ಮಡಿಕೇರಿ ಫೆ.11 : ಮಡಿಕೇರಿಯ ಕರ್ಣಂಗೇರಿ ಗ್ರಾಮದಲ್ಲಿರುವ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ.18 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ ಎಂದು ದೇವಾಲಯ ಧರ್ಮದರ್ಶಿ ಗೋವಿಂದಸ್ವಾಮಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9 ಗಂಟೆಯಿಂದ ಅಂದು ಬೆಳಿಗ್ಗೆ 9 ಗಂಟೆಯಿಂದ ಕಾಶಿಲಿಂಗಕ್ಕೆ ಕ್ಷೀರಾಭಿಷೇಕ ಹಾಗೂ ಪಂಚಾಮೃತ ಅಭಿಷೇಕ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಂತರ ಭಕ್ತಾಧಿಗಳಿಂದ ಪಂಚಲಿಂಗಕ್ಕೆ ಪವಿತ್ರ ಗಂಗಾಜಲದಿಂದ ಅಭಿಷೇಕ ಮತ್ತು ಶಿವನ ಮೂರ್ತಿಗೆ ಪುಷ್ಪಾರ್ಚನೆಯಾಗಲಿದೆ. ಸಂಜೆ 7 ಗಂಟೆಗೆ ಭಕ್ತಾಧಿಗಳಿಗೆ ದೀಪಾಲಂಕಾರ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ರಾತ್ರಿ 8 ಗಂಟೆಗೆ ತಾಯಿಯ ದರ್ಶನ ಇರುತ್ತದೆ. ಮಧ್ಯಾಹ್ನ ಹಾಗೂ ರಾತ್ರಿ ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಂಜೆ ಭಕ್ತಿ ಪ್ರಧಾನ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ರಾತ್ರಿ 9 ಗಂಟೆಗೆ ನೆಲ್ಚಿಬೊಳಿ ಕೊಡವ ಚಲನಚಿತ್ರ ಪ್ರದರ್ಶನ ಇರಲಿದೆ ಎಂದರು. ಆಡಳಿತ ಮಂಡಳಿ ಪ್ರಮುಖರಾದ ಮಣಿ ದೇವರಾಜ್ ಮಾತನಾಡಿ, ದೇವಾಲಯದಲ್ಲಿ ಸ್ಥಾಪಿಸಲಾಗಿರುವ 52 ಅಡಿ ಎತ್ತರದ ಶಿವನ…
ಲೇಖಕ: admin
ಮಡಿಕೇರಿ ಫೆ.11 : ಜೇಡ್ಲ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರ ಹಾಗೂ ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಂಯುಕ್ತಶ್ರಯದಲ್ಲಿ ಫೆ.14 ರಂದು ಸಂಪಾಜೆಯ ಜೇಡ್ಲದಲ್ಲಿ ಗೋ ಪ್ರೇಮ ದಿನಾಚರಣೆ ನಡೆಯಲಿದೆ. ಸಂಪಾಜೆಯ ಜೇಡ್ಲ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರದಲ್ಲಿ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, ಮಧ್ಯಾಹ್ನ 3 ಗಂಟೆಯಿಂದ ವಿದ್ಯಾರ್ಥಿಗಳು ದೇಶಿ ದನಗಳ ಆಲಿಂಗನದ ಮೂಲಕ ತಮ್ಮ ಆರೋಗ್ಯ ವೃದ್ಧಿ ಹಾಗೂ ಪಶುಗಳ ಬಗ್ಗೆ ಪ್ರೇಮ ಬೆಳೆಸಿಕೊಳ್ಳಲು ನಾಂದಿಹಾಡಲಿದ್ದಾರೆ. ಸಾರ್ವಜನಿಕರಿಗೆ ಬೆಳಿಗ್ಗಿನಿಂದಲೇ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ದೇಶಿ ದನಗಳ ಒಡನಾಟ ಪಡೆದುಕೊಳ್ಳುವಂತೆ ಡಾ.ರಾಜರಾಮ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ಮಡಿಕೇರಿ ಫೆ.11 : ಅಹ್ಮದಿಯಾ ಮುಸ್ಲಿಂ ಜಮಾಅತ್ ವತಿಯಿಂದ ಫೆ.12 ರಂದು “ಪರಮಾಣು ಯುದ್ಧದ ವಿನಾಶಕಾರಿ ಪರಿಣಾಮಗಳು ಮತ್ತು ಸಂಪೂರ್ಣ ನ್ಯಾಯಕ್ಕಾಗಿ ನಿರ್ಣಾಯಕ ಅಗತ್ಯ” ಎಂಬ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ ಎಂದು ಸಂಘಟನೆಯ ಮಡಿಕೇರಿಯ ಅಧ್ಯಕ್ಷ ಜಿ.ಎಂ.ಮೊಹಮ್ಮದ್ ಷರೀಫ್ ತಿಳಿಸಿದ್ದಾರೆ. ಅಂದು ಬೆಳಗ್ಗೆ 11 ಗಾಳಿಬೀಡುವಿನ ಔರಿಕಾ ಕೂರ್ಗ್, ಲೆಮನ್ ಟ್ರೀ ಹೋಟೆಲ್ ಸಭಾಂಗಣದಲ್ಲಿ ಅಹ್ಮದೀಯ ಮುಸ್ಲಿಂ ಜಮಾತ್ ಅಧ್ಯಕ್ಷ ಜಿ.ಎಂ.ಮೊಹಮ್ಮದ್ ಶರೀಫ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಭಾಷಣಕಾರರಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ, ನಿವೃತ್ತ ಏರ್ಮಾರ್ಷಲ್ ಕೆ.ಸಿ.ನಂದ ಕಾರ್ಯಪ್ಪ, ಖ್ಯಾತ ವಕೀಲರು ಮತ್ತು ಲೇಖಕ ಬಾಲಸುಬ್ರಹ್ಮಣ್ಯ ಕಂಜರ್ಪಣೆ, ಅಹ್ಮದಿಯಾ ಮುಸ್ಲಿಂ ಜನಾತ್ ಮಿಷನರಿ ಜನಬ್ ಎಸ್.ಬಿ.ಹುಸಾಮ್ ಅಹ್ಮದ್, ಸಿಆರ್ಪಿಎಫ್ ನಿವೃತ್ತ ಇನ್ಸ್ಪೆಕ್ಟರ್ ಜನರಲ್ ಆಫ್ ಪೆÇಲೀಸ್ ಕೆ.ಅರ್ಕೇಶ್, ಬ್ರೈನೋಬ್ರೇನ್ ಮಡಿಕೇರಿ ಕೇಂದ್ರದ ಫ್ಯಾಕಲ್ಟಿ ಮತ್ತು ಫ್ರಾಂಚೈಸಿ ಎಂ. ಕವಿತಾ ಕರುಂಬಯ್ಯ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಅಹ್ಮದೀಯ ಮುಸ್ಲಿಂ ಸಮುದಾಯವು ಇಸ್ಲಾಂನಲ್ಲಿನ…
ಮಡಿಕೇರಿ ಫೆ.11 : ಕೆಲಸದ ಒತ್ತಡವನ್ನು ಕಡಿಮೆ ಮಾಡಲು ಮತ್ತು ದೈಹಿಕ ಆರೋಗ್ಯ ಕಾಪಾಡಲು ಕ್ರೀಡಾಕೂಟಗಳು ಸಹಕಾರಿ ಎಂದು ಸಮಾಜ ಸೇವಕ ನಾಪಂಡ ಮುತ್ತಪ್ಪ ಹೇಳಿದರು. ಕೊಡಗು ಪತ್ರಕರ್ತರ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಮಡಿಕೇರಿಯ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳು ಮತ್ತು ಪತ್ರಕರ್ತರ ತಂಡಗಳ ನಡುವಿನ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು. ಕೊಡಗಿನಲ್ಲಿ ಇತ್ತೀಚೆಗೆ ಆಟಗಾರರ ಹರಾಜು, ತಂಡಗಳ ಖರೀದಿ, ಅದಕ್ಕೊಂದಷ್ಟು ಪ್ರಾಯೋಜಕರು ಹೀಗೆ ಐಪಿಎಲ್ ಮಾದರಿಯ ಪಂದ್ಯಾವಳಿಯೇ ಹೆಚ್ಚಾಗಿ ನಡೆಯುತ್ತಿದೆ. ಇದರಲ್ಲಿ ಬಹುಮಾನದ ಮೊತ್ತ ಪಡೆಯುವುದಕ್ಕಾಗಿಯೇ ತಂಡಗಳು ಸೆಣೆಸುತ್ತವೆ. ಇಂತಹ ಪಂದ್ಯಾವಳಿಗಳು ವ್ಯಾಪಾರದ ಉದ್ದೇಶದಿಂದಲೇ ಕೂಡಿರುತ್ತವೆ. ಇಂತಹದರ ನಡುವೆ ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ ಶಿಕ್ಷಕರ ತಂಡಗಳನ್ನೊಳಗೊಂಡ ಸೌಹಾರ್ದ ಕ್ರಿಕೆಟ್ ಆಯೋಜಿಸಿರುವುದು ಅಪರೂಪದ ಮತ್ತು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು. ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಂಡಷ್ಟೂ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂದೆ ಇನ್ನೂ ಹೆಚ್ಚಿನ ಇಲಾಖೆಗಳನ್ನು ಸೇರಿಸಿಕೊಂಡು ಪಂದ್ಯಾವಳಿ…
ವಿರಾಜಪೇಟೆ ಫೆ.11 : ಕೋಟೆಕೊಪ್ಪ ಗ್ರಾಮದ ವಿ.ವೈ.ಸಿ. ಫುಟ್ಬಾಲ್ ಕ್ಲಬ್ ವತಿಯಿಂದ ದೇವಣಗೇರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ 3ನೇ ವರ್ಷದ ರಾಷ್ಟ್ರ ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಗ್ರೀನ್ ಕೂರ್ಗ್ ಎ.ತಂಡ ಗ್ರೀನ್ ಕೂರ್ಗ್ ಬಿ. ತಂಡವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. 3 ದಿನಗಳ ಕಾಲ ನಡೆದ ಹೊನಲು ಬೆಳಕಿನ ಪಂದ್ಯಾವಳಿಯನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರು ಉದ್ಘಾಟಿಸಿ ಮಾತನಾಡಿ ಜಾತಿ, ಧರ್ಮ ಲೆಕ್ಕಿಸದೆ ಪ್ರೀತಿ ಸಹಕಾರವನ್ನು ಬಳಸಿಕೊಂಡು ಬಲಿಷ್ಠ ದೇಶವನ್ನು ಕಟ್ಟುವ ಶಕ್ತಿ ಕ್ರೀಡೆಗಿದೆ. ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಮಾನಸಿಕವಾಗಿ, ದೈಹಿಕವಾಗಿ ಸದೃಢರಾಗಲು ಸಾಧ್ಯ. ನಮ್ಮ ಕೊಡಗಿನಲ್ಲಿ ಕ್ರೀಡೆಯಲ್ಲಿ ಸಾಧನೆ ತೋರಿದ ಹಲವಾರು ಮಂದಿ ಇದ್ದಾರೆ. ಇದೀಗ ಕೊಡಗು ಜಿಲ್ಲೆಯಾದ್ಯಂತ ಆಯಾಯ ಜನಾಂಗದವರು ವಿವಿಧ ಕ್ರೀಡೆಗಳನ್ನು ಆಯೋಜಿಸಿಕೊಂಡು ಬರುತ್ತಿರುವುದರಿಂದ ಜನಾಂಗದ ಏಳಿಗೆ ಸಾಧ್ಯವಾಗುತ್ತದೆ. ಮುಂದಿನ ಪೀಳಿಗೆಗೆ ಇದು ಮಾದರಿಯಾಗಿದೆ ಎಂದು ಹೇಳಿದರು. ಸಮಾರೋಪ ಸಮಾರಂಭಕ್ಕೆ ಆಗಮಿಸಿದ ಕೆಪಿಸಿಸಿ ಕಾನೂನು ವಿಭಾಗದ ಅಧ್ಯಕ್ಷ ಎ.ಎಸ್ ಪೊನ್ನಣ್ಣ ಮಾತನಾಡಿ, ಕ್ರೀಡೆಯು ಮಾನವ…
ಮಡಿಕೇರಿ ಫೆ.11 : ಅಹ್ಮದಿಯಾ ಮುಸ್ಲಿಂ ಜಮಾಅತ್ ವತಿಯಿಂದ “3ನೇ ಮಹಾಯುದ್ಧವನ್ನು ನಿಲ್ಲಿಸಿ” ಎಂಬ ವಿಷಯದಡಿ ಮಡಿಕೇರಿಯಲ್ಲಿ ಶಾಂತಿಯುತ ಜಾಗೃತಿ ಅಭಿಯಾನ ನಡೆಯಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ವಿಶ್ವದ ಶಾಂತಿ ಮತ್ತು ಭದ್ರತೆಗೆ ಆದ್ಯತೆ ನೀಡುವ ಅಂಶಗಳ ಭಿತ್ತಿಚಿತ್ರಗಳನ್ನು ಪ್ರದರ್ಶಿಸಿ ಅರಿವು ಮೂಡಿಸಲಾಯಿತು. ಈ ಸಂದರ್ಭ ಸಂಘಟನೆಯ ಮಡಿಕೇರಿ ಅಧ್ಯಕ್ಷ ಜಿ.ಎಂ.ಮೊಹಮ್ಮದ್ ಷರೀಫ್ ಮಾತನಾಡಿ, ಅಹ್ಮದಿಯಾ ಮುಸ್ಲಿಂ ಜಮಾಅತಿನ ಜಾಗತಿಕ ನೇತಾರ ಹಝ್ರತ್ ಮಿರ್ಝಾ ಮಸ್ರೂರ್ ಅಹ್ಮದ್ ಸಾಹಿಬ್ ಅವರ ನಿರ್ದೇಶನದ ಮೇರೆಗೆ ಅಹ್ಮದಿಯಾ ಮುಸ್ಲಿಂ ಜಮಾಅತ್ ವತಿಯಿಂದ “3ನೇ ಮಹಾಯುದ್ಧವನ್ನು ನಿಲ್ಲಿಸಿ” ಎಂಬ ವಿಷಯದಡಿ ಭಾರತದ ವಿವಿಧೆಡೆ ಶಾಂತಿಯುತ ಅಭಿಯಾನ ನಡೆಯುತ್ತಿದ್ದು, ಇದರ ಭಾಗವಾಗಿ ಮಡಿಕೇರಿ ನಗರದಲ್ಲೂ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು. ಫೆ.12 ರಂದು ಶಾಂತಿ ಎಂಬ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದ್ದು, ಮುಖ್ಯ ಭಾಷಣಕಾರರಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ, ನಿವೃತ್ತ ಏರ್ ಮಾರ್ಷಲ್ ಕೆ.ಸಿ.ನಂದ ಕಾರ್ಯಪ್ಪ, ಖ್ಯಾತ ವಕೀಲರು ಮತ್ತು…
ವಿರಾಜಪೇಟೆ ಫೆ.11 : ಮಕ್ಕಳ ಬಗ್ಗೆ ಪೋಷಕರಿಗೆ ಇರುವಷ್ಟೇ ಕಾಳಜಿ ಶಿಕ್ಷಕರಿಗೂ ಇರುತ್ತದೆ ಎಂದು ಟಿ.ಪಿ.ರಮೇಶ್ ಅಭಿಪ್ರಾಯಪಟ್ಟರು. ವಿರಾಜಪೇಟೆಯ ಪುರಭವನದಲ್ಲಿ ನಡೆದ ನಗರದ ದಖ್ಖನಿ ಮೊಹಲ್ಲಾದಲ್ಲಿರುವ ಮೌಂಟೇನ್ ವ್ಯೂ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಎರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಕ್ಕಳು ಹೆಚ್ಚಿನ ಸಮಯ ಶಿಕ್ಷಕರೊಂದಿಗೆ ಶಾಲೆಯಲ್ಲಿ ಕಳೆಯುತ್ತಾರೆ. ಮಕ್ಕಳ ಮೇಲೆ ಶಿಕ್ಷಕರು ಪ್ರಭಾವ ಬೀರುವುದರಿಂದ ಮಕ್ಕಳ ಉತ್ತಮ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಂತೆ ಹೇಳಿದರು. ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳ ಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ದೇಹದಾಡ್ರ್ಯ ಹಾಗೂ ಆರೋಗ್ಯ ಹೊಂದುವಂತೆ ತಿಳಿಸಿದರು. ವಿರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾಜೇಶ್ ಪದ್ಮನಾಭ ಮಾತನಾಡಿ, ಶಾಲೆಯ ಎಲ್ಲ ಮಕ್ಕಳು ಒಳ್ಳೆಯ ರೀತಿ ಓದಿ ಹೆಚ್ಚಿನ ಫಲಿತಾಂಶವನ್ನು ಪಡೆದು ಶಾಲೆಗೆ ಒಳ್ಳೆ ಕೀರ್ತಿ ತರಬೇಕು. ಮಕ್ಕಳು…
ಮಡಿಕೇರಿ ಫೆ.11 : ಪೊನ್ನಂಪೇಟೆ ತಾಲ್ಲೂಕಿನ ಬಾಡಗರಕೇರಿ ಕೂಟಿಯಾಲ ಸಂಪರ್ಕ ರಸ್ತೆಗೆ ರೂ.2 ಕೋಟಿ 60 ಲಕ್ಷ ಅನುದಾನ ಸರಕಾರದಿಂದ ಮಂಜೂರಾಗಿದ್ದು, ರಸ್ತೆ ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.
ಮಡಿಕೇರಿ ಫೆ.11 : ಸಣ್ಣ ನೀರಾವರಿ ಇಲಾಖಾ ಅನುದಾನದಲ್ಲಿ ಪೊನ್ನಂಪೇಟೆ ತಾಲ್ಲೂಕು, ಬಿರುನಾಣಿ ಗ್ರಾ.ಪಂ ವ್ಯಾಪ್ತಿಯ ಮತ್ಯಾನಿಯಲ್ಲಿ ರೂ.1 ಕೋಟಿ 65 ಲಕ್ಷ ಅನುದಾನದಲ್ಲಿ ನಿರ್ಮಿಸಲಾದ ಚೆಕ್ ಡ್ಯಾಮ್ ಮತ್ತು ರೂ.3 ಕೋಟಿ ಅನುದಾನದಲ್ಲಿ ನೀಟ್ ಕುಂದ್ ನಲ್ಲಿ ನಿರ್ಮಿಸಲಾದ ಸೇತುವೆ ಸಹಿತ ಕಿಂಡಿ ಅಣೆಕಟ್ಟನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.
ಮಡಿಕೇರಿ ಫೆ.11 : ಪೊನ್ನಂಪೇಟೆ ತಾಲ್ಲೂಕು, ಬಿ.ಶೆಟ್ಟಗೇರಿ ಗ್ರಾ.ಪಂ ವ್ಯಾಪ್ತಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು. ಕೊಂಗಣ ವೇಡಿಬೆಲು ಪರಿಶಿಷ್ಟ ಪಂಗಡ ಕಾಲೋನಿ ಸಂಪರ್ಕ ರಸ್ತೆಗೆ ರೂ.60 ಲಕ್ಷ ಮತ್ತು ಪಾಂಡಂಡ ಕೆಂದರೆಕಾಡು ಪರಿಶಿಷ್ಟ ಪಂಗಡ ಕಾಲೋನಿ ಸಂಪರ್ಕ ರಸ್ತೆಗೆ 55 ಲಕ್ಷ ಅನುದಾನ ಕಾವೇರಿ ನೀರಾವರಿ ನಿಗಮದಿಂದ ಒದಗಿಸಲಾಗಿದ್ದು, ಭೂಮಿ ಪೂಜೆ ನೆರವೇರಿಸಲಾಯಿತು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.






