ವಿರಾಜಪೇಟೆ ಮಾ.17 : ಕರ್ನಾಟಕ ಸರಕಾರದ ವತಿಯಿಂದ ನೀಡಲಾಗುವ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಭಾಜನರಾದ ಪೂಮಾಲೆ ಪತ್ರಿಕೆ ಸಂಪಾದಕರು, ವಿರಾಜಪೇಟೆ ತಾಲೂಕು ಜಾನಪದ ಪರಿಷತ್ತಿನ ಗೌರವ ಅದ್ಯಕ್ಷರು ಆಗಿರುವ ಅಜ್ಜೀನಿಕಂಡ ಮಹೇಶ್ ನಾಚಯ್ಯ ಅವರನ್ನು ವಿರಾಜಪೇಟೆ ಜಾನಪದ ಪರಿಷತ್ತಿನ ವತಿಯಿಂದ ಅವರ ನಿವಾಸಕ್ಕೆ ತೆರಳಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಇತ್ತೀಚೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇವರಿಗೆ ಮಾದ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರು, 27 ವರ್ಷಗಳ ನನ್ನ ಪತ್ರಿಕೋದ್ಯಮದಲ್ಲಿ “ಕಾಯಕವೇ ಕೈಲಾಸ’ ಎಂಬಂತೆ ಬಂದ ನನ್ನ ಹಾದಿಯಲ್ಲಿ ಕಲ್ಲು ಮುಳ್ಳುಗಳನ್ನು ಹಲವು ಬಾರಿ ಮೆಟ್ಟಿದ್ದರೂ ಧೃತಿಗೆಡದೆ ಮುನ್ನುಗ್ಗಿದ್ದೇನೆ. ಇಂದಿಗೂ ನಾನಾಗಿ ಯಾವುದೇ ಪ್ರಶಸ್ತಿ, ಸನ್ಮಾನಗಳ ಹಿಂದೆ ಬಿದ್ದಿಲ್ಲ. ನನಗಾಗಿ ಒಲಿದು ಬಂದವು ಒಂದಿಷ್ಟು. ಇದರಲ್ಲಿ ಪ್ರತಿಷ್ಟಿತ ಮಾಧ್ಯಮ ಅಕಾಡೆಮಿಯ ರಾಜ್ಯ ಪ್ರಶಸ್ತಿಯು ದೊರಕಿರುವುದು ನನ್ನಲ್ಲಿ ಸಾರ್ಥಕತೆ ತಂದಿದೆ. ಕುಟುಂಬವೆಂಬಂತೆ ಆತ್ಮೀಯತೆಯ ನಂಟನ್ನು ಹೊತ್ತಿರುವ ನಮ್ಮ ಜಾನಪದ ಮನಸ್ಸುಗಳು, ಅದರಲ್ಲೂ ವೀರಾಜಪೇಟೆ ತಾಲೂಕು…
ಲೇಖಕ: admin
ಮಡಿಕೇರಿ ಮಾ.17 : ಗೋಸಂರಕ್ಷಣೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಗ್ರಾಮ ವ್ಯಾಪ್ತಿಗಳಲ್ಲಿನ ಗೋಮಾಳಗಳಿಗೆ ಆಯಾ ವ್ಯಾಪ್ತಿಯಲ್ಲಿನ ಗೋಶಾಲೆಗಳಿಂದ ಬೇಲಿ ಹಾಕಿ, ಜಾನುವಾರುಗಳ ಸಂರಕ್ಷಣೆಗೆ ರಾಜ್ಯ ವ್ಯಾಪಿ ಕಾರ್ಯಕ್ರಮ ರೂಪಿಸಲಾಗುವುದೆಂದು ಕುಶಾಲನಗರ ಬಳಿಯ ಚಿಕ್ಕತ್ತೂರು ಗ್ರಾಮದ ಶ್ರೀಕೃಷ್ಣ ಗೋ ಶಾಲೆಯ ಅಧ್ಯಕ್ಷರು ಹಾಗೂ ಪ್ರಾಣಿ ದಯಾ ಸಂಘದ ಸದಸ್ಯ ಹರೀಶ್ ಜಿ.ಆಚಾರ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಮಾಳಗಳನ್ನು ಯಾವುದೇ ಸಂಘ-ಸಂಸ್ಥೆಗಳು, ಟ್ರಸ್ಟ್ಗಳಿಗೆ ಕಾನೂನೂ ಬದ್ಧವಾಗಿ ನೀಡಲು ಬರುವುದಿಲ್ಲವೆಂದು ಸರ್ಕಾರ ತಿಳಿಸುತ್ತದೆ. ಆದರೆ, ಇದೇ ಗೋಮಾಳಗಳನ್ನು ಅತಿಕ್ರಮಿಸಿಕೊಂಡು ಸಾಕಷ್ಟು ಮಂದಿ ಮನೆಗಳನ್ನು ನಿರ್ಮಿಸಿದ ಪ್ರಕರಣಗಳಿವೆ. ಅವರನ್ನು ತೆರವು ಮಾಡಬೇಕೆಂದು ನಾವು ಹೇಳುತ್ತಿಲ್ಲ. ಆದರೆ, ಆ ಸಂದರ್ಭ ಮೌನವಾಗಿದ್ದ ಸರ್ಕಾರ ಗೋವುಗಳಿಗೆ ಅನುಕೂಲ ಮಾಡಿಕೊಡುವ ಗೋಶಾಲೆಗಳಿಗೆ ಗೋಮಾಳವನ್ನು ಒದಗಿಸಲು ಯಾಕೆ ಮುಂದಾಗುತ್ತಿಲ್ಲವೆಂದು ಪ್ರಶ್ನಿಸಿದರು. ಗೋಮಾಳಗಳಲ್ಲಿ ರೆಸಾರ್ಟ್, ಕಟ್ಟಡ ನಿರ್ಮಾಣ, ಕೃಷಿ ನಡೆಸುವುದಿಲ್ಲ ಮೊದಲಾದ ನಿರ್ಬಂಧಗಳನ್ನು ವಿಧಿಸಿ ಗೋಶಾಲೆಗಳಿಗೆ ಅದನ್ನು ಒದಗಿಸಿದಲ್ಲಿ ಗೋವುಗಳ ಸಂರಕ್ಷಣೆ ಸಾಧ್ಯವಾಗುತ್ತದೆ. ಇಲ್ಲವಾದಲ್ಲಿ ಕಾಲ ಕ್ರಮೇಣ ಇರುವ ಗೋಮಾಳಗಳು ಅತಿಕ್ರಮಣಕ್ಕೆ ಒಳಗಾಗಿ ಗೋಮಾಳಗಳೇ…
ಮಡಿಕೇರಿ ಮಾ.17 : ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದರೂ ಕೊಡಗಿನ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಬಿಜೆಪಿ ಪ್ರತಿನಿಧಿಗಳು ವಿಫರಾಗಿರುವುದರಿಂದ ಭ್ರಮನಿರಸನಗೊಂಡಿರುವ ಜನ ಈ ಬಾರಿ ಬದಲಾವಣೆಯನ್ನು ಬಯಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿಯಿಂದ ಹಿಡಿದು ಕೇಂದ್ರದವರೆಗೆ ಬಿಜೆಪಿ ಅಧಿಕಾರದಲ್ಲಿರುವುದಲ್ಲದೆ, ಜಿಲ್ಲೆಯ ಎರಡು ಕ್ಷೇತ್ರಗಳಲ್ಲು ಬಿಜೆಪಿ ಶಾಸಕರಿದ್ದಾರೆ. ಹೀಗಿದ್ದೂ ಜಿಲ್ಲೆಯ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಇವರುಗಳು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಟೀಕಿಸಿದರು. ಕೊಡಗಿನ ಪ್ರಮುಖ ಕೃಷಿಯಾಗಿರುವ ಕಾಫಿ ವಾಣಿಜ್ಯ ಇಲಾಖೆಯ ವ್ಯಾಪ್ತಿಗೆ ಒಳಪಡುತ್ತದೆ. ಈ ಕೃಷಿಗೆ ಸಂಬಂಧ ಪಟ್ಟಂತೆ ಸೂಕ್ತ ಆಮದು ನೀತಿಯನ್ನು ರೂಪಿಸುವುದು ಸೇರಿದಂತೆ ಯಾವುದೇ ಗಂಭೀರ ವಿಚಾರಗಳ ಬಗ್ಗೆ ಬಿಜೆಪಿ ಸೂಕ್ತ ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಸೋತಿದೆಯೆಂದು ಆರೋಪಿಸಿದ ಅವರು, ಜಿಲ್ಲೆಯಲ್ಲಿ ದಿನೇ ದಿನೇ ಮಾನವ ಮತ್ತು ವನ್ಯ ಜೀವಿಗಳ ಸಂಘರ್ಷ ಹೆಚ್ಚುತ್ತಿದೆಯಾದರು ಇದಕ್ಕೆ ವೈಜ್ಞಾನಿಕವಾದ ಶಾಶ್ವತ ಪರಿಹಾರ ರೂಪಿಸುವಲ್ಲಿ ಬಿಜೆಪಿ ವಿಫಲವಾಗಿದೆಯೆಂದು ಹೇಳಿದರು. ವನ್ಯಜೀವಿಗಳ ಹಾವಳಿ ಸೇರಿದಂತೆ…
ಮಡಿಕೇರಿ ಮಾ.17 : ನಗರಸಭೆಯ 2023-24ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 20 ರಂದು ಬೆಳಗ್ಗೆ 11.30 ಗಂಟೆಗೆ ನಗರಸಭೆ ಕೌನ್ಸಿಲ್ ವಿಶೇಷ ಸಭೆಯು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಮಡಿಕೇರಿ ಮಾ.17 : ಕೊಡಗು ಜಿಲ್ಲೆಯಾದ್ಯಂತ ಕ.ವಿ.ಪ್ರ.ನಿ.ನಿ.ರವರ ಕೋರಿಕೆಯ ಮೇರೆಗೆ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಮಾರ್ಚ್, 19 ರಂದು ಬೆಳಗ್ಗೆ 11 ರಿಂದ ಸಂಜೆ 3 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕೊಡಗು ಜಿಲ್ಲಾ ವ್ಯಾಪ್ತಿಯ ಗ್ರಾಹಕರು/ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಮಾ.17 : ಕರ್ನಾಟಕ ಜೀವ ವೈವಿಧ್ಯ ಮಂಡಳಿ ಹಾಗೂ ಅರಣ್ಯ ಇಲಾಖೆ ವತಿಯಿಂದ ಕೊಡಗು ಜಿಲ್ಲೆಯ ಹಾರಂಗಿಯಲ್ಲಿ ಉದ್ದೇಶಿತ ‘ಜೀವ ವೈವಿಧ್ಯ ಔಷಧ ಉದ್ಯಾನ’ ನಿರ್ಮಾಣ ಕಾರ್ಯಕ್ಕೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಭೂಮಿ ಪೂಜೆ ನೆರವೇರಿಸಿದರು. ಹಾರಂಗಿ ವೃಕ್ಷೋದ್ಯಾನವನ ಆವರಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಶಿಲಾನ್ಯಾಸ ಫಲಕ ಅನಾವರಣಗೊಳಿಸಿ, ಸಾಂಕೇತಿಕವಾಗಿ ಔಷಧಿಯ ಗಿಡಗಳನ್ನು ನೆಡುವ ಮೂಲಕ ಉದ್ದೇಶಿತ ಯೋಜನೆಗೆ ಚಾಲನೆ ನೀಡಿದರು. ಔಷಧೀಯ ಸಸ್ಯಗಳನ್ನು ಬೆಳೆಸಿ, ಅವುಗಳ ಮಹತ್ವವನ್ನು ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ತಿಳಿಸುವ ನಿಟ್ಟಿನಲ್ಲಿ 2.5 ಹೆಕ್ಟೇರ್ ಪ್ರದೇಶದಲ್ಲಿ ‘ಜೀವ ವೈವಿಧ್ಯ ಔಷಧ ಉದ್ಯಾನ’ ನಿರ್ಮಿಸಲು ಮಂಡಳಿ ಮುಂದಾಗಿದೆ. ಚಾಲನೆ ನೀಡಿದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅಪ್ಪಚ್ಚು ರಂಜನ್ ಅವರು ಔಷಧ ಉದ್ಯಾನ ನಿರ್ಮಾಣಕ್ಕೆ ಹಾರಂಗಿ ಉತ್ತಮ ಜಾಗ. ಔಷಧಿ ಸಸ್ಯಗಳನ್ನು ಉಳಿಸುವ ಕಾರ್ಯ ನಿರಂತರವಾಗಿ ಆಗಬೇಕು. ನಮ್ಮ ಪರಿಸರ ಉಳಿದರೆ ಮಾತ್ರ ಜೀವರಾಶಿಗಳು ಬದುಕಲು ಸಾಧ್ಯ ಎಂದರು. ಭಾರತೀಯರು ಪ್ರಕೃತಿ ಆರಾಧಕರು.…
ಮಡಿಕೇರಿ ಮಾ.17 : ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘದ ವತಿಯಿಂದ ಕೊಡಗಿನ ಏಲಕ್ಕಿ ಬೆಳೆಗಾರರಿಂದಲೇ ಖರೀದಿಸಿದ ಅಪ್ಪಟ ಏಲಕ್ಕಿಯಿಂದ ಘಮಘಮಿಸುವ ಆಕರ್ಷಕ ಏಲಕ್ಕಿ ಹಾರ ತಯಾರಿಸಿ ಶೀಘ್ರ ಮಾರುಕಟ್ಟೆಗೆ ಬಿಡಲಾಗುವುದು ಎಂದು ಸಂಘದ ಅಧ್ಯಕ್ಷ ಸೂದನ ಎಸ್.ಈರಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗಿನ ಏಲಕ್ಕಿ ವಿಶ್ವ ಪ್ರಸಿದ್ಧವಾಗಿದ್ದು, ಸಭೆ-ಸಮಾರಂಭ ಮತ್ತಿತರ ಕಾರ್ಯಕ್ರಮಗಳಲ್ಲಿ ಏಲಕ್ಕಿ ಹಾರವನ್ನು ಬಳಸುವುದರಿಂದ ಬೆಳೆಗಾರರಿಗೂ ಸಹಕಾರಿಯಾಗಲಿದೆ. ಏಲಕ್ಕಿ ಹಾರವನ್ನು ಹೂವಿನ ಹಾರದಂತೆ ಎಸೆಯುವ ಅಗತ್ಯವಿಲ್ಲ, ಇದು ಸಂಗ್ರಹ ಯೋಗ್ಯವಾಗಿದೆ. ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಗೂ ಏಲಕ್ಕಿ ಹಾರವನ್ನು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಕೊಡಗಿನ ಬೆಳೆಗಾರರರು ಬೆಳೆದ ಗುಣಮಟ್ಟದ ಏಲಕ್ಕಿಯಿಂದ ಉತ್ತಮ ಮತ್ತು ಆಕರ್ಷಕ ಏಲಕ್ಕಿ ಹಾರವನ್ನು ತಯಾರಿಸಲಾಗುವುದು. ಸ್ಥಳೀಯ ಹಾರ ತಯಾರಕರನ್ನು ಗುರುತಿಸಿ ಅಗತ್ಯವಿದ್ದರೆ ಸಂಘದಿಂದಲೇ ತರಬೇತಿ ನೀಡಲಾಗುವುದು. ವಿವಿಧ ಗಾತ್ರದ ಹಾರ ತಯಾರಿಸಿ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಏಲಕ್ಕಿ ಮಾರಾಟ ಸಹಕಾರ…
ಮಡಿಕೇರಿ ಮಾ.17 : ಪರಿಶಿಷ್ಟ ಜಾತಿ ಮತ್ತು ಪಂಗಡದ ಹೆಸರಿನಲ್ಲಿ ನಕಲಿ ಪ್ರಮಾಣ ಪತ್ರ ಪಡೆದು ಸರಕಾರಿ ಸೌಲಭ್ಯ ಪಡೆಯುತ್ತಿರುವ ವಂಚಕರನ್ನು ಪತ್ತೆಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಜೆ.ಆರ್.ಪಾಲಾಕ್ಷ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಜಿಲ್ಲೆಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರದ ಹಾವಳಿ ಹೆಚ್ಚಾಗುತ್ತಿದ್ದು, ಪರಿಶಿಷ್ಟರ ಮೀಸಲಾತಿ ಸೌಲಭ್ಯವನ್ನು ವಂಚಕರು ಪಡೆದುಕೊಳ್ಳುತ್ತಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯ ಲಕ್ನಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಪರಿಶಿಷ್ಟ ಜಾತಿಗೆ ಸೇರಿದವರೆಂದು ಸುಳ್ಳು ಜಾತಿ ದೃಢೀಕರಣ ಪತ್ರ ಪಡೆದು ಸರ್ಕಾರಿ ಯೋಜನೆಯಡಿ ಮನೆಯ ಪಕ್ಕದಲ್ಲೇ ರಸ್ತೆ ಮಾಡಿಸಿಕೊಂಡಿದ್ದಾರೆ. ಸಣ್ಣ ಕೈಗಾರಿಕಾ ಇಲಾಖೆಯಿಂದ ಹಾಗೂ ಅಂಬೇಡ್ಕರ್ ನಿಗಮದಿಂದ ಸಾಲ ಸೌಲಭ್ಯ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದಾರೆ. ಅಲ್ಲದೆ ಕೊಡ್ಲಿಪೇಟೆಯ ವ್ಯಕ್ತಿಯೊಬ್ಬರು ಸುಳ್ಳು ದೃಢೀಕರಣ ಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಅಲ್ಲಿನ ಗ್ರಾಮಸ್ಥರು ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರೂ ಯಾವುದೇ…
ಮಡಿಕೇರಿ ಮಾ.17 : ಹೊದ್ದೂರು ಗ್ರಾ.ಪಂ ವ್ಯಾಪ್ತಿಯ ಪಾಲೇಮಾಡು ಕಾನ್ಶಿರಾಂ ನಗರದ ಬಡಜನತೆಗೆ ಅಕ್ರಮ ಸಕ್ರಮದಡಿ ಜಾಗ ಮಂಜೂರು ಮಾಡದಿದ್ದಲ್ಲಿ ವಿಧಾನಸಭೆ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಲೇಮಾಡು ನಿವಾಸಿ ಪಿ.ಎ.ಧನಂಜಯ ಭೂಮಾಲೀಕರು ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಜಾಗವನ್ನು 30 ವರ್ಷಗಳಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ತಯಾರಿರುವ ಸರ್ಕಾರ ಬಡವರ ಸ್ವಾಧೀನದಲ್ಲಿರುವ 5- 10 ಸೆಂಟ್ ಜಾಗಕ್ಕೆ ಯಾಕೆ ಹಕ್ಕುಪತ್ರ ನೀಡುತ್ತಿಲ್ಲವೆಂದು ಪ್ರಶ್ನಿಸಿದರು. ಒಂದು ಸಣ್ಣ ಸೂರಿಗಾಗಿ 94ಸಿ, 94ಸಿಸಿ ಯಡಿ ಅರ್ಜಿ ಸಲ್ಲಿಸಿ ವರ್ಷಗಟ್ಟಲೆ ಅಲೆದಾಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಅಕ್ರಮ ಸಕ್ರಮದಡಿ ನೀಡಲಾಗಿರುವ ಬಡವರ ಅರ್ಜಿ ತಿರಸ್ಕೃತವಾಗುತ್ತಿದ್ದು, ಸರ್ಕಾರ ಬಡವರ ಬಗ್ಗೆ ಮಲತಾಯಿ ಧೋರಣೆ ಪ್ರದರ್ಶಿಸುತ್ತಿದೆ. ಕಳೆದ 15 ವರ್ಷಗಳಿಂದ ಪಾಲೇಮಾಡಿನ ಕಾನ್ಶಿರಾಂ ನಗರದಲ್ಲಿ 260 ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಹಕ್ಕುಪತ್ರ ಮತ್ತು ಮೂಲಭೂತ ಸೌಲಭ್ಯಗಳ ಕೊರತೆಯನ್ನು ಎದುರಿಸುತ್ತಿವೆ. ಈ ಬಗ್ಗೆ ಅನೇಕ ವರ್ಷಗಳಿಂದ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳ ಗಮನ ಸೆಳೆಯುತ್ತಾ…
ಮಡಿಕೇರಿ ಮಾ.17 : ಶತಶತಮಾನಗಳ ಇತಿಹಾಸವಿರುವ ಹಾಗೂ ಉದ್ಭವ ಶಿವಲಿಂಗವೆಂಬ ಖ್ಯಾತಿ ಹೊಂದಿರುವ ಪೊನ್ನಂಪೇಟೆ ತಾಲ್ಲೂಕಿನ ಕುಂದಾ ಮುಗುಟಿಗೇರಿ ಗ್ರಾಮದಲ್ಲಿರುವ “ಬೊಟ್ಟಿಯತ್ ನಾಡ್” ಈಶ್ವರ ದೇವಾಲಯದ (ನಾಡ್ ದೇವಸ್ಥಾನ) ವಾರ್ಷಿಕೋತ್ಸವವು ಅವಭೃತ ಸ್ನಾನದೊಂದಿಗೆ (ದೇವ ಕುಳಿಪೋ) ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು. ಕುಂದಾ ಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಈಶ್ವರ ದೇವಾಲಯಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಈ ಭಾಗದ ಆರು ಗ್ರಾಮಗಳಾದ ಮುಗುಟಿಗೇರಿ, ಕುಂದಾ, ಈಚೂರ್, ಹುದೂರ್, ಹಳ್ಳಿಗಟ್ಟ್ ಹಾಗೂ ಅರ್ವತೋಕ್ಲು ಗ್ರಾಮಗಳಿಗೆ ಸೇರಿರುವ ನಾಡ್ ದೇವಸ್ಥಾನ ಇದಾಗಿದೆ. ಬೊಟ್ಟಿಯತ್ ನಾಡ್ ಈಶ್ವರ ದೇವಸ್ಥಾನವೆಂದು ಖ್ಯಾತಿ ಪಡೆದಿರುವ ಈ ದೇವಾಲಯದಲ್ಲಿ ನಿತ್ಯ ಪೂಜೆಯ ಜೊತೆಗೆ, ವಿವಿಧ ಪೂಜಾ ಕೈಂಕರ್ಯಗಳು ಪ್ರತಿನಿತ್ಯ ನಡೆಯುತ್ತದೆ. ಪ್ರತಿವರ್ಷ ಮಾರ್ಚ್ ತಿಂಗಳಲ್ಲಿ ವಾರ್ಷಿಕ ಹಬ್ಬ ನಡೆಯಲಿದ್ದು, ಈ ಬಾರಿ ಕೊಡಿಮರೆ ನಿಲ್ಲಿಸುವುದರ ಮೂಲಕ ಹಬ್ಬಕ್ಕೆ ಚಾಲನೆ ನೀಡಲಾಗಿತ್ತು. ಉತ್ಸವದ ಪ್ರತಿನಿತ್ಯ ಮಧ್ಯಾಹ್ನ ಹಾಗೂ ರಾತ್ರಿ ನಿರಂತರ ಅನ್ನಸಂತರ್ಪಣೆ ಕಾರ್ಯಕ್ರಮದೊಂದಿಗೆ ಹರಕೆ ಬೊಳಕ್, ಅಲಂಕಾರ ಪೂಜೆ ಸೇರಿದಂತೆ 9ದಿನಗಳ ಕಾಲ ವಿವಿಧ ಪೂಜಾ…






