ಮಡಿಕೇರಿ ಫೆ.13 : ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಿಂದ 64 ಸ್ನಾತಕ-ಸ್ನಾತಕೋತ್ತರ ಪದವಿ, ಡಿಪ್ಲೋಮಾ ಶಿಕ್ಷಣಕ್ಕೆ ಅವಕಾಶವನ್ನು ಒದಗಿಸಲಾಗಿದೆ. ಅಲ್ಲದೆ ಆಯಾ ಪ್ರಾದೇಶಿಕ ಕೇಂದ್ರಗಳಲ್ಲೆ ಶಿಕ್ಷಣಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಶರಣಪ್ಪ ವಿ. ಹಲಸೆ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನ ಮಡಿಕೇರಿ ಸೇರಿದಂತೆ ರಾಜ್ಯದ 23 ಜಿಲ್ಲಾ ಕೇಂದ್ರ್ರಗಳಲ್ಲಿ ಪ್ರದೇಶಿಕ ಕೇಂದ್ರ್ರಗಳನ್ನು ತೆರೆಯಲಾಗಿದೆ. ಆ ಮೂಲಕ ಶಿಕ್ಷಣ ಪ್ರತಿಯೊಬ್ಬರಿಗೆ ತಲುಪಿಸಬೇಕೆನ್ನುವ ಚಿಂತನೆಗಳಡಿ ಮುಕ್ತ ವಿವಿ ಕಾರ್ಯತತ್ಪರವಾಗಿದೆ ಎಂದರು. ‘ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ’ ಎಂಬ ಘೋಷ ವಾಕ್ಯದೊಂದಿಗೆ ಸ್ಥಾಪನೆಯಾಗಿರುವ ಮುಕ್ತ ವಿವಿ, 18 ವರ್ಷದಿಂದ 80 ವರ್ಷ ವಯೋಮಾನದವರೆಗಿನ ಲಕ್ಷಾಂತರ ಮಂದಿಗೆ ವಿದ್ಯೆ ನೀಡಿ, ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿರುವುದಾಗಿ ಹೇಳಿದರು. ಮುಕ್ತ ವಿಶ್ವ ವಿದ್ಯಾನಿಲಯದ ವಾರ್ಷಿಕ, ಸೆಮಿಸ್ಟರ್ ಪರೀಕ್ಷೆಗಳು ಮಡಿಕೇರಿಯ ಪ್ರಾದೇಶಿಕ ಕೇಂದ್ರದಲ್ಲೇ ನಡೆಯುತ್ತವೆ. ಮುಕ್ತ ವಿವಿಯ ವಾರಾಂತ್ಯ ಸಂಪರ್ಕ ತರಗತಿಗಳನ್ನು ಮತ್ತು ವಿಜ್ಞಾನ ವಿಷಯಗಳಿಗೆ…
ಲೇಖಕ: admin
ಮಡಿಕೇರಿ ಫೆ.13 : ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ರಾಷ್ಟ್ರೀಯ ಅಪ್ರೇಂಟಿಸ್ ಮೇಳ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ, ಸಂಸ್ಥೆಯ ಉಪನಿರ್ದೇಶಕ ಹಾಗೂ ಪ್ರಾಚಾರ್ಯ ಪಂಡಿತಾರಾಧ್ಯ ಮೇಳದ ಪ್ರಯೋಜನಗಳ ಬಗ್ಗೆ ಅಭ್ಯರ್ಥಿಗಳಿಗೆ ವಿವರಿಸಿ ಎಲ್ಲಾ ಅಭ್ಯರ್ಥಿಗಳು ಮೇಳದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು. ಪೊನ್ನಂಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಯೋಗೇಶ್ ಕುಮಾರ್ ಮಾತನಾಡಿ, ಅಭ್ಯರ್ಥಿಗಳಿಗೆ ಅಲ್ಪಾವಧಿ ತರಬೇತಿಗಳ ಬಗೆಗಿನ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ಸರ್ಕಾರಿ ಕೈಗಾರಿಕಾ ಸಂಸ್ಥೆಯ ವಿದ್ಯಾರ್ಥಿಗಳು, ಪೊನ್ನಂಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು, ಆಲೂರು ಸಿದ್ದಾಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಭಾಗಮಂಡಲ ಕೆವಿಜಿ ಐಟಿಐ ವಿದ್ಯಾರ್ಥಿಗಳು ಪಾಲ್ಗೊಂಡು ಮೇಳದ ಪ್ರಯೋಜನವನ್ನು ಪಡೆದುಕೊಂಡರು. ಮೇಳದಲ್ಲಿ ಸುಮಾರು 120ಕ್ಕೂ ಅಧಿಕ ಅಭ್ಯರ್ಥಿಗಳು ನೊಂದಣಿ ಮಾಡಿಕೊಂಡು ವಿವಿಧ ಕೈಗಾರಿಕೆಗಳ ಸಂಪನ್ಮೂಲ ವ್ಯಕ್ತಿಗಳು ನಡೆಸುವ ಸಂದರ್ಶನದಲ್ಲಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ತರಬೇತಿ ಅಧಿಕಾರಿ ಸೂರ್ಯನಾರಾಯಣ, ಎಲ್ಲಾ ಸಂಸ್ಥೆಗಳ ಉಪನ್ಯಾಸಕರುಗಳು ಮತ್ತು ಟಾಟಾ…
ಮಡಿಕೇರಿ ಫೆ.13 : ಹೊದ್ದೂರು ಗ್ರಾಮದ ಐತಿಹಾಸಿಕ ಶ್ರೀ ಶಾಸ್ತ-ಈಶ್ವರ ದೇವರ 2ನೇ ವಾರ್ಷಿಕೋತ್ಸವ ಹಾಗೂ ವಿಷ್ಣುಮೂರ್ತಿ ಕೋಲ ಫೆ.17 ಮತ್ತು 18 ರಂದು ನಡೆಯಲಿದೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಕೂಡಂಡ ರಾಜೇಂದ್ರ ಅಯ್ಯಮ್ಮ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎರಡು ದಿನಗಳ ಕಾಲ ನಡೆಯಲಿರುವ ವಿವಿಧ ಧಾರ್ಮಿಕ ಪೂಜಾ ಕೈಕಂಕರ್ಯಗಳ ಕುರಿತು ಮಾಹಿತಿ ನೀಡಿದರು. ಫೆ.17 ರಂದು ಬೆಳಿಗ್ಗೆ 9 ಗಂಟೆಗೆ ಗಣಹೋಮ, ಸಹಸ್ರ ನಾಮ ಅರ್ಚನೆ, ಶ್ರೀ ಬೇಟೆ ಅಯ್ಯಪ್ಪ ಹಾಗೂ ಶ್ರೀ ವಿಷ್ಣುಮೂರ್ತಿ ದೈವ ಸನ್ನಿಧಿ ಅಭಿಷೇಕ ಪೂಜೆ, ಮಂಗಳಾರತಿ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ. ಸಂಜೆ 6 ಗಂಟೆಗೆ ದೇವರ ವಿವಿಧ ನೃತ್ಯ ಬಲಿ, ಸಂಪ್ರೋಕ್ಷಣೆ ಅನ್ನದಾನ ನಡೆಯಲಿದ್ದು, ನಂತರ ವಿಷ್ಣು ಮೂರ್ತಿ ದೈವದ ತೋಯತ ತೆರೆ ನಡೆಯಲಿದೆ. ಫೆ.18 ರಂದು ಪ್ರಾತಃಕಾಲ 7 ಗಂಟೆಗೆ ಶ್ರೀ ವಿಷ್ಣುಮೂರ್ತಿ ದೈವದ ಕೋಲ ಜರುಗಲಿದ್ದು, ನಾಡಿನ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ದೇವರ ಕೃಪೆಗೆ ಪಾತ್ರರಾಗುವಂತೆ…
ಮಡಿಕೇರಿ ಫೆ.13 : ಪೊನ್ನಂಪೇಟೆ ವ್ಯಾಪ್ತಿಯ ಬಾಡಗ ಗ್ರಾಮದಲ್ಲಿ ಕಳೆದ 18 ಗಂಟೆಗಳಲ್ಲಿ ಒಂದೇ ಕುಟುಂಬದ ಎರಡು ಮಾನವ ಜೀವಗಳು ಹುಲಿದಾಳಿಗೆ ಬಲಿಯಾಗಿವೆ. ದಕ್ಷಿಣ ಕೊಡಗಿನಲ್ಲಿ ಆತಂಕ ಮನೆ ಮಾಡಿದ್ದು, ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾನುವಾರ ಸಂಜೆ ಮಧು ಹಾಗೂ ವೀಣಾ ದಂಪತಿಯ ಪುತ್ರ ಚೇತನ್ (18) ಎಂಬ ಯುವಕನ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿತ್ತು. ಈ ಘಟನೆ ಮಾಸುವ ಮುನ್ನವೇ ಲೈನ್ ಮನೆಯ ನಿವಾಸಿ ಪಲ್ಲೇರಿಯ ರಾಜು(75) ಎಂಬುವವರನ್ನು ಹುಲಿ ಇಂದು ಬಲಿ ಪಡೆದಿದೆ. ಅಲ್ಲದೆ ಚೇತನ್ ನ್ನು ಹುಡುಕಿಕೊಂಡು ಹೋದ ಆತನ ತಂದೆ ಮಧು ಮೇಲೆಯೂ ಹುಲಿದಾಳಿ ಮಾಡಿ ಗಾಯಗೊಳಿಸಿದೆ. ಸೋಮವಾರ ಬೆಳಗ್ಗೆ 7 ಗಂಟೆಯ ಸುಮಾರಿನಲ್ಲ್ಲಿ ರಾಜು ಅವರು ತಮ್ಮ ಲೈನ್ ಮನೆಯಿಂದ ಅನತಿ ದೂರ ಸಾಗುತ್ತಿದ್ದ ಸಂದರ್ಭ ತೋಟದಲ್ಲಿದ್ದ ಹುಲಿ ದಿಢೀರ್ ದಾಳಿ ಮಾಡಿದೆ. ತಲೆಯ ಭಾಗಕ್ಕೆ ಹುಲಿ ಕಚ್ಚಿದ್ದು, ರಾಜು ಹಾಗೂ ಮನೆ…
ಮಡಿಕೇರಿ ಫೆ.13 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ‘ಮಕ್ಕಳ ಕಲಿಕಾ ಹಬ್ಬ’ ಕ್ಕೆ ಮೂರ್ನಾಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಚಾಲನೆ ದೊರೆಯಿತು. ಮೂರು ದಿನಗಳ ಕಾಲ ನಡೆಯುವ ಕಲಿಕಾ ಹಬ್ಬಕ್ಕೆ ಮೂರ್ನಾಡು ಗ್ರಾ.ಪಂ.ಅಧ್ಯಕ್ಷರಾದ ಸುಜಾತ ಚಂದ್ರಶೇಖರ್ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಕಲಿಕಾ ಹಬ್ಬದಿಂದ ಮಕ್ಕಳ ಜ್ಞಾನಾರ್ಜನೆಗೆ ಹೆಚ್ಚಿನ ಸಹಕಾರಿಯಾಗಲಿದೆ ಎಂದರು. ವಿದ್ಯಾರ್ಥಿಗಳು ಸದಾ ಚಲನಶೀಲತೆ, ಕ್ರೀಯಾಶೀಲತೆಯಿಂದ ಇರಬೇಕು. ಆ ನಿಟ್ಟಿನಲ್ಲಿ ಪಠ್ಯೇತರ ಚಟುವಟಿಕೆಗಳಾದ ಕಲೆ, ಸಾಹಿತ್ಯ, ಸಾಂಸ್ಕøತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಕ್ರೀಯಾಶೀಲತೆ ಬೆಳೆಸಿಕೊಳ್ಳಲು ಕಲಿಕಾ ಹಬ್ಬ ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ ಅವರು ಮಾತನಾಡಿ ಸರ್ಕಾರ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಹಬ್ಬವನ್ನು ಏರ್ಪಡಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಕಲಿಕಾ ಹಬ್ಬ ಉತ್ತಮ…
ಮಡಿಕೇರಿ ಫೆ.13 : ನಗರದ ವಿಂಗ್ಸ್ ಆಫ್ ಪ್ಯಾಷನ್ ಡ್ಯಾನ್ಸ್ ಸಂಸ್ಥೆ ವತಿಯಿಂದ ಆಯೋಜಿಸಲಾದ ಸಾಂಸ್ಕೃತಿಕ ಸ್ಪರ್ಧೆ ಅಭೂತಪೂರ್ವ ಯಶಸ್ಸನ್ನು ಕಂಡಿತು. ನಗರದ ಬಾಲಭವನದಲ್ಲಿ ಅಪರಾಹ್ನ 2 ಗಂಟೆಯಿಂದ ಆರಂಭವಾದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ಏಳು ಗಂಟೆಯವರೆಗೂ ಸಾಂಗವಾಗಿ ನಡೆಯಿತು. ವಿಂಗ್ಸ್ ಆಫ್ ಫ್ಯಾಷನ್ ಸಂಸ್ಥೆಯ ನಿರ್ದೇಶಕರು ಹಾಗೂ ನೃತ್ಯ ತರಬೇತುದಾರರಾದ ಪ್ರೀತಾ ಕೃಷ್ಣ ಜಿಲ್ಲೆಯ ಮಕ್ಕಳು ಹಾಗೂ ಮಹಿಳೆಯರ ಪ್ರತಿಭೆಗಳ ಅನಾವರಣಕ್ಕೆ ವೇದಿಕೆ ಕಲ್ಪಿಸಿದರು. ಪುಟ್ಟ ಕಂದಮ್ಮಗಳಿಂದ ಆರಂಭಿಸಿ ಬೇರೆ ಬೇರೆ ವಯೋಮಾನದ ಮಕ್ಕಳಿಗೆ, ವಿವಿಧ ವಿಭಾಗಗಳಲ್ಲಿ, ಫ್ಯಾಷನ್ ಶೋ, ಜಾನಪದ ನೃತ್ಯ (ವೈಯಕ್ತಿಕ ಹಾಗೂ ಸಮೂಹ) ಸ್ಪರ್ಧೆಗಳು ನಡೆದವು. ಕಾರ್ಯಕ್ರಮದಲ್ಲಿ ವಕೀಲರಾದ ಮೀನಾ ಕುಮಾರಿ, ಖ್ಯಾತ ವೈದ್ಯೆ ರೇಣುಕಾ ಸುಧಾಕರ್ ಮತ್ತು ಉಪನ್ಯಾಸಕಿ ಕೆ.ಜಯಲಕ್ಷ್ಮಿ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಅಬಾಕಸ್ ಸಾಧನೆ ಮಾಡಿದ ವಿಂಗ್ಸ್ ಆಫ್ ಫ್ಯಾಷನ್ ನ ವಿದ್ಯಾರ್ಥಿನಿ, ದೃತಿ ಪೂಜಾರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸ್ಪರ್ಧೆಗಳ ತೀರ್ಪುಗಾರರಾಗಿ ಚಿತ್ರಾ ಆರ್ಯನ್, ಶಾರದಾ, ಯಶಸ್ವಿನಿ ಹಾಗೂ ಅದಿಥಿ…
ಮಡಿಕೇರಿ ಫೆ.13 : ನಗರದ ಪ್ರಥಮ ಆಯುರ್ವೇದ ಪಂಚಕರ್ಮ ಕೇಂದ್ರ ಶ್ರೀ ಅಖಿಲರವಿ ಆಯುರ್ಶಾಲದ 19ನೇ ವಾರ್ಷಿಕೋತ್ಸವದ ಪ್ರಯುಕ್ತ ಫೆ.15 ರಂದು ವಿನೂತನ ಸೇವೆಗಳು ಆರಂಭಗೊಳ್ಳಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಡಾ.ಎ.ಆರ್.ರಾಜಾರಮ್, ನಗರದ ಅಪ್ಪಚ್ಚಕವಿ ರಸ್ತೆಯಲ್ಲಿರುವ ಶ್ರೀ ಅಖಿಲರವಿ ಆಯುರ್ಶಾಲದಲ್ಲಿ ಬೆಳಿಗ್ಗೆ 10.30 ಗಂಟೆಗೆ ಹಿರಿಯ ನಾಗರೀಕರು ಹಾಗೂ ವೈದ್ಯಧಿಕಾರಿಗಳು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ವಾರ್ಷಿಕೋತ್ಸವದ ಪ್ರಯುಕ್ತ ಕೊಡಗಿನಲ್ಲಿ ಪ್ರಥಮವಾಗಿ ಆಯುರ್ವೇದ ಡೇ ಕೆರ್, ತುರ್ತು ಆಯುರ್ವೇದ ಚಿಕಿತ್ಸೆಗೆ ಬೇಕಾದವರಿಗೆ ‘ಪಥ್ಯ’ ಆಹಾರ ವ್ಯವಸ್ಥೆ, ಸಂಜೆ 5.30 ರಿಂದ 6.30ರ ವರೆಗೆ ಉಚಿತ ‘ಪವರ್ ಯೋಗ’ ತರಬೇತಿ, ಕಾಯಿಲೆಗನುಸಾರ ಪ್ರಥಮ ಬಾರಿಗೆ ‘ಚಿಕಿತ್ಸಾ ಯೋಗ’ದ ಬಳಕೆ, ಆಯುರ್ವೇದ ಸಂಬಂಧಿತ ಉತ್ಪನ್ನಗಳ ಮಾಹಿತಿ ಹಾಗೂ ಮಾರಾಟ, ಆಯುರ್ವೇದದಲ್ಲೇ ಪ್ರಥಮ ಎನಿಸಬಹುದಾದ ವಿಶೇಷ ‘ದೋಷಹರ ಚಿಕಿತ್ಸೆಗಳು’ ವಿನೂತನ ಸೇವೆಗಳು ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.
ಮಡಿಕೇರಿ ಫೆ. 13 : ಮಡಿಕೇರಿಯಲ್ಲಿನ ಭಾರತೀಯ ಜೀವವಿಮಾ ಶಾಖೆಯಲ್ಲಿ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿಗಾಗಿ ನೂತನವಾಗಿ ಅಖಿಲ ಭಾರತ ಜೀವವಿಮಾ ಪ್ರತಿನಿಧಿಗಳ ಸಂಘವನ್ನು ರಚಿಸಲಾಯಿತು. ಸಂಘದ ಅಧ್ಯಕ್ಷರಾಗಿ ಎಂ.ಕೆ.ನಾಚಪ್ಪ, ಉಪಾಧ್ಯಕ್ಷರಾಗಿ ಗೀತಾ ಗಿರೀಶ್, ಕಾಯಾ೯ಧ್ಯಕ್ಷರಾಗಿ ಮುರಳೀಧರ್, ಪ್ರಧಾನ ಕಾಯ೯ದಶಿ೯ಯಾಗಿ ಆನಂದ್ ಎಸ್.ಜಾಧವ್, ಖಚಾಂಜಿಯಾಗಿ ಅಯಿಷಾ ಹಮೀದ್, ಸಹಕಾಯ೯ದಶಿ೯ಯಾಗಿ ಬಿ.ಕೆ. ಪುಪ್ಪವೇಣಿ ಮತ್ತು ಮುಖ್ಯ ಗೌರವ ಸಲಹೆಗಾರರಾಗಿ ಕೆ.ಎ.ತಿಮ್ಮಯ್ಯ ಅವಿರೋಧವಾಗಿ ಆಯ್ಕೆಯಾದರು. ಇವರೊಂದಿಗೆ 31 ಪ್ರತಿನಿಧಿಗಳು ಸದಸ್ಯರಾಗಿ ಸೇಪ೯ಡೆಯಾಗಿದ್ದಾರೆ. ಈ ಸಂಘಟನೆ ವತಿಯಿಂದ ಜೀವವಿಮಾ ನಿಗಮದ ಹಿರಿಯ ಪ್ರತಿನಿಧಿಯಾಗಿದ್ದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಸಂಘದ ಪರವಾಗಿ ಸನ್ಮಾನಿಸಲಾಯಿತು.
ಸೋಮವಾರಪೇಟೆ ಫೆ.13 : ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆಯಡಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಪ.ಪಂ ಆಡಳಿತ ಮಂಡಳಿಯೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಜಿಲ್ಲಾಧಿಕಾರಿಗಳಿಗೆ ದೂರು ನೀಡಲು ನಿರ್ಧರಿಸಿದೆ. ನಗರೋತ್ಥಾನ ಯೋಜನೆಯಡಿ ಪ.ಪಂ ಗೆ ರೂ.2.26 ಕೋಟಿ ಅನುದಾನ ಬಿಡುಗಡೆಯಾಗಿತ್ತು. ಪಟ್ಟಣದ ವಿವಿಧ ರಸ್ತೆಗಳ ಕಾಂಕ್ರಿಟೀಕರಣ, ಡಾಂಬರೀಕರಣ, ಚರಂಡಿ, ಮೋರಿ ನಿರ್ಮಾಣ ನಡೆಯುತ್ತಿದೆ. ಪ್ರಮುಖವಾಗಿ ಚರಂಡಿ ನಿರ್ಮಾಣದಲ್ಲಿ ತೀರಾ ಕಳಪೆ ಕಾಮಗಾರಿ ನಡೆದಿದೆ. ನೀರಿನ ರಭಸಕ್ಕೆ ಈ ಚರಂಡಿ ಕೊಚ್ಚಿ ಹೋಗುವುದು ಖಚಿತ. ಶಾಸಕರು ಭೂಮಿಪೂಜೆ ನೆರವೇರಿಸಿ 2 ತಿಂಗಳಾದರೂ ಕಾಮಗಾರಿ ಚುರುಕುಗೊಳಿಸುವ ಬಗ್ಗೆ ಗುತ್ತಿಗೆದಾರ ಆಸಕ್ತಿ ತೋರುತ್ತಿಲ್ಲ. ವಲ್ಲಬಾಯಿ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಕಾಮಗಾರಿಯಲ್ಲಿ 2 ಅಡಿ ಆಳದ ಚರಂಡಿ ನಿರ್ಮಾಣಕ್ಕೆ ಒಂದೂವರೆ ಅಡಿಯಷ್ಟು, ಮೊದಲು 4 ಇಂಚು ಬೆಡ್ಡಿಂಗ್ ಹಾಕುವಲ್ಲಿ ಕೇವಲ ಒಂದೂವರೆ ಇಂಚಿನಷ್ಟು, 7 ಇಂಚಿಗೆ ಬದಲಾಗಿ 10 ಇಂಚಿಗೆ ಒಂದು ಕಬ್ಬಣದ ಸರಳು ಹಾಕುವ ಮೂಲಕ ಕಳಪೆ ಕಾಮಗಾರಿ…
ಸೋಮವಾರಪೇಟೆ ಫೆ.13 : ಬಿ.ಟಿ.ಸಿ.ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉಪನ್ಯಾಸಕರುಗಳನ್ನು ನೇಮಕ ಮಾಡಲಾಗಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ತಿಳಿಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವ ಸಲುವಾಗಿ ಕಾಲೇಜಿನಲ್ಲಿ ದೊರಕುವ ಸೌಲಭ್ಯಗಳ ಕರಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಪ್ರಸ್ತುತ ವಾಣಿಜ್ಯ ವಿಭಾಗಕ್ಕೆ ವಿವಿಧ ಭಾಗಗಳಿಂದ ಮೂರುಮಂದಿ ಖಾಯಂ ಸಹ ಪ್ರಾಧ್ಯಾಪಕರನ್ನು ನೇಮಿಸಲಾಗಿದೆ. ಕೌನ್ಸಿಲಿಂಗ್ ಮೂಲಕ ಎಳುಮಂದಿ ಉಪನ್ಯಾಸಕರನ್ನು, ಕ್ರೀಡೆಗೆ ಆದ್ಯತೆ ನೀಡಬೇಕೆಂಬ ಉದ್ದೇಶದಿಂದ ಒಬ್ಬರು ದೈಹಿಕ ನಿರ್ದೇಶಕರನ್ನು ನೇಮಿಸಲಾಗಿದೆ. ಆ ಮೂಲಕ ಕಾಲೇಜಿನಲ್ಲಿ ಉತ್ತಮ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ ಎಂದರು. ಮುಂದಿನ ಶೈಕ್ಷಣಿಕ ವರ್ಷದಿಂದ ಇಲ್ಲಿನ ವಿದ್ಯಾರ್ಥಿಗಳು ಬೇರೆಡೆಗೆ ತೆರಳದೆ ಇಲ್ಲಿಯೇ ಶಿಕ್ಷಣ ಪಡೆಯಿರಿ ಎಂದರು. ತಾಲೂಕಿನ ವಿವಿಧ ಪದವಿಪೂರ್ವ ಕಾಲೇಜುಗಳಿಗೆ ತೆರಳಿ ಅಲ್ಲಿನ ವಿದ್ಯಾರ್ಥಿಗಳಿಗೆ ಈ ಕಾಲೇಜಿನ ಬಗ್ಗೆ ಅರಿವು ಮೂಡಿಸುವ ಕಾರ್ಯ ಮಾಡಲಾಗುವುದು ಮಾದಲಾಗುವುದು ಎಂದು ತಿಳಿಸಿದರು. ಈ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿ…






