ಲೇಖಕ: admin

ಮಡಿಕೇರಿ ಜ.16 : ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಪಕ್ಷದ ಹಿರಿಯ ಮುಖಂಡ ಟಿ.ಪಿ.ರಮೇಶ್ ಅವರು ನೇಮಕಗೊಂಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ್ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಶಿಫಾರಸ್ಸಿನೊಂದಿಗೆ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೇಣುಗೋಪಲ್ ಅವರು ಬಿಡುಗಡೆಗೊಳಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಪ್ರಚಾರ ಸಮಿತಿಯ ರಾಜ್ಯ, ವಿಭಾಗ ಹಾಗೂ ಜಿಲ್ಲಾ ಪದಾಧಿಕಾರಿಗಳ ಪಟ್ಟಿಯಲ್ಲಿ ಟಿ.ಪಿ.ರಮೇಶ್ ಅವರನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಟಿ.ಪಿ.ರಮೇಶ್ ಅವರು ಕಳೆದ 15 ವರ್ಷಗಳಿಂದ ಕೆಪಿಸಿಸಿ ಸದಸ್ಯರಾಗಿ, ಎರಡು ವರ್ಷ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ, ಕೆಪಿಸಿಸಿ ಪ್ಯಾನಲಿಸ್ಟ್ ಆಗಿ, ಪುತ್ತೂರು ಬ್ಲಾಕ್ ಕಾಂಗ್ರೆಸ್‍ನ ಸಂಯೋಜಕರಾಗಿ ಹಾಗೂ ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ ಸೇವೆ ಸಲ್ಲಿಸಿದ್ದಾರೆ.

Read More

ಮಡಿಕೇರಿ ಜ.16 :  ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಉದ್ಯಮಿ ಅಕ್ಕಳತಂಡ ಎಸ್. ಮೊಯ್ದು ಅವರ ಪ್ರಾಯೋಜಕತ್ವದಲ್ಲಿ ಹೊರತರಲಾದ ಪ್ರಸಕ್ತ ಸಾಲಿನ ಕ್ಯಾಲೆಂಡರ್ (ದಿನದರ್ಶಿ) ಅನ್ನು  ಬಿಡುಗಡೆಗೊಳಿಸಲಾಯಿತು. ವಿರಾಜಪೇಟೆಯಲ್ಲಿರುವ ಕೆ. ಎಂ. ಎ. ಸಂಸ್ಥೆಯ ಪ್ರಧಾನ ಕಚೇರಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸಂಸ್ಥೆಯ ಹಿರಿಯ ಸದಸ್ಯರಿಗೂ ಆಗಿರುವ ನಿವೃತ್ತ ಅಬಕಾರಿ ಉಪನಿರೀಕ್ಷಕರಾದ ಆಲೀರ ಎಂ. ಹುಸೈನ್ ಅವರು ನೂತನ ಕೆ. ಎಂ. ಎ. ಕ್ಯಾಲೆಂಡರನ್ನು ಅನಾವರಣಗೊಳಿಸಿದರು. ಬಳಿಕ ಕ್ಯಾಲೆಂಡರ್ ನ ಮೊದಲ ಪ್ರತಿಯನ್ನು ಕೆ. ಎಂ. ಎ. ಸಂಸ್ಥೆಯ ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ ಅವರಿಗೆ ಹಸ್ತಾಂತರಿಸುವ ಮೂಲಕ ಕ್ಯಾಲೆಂಡರ್ ವಿತರಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಆಲೀರ ಎಂ. ಹುಸೈನ್ , ಸೇವೆ ಮಾಡಲು ಯಾವುದೇ ನಿರ್ದಿಷ್ಟ ಆಯಾಮಗಳಿಲ್ಲ. ನಿಸ್ವಾರ್ಥವಾಗಿ ಮಾಡುವ ಜನೋಪಯೋಗಿ ಸೇವೆ ಎಂದಿಗೂ ವ್ಯರ್ಥವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ  ದುದ್ದಿಯಂಡ ಹೆಚ್. ಸೂಫಿ ಹಾಜಿ, ಸಂಸ್ಥೆಯ ವತಿಯಿಂದ ಕಳೆದ…

Read More

ಶ್ರೀಮಂಗಲ ಜ.16 : ಪೊನ್ನಂಪೇಟೆ ತಾಲೂಕು ಟಿ.ಶೆಟ್ಟಿಗೇರಿಯಲ್ಲಿ ಚೆಟ್ಟಂಗಡ ಕುಟುಂಬ ಆಯೋಜಿಸಿರುವ ಎರಡನೇ ವರ್ಷದ ಕೊಡವ ಕೌಟುಂಬಿಕ ಹಗ್ಗ ಜಗ್ಗಾಟ ನಮ್ಮೆ-2023 ಲಾಂಛನವನ್ನು ನೆಮ್ಮಲೆ ಗ್ರಾಮದಲ್ಲಿರುವ ಚೆಟ್ಟಂಗಡ ಕುಟುಂಬದ ಐನ್ ಮನೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಅನಾವರಣಗೊಳಿಸಿದರು. ಲಾಂಛನ ಬಿಡುಗಡೆ ಮುನ್ನ ಐನ್ ಮನೆಯಲ್ಲಿ ಕುಟುಂಬದ ಹಿರಿಯರು, ಅತಿಥಿಗಳೊಂದಿಗೆ ಗುರು ಕಾರೋಣರಿಗೆ ಕಾರ್ಯಕ್ರಮದ ಯಶಸ್ವಿಗಾಗಿ ಸಾಮೂಹಿಕವಾಗಿ ಪ್ರಾರ್ಥಿಸಿದರು. ಲಾಂಛನವನ್ನು ಬಿಡುಗಡೆ ಮಾಡಿ ಮಾತನಾಡಿದ ಸುಜಾ ಕುಶಾಲಪ್ಪ,  1997ರಲ್ಲಿ ಪಾಂಡಂಡ ದಿವಂಗತ ಕುಟ್ಟಪ್ಪ ಅವರು ಕೊಡವ ಜನಾಂಗದಲ್ಲಿ ಒಗ್ಗಟ್ಟು ಬೆಸೆಯಲು ಹಾಗೂ ಕುಟುಂಬಗಳನ್ನು ಒಂದೇ ಸ್ಥಳದಲ್ಲಿ ಸೇರಿಸುವ , ಕ್ರೀಡಾ ಪ್ರತಿಭೆಗಳಿಗೆ ಉತ್ತೇಜನಕ್ಕಾಗಿ ಕೌಟುಂಬಿಕ ಹಾಕಿ ನಮ್ಮೆಯನ್ನು ಪ್ರಾರಂಭಿಸಿದರು. ನಂತರ ಕ್ರಿಕೆಟ್ ಪಂದ್ಯಾವಳಿಯನ್ನು ಸಹ ಕಾರ್ಷನ್ ಕಾರ್ಯಪ್ಪ ಅವರು ಆರಂಭಿಸಿದರು.ಇದು ಜನಪ್ರಿಯವಾಗಿದೆ.ಇದೀಗ ಹಗ್ಗ ಜಗ್ಗಾಟ ಸ್ಪರ್ಧೆಯನ್ನು ಕಳೆದ ವರ್ಷದಿಂದ ಪೊನ್ನೋಲತಂಡ ಕುಟುಂಬ ಆರಂಭಿಸಿದ್ದು, 2ನೇ ವರ್ಷದ ಪಂದ್ಯವಳಿಯನ್ನು ಚೆಟ್ಟಂಗಡ ಕುಟುಂಬ ಆಯೋಜಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಇದು ಜನಪ್ರಿಯವಾಗಲಿ ಎಂದು…

Read More

ಮಡಿಕೇರಿ ಜ.16 : ಕೊಡಗು ಜಿಲ್ಲಾ ಅಂಬಾಭವಾನಿ ಯುವಕ ಮತ್ತು ಯುವತಿ, ಕ್ರೀಡಾ ಮತ್ತು ಮನೋರಂಜನಾ ಸಂಘ ತಾಳತ್ತಮನೆ, ನೆಹರು ಯುವ ಕೇಂದ್ರ, ಜಿಲ್ಲಾ ಯುವ ಒಕ್ಕೂಟ ಹಾಗೂ ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನದ ಪ್ರಯುಕ್ತ ತಾಳತ್ತಮನೆಯಲ್ಲಿ “ಭಾಗವಹಿಸುವ ದಿನ” ಕಾರ್ಯಕ್ರಮ ನಡೆಯಿತು. ತಾಳತ್ತಮನೆಯ ಕೊಡಗು ಜಿಲ್ಲಾ ಮರಾಠ/ಮರಾಟಿ ಸಮಾಜ ಸೇವಾ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ ಮಹಿಳಾ ವೇದಿಕೆಯ ಅಧ್ಯಕ್ಷರಾದ ರತ್ನಮಂಜರಿ ಉದ್ಘಾಟಿಸಿದರು. ಯುವ ವೇದಿಕೆಯ ಅಧ್ಯಕ್ಷ ಎಂ.ಆರ್.ಮೋಹನ್ ಮಾತನಾಡಿ ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆ ಮತ್ತು ರಾಷ್ಟ್ರೀಯ ಯುವ ದಿನದ ಮಹತ್ವವನ್ನು ಸಭೆಗೆ ತಿಳಿಸಿದರು. ಸಮಾಜದ ಯುವಕ ಯುವತಿಯರು ಮುಂದೆ ಬಂದು ಯುವ ವೇದಿಕೆಯಿಂದ ನಡೆಸುವ ಎಲ್ಲಾ ಚಟುವಟಿಕೆಗಳಿಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಸಂಘದ ಸಹ ಕಾರ್ಯದರ್ಶಿ ಎ.ಎಂ.ನರಸಿಂಹ, ಕಟ್ಟಡ ಸಮಿತಿ ಕಾರ್ಯದರ್ಶಿ ಎಂ.ಎಸ್.ಯೋಗೇಂದ್ರ, ಸಮಿತಿ ಸದಸ್ಯರಾದ ಎಂ.ಬಿ.ಪೂವಪ್ಪ, ಕೆ.ಎಸ್.ಹೇಮಂತ್,…

Read More

ಕುಶಾಲನಗರ, ಜ.16 : ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಫೆ.3 ರಂದು ಕುಶಾಲನಗರದಲ್ಲಿ ಹಮ್ಮಿಕೊಂಡಿರುವ ಕುಶಾಲನಗರ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಹಾಗೂ ಹಿರಿಯ ಪತ್ರಕರ್ತರಾದ ಕುಶಾಲನಗರದಲ್ಲಿ ನೆಲೆಸಿರುವ ಬಿ.ಆರ್.ನಾರಾಯಣ ಆಯ್ಕೆಯಾಗಿದ್ದಾರೆ. ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ಬಿ.ಆರ್.ನಾರಾಯಣ್ ಅವರನ್ನು ಕುಶಾಲನಗರ ಕಸಾಪ ದಿಂದ ಸಿದ್ದಯ್ಯ ಪುರಾಣಿಕ ಬಡಾವಣೆಯಲ್ಲಿರುವ ಅವರ ಮನೆಗೆ ತೆರಳಿ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಗಮಿಸುವಂತೆ ಆತ್ಮೀಯವಾಗಿ ಆಹ್ವಾನ ನೀಡಿ ಸ್ವಾಗತಿಸಲಾಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಹಾಗೂ ಕಸಾಪ ತಾಲ್ಲೂಕು ಅಧ್ಯಕ್ಷ ಕೆ.ಎಸ್.ಮೂರ್ತಿ ಸೇರಿದಂತೆ ಕಸಾಪ ಪದಾಧಿಕಾರಿಗಳು ಹಾಗೂ ಸಮ್ಮೇಳನದ ವಿವಿಧ ಉಪಸಮಿತಿಗಳ ಪ್ರಮುಖರು ಸೇರಿದಂತೆ ಸಾಹಿತಿ ಬಿ.ಆರ್.ನಾರಾಯಣ ಅವರನ್ನು ಸನ್ಮಾನಿಸಿ ಫಲ ತಾಂಬೂಲ ನೀಡಿ ಗೌರವಿಸಲಾಯಿತು. ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷ ಕೇಶವಕಾಮತ್, ಸುಮಾರು ನಾಲ್ಕು ದಶಕಗಳ ಕಾಲ ಉಪನ್ಯಾಸಕ ವೃತ್ತಿ, ಪತ್ರಿಕೋದ್ಯಮ ಹಾಗೂ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಬಿ.ಆರ್.ನಾರಾಯಣ ಅವರು ಸಮ್ಮೇಳನಕ್ಕೆ ಆಯ್ಕೆಯಾಗಿರುವುದು ಸಂತಸದ ವಿಷಯ. ಈ…

Read More

ಸುಂಟಿಕೊಪ್ಪ,ಜ.16: ವಿಶೇಷ ಚೇತನ ಬದುಕಿಗೆ ಆಸರೆಯಾಗಲು ಸರಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ವಿಶೇಷ ಚೇತನರ ಇಲಾಖೆಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಕರೆ ನೀಡಿದರು. ಸುಂಟಿಕೊಪ್ಪ ಅಂಬೇಡ್ಕರ್ ಭವನದಲ್ಲಿ ನಡೆದ ಗ್ರೇಡ್ 1 ಗ್ರಾ.ಪಂ ಯ ವಿಶೇಷ ಚೇತನರ ಗ್ರಾಮ ಸಭೆಯಲ್ಲಿ ಮಾತನಾಡಿದರು. ವಿಕಲಚೇತನರು ಶೇ.75 ಇದ್ದವರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನವನ್ನು ಇಲಾಖೆಯಿಂದ ನೀಡಲಾಗುತ್ತಿದೆ. ಇದಕ್ಕೆ ಬಹಳಷ್ಟು ಅರ್ಜಿ ಬರುತ್ತಿದ್ದು, ಕೊಡಗಿಗೆ ಕೇವಲ 5 ದ್ವಿಚಕ್ರ ವಾಹನಕ್ಕೆ ಅನುದಾನ ಲಭ್ಯವಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ಸಭೆಯಲ್ಲಿ ಅರ್ಹರನ್ನು ಆಯ್ಕೆ ಮಾಡಲಾಗುತ್ತಿದೆ. ಗ್ರಾಮ 1 ಸೇವಾಸಿಂಧು ಕೇಂದ್ರ ತೆರೆಯಲು ವಿಶೇಷ ಚೇತನರಿಗೆ ಸಹಾಯಧನ ನೀಡಲಾಗುತ್ತಿದೆ. ರಿಯಾಯಿತಿ ದರದಲ್ಲಿ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಪ್ರಯಾಣಿಸಲು ಅನುವು ಮಾಡಿಕೊಡಲಾಗುತ್ತಿದೆ. ರೈಲಿನಲ್ಲಿ ಸಂಚರಿಸಲು ಉಚಿತಪಾಸ್ ನೀಡಲಾಗುತ್ತಿದೆ. ವಿಕಲಚೇತನರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಮಾನಸಿಕ ಸಮಸ್ಯೆ ಇರುವ ವಿಕಲಚೇತನರಿಗೆ ಉಚಿತ ವೈಧ್ಯಕೀಯ ಚಿಕಿತ್ಸೆ ಲಭ್ಯವಾಗುತ್ತಿದೆ. ಮಲಗಿದಲ್ಲೇ ಇರುವ ವಿಕಲಚೇತನರಿಗೆ ವಾಟರ್ ಬೆಡ್ ಕಲ್ಪಿಸಲಾಗುತ್ತಿದೆ. ಎಸ್‍ಎಸ್‍ಎಲ್‍ಸಿ ಪಾಸಾದ ಟೈಲರಿಂಗ್…

Read More

ಸುಂಟಿಕೊಪ್ಪ,ಜ.16 : ಕೊಡಗರಹಳ್ಳಿ ನೇತಾಜಿ ಯುವಕ ಸಂಘದ ನೂತನ ಆಡಳಿತ ಮಂಡಳಿ ರಚನೆಯಾಗಿದ್ದು, ಅಧ್ಯಕ್ಷರಾಗಿ ಮಂಡುವಂಡ ಪುನೀತ್ ಪೂಣ್ಣಚ್ಚ ಆಯ್ಕೆಯಾಗಿದ್ದಾರೆ. ಸಂಘದ ನೇತಾಜಿ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ಕೊಡಗರಹಳ್ಳಿ ಗ್ರಾ.ಪಂ ಸದಸ್ಯ ಸುನಿಲ್ ಹಾಗೂ ಖಜಾಂಜಿಯಾಗಿ ಮಿಥುನ್ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷ ಡಾ.ಶಶಿಕಾಂತರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯದರ್ಶಿ ಸಿ.ಸಿ.ನಾರಾಯಣಸ್ವಾಮಿ ವರದಿ ವಾಚಿಸಿದರು. ಖಜಾಂಜಿ ಸಿ.ಎನ್.ದತ್ತ ಸೋಮಣ್ಣ ಲೆಕ್ಕ ಪತ್ರ ಮಂಡಿಸಿದರು. ನಿರ್ಗಮಿತ ಅಧ್ಯಕ್ಷ ಡಾ.ಶಶಿಕಾಂತರೈ ಮಾತನಾಡಿ ಸಂಘವು ಜಿಲ್ಲೆಯಲ್ಲಿ ಹೆಸರು ಪಡೆದ ಸಂಘವಾಗಿದ್ದು ಪುಟ್ಬಾಲ್ ಕ್ರೀಡೆಯಲ್ಲಿ ಜಿಲ್ಲಾ ಚಾಂಪಿಯನ್ ಮಟ್ಟವನ್ನು ಪಡೆದಿದೆ. ಕ್ರೀಡೆ ಮಾತ್ರವಲ್ಲದೆ ಜನೋಪಯೋಗಿ ಹಾಗೂ ಸಮಾಜಮುಖಿ ಕಾರ್ಯಕ್ರಮಗಳಾಗಿ ಆರೋಗ್ಯ ಶಿಬಿರ, ಪಶುವೈಧ್ಯಕೀಯ ಶಿಬಿರ, ಅಂತರ ಶಾಲಾ ಹಾಕಿ ಪಂದ್ಯಾವಳಿಗಳನ್ನು ನಡೆಸಿಕೊಂಡು ಬರುತ್ತಿವೆ. 1959 ರಷ್ಟು ಹಿಂದೆಯೇ ಈ ಸಂಘ ಸ್ಥಾಪನೆಯಾಗಿದ್ದು, ಸಂಘದ ಹಿರಿಯ ಸದಸ್ಯರಾದ ಡಾ.ಎಂ.ಪಿ.ಗಣೇಶ್ ಅವರು ಪದ್ಮಶ್ರೀ ಪುರಸ್ಕøತರಾಗಿರುವುದು ಹೆಮ್ಮೆಯ ವಿಚಾರ. ಹಾಗೆಯೇ ಸಂಘದ ಸದಸ್ಯರುಗಳು…

Read More

ಮಡಿಕೇರಿ ಜ.16 : ಕ್ಷೇತ್ರಗಳ ಪುನರ್ ವಿಂಗಡಣೆ ಸಂದರ್ಭ ಕೊಡಗು ಜಿಲ್ಲಾ ಪಂಚಾಯತ್ ಕ್ಷೇತ್ರಗಳನ್ನು 29 ರಿಂದ 25 ಕ್ಕೆ ಇಳಿಕೆ ಮಾಡಿರುವ ಕ್ರಮವನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪಂಚಾಯತ್ ರಾಜ್ ನಿರ್ದೇಶಕರು ಮತ್ತು ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿಗಳು ಹಾಗೂ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ಸದಸ್ಯ ಕಾರ್ಯದರ್ಶಿಗಳಿಗೆ ಆಕ್ಷೇಪ ಸಲ್ಲಿಸಿದೆ. ಈ ಹಿಂದೆ ಇದ್ದ 29 ಕ್ಷೇತ್ರಗಳಿಗೆ 5 ನ್ನು ಹೆಚ್ಚುವರಿಯಾಗಿ ಸೇರ್ಪಡೆ ಮಾಡಿ 34 ಜಿ.ಪಂ ಕ್ಷೇತ್ರಗಳನ್ನು ರಚಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಕೊಡಗು ಜಿಲ್ಲೆಯು ಗುಡ್ಡಗಾಡು ಪ್ರದೇಶವಾಗಿದ್ದು, ಜನಸಂಖ್ಯೆಯೂ ಕೂಡ ಚದುರಿರುತ್ತದೆ. ಒಂದು ಕ್ಷೇತ್ರದಿಂದ ಇನ್ನೊಂದು ಕ್ಷೇತ್ರವನ್ನು ವಿಂಗಡಿಸುವ ಸಂದರ್ಭ ಮತದಾರರು ಬಹಳಷ್ಟು ದೂರ ಕ್ರಮಿಸುವುದು ಅವೈಜ್ಞಾನಿಕ ರೀತಿಯ ಪ್ರಕ್ರಿಯೆಯಾಗಿರುತ್ತದೆ. ಭೌಗೋಳಿಕ ಹಿನ್ನೆಲೆಯಲ್ಲಿ ಈ ಹಿಂದೆ ಇದ್ದ 29 ಕ್ಷೇತ್ರಗಳನ್ನು ಪರಿಷ್ಕರಿಸುವ ಸಂದರ್ಭ ಕನಿಷ್ಟ 5 ಸ್ಥಾನಗಳನ್ನು ಹೆಚ್ಚುವರಿ ಮಾಡಿ ಒಟ್ಟು 34 ಕ್ಷೇತ್ರವನ್ನು ಮಾಡಬೇಕೆಂಬ ಜಿಲ್ಲೆಯ ಜನತೆಯ ಬೇಡಿಕೆಯನ್ನು ಪರಿಗಣಿಸದೇ ಇದ್ದು 29…

Read More

ಮಡಿಕೇರಿ ಜ.16 :  ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ  ಆಂತರಿಕ ಗುಣಮಟ್ಟ ಭರವಸಾ ಕೋಶ , ಎನ್.ಎಸ್.ಎಸ್ ಘಟಕ , ರಾಜ್ಯಶಾಸ್ತ್ರ ವಿಭಾಗ ಹಾಗೂ ಉಡುಪಿ  ಡಿವೈನ್ ಪಾರ್ಕ್ ಟ್ರಸ್ಟ್ , ವಿವೇಕ ಜಾಗೃತ ಬಳಗ ಇವರ ಸಂಯುಕ್ತ ಆಶ್ರಯದಲ್ಲಿ  ‘ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ‘ ರಾಷ್ಟ್ರೀಯ ಯುವ ದಿನ ‘ ಹಾಗೂ ‘ ಯುವ ಸಪ್ತಾಹದ ‘ಪ್ರಯುಕ್ತ ವಿದ್ಯಾರ್ಥಿಗಳಿಗೆ ‘ಕಿವಿಮಾತು’  ವಿಶೇಷ ಉಪನ್ಯಾಸ  ಕಾರ್ಯಕ್ರಮ ನಡೆಯಿತು. ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ತುಮಕೂರಿನ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ನಿವೃತ್ತ  ಉಪನ್ಯಾಸಕರು ಹಾಗೂ ಡಿವೈನ್ ಪಾರ್ಕ್ ಟ್ರಸ್ಟನ H2 ಅಧಿಕಾರಿ ಪದ್ಮಲತಾ ರಾವ್ ಮಾತನಾಡಿ, ” ದೇಶ ಭಕ್ತ ಸಂತ ಎಂದು ಹೆಮ್ಮೆಯಿಂದ ಕರೆಸಿ ಕೊಳ್ಳುವ ಸ್ವಾಮಿ ವಿವೇಕಾನಂದರ ಜೀವನ , ಆದರ್ಶಗಳು , ಯುವ ಜನಾಂಗದ ಬೆಳವಣಿಗೆ, ವಿದ್ಯಾರ್ಥಿಗಳ ಕಲಿಕೆ, ಏಕಾಗ್ರತೆ, ವೈಚಾರಿಕತೆಗಳಿಗೆ ವಿವೇಕವಾಣಿ, ವಿವೇಕ ಸಂದೇಶಗಳ…

Read More

ಮಡಿಕೇರಿ ಜ.16 : ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಈರಳೆವಳಮುಡಿ ಶಾಖೆಯ ವಾಯುಪುತ್ರ ಭವನದಲ್ಲಿ “ಶ್ರೀಪಂಚಮುಖಿ ವಾಯುಪುತ್ರ” ಮೂರ್ತಿಯನ್ನು ಅನಾವರಣಗೊಳಿಸಲಾಯಿತು. ಸುಮಾರು 9 ಅಡಿ ಎತ್ತರದ ಆಂಜನೇಯನಿಗೆ ಮಕ್ಕಳಿಂದ ಅಭಿಷೇಕ ಮತ್ತು ಅರ್ಚಕರಿಂದ ವಿಶೇಷ ಪೂಜೆ, ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆ ನಡೆದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಶೈಕ್ಷಣಿಕ ಪ್ರಗತಿಗೆ ಊರಿನಲ್ಲಿ ಜ್ಞಾನದೇಗುಲವಿರಬೇಕು, ಅದೇ ರೀತಿ ಊರು ಸುಭಿಕ್ಷವಾಗಿರಲು ದೇವಾಲಯಗಳಿರಬೇಕು ಎಂದರು. ಒಗ್ಗಟ್ಟಿನ ಬಲದಿಂದ ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘ ಅಭ್ಯುದಯವನ್ನು ಸಾಧಿಸುತ್ತಿದೆ. ಸಂಘದ ಮೂಲಕ ದೇವರ ಮೂರ್ತಿಗಳನ್ನು ಸ್ಥಾಪಿಸಿ ಶ್ರದ್ಧೆ ಮತ್ತು ಭಕ್ತಿಗೆ ಆದ್ಯತೆ ನೀಡುತ್ತಿರುವುದು ಶ್ಲಾಘನೀಯವೆಂದರು. ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಪಿ.ಕೃಷ್ಣಮೂರ್ತಿ ಮಾತನಾಡಿ ಉತ್ತಮ ಕಾರ್ಯಗಳ ಮೂಲಕ ಮನುಷ್ಯ ಜನ್ಮವನ್ನು ಸಾರ್ಥಕ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು. “ಶ್ರೀ ಪಂಚಮುಖಿ ವಾಯುಪುತ್ರ” ಮೂರ್ತಿಯನ್ನು ಕೆತ್ತಿದ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಲ್ಪಿ ಕಾರ್ಕಳದ ಗುಣವಂತೇಶ್ವರ ಭಟ್…

Read More