ಲೇಖಕ: admin

ಮಡಿಕೇರಿ ಫೆ.10 : ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಟಿ.ಜಾನ್ ಅವರ ನಿಧನಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಸಂತಾಪ ಸೂಚಿಸಿದೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಂತಾಪ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಕ್ಷದ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್, ಹಿರಿಯ ಕಾಂಗ್ರೆಸ್ಸಿಗ ಟಿ.ಜಾನ್ ಅವರ ಗುಣಗಾನ ಮಾಡಿದರು. ಕೊಡುಗೈ ದಾನಿಯೂ ಆಗಿದ್ದ ಅವರು ಸಾಮಾಜಿಕ ಕಳಕಳಿಯೊಂದಿಗೆ ಯಶಸ್ವೀ ರಾಜಕಾರಣಿ ಎನಿಸಿಕೊಂಡಿದ್ದರು. ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ ಕಾಂಗ್ರೆಸ್ ಗಾಗಿ ಶ್ರಮಿಸಿದ ನಿಷ್ಠಾವಂತ ನಾಯಕ ಟಿ.ಜಾನ್ ಅವರನ್ನು ಕಳೆದುಕೊಂಡು ಪಕ್ಷ ಬಡವಾಗಿದೆ. ಯುವ ಕಾರ್ಯಕರ್ತರಿಗೆ ಮಾರ್ಗದರ್ಶಕರಾಗಿದ್ದ ಅವರು ಸದಾ ನಮ್ಮ ನೆನಪಿನಲ್ಲಿ ಉಳಿಯುತ್ತಾರೆ ಎಂದರು. ಕೆಪಿಸಿಸಿ ಪದಾಧಿಕಾರಿಗಳಾದ ಕೆ.ಪಿ.ಚಂದ್ರಕಲಾ, ಸಿ.ಎಸ್.ಅರುಣ್ ಮಾಚಯ್ಯ, ಎಚ್.ಎಸ್.ಚಂದ್ರಮೌಳಿ, ಎ.ಎಸ್.ಪೆÇನ್ನಣ್ಣ, ಮೆರೋಜ್ ಖಾನ್, ಸುಮಾ ವಸಂತ್, ಮಿಟ್ಟು ಚಂಗಪ್ಪ, ವೀಣಾ ಅಚ್ಚಯ್ಯ, ಎಂ.ಸಿ.ನಾಣಯ್ಯ,…

Read More

ಶನಿವಾರಸಂತೆ ಫೆ.10 : ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಾಧ್ಯಮ ಕ್ಷೇತ್ರವು ಒಂದಾಗಿದ್ದು, ವಿದ್ಯಾವಂತರಿಗೆ ಉದ್ಯೋಗವಕಾಶಗಳಿವೆ ಎಂದು ಆಲೂರು ಸಿದ್ದಾಪುರ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಎ.ಎಸ್.ಶ್ರುತಿ ಅಭಿಪ್ರಾಯಪಟ್ಟರು. ಶನಿವಾರಸಂತೆ ಪ್ರೌಢಶಾಲೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಪತ್ರಿಕೆ ಮತ್ತು ಸಮೂಹ ಮಾಧ್ಯಮಗಳ ಕುರಿತು ಹಮ್ಮಿಕೊಂಡಿದ್ದ ಮಾಹಿತಿ ಅರಿವು ಕಾರ್ಯಕ್ರಮದಲ್ಲಿ   ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳು ನಾಲ್ಕನೆ ಅಂಗವಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಮೂಲಕ ಸಮಾಜವನ್ನು ತಿದ್ದುವ ಕಾರ್ಯಮಾಡುತ್ತಿದೆ ಎಂದರು.  ವಿದ್ಯಾರ್ಥಿಗಳಿಗೆ ಪತ್ರಿಕೆ, ಮಾಧ್ಯಮಗಳ ಬಗ್ಗೆ ಅರಿವಿನ ಅಗತ್ಯ ಇದೆ. ಈ ಮೂಲಕ ವಿದ್ಯಾರ್ಥಿಗಳು ಪತ್ರಿಕೋದ್ಯಮ ಕ್ಷೇತ್ರದ ಬಗ್ಗೆ ಆಸಕ್ತಿವಹಿಸುವಂತೆ ಸಲಹೆ ನೀಡಿದರು. ಶಾಲೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ ಧರ್ಮಪ್ಪ ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಹಲವಾರು ಮಾಹಿತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಇತರೆ ವಿಷಯಗಳ ಬಗ್ಗೆ ಅರಿವು ಮೂಡುತ್ತದೆ ಎಂದ ಅವರು ವಿದ್ಯಾರ್ಥಿಗಳಿಗೆ ಪತ್ರಿಕೋದ್ಯಮ ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ…

Read More

ಮಡಿಕೇರಿ ಫೆ.10 :  ಗೋವಾದ ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಕರ್ನಾಟಕ, ಕೇರಳ, ಮಹಾರಾಷ್ಟ್ರ ರಾಜ್ಯಗಳ ಆಕಾಶವಾಣಿ ಮತ್ತು ದೂರದರ್ಶನ ಕೃಷಿ ಕಾರ್ಯಕ್ರಮ ಹಾಗೂ ಅಧಿಕಾರಿಗಳ  ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದಲ್ಲಿ ಮಡಿಕೇರಿ ಆಕಾಶವಾಣಿಯಲ್ಲಿ  ಪ್ರತೀ ದಿನ ಸಂಜೆ 6.50 ಕ್ಕೆ ಬಿತ್ತರಿಸುತ್ತಿರುವ ಕಿಸಾನ್ ವಾಣಿ ಕಾರ್ಯಕ್ರಮಗಳನ್ನು ಪರಿಚಯಿಸಿ, ಕೃಷಿ ಗೀತೆಗಳನ್ನು ಅಧರಿಸಿದ ಕೃಷಿ ಕಳಸದ ಬಗ್ಗೆ ಮಾಹಿತಿ ನೀಡಲಾಯಿತು.  ಇದು ದೆಹಲಿಯಿಂದ ಆಗಮಿಸಿದ್ದ ಆಕಾಶವಾಣಿಯ ಹಾಗೂ ಕೃಷಿ ಮತ್ತು ರೈತ ಕಲ್ಯಾಣ ಮಂತ್ರಾಲಯದ ಹಿರಿಯ ಅಧಿಕಾರಿಗಳ ಮೆಚ್ಚುಗೆಯನ್ನು ಗಳಿಸಿತು. ಮಡಿಕೇರಿ ಆಕಾಶವಾಣಿಯಲ್ಲಿ ಕೃಷಿ ಕುರಿತು ತಯಾರಿಸಿರುವ 50 ಕೃಷಿ ಗೀತೆಗಳ ಬಗ್ಗೆಯೂ ಉಲ್ಲೇಖ ಮಾಡಲಾಯಿತು.  ಅಧಿಕಾರಿಗಳು  ಈ ಪ್ರಯತ್ನ  ಉಪಯುಕ್ತವಾಗಿದ್ದು, ಪರಿಣಾಮಕಾರಿಯಾಗಿದೆ ಎಂದು ಒಕ್ಕೊರಳಿಂದ ಹೇಳಿದರು. ಅಲ್ಲದೆ ಹಾಡುಗಳ ಮೂಲಕ ಕೃಷಿ ಮಾಹಿತಿ ತಿಳಿಸುವುದು ಸೂಕ್ತ  ಎಂದವರು ಹೇಳಿದರು. ಮಡಿಕೇರಿ ಆಕಾಶವಾಣಿಯಿಂದ ಮಾಡುತ್ತಿರುವ ಕೃಷಿ ರಸ ಪ್ರಶ್ನೆಗಳ ನೇರ ಪ್ರಸಾರದ ಕೃಷಿ ಸಿರಿ, ನೇರ ಫೋನ್ ಇನ್, ಇತ್ಯಾದಿ ಕಾರ್ಯಕ್ರಮಗಳ ಬಗ್ಗೆಯೂ…

Read More

ಶನಿವಾರಸಂತೆ ಫೆ.10 :  ಸಮೀಪದ ಮುಳ್ಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರದ್ಧಾಭಕ್ತಿಯಿಂದ ಶಾರದ ಪೂಜೆ ನೆರವೇರಿತು. ವಿದ್ಯಾರ್ಥಿಗಳೇ ಮಂತ್ರ ಪಠಿಸಿ ದೇವಿಗೆ ಪೂಜೆ ಸಲ್ಲಿಸಿದರು. ಸ್ಥಳೀಯ ಆರೋಗ್ಯ ವೈದ್ಯಾಧಿಕಾರಿಗಳಾದ ಸುಪರ್ಣಾ ಕೃಷ್ಣಾನಂದರವರು ಕಾರ್ಯಕ್ರಮಕ್ಕೆ ಭೇಟಿ ನೀಡಿ ಶಾರದ ಪೂಜೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಿದರು. ಮುಖ್ಯ ಶಿಕ್ಷಕರಾದ ಸಿ.ಎಸ್.ಸತೀಶ್,  ಅತಿಥಿ ಶಿಕ್ಷಕಿ ಎಮ್.ಆರ್. ನವ್ಯ, ಶಾಲಾ ಎಸ್. ಡಿ .ಎಂ .ಸಿ ಅಧ್ಯಕ್ಷೆ ಬಿಂದು ಸುರೇಶ್, ದ್ರಾಕ್ಷಾಯಿಣಿ ಉಪಸ್ಥಿತರಿದ್ದರು. ವರದಿ : ದಿನೇಶ್ ಮಾಲಂಬಿ (ಶನಿವಾರಸಂತೆ) 

Read More

ಮಡಿಕೇರಿ ಫೆ.10 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಾಗೂ ಮಡಿವಾಳರ ಅಭಿವೃದ್ಧಿ ಸಂಘ ಇವರ ಸಹಭಾಗಿತ್ವದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವು ಫೆಬ್ರವರಿ, 11 ರಂದು ಸಂಜೆ 4 ಗಂಟೆಗೆ ನಗರದ ಮಡಿಕಟ್ಟೆ, ದಾಸವಾಳ ರಸ್ತೆಯಲ್ಲಿರುವ ಶ್ರೀ ವೀರಭದ್ರ ಮುನೇಶ್ವರ ದೇವಾಲಯ ಸಭಾಂಗಣದಲ್ಲಿ ನಡೆಯಲಿದೆ. ಶಾಲಾ ಶಿಕ್ಷಣ, ಸಾಕ್ಷರತೆ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಫೆ.10 : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಪ್ರಯುಕ್ತ ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆತ್ತುಕಾಯ ವಿಎಸ್‍ಎಸ್‍ಎನ್ ಸಭಾಂಗಣದಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ಫೆ.17 ರಂದು ಬೆಳಗ್ಗೆ 10 ಗಂಟೆಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ ಎಂದು ತಾಲ್ಲೂಕು ತಹಶೀಲ್ದಾರ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಫೆ.10 : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್ ಇಲಾಖೆ ವತಿಯಿಂದ ಕುಶಾಲನಗರ ತಾಲ್ಲೂಕಿನ ನೇತಾಜಿ ಯುವ ಸಂಘದ ಸಭಾಂಗಣದಲ್ಲಿ ‘ಆಯುಷ್ ಸೇವಾ ಗ್ರಾಮ’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಿತು. ಪಿಡಿಒ ರಾಜಶೇಖರ್, ಗ್ರಾ.ಪಂ.ಉಪಾಧ್ಯಕ್ಷರಾದ ಕವಿತಾ, ಸದಸ್ಯರಾದ ನೀತಾ ಹರೀಶ್, ಸುನಿಲ್, ಚನ್ನಬಸವಿ ಹಾಗೂ ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ ಮತ್ತು ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಎಚ್.ಆರ್.ಸರಸ್ವತಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಿಡಿಒ ರಾಜ್‍ಶೇಖರ್ ಮಾತನಾಡಿ ಆಯುಷ್ ವೈದ್ಯ ಪದ್ಧತಿಯಿಂದ ಅಡ್ಡಪರಿಣಾಮವಿಲ್ಲದ ಚಿಕಿತ್ಸೆ ಪಡೆಯುವುದು, ಆಯುಷ್ ಅರಿವು, ಮನೆಮದ್ದು, ಪ್ರಾತ್ಯಕ್ಷಿಕೆ ಹಾಗೂ ಉಚಿತ ಆರೋಗ್ಯ ಶಿಬಿರದ ಪ್ರಯೋಜನವನ್ನು ಎಲ್ಲರೂ ಪಡೆಯಬೇಕು ಎಂದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ ಮಾತನಾಡಿ ಆಯುಷ್ ಸೇವಾ ಗ್ರಾಮದ ಬಗ್ಗೆ ಸಂಪೂರ್ಣ ವಿವರ ನೀಡಿದರು. ಕಾರ್ಯಕ್ರಮದಲ್ಲಿ ಇಲಾಖೆಯಿಂದ ಔಷಧಿ ಗಿಡಗಳನ್ನು ಹಾಗೂ ಕ್ಯಾಲೇಂಡರ್‍ಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕರು ಪಾಲ್ಗೊಂಡಿದ್ದರು.

Read More

ಮಡಿಕೇರಿ ಫೆ.10 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಗ್ರಂಥಾಲಯ ವಿಭಾಗ ವತಿಯಿಂದ ಕರ್ನಾಟಕ ಆರೋಗ್ಯ ವಿಜ್ಞಾನಗಳ ಗ್ರಂಥಾಲಯಗಳ ಸಂಘ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಕಾಲ ಏರ್ಪಡಿಸಿರುವ 14 ನೇ ‘ರಾಷ್ಟ್ರೀಯ ಗ್ರಂಥಾಲಯ ಸಮ್ಮೇಳನ’ಕ್ಕೆ ಗಣ್ಯರಿಂದ ಚಾಲನೆ ದೊರೆಯಿತು. ಈ ಬಾರಿ ಗ್ರಂಥಪಾಲಕರು ಮತ್ತು ವೈದ್ಯರಿಗೆ ಆರೋಗ್ಯ ವಿಜ್ಞಾನದ ಮಾಹಿತಿ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ವಿಶ್ರಾಂತಿ ಕುಲಪತಿಗಳಾದ ಡಾ.ಟಿ.ಡಿ.ಕೆಂಪರಾಜು ಅವರು ಮಾತನಾಡಿ ಭಾರತವನ್ನು ಜ್ಞಾನ ಸಮಾಜವಾಗಿ, ಗ್ರಂಥಾಲಯಗಳಾಗಿ ಪರಿವರ್ತಿಸುವುದು ದೃಷ್ಟಿಯಾಗಿದೆ. ಆ ನಿಟ್ಟಿನಲ್ಲಿ ಆಧುನಿಕ ದಿನಗಳಲ್ಲಿ ಗ್ರಂಥಾಲಯಗಳು ತಮ್ಮ ಕಾರ್ಯಕ್ರಮ, ಕಾರ್ಯವಿಧಾನಗಳು, ಉಪಕರಣಗಳು ಮತ್ತು ತಂತ್ರಗಳನ್ನು ವಿವಿಧ ಗ್ರಂಥಾಲಯದ ಕೆಲಸಗಳು ಮತ್ತು ಸೇವೆಗಳಲ್ಲಿ ಮರು ವಿನ್ಯಾಸಗೊಳಿಸುವ ಅಗತ್ಯವಿದೆ ಎಂದರು. ಸ್ಮಾರ್ಟ್ ಟೆಕ್ನಾಲಜೀಸ್‍ನ ಹೊರಹೊಮ್ಮುವಿಕೆ, ಮಾಹಿತಿ ಸಂಪನ್ಮೂಲಗಳ ಹೊಸ ಸ್ವರೂಪ, ಡಿಜಿಟಲ್ ಸಂಪನ್ಮೂಲಗಳ ತೀವ್ರ ಬಳಕೆ ಮತ್ತು ನವೀನ ತಂತ್ರಜ್ಞಾನಗಳು ಮತ್ತು…

Read More

ವಿರಾಜಪೇಟೆ ಫೆ.9 : ಎರಡು ಶತಮಾನಕ್ಕು ಹೆಚ್ಚಿನ ಇತಿಹಾಸವನ್ನು ಹೊಂದಿರುವ ಪಟ್ಟಣ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ ಹಾಗೂ ಲೂರ್ದು ಮಾತೆಯ ಉತ್ಸವವು ಫೆ.11 ರಂದು ಶ್ರದ್ಧಾಭಕ್ತಿಯಿಂದ ನಡೆಯಲಿದೆ. ಉತ್ಸವಕ್ಕೆ ಸಂತ ಅನ್ನಮ್ಮ ಚರ್ಚ್‍ನ ಪ್ರಧಾನ ಧರ್ಮಗುರುಗಳಾದ ಡಾ.ದಯಾನಂದ ಪ್ರಭು ಅವರ ನೇತೃತ್ವದಲ್ಲಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಹಾಸನದ ಸಂತ ಅಂತೋಣಿ ಧರ್ಮಕೇಂದ್ರದ ಧರ್ಮಗುರು ಪ್ಯಾಟ್ರಿಕ್ ಜೊವಾನ್ನೆಸ್ ಅವರು ಉತ್ಸವದ ಅಂಗವಾಗಿ ನಡೆಯಲಿರುವ ಆಡಂಭರ ಗಾಯನ ಬಲಿಪೂಜೆಯನ್ನು ನೆರವೇರಿಸಿಕೊಡಲಿದ್ದಾರೆ. ಪ್ರಧಾನ ಪೂಜೆಯ ಬಳಿಕ ಸಾಹಿತಿ ಹಾಗೂ ಧರ್ಮಕೇಂದ್ರದ ಪ್ರಧಾನ ಧರ್ಮಗುರುಗಳಾದ ಡಾ.ದಯಾನಂದ ಪ್ರಭು ಅವರ ‘ಧ್ಯಾನ ಸಂಗಮ’ ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಬಳಿಕ ವಿದ್ಯುತ್ ದೀಪಾಲಂಕೃತ ತೇರಿನ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ. ರಾತ್ರಿ ಚರ್ಚ್‍ನಲ್ಲಿ ಅನ್ನ ಸಂತರ್ಪಣೆ ನಡೆಯಲಿದೆ. ವಾರ್ಷಿಕ ಉತ್ಸವದಲ್ಲಿ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ಧರ್ಮಗುರು ಐಸಾಕ್ ರತ್ನಾಕರ್, ಧರ್ಮಗುರು ಯೇಸು ಪ್ರಸಾದ್ ಸೇರಿದಂತೆ ವಿವಿಧೆಡೆಯ ಧರ್ಮಗುರುಗಳು ಭಾಗವಹಿಸಲಿದ್ದಾರೆ.

Read More

ಕುಶಾಲನಗರ ಫೆ.10: ಕುಶಾಲನಗರ ಸಮೀಪದ ಬೈಲುಕುಪ್ಪೆಯ ಟಿಬೇಟಿಯನ್ ನಿರಾಶ್ರಿತ ಶಿಬಿರದಲ್ಲಿ ಫೆ.23 ರಿಂದ ಒಂದು ವಾರಗಳಕಾಲ ಟಿಬೇಟಿಯನ್ ಉತ್ಸವ ನಡೆಯಲಿದೆ ಎಂದು ಟಿಬೇಟನ್ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ತಶಿ ವುಂಗ್ಡು ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಟಿಬೇಟಿಯನ್ ಸಂಸ್ಕೃತಿ  ಮತ್ತು ಪರಂಪರೆಯ ವಾರದ ಆಚರಣೆಯು ವರ್ಣರಂಜಿತವಾಗಿರಲಿದೆ ಎಂದು ತಿಳಿಸಿದರು. ಉತ್ಸವವು ಸಾಂಪ್ರದಾಯಿಕ ಸಂಗೀತ ಮತ್ತು ನೃತ್ಯ, ಮರಳು ಮಂಡಲದ ಲೈವ್ ರಚನೆ, ಕಾರ್ಪೆಟ್ ನೇಯ್ಗೆ ಮತ್ತು ಟಿಬೇಟಿಯನ್ ಚಿತ್ರಕಲೆ, ಟಿಬೇಟಿಯನ್ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ರುಚಿಕರವಾದ ಟಿಬೆಟಿಯನ್ ಪಾಕ ಪದ್ಧತಿ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಉತ್ಸವದಲ್ಲಿ ಪ್ರದರ್ಶಿಸಲಾಗುವುದು ಹಾಗೂ ಟಿಬೆಟ್ ವೈದ್ಯಕೀಯ ಶಿಬಿರ ಮತ್ತು ಸಾಂಪ್ರದಾಯಿಕ ಟಿಬೇಟಿಯನ್ ಕ್ರೀಡೆಗಳನ್ನು ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶವಿದೆ. ಮನರಂಜನೆಯ ಜೊತೆಗೆ, ಉತ್ಸವವು ಟಿಬೇಟಿಯನ್ ಬೌದ್ಧಧರ್ಮ, ಟಿಬೇಟಿಯನ್ ಮೆಡಿಸಿನ್, ವಿಶಿಷ್ಟಚಿತ್ರಕಲೆ ಮತ್ತು ಟಿಬೆಟ್ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಕುರಿತು ಸಂವಾದ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಳ್ಳಲಾಗುತ್ತದೆ ಎಂದರು. ಉತ್ಸವ ಸಂದರ್ಭ ಮ್ಯಾಜಿಕ್…

Read More