ಶನಿವಾರಸಂತೆ ಫೆ.9 : ಸಂಸ್ಕೃತಿಯ ಮಿಲನವಾಗಿದ್ದ ಗ್ರಾಮೀಣ ಸೊಗಡಿನ ಜಾತ್ರೋತ್ಸವಗಳು ಪ್ರಸ್ತುತ ದಿನಗಳಲ್ಲಿ ಮೋಜು ಮಸ್ತಿ ಮಾಡುವ ಸ್ಥಳವಾಗುತ್ತಿರುವುದು ಕಳವಳಕಾರಿಯ ವಿಷಯವಾಗಿದೆ ಎಂದು ಹಾಸನ ಆದಿ ಚುಂಚನಗಿರಿ ಶಾಖಾ ಮಠದೀಶ ಶ್ರೀ ಸಂಭುನಾಥಸ್ವಾಮೀಜಿ ವಿಷಾದಿಸಿದರು. ಗುಡುಗಳಲೆ ಜಾತ್ರಾ ಮೈದಾನದಲ್ಲಿರುವ ಶ್ರೀ ಜಯದೇವ ಜಾತ್ರಾ ಕಲಾ ವೇದಿಕೆಯಲ್ಲಿ 79ನೇ ಗುಡುಗಳಲೆ ಶ್ರೀ ಜಯದೇವ ಜಾನುವಾರುಗಳ ಜಾತ್ರೆಯ ಸಮಾರೋಪ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚಿಸಿದರು. ಗ್ರಾಮೀಣ ಪ್ರದೇಶದಲ್ಲಿ ಜಾತ್ರೋತ್ಸವಗಳಂತಹ ಸಂಸ್ಕೃತಿಯನ್ನು ಕಾಪಾಡಿಕೊಂಡು ಬರುತ್ತಿದ್ದು, ಗ್ರಾಮೀಣ ಭಾಗದ ರೈತಾಪಿ ಜನರು ವರ್ಷಪೂರ್ತಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ವರ್ಷಕೊಮ್ಮೆ ರೈತರು ಜಾತ್ರೆಗಳನ್ನು ಹಬ್ಬದ ರೀತಿಯಲ್ಲಿ ಆಚರಿಸುತ್ತಾರೆ. ಇದು ಜನರು, ರೈತರು ಸೇರಿವ ಸಾಂಸ್ಕೃತಿಕ ವ್ಯವಸ್ಥೆಯಾಗಿತ್ತು. ಆದರೆ ಇಂದು ಜಾತ್ರೋತ್ಸವಗಳನ್ನು ಮೋಜುವಿನ ವ್ಯವಸ್ಥೆಯನ್ನಾಗಿ ಮಾರ್ಪಡಿಸಿರುವುದು ವಿಷಾದನೀಯ ಎಂದರು. ಜಾತ್ರೆಗಳಲ್ಲಿ ಎಲ್ಲಾ ಜಾತಿ ಜನಾಂಗದವರು ಒಟ್ಟಾಗಿ ಸೇರುವ, ವೈವಿಧ್ಯತೆ, ರಥೋತ್ಸವ, ಸಂಸ್ಕೃತಿಯನ್ನು ಸಮ್ಮೀಲನಗೊಳಿಸುವ ಕೇಂದ್ರವಾಗಿದೆ. ಆದರೆ ಇಂದು ನಶಿಸುತ್ತಿರುವ ಜಾತ್ರೋತ್ಸವಗಳನ್ನು ಉಳಿಸಲು ಇಂದಿನ ಪೀಳಿಗೆ ಪ್ರಯತ್ನಿಸಿದರೆ ಮಾತ್ರ ಜಾತ್ರೆಯಂತಹ ಸಂಸ್ಕೃತಿ ಉಳಿಯಲು…
ಲೇಖಕ: admin
ಮಡಿಕೇರಿ ಫೆ.9 : ದಕ್ಷಿಣ ಕೊಡಗಿನ ಕಿರುಗೂರು ಗ್ರಾ.ಪಂ ವ್ಯಾಪ್ತಿಯ ಹೊಳೆಕೆರೆ ಭಾಗದ ಹೊಳೆಗೆ ಸೇತುವೆ ಮತ್ತು ತಡೆಗೋಡೆ ನಿರ್ಮಾಣಕ್ಕೆ 3.65 ಕೋಟಿ ರೂ. ಮಂಜೂರಾಗಿದೆ ಎಂದು ಗ್ರಾ.ಪಂ ಸದಸ್ಯ ಚೆಪ್ಪುಡಿರ ರಾಕೇಶ್ ದೇವಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಳೆಯ ಸೇತುವೆ ಕುಸಿದು ಸಂಚಾರಕ್ಕೆ ಅಡಚಣೆಯಾಗಿದೆ ಎಂದು ಕೆಲವರು ಇತ್ತೀಚೆಗೆ ಪ್ರತಿಭಟನೆ ನಡೆಸಿದ್ದರು. ಆದರೆ ನೂತನ ಸೇತುವೆ ನಿರ್ಮಾಣಕ್ಕೆ ಈಗಾಗಲೇ ಯೋಜನೆ ತಯಾರಿಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಈಗಾಗಲೇ ಚರ್ಚಿಸಲಾಗಿದೆ. ಶಾಸಕ ಕೆ.ಜಿ.ಬೋಪಯ್ಯ ಅವರು ಸೇತುವೆ ಮತ್ತು ತಡೆಗೋಡೆ ಕಾಮಗಾರಿಯ ವರದಿಯನ್ನು ಮುಖ್ಯಮಂತ್ರಿಗಳ ಕಚೇರಿಗೆ ತಲುಪಿಸಿದ್ದು, ಅನುಮೋದನೆ ದೊರೆತು ಹಣ ಮಂಜೂರಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಗ್ರಾಮಸ್ಥರ ಸಮಸ್ಯೆಗಳಿಗೆ ಗ್ರಾ.ಪಂ ಪ್ರಾಮಾಣಿಕವಾಗಿ ಸ್ಪಂದಿಸುತ್ತಿದ್ದು, ಹಳೆಯ ಸೇತುವೆ ಕುಸಿದಿರುವ ಬಗ್ಗೆ ನಮಗೂ ಬೇಸರವಿದೆ. ಹೊಳೆಯಿಂದ ನಿಯಮ ಬಾಹಿರವಾಗಿ ಮರಳು ತೆಗೆದಿರುವುದೇ ಸೇತುವೆ ಕುಸಿಯಲು ಕಾರಣ ಎಂದು ಆರೋಪಿಸಿರುವ ರಾಕೇಶ್ ದೇವಯ್ಯ, ಯಾರೂ ಸೇತುವೆ ವಿಚಾರದಲ್ಲಿ ಗೊಂದಲ ಸೃಷ್ಟಿಸಬಾರದು, ಅಲ್ಲದೆ ಇಲ್ಲಿರುವುದು ಪೈಸಾರಿ ಜಾಗ…
ಮಡಿಕೇರಿ ಫೆ.9 : ವಿರಾಜಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ವಿಎಫ್4 ಬೇತ್ರಿ, ವಿಎಫ್5 ಪಾಲಂಗಾಲ ಫೀಡರ್ನಲ್ಲಿ ‘ಎಬಿ’ ಕೇಬಲ್ ಅಳವಡಿಸುವ ಕಾಮಗಾರಿಯನ್ನು ನಿರ್ವಹಿಸಬೇಕಿರುವುದರಿಂದ ಫೆ.10 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕುಕ್ಲೂರು, ಬೇತ್ರಿ, ಕದನೂರು, ಕಾಕೋಟುಪರಂಬು, ನಾಲ್ಕೇರಿ, ಕಡಂಗಮರೂರು, ಕೆದಮಳ್ಳೂರು, ಪಾಲಂಗಾಲ, ಬೇಟೋಳಿ, ಗುಂಡಿಗೆರೆ, ಚಿಟ್ಟಾಡೆ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಫೆ.9 : ಮಡಿಕೇರಿಯ ನೋಂದಾಯಿತ ಕಟ್ಟಡ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಶಾಲಾ ಕಿಟ್ಗಳನ್ನು ಕಾರ್ಮಿಕ ಮಂಡಳಿಯ ಅರ್ಹ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 6 ರಿಂದ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ವಿತರಣೆ ಮಾಡಲಾಗುತ್ತದೆ. ಬರುವಂತ ಶಾಲಾ ಕಿಟ್ಗಳನ್ನು ಆದ್ಯತೆ ಮೇರೆಗೆ 8 ನೇ ತರಗತಿ ಮಕ್ಕಳಿಗೆ ವಿತರಣೆ ಮಾಡಲು ಕ್ರಮವಹಿಸಲಾಗುತ್ತದೆ. ಫಲಾನುಭವಿಯ ಗರಿಷ್ಠ 02 ಮಕ್ಕಳಿಗೆ ಮಾತ್ರ ಈ ಸೌಲಭ್ಯವನ್ನು ನೀಡಲಾಗುತ್ತಿದ್ದು. ಮೊದಲ ಹಂತದಲ್ಲಿ 01 ಮಗುವಿಗೆ ಮಾತ್ರ ಈ ಸೌಲಭ್ಯ ನೀಡಿ ಇತರೆ ಎಲ್ಲಾ ಮಕ್ಕಳಿಗೆ ಸೌಲಭ್ಯ ದೊರೆತ ನಂತರ ಶಾಲಾಕಿಟ್ಗಳು ಲಭ್ಯವಿದ್ದಲ್ಲಿ, 2 ನೇ ಮಗುವಿಗೆ ಸೌಲಭ್ಯ ಒದಗಿಸಲಾಗುವುದು. ಪತಿ ಮತ್ತು ಪತ್ನಿ ಇಬ್ಬರು ನೋಂದಾಯಿತ ಕಾರ್ಮಿಕರಾಗಿದ್ದಲ್ಲಿ ಗರಿಷ್ಠ ಎರಡು ಮಕ್ಕಳಿಗೆ ಮಾತ್ರ ಮೇಲಿನ ಕ್ರಮದಲ್ಲೇ ವಿತರಿಸಲು ಕ್ರಮವಹಿಸಲಾಗುತ್ತದೆ ಹೀಗಾಗಿ ಇಬ್ಬರಲ್ಲಿ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. 10 ದಿನಗಳೊಗೆ ಅರ್ಜಿಯನ್ನು ತಾಲ್ಲೂಕು ಕಾರ್ಮಿಕ ಇಲಾಖೆ ಕಚೇರಿಗೆ ಸಲ್ಲಿಸುವಂತೆ ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ…
ಮಡಿಕೇರಿ ಫೆ.9 : ಕರುನಾಡ ಜನತೆಯ ಆರೋಗ್ಯ ರಕ್ಷಕ ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿ ಜನಾರೋಗ್ಯ ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ರಯೋಜನ ಪಡೆಯಲು ಆಯುಷ್ಮಾನ್ ಕಾರ್ಡ್ ಮಾಡಿಸಿ. ಆಯುಷ್ಮಾನ್ ಕಾರ್ಡ್ಗಳನ್ನು ಹತ್ತಿರದ ಗ್ರಾಮ ಒನ್ನಿಂದ ರೇಷನ್ಕಾರ್ಡ್ ಲಿಂಕ್ ಆಗಿರುವ ಆಧಾರ್ ಕಾರ್ಡ್ ನೀಡಿ ಉಚಿತವಾಗಿ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಅವರು ಕೋರಿದ್ದಾರೆ. ಆಯುಷ್ಮಾನ್ ಕಾರ್ಡ್ ಹೊಂದಿರುವ ಬಿಪಿಎಲ್ ಫಲಾನುಭವಿಗಳಿಗೆ ವರ್ಷಕ್ಕೆ 5 ಲಕ್ಷ ರೂ ವರೆಗೂ ಎಪಿಎಲ್ ಫಲಾನುಭವಿಗಳಿಗೆ 1.50 ಲಕ್ಷ ದವರೆಗೂ ಸಹ ಪಾವತಿ ಆಧಾರದಲ್ಲಿ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಸಂಸ್ಥೆಗೆ ಭರಿಸಲಿದೆ. ಈ ಕಾರ್ಡ್ನ ನೆರವಿನಿಂದ ದೇಶದಲ್ಲಿ ಎಲ್ಲೇ ಇದ್ದರೂ ಉಚಿತವಾಗಿ ಚಿಕಿತ್ಸೆ ಪಡೆಯಲು ಪೋರ್ಟಬಿಲಿಟಿ ಸೌಲಭ್ಯವಿದೆ. ತುರ್ತು ಸಂದರ್ಭದಲ್ಲಿ 171 ಚಿಕಿತ್ಸಾ ವಿಧಾನಗಳಿಗೆ ರೋಗಿಯು ನೇರವಾಗಿ ಸರ್ಕಾರಿ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ರೆಫರಲ್ ಅವಶ್ಯಕತೆ ಇರುವುದಿಲ್ಲ. ಈ ಕಾರ್ಡ್ನ್ನು 14 ಸಂಖ್ಯೆಯ ಆಭಾ ಹೆಲ್ತ್ ಐಡಿಯೊಂದಿಗೆ ಸಂಯೋಜಿಸಲಾಗಿದೆ. ಕಾರ್ಡ್ ಇದ್ದರೂ…
ಮಡಿಕೇರಿ ಫೆ.9 : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಪ್ರಶಸ್ತಿ ಪಡೆದ ಸಂಸ್ಥೆಯ ಸಾಧಕರನ್ನು ಗುರುವಾರ ಸನ್ಮಾನಿಸಲಾಯಿತು. ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಸ್ಥೆಯ ಉಪಾಧ್ಯಕ್ಷರು ಮತ್ತು ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ನಾಡ ಪೆದ ಆಶಾ ಚಿತ್ರದ ಅಭಿನಯಕ್ಕೆ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಪುರಸ್ಕೃತರಾದ ಜಿಲ್ಲಾ ಸಂಸ್ಥೆಯ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ಗ್ರಾಮೀಣ ಶಿಕ್ಷಕ ರತ್ನ ಪ್ರಶಸ್ತಿ ಪುರಸ್ಕೃತರಾದ ಸಂಸ್ಥೆಯ ಶಿಕ್ಷಕ ಟಿ.ಕೆ.ವಾಮನ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿಮ್ಯಾಥ್ಯೂ, ಸ್ಥಾನಿಕ ಆಯುಕ್ತ ಎಚ್.ಆರ್.ಮುತ್ತಪ್ಪ, ಜಿಲ್ಲಾ ತರಬೇತಿ ಆಯುಕ್ತ ಮೈಥಿಲಿ ರಾಜ್, ಜಿಲ್ಲಾ ಖಜಾಂಚಿ ಪುಷ್ಪವೇಣಿ, ಮಡಿಕೇರಿ ಸ್ಥಳೀಯ ಸಂಸ್ಥೆ ಮುಖ್ಯಸ್ಥರಾದ ನೀಲಮ್ಮ ಮತ್ತು ತಂಗಮ್ಮ, ಜಿಲ್ಲಾ ಸಂಸ್ಥೆ ಮಾಜಿ ಕಾರ್ಯದರ್ಶಿ ಡೀಝಿ, ಸಂಪಾಜೆ ಸ್ಥಳೀಯ ಸಂಸ್ಥೆಯ ಸಹ ಕಾರ್ಯದರ್ಶಿ ಕೆ.ಯು.ರಂಜಿತ್, ಜಿಲ್ಲಾ ಕಾರ್ಯದರ್ಶಿ ಎಂ.ಎಂ.ವಸಂತಿ, ಪೊನ್ನಂಪೇಟೆ…
ಮಡಿಕೇರಿ ಫೆ.9 : ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಡಿಕೇರಿ ಐ ಸ್ಟೋರ್ ಮೊಬೈಲ್ ಶೋರೂಂ ಸಂಯುಕ್ತ ಆಶ್ರಯದಲ್ಲಿ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ ಹಾಗೂ ಮಡಿಕೇರಿ ಸ್ನೇಹಿತರ ಬಳಗ, ರಕ್ತನಿಧಿ ಘಟಕದ ಸಹಯೋಗದಲ್ಲಿ ಮಾದಕ ವಸ್ತುಗಳ ನಿಯಂತ್ರಣದ ಬಗ್ಗೆ ಜನ ಜಾಗೃತಿ ಜಾಥ ಹಾಗೂ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ. ಫೆ.13 ರಂದು ಬೆಳಗ್ಗೆ 10 ಗಂಟೆಗೆ ನಗರದ ಎ.ವಿ.ಶಾಲೆಯಿಂದ ಸರ್ಕಾರಿ ಜಿಲ್ಲಾ ಆಸ್ಪತ್ರೆ ವರೆಗೆ ರಕ್ತ ಹಾಗೂ ಮಾದಕ ವಸ್ತುಗಳ ನಿಯಂತ್ರಣದ ಬಗ್ಗೆ ಜನ ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ. ಪುಲ್ವಾಮಾ ದುರಂತದಲ್ಲಿ ಮೃತಪಟ್ಟ ಯೋಧರ ಸ್ಮರಣಾರ್ಥ ಫೆ.14 ರಂದು ಬೆಳಗ್ಗೆ 10 ಗಂಟೆಯಿಂದ 3 ಗಂಟೆ ವರೆಗೆ ಮಡಿಕೇರಿಯ ಬಾಲಭವನದಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ಹೆಚ್ಚಿನ ಮಾಹಿತಿಗೆ 7760830077, 97318 98768, 95359 04296, 9900201001 ಸಂಪರ್ಕಿಸಬಹುದಾಗಿದೆ.
ಕುಶಾಲನಗರ ಫೆ.9 : ವಾಲ್ನೂರು-ತ್ಯಾಗತ್ತೂರು ಗ್ರಾ.ಪಂ ವ್ಯಾಪ್ತಿಯ ಅಭ್ಯತ್ ಮಂಗಲ ವಾರ್ಡ್ ಗೆ ಸೇರಿದ ಮುಖ್ಯ ರಸ್ತೆಯ ಪಕ್ಕದಲ್ಲಿ ಅನಧಿಕೃತವಾಗಿ ಕಸ ಸುರಿದವರಿಗೆ ಗ್ರಾ.ಪಂ ಯಿಂದ ರೂ.10 ಸಾವಿರ ದಂಡ ವಿಧಿಸಲಾಯಿತು. ಕಸದ ರಾಶಿಯ ಬಗ್ಗೆ ಸಾರ್ವಜನಿಕರಿಂದ ಬಂದ ಖಚಿತ ಮಾಹಿತಿಯ ಮೇರೆಗೆ ಜನಪ್ರತಿನಿಧಿಗಳು ಮತ್ತು ಗ್ರಾ.ಪಂ ಸಿಬ್ಬಂದಿ ಹಾಗೂ ನೌಕರರೊಡನೆ ಕಾರ್ಯಾಚರಣೆ ನಡೆಸಿ ಕಸದಲ್ಲಿ ದೊರೆತ ಮೊಬೈಲ್ ಸಂಖ್ಯೆಯನ್ನು ಆಧರಿಸಿ ಸಂಬಂಧಪಟ್ಟವರಿಗೆ ದಂಡವನ್ನು ವಿಧಿಸಲಾಯಿತು.
ಮಡಿಕೇರಿ ಫೆ.9 : ಮಾದಾಪುರ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಗ್ರಾಮಾಭಿವೃದ್ಧಿ ಯುವಕ ಸಂಘದ ರಜತ ಮಹೋತ್ಸವ ಹಾಗೂ ಕೆ.ಎಂ.ಕಾರ್ಯಪ್ಪ ಅವರ ಜನ್ಮದಿನಾಚರಣೆ ಅಂಗವಾಗಿ ಫೆ.11 ಮತ್ತು 12 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಕ್ರೀಡಾ ಕೂಟ ನಡೆಯಲಿದೆ ಎಂದು ಸಂಘದ ಮಾಜಿ ಅಧ್ಯಕ್ಷ ಎಂ.ಎ.ಮಜೀದ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.11ರಂದು ಬೆಳಗ್ಗೆ 9 ಗಂಟೆಗೆ ಸಂಘದ ಅಧ್ಯಕ್ಷ ಕೆ.ಜೆ.ಅಂತೋಣಿ ಅವರ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದ ಮೆರವಣಿಯ ಉದ್ಘಾಟನೆಯನ್ನು ಗರಗಂದೂರು ಗ್ರಾಮದ ಎಂ.ಆರ್.ರಾಜನ್ ನೆರವೇರಿಸಲಿದ್ದು, ಕ್ರೀಡಾ ಉದ್ಘಾಟನೆಯನ್ನು ಕಾಫಿ ಬೆಳೆಗಾರ ನಂದ ಬೆಳ್ಯಿಯಪ್ಪ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನಿರ್ಮಲಮಾತೆ ದೇವಾಲಯದ ಧರ್ಮಗುರು ರಾಜೇಶ್, ಪ್ರಮುಖರಾದ ಗೌತಮ್ ಬಸಪ್ಪ, ಬಿ.ಎ.ಮೊಣ್ಣಪ್ಪ, ಮಾದಾಪುರ ಗ್ರಾ.ಪಂ ಅಧ್ಯಕ್ಷ ನಿರೂಪ ಹರೀಶ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಸಾಂಸ್ಕೃತಿಕ ಮತ್ತು ಸನ್ಮಾನ ಕಾರ್ಯಕ್ರಮವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೆ.ಜೆ.ಅಂತೋಣಿ ವಹಿಸಲಿದ್ದಾರೆ. ವಿಧಾನ…
ಚೆಯ್ಯಂಡಾಣೆ ಫೆ. 9 : ಹುತಾತ್ಮ ವೀರ ಯೋಧ ಅಲ್ತಾಫ್ ಒಂದನೇ ವರ್ಷದ ಸ್ಮರಣಾರ್ಥ ಫೆ. 11 ಹಾಗೂ 12 ರಂದು ಚೆಯ್ಯಂಡಾಣೆಯಲ್ಲಿ ಎಡಪಾಲ ಪ್ರಿಮಿಯರ್ ಲೀಗ್ ಸೀಸನ್ – 9 ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಇಪಿಎಲ್ ಪಂದ್ಯದ ಸ್ಥಾಪಕ ಅಧ್ಯಕ್ಷ ಹನೀಫ್ ತಿಳಿಸಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಚೆಯ್ಯಂಡಾಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಒಟ್ಟು 8 ತಂಡಗಳಲ್ಲಿ 96 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದರು. ಚೆಯ್ಯ0ಡಾಣೆ ವ್ಯಾಪ್ತಿಗೆ ಒಳಪಟ್ಟ ನರಿಯಂದಡ, ಕೊಕೇರಿ, ಚೇಲಾವರ ಗ್ರಾಮಕ್ಕೆ ಒಳಪಟ್ಟ ಕ್ರೀಡಾಪಟುಗಳನ್ನು ಬಿಡ್ಡಿಂಗ್ ಮೂಲಕ ಆಯ್ಕೆ ಮಾಡಲಾಗಿದ್ದು, 8 ತಂಡಕ್ಕೆ ಲೀಗ್ ಮಾದರಿ ಪಂದ್ಯಾವಳಿ ನಡೆಯಲಿದೆ ಎಂದು ತಿಳಿಸಿದರು. ಔಟ್ ಲುಕ್ ಬ್ಲಾಸ್ಟರ್ಸ್, ಬ್ಲೂ ಹಿಗಲ್, ಸ್ಟಾರ್ ಕ್ರಿಕೆಟರ್ಸ್, ವಿಲೇಜ್ ಪ್ಯಾಂಥರ್ಸ್, ದಿಲ್ ದಾರ್, ರಾಯಲ್ ಚಾಲೆಂಜರ್ಸ್, ರಿಸಿಂಗ್ ಬಾಯ್ಸ್,ಸೈಲೆಂಟ್ ಕಿಲ್ಲರ್ ತಂಡಗಳು ಪೈಪೋಟಿ ನೀಡಲಿದ್ದು, ಪ್ರಥಮ ಬಹುಮಾನ 25 ಸಾವಿರ ನಗದು ಹಾಗೂ ಆಕರ್ಷಕ…






