ವಿರಾಜಪೇಟೆ ಜ.23 NEWS DESK : ಕುಶಾಲನಗರದ ರೈತಭವನದಲ್ಲಿ ನಡೆದಲ್ಲಿ ನಡೆದ ರಾಜ್ಯ ಮಟ್ಟದ 4ನೇ ಅಬಾಕಸ್ ಮತ್ತು ಕ್ಯಾಲಿಗ್ರಫಿ ಸ್ಪರ್ಧೆಯಲ್ಲಿ ರೋಟರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ರೋಟರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಚಿರಂತ್, ಚರಣ್, ಲಿಥಿನ್ ಮತ್ತು ಯದುನಂದನ್ (7ನೇ ತರಗತಿ), ರಕ್ಷಿತಾ (5ನೇ ತರಗತಿ), ಮತ್ತು ಫಾದಿಲ್ ಮತ್ತು ರಕ್ಷಕ್ (4ನೇ ತರಗತಿ) ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಚಿರಂತ್ ಅಬಾಕಸ್ ಹಾಗೂ ಕ್ಯಾಲಿಗ್ರಫಿ ಎರಡರಲ್ಲೂ ಪ್ರಥಮ ಬಹುಮಾನವನ್ನು ಮತ್ತು ಯದುನಂದನ್ ಅಬಾಕಸ್ನಲ್ಲಿ ತೃತೀಯ ಹಾಗೂ ಕ್ಯಾಲಿಗ್ರಫಿಯಲ್ಲಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.
ಲೇಖಕ: admin
ಮಡಿಕೇರಿ ನ.23 NEWS DESK : ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಜಿಲ್ಲಾ ಪೊಲೀಸ್ ಕಚೇರಿಯ ಆವರಣದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯವರಿಗೆ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಹುಬ್ಬಳ್ಳಿ ನ.23 NEWS DESK : ಹುಬ್ಬಳ್ಳಿಯ ಮರಾಠಗಲ್ಲಿಯಲ್ಲಿರುವ ಮೆಟ್ರೋ ಮಾಲ್ನಲ್ಲಿ ತಡರಾತ್ರಿ ಭಾರೀ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ-ಪಾಸ್ತಿಗೆ ಹಾನಿಯಾಗಿದೆ. ಗುರುವಾರ ತಡರಾತ್ರಿ ಮೂರು ಅಂತಸ್ತಿನ ಈ ವಾಣಿಜ್ಯ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮಾಹಿತಿಯ ಪ್ರಕಾರ, ತಡರಾತ್ರಿ ವಿದ್ಯುತ್ ಹೋಗಿ ಮತ್ತೆ ಬಂದ ಕೆಲವೇ ಸಮಯದೊಳಗೆ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಶಾರ್ಟ್ ಸರ್ಕ್ಯೂಟ್ ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ಮಾಲ್ನೊಳಗೆ ಇದ್ದ ಬಟ್ಟೆ ಅಂಗಡಿಗಳು, ಶೂ ಮತ್ತು ಚಪ್ಪಲಿ ಸೇರಿದಂತೆ ವಿವಿಧ ವಸ್ತುಗಳ ಅಂಗಡಿಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಘಟನೆ ನಡೆದ ಸಮಯದಲ್ಲಿ ಮಾಲ್ನಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ದಳ ಹಾಗೂ ಪೊಲೀಸ್ ಇಲಾಖೆ ಸಂಯುಕ್ತವಾಗಿ ಪ್ರಾಥಮಿಕ ತನಿಖೆ ಕೈಗೊಂಡಿವೆ.
ಬೆಂಗಳೂರು ನ.23 NEWS DESK : ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ಮರುಪ್ರತಿಷ್ಠಾಪನೆ ಮಾಡಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿ, ನೇತಾಜಿ ಅವರ ಜನ್ಮದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ವಂದಿಸಿದರು. ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಜ.23 : ದಕ್ಷಿಣ ಕೊಡಗಿನ ವಿವಿಧೆಡೆ ಹುಲಿ ಉಪಟಳ ವ್ಯಾಪಕವಾಗಿದೆ. ಗೋಣಿಕೊಪ್ಪ ಮತ್ತು ತಿತಿಮತಿ ಭಾಗದ ಹೆದ್ದಾರಿಯಲ್ಲಿ ಹುಲಿ ಸಂಚರಿಸುತ್ತಿರುವ ದೃಶ್ಯ ಸೆರೆಯಾಗಿದ್ದು, ಗ್ರಾಮಸ್ಥರು ಹಾಗೂ ವಾಹನ ಚಾಲಕರು ಆತಂಕಗೊಂಡಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಹುಲಿ ಸಂಚಾರದ ಕುರಿತು ಅರಣ್ಯ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ತಕ್ಷಣ ಕೂಂಬಿಂಗ್ ಕಾರ್ಯಾಚರಣೆ ನಡೆಸಿ ಹುಲಿ ಸೆರೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಅವರು ಮನವಿ ಮಾಡಿದ್ದಾರೆ. ದಕ್ಷಿಣ ಕೊಡಗಿನ ಗ್ರಾಮೀಣ ಭಾಗದಲ್ಲಿ ನಿರಂತರ ಹುಲಿ ದಾಳಿಯಿಂದ ಹಸುಗಳು ಬಲಿಯಾಗುತ್ತಿವೆ. ಕಾಡಾನೆಗಳು ಕೂಡ ಉಪಟಳ ನೀಡುತ್ತಿದ್ದು, ಗ್ರಾಮಸ್ಥರು ಆತಂಕದಿಂದಲೇ ದಿನ ದೂಡುತ್ತಿದ್ದಾರೆ. ಸರಕಾರ ಹಾಗೂ ಅರಣ್ಯ ಇಲಾಖೆ ವನ್ಯಜೀವಿ ಉಪಟಳದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಒತ್ತಾಯಿಸಿವೆ.
ಮಡಿಕೇರಿ ನ.23 NEWS DESK : ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ, ಸೈಬರ್ ಅಪರಾಧ ಹಾಗೂ ಸಂಚಾರ ಸುರಕ್ಷತೆ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಸೋಮವಾರಪೇಟೆ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಸೋಮವಾರಪೇಟೆಯ ಸಂತ ಜೋಸೆಫರ ಪಿಯು ಕಾಲೇಜು ಮತ್ತು ನೇರುಗಳಲೆ ಗ್ರಾಮದ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯದ ಪರಿಣಾಮ, ರಸ್ತೆ ಮತ್ತು ಸಂಚಾರ ಸುರಕ್ಷತೆ, ಪೋಕ್ಸೋ ಕಾಯ್ದೆ, ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಿದರು. ಕುಟ್ಟ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಕುಟ್ಟ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ರಸ್ತೆ ಸುರಕ್ಷತೆ, ಮಕ್ಕಳ ಮೇಲಿನ ದೌರ್ಜನ್ಯ ಕಾಯ್ದೆ ಮತ್ತು ಮಾದಕ ದ್ರವ್ಯ ಬಳಕೆಯಿಂದಾಗುವ ಪರಿಣಾಮಗಳು, ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಿದರು. ಗರ್ವಾಲೆ ಗ್ರಾಮ ಪಂಚಾಯಿತಿಯಲ್ಲಿ ನಡೆದ ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ…
ಮಡಿಕೇರಿ ನ.23 NEWS DESK : ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಮಡಿಕೇರಿಯ ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ, ಮಾದಕ ವಸ್ತು, ಬಾಲ್ಯ ವಿವಾಹ, ಅಕ್ಕ ಪಡೆ ಮುಂತಾದ ವಿಷಯಗಳ ಬಗ್ಗೆ ಕಾನೂನು ಅರಿವು ಮೂಡಿಸಿದರು.
ಮಡಿಕೇರಿ ನ.23 NEWS DESK : ನಕ್ಸಲ್ ನಿಗ್ರಹದಳ ಕುಟ್ಟ, ಮಕ್ಕಳ ವಿಶೇಷ ಪೊಲೀಸ್ ಘಟಕ, ಅಕ್ಕಪಡೆ, ಕುಟ್ಟ ಪೊಲೀಸ್ ಠಾಣೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದಲ್ಲಿ ನಾಣಚ್ಚಿ ಹಾಡಿ, ನಾಗರಹೊಳೆ ಬಾಳೆ ಕೋವು ಹಾಡಿ, ಸಿಂಕೋನ ಕಾಲೋನಿ ಹಾಡಿ ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಪೋಕ್ಸೋ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಮುಂತಾದವುಗಳ ಬಗ್ಗೆ ಕಾನೂನು ಅರಿವು ಮೂಡಿಸಲಾಯಿತು.
ಬೆಂಗಳೂರು ನ.23 NEWS DESK : ಬೀದರ್ ನಲ್ಲಿ ನಡೆಯಲಿರುವ ಪತ್ರಕರ್ತರ 40ನೇ ರಾಜ್ಯ ಸಮ್ಮೇಳನದ ಲೋಗೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆಗೊಳಿಸಿ, ಶುಭ ಕೋರಿದರು. ಸಚಿವರಾದ ಈಶ್ವರ್ ಖಂಡ್ರೆ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಸೇರಿದಂತೆ ಸಂಘದ ರಾಜ್ಯ ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಬೆಂಗಳೂರು ಜ.23 NEWS DESK : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರವನ್ನು 2026ರ ಜ.26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಲ್ಲಿ ಆಯೋಜಿಸುವ ಭಾರತ ಪರ್ವ ದಲ್ಲಿ ಕರ್ನಾಟಕವು ಪ್ರದರ್ಶಿಸುತ್ತಿದೆ. ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟ್ಯಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸುತ್ತಲೇ ಸಾಗಿದೆ. ಈ ಬಾರಿ ಕೃಷಿ, ಶಿಕ್ಷಣ, ವಿಜ್ಞಾನ, ಉನ್ನತ ತಂತ್ರಜ್ಞಾನ ಹಾಗೂ ಮೈಕ್ರೋಚಿಪ್ಗಳ ಉತ್ಪಾದನೆಯಲ್ಲಿ ಸಾಧಿಸಿರುವ ಸಮತೋಲನಯುತ ಪ್ರಗತಿಯನ್ನು ಸ್ತಬ್ಧಚಿತ್ರದಲ್ಲಿ ತೋರಿಸಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ…






