ ಸಾಲಿಯಾನ್ ಅವರು ಯೋಜನೆಯ ಸೌಲಭ್ಯಗಳನ್ನು ಸದಸ್ಯರು ಸರಿಯಾಗಿ…

Read More

ವಿರಾಜಪೇಟೆ ಫೆ.14 : ಕೋಟೆಕೊಪ್ಪ ಗ್ರಾಮದ ಶ್ರೀ ಬೈತೂರೇಶ್ವರ ದೇವಸ್ಥಾನದ ವಾರ್ಷಿಕ ಮಹೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ವಾರ್ಷಿಕೋತ್ಸವದ ಪ್ರಯುಕ್ತ ದೇವರಿಗೆ ವಿವಿಧ ಪೂಜೆ ವಿಧಿ ವಿಧಾನಗಳು ಹಾಗೂ ಮಹಾಪೂಜೆ ನಡೆದು ಭಕ್ತರಿಗೆ ಪ್ರಸಾದ ವಿನಿಯೋಗದ ಬಳಿಕ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ವಿ.ಜಿ.ಮಂಜು, ಕಾರ್ಯದರ್ಶಿ ವಿ.ಆರ್ ಸಂದೀಪ, ನೂತನ ಅಧ್ಯಕ್ಷ ವಿ.ಎಂ. ಶಿವರಾಜ್, ಆಡಳಿತ ಮಂಡಳಿಯ ಸದಸ್ಯರಾದ ವಿ.ಬಿ. ನಾಗೇಶ್, ವಿ.ಕೆ.ಕಿರಣ್, ವಿ.ಎಸ್. ಪ್ರಸನ್ನ, ವಿ.ಪಿ. ಉಮೇಶ್, ವಿ.ಜೆ. ರವಿ, ವಿ.ಎ. ಭರತ್, ವಿ.ಎನ್. ಗೋಪಿ, ವಿ.ಆರ್. ಸುಧಿ ಹಾಗೂ ಗ್ರಾಮದ ಭಕ್ತಾದಿಗಳು ಪೂಜೆಯಲ್ಲಿ ಪಾಲ್ಗೊಂಡಿದ್ದರು.

Read More

ಕುಶಾಲನಗರ, ಫೆ.14 : ಕುಶಾಲನಗರ ಪುರಸಭೆ ವ್ಯಾಪ್ತಿಯ 16 ವಾರ್ಡ್ ಗಳಲ್ಲಿ ನಗರೋತ್ಹಾನ‌ ಯೋಜನೆಯಡಿ ರೂ.5 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಯಿತು. ಕುಶಾಲನಗರ ಪುರಸಭೆ ಅಧ್ಯಕ್ಷ ಬಿ.ಜೈವರ್ಧನ್, ಮುಖ್ಯಾಧಿಕಾರಿ ಶಿವಪ್ಪ‌ನಾಯಕ್, ಸದಸ್ಯರಾದ ಎಂ.ಬಿ.ಸುರೇಶ್, ಕೆ.ಜಿ.ಮನು ಹಾಗೂ ಅಭಿಯಂತರ ರಂಗರಾಮ್ ಅವರುಗಳ ತಂಡ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ  ನಡೆಸಿದರು. ವಿವಿಧ ವಾರ್ಡ್ ಗಳಿಗೆ ಭೇಟಿ ನೀಡಿ ಈಗಾಗಲೆ‌ ಮುಕ್ತಾಯಗೊಂಡಿರುವ ಕಾಂಕ್ರಿಟ್ ರಸ್ತೆ, ಚರಂಡಿ ಕಾಮಗಾರಿ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ವೀಕ್ಷಿಸಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ‌ ಮಾತನಾಡಿದ ಪುರಸಭೆ ಅಧ್ಯಕ್ಷ ಬಿ.ಜೈವರ್ಧನ್, ಶಾಸಕ ಅಪ್ಪಚ್ಚುರಂಜನ್ ಅವರ ಕಾಳಜಿಯಿಂದ ಕುಶಾಲನಗರ ಪಟ್ಟಣದ ವಿವಿಧ ಬಡಾವಣೆಗಳಿಗೆ ಸರಕಾರದಿಂದ ಅನುದಾನ ದೊರಕಿದ್ದು ಶಾಸಕರು ಕಾಮಗಾರಿಗಳಿಗೆ ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿದ್ದರು. ಸರಕಾರದ ಮಾರ್ಗಸೂಚಿಯಂತೆ ಪುರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಆಯಾ ವಾರ್ಡ್ ವ್ಯಾಪ್ತಿಯಲ್ಲಿನ‌ ಕಾಮಗಾರಿಗಳನ್ನು ಆಯಾ ವಾರ್ಡ್ ಸದಸ್ಯರು ಉತ್ತಮ ಗುಣಮಟ್ಟದಲ್ಲಿ ಕೈಗೊಳ್ಳಲಾಗುತ್ತಿದೆ. ಶಾಸಕ ಅಪ್ಪಚ್ಚುರಂಜನ್ ಅವರ ಸೂಚನೆಯಂತೆ ಅತಿ ಶೀಘ್ರದಲ್ಲಿ‌ ಕಾಮಗಾರಿಗಳನ್ನು…

Read More

ಕುಶಾಲನಗರ, ಫೆ. 13 : ಕುಶಾಲನಗರ ತಾಲೂಕಿನ ತೊರೆನೂರು ಗ್ರಾ.ಪಂ  ವ್ಯಾಪ್ತಿಯ ರೇವೇಗೌಡನ ಕೊಪ್ಪಲು ಗ್ರಾಮದ ಐತಿಹಾಸಿಕ ಶ್ರೀ ಶನೇಶ್ಚರ ಸ್ವಾಮಿ ದೇವಾಲಯದ ಆವರಣದಲ್ಲಿ ಮಹಾ ಶಿವರಾತ್ರಿ ಹಬ್ಬದ ಅಂಗವಾಗಿ ಸತ್ಯ ನಾರಾಯಣ ಸ್ವಾಮಿ ಪೂಜೆ ಮತ್ತು ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳಿಗೆ, ಹಾಗೂ ಶ್ರೀ ಡಾ, ಬಾಲಗಂಗಾಧರನಾಥ ಸ್ವಾಮಿಜಿ ಅವರಿಗೆ ನುಡಿ ನಮನ ಕಾರ್ಯಕ್ರಮ ಫೆ. 18 ರಂದು ಶ್ರೀ ಶನೇಶ್ಚರ ದೇವಾಲಯ ಅಭಿವೃದ್ಧಿ ಸಮಿತಿಯ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯ ಸಮಿತಿಯ ಕಾರ್ಯದರ್ಶಿ ಕೆ.ಎಸ್. ಕೃಷ್ಣ ಗೌಡ ತಿಳಿಸಿದ್ದಾರೆ. ಕುಶಾಲನಗರದಲ್ಲಿ  ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು,  18 ರಂದು ಬೆಳಿಗ್ಗೆ ಮಹಾಶಿವರಾತ್ರಿ ಹಬ್ಬದ ಅಂಗವಾಗಿ 8 ಗಂಟೆಗೆ ಗಣಪತಿ ಹೋಮ, ನವಗ್ರಹ ಪೂಜೆ, ವಿವಿಧ ಅಭಿಷೇಕ ಸೇರಿದಂತೆ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ನೆರವೇರಿಸಲ್ಲಿದ್ದಾರೆ. ತೊರೆನೂರು ವಿರಕ್ತ ಮಠದ…

Read More

ಸೋಮವಾರಪೇಟೆ,ಫೆ.13 : ಆಲೇಕಟ್ಟೆ ರಸ್ತೆಯ ಆರ್‍ಎಂಸಿ ಮಾರುಕಟ್ಟೆ ಎದುರು ನೂತನವಾಗಿ ನಿರ್ಮಾಣಗೊಂಡಿರುವ, ಶ್ರೀ ಲಕ್ಷ್ಮೀವೆಂಕಟರಮಣ ದೇವಾಲಯದ ಲೋಕಾರ್ಪಣೆ ಹಾಗೂ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ಜರುಗಿತು. ಗಣಪತಿ ಹೋಮದೊಂದಿಗೆ ಆರಂಭಗೊಂಡ ದೇವಾಲಯ ಲೋಕಾರ್ಪಣೆ ಹಾಗೂ ಶ್ರೀ ದೇವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಪುಣ್ಯಾಹ, ದೇವನಾಂದಿ, ಅಂಕುರಾರ್ಪಣ, ಕಂಕಣ ಬಂಧನ, ಗಣಹೋಮ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಸುದರ್ಶನ ಹೋಮ, ವಾಸ್ತು ಪೂಜೆ, ದಿಗ್ಬಲಿ ಹಾಗೂ ಮಹಾಮಂಗಳಾರತಿ ಸೇರಿದಂತೆ ಇನ್ನಿತರ ಪೂಜಾ ಕೈಂಕರ್ಯಗಳು ನೆರವೇರಿತು. ನಂತರ ಕಲಾನ್ಯಾಸ, ತತ್ವನ್ಯಾಸಾದಿ ಪೂಜೆಗಳು, ಕಲಾತತ್ತ್ವಾದಿವಾಸ ಹೋಮದ ತರುವಾಯ 12 ಗಂಟೆಗೆ ಪೂರ್ಣಾಹುತಿ, ಶ್ರೀ ದೇವರಿಗೆ ಕಳಶಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ ಜರುಗಿತು. ಪ್ರತಿಷ್ಠಾಪನಾ ಮಹೋತ್ಸವದಲ್ಲಿ ದೇವಾಲಯ ಸಮಿತಿ ಅಧ್ಯಕ್ಷರಾದ ಹೆಚ್.ಪಿ.ರಾಮು, ಪ್ರಧಾನ ಕಾರ್ಯದರ್ಶಿ ಸಿ.ಕೆ.ಮೋಹನ್, ಕಾರ್ಯದರ್ಶಿ ಎಂ.ಜಿ. ಪ್ರವೀಣ್ ಕುಮಾರ್, ಖಜಾಂಚಿ ಬಿ.ಹೆಚ್. ಯೋಗೇಶ್, ಪದಾಧಿಕಾರಿಗಳಾದ ಎಂ.ಬಿ.ಉಮೇಶ್, ಬಿ.ಡಿ.ಗೋವಿಂದ ಸೇರಿದಂತೆ ಸಾವಿರಾರು ಭಕ್ತಾದಿಗಳು ಭಾಗವಹಿಸಿದ್ದರು.

Read More

ಮಡಿಕೇರಿ ಫೆ.13 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮಾ.4 ಮತ್ತು 5 ರಂದು ಗೋಣಿಕೊಪ್ಪಲಿನಲ್ಲಿ ನಡೆಯುತ್ತಿರುವ 16ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಹಾಗೂ ಸಾಹಿತ್ಯ ಸಂಶೋಧನಾ ಕ್ಷೇತ್ರದ ತೀತಿರ ರೇಖಾ ವಸಂತ್ ಆಯ್ಕೆಯಾಗಿದ್ದಾರೆ. ಡಾ.ಎಂ.ಬಿ.ರೇಖಾ ಅವರು ಗೋಣಿಕೊಪ್ಪಲಿನ ಪ್ರತಿಷ್ಠಿತ ಕಾವೇರಿ ಕಾಲೇಜಿನಲ್ಲಿ 27 ವರ್ಷಗಳ ಕಾಲ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ಈಗ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಕನ್ನಡ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತಿದ್ದಾರೆ. ಕೊಡವ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ 12 ಸಾಹಿತ್ಯ ಪುಸ್ತಕಗಳನ್ನು 30ಕ್ಕೂ ಹೆಚ್ಚು ಲೇಖನಗಳನ್ನು ಪ್ರಕಟಿಸಿದ್ದಾರೆ. ಅವುಗಳಲ್ಲಿ ಹಲವು ಕೃತಿಗಳು ಪ್ರಶಸ್ತಿಗಳನ್ನು ಪಡೆದಿವೆ. ನಗರದಲ್ಲಿ ನಡೆದ ಕಸಾಪ ಸಭೆಯಲ್ಲಿ ರೇಖಾ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 16 ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ ಮತ್ತು ಹದಿನಾರು ಕವಿಗಳ ಎರಡು ಕವಿಗೋಷ್ಠಿ ನಡೆಸಲು ಸಭೆ ನಿರ್ಧರಿಸಿತು. ಜಿಲ್ಲೆಯಲ್ಲಿ ಸಾಧನೆ…

Read More

ಮಡಿಕೇರಿ ಫೆ.13 : ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಾಲು ಸಹಿತ ವಶಕ್ಕೆ ಪಡೆಯುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಹುದಿಕೇರಿ ನಲ್ವತ್ತು ಏಕ್ರೆ ಜಂಕ್ಷನ್ ನಲ್ಲಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ ಕೊಡಗು ಡಿಸಿಆರ್ ಬಿ ಅಪರಾಧ ಸಿಬ್ಬಂದಿ ಹಾಗೂ ಸಿದ್ದಾಪುರ ಪೊಲೀಸರು ದಾಳಿ ನಡೆಸಿದರು. ನೆಲ್ಲಿಹುದಿಕೇರಿಯ ಕುಂಬಾರಗುಂಡಿ ನಿವಾಸಿ ಎ.ಅಸೀಬ್ (24) ನಲ್ವತ್ತು ಏಕ್ರೆಯ ಮೋಹನ್ ಎ.ಬಿ (27) ಹಾಗೂ ನಾಪೋಕ್ಲು ಎಮ್ಮೆಮಾಡು ಗ್ರಾಮದ ಮೊಹಮ್ಮದ್ ಆಸೀಪ್ (27) ನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆಗೊಳಪಡಿಸಿದ್ದಾರೆ. ಆರೋಪಿಗಳ ಬಳಿ ಇದ್ದ 1.197 ಕೆ.ಜಿ.ಗಾಂಜಾ, 6,270 ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ ಅಂದಾಜು 1.90 ಲಕ್ಷ ರೂ. ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಅಧೀಕ್ಷಕ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಎಸ್.ಸುಂದರರಾಜ್ ಹಾಗೂ ಮಡಿಕೇರಿ…

Read More

ಮಡಿಕೇರಿ ಫೆ.13 : ಚಾಲಕನ ನಿಯಂತ್ರಣ ತಪ್ಪಿದ ಆಟೋರಿಕ್ಷಾ ಮಗುಚಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರ ಸಮೀಪದ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ. ಕೆ.ಆರ್.ನಗರ ತಾಲ್ಲೂಕಿನ ಕೊರಟಿಕೆರೆ ಗ್ರಾಮದ ನಿವಾಸಿ ಪಂಕಜಮ್ಮ(55) ಮೃತ ಪಟ್ಟ ಮಹಿಳೆ. ಸಹೋದರಿಯರಾದ ಕೂಡಿಗೆಯ ಲೀಲಾವತಿ ಹಾಗೂ ವಿಜಯಲಕ್ಷ್ಮಿ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕುಶಾಲನಗರ ಸಂಚಾರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಟೋ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

Read More

ಮಡಿಕೇರಿ ಫೆ.13 : ಲಾರಿ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗೋಣಿಕೊಪ್ಪದ ಕೈಕೇರಿ ಬಳಿ ನಡೆದಿದೆ. ಕಾರು ಚಾಲಕ ಬಿಟ್ಟಂಗಾಲದ ನಿವಾಸಿ ನಂದೇಟಿರ ಸದನ್ ಚಂಗಪ್ಪ(49) ಸಾವನ್ನಪ್ಪಿರುವ ದುರ್ದೈವಿ. ಕಾರಿನಲ್ಲಿದ್ದ ಇತರ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳಿಗೆ ಗೋಣಿಕೊಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗೋಣಿಕೊಪ್ಪದಿಂದ ವಿರಾಜಪೇಟೆಗೆ ಬರುತ್ತಿದ್ದ ಕಾರು ವಿರಾಜಪೇಟೆಯಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More