ಮಡಿಕೇರಿ ಫೆ. 13 : ಮಡಿಕೇರಿಯಲ್ಲಿನ ಭಾರತೀಯ ಜೀವವಿಮಾ ಶಾಖೆಯಲ್ಲಿ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿಗಾಗಿ ನೂತನವಾಗಿ ಅಖಿಲ ಭಾರತ ಜೀವವಿಮಾ ಪ್ರತಿನಿಧಿಗಳ ಸಂಘವನ್ನು ರಚಿಸಲಾಯಿತು. ಸಂಘದ ಅಧ್ಯಕ್ಷರಾಗಿ ಎಂ.ಕೆ.ನಾಚಪ್ಪ, ಉಪಾಧ್ಯಕ್ಷರಾಗಿ ಗೀತಾ ಗಿರೀಶ್, ಕಾಯಾ೯ಧ್ಯಕ್ಷರಾಗಿ ಮುರಳೀಧರ್, ಪ್ರಧಾನ ಕಾಯ೯ದಶಿ೯ಯಾಗಿ ಆನಂದ್ ಎಸ್.ಜಾಧವ್, ಖಚಾಂಜಿಯಾಗಿ ಅಯಿಷಾ ಹಮೀದ್, ಸಹಕಾಯ೯ದಶಿ೯ಯಾಗಿ ಬಿ.ಕೆ. ಪುಪ್ಪವೇಣಿ ಮತ್ತು ಮುಖ್ಯ ಗೌರವ ಸಲಹೆಗಾರರಾಗಿ ಕೆ.ಎ.ತಿಮ್ಮಯ್ಯ ಅವಿರೋಧವಾಗಿ ಆಯ್ಕೆಯಾದರು. ಇವರೊಂದಿಗೆ 31 ಪ್ರತಿನಿಧಿಗಳು ಸದಸ್ಯರಾಗಿ ಸೇಪ೯ಡೆಯಾಗಿದ್ದಾರೆ. ಈ ಸಂಘಟನೆ ವತಿಯಿಂದ ಜೀವವಿಮಾ ನಿಗಮದ ಹಿರಿಯ ಪ್ರತಿನಿಧಿಯಾಗಿದ್ದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಸಂಘದ ಪರವಾಗಿ ಸನ್ಮಾನಿಸಲಾಯಿತು.
ಲೇಖಕ: admin
ಸೋಮವಾರಪೇಟೆ ಫೆ.13 : ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆಯಡಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಪ.ಪಂ ಆಡಳಿತ ಮಂಡಳಿಯೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಜಿಲ್ಲಾಧಿಕಾರಿಗಳಿಗೆ ದೂರು ನೀಡಲು ನಿರ್ಧರಿಸಿದೆ. ನಗರೋತ್ಥಾನ ಯೋಜನೆಯಡಿ ಪ.ಪಂ ಗೆ ರೂ.2.26 ಕೋಟಿ ಅನುದಾನ ಬಿಡುಗಡೆಯಾಗಿತ್ತು. ಪಟ್ಟಣದ ವಿವಿಧ ರಸ್ತೆಗಳ ಕಾಂಕ್ರಿಟೀಕರಣ, ಡಾಂಬರೀಕರಣ, ಚರಂಡಿ, ಮೋರಿ ನಿರ್ಮಾಣ ನಡೆಯುತ್ತಿದೆ. ಪ್ರಮುಖವಾಗಿ ಚರಂಡಿ ನಿರ್ಮಾಣದಲ್ಲಿ ತೀರಾ ಕಳಪೆ ಕಾಮಗಾರಿ ನಡೆದಿದೆ. ನೀರಿನ ರಭಸಕ್ಕೆ ಈ ಚರಂಡಿ ಕೊಚ್ಚಿ ಹೋಗುವುದು ಖಚಿತ. ಶಾಸಕರು ಭೂಮಿಪೂಜೆ ನೆರವೇರಿಸಿ 2 ತಿಂಗಳಾದರೂ ಕಾಮಗಾರಿ ಚುರುಕುಗೊಳಿಸುವ ಬಗ್ಗೆ ಗುತ್ತಿಗೆದಾರ ಆಸಕ್ತಿ ತೋರುತ್ತಿಲ್ಲ. ವಲ್ಲಬಾಯಿ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಕಾಮಗಾರಿಯಲ್ಲಿ 2 ಅಡಿ ಆಳದ ಚರಂಡಿ ನಿರ್ಮಾಣಕ್ಕೆ ಒಂದೂವರೆ ಅಡಿಯಷ್ಟು, ಮೊದಲು 4 ಇಂಚು ಬೆಡ್ಡಿಂಗ್ ಹಾಕುವಲ್ಲಿ ಕೇವಲ ಒಂದೂವರೆ ಇಂಚಿನಷ್ಟು, 7 ಇಂಚಿಗೆ ಬದಲಾಗಿ 10 ಇಂಚಿಗೆ ಒಂದು ಕಬ್ಬಣದ ಸರಳು ಹಾಕುವ ಮೂಲಕ ಕಳಪೆ ಕಾಮಗಾರಿ…
ಸೋಮವಾರಪೇಟೆ ಫೆ.13 : ಬಿ.ಟಿ.ಸಿ.ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉಪನ್ಯಾಸಕರುಗಳನ್ನು ನೇಮಕ ಮಾಡಲಾಗಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ತಿಳಿಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವ ಸಲುವಾಗಿ ಕಾಲೇಜಿನಲ್ಲಿ ದೊರಕುವ ಸೌಲಭ್ಯಗಳ ಕರಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಪ್ರಸ್ತುತ ವಾಣಿಜ್ಯ ವಿಭಾಗಕ್ಕೆ ವಿವಿಧ ಭಾಗಗಳಿಂದ ಮೂರುಮಂದಿ ಖಾಯಂ ಸಹ ಪ್ರಾಧ್ಯಾಪಕರನ್ನು ನೇಮಿಸಲಾಗಿದೆ. ಕೌನ್ಸಿಲಿಂಗ್ ಮೂಲಕ ಎಳುಮಂದಿ ಉಪನ್ಯಾಸಕರನ್ನು, ಕ್ರೀಡೆಗೆ ಆದ್ಯತೆ ನೀಡಬೇಕೆಂಬ ಉದ್ದೇಶದಿಂದ ಒಬ್ಬರು ದೈಹಿಕ ನಿರ್ದೇಶಕರನ್ನು ನೇಮಿಸಲಾಗಿದೆ. ಆ ಮೂಲಕ ಕಾಲೇಜಿನಲ್ಲಿ ಉತ್ತಮ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ ಎಂದರು. ಮುಂದಿನ ಶೈಕ್ಷಣಿಕ ವರ್ಷದಿಂದ ಇಲ್ಲಿನ ವಿದ್ಯಾರ್ಥಿಗಳು ಬೇರೆಡೆಗೆ ತೆರಳದೆ ಇಲ್ಲಿಯೇ ಶಿಕ್ಷಣ ಪಡೆಯಿರಿ ಎಂದರು. ತಾಲೂಕಿನ ವಿವಿಧ ಪದವಿಪೂರ್ವ ಕಾಲೇಜುಗಳಿಗೆ ತೆರಳಿ ಅಲ್ಲಿನ ವಿದ್ಯಾರ್ಥಿಗಳಿಗೆ ಈ ಕಾಲೇಜಿನ ಬಗ್ಗೆ ಅರಿವು ಮೂಡಿಸುವ ಕಾರ್ಯ ಮಾಡಲಾಗುವುದು ಮಾದಲಾಗುವುದು ಎಂದು ತಿಳಿಸಿದರು. ಈ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿ…
ಮಡಿಕೇರಿ ಫೆ.13 : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ಮಹಾಗಣಪತಿ ಹಾಗೂ ನಾಗ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿಗಳ ನೇತೃತ್ವದಲ್ಲಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ಜರುಗಿದವು. ಫೆ.11 ರಂದು ಸಂಜೆ ಹಸಿರು ಹೊರೆಕಾಣಿಕೆ, ಉಗ್ರಾಣ ಪೂಜೆ, ದೀಪಾರಾಧನೆ, ಮಹಾಪೂಜೆ ಮತ್ತು ಅನ್ನದಾನ ನೆರವೇರಿತು. ನಂತರ ಮಡಿಕೇರಿಯ ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ಪುಣ್ಯಾಹವಾಚನ, ಗಣಪತಿ ಹೋಮ, ಕಲಶ ಪೂಜೆ, ನಾಗತಂಬಿಲ, ಗುಳಿಗ, ಚಾಮುಂಡಿ ತಂಬಿಲ, ಮಹಾಪೂಜೆ ಹಾಗೂ ಅನ್ನದಾನ ನಡೆಯಿತು. ಸಂಜೆ ರಂಗಪೂಜೆ, ದೇವರ ಬಲಿ ಉತ್ಸವ, ಮಹಾದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮಹಾಪೂಜೆ ಹಾಗೂ ಅನ್ನದಾನ ನೆರವೇರಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ನಾಪೋಕ್ಲು ಫೆ.13 : ಕರ್ನಾಟಕ ಮುಸ್ಲಿಂ ಜಮಾಅತ್ ನಾಪೋಕ್ಲು ಶಾಖೆಯ ನೂತನ ಅಧ್ಯಕ್ಷರಾಗಿ ಬೇಕಲ್ ಅಬ್ದುಲ್ಲಾ ಹಾಜಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಪೋಕ್ಲು ಪಟ್ಟಣದಲ್ಲಿರುವ ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಕಛೇರಿಯಲ್ಲಿ ನಡೆದ ಕರ್ನಾಟಕ ಮುಸ್ಲಿಂ ಜಮಾಅತ್ ನಾಪೋಕ್ಲು ಶಾಖೆಯ ವಾರ್ಷಿಕ ಮಹಾಸಭೆಯಲ್ಲಿ ಇವರನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಟಿ.ಎ ಮಹಮ್ಮದ್ ಹನೀಫ್,ಉಪಾಧ್ಯಕ್ಷರಾಗಿ ವಕೀಲರಾದ ರಿಯಾಝ್, ಮಹಮ್ಮದ್ ಹಾಜಿ, ಖಜಂಚಿಯಾಗಿ ಇಬ್ರಾಹಿಂ ಮುಸ್ಲಿಯರ್, ಸಮಿತಿ ಸದಸ್ಯರಾಗಿ ಪಿ.ಎಂ.ಅಬ್ದುಲ್ ಅಝೀಝ್ , ಎಂ.ಎ.ಮನ್ಸೂರ್ ಆಲಿ, ಇಬ್ರಾಹಿಂ ಹಾಜಿ, ಪಿ.ಎಂ.ಬದ್ರುದ್ದೀನ್ , ಸಿ.ಎಚ್.ಅಹಮದ್ , ಕೆ.ಎ.ಖಾದರ್ , ಹಂಝ ಕೆ.ಎ, ಅಬ್ದುಲ್ ರಹ್ಮಾನ್, ಹಂಝ ಟಿ.ಎ, ಫಯಾಜ್, ಇಬ್ರಾಹಿಂ,ಹಸೈನಾರ್ ಹಾಜಿ ಆಯ್ಕೆಯಾದರು. ನೂತನ ಪದಾಧಿಕಾರಿಗಳಿಗೆ ಹಿಂದಿನ ಅಧ್ಯಕ್ಷರಾದ ಅಬ್ದುಲ್ ಹಝೀಝ್ ಹಾಗೂ ಆಡಳಿತ ಮಂಡಳಿಯವರು ಅಧಿಕಾರವನ್ನು ಹಸ್ತಾಂತರಿಸಿದರು. ಈ ಸಂದರ್ಭ ಕೆಸಿಎಫ್ ಅಧ್ಯಕ್ಷರಾದ ಉಸ್ಮಾನ್ ಹಾಜಿ, ಸಾದಿಕ್ ನಿಜಾಮಿ,ಮಾಜಿ ಕಾರ್ಯದರ್ಶಿ ಶಾಹಿದ್ ಹಿಮಮಿ, ಅರಫಾತ್ ಪಿ.ಎಂ, ರಹೀಮ್ ಮಾಸ್ಟರ್, ಯೂನಸ್ ಸೇರಿದಂತೆ ಮತ್ತಿತರ ಪ್ರಮುಖರು ಹಾಜರಿದ್ದರು. ವರದಿ…
ವಿರಾಜಪೇಟೆ ಫೆ.13 : ವಿರಾಜಪೇಟೆ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಮೆಗಾ ಲೋಕ ಅದಾಲತ್ನಲ್ಲಿ ಒಟ್ಟು 1699 ಪ್ರಕರಣಗಳನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಅದರಲ್ಲಿ 454 ರಾಜಿಯಾದ ಪ್ರಕರಣಗಳಲ್ಲಿ 159 ಚೆಕ್ ಬೌನ್ಸ್ ಪ್ರಕರಣ ಹಾಗೂ ಸಿವಿಲ್ ದಾವೆಗಳು 42 ಪ್ರಕರಣ ಸೇರಿದಂತೆ ಉಳಿದ ಪ್ರಕರಣಗಳು ಇತ್ಯರ್ಥ ಗೊಂಡಿರುತ್ತವೆ. ರಾಜಿಯಾದ ಪ್ರಕರಣಗಳಲ್ಲಿ ಇತ್ಯರ್ಥವಾದ ಹಣದ ಮೊತ್ತ 3,46,43697 ರೂ, ಆಗಿರುತ್ತದೆ. ಲೋಕ ಅದಾಲತ್ನಲ್ಲಿ ಎರಡನೆ ಅಪರ ಜಿಲ್ಲಾ ಸತ್ರ ನ್ಯಾಯಾಧಿಶರಾದ ಎಸ್.ಸುಜಾತ, ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಜಿ.ಲೋಕೇಶ್, ಪ್ರಧಾನ ಸಿವಿಲ್ ನ್ಯಾಯಾಧೀಶ ಸಂತೋಷ್ ಕೊಠಾರಿ, ಅಪರ ಸಿವಿಲ್ ನ್ಯಾಯಾಧೀಶರಾದ ಸಿ.ಮಹಾಲಕ್ಷ್ಮಿ ಹಾಗೂ ಕೆ.ಎಸ್.ಆಶಾ ಮತ್ತು ವಕೀಲರ ಸಂಘದ ಅಧ್ಯಕ್ಷ ಐ.ಆರ್. ಪ್ರಮೋಧ್ ಉಪಸ್ಥಿತರಿದ್ದು, ಸಂಧಾನಕಾರರಾಗಿ ವಕೀಲರಾದ ಸಿ. ದರ್ಶನ್, ಎಂ.ಕೆ. ಧನ್ಯ, ಬಿ.ಎನ್. ಜಗದೀಶ್, ಬಿ.ಬಿ. ಮಾದಪ್ಪ, ಎಂ.ಹೆಚ್. ನವಲಗುಂದ ಇತರರು ಭಾಗವಹಿಸಿದ್ದರು.
ವಿರಾಜಪೇಟೆ ಫೆ.13 : ಜನರಿಗೆ ಗುಣಮಟ್ಟದ ಚಿಕಿತ್ಸೆ ನೀಡುವುದು ಸೇರಿದಂತೆ ಕೇವಲ ರೋಗಿಗಳನ್ನಷ್ಟೇ ಅಲ್ಲ ಚಿಕಿತ್ಸಾಲಯಗಳು ಕೂಡ ಜೀವಂತವಾಗಿರಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ಅಭಿಪ್ರಾಯಪಟ್ಟರು. ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಕೆ.ಜಿ. ಬೋಪಯ್ಯ ಅವರು ವೈದ್ಯರನ್ನು ದೇವರಿಗೆ ಹೋಲಿಕೆ ಮಾಡಲಾಗುತ್ತದೆ. ಸರ್ಕಾರಿ ಆಸ್ಪತ್ರೆಗಳಿಗೆ ಬರುವಂತಹ ಬಹುತೇಕರು ಬಡಕುಟುಂಬದ ಹಿನ್ನೆಲೆಯುಳ್ಳವರಾಗಿದ್ದು, ಅಂತಹವರಿಗೆ ಸೂಕ್ತ ಚಿಕಿತ್ಸೆ ನೀಡುವ ವಿಷಯದಲ್ಲಿ ಧನಾತ್ಮಕ ಚಿಂತನೆಗಳು ವೈದ್ಯರಿಂದಾಗಬೇಕಾಗಿದೆ, ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಸದ್ಯಕ್ಕೆ ಎಲ್ಲಾ ಸೌಲಭ್ಯಗಳು ಲಭ್ಯವಿದ್ದು, ಶುಚಿತ್ವ ಕಾಪಾಡಿಕೊಳ್ಳಲಾಗಿದೆ ಎಂದರು. ಸರ್ಕಾರಿ ಆಸ್ಪತ್ರೆಗಳಿಗೆ ಬರುವಂತಹ ಬಹುತೇಕ ರೋಗಿಗಳು ಹಣಕಾಸಿನ ತೊಂದರೆಯನ್ನು ಅನುಭವಿಸುವಂತಹವರೇ. ಹೆಚ್ಚು ಆರ್ಥಿಕ ತೊಂದರೆಯಿಂದ ಬಳಲುವವರಿಗಾಗಿಯೇ ಸರ್ಕಾರಿ ಆಸ್ಪತ್ರೆಗಳು ಎನ್ನುವಂತಾಗಿದೆ. ಸರ್ಕಾರವೂ ಕೂಡ ಸಕಲ ರೀತಿಯ ಸೌಲಭ್ಯಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಒದಗಿಸಲಾಗುತ್ತಿದ್ದು, ಅವುಗಳನ್ನು ರೋಗಿಗಳಿಗೆ ತಲುಪಿಸುವ ಕಾರ್ಯವನ್ನು ವೈದ್ಯಕೀಯ ಸಿಬ್ಬಂದಿಗಳು ಮಾಡುತ್ತಿದ್ದಾರೆ ಎಂದರು. ಮಲ್ಟಿ ಸ್ಪೆಶಾಲಿಟಿ ಖಾಸಗಿ ಆಸ್ಪತ್ರೆಗಳಿಗೂ ಕಡಿಮೆ ಇಲ್ಲವೆನ್ನುವ ರೀತಿಯಲ್ಲಿ…
ಮಡಿಕೇರಿ ಫೆ.13 : ಭಾಗಮಂಡಲ ಗ್ರಾ.ಪಂ ವ್ಯಾಪ್ತಿಯಲ್ಲಿ ರೂ.3 ಕೋಟಿ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ, ರಸ್ತೆ, ಜಲ್ ಜೀವನ್ ಮಿಷನ್ ಕಾಮಗಾರಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭ ಪೂರ್ಣಗೊಂಡ ಕಾಮಗಾರಿಗಳನ್ನು ಉದ್ಘಾಟಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.
ಬೆಂಗಳೂರು ಫೆ.13 : ರಾಜಭವನದಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ ಔತಣಕೂಟದಲ್ಲಿ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರು, ಕೆಜಿಎಫ್ ರಾಕಿಭಾಯ್ ಯಶ್, ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಚಲನಚಿತ್ರ ದಿಗ್ಗಜರು ಇಂದಿನ ಸಿನಿಮಾರಂಗದ ಆಗುಹೋಗುಗಳ ಕುರಿತು ಚರ್ಚಿಸಿದರು ಎಂದು ತಿಳಿದು ಬಂದಿದೆ.
ಮಡಿಕೇರಿ ಫೆ.13 : ಅಯ್ಯಂಗೇರಿ ಗ್ರಾಮದ ಇತಿಹಾಸ ಪ್ರಸಿದ್ಧ ಹಳೇ ಪಳ್ಳಿ ನೇರ್ಚೆ (ಉರೂಸ್) ಹಾಗೂ ಧಾರ್ಮಿಕ ಪ್ರಭಾಷಣ ಕಾರ್ಯಕ್ರಮ ಫೆ.15 ರಿಂದ 17 ವರೆಗೆ ನಡೆಯಲಿದೆ ಎಂದು ಮಸೀದಿ ಆಡಳಿತ ಮಂಡಳಿ ಪತ್ರಿಕಾ ಪ್ರಕಣೆಯಲ್ಲಿ ತಿಳಿಸಿದ್ದಾರೆ. ಫೆ.15 ರಂದು ಬೆಳಗ್ಗೆ ಅಯ್ಯಂಗೇರಿ ಮುಸ್ಲಿಂ ಜಮಾಹತ್ ಅಧ್ಯಕ್ಷ ಸಯ್ಯದ್ ಅಬ್ದುಲ್ ಖಾದರ್ ತಂಙಲ್ ಧ್ವಜಾರೋಹಣದ ಮೂಲಕ ಉರೂಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ರಾತ್ರಿ 7 ಗಂಟೆಗೆ ಲುಖ್ ಮಾನುಲ್ ಹಕೀಂ ಸಖಾಫಿ ಪುಲ್ಲಾರ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಫೆ.16 ಮಧ್ಯಾಹ್ನ ಸಾರ್ವಜನಿಕ ಸಮ್ಮೇಳನ ನಡೆಯಲಿದ್ದು, ಮುಖ್ಯ ಪ್ರಭಾಷಣವನ್ನು ಶಾಫಿ ಸಹದಿ ಸೋಮವಾರಪೇಟೆ ಮಾಡಲಿದ್ದಾರೆ. ರಾತ್ರಿ 7 ಗಂಟೆಗೆ ಧಾರ್ಮಿಕ ಪ್ರವಚನ ನಡೆಯಲಿದ್ದು, ಮುಖ್ಯ ಪ್ರಭಾಷಣವನ್ನು ಜಬ್ಬಾರ್ ಸಖಾಫಿ ಪಾತೂರ್ ಮಾಡಲಿದ್ದಾರೆ. ಫೆ.17 ರಾತ್ರಿ 7 ಗಂಟೆಗೆ ಮಹ್ಳರತುಲ್ ಬದ್ರಿಯಾ ಕಾರ್ಯಕ್ರಮ ನಡೆಯಲಿದ್ದು, ಸಯ್ಯಿದ್ ಮಹ್ರೂಫ್ ಜಿಫ್ರಿ ತಂಙಲ್ ಕಲ್ಲಿಡಿಕೋಡ್ ನೇತೃತ್ವ ವಹಿಸಲಿದ್ದಾರೆ. ಮಧ್ಯಾಹ್ನ 2.30 ಗಂಟೆಗೆ ಮೌಲಿದ್ ಪಾರಾಯಣದ ನಂತರ ಅನ್ನದಾನ…






