ಲೇಖಕ: admin

ಮಡಿಕೇರಿ ಜ.14 : ಹುಬ್ಬಳ್ಳಿಯ ಗ್ಲೋಬಲ್ ಬ್ಯುಸಿನೆಸ್ ಸ್ಕೂಲ್‍ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಸಮ್ಮೇಳನದಲ್ಲಿ ಮಡಿಕೇರಿಯ ವಿ.ಎ.ನಮ್ರೀನ್ ಆಸಿಫ್ ಮಂಡಿಸಿದ ಪ್ರಬಂಧಕ್ಕೆ ಅತ್ಯುತ್ತಮ ಪತ್ರಿಕೆ ಪ್ರಶಸ್ತಿ ಲಭಿಸಿದೆ. ಇವರು Entrepeneurship to private Limited Company SLN Coffee Pvt. Ltd. Co’s Success Story On Creating a Successful Brand Levista ಎಂಬ ವಿಷಯದ ಕುರಿತು ಪ್ರಬಂಧ ಮಂಡಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ಈ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಸಮ್ಮೇಳನದಲ್ಲಿ 62 ಸ್ಪರ್ಧಿಗಳು ಹಾಗೂ ಪತ್ರಿಕೆಗಳು ಸ್ಪರ್ಧಿಸಿದ್ದವು. ನಮ್ರೀನ್ ಆಸಿಫ್ ದಕ್ಷಿಣ ಕನ್ನಡ ಮಂಗಳೂರು ಶ್ರೀನಿವಾಸ್ ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ವಿದ್ವಾಂಸಕಿಯಾಗಿದ್ದು, ಇವರು ಮಡಿಕೇರಿಯ ಕೊಹಿನೂರು ರಸ್ತೆ ನಿವಾಸಿ ವಿ.ಎಸ್.ಮೊಹಮ್ಮದ್ ಆಸಿಫ್ ಹಾಗೂ ವಿ.ಎಸ್. ನಸೀಮಾ ದಂಪತಿಗಳ ಪುತ್ರಿ.

Read More

ಮಡಿಕೇರಿ ಜ.14 : ಕೊಡಗು ಆಮ್ ಆದ್ಮಿ ಪಕ್ಷದ ಸಭೆಯು  ಸೋಮವಾರಪೇಟೆಯಲ್ಲಿ ನಡೆಯಿತು. ಸೋಮವಾರಪೇಟೆಯ ಐಬಿಯಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮುಂಬರುವ ವಿಧಾನ ಸಭಾ ಚುನಾವಣೆಗೆ ಪಕ್ಷದ ಸಿದ್ದತೆ ಬಗ್ಗೆ ಚರ್ಚೆ ನಡೆಯಿತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಪಕ್ಷವನ್ನು ಇನ್ನಷ್ಟು ಬಲಗೊಳಿಸುವ ಸಲಹೆಯನ್ನು ಮುಖಂಡರುಗಳಾದ ಶಶಿಧರ್, ಬೆಳ್ಳಿಯಪ್ಪ ಮುಂದಿಟ್ಟರು. ಇದೇ ಸಂದರ್ಭ  ನೂತನ ಕಾರ್ಯಕರ್ತರನ್ನುಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಎಎಪಿ ಪಕ್ಷ ಚುನಾವಣೆಗೆ ಸಿದ್ಧವಾಗಿದ್ದು, ಜಿಲ್ಲೆಯಲ್ಲೂ ತನ್ನ ಬಲವನ್ನು ವೃದ್ಧಿಸಿಕೊಳ್ಳಲಿದೆ ಎಂದು ಗ್ರಾಮ ಸಂಪರ್ಕ ಅಭಿಯಾನದ ಅಧ್ಯಕ್ಷರು ಎಂ.ಕೆ. ಅಪ್ಪಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಸಭೆಯಲ್ಲಿ  ಮಾಧ್ಯಮ ಉಸ್ತುವಾರಿ ಭೋಜಣ್ಣ, ಸೋಮಯ್ಯ  ಹಾಜರಿದ್ದರು.

Read More

ಭಾರತವು ವಿಶ್ವದಲ್ಲಿ ಅತಿ ಹೆಚ್ಚು ಯುವ ಜನಸಂಖ್ಯೆಯನ್ನು ಹೊಂದಿರುವ ಯುವ ರಾಷ್ಟ್ರವಾಗಿದೆ. ಸುಮಾರು 27% ಜನಸಂಖ್ಯೆಯು 15-29 ವಯಸ್ಸಿನ ನಡುವೆ ಇದೆ. 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಜನಸಂಖ್ಯೆಯ 66% ರಷ್ಟಿದ್ದಾರೆ. ಆದುದರಿಂದ, ಹೆಚ್ಚಿನ ಜನಸಂಖ್ಯೆ ಯುವ ಸಮೂಹವಾಗಿದ್ದು, ದೇಶದ ಸಾಮಾಜಿಕ, ಆರ್ಥಿಕ ಬೆಳವಣಿಗೆ ಮತ್ತು ತಾಂತ್ರಿಕ ಆವಿಷ್ಕಾರಕ್ಕೆ ಯುವ ಜನ ಪ್ರಮುಖ ಹರಿಕಾರರಾಗಿದ್ದಾರೆ. ಯುವಶಕ್ತಿ ವಿಕಸಿತವಾದರೆ ದೇಶ ವಿಕಸಿತವಾಗುತ್ತದೆ ಎಂಬುದು ಈ ಉತ್ಸವದ ದ್ಯೇಯ ವಾಕ್ಯ. “ವಿಕಸಿತ ಯುವ-ವಿಕಸಿತ ಭಾರತ”. ಜನವರಿ 12-16 ರವರೆಗೆ ನಡೆಯುವ 26 ನೇ ರಾಷ್ಟ್ರೀಯ ಯುವ ಉತ್ಸವವನ್ನು ಕರ್ನಾಟಕದ ಅವಳಿ ನಗರಗಳಾದ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಆಯೋಜಿಸಲಾಗಿದ್ದು, 7500 ಯುವಪ್ರತಿನಿಧಿಗಳು ಭಾಗವಹಿಸಿದ್ದಾರೆ. ಇವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ. ರಾಷ್ಟ್ರೀಯ ಯುವ ಉತ್ಸವ 2023 “ಯುವ ಶೃಂಗಸಭೆಯಲ್ಲಿ”. ರಾಷ್ಟ್ರೀಯ/ಅಂತಾರಾಷ್ಟ್ರೀಯ ತಜ್ಞರೊಂದಿಗೆ ಸಂವಹನ ನಡೆಸಲು ಯುವಜನರಿಗೆ ಅವಕಾಶ ಕಲ್ಪಿಸಲಾಗಿದೆ. ಕೆಲಸದ ಭವಿಷ್ಯ, ಕೈಗಾರಿಕೆ, ನಾವೀನ್ಯತೆ ಮತ್ತು 21 ನೇ ಶತಮಾನದ ಕೌಶಲ್ಯಗಳು…

Read More

ಕುಶಾಲನಗರ ಜ.14 :  ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಫೆ.3 ರಂದು ಕುಶಾಲನಗರದಲ್ಲಿ  ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಹೇಳಿದರು. ಕುಶಾಲನಗರದ ತಾಲ್ಲೂಕು ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕುಶಾಲನಗರದ ರೈತ ಸಹಕಾರ ಭವನದಲ್ಲಿ ತಾಲ್ಲೂಕು ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಮೈಸೂರು ರಸ್ತೆಯ ಕಾವೇರಿ ನದಿ ದಂಡೆಯಿಂದ ಸಮ್ಮೇಳನದ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಪಾಲ್ಗೊಳ್ಳಲಿವೆ ಎಂದು ತಿಳಿಸಿದ ಅವರು ತಾಲ್ಲೂಕು ಸಮ್ಮೇಳನವನ್ನು ಹಬ್ಬದೋಪಾದಿಯಲ್ಲಿ ಆಚರಿಸುವಂತಾಗಬೇಕೆಂದು ಕೋರಿದರು. ತಾಲ್ಲೂಕು ಅಧ್ಯಕ್ಷ ಕೆ.ಎಸ್.ಮೂರ್ತಿ ಮಾತನಾಡಿ, ಸಮ್ಮೇಳನದಲ್ಲಿ ಕುಶಾಲನಗರ ತಾಲ್ಲೂಕಿನ ಎಲ್ಲಾ ಗ್ರಾ.ಪಂ  ಗಳ ವ್ಯಾಪ್ತಿಯಿಂದ ಸಾರ್ವಜನಿಕರು ಹೆಚ್ವಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ತಾಲ್ಲೂಕಿನ ಉತ್ಸವವಾಗಿಸಲು ಸಹಕಾರ ನೀಡಬೇಕೆಂದು ಪಂಚಾಯಿತಿಗಳ ಚುನಾಯಿತರು ಹಾಗೂ ಅಧಿಕಾರಿಗಳಲ್ಲಿ ಕೋರಿಕೊಂಡರು. ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಎಂ.ಡಿ.ರಂಗಸ್ವಾಮಿ ಮಾತನಾಡಿ, ಕುಶಾಲನಗರ ಆಡಳಿತಾತ್ಮಕವಾಗಿ ಉದ್ಘಾಟನೆಯಾಗಿದೆ. ಆದರೆ ತಾಲ್ಲೂಕು…

Read More

ಮಡಿಕೇರಿ ಜ.14 : ಶಬರಿಮಲೆಗೆ ತೆರಳಿದ್ದ ಮಡಿಕೇರಿ ನಗರದ ಯುವಕನೊಬ್ಬ ಮರಳುವ ಸಂದರ್ಭ ಸಮುದ್ರದಲೆಗೆ ಸಿಲುಕಿ ಮೃತಪಟ್ಟಿರುವ ಘಟನೆ ಕೇರಳದ ಕಣ್ಣೂರ್ ಬೀಚ್ ನಲ್ಲಿ ನಡೆದಿದೆ. ನಗರದ ಸುದರ್ಶನ ಬಡಾವಣೆ ನಿವಾಸಿ ಲೋಕೇಶ್ ಎಂಬುವವರ ಪುತ್ರ ಶಶಾಂಕ್ (25) ಮೃತ ದುರ್ದೈವಿ. ಶಬರಿಮಲೆಯಿಂದ ಮರಳುವಾಗ ಯುವಕರ ತಂಡ ಕೇರಳದ ಕಣ್ಣೂರ್ ಬೀಚ್ ಗೆ ಭೇಟಿ ನೀಡಿತ್ತು. ಈ ಸಂದರ್ಭ ಇವರುಗಳು ಅಲೆಗಳಿಗೆ ಸಿಲುಕಿಕೊಂಡರು ಎಂದು ಹೇಳಲಾಗಿದೆ. ರಕ್ಷಿಸುವ ಪ್ರಯತ್ನ ಮಾಡಲಾಯಿತ್ತಾದರೂ ಶಶಾಂಕ್ ಬದುಕುಳಿಯಲಿಲ್ಲ ಎಂದು ತಿಳಿದು ಬಂದಿದೆ. ಮೃತ ಯುವಕ ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Read More

ಮಡಿಕೇರಿ ಜ.14 : ವೀರ ಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಏಕೈಕ ಪುತ್ರಿ ಮಿರೇಲ್ ಚಂಗಪ್ಪ(86) ಅವರು ಶನಿವಾರ ಬೆಂಗಳೂರಿನಲ್ಲಿ ವಿಧಿವಶವಾದರು. ಬೆಂಗಳೂರಿನಲ್ಲಿ ನೆಲೆಸಿದ್ದ ಕೊಂಗೆಟ್ಟಿರ ಮೇಜರ್ ಚಂಗಪ್ಪ ಅವರ ಪತ್ನಿ ಮಿರೇಲ್ ಚಂಗಪ್ಪ ಅವರು ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದರು. ಮಿರೇಲ್ ಚಂಗಪ್ಪ ಅವರು ತಾವು ಹುಟ್ಟಿ ಬೆಳೆದ ಮಡಿಕೇರಿಯ ಸನ್ನಿಸೈಡ್ ಮನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಶಕ್ಕೊಪ್ಪಿಸಿ ತಿಮ್ಮಯ್ಯ ಸ್ಮಾರಕ ಭವನ ಸ್ಥಾಪನೆಗೆ ಕಾರಣಕರ್ತರಾಗಿದ್ದರು. ::: ಶ್ರದ್ಧಾಂಜಲಿ ::: ಮಿರೇಲ್ ಚಂಗಪ್ಪ (86) ಅವರಿಗೆ ನಗರದ ತಿಮ್ಮಯ್ಯ ಸ್ಮಾರಕ ಭವನ ಸನ್ನಿಸೈಡ್ ನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮೃತರ ಭಾವಚಿತ್ರಕ್ಕೆ ತಿಮ್ಮಯ್ಯ ಸ್ಮಾರಕ ಭವನದ ವ್ಯವಸ್ಥಾಪಕ ಗೌಡಂಡ ಸುಬೇದಾರ್ ಮೇಜರ್ ತಿಮ್ಮಯ್ಯ, ನಾಯಕ್ ಸುಬೇದಾರ್ ಮೋಹನ್, ಪೊನ್ನುಕಂಡ ರಮ್ಯ ಮಾಚಯ್ಯ, ಕುಶಧರ, ಸುಭಾಷ್ ಚಂದ್ರ ಸೇರಿದಂತೆ ಭವನದ ಸಿಬ್ಬಂದಿಗಳು ಪುಷ್ಪ ನಮನ ಸಲ್ಲಿಸಿದರು. ಮಿರೇಲ್ ಚಂಗಪ್ಪರ ಒತ್ತಾಸೆಯಂತೆ ಸ್ಮಾರಕ ಭವನ ನಿರ್ಮಾಣವಾಗಿದ್ದು, ಅವರ ಕುಟುಂಬ ವರ್ಗದವರ ಸಹಕಾರ ಅತ್ಯಂತ…

Read More

ಮಡಿಕೇರಿ ಜ.14 : ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 33ನೇ ಮಕರ ಸಂಕ್ರಾಂತಿ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆಯಿಂದಲೇ ನಿರ್ಮಾಲ್ಯ ವಿಸರ್ಜನೆ, ಉಷಾ ಪೂಜೆ, ಶ್ರೀ ಮುತ್ತಪ್ಪ ಹಾಗೂ ಶ್ರೀ ಸುಬ್ರಹ್ಮಣ್ಯ ದೇವರ ಪೂಜೆ ಹಾಗೂ ಪಂಚಾಮೃತಾಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ, ಭಸ್ಮಾಭಿಷೇಕ, ಎಳನೀರಭಿಷೇಕ, ಪುಷ್ಪಾರ್ಚನೆ ಸೇವೆ ನಡೆಯಿತು. ನಂತರ ಶ್ರಿ ಕುಟ್ಟಿಚಾತನ್ ದೇವರ ವೆಳ್ಳಾಟಂ, ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, ಶ್ರೀ ಗುಳಿಗ ದೇವರ ವೆಳ್ಳಾಟಂ ಬಳಿಕ, ಶ್ರೀ ಅಯ್ಯಪ್ಪ ದೇವರ ಅಲಂಕಾರ ಪೂಜೆ ನಡೆಯಿತು. ನಂತರ ಶ್ರೀ ಅಯ್ಯಪ್ಪ ದೇವರ ಉತ್ಸವ ಮೂರ್ತಿಯ ಕ್ಷೇತ್ರ ಪ್ರದಕ್ಷಿಣೆ ಜರುಗಿತು. ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ ನೆರವೇರಿತು. ಸಂಜೆ 6 ರಿಂದ ಭಜನೆ ಕಾರ್ಯಕ್ರಮ ಜರುಗಲಿದ್ದು, 7 ಗಂಟೆಗೆ ಅಲಂಕಾರ ಪೂಜೆ, ಪಡಿಪೂಜೆ, ರಾತ್ರಿ 8 ಗಂಟೆಗೆ ದೀಪಾರಾಧನೆ ಹಾಗೂ ಪ್ರಸಾದ ವಿತರಣೆಯಾಗಲಿದೆ. ಜ.13 ರಂದು ಗಣಪತಿ ಹೋಮ, ಪಂಚಾಮೃತ ಅಭಿಷೇಕ ಇತ್ಯಾದಿ ಸೇವೆಗಳು ನಡೆಯಿತು.…

Read More

ಮಡಿಕೇರಿ ಜ.14 : ಕೊಡವ ಒಕ್ಕಡೊಕ್ಕಡ ಕೇರ್ ಬಲಿ ನಮ್ಮೆ- ಕೊಡವ ಕೌಟುಂಬಿಕ ಹಗ್ಗಜಗ್ಗಾಟ ಚೆಟ್ಟಂಗಡ ಕಪ್-2023 ಕ್ರೀಡಾಕೂಟದ ಲೋಗೋ ಬಿಡುಗಡೆ ಕಾರ್ಯಕ್ರಮವು ಜ.16 ರಂದು ನಡೆಯಲಿದೆ. ನೆಮ್ಮಲೆಯ ಚೆಟ್ಟಂಗಡ ಕುಟುಂಬದ ಐನ್‍ಮನೆಯಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜ ಕುಶಾಲಪ್ಪ ಲೋಗೊ ಅನಾವರಣಗೊಳಿಸಲಿದ್ದಾರೆ. ಅಧ್ಯಕ್ಷತೆಯನ್ನು ಚೆಟ್ಟಂಗಡ ಒಕ್ಕದ ಸಮಿತಿ ಅಧ್ಯಕ್ಷ ಚೆಟ್ಟಂಗಡ ವಿಜಯ ಕಾರ್ಯಪ್ಪ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೊಡವ ಹಾಕಿ ಅಕಾಡೆಮಿ ಕಾರ್ಯದರ್ಶಿ ಮಾಳೇಟಿರ ಶ್ರೀನಿವಾಸ್, ಕೊಡವ ಟಗ್ ಆಫ್ ವಾರ್ ಅಕಾಡೆಮಿ ಅಧ್ಯಕ್ಷ ಪೊನ್ನೋಲತಂಡ ಕಿರಣ್ ಪೊನ್ನಪ್ಪ ಪಾಲ್ಗೊಳ್ಳಲಿದ್ದಾರೆ.

Read More

ವಿರಾಜಪೇಟೆ ಜ.14 : ಸಮಾಜವು ವೈದ್ಯರ ಸೇವೆಯು ದೇವರ ಸೇವೆ ಎಂದು ನಂಬಿಕೊಂಡು ಸಾಗುತ್ತಿದೆ. ಸಮಾಜಕ್ಕೆ ಉತ್ತಮ ಸೇವೆ ಕಲ್ಪಿಸುವುದು ಸಾಮಾನ್ಯ ವೈದ್ಯನ ಬಹುಮುಖ್ಯ ಕರ್ತವ್ಯವಾಗಬೇಕು ಎಂದು ರಾಜೀವ್ ಗಾಂಧಿ ಆರೋಗ್ಯ ಮತ್ತು ವಿಜ್ಞಾನ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ. ಎಂ.ಕೆ.ರಮೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆಯ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ಅಂತಿಮ ವರ್ಷ ಪೂರೈಸಿದ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಪತ್ರ ವಿತರಿಸಿ ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಪದವಿ ಪಡೆದುಕೊಳ್ಳುವ ಸುದಿನವು ಸಾಮಾಜಿಕ ಜೀವನದ ಮೈಲಿಗಲ್ಲು. ಈ ನಿಟ್ಟಿನಲ್ಲಿ ಕೊಡಗು ದಂತ ಮಹಾವಿದ್ಯಾಲಯವು ಗುರುಕುಲದ ಮಾದರಿಯಲ್ಲಿ ಮೌಲ್ಯಯುತವಾದ ಶಿಕ್ಷಣವನ್ನು ಒದಗಿಸಿದೆ. ವೈದ್ಯನಾದವನು ರೋಗಿಗಳನ್ನು ಹಸನ್ಮುಖಿಯಾಗಿ ನಗುಮುಖದೊಂದಿಗೆ ಸ್ವಾಗತಿಸಬೇಕು ಹಾಗೂ ರೋಗಿಯ ಚಿಕಿತ್ಸಾವಿಧಿಗಳನ್ನು ಅನುಸರಿಸಬೇಕು. ಬೃಹತ್ ಸಮಾಜವು ನಮಗೆ ಹಲವು ಉತ್ತಮ ವ್ಯಾವಹಾರಿಕ, ಆರೋಗ್ಯಕರ, ಹಿತವಾದ ಸ್ವಸ್ಥ ಪ್ರಕೃತಿಕ ಜಗತ್ತನ್ನು ಕಲ್ಪಿಸಿದೆ. ಇಂತಹ ಸಮಾಜಕ್ಕೆ ದ್ರೋಹಬಗೆಯದೆ ಉತ್ತಮ ಸೇವೆಯನ್ನು ನೀಡುವುದರೊಂದಿಗೆ…

Read More

ಮಡಿಕೇರಿ ಜ.14 : ಬೆಟ್ಟಗೇರಿಯ ಉದಯ ವಿದ್ಯಾಸಂಸ್ಥೆಯಲ್ಲಿ ಜ.28 ರಂದು ನಡೆಯುವ 11ನೇ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಡಾ.ವಿಜಯ್ ಪೂಣಚ್ಚ ತಂಬಂಡ ಅವರು ಆಯ್ಕೆಯಾಗಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಅಂಬೆಕಲ್ಲು ನವೀನ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾಧ್ಯಕ್ಷ ಕೇಶವಕಾಮತ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಡಾ.ವಿಜಯ್ ಪೂಣಚ್ಚ ಅವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಕಸಾಪ ಗೌರವ ಕಾರ್ಯದರ್ಶಿಗಳಾದ ಮುನೀರ್ ಅಹಮ್ಮದ್, ಪುದಿಯನೆರವನ ರೇವತಿ ರಮೇಶ್, ಪುದಿಯನೆರವನ ರಿಶಿತ್ ಮಾದಯ್ಯ, ಮಡಿಕೇರಿ ತಾಲ್ಲೂಕು ಗೌರವ ಕಾರ್ಯದರ್ಶಿ ಕೆ.ಯು.ರಂಜಿತ್, ತುಳಸಿ ಮೋಹನ್, ಸಂಘಟನಾ ಕಾರ್ಯದರ್ಶಿ ತಳೂರು ದಿನೇಶ್, ಸಮ್ಮೇಳನದ ಮೇಲುಸ್ತುವಾರಿ ಸದಸ್ಯ ಚಂದ್ರಶೇಖರ್, ನಿರ್ದೇಶಕರುಗಳಾದ ಶ್ರೀಧರ್, ಹರೀಶ್ ಸರಳಾಯ, ಮಂಜುನಾಥ್, ಅಬ್ದುಲ್ಲ, ಪ್ರಕಾಶ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ::: ಡಾ.ವಿಜಯ್ ಪೂಣಚ್ಚ ಸಾಧನೆ ::: 26 ವರ್ಷಗಳಿಂದ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದಲ್ಲಿ ಪ್ರಾಧ್ಯಾಪಕ. ಮಂಗಳೂರು ವಿಶ್ವವಿದ್ಯಾಲಯದಲ್ಲಿ…

Read More