ಲೇಖಕ: admin

ನಾಪೋಕ್ಲು ಜ.16 : ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರ ಸಮನ್ವಯತೆಯಿಂದ ಮಕ್ಕಳ ಭವಿಷ್ಯವನ್ನು ರೂಪಿಸಲು ಸಾಧ್ಯ ಎಂದು ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ ಹೇಳಿದರು. ಕೊಡವ ಸಮಾಜದಲ್ಲಿ ನಡೆದ ಬೇತು ಗ್ರಾಮದ ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ದಿನದ ಹೆಚ್ಚಿನ ಸಮಯವನ್ನು ಮಕ್ಕಳು ಪೋಷಕರೊಂದಿಗೆ ಕಳೆಯುತ್ತಾರೆ. ಹೀಗಾಗಿ ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರಿಗಿಂತಲೂ ಪೋಷಕರ ಪಾತ್ರ ಮಹತ್ವದ್ದು ಎಂದರು. ಪೋಷಕರು ಮಕ್ಕಳು ಕಲಿಯುವ ಶಾಲೆ ಹಾಗೂ ಶಿಕ್ಷಕರ ಬಗ್ಗೆ ಗೌರವವನ್ನು ಹೊಂದಿರಬೇಕು. ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಿದ ಬಳಿಕ ತಮ್ಮ ಜವಾಬ್ದಾರಿ ಮುಗಿಯಿತು ಎಂದು ಪೋಷಕರು ಸುಮ್ಮನಾಗಬಾರದು. ಶಾಲೆಗೆ ಕಳುಹಿಸಿದ ನಂತರ ಮುಂದಿನ ಬೆಳವಣಿಗೆಗಳನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು. ಮಕ್ಕಳ ಆಸೆ ಆಕಾಂಕ್ಷೆಗಳನ್ನು ಈಡೇರಿಸಿದರೆ ಮಾತ್ರ ಜವಾಬ್ದಾರಿಯುತ ಪೋಷಕರಾಗಲು ಸಾಧ್ಯ. ಗುರು ಹಿರಿಯರನ್ನು ಗೌರವಿಸುವಂತೆ ಮಕ್ಕಳಿಗೆ ತಿಳಿ ಹೇಳುವ ಕರ್ತವ್ಯ ಪೋಷಕರದ್ದು ಎಂದರು. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ…

Read More

ಮಡಿಕೇರಿ ಜ.16 : ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ನಾವೀನ್ಯತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು  ವೈದ್ಯ  ಅಮೃತ್ ನಾಣಯ್ಯ ಹೇಳಿದರು. ಜೆಸಿ ವಿದ್ಯಾ ಸಂಸ್ಥೆಯ 33ನೇ ವಾರ್ಷಿಕೋತ್ಸವದ  ಅಧ್ಯಕ್ಷತೆ ವಹಿಸಿ  ಮಾತನಾಡಿದ  ಅವರು,  ಪೋಷಕರಿಗೂ, ಶಿಕ್ಷಕರಿಗೂ ತಮ್ಮ ಅನುಭವದ ಮೂಲಕ ಜ್ಞಾನದ ಬೆಳಕನ್ನು ಚೆಲ್ಲಿದರು. ಕ್ಷೇತ್ರ ಶಿಕ್ಷಣಾಧಿಕಾರಿ  ಶೈಲಬೆಳಗಿ ಮಾತನಾಡಿ, ಸಮಯದ ಮಹತ್ವವನ್ನು ಅರಿತು ಶ್ರದ್ಧೆಯನ್ನು ಹೆಚ್ಚಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಹೇಳಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ  ಕೋಟ್ರಂಗಡ ಸುಬ್ರಮಣಿ, (ಕರೆಸ್ಪಾಂಡೆಂಟ್  )  ವರದಿಗಾರ ಮಚ್ಚಮಾಡ ಸುರೇಶ್, ಆಡಳಿತಾಧಿಕಾರಿ ಕೋಟ್ರಂಗಡ ತಿಮ್ಮಯ್ಯ , ಟ್ರಸ್ಟಿಗಳಾದ ಕೋಟ್ರಂಗಡ ಯಶೋಧ, ಕೋಟ್ರಂಗಡ ಸುನಿಲ್ ಸುಬ್ಬಯ್ಯ, ಮಚ್ಚಮಾಡ ಅಪ್ಪಣ್ಣ , ಮುಖ್ಯಶಿಕ್ಷಕ  ಎನ್. ಬಿ. ಸತೀಶ್  ಹಾಗೂ ಕೆ.ಕೆ. ಸಿಂಧೂರ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ನೆರೆದಿದ್ದ  ಜನರ ಮನಸೂರೆಗೊಂಡಿತು. ಕೋಟ್ರಂಗಡ ತಿಮ್ಮಯ್ಯ ಸರ್ವರಿಗೂ ಸ್ವಾಗತ ಕೋರಿದರು.  ಮಕ್ಕಳ ಕಾರ್ಯಕ್ರಮಕ್ಕೆ ಜನರಿಂದ ಪ್ರಶಂಸೆಗಳ ಸುರಿಮಳೆಯೇ ಸುರಿಯಿತು. ಶಿಕ್ಷಕ ವೃಂದದವರು ಕಾರ್ಯಕ್ರಮ ನಿರ್ವಹಿಸಿದರು. ಸಹ ಶಿಕ್ಷಕ  ಪ್ರಸನ್ನ ಹಾಗೂ ಚಂಚಲ  ಕಾರ್ಯಕ್ರಮದ …

Read More

ಮಡಿಕೇರಿ ಜ.16 :  ಕೊಡಗು ಮಹಾಬೋದಿ ಪತ್ತಿನ ಸಹಕಾರ ಸಂಘದ ವತಿಯಿಂದ 2023 ರ ಕ್ಯಾಲಂಡರ್ ನ್ನು ಸಂಘದ ಸ್ಥಾಪಕ ಅಧ್ಯಕ್ಷ  ಎಸ್.ಸಿ.ಸತೀಶ್  ಬಿಡುಗಡೆ ಗೊಳಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಸಿ.ಸತೀಶ್,  ಸಂಘ ಪ್ರಸ್ತುತ 1850 ಸದಸ್ಯರನ್ನು ಹೊಂದಿದ್ದು, ಸದಸ್ಯರಿಗೆ ಅನೇಕ ಸೌಲಭ್ಯ ಗಳನ್ನು ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಸದಸ್ಯತ್ವ ಆಂದೋಲನ ನಡೆಸಿ ಸದಸ್ಯರ ಸಂಖ್ಯೆಯನ್ನು 25,000 ಕ್ಕೆ ಹೆಚ್ಚಿಸುವ ಗುರಿಯನ್ನು ಹೊಂದಿದ್ದೇವೆ ಎಂದು ವಿವರಿಸಿದರು. ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರುಗಳಾದ ಎಸ್.ಬಿ.ಜಯಪ್ಪ, ಕೆ.ಬಿ.ರಾಜು, ಎಸ್.ಎ.ಪ್ರತಾಪ್, ಹೆಚ್.ಎನ್.ಶಾರದ, ಗಾಯಿತ್ರಿ, ನರಸಿಂಹ, ಜೆ.ಎಲ್.ಜನಾರ್ದನ, ಎನ್.ಎಸ್.ಗೀತಾ, ಮೋಹನ್ ಮೌರ್ಯ, ಹೆಚ್.ಎಂ.ಕೃಷ್ಣ, ಕೆ.ಪಳನಿ ಪ್ರಕಾಶ್, ಶೋಭಾ ದೊರೈ  ಹಾಜರಿದ್ದರು.  

Read More

ಮಡಿಕೇರಿ ಜ.16 :  ಯಾವುದೇ ಒಂದು ಜನಾಂಗದ ಜೀವಸೆಲೆಯೇ ಅದರ ಭಾಷೆ. ಭಾಷೆ ಉಳಿದರೆ ಮಾತ್ರ ಜನಾಂಗದ ಉಳಿವು ಸಾಧ್ಯ ಎಂದು ಬೆಂಗಳೂರು ಕೊಡವ ಸಾಮಾಜ ಅಧ್ಯಕ್ಷ  ಕರವಟ್ಟಿರ ಪೆಮ್ಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡವಾಮೆರ ಕೊಂಡಾಟ ಸಂಘಟನೆಯ ತಿಂಗಕೋರ್ ಅರಿವು ಮಾಲಿಕೆಯ ಹನ್ನೆರಡನೇ ವೆಬಿನಾರ್’ನಲ್ಲಿ ಮುಖ್ಯ ಅಥಿತಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಅತ್ಯಂತ ಪುರಾತನ, ವಿಶಿಷ್ಟವಾದ  ಕೊಡವ ಭಾಷೆಯು, ಅವನತಿಯತ್ತ ಸಾಗುತ್ತಿರುವುದು ವಿಷಾದನೀಯ ಎಂದರು. ಜನಾಂಗ ಉಳಿಯಬೇಕಾದರೆ ಭಾಷೆಯನ್ನು ಬೆಳೆಸಲೇಬೇಕಾದ ಅನಿವಾರ್ಯ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಪ್ರತಿಯೊಬ್ಬ ಕೊಡವರೂ ಜಾಗರೂಕರಾಗಿ ತಮ್ಮ ಮನೆಗಳಲ್ಲಿ ಬಂದುಗಳ ಜೊತೆಯಲ್ಲಿ ಕೊಡವ ಭಾಷೆಯಲ್ಲಿ  ವ್ಯವಹರಿಸುವಂತಾಗಬೇಕು. ಮಕ್ಕಳಲ್ಲಿ ಭಾಷೆಯ ಅಭಿಮಾನವನ್ನು ಜಾಗೃತಿಗೊಳಿಸುವತ್ತ ಪೋಷಕರು ಗಮನ ಹರಿಸಬೇಕು ಎಂದರು. ಕೊಡವರು ಎಲ್ಲೇ ನೆಲೆಸಿದ್ದರೂ ನಮ್ಮ ಸಂಸ್ಕೃತಿ ಸಂಪ್ರದಾಯಗಳ ಪಾಲನೆಗೆ ಒತ್ತುಕೊಡಬೇಕು. ಸಾಧ್ಯವಾದಷ್ಟು ಹಬ್ಬಗಳ ಆಚರಣೆಗೆ ತಮ್ಮ ಗುರುಮನೆಗೆ ಬರುವಂತಾಗಬೇಕು. ಹೀಗಾದಾಗ ಮಾತ್ರ ಮುಂದಿನ ಪೀಳಿಗೆಗೆ ಶ್ರೀಮಂತ ಕೊಡವ ಸಂಸ್ಕೃತಿಯನ್ನು ಉಳಿಸಿಕೊಡಲು ಸಾಧ್ಯ ಎಂದರು.  ಕೊಡವ ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ…

Read More

ಸುಂಟಿಕೊಪ್ಪ, ಜ.16 : ಸುಂಟಿಕೊಪ್ಪದ ತಮಿಳು ಸಂಘ ಹಾಗೂ ಪೊಂಗಲ್ ಹಾಗೂ ಸಂಕ್ರಾಂತಿ ಆಚರಣಾ ಸಮಿತಿಯ ವತಿಯಿಂದ 23ನೇ ವರ್ಷದ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಾದಾಪುರದ ಮಧುರಮ್ಮ ಬಡಾವಣೆಯ ಶ್ರೀವೃಕ್ಷೋದ್ಭವ ಮಹಾಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಶ್ರೀ ಚಾಮುಂಡೇಶ್ವರಿ ದೇವಿಯ ಮೂರ್ತಿಯನ್ನು ಅಲಂಕೃತ ಭವ್ಯಮಂಟಪದಲ್ಲಿ ಕುಳ್ಳಿರಿಸಿ, ಕಳಶವನ್ನು ಹೊತ್ತ ಮಹಿಳೆಯರು ಹಾಗೂ ಪುರುಷರು ಮತ್ತು ನಾದಸ್ವರದೊಂದಿಗೆ ನಗರ ಪ್ರದಕ್ಷಿಣೆ ನಡೆಯಿತು. ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ತೆರಳಿದ್ದರು. ಪಟಾಕಿ ಸಿಡಿಸಿ ಪೊಂಗಲ್ ಆಚರಣೆಗೆ ಮೆರಗು ನೀಡಿದ್ದರು. ದೇವಸ್ಥಾನ ಟ್ರಸ್ಟಿ ಕಾರ್ಯದರ್ಶಿ ಎ.ಲೋಕೇಶ್ ಕುಮಾರ್, ಆಚರಣಾ ಸಮಿತಿ ಅಧ್ಯಕ್ಷ ಮಂಜುನಾಥ್ ಹಾಗೂ ತಮಿಳ್ ಸಂಘದ ಅಧ್ಯಕ್ಷ ವಿಘ್ನೇಶ್ ಸೇರಿದಂತೆ ಪದಾಧಿಕಾರಿಗಳು ಕಳಸಗಳನ್ನು ಮಹಿಳೆಯರಿಗೆ ಹೊತ್ತು ಕೊಡುವ ಮೂಲಕ ಚಾಲನೆ ನೀಡಿದರು. ಸುಂಟಿಕೊಪ್ಪದ ಶ್ರೀಚಾಮುಂಡೇಶ್ವರಿ ದೇವಾಲಯವನ್ನು ತಳಿರು ತೊರಣಗಳಿಂದ ಅಲಂಕರಿಸಲಾಗಿತ್ತು. ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜಾ ಕೈಂಕರ್ಯವನ್ನು ಆರ್ಚಕರಾದ ಮಂಜುನಾಥ ಉಡುಪ ಅವರ ನೇತೃತ್ವದಲ್ಲಿ ನಡೆಸಲಾಯಿತು. ಮಹಾಮಂಗಳಾರತಿ ನಂತರ…

Read More

ಮಡಿಕೇರಿ ಜ.16 : ಮೂರ್ನಾಡು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಹೆಚ್.ಎ.ಹಂಸ ಅವರ ಅಧ್ಯಕ್ಷತೆಯಲ್ಲಿ  ನಡೆಯಿತು. ಮೂರ್ನಾಡುವಿನ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ  ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ  ಮಾಜಿ ಸಚಿವ ಬಿ.ಎ.ಜೀವಿಜಯ ಮಾತನಾಡಿ, ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಉಳಿವಿಗಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. ಮಡಿಕೇರಿ ಕ್ಷೇತ್ರದ ಮತ್ತೊಬ್ಬ ಆಕಾಂಕ್ಷಿ ಯುವ ಮುಖಂಡ ಡಾ.ಮಂಥರ್ ಗೌಡ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಅಭಿವೃದ್ಧಿ ಯನ್ನು ಮಾಡದೆ ಬಿಜೆಪಿ ಕಡೆಗಣಿಸಿದೆ. ಅಭಿವೃದ್ಧಿ ದೃಷ್ಟಿಯಿಂದ ಈ ಬಾರಿ ಮತದಾರರು ಬದಲಾವಣೆ ತರಲಿದ್ದಾರೆ ಎಂದು ಅಭಿಪ್ರಾಯಪಟ್ಟರು. ಮತ್ತೋರ್ವ ಆಕಾಂಕ್ಷಿ ಸಮಾಜ ಸೇವಕ  ಹರಪನಹಳ್ಳಿ ರವೀಂದ್ರ  ಮಾತನಾಡಿ, ಕೊಡಗು ಜಿಲ್ಲೆ ಪಕೃತಿದತ್ತ ಸಂಪನ್ಮೂಲಗಳನ್ನು ಹೊಂದಿದ್ದು, ಅವನ್ನು ವ್ಯವಸ್ಥಿತ ಹಾಗೂ ಪರಿಣಾಮಕಾರಿಯಾಗಿ ಬಳಕೆ ಮಾಡಲು ಯೋಜನೆ ರೂಪಿಸುವಲ್ಲಿ ಈಗಿನ ಜನಪ್ರತಿನಿಧಿಗಳು ವಿಫಲರಾಗಿದ್ದು, ಈ ನಿಟ್ಟಿನಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡುವ ಮೂಲಕ ಬದಲಾವಣೆ ತರಬೇಕು ಎಂದು…

Read More

ಮಡಿಕೇರಿ ಜ.16  :  ಕತ್ತಿಯಿಂದ ಕಡಿದು ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ  ವಿರಾಜಪೇಟೆ ಸಮೀಪದ ನಾಂಗಾಲ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಆರತಿ(24) ಮೃತ ಯುವತಿ. ಕೊಲೆಯಾದ ಸ್ಥಳದಲ್ಲಿ ವ್ಯಕ್ತಿಯೊಬ್ಬರ ಹೆಲ್ಮೆಟ್ ಮತ್ತು ಅನತಿ ದೂರದಲ್ಲಿ ಬೈಕ್ ಕೂಡ ಪತ್ತೆಯಾಗಿದೆ.  ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಯ ಪತ್ತೆ ಕಾರ್ಯವನ್ನು ಪೊಲೀಸರು ಚುರುಕುಗೊಳಿಸಿದ್ದಾರೆ.಻  

Read More

ಮಡಿಕೇರಿ ಜ.16 : ಕೊಡಗು ಪ್ರೆಸ್‍ಕ್ಲಬ್ ಬೆಳ್ಳಿ ಮಹೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಆಯೋಜಿಸಿರುವ ಕೊಡಗು ಪ್ರೆಸ್‍ಕ್ಲಬ್‍ಕ್ರಿಕೆಟ್ ಪ್ರಿಮಿಯರ್ ಲೀಗ್- 3ರ ಟ್ರೋಫಿ ಅನಾವರಣ ಕಾರ್ಯಕ್ರಮ ಜ.18 ನಡೆಯಲಿದೆ. ಈ ಟ್ರೋಫಿಯನ್ನು ಮುಳಿಯ ಜ್ಯುವೆಲ್ಸ್ ಪ್ರಾಯೋಜಿಸಿದ್ದು, ಅಂದು ಸಂಜೆ 6.35ಕ್ಕೆ ಪೊ ನ್ನಂಪೇಟೆ ತಾಲೂಕು ಬೇಗೂರುವಿನ ಕೇವ್ ರಿಟ್ಝ್‍ರೆಸಾರ್ಟ್‍ನಲ್ಲಿ ಕೊಡಗು ಪ್ರೆಸ್‍ಕ್ಲಬ್ ಅಧ್ಯಕ್ಷಅಜ್ಜ ಮಾಡರಮೇಶ್ ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ಕಾರ್ಯಕ್ರವ ುಏರ್ಪಡಿಸಲಾಗಿದೆ. ಪೊನ್ನಂಪೇಟೆ ಶ್ರೀ ಸಾಯಿ ಶಂಕರ ವಿದ್ಯಾಸಂಸ್ಥೆ ಅಧ್ಯಕ್ಷ ಕೊಳೇರ ಝರುಗಣಪತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಳಿಯ ಜ್ಯುವೆಲ್ಸ್ ಚೇರ್ಮನ್, ಮೆನೇಜಿಂಗ್ ಡೈರೆಕ್ಟರ್ ಕೇಶವ ಪ್ರಸಾದ್ ಮುಳಿಯ ಟ್ರೋಫಿ ಅನಾವರಣಗೊಳಿಸಲಿದ್ದಾರೆ. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆಬಿ.ಆರ್.ಸವಿತಾರೈ, ಟಗ್‍ಆಫ್ ವಾರ್ ಅಕಾಡೆಮಿ ಸ್ಥಾಪಕಾಧ್ಯಕ್ಷ ಪೊನ್ನೋಲತಂಡ ಕಿರಣ್  ಪೊನ್ನಪ್ಪ, ಪಾಲಿಬೆಟ್ಟ. ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಜನರಲ್ ಸರ್ಜನ್ ಡಾ.ಪಿ.ಎಸ್.ಲೋಹಿತ್, ಗೋಣಿಕೊಪ್ಪದ ಖ್ಯಾತ ವಕೀಲ ಟಿ.ಎಚ್. ಪ್ರದೀಪ್‍ಕುಮಾರ್, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿ ವಿ.ವಿ. ಅರುಣ್‍ಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು…

Read More

ಸೋಮವಾರಪೇಟೆ ಜ.15 : ಯುವಕನೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಗರ್ವಾಲೆ ಗ್ರಾಮದಲ್ಲಿ ನಡೆದಿದೆ. ಗರ್ವಾಲೆ ಗ್ರಾಮದ ನಾಪಂಡ ಕುಶಾಲಪ್ಪ ಎಂಬುವವರ ಪುತ್ರ ರಾಜೇಶ್ ಚಂಗಪ್ಪ(28) ಮೃತ ವ್ಯಕ್ತಿ. ಕಾಫಿ ತೋಟದಲ್ಲಿ ಗುಂಡು ಹಾರಿಸಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಭಾನುವಾರ ಕುಟುಂಬದವರು ಸೋಮವಾರಪೇಟೆ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಸಂಜೆ ಮೃತದೇಹ ಪತ್ತೆಯಾಗಿದ್ದು, ಪೊಲಿಸರು ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಎಸ್‌ಪಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಇನ್ಸ್ ಪೆಕ್ಟರ್ ರಾಮಚಂದ್ರನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Read More

ವಿರಾಜಪೇಟೆ ಜ.15 : ಕಾಫಿ ತೋಟದ ಲೈನ್ ಮನೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಪೊನ್ನಂಪೇಟೆ ತಾಲ್ಲೂಕು ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲವು ದಿನಗಳ ಹಿಂದೆ ಶ್ರೀಮಂಗಲದ ಕಾಫಿ ತೋಟವೊಂದರಲ್ಲಿ ಕಾಫಿ ಕೊಯ್ಯುವ ಕೆಲಸಕ್ಕಾಗಿ ಕಾರ್ಮಿಕರೊಬ್ಬರು ನೇಮಕಗೊಂಡಿದ್ದರು. ಇಂದು ಲೈನ್‌ಮನೆಯಲ್ಲಿ ಇವರ ಮೃತದೇಹ ಪತ್ತೆಯಾಗಿತ್ತು. ಶ್ರೀಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶವದ ವಾರಸುದಾರರ ಪತ್ತೆಗಾಗಿ ಕ್ರಮ ಕೈಗೊಂಡಿದ್ದಾರೆ. ಮೃತದೇಹವನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.

Read More