ನಾಪೋಕ್ಲು ಮಾ.20 : ಚೆರಿಯಪರಂಬುವಿನ ಜನರಲ್ ಕೆ.ಎಸ್. ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆರಂಭಗೊಂಡಿರುವ ಅಪ್ಪಚೆಟ್ಟೋಳಂಡ ಕುಟುಂಬಸ್ಥರು ಸಾರಥ್ಯ ವಹಿಸಿದ್ದ 23ನೇ ಕೊಡವ ಕೌಟುಂಬಿಕ ಹಾಕಿ ನಮ್ಮೆಯ ಪಂದ್ಯಾವಳಿಯ ಮೊದಲ ದಿನ ವಿವಿಧ ತಂಡಗಳು ಸೆಣೆಸಾಟ ನಡೆಸಿದವು. ಮೂರು ಮೈದಾನಗಳಲ್ಲಿ ನಡೆದ ಪಂದ್ಯಗಳಲ್ಲಿ ಪೆಮ್ಮಡಿಯಂಡ, ಚೊಟ್ಟೆಯಂಡ, ಪುಟ್ಟಿಚಂಡ, ಚೇರಂಡ, ಕಬ್ಬಚ್ಚಿರ, ಅಮ್ಮಂಡ, ಕೊಂಡಿರ ಸೇರಿದಂತೆ ವಿವಿಧ ತಂಡಗಳು ಗೆಲುವು ಸಾಧಿಸಿದವು. ಮೈದಾನ ಒಂದರಲ್ಲಿ ನಡೆದ ಮೊದಲ ಪಂದ್ಯದಲ್ಲಿ ಪೆಮ್ಮಡಿಯಂಡ ಮತ್ತು ಮಚ್ಚುರ ತಂಡಗಳು ಸೆಣೆಸಾಟ ನಡೆಸಿದವು. ಪೆಮ್ಮಡಿಯಂಡ ತಂಡ ನಾಲ್ಕು ಗೋಲು ಗಳಿಸಿದರೆ ಮಚ್ಚುರತಂಡ ಮೂರು ಗೋಲು ಗಳಿಸಿ ಸೋಲನ್ನನುಭವಿಸಿತು. ಎರಡನೇ ಪಂದ್ಯದಲ್ಲಿ ಕಾಂಡಂಡ ಮತ್ತು ಪುಟ್ಟಿಚಂಡ ತಂಡಗಳು ಸೆಣೆಸಾಡಿದವು ಪುಟ್ಟಿಚಂಡ ತಂಡ ಒಂದು ಗೋಲು ಗಳಿಸಿದರೆ ಕಾಂಡಂಡ ತಂಡ ಯಾವುದೇ ಗೋಲುಗಳಿಸಲಿಲ್ಲ. ಮೂರನೇ ಪಂದ್ಯದಲ್ಲಿ ಚೇರಂಡ ತಂಡ ಎರಡು ಗೋಲು ಗಳಿಸಿದರೆ ಅಲ್ಲಾರಂಡ ತಂಡ ಯಾವುದೇ ಗೋಲು ಗಳಿಸಲು ಶಕ್ತವಾಗಲಿಲ್ಲ. ಐದನೇ ಪಂದ್ಯದಲ್ಲಿ ಕಬ್ಬಚ್ಚಿರ ತಂಡ ಗೆಲುವು ಸಾಧಿಸಿತು. ಮೇಚಿಯಂಡ ತಂಡದ ವಿರುದ್ದ…
ಲೇಖಕ: admin
ಮಡಿಕೇರಿ ಮಾ.20 : ಅಹ್ಮದಿಯಾ ಮುಸ್ಲಿಮ್ ಜಮಾಅತ್ ನ ಯುವ ವಿಭಾಗವಾದ ಮಜ್ಲಿಸ್ ಖುದ್ದಾಮುಲ್ ಅಹ್ಮದಿಯಾ ವತಿಯಿಂದ ಕರ್ನಾಟಕದಾದ್ಯಂತ ನಡೆಯುತ್ತಿರುವ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಮಡಿಕೇರಿಯ ಸಂಪಿಗೆ ಕಟ್ಟೆಯಿಂದ ರಾಜೇಶ್ವರಿ ಶಾಲೆಯವರೆಗೆ ಸ್ವಚ್ಛತಾ ಕಾರ್ಯ ನಡೆಯಿತು. ಯುವ ಅಧ್ಯಕ್ಷ ಹದ್ಸರ್ ಅಹ್ಮದ್ ನೇತೃತ್ವದಲ್ಲಿ ಯುವ ವಿಭಾಗದ ಸದಸ್ಯರು ಹಾಗೂ ಪದಾಧಿಕಾರಿಗಳು ರಸ್ತೆ ಬದಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಸೇರಿದಂತೆ ಇತ್ಯಾದಿ ತ್ಯಾಜ್ಯಗಳನ್ನು ಸ್ವಚ್ಛಗೊಳಿಸಿ ಸಂಗ್ರಹಿಸಿದ ಕಸವನ್ನು ನಗರಸಭಾ ಸದಸ್ಯರಾದ ಮನ್ಸೂರ್ ಅವರ ಸಮ್ಮುಖದಲ್ಲಿ ನಗರ ಸಭಾ ವಾಹನಕ್ಕೆ ನೀಡಲಾಯಿತು. ಈ ಸಂದರ್ಭ ಅಹ್ಮದಿಯಾ ಮುಸ್ಲಿಮ್ ಜಮಾಅತಿನ ಅಧ್ಯಕ್ಷ ಜಿ.ಎಂ.ಮೊಹಮ್ಮದ್ ಶರೀಫ್, ಖಾಲಿದ್ ಹಾಗೂ ಯುವ ವಿಭಾಗದ ಇತರ ಪದಾಧಿಕಾರಿಗಳು ಹಾಜರಿದ್ದರು.
ನಾಪೋಕ್ಲು ಮಾ.20 : ನಾಪೋಕ್ಲು ಗ್ರಾ.ಪಂ ವ್ಯಾಪ್ತಿಯ ಬೇತು ಗ್ರಾಮದಲ್ಲಿ ಸರ್ಕಾರದ ಮಳೆ ಪರಿಹಾರ ನಿಧಿ ಯೋಜನೆಯಡಿಯಲ್ಲಿ ನಿರ್ಮಿಸಲಾಗುತ್ತಿರುವ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗ್ರಾ.ಪಂ ಅಧ್ಯಕ್ಷೆ ಎಚ್.ಎಸ್ ಪಾರ್ವತಿ ಚಾಲನೆ ನೀಡಿದರು. ನಾಪೋಕ್ಲು -ಮಡಿಕೇರಿ ಮುಖ್ಯರಸ್ತೆಯ ತೋಟಗಾರಿಕಾ ಕ್ಷೇತ್ರದದಿಂದ 5.16 ಲಕ್ಷರೂ ವೆಚ್ಚದಲ್ಲಿ ಬೇತು ಗ್ರಾಮಕ್ಕೆ ಸಂಪರ್ಕಕಲ್ಪಿಸುವ ರಸ್ತೆ, ಬೇತಗ್ರಾಮದ ಕೊಂಡೀರ ಕುಟುಂಬಸ್ಥರ ಐನ್ ಮನೆಗೆ 1.88 ಲಕ್ಷದ ಕಾಂಕ್ರೆಟ್ ರಸ್ತೆ ಹಾಗೂ 2.36 ಲಕ್ಷ ರೂ ವೆಚ್ಚದಲ್ಲಿ ಬೇತು ಗ್ರಾಮದಿಂದ ಬಲಮುರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಕ್ಕಿ ಕಡವು ರಸ್ತೆ ಸೇರಿ ಒಟ್ಟು 9.4 ಲಕ್ಷರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಸ್ತೆ ಮರುಡಾಂಬರೀಕರಣ ಹಾಗೂ ಕಾಂಕ್ರೆಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು. ಗ್ರಾಮಸ್ಥರಾದ ಕೊಂಡೀರ ರಾಜಪ್ಪಮಾತನಾಡಿ, ನಮ್ಮ ಗ್ರಾಮದ ವಿವಿಧ ರಸ್ತೆಕಾಮಗಾರಿಗೆ ಚಾಲನೆ ನೀಡಿರುವುದು ಸಂತಸ ತಂದಿದೆ. ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಿಕೊಡುವಂತೆ ಮನವಿ ಮಾಡಿದರು. ಈ ಸಂದರ್ಭ ಗ್ರಾ.ಪಂ ಸದಸ್ಯರಾದ ಕಾಳೆಯಂಡ ಸಾಬಾ ತಿಮ್ಮಯ್ಯ, ಕೆ.ಎ.ಇಸ್ಮಾಯಿಲ್, ಮಾಚೇಟ್ಟಿರ ಕುಶು ಕುಶಾಲಪ್ಪ,…
ನಾಪೋಕ್ಲು ಮಾ.20 : ಚೆರಿಯಪರಂಬು ಮುಹಿಯದ್ದೀನ್ ಜುಮಾ ಮಸೀದಿಯ 2023-24 ನೇ ಸಾಲಿನ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಪರವಂಡ ಝುಬೈರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಪಿ.ಎ ಸಿರಾಜುದ್ದೀನ್, ಉಪಾಧ್ಯಕ್ಷರಾಗಿ ಪಿ. ಎ.ಹಾರಿಸ್, ಸಹ ಕಾರ್ಯದರ್ಶಿಯಾಗಿ ಕೆ.ಎ.ಹಾರಿಸ್, ಕೆ.ಎ.ಮಾಹಿನ್, ಕೋಶಾಧಿಕಾರಿಯಾಗಿ ಪಿ.ಹೆಚ್.ಬಶೀರ್, ಸಮಿತಿ ಸದಸ್ಯರಾಗಿ ಪಿ.ಐ.ರಫೀಕ್ ಸಖಾಫಿ, ಅಶ್ರಫ್ ಪಿ.ಎಂ, ಅಬ್ದುಲ್ ರಹ್ಮಾನ್, ಪಿ.ಎ.ಹಾಶಿಮ್ , ಎಂ.ಎಸ್.ಹುಸೈನ್, ಎನ್.ಎ .ಅಶ್ರಫ್ , ಎಂ.ಎ.ಸಲಾಂ , ವಿ.ಎ.ನಝೀರ್ ಇವರುಗಳನ್ನು ಚೆರಿಯಪರಂಬುವಿನ ಮದರಸ ಸಭಾಂಗಣದಲ್ಲಿ ನಡೆದ ಜಮಾಅತ್ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆಮಾಡಲಾಯಿತು. ವರದಿ :ಝಕರಿಯ ನಾಪೋಕ್ಲು
ಮಡಿಕೇರಿ ಮಾ.19 : ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭಾರತೀಯ ಸೇನಾ ದಕ್ಷಿಣ ವಲಯದ (ಸದರನ್ ಆರ್ಮಿ ಕಮಾಂಡ್) ಮುಖ್ಯಸ್ಥರಾದ ಲೆಫ್ಟಿನೆಂಟ್ ಜನರಲ್ ಎ.ಕೆ. ಸಿಂಗ್ ಅವರು ಭಾನುವಾರ ಭೇಟಿ ನೀಡಿ, ವೀಕ್ಷಿಸಿದರು. ಜನರಲ್ ತಿಮ್ಮಯ್ಯ ಅವರ ಬಾಲ್ಯದ ಜೀವನ, ಶಿಕ್ಷಣ, ರಾಷ್ಟ್ರ ಮತ್ತು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸೇನಾ ಕ್ಷೇತ್ರದಲ್ಲಿನ ಸಾಧನೆ ಮತ್ತಿತರ ಬಗ್ಗೆ ಮಾಹಿತಿ ಪಡೆದರು. ಜನರಲ್ ತಿಮ್ಮಯ್ಯ ಅವರು ಭಾರತೀಯ ಸೇನಾ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡಿದ್ದು, ಜನರಲ್ ತಿಮ್ಮಯ್ಯ ಅವರನ್ನು ಸದಾ ಸ್ಮರಿಸಬೇಕಿದೆ ಎಂದರು. ಮೇಜರ್ ಜನರಲ್ ಪ್ರೀತ್ ಪಾಲ್ ಸಿಂಗ್ ಇತರರು ಇದ್ದರು. ಮೇಜರ್ (ನಿವೃತ್ತ) ಬಿದ್ದಂಡ ನಂಜಪ್ಪ ಅವರು ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಬಾಲ್ಯ ಜೀವನ, ರಾಷ್ಟ್ರ ಮತ್ತು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಜನರಲ್ ತಿಮ್ಮಯ್ಯ ಅವರ ಸೇನಾ ಕ್ಷೇತ್ರದಲ್ಲಿನ ಸಾಧನೆ ಮತ್ತಿತರ ಮಾಹಿತಿಯನ್ನು ಸವಿವರವಾಗಿ ವಿವರಿಸಿದರು. ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಮೇಜರ್ (ನಿವೃತ್ತ) ಡಾ.ಬಾಲಸುಬ್ರಮಣ್ಯಂ, ಕನ್ನಡ ಮತ್ತು…
ಮಡಿಕೇರಿ ಮಾ.19 : ಭಾರತೀಯ ಜನತಾ ಪಾರ್ಟಿಯ ಸಿದ್ದಾಪುರ ಶಕ್ತಿ ಕೇಂದ್ರದ ವತಿಯಿಂದ ಇಂದು ಸಿದ್ದಾಪುರದಲ್ಲಿ “ಮಹಾಶಕ್ತಿ ಸಂಗಮ” ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಪಕ್ಷಕ್ಕಾಗಿ ದುಡಿದ ಹಿರಿಯರನ್ನು ಸನ್ಮಾನಿಸಲಾಯಿತು.ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್ ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ಮಾ.19 : ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶನಿವಾರಸಂತೆಯ ಕೊಡ್ಲಿಪೇಟೆ ಸಮೀಪದ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ. ಖಾಸಗಿ ಬಸ್ ಚಾಲಕ ಜಿತೇಂದ್ರ ಹಾಗೂ ಅಕ್ಷತಾ ದಂಪತಿಯ ಪುತ್ರಿ ವೈಷ್ಣವಿ (12) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಸೋಮವಾರಪೇಟೆಯ ಖಾಸಗಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣಿಗೆ ಶರಣಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಮಡಿಕೇರಿ ಮಾ.19 : ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ವಾರ್ಡಿನ ನಿವಾಸಿಗಳು ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಶೀಘ್ರ ರಸ್ತೆಯನ್ನು ಅಭಿವೃದ್ಧಿ ಪಡಿಸದಿದ್ದಲ್ಲಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ವಾರ್ಡ್ನಲ್ಲಿ 25 ಕ್ಕೂ ಅಧಿಕ ಮನೆಗಳಿದ್ದು, 150 ಮತದಾರರು ಇದ್ದಾರೆ. ಹೊಂಡ, ಗುಂಡಿಗಳ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಸಂಚರಿಸಲು ಕಷ್ಟ ಪಡಬೇಕಾಗಿದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ವೃದ್ಧರು ಮೂರು ಕಿ.ಮೀ ದೂರ ಕಷ್ಟಪಟ್ಟು ನಡೆದುಕೊಂಡೇ ಹೋಗಬೇಕಾಗಿದೆ. ವಿನಾಕಾರಣ ರಸ್ತೆ ದುರಸ್ತಿ ಪಡಿಸದೆ ನಿರ್ಲಕ್ಷಿಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದರು. ಪ್ರತಿಭಟನೆ ಮೂಲಕ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದೇವೆ ಎಂದು ಗ್ರಾಮಸ್ಥರಾದ ಸೌಮ್ಯ ಹಾಗೂ ಅವಿನಾಶ್ ಅಸಮಾಧಾನ ವ್ಯಕ್ತಪಡಿಸಿದರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಸಿ.ಜಗನ್ನಾಥ್ ಮಾತನಾಡಿ ಈಗಾಗಲೇ ರೂ.5 ಲಕ್ಷ ಅನುದಾನ ಬಿಡುಗಡೆಯಾಗಿದೆ. ಪಂಚಾಯಿತಿ ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯಡಿ 2ಲಕ್ಷ ರೂ. ನೀಡಲಾಗುತ್ತದೆ. ಸೋಮವಾರ ಗ್ರಾಮಸ್ಥರ ನಿಯೋಗದೊಂದಿಗೆ ಕುಶಾಲನಗರದಲ್ಲಿರುವ…
ಮಡಿಕೇರಿ ಮಾ.19 : ತೊಟ್ಟಿಲ್ಲ ತೂಗುವ ಕೈಗಳು ದೇಶವನ್ನು ಆಳಬಲ್ಲವು ಎಂಬುವುದನ್ನು ಮಹಿಳೆಯರು ಈಗಾಗಲೇ ಸಾಬೀತುಪಡಿಸಿದ್ದು, ಉತ್ತಮ ನಾಗರಿಕ ಸಮಾಜದ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ದೊಡ್ಡದಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದ್ದಾರೆ. ಸೋಮವಾರಪೇಟೆ ತಾಲ್ಲೂಕು ಪ್ರಾಥಮಿಕ ಹಾಗೂ ಪೌಢಶಾಲಾ ಶಿಕ್ಷಕರ ಸಂಘದ ವತಿಯಿಂದ ಮಾನಸ ಹಾಲ್ ನಲ್ಲಿ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ’ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಿತ್ತೂರುರಾಣಿ ಚನ್ನಮ್ಮ, ಝಾನ್ಸಿರಾಣಿ ಲಕ್ಷ್ಮೀಬಾಯಿ, ಬೆಳವಡಿ ಮಲ್ಲಮ್ಮ, ಒನಕೆ ಒಬವ್ವ ಇಂತಹ ವೀರವನಿತೆಯರ ಹೋರಾಟದ ಬಗ್ಗೆ ನಾವೆಲ್ಲ ಓದಿದ್ದೇವೆ. ದಿ.ಇಂದಿರಾಗಾಂಧಿಯವರು ಪ್ರಧಾನಿ ಸ್ಥಾನವನ್ನು ನಿಭಾಯಿಸಿದ್ದಾರೆ. ಬಾಹ್ಯಕಾಶದಲ್ಲೂ ಅನೇಕ ಮಹಿಳೆಯರು ಸಾಧನೆ ಮಾಡಿದ್ದಾರೆ. ಈಗ ಐಎಎಸ್, ಐಪಿಎಸ್, ಐಎಫ್ಎಸ್, ಐಆರ್ಎಸ್ ಪರೀಕ್ಷೆಯನ್ನು ಅತೀ ಹೆಚ್ಚು ಮಹಿಳೆಯರು ಉತ್ತೀರ್ಣರಾಗಿ ಉನ್ನತಹುದ್ದೆ ಅಲಂಕರಿಸಿದ್ದಾರೆ. ನಮ್ಮ ದೇಶದಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಸಮಾನವಾದ ಹಕ್ಕುಗಳಿದ್ದು, ಪ್ರತಿಯೊಬ್ಬರು ಮಹಿಳೆಯರ ಬಗ್ಗೆ ಗೌರವ ಇಟ್ಟುಕೊಳ್ಳಬೇಕು ಎಂದು ಹೇಳಿದರು. ಮಹಿಳೆಯರು ತಮಗೆ ಸಿಗುತ್ತಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುತ್ತಿರುವುದು ಶ್ಲಾಘನೀಯ…
ಸೋಮವಾರಪೇಟೆ ಮಾ.19 : ಜೀವನ ಜಂಜಾಟ, ನಿತ್ಯದ ಸಂಕಷ್ಟದ ನಡುವೆಯೂ ಮಲೆನಾಡಿಗರು ತಮ್ಮ ಮೂಲ ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗುತ್ತಿರುವುದಕ್ಕೆ ಮಹಿಳೆಯರೇ ಮುಖ್ಯ ಕಾರಣ ಎಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಸೋಮವಾರಪೇಟೆ ತಾಲೂಕಿನ ಈಚಲಬೀಡು ಗ್ರಾಮದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಮತ್ತು ಮಲೆನಾಡು ಜಾನಪದ ಉತ್ಸವ ಸಮಿತಿ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಮಲೆನಾಡು ಜಾನಪದ ಉತ್ಸವವನ್ನು ಮೊರದಲ್ಲಿ ಭತ್ತ ಸುರಿದು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಇನ್ನೊಬ್ಬರನ್ನು ತಿದ್ದುವ ಬದಲು ನಾವು ತಿದ್ದಿಕೊಳ್ಳೋಣ ಎಂಬ ಸತ್ಯವನ್ನು ಅರಿತು ಜನಪದ ಕಲೆಗಳನ್ನು ಉಳಿಸುವ ಕೆಲಸ ಮಾಡಬೇಕಿದೆ. ತನ್ನದೇ ಶ್ರೇಷ್ಠತೆ, ಪಾವಿತ್ರ್ಯತೆ ಹೊಂದಿರುವ ಜನಪದ ಕಲೆಗಳಿಗೆ ಸರಿಸಾಟಿ ಇಲ್ಲ. ಅದೇ ನಮ್ಮ ನಾಡಿನ ಮಣ್ಣಿನ ಗುಣ. ನುಡಿ, ನಡೆ ಮಾತ್ರವಲ್ಲದೇ ಕಲಾ ಪ್ರಾವಿಣ್ಯತೆಯಲ್ಲಿ ಜಾನಪದ ಸದಾ ಕಾಲ ಹಸಿರಾಗಿರುತ್ತದೆ. ಆದರೆ ಅವುಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಪ್ರಯತ್ನಗಳು ಹೆಚ್ಚಾಗಬೇಕು ಎಂದರು. ಕರ್ನಾಟಕ ಜಾನಪದ ಪರಿಷತ್ತು ರಾಜ್ಯಾಧ್ಯಕ್ಷ ಹಿ.ಶಿ.ರಾಮಚಂದೇಗೌಡ ಮಾತನಾಡಿ, ಭದ್ರತೆ ನೀಡದ ನಾಗರಿಕತೆಗಿಂತ…






