ಲೇಖಕ: admin

ಸುಂಟಿಕೊಪ್ಪ, ಜ.13: ಸ್ವಸ್ಥ ವಿಶೇಷ ಶಿಕ್ಷಣ ಪುನರ್ವಸತಿ ಕೇಂದ್ರದ 10ನೇ ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಚೇತನ ಮಕ್ಕಳು ವಿಭಿನ್ನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸುವ ಮೂಲಕ ನೆರೆದಿದ್ದವರ ಗಮನ ಸೆಳೆದರು. ಭಾರತದ ಏಕತೆಯನ್ನು ಸಾರುವ ವೈವಿಧ್ಯಮಯ ನೃತ್ಯಗಳನ್ನು ತಾಳೆ ಮದಳಕ್ಕೆ ತಕ್ಕಂತೆ ಹೆಜ್ಜೆ ಹಾಕಿ ಪೋಷಕರು ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.

Read More

ಮಡಿಕೇರಿ ಜ.13 :  ಬೇಂಗೂರು ಗ್ರಾ.ಪಂ  ವ್ಯಾಪ್ತಿಯ ಬಿ.ಬಾಡಗ ಗ್ರಾಮದಲ್ಲಿ 2.46 ಕೋಟಿ ವೆಚ್ಚ ಮತ್ತು ಕೊಳಗದಾಳು ಗ್ರಾಮದಲ್ಲಿ 2.45 ಕೋಟಿ ವೆಚ್ಚದಲ್ಲಿ ಜಲ ಜೀವನ್ ಮಿಷನ್ ಕಾಮಗಾರಿಗೆ ಶಾಸಕ  ಕೆ.ಜಿ.ಬೋಪಯ್ಯ  ಭೂಮಿ ಪೂಜೆ ಮಾಡಿದರು. ಬಳಿಕ ಬಿ.ಬಾಡಗ ಮತ್ತು ಬಲ್ಲಮಾವಟ್ಟಿ ಗ್ರಾಮದ ಸಂಪರ್ಕ ಸೇತುವೆ ಕಾಮಗಾರಿ ಪರಿಶೀಲಿಸಿದರು.

Read More

ಸುಂಟಿಕೊಪ್ಪ,ಜ.13: ಶ್ರದ್ಧಾಕೇಂದ್ರಗಳ ಸ್ವಚ್ಛತಾ ಆಂದೋಲನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‍ಬೈಲ್ ಒಕ್ಕೂಟ ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಕಾನ್‍ಬೈಲ್ ಶ್ರೀ ರಾಮ ಮಂದಿರದಲ್ಲಿ ಸ್ವಚ್ಚತಾ ಶ್ರಮದಾನ ನಡೆಸಿದರು. ಶ್ರೀ ರಾಮ ಮಂದಿರದ ಆವರಣದಲ್ಲಿ ಬೆಳೆದು ನಿಂತಿದ್ದ ಕಾಡು ಗಿಡ ಗಂಟಿಗಳನ್ನು ಕಡಿದು ಆವರಣದಲ್ಲಿದ್ದ ಕಸಕಡ್ಡಿಗಳನ್ನು ತೆಗೆದು ಸ್ವಚ್ಚಗೊಳಿಸಿದರು. ನಂತರ ದೇವಾಲಯದ ಒಳಭಾಗವನ್ನು ಶುಚಿಗೊಳಿಸಲಾಯಿತು. ಕಾನ್‍ಬೈಲ್ ಶ್ರೀರಾಮ ಮಂದಿರ ಅಧ್ಯಕ್ಷ ಬಿ.ಜಿ.ರಮೇಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯಾ ಮೇಲ್ವಿಚಾರಕಿ ಭವ್ಯ, ಕಾನ್‍ಬೈಲ್ ಒಕ್ಕೂಟದ ಅಧ್ಯಕ್ಷೆ ಖತ್ತೀಜ, ಉಪಾಧ್ಯಕ್ಷೆ ರೇಖಾ, ಸೇವಾ ಪ್ರತಿನಿಧಿ ಯಶೋಧ ಬಸವರಾಜು, ಒಕ್ಕೂಟದ ಪದಾಧಿಕಾರಿಗಳು ಸ್ವ ಸಹಾಯ ಸಂಘದ ಸದಸ್ಯರು ಹಾಗೂ ನಾಕೂರು ಶಿರಂಗಾಲ, ಕಾನ್‍ಬೈಲ್, ಮಂಜಿಕೆರೆ, ಮಳ್ಳೂರು, ಹೆರೂರು ವಿಭಾಗದ ಸ್ವ ಸಹಾಯ ಸಂಘದ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.

Read More

ವಿರಾಜಪೇಟೆ ಜ.13 : ವಿರಾಜಪೇಟೆ ತಾಲೂಕಿನ ಗಡಿ ಭಾಗದಲ್ಲಿ ಕನ್ನಡ ನಾಡು ನುಡಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಜ.21ರಂದು ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದ್ದು, ಸರ್ವರೂ ಸಮ್ಮೇಳನ ಯಶಸ್ವಿಗೊಳಿಸುವಂತೆ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ ಬೋಪಯ್ಯ ಹೇಳಿದರು. ಆರ್ಜಿ ಗ್ರಾ.ಪಂ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಬೇಟೋಳಿ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿ ಸಮ್ಮೇಳನಕ್ಕೆ ನಮ್ಮ ಸಹಕಾರ ಸದಾ ಇರುತ್ತದೆ ಎಲ್ಲಾ ಜನರ ಸಹಕಾರವು ಅಗತ್ಯವಾಗಿದೆ ಎಂದರು. ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಟಿ.ಪಿ ರಮೇಶ್ ಮಾತನಾಡಿ ತಾಲೂಕಿನಲ್ಲಿ ಇದು ಒಂಬತ್ತನೇ ಸಮ್ಮೇಳನ. ಗಡಿ ಭಾಗದಲ್ಲಿ ಕನ್ನಡ ಸಾಹಿತ್ಯವನ್ನು ಬೆಳೆಸುವ ನಿಟ್ಟಿನಲ್ಲಿ ಅತ್ಯಂತ ಯಶಸ್ವಿಯಾಗಿ ಸಮ್ಮೇಳನ ನಡೆಯಬೇಕಾಗಿದೆ. ಜ.21ರಂದು ಬೆಳಿಗ್ಗೆ…

Read More

ಮಡಿಕೇರಿ ಜ.13 :  ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ ವೇದಾಂಗ ಜ್ಯೋತಿಷ್ಯ ಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲ್ಪಡುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು. :: ಜ್ಯೋತಿಷ್ಯದ ತಳಹದಿ :: ಸನಾತನ ಹಿಂದೂ ಧರ್ಮದ ಬುನಾದಿಯಾಗಿರುವ ವೇದಗಳ ಅಂಗಗಳೆಂದೇ ಪ್ರಸಿದ್ಧವಾಗಿರುವ ಆರು ವೇದಾಂಗಗಳಲ್ಲಿ ಒಂದಾದ ಜ್ಯೋತಿಷ್ಯವನ್ನು ವೇದಗಳ ಕಣ್ಣೆಂದು ಗುರುತಿಸುತ್ತಾರೆ. ವೇದದಳ ಕಾಲದಿಂದಲೂ ಶುಭಕಾರ್ಯಗಳಿಗೆ ಮುಹೂರ್ತಾದಿ ಕಾಲವನ್ನು ನಿರ್ಣಯಿಸಿ, ಗ್ರಹಗಳ ಸ್ಥಿತಿ-ಗತಿ, ರಾಶಿ-ನಕ್ಷತ್ರ, ಗ್ರಹಣ, ಅಸ್ತೋದಯಗಳನ್ನು ನಿರ್ಣಯಿಸಿ, ಶುಭಾಶುಭ ಫಲಗಳನ್ನು ತೋರುತ್ತಾ, ಹಬ್ಬ-ಹರಿದಿನಗಳನ್ನು ಋತುಗಳಿಗನುಸಾರವಾಗಿ ಲೆಕ್ಕಾಚಾರ ಹಾಕಿ ಗುರುತಿಸುತ್ತಿದ್ದ ಶಾಸ್ತ್ರವೇ ಜ್ಯೋತಿಷ್ಯ. ಈ ಶಾಸ್ತ್ರದಂತೆ, ಸೂರ್ಯನು ನಿರ್ಯಾಣ ಮಕರರಾಶಿಯನ್ನು ಪ್ರವೇಶಿಸಿದಾಗ, “ಮಕರ ಸಂಕ್ರಾಂತಿ”ಯಾಗುತ್ತದೆ. ಈ ಕಾಲವು ಪ್ರತಿವರ್ಷ ಗ್ರೆಗೋರಿಯನ್ ಪಂಚಾಂಗದ ಜನವರಿ 14ರ ಸುಮಾರಿಗೆ ಬೀಳುತ್ತದೆ. ಹಿಂದೆ, ಈ…

Read More

ಮಡಿಕೇರಿ ಜ.13 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ಕೊಡಗು ಜಿಲ್ಲಾ ಸಂಸ್ಥೆಯಿಂದ ಮಡಿಕೇರಿಯಲ್ಲಿ   ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಮತ್ತು ಜಿಲ್ಲಾ ಮಟ್ಟದ ದೇಶ ಭಕ್ತಿ ಗೀತಾ ಗಾಯನ ಸ್ಪರ್ಧೆ ನಡೆಯಿತು. ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು  ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ  ಸಿ.ರಂಗದಾಮಯ್ಯ  ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು,  ಸ್ವಾಮಿ ವಿವೇಕಾನಂದರ ಸಂದೇಶಗಳು ಯುವಜನತೆಗೆ ಸ್ಪೂರ್ತಿದಾಯಕವಾಗಿದ್ದವು.  ಅವರ ಜೀವನ ಸಂದೇಶ, ತತ್ವಚಿಂತನೆಗಳು ಪ್ರತಿಯೊಬ್ಬರು ಪಾಲಿಸುವ ಅಗತ್ಯವಿದೆ ಎಂದು ಹೇಳಿದರು.  ದೇಶಭಕ್ತಿಗೀತೆ ಎಂಬುದು ದೇಶಕ್ಕೆ ಗೌರವ, ಎಲ್ಲಾರಿಗೂ ಶುಭವಾಗಲಿ ಎಂದು  ಹಾರೈಸಿದರು. ಸ್ಕೌಟ್ಸ್ ಮತ್ತು ಗೈಡ್ಸ್  ಜಿಲ್ಲಾ ಪ್ರಧಾನ ಆಯುಕ್ತ  ಕೆ.ಟಿ.ಬೇಬಿ ಮ್ಯಾಥ್ಯೂ ಅವರ ಅಧ್ಯಕ್ಷತೆಯಲ್ಲಿ  ನಡೆದ ಕಾರ್ಯಕ್ರಮದಲ್ಲಿ  ಜಿಲ್ಲಾ ಸ್ಥಾನಿಕ ಆಯುಕ್ತ  ಹೆಚ್.ಆರ್.ಮುತ್ತಪ್ಪ, ತರಬೇತಿ ಆಯುಕ್ತೆ ಮೈಥಿಲಿ ರಾವ್, ಉಪಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಖಜಾಂಚಿ  ಪುಷ್ಟವೇಣಿ, ಪ್ರಮುಖರಾದ  ಶೋಭಾ ಸುಬ್ಬಯ್ಯ, ಬೈತಡ ಜಾನಕ್ಕಿ, ಎಲ್ಲಾ ಶಾಲೆಯ ಶಿಕ್ಷಕರು ಹಾಜರಿದ್ದರು. ಹದಿನೆಂಟು ಶಾಲೆಗಳು ಸ್ಪರ್ಧೆಯಲ್ಲಿ…

Read More

ವಿರಾಜಪೇಟೆ ಜ.13 : ಸ್ವಾಮಿ ವಿವೇಕಾನಂದರ ಜೀವನ ಹಾಗೂ ಭೋದನೆಗಳು ನವ ಸಮಾಜಕ್ಕೆ ಆದರ್ಶವಾಗಿವೆ ಎಂದು ವಿರಾಜಪೇಟೆ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ.ದಯಾನಂದ ಅಭಿಪ್ರಾಯಪಟ್ಟರು. ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡು ಮಾತನಾಡಿದರು. ಸ್ವಾಮಿ ವಿವೇಕಾನಂದರು ತಮ್ಮ ಬಾಲ್ಯ ಜೀವನದಿಂದಲೇ ಸಾಧಕರಾಗಿದ್ದಾರೆ. ಅವರ ತತ್ವಗಳು ಆಧುನಿಕ ಜಗತ್ತಿನಲ್ಲಿ ಮಹತ್ವದ್ದಾಗಿದೆ. ಸದಾ ಯುವ ಜನತೆಯ ಪ್ರೇರಕ ಮಾರ್ಗದರ್ಶಕರಾದ ವಿವೇಕಾನಂದರು ಆದ್ಯಾತ್ಮಿಕತೆಯ ಬಗ್ಗೆ ಒಲವು ಹೊಂದಿದ್ದರು ಎಂದು ಹೇಳಿದರು. ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಅರ್ಜುನ್ ಎಚ್.ಆರ್.ರಾಷ್ಟ್ರೀಯ ಯುವ ದಿನಾಚರಣೆ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಸ್ವಾಮಿ ವಿವೇಕಾನಂದರು ಮಹಾನ್ ಸಂತರಾಗಿದ್ದರು. ಅವರಿಗೆ ಬುದ್ದಿ, ಏಕಾಗ್ರತೆ, ಆದ್ಯಾತ್ಮಿಕ ಬಗ್ಗೆ ಒಲವು ಇತ್ತು. ಅವರು ಯುವ ಶಕ್ತಿಯ ಮಾರ್ಗದರ್ಶಕರಾಗಿದ್ದರಲ್ಲದೆ ಸಮಾಜ ಸುಧಾರಣೆಗೆ ಅವರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.…

Read More

ವಿರಾಜಪೇಟೆ ನ.13 : ಬೇಟೋಳಿ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಜ.14 ರಂದು ಶ್ರೀ ಅಯ್ಯಪ್ಪ ಮಹೋತ್ಸವ ನಡೆಯಲಿದೆ. ಬೆಳಿಗ್ಗೆ ದೇವತಾ ಪ್ರಾರ್ಥನೆ, ಶ್ರೀ ಗಣಪತಿ ಹವನ, ಪಂಚಾಮೃತ ಅಭಿಷೇಕ, ಮಹಿಳಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಜರುಗಲಿದೆ. ಮಧ್ಯಾಹ್ನ ಮಹಾಪೂಜೆ, ಅನ್ನ ಸಂತರ್ಪಣೆ ಜರುಗಲಿದ್ದು, ಸಂಜೆ ಮಕರ ಜ್ಯೋತಿ ಪೂಜೆ ನಡೆದು ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಪುತ್ತೂರು ಸರಸ್ವತಿ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್‍ನ ಪ್ರಧಾನ ವ್ಯವಸ್ಥಾಪಕ ವಸಂತ ನಾಯಕ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಬೆಂಗಳೂರಿನ ಖ್ಯಾತ ಕಲಾವಿದ ಶ್ರೀ ಪ್ರಹ್ಲಾದ ಆಚಾರ್ಯ ತಂಡದಿಂದ ಮಾತನಾಡುವ ಗೊಂಬೆ ಹಾಗೂ ನೆರಳಿನಾಟ ನಡೆಯಲಿದೆ. ರಾತ್ರಿ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಜ.13 :  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ  ಬೆಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ವಸತಿ ಶಾಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ನಾಪೋಕ್ಲುವಿನ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ  7ನೇ ತರಗತಿ ವಿದ್ಯಾರ್ಥಿನಿ ಎ.ಎಂ ಚೈತನ್ಯ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾಳೆ.    ಇವಳು 100 ಮೀ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಇವರ ಸಾಧನೆಗೆ ಶಾಲಾ ಪ್ರಾಂಶುಪಾಲರು , ಶಿಕ್ಷಕ ವೃಂದ , ದೈಹಿಕ ಶಿಕ್ಷಕರು  ಮತ್ತು ಮನೆಯವರು ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.   

Read More

ಮಡಿಕೇರಿ ಜ.13 :  ಮಂಗಳೂರು ವಿಶ್ವ ವಿದ್ಯಾನಿಲಯ, ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ, ಸಮಾಜಕಾರ್ಯ ಅಧ್ಯಯನ ವಿಭಾಗ  ಹಾಗೂ  ಪ್ರಥಮ ವರ್ಷದ ಸಮಾಜ ಕಾರ್ಯ ಪ್ರಶಿಕ್ಷಣಾರ್ಥಿ ಗಳಿಂದ  ನೇರುಗಳಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ‘ಆರೋಗ್ಯ ಮತ್ತು ನೈರ್ಮಲ್ಯ’ ಕುರಿತು ಪ್ರೌಢಶಾಲಾ ಮಕ್ಕಳಿಗೆ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದ ನೇರುಗಳಲೆ ಗ್ರಾ.ಪಂ  ಅಧ್ಯಕ್ಷರಾದ ಕೆ.ಜಿ .ಪುಷ್ಪ  ಇಂತಹ ಜಾಗೃತಿ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿ ಪಡೆದುಕೊಳ್ಳುವುದರ ಜೊತೆಗೆ ಎಚ್ಚರ ವಹಿಸಿಕೊಳ್ಳಲಿದ್ದಾರೆ ಎಂದರು. ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ  ಲೋಕೇಶ ಭರಣಿ  ಪ್ರಾಸ್ತಾವಿಕ  ಮಾತನಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ಶುಶ್ರೂಷಕಿ ಎಂ.ಜಿ.ದಿವ್ಯ, ಅಬ್ಬೂರು ಕಟ್ಟೆಯ ಸಮುದಾಯ ಆರೋಗ್ಯ ಅಧಿಕಾರಿ ಡಿ.ನಂದಿನಿ ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರವೀಣ್ ಕುಮಾರ್ ನೇರುಗಳಲೆ ಸರ್ಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ನೈರ್ಮಲ್ಯದ ಮಹತ್ವದ ಕುರಿತು ಮನದಟ್ಟು ಮಾಡಿಸಿದರು.  ವೈಯಕ್ತಿಕ ಆರೋಗ್ಯ ಮತ್ತು ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಸಾಂಕ್ರಾಮಿಕ ರೋಗಗಳಿಂದ ಹೇಗೆ ರಕ್ಷಣೆ ಹೊಂದಬೇಕು…

Read More