ಸೋಮವಾರಪೇಟೆ ಡಿ.2 NEWS DESK : ಹನುಮ ಜಯಂತಿ ಅಂಗವಾಗಿ ಪಟ್ಟಣದ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು. ದೇವಾಲಯದ ಪ್ರದಾನ ಅರ್ಚಕ ಶ್ರೀ ನಂಜುಂಡೇಶ್ವರ ಅವರ ಪುರೋಹಿತ್ವದಲ್ಲಿ ಬೆಳಿಗ್ಗೆ ಪಂಚಾಮೃತ ಅಭಿಷೇಕ, ಅರ್ಚನೆ ನಡೆಯಿತು. ನಂತರ ಅರ್ಚಕ ಶ್ರೀ ಉಡುಪ ಮತ್ತು ತಂಡದವರಿಂದ ಮಾರುತಿ ಹೋಮ, ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನೆರವೇರಿತು. ನೂರಾರು ಭಕ್ತರು ಪೂಜೆಯಲ್ಲಿ ಪಾಲ್ಗೊಂಡಿದ್ದರು. ದೇವಾಲಯ ಸಮಿತಿ ಅಧ್ಯಕ್ಷ ಸಿ.ಪಿ.ಗೋಪಾಲ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್.ಎಲ್.ಸೀತಾರಾಂ, ಸಮಿತಿ ಕಾರ್ಯದರ್ಶಿ ನಂದಕುಮಾರ್, ಸದಸ್ಯರುಗಳಾದ ರಾಘವ, ಸುರೇಶ್, ಹಾಲಪ್ಪ, ಗಣೇಶ್ ಹಾಗೂ ಮುಂತಾದವರು ಹಾಜರಿದ್ದರು.
ಲೇಖಕ: admin
ಬೆಂಗಳೂರು ಡಿ.2 NEWS DESK : ಉತ್ತಮ ತರಬೇತಿ, ತರಬೇತುದಾರರು ಹಾಗೂ ಸೌಲಭ್ಯಗಳಿದ್ದರೆ ಒಲಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವುದು ಕಷ್ಟವೇನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಯುವನಿಕ ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ 2022 ಮತ್ತು 2023ರ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಹಾಗೂ 2023ರ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕ್ರೀಡಾಪಟುಗಳು ತಮ್ಮ ಗುರಿಸಾಧನೆಗೆ ಹಗಲಿರುಳು ಶ್ರಮಿಸಬೇಕು. ಏಳು ಕೋಟಿ ಕನ್ನಡಿಗರಿರುವ ಕರ್ನಾಟಕದಿಂದ ಪದಕ ಗೆಲ್ಲುವುದು ಅಸಾಧ್ಯವೇನಲ್ಲ. ಕ್ರೀಡೆಗಳ ಅಭಿವೃದ್ಧಿ ಹಾಗೂ ಕ್ರೀಡಾಪಟುಗಳ ಪ್ರೋತ್ಸಾಹಕ್ಕಾಗಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಒಲಂಪಿಕ್ಸ್ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ನಗದು ಬಹುಮಾನ, ಶ್ರೇಣಿ 1 ಅಥವಾ 2 ರಲ್ಲಿ ಸರ್ಕಾರಿ ಉದ್ಯೋಗ, ಬೆಳ್ಳಿ ಪದಕ ವಿಜೇತರಿಗೆ 4 ಕೋಟಿ ರೂ., ಕಂಚು ಪದಕ ವಿಜೇತರಿಗೆ 3 ಕೋಟಿ ರೂ. ನಗದು ಬಹುಮಾನ…
ಬೆಂಗಳೂರು ಡಿ.2 NEWS DESK : ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅಧಿವೇಶನ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಅವರ ನಿವಾಸಕ್ಕೆ ಭೇಟಿ ನೀಡಿದೆ. ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ. ಡಿಸೆಂಬರ್ 8 ರಂದು ಬೆಳಗಾವಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಇಂದು ಚರ್ಚಿಸಲಾಗಿದೆ. ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ ಎಂಬ ಮಾಹಿತಿ ಪತ್ರಿಕೆಗಳಿಂದ ತಿಳಿದು ಬಂದಿದೆ.ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಲಿದೆ. ಕಬ್ಬು, ಮೆಕ್ಕೆಜೋಳದ ಸಮಸ್ಯೆ ಸೇರಿದಂತೆ ರಾಜ್ಯದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಪ್ರಯತ್ನಿಸಲಾಗುವುದು ಎಂದರು. :: ಕಬ್ಬು ಮತ್ತು ಮೆಕ್ಕೆ ಜೋಳ ಖರೀದಿ :: ನಮ್ಮ ಸರ್ಕಾರ ರೈತಪರ ನಿಲುವನ್ನು ಹೊಂದಿದೆ. ಕಬ್ಬು ಬೆಲೆ…
ಮಡಿಕೇರಿ ಡಿ.2 NEWS DESK : ಮಡಿಕೇರಿಯ ಕಲಾವಿದೆ ಚಿತ್ರಾ ರವಿಗೆ ರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೆಸ್ ಕ್ಲಬ್ ಆಫ್ ಇಂಡಿಯಾ ಮತ್ತು ಕರ್ನಾಟಕದ ಸುದ್ದಿ ಪತ್ರಿಕೆಗಳ ಸಂಘದಿಂದ ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಣ್ಯರು ಕಲಾವಿದೆ ಚಿತ್ರಾ ರವಿಗೆ ರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಿದರು.
ಮಡಿಕೇರಿ ಡಿ.2 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸೋಮವಾರಪೇಟೆ ತಾಲ್ಲೂಕಿನ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಐಗೂರು ಗ್ರಾಮದ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘದ ಸಭಾಂಗಣದಲ್ಲಿ ಜಿಲ್ಲಾಧ್ಯಕ್ಷ ಎಂ.ಪಿ ಕೇಶವ ಕಾಮತ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸೋಮವಾರಪೇಟೆ ಕಸಬಾ ಹೋಬಳಿ ಐಗೂರು ಕೇಂದ್ರದಲ್ಲಿ ಊರಿನ ಜನರ, ಸಂಘ-ಸಂಸ್ಥೆಗಳ, ಪಂಚಾಯಿತಿ ಸದಸ್ಯರ ಸಹಕಾರದೊಂದಿಗೆ ತಾಲೂಕು ಸಮ್ಮೇಳನ ನಡೆಸಲು ಸಭೆಯಲ್ಲಿ ಅನುಮತಿ ಪಡೆಯಲಾಯಿತು. ಸಭೆಯಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ ಸಮ್ಮೇಳನದ ರೂಪುರೇಷೆ, ಸ್ವಾಗತ ಸಮಿತಿಯ ಮತ್ತು ಉಪ ಸಮಿತಿಗಳ ವಿವರ ನೀಡಿದರು. ಸಮ್ಮೇಳನವು ಬೆಳಗಿನ ಜಾವ 8 ಗಂಟೆಗೆ ರಾಷ್ಟ್ರಧ್ವಜ ಮತ್ತು ಕನ್ನಡ ಧ್ವಜದ ಆರೋಹಣದೊಂದಿಗೆ ಪ್ರಾರಂಭವಾಗಿ ಸಮ್ಮೇಳನ ಅಧ್ಯಕ್ಷರ ಮೆರವಣಿಗೆ, ಉದ್ಘಾಟನಾ ಸಮಾರಂಭ, ಗೀತ ಗಾಯನ ಕಾರ್ಯಕ್ರಮ, ಕವಿಗೋಷ್ಠಿ, ವಿಚಾರ ಗೋಷ್ಠಿ, ಬಹಿರಂಗ ಅಧಿವೇಶನ, ತಾಲೂಕಿನ ಸಾಧಕರಿಗೆ ಸನ್ಮಾನ, ಸ್ಥಳೀಯ ವಿದ್ಯಾರ್ಥಿಗಳಿಗೆ ಆದ್ಯತೆಯ…
ಮಂಗಳೂರು ಡಿ.2 NEWS DESK : ಭಾರತದ ಅತಿದೊಡ್ಡ ಮತ್ತು ಅತ್ಯಂತ ಜನಪ್ರಿಯ ಸೈಕಲ್ ಪ್ರವಾಸವಾದ ಟೂರ್ ಆಫ್ ನೀಲಗಿರೀಸ್ನ 16ನೇ ಆವೃತ್ತಿ ಈ ಬಾರಿ ಮಂಗಳೂರಿನಿಂದ ಆರಂಭವಾಗಲಿದೆ. ಡಿ.14 ರಿಂದ 20ರವರೆಗೆ ನಡೆಯುವ ಈ ಯಾತ್ರೆಯಲ್ಲಿ 110 ಸೈಕ್ಲಿಸ್ಟ್ಗಳು ಕರ್ನಾಟಕ, ಕೇರಳ ಮತ್ತು ತಮಿಳುನಾಡಿನ ರಮಣೀಯ ಪರಿಸರದ ಮೂಲಕ 700ಕ್ಕೂ ಅಧಿಕ ಕಿಲೋಮೀಟರ್ ದೂರ ಸಂಚರಿಸುವರು. ಡಿ.14 ರಂದು ಮಂಗಳೂರಿನ ಸಮ್ಮರ್ ಸ್ಯಾಂಡ್ಸ್ ಬೀಚ್ ರೆಸಾರ್ಟ್ನಿಂದ ಪ್ರಾರಂಭವಾಗುವ ಯಾತ್ರೆಯಲ್ಲಿ ಸೈಕ್ಲಿಸ್ಟ್ಗಳು ವಿರಾಜಪೇಟೆ, ಸುಲ್ತಾನ್ ಬತ್ತೇರಿಯ ಮೂಲಕ 3ನೇ ದಿನ ಉದಕಮಂಡಲಂ (ಊಟಿ) ತಲುಪುತ್ತಾರೆ. ಒಂದು ದಿನದ ವಿಶ್ರಾಂತಿಯ ನಂತರ, 5, 6 ಮತ್ತು 7 ನೇ ದಿನಗಳಲ್ಲಿ ಸೈಕ್ಲಿಸ್ಟ್ಗಳು ಊಟಿಯ ಅದ್ಭುತ ಹೊರವಲಯದಲ್ಲಿ 3 ವಿಭಿನ್ನ ಲೂಪ್ಗಳಲ್ಲಿ ಪೆಡಲ್ ಮಾಡಲಿದ್ದು, ಡಿಸೆಂಬರ್ 20 ರಂದು ಊಟಿಯಲ್ಲಿ ಕೊನೆಗೊಳ್ಳುತ್ತದೆ. ಟಿಎಫ್ಎನ್ನಲ್ಲಿ 9 ಮಹಿಳೆಯರು ಮತ್ತು 18 ವಿದೇಶಿ ಸೈಕ್ಲಿಸ್ಟ್ಗಳು ಸೇರಿದಂತೆ 110 ಭಾಗವಹಿಸುವರು. ಸಮುದ್ರಮಟ್ಟದಿಂದ 13500 ಮೀಟರ್ ಎತ್ತರಕ್ಕೆ ಪ್ರಯಾಣ ಕೈಗೊಳ್ಳುವುದು…
ಮಂಗಳೂರು ಡಿ.2 NEWS DESK : ಜಾತಿ, ಧರ್ಮಗಳ ನಡುವೆ ತಿಕ್ಕಾಟವನ್ನು ಬಿಟ್ಟು ಪರಸ್ಪರ ಸಾಮರಸ್ಯದ ಬದುಕು ನಡೆಸುವ ಶಾಂತಿಯುತ ಸಮಾಜ ನಿರ್ಮಾಣ ಶಿಕ್ಷಣದ ಭಾಗವಾಗಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಡಾ.ದಯಾನಂದ ನಾಯ್ಕ್ ಹೇಳಿದರು. ಅಹ್ಮದಿಯಾ ಮುಸ್ಲಿಂ ಜಮಾಅತ್ ಮಂಗಳೂರು ಘಟಕದ ವತಿಯಿಂದ ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ ಜರುಗಿದ ‘ಜಾಗತಿಕ ಶಾಂತಿ ಸ್ಥಾಪನೆಯಲ್ಲಿ ಶಿಕ್ಷಣದ ಪಾತ್ರ’ ಎಂಬ ವಿಷಯದ ಬಗ್ಗೆ ಮಾತನಾಡಿದ ಅವರು ಪ್ರಸ್ತುತ ವ್ಯವಸ್ಥೆಯಲ್ಲಿ ರಾಜಕೀಯ ಚದುರಂಗದ ಆಟಕ್ಕೆ ಯುವ ಜನಾಂಗ ಬಲಿಯಾಗುತ್ತಿದ್ದು, ದೇಶದಲ್ಲಿನ ಉಗ್ರವಾದ, ರಾಷ್ಟ್ರವಾದವು ಇತರರನ್ನು ಪ್ರೀತಿಯಿಂದ ನೋಡದೆ ರಾಷ್ಟ್ರ, ಸಮುದಾಯ, ಜಾತಿ ಮತ ಧರ್ಮಗಳ ನಡುವೆ ಕಂದಕ ಸೃಷ್ಟಿಯಾಗಿದೆ. ರಾಷ್ಟ್ರ, ಸಮುದಾಯ ಎಂಬುವುದು ಬೇರೆಲ್ಲೂ ಇಲ್ಲ, ಅದು ನಮ್ಮೊಳಗೆ ಇದೆ.’ಈ ಮನಸ್ಸಿನ ಮುಸುರೆ ತೊಳೆಯಬೇಕು, ಗುಸು ಗುಸು ಬಿಡಬೇಕು’ ಎಂಬ ಸಂತರ ನುಡಿಯಂತೆ ಭೇದ ಭಾವ ಮರೆತು ಎಲ್ಲರೂ ಬಾಳುವ ‘ಸರ್ವರಿಗೂ ಸಮಬಾಳು, ಸಮಪಾಲು’ ಎನ್ನುವ ಸಮಾಜ ನಿರ್ಮಿಸಲು ವಿದ್ಯಾರ್ಥಿಗಳು…
ಮಡಿಕೇರಿ ಡಿ.2 NEWS DESK : ನಗರದ ಶ್ರೀ ಓಂಕಾರೇಶ್ವರ ದೇವಾಲಯದ ವತಿಯಿಂದ ಪ್ರತಿ ವರ್ಷವೂ ರೂಢಿ ಸಂಪ್ರದಾಯದಂತೆ ‘ಹುತ್ತರಿ ಹಬ್ಬ’ ಡಿ.4 ರಂದು ರೋಹಿಣಿ ನಕ್ಷತ್ರ ಕರ್ಕಾಟಕ ಲಗ್ನದಲ್ಲಿ ನಡೆಯಲ್ಲಿದ್ದು, ಅಂದು ರಾತ್ರಿ 8.40 ಗಂಟೆಗೆ ನೆರೆ ಕಟ್ಟುವುದು, ರಾತ್ರಿ 9.40 ಗಂಟೆಗೆ ಕದಿರು ಕುಯ್ಯುವುದು ನಂತರ ಪ್ರಸಾದ ವಿತರಣೆ ನಡೆಯಲಿದೆ. ಡಿ.5 ರಂದು ನಗರದ ಕೋಟೆ ಆವರಣದಲ್ಲಿ ಮಧ್ಯಾಹ್ನ 3 ಗಂಟೆಗೆ ‘ಹುತ್ತರಿ ಕೋಲಾಟ’ ನಡೆಯಲಿದೆ. ಸಾರ್ವಜನಿಕ ಭಕ್ತಾಧಿಗಳು ದೇವಾಲಯದಲ್ಲಿ ಜರುಗುವ ಪೂಜೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ವತಿಯಿಂದ ಕೋರಿದೆ.
ಮಡಿಕೇರಿ ಡಿ.2 NEWS DESK : ಕೊಂಡಗೇರಿಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಕಾವೇರಿ ಶಾಲೆಯ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಕ್ಲಸ್ಟರ್ ಮಟ್ಟದಿಂದ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 1 ರಿಂದ 4ನೇ ತರಗತಿಯ ವಿಭಾಗದಲ್ಲಿ ನಾಲ್ಕನೇ ತರಗತಿಯ ವಿದ್ಯಾರ್ಥಿಗಳಾದ ಪಿ.ಎಸ್.ಸಾದ್ವಿಕ, ಸಂಸ್ಕೃತ ಧಾರ್ಮಿಕ ಪಠಣ ಪ್ರಥಮ, ಆಶು ಭಾಷಣ ಕೆ.ಎಸ್.ಯಶ್ವಿತ್ ಪ್ರಥಮ, ಕ್ಲೇ ಮಾಡಲಿಂಗ್ ಸಾತ್ವಿಕ್ ವಿ ದ್ವಿತೀಯ, ಚಿತ್ರಕಲೆ ಕೆ.ಎಸ್.ಶಾರ್ವಿ ದ್ವಿತೀಯ, ಇಂಗ್ಲೀಷ್ ಕಂಠ ಪಾಠ ಮೇವಂಡ ಅಧಿತ್ರಿ ಬೆಳ್ಳಿಯಪ್ಪ ದ್ವಿತೀಯ, ಕನ್ನಡ ಕಂಠಪಾಠ ಜೋಯಾ ಫಾತಿಮಾ ಎಂ.ಹೆಚ್.ದ್ವಿತೀಯ, 3ನೇ ತರಗತಿಯ ವಿದ್ಯಾರ್ಥಿಗಳಾದ ಭವಿತ್ ವಿ.ಎಸ್ ಛದ್ಮ ವೇಷ ದ್ವಿತೀಯ, ಬೇಪಡಿಯಂಡ ವಿಹಾಂಕ ಪೆÇನ್ನಮ್ಮ ತೃತೀಯ, ಅಭಿನಯ ಗೀತೆ ಧಾನ್ವಿ ಪಿ. ಎಸ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. 5 ರಿಂದ 7ನೇ ತರಗತಿ ವಿಭಾಗದಲ್ಲಿ 7ನೇ ತರಗತಿಯ ವಿದ್ಯಾರ್ಥಿಗಳಾದ ಮೇವಂಡ ಯಾನಿ ಬೆಳ್ಳಿಯಪ್ಪ ಇಂಗ್ಲೀಷ್ ಕಂಠಪಾಠ ಪ್ರಥಮ, ಕನ್ನಡ ಕಂಠಪಾಠ ಹೇಮಂತ್ ಆರ್…
ಮಡಿಕೇರಿ ಡಿ.2 NEWS DESK : ಕರ್ನಾಟಕ ಬರಪೀಡಿತ ಜಿಲ್ಲೆಗಳಲ್ಲಿ, ಪರ ಮತ್ತು ಉಷ್ಣತಾಳುವ ಮೆಕ್ಕೆಜೋಳ ಮತ್ತು ಸುಧಾರಿತ ಕೃಷಿ ಪದ್ಧತಿಗಳ ವಿಸ್ತರಣೆ ಕುರಿತು ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹಾಗೂ ತಜ್ಞರ ತಂಡ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿ ಚರ್ಚಿಸಿದರು. ಇದೆ ಸಂದರ್ಭದಲ್ಲಿ ಸಚಿವರೊಂದಿಗೆ ಕ್ಷೇತ್ರಕ್ಕೆ ಸಂಬಂಧಿಸಿದ ಇತರ ವಿಷಯಗಳ ಬಗ್ಗೆ ಚರ್ಚಿಸಲಾಯಿತು.






