ಶನಿವಾರಸಂತೆ ಫೆ.9 : ಗೌಡಳ್ಳಿಯಲ್ಲಿ ಸೋಮವಾರಪೇಟೆ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದರ ಸರ್ವಾಧ್ಯಕ್ಷರಾದ ಶನಿವಾರಸಂತೆ ಹೋಬಳಿ ಘಟಕದ ಜಾನಪದ ಪರಿಷತ್ತಿನ ಗೌರವಾಧ್ಯಕ್ಷರು ಹಾಗೂ ಪತ್ರಕರ್ತರಾದ ನಯನತಾರ ಪ್ರಕಾಶ್ ಚಂದ್ರ ಅವರನ್ನು ಶನಿವಾರ ಸಂತೆ ಹೋಬಳಿ ಜಾನಪದ ಪರಿಷತ್ ಘಟಕ ಹಾಗೂ ಶನಿವಾರಸಂತೆ ಪತ್ರಕರ್ತ ಮಿತ್ರರ ತಂಡದ ವತಿಯಿಂದ ಗೌರವಿಸಲಾಯಿತು. ನಂತರ ಮಾತನಾಡಿದ ನಯನತಾರ ಇದು ನನ್ನ ಸಾಹಿತ್ಯ ಕೃಷಿಗೆ ತಂದ ಗೌರವವಾಗಿದೆ. ಎಲ್ಲರ ಸಹಕಾರದಿಂದ ಸಮ್ಮೇಳನದ ಅಧ್ಯಕ್ಷತೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಚಿಂತನೆ ಇದೆ. ಸಾಹಿತ್ಯ ಪರಿಷತ್ತಿನ ಸರ್ವಸದಸ್ಯರು ಅವಿರೋಧವಾಗಿ ಆಯ್ಕೆಮಾಡಿರುವುದರಿಂದ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು. ಈ ಸಂದರ್ಭ ಶನಿವಾರಸಂತೆ ಜಾನಪದ ಪರಿಷತ್ ನ ಅಧ್ಯಕ್ಷೆ ಸುಜಲದೇವಿ, ಕಾರ್ಯದರ್ಶಿ ಚೆರಿಯಮನೆ ಸುರೇಶ್, ಪೂರ್ಣಿಮ ಕಿರಣ್, ಮಹಂತೇಶ್, ಪತ್ರಕರ್ತರಾದ ಬಾಸ್ಕರ್ ಮುಳ್ಳೂರು, ಧರಣಿ, ದಿನೇಶ್ ಮಾಲಂಬಿ ಹಾಜರಿದ್ದರು. ವರದಿ : ದಿನೇಶ್ ಮಾಲಂಬಿ (ಶನಿವಾರಸಂತೆ)
ಲೇಖಕ: admin
ಮಡಿಕೇರಿ ಫೆ.9 : ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಕೊಡಗು ಶಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ವಿರಾಜಪೇಟೆ ತಾಲ್ಲೂಕು ಮಟ್ಟದ ರಾಷ್ಟ್ರೀಯ ವಿಜ್ಞಾನ ಮತ್ತು ಗಣಿತ ದಿನಾಚರಣೆಯು ಪೊನ್ನಂಪೇಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢ ಶಾಲಾ ವಿಭಾಗ ದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿರಾಜಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶೈಲ ಬೀಳಗಿ, ವಿದ್ಯಾರ್ಥಿಗಳು ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಆಸಕ್ತಿ ಬೆಳೆಸಿಕೊಂಡು ಅಧ್ಯಯನ ಮಾಡಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಸಂಸ್ಥೆಯ ಖಜಾಂಚಿ ಡಾ. ಕೆ.ಎನ್. ಚಂದ್ರಶೇಖರ್ , ಯಾವುದನ್ನು ಪರಿಶೀಲಿಸದೆ ಒಪ್ಪಿಕೊಳ್ಳಬಾರದು. ಪ್ರಶ್ನಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಆಗ ಮಾತ್ರ ಕಲಿಕೆಯಲ್ಲಿ ಪ್ರಗತಿ ಹೊಂದಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರಯೋಜನಕಾರಿ ಆಗಲು ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ವತಿಯಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು. ವಿರಾಜಪೇಟೆ ತಾಲ್ಲೂಕಿನ 17 ಶಾಲೆಗಳಿಂದ 122 ವಿದ್ಯಾರ್ಥಿಗಳು…
ಚೆಟ್ಟಳ್ಳಿ ಫೆ.9 : ಬಾಳುಗೋಡು ಫೆಡರೇಶನ್ ಆಫ್ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಾಸಿಕ ಸಭೆ ಸಮಾಜದ ಅಧ್ಯಕ್ಷರಾದ ಬಲ್ಲಣಮಾಡ ರೀಟಾ ಅಪ್ಪಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸನ್ಮಾನ : ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಕೊಡಗಿನ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಕೂಟದ ಮಾಜಿ ಅಧ್ಯಕ್ಷೆ ಚಿರಿಯಪಂಡ ಇಮ್ಮಿ ಉತ್ತಪ್ಪ ಹಾಗೂ ಕೂಟದ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಕೂಟದ ಸದಸ್ಯೆಬೊಪ್ಪಂಡಬೊಳ್ಳಮ್ಮನಾಣಯ್ಯ ಮಾತನಾಡಿ , ಭಾರತ ದೇಶದಲ್ಲಿ ಸಾಧಕರಿಗೆ ನೀಡುವ ಪದ್ಮಶ್ರೀ ಪ್ರಶಸ್ತಿಯು ಈ ಬಾರಿ ಕೊಡಗಿನ ಸಂಸ್ಕೃತಿ, ಆಚಾರ, ವಿಚಾರವನ್ನು ದೇಶದುದ್ದಕ್ಕೂ ಪರಿಚಯಿಸಿದ ರಾಣಿಮಾಚಯ್ಯರಿಗೆ ನೀಡಿರುವುದು ಕೊಡಗಿಗೆ ಹೆಮ್ಮೆ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಣಿಮಾಚಯ್ಯ, ಈ ಪ್ರಶಸ್ತಿ ನನಗೆ ಮಾತ್ರವಲ್ಲ ನನ್ನೊಂದಿಗೆ ಕೈಜೋಡಿಸಿದ ಸಾವಿರಾರು ಹೆಣ್ಣು ಮಕ್ಕಳಿಗೆ ಸಲ್ಲಬೇಕು ಎಂದರು. ಈ ಸಂದರ್ಭ ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು. ಕಾರ್ಯದರ್ಶಿ ಚೇಂದಂಡ ಮೀನಾಸುಬ್ಬಯ್ಯ ವರದಿ ವಾಚಿಸಿ, ಲೆಕ್ಕ ಪತ್ರವನ್ನು ಖಜಾಂಚಿ ಕಳ್ಳಿಚಂಡಅಕ್ಕಮ್ಮ ಓದಿದರು.ಚೇಂದಂಡ…
ಸುಂಟಿಕೊಪ್ಪ ಫೆ.9 : ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷರಾಗಿ ವಿ.ಎಂ.ಶರೀಫ್, ಪ್ರಧಾನ ಕಾರ್ಯದರ್ಶಿಯಾಗಿ ಸಿ.ಎ.ಸಚಿನ್, ನೇಮಕಗೊಂಡಿದ್ದಾರೆ. ಕೊಡವ ಸಮಾಜದಲ್ಲಿ ಸಂಘದ ಅಧ್ಯಕ್ಷ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಚುನಾವಣೆಯ ಮೂಲಕ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವಿ.ಎಂ.ಮನು, ಜಿ.ಎಸ್.ಚಂದ್ರ, ಪ್ರಧಾನ ಕಾರ್ಯದರ್ಶಿಯಾಗಿ ಸಿ.ಎ.ಸಚಿನ್, ಖಜಾಂಚಿಯಾಗಿ ಯು.ಹರೀಶ್ ಚುನಾವಣೆಯ ಮೂಲಕ ಜಯಗಳಿಸಿದರು. ಸಹ ಕಾರ್ಯದರ್ಶಿಯಾಗಿ ಮಹಮ್ಮದ್ ಆಲಿ, ಸಹ ಖಜಾಂಚಿ ಕಲಂದರ್, ಗೌರವಾಧ್ಯಕ್ಷರುಗಳಾಗಿ ವಿನ್ಸಿ ಡಿಸೋಜ, ವಿಶ್ವನಾಥ್, ಹಸೈನರ್, ಸಂಘಟನಾ ಕಾರ್ಯದರ್ಶಿಗಳಾಗಿ ಸಂಶುದ್ಧೀನ್, ವಿಜೇಶ್, ನೌಶಾದ್, ಬಿ.ಕೆ.ರಂಜಿತ್, ಹೆಚ್.ಎಂ.ಅಶ್ರಫ್, ಸೆಲ್ವಿಸ್ಟರ್ ಡಿಸೋಜ, ಶರತ್, ಪ್ರಕಾಶ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಮಡಿಕೇರಿ ಫೆ.9 : ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2022-23 ನೇ ಸಾಲಿನಲ್ಲಿ ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸತು)ಯಡಿ ಸೇವಾಸಿಂಧು ಪೋರ್ಟಲ್ ಮುಖಾಂತರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಪ್ರವರ್ಗ-2ಎ ನಲ್ಲಿ ಬರುವ ಸವಿತಾ ಮತ್ತು ಇದರ ಉಪ ಜಾತಿಗಳಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಒಳಪಡುವ ಸವಿತಾ ಮತ್ತು ಇದರ ಉಪಜಾತಿಗಳಿಗೆ ಸೇರಿದ ಸಣ್ಣ ಮತ್ತು ಅತೀ ಸಣ್ಣ ರೈತರಾಗಿದ್ದು, ಹಾಲಿ ಜಮೀನುಗಳು ಖುಷ್ಕಿಯಾಗಿದ್ದು ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98 ಸಾವಿರ ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1.20…
ಮಡಿಕೇರಿ ಫೆ.9 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಇಲ್ಲಿನ ಗ್ರಂಥಾಲಯ ವತಿಯಿಂದ ಕರ್ನಾಟಕ ಆರೋಗ್ಯ ವಿಜ್ಞಾನಗಳ ಗ್ರಂಥಾಲಯಗಳ ಸಂಘ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ 14 ನೇ ‘ರಾಷ್ಟ್ರೀಯ ಗ್ರಂಥಾಲಯ ಸಮ್ಮೇಳನವು’ ಫೆಬ್ರವರಿ, 10 ಮತ್ತು 11 ರಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ. ಫೆ.10 ರಂದು ಬೆಳಗ್ಗೆ 10 ಗಂಟೆಗೆ ‘ರಾಷ್ಟ್ರೀಯ ಗ್ರಂಥಾಲಯ ಸಮ್ಮೇಳನ’ಕ್ಕೆ ಚಾಲನೆ ದೊರೆಯಲಿದೆ. ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರಾದ ಡಾ.ಬಿ.ಎಲ್.ಸುಜಾತ ರಾಥೋಡ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಕುಲಸಚಿವರಾದ ಎ.ಬಿ.ಬಸವರಾಜು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಳ್ಳಿಚಂಡ ಬಿ.ಕಾರ್ಯಪ್ಪ, ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ವಿಶ್ರಾಂತಿ ಕುಲಪತಿಗಳಾದ ಡಾ.ಟಿ.ಡಿ.ಕೆಂಪರಾಜು, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ.ಬಿ.ಜೆ.ಮಹೇಂದ್ರ, ಆಡಳಿತಾಧಿಕಾರಿ ಎ. ಎಲ್.ಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ವೈದ್ಯಕೀಯ ಅಧೀಕ್ಷಕರಾದ ಡಾ.ರೂಪೇಶ್…
ಮಡಿಕೇರಿ ಫೆ.9 : ಕೊಡಗು ಪತ್ರಕರ್ತರ ಸಂಘದ ವಾರ್ಷಿಕೋತ್ಸವ ಅಂಗವಾಗಿ ಫೆ.11ರಂದು ನಗರದ ಪೊಲೀಸ್ ಮೈದಾನದಲ್ಲಿ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಕೊಡಗು ಪತ್ರಕರ್ತರ ಸಂಘ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಕರ ಸಂಘ, ವಕೀಲರ ಸಂಘಗಳ ನಡುವೆ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು, ಪಂದ್ಯಾವಳಿಯನ್ನು ಸಮಾಜ ಸೇವಕ ನಾಪಂಡ ಮುತ್ತಪ್ಪ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಬಿ.ಸಿ.ಸತೀಶ, ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್ ಅಧ್ಯಕ್ಷತೆ ವಹಿಸಲಿದ್ದು. ಸಂಘದ ಹಿರಿಯ ಸಲಹೆಗಾರ ಬಿ.ಜಿ ಅನಂತಶಯನ ಭಾಗವಹಿಸಲಿದ್ದು, ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ಆಕರ್ಷಕ ಟ್ರೋಫಿಯನ್ನು ನೀಡಲಾಗುತ್ತದೆ ಎಂದು ಕೊಡಗು ಪತ್ರಕರ್ತರ ಸಂಗಡ ಕ್ರೀಡಾ ಸಮಿತಿಯ ಸಂಚಾಲಕ ಸುರೇಶ್ ಬಿಳಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿರಾಜಪೇಟೆ ಫೆ.8 : ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಯ ಎನ್.ಸಿ. ಸಿ ಹಾಗೂ ಇಕೋ ಕ್ಲಬ್ ಘಟಕದ ವಿದ್ಯಾರ್ಥಿಗಳು ಮೈಸೂರು ಜಿಲ್ಲೆಯ ಬೆಟ್ಟದ ಪುರದ ಬೆಟ್ಟಕ್ಕೆ ಚಾರಣವನ್ನು ಮಾಡಿದರು. ಚಾರಣಕ್ಕೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ. ಫಾ. ಐಸಾಕ್ ರತ್ನಕರ್ ರವರು ಆಶೀರ್ವಾದ ಮಾಡುವುದರ ಮೂಲಕ ಚಾಲನೆಯನ್ನು ನೀಡಿ ಶುಭ ಹಾರೈಸಿದರು. ಸಂತ ಅನ್ನಮ್ಮ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಬೆನ್ನಿ ಜೋಸೆಫ್ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಒಟ್ಟು 52 ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಚಾರಣದಲ್ಲಿ ಬೆಟ್ಟದಪುರದ ಬೆಟ್ಟವನ್ನು 3, 600 ಮೆಟ್ಟಿಲುಗಳನ್ನು ಹತ್ತುವುದರ ಮೂಲಕ ವಿದ್ಯಾರ್ಥಿಗಳು ತಲುಪಿದರು. ಮತ್ತು ಚೋಳ ರಾಜ ವಂಶಸ್ಥರ ಕಾಲದ ಪ್ರಾಚೀನ ಸ್ಥಳಗಳ ಮಾಹಿತಿಯನ್ನು ಪಡೆದರು. ಹಾಗೂ ಬೆಟ್ಟದಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಿದರು. ಈ ಸಂದರ್ಭದಲ್ಲಿ ಎನ್.ಸಿ.ಸಿ. ಅಧಿಕಾರಿ ಅಬ್ದುಲ್ ಮುನೀರ್ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಮಡಿಕೇರಿ ಫೆ.8 : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬoಧ ಮತಗಟ್ಟೆಗಳ ಸುಸ್ಥಿತಿ ಸಂಬAಧ ಸೆಕ್ಟರ್ ಅಧಿಕಾರಿಗಳು ಮತ್ತು ಪೊಲೀಸ್ ಸೆಕ್ಟರ್ ಅಧಿಕಾರಿಗಳಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಬುಧವಾರ ನಗರದ ಜಿ.ಪಂ.ಸಭಾoಗಣದಲ್ಲಿ ಮಾಹಿತಿ ಪಡೆದರು. ಜಿಲ್ಲೆಯಲ್ಲಿ 542 ಮತಗಟ್ಟೆಗಳಿದ್ದು, ಮತಗಟ್ಟೆ ಸುಸ್ಥಿತಿಯಲ್ಲಿ ಇರುವ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ಕಳೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸೆಕ್ಟರ್ ವ್ಯಾಪ್ತಿಯಲ್ಲಿ ಅತೀ ಕಡಿಮೆ ಮತದಾನವಾಗಿರುವ ಮತಗಟ್ಟೆಗಳ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದರು. ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿ ಮತ್ತು ಪೊಲೀಸ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮತಗಟ್ಟೆಗೆ ತೆರಳಿ ಮತಗಟ್ಟೆ ಸುಸ್ಥಿತಿ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ವಲ್ನರಬಲ್ ಮತ್ತು ಕ್ರಿಟಿಕಲ್ ಮತಗಟ್ಟೆಗಳಲ್ಲಿ ಹೆಚ್ಚಿನ ನಿಗಾವಹಿಸಬೇಕು ಎಂದು ಡಾ.ಬಿ.ಸಿ.ಸತೀಶ ಅವರು ಸೂಚಿಸಿದರು. ಅಂತರ ರಾಜ್ಯ ಮತ್ತು ಅಂತರ್ ಜಿಲ್ಲಾ ಚೆಕ್ಪೋಸ್ಟ್ಗಳ ಬಗ್ಗೆ ನಿಖರ ವರದಿ ನೀಡಬೇಕು. ಈ ಚೆಕ್ ಪೋಸ್ಟ್ ಗಳಲ್ಲಿ ಚುನಾವಣಾ ಸಂದರ್ಭದಲ್ಲಿ ಚುನಾವಣಾ ಆಯೋಗದ ನಿರ್ದೇಶನವನ್ನು ಚಾಚುತಪ್ಪದೆ ಪಾಲಿಸಬೇಕು ಎಂದು…
ಮಡಿಕೇರಿ ಫೆ.8 : ರಾಜ್ಯ ಚುನಾವಣಾ ಆಯೋಗವು 2023ರ ಜನವರಿ ಮಾಹೆಯಿಂದ ಏಪ್ರಿಲ್ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಫೆ.8 ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. 14 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. 15 ನಾಮಪತ್ರ ಪರಿಶೀಲಿಸುವ ದಿನವಾಗಿದೆ. 17 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಫೆ.25 ರಂದು ಬೆಳಗ್ಗೆ 7 ಗಂಟೆಯಿoದ ಸಂಜೆ 5 ಗಂಟೆಯವರೆಗೆ ಮತದಾನ ಅವಶ್ಯವಿದ್ದರೆ, ಮತದಾನ ನಡೆಯಲಿದೆ. ಫೆ.27 ರಂದು ಬೆಳಗ್ಗೆ 7 ಗಂಟೆಯಿoದ ಸಂಜೆ 5 ಗಂಟೆಯವರೆಗೆ ಮರು ಮತದಾನ ಅವಶ್ಯವಿದ್ದರೆ, ಮತದಾನ ನಡೆಸುವ ದಿನವಾಗಿದೆ. ಫೆ.28 ರಂದು ಬೆಳಗ್ಗೆ 8 ಗಂಟೆಯಿAದ ತಾಲ್ಲೂಕು ಕೇಂದ್ರಗಳಲಿ ಮತಗಳ ಎಣಿಕೆ ನಡೆಯಲಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ(04 ಸ್ಥಾನ), ನಿಟ್ಟೂರು(1 ಸ್ಥಾನ), ಗೋಣಿಕೊಪ್ಪಲು (1 ಸ್ಥಾನ), ಮಡಿಕೇರಿ ತಾಲ್ಲೂಕಿ ಎಮ್ಮೆಮಾಡು (2 ಸ್ಥಾನ) ಒಟ್ಟಾರೆ 4 ಗ್ರಾಮ ಪಂಚಾಯಿತಿಗಳ ಒಟ್ಟು 8 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು…






