ಲೇಖಕ: admin

ಮಡಿಕೇರಿ ಜ.13 :  ಸ್ವಾಮಿ ವಿವೇಕಾನಂದ ಜನಸೇವ ಸಂಘದ  ವತಿಯಿಂದ  ಸ್ವಾಮಿ ವಿವೇಕಾನಂದರ 160ನೇ ಜನ್ಮದಿನಾಚರಣೆಯನ್ನು  ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿವೇಕ ಬಳಗದ ಮಡಿಕೇರಿ ತಾಲೂಕಿನ  ಅಧ್ಯಕ್ಷರಾದ ಪದ್ಮಿನಿ ಮಾತನಾಡಿ, ವಿವೇಕಾನಂದರು ಬೆಳೆದು ಬಂದ ರೀತಿಯನ್ನು ವಿವರಿಸಿದರು. ಸ್ವಾಮಿ ವಿವೇಕಾನಂದರು ತಮ್ಮ ವಾಕ್‌ಚಾತುರ್ಯದಿಂದ ಯುವಕರನ್ನು ತಮ್ಮೆಡೆಗೆ ಸೆಳೆಯುತ್ತಿದ್ದರು. ಚಿಕಾಗೋ ನಗರದಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ವಿವೇಕಾನಂದರು ಪ್ರಸ್ತುತಪಡಿಸಿದ ಭಾಷಣವೇ ಇದಕ್ಕೆ ಸಾಕ್ಷಿ ಎಂದರು. ಈ ಸಂದರ್ಭ ಸ್ವಾಮಿ ವಿವೇಕಾನಂದ ಜನಸೇವಾ ಸಂಘದ ಗೌರವಾಧ್ಯಕ್ಷ ಎಸ್.ಸಿ.ಮಂಜುನಾಥ್,   ಅಧ್ಯಕ್ಷ  ಕೆ.ಎಸ್.ಗಣೇಶ್, ಉಪಾಧ್ಯಕ್ಷ  ಪಿ.ಪಿ.ಪ್ರಸಾದ್, ಕಾರ್ಯದರ್ಶಿ ಎಚ್.ಎಲ್.ನಾರಾಯಣ್, ಖಜಾಂಜಿ ಸೋಮಶೇಖರ್, ಸದಸ್ಯರುಗಳಾದ ಪಿ.ಮಣಿ, ಎ.ಸಿ.ಲವ ಪ್ರಸಾದ್, ಎಸ್.ಎಂ.ಮೋಣ್ಣಪ್ಪ, ಬಿ.ಕೆ.ಬಾಲಕೃಷ್ಣ, ಮೀನಾಕ್ಷಿ ಹಾಗೂ ವಿವೇಕ ಬಳಗದ ಲೀಲಾ ಶೆಟ್ಟಿ,  ಜ್ಯೋತಿ ಕುಮಾರಿ,  ಪ್ರಭಾವತಿ, ಅಚ್ಚಮ್ಮ, ಅಶೋಕ ಶೆಟ್ಟಿ,  ಭೋಜಮ್ಮ , ಪ್ರಭಾವತಿ, ಅಂಬಿಕಾ,  ಅಶ್ವಿನಿ, ಚೇತನ್ ಹಾಗೂ ಇತರರು ಹಾಜರಿದ್ದರು. ಕಾರ್ಯಕ್ರಮವು ವಿವೇಕದ ಭಜನೆಯೊಂದಿಗೆ ಪ್ರಾರಂಭವಾಯಿತು.

Read More

ಮಡಿಕೇರಿ ಜ.13 :  ಮಡಿಕೇರಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ನಿಲಯದ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಮಡಿಕೇರಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್. ಎಲ್. ದಿವಾಕರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು,  ಕಳೆದ 30 ವರ್ಷಗಳಿಂದ ಡಿ ಎಸ್ ಎಸ್, ವಿದ್ಯಾರ್ಥಿಗಳಿಗೆ ನಡೆಸುತ್ತಿರುವ ಸನ್ಮಾನ ಕಾರ್ಯಕ್ರಮವನ್ನು ಪ್ರಸ್ತಾಪಿಸುವ ಮೂಲಕ,  ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳು ಕೂಡ ಇಂತಹ ಸನ್ಮಾನಕ್ಕೆ ಭಾಜನಾರಾಗಬೇಕು ಎಂದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸ್ನಾತಕೋತ್ತರ ಸಂಯೋಜಕಿ ಡಾ. ಹೆಚ್.ಕೆ.ರೇಣುಶ್ರೀ ಮಾತನಾಡಿ, ಸಮಯದ ಸದುಪಯೋಗ  ಹಾಗೂ ಸಮಯದ ಮಹತ್ವದ ಕುರಿತು ವಿದ್ಯಾರ್ಥಿನಿಯರಲ್ಲಿ ಅರಿವು ಮೂಡಿಸಿದರು. ಡಿ ಎಸ್ ಎಸ್ ತಾಲ್ಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಮಾತನಾಡಿ, ಶಿಕ್ಷಣದಲ್ಲಿರುವ ಹಂತಗಳು, ವಿವಿಧ ಕೋರ್ಸ್‌ಗಳನ ಬಗ್ಗೆ ಹಾಗೂ ಡಿ ಎಸ್ ಎಸ್‌ ನಡೆಸುವ ಶೈಕ್ಷಣಿಕ ಕಾರ್ಯಕ್ರಮಗಳ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕಾದದ್ದು ಇಂದಿನ ಮೊದಲ ಆದ್ಯತೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ…

Read More

ವಿರಾಜಪೇಟೆ ಜ.14 : ಹಾವೇರಿಯಲ್ಲಿ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿರಾಜಪೇಟೆಯ ನಾಟ್ಯಮಯೂರಿ ನೃತ್ಯ ಶಾಲೆಯ ಸಂಸ್ಥಾಪಕಿ ಪ್ರೇಮಾಂಜಲಿ ಹಾಗೂ ವಿದ್ಯಾರ್ಥಿಗಳ ತಂಡವು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶನವನ್ನು ನೀಡಿದರು. ಕಾರ್ಯಕ್ರಮದಲ್ಲಿ ಹಲವಾರು ಸಾಹಿತಿಗಳು, ಗಣ್ಯವ್ಯಕ್ತಿಗಳು, ಹಾಗೂ ಕೊಡಗು ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೇಶವ ಕಾಮತ್ ಭಾಗವಹಿಸಿದರು.

Read More

ಸುಂಟಿಕೊಪ್ಪ, ಜ.13 : ಸುಂಟಿಕೊಪ್ಪ ಶ್ರೀ ಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಜ.14 ರಂದು ಮಕರ ಸಂಕ್ರಾಂತಿಯ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿದೆ. ಜ.14 ರಂದು ಮಕರ ಜ್ಯೋತಿ ಉತ್ಸವದ ಅಂಗವಾಗಿ ಸಾಯಂಕಾಲ ಶ್ರೀ ಅಯ್ಯಪ್ಪ ಸ್ವಾಮಿಗೆ ಅರ್ಚನೆ ಹಾಗೂ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ 6.45 ಕ್ಕೆ ಮಹಾಮಂಗಳಾರತಿ, ನಂತರ ಪ್ರಸಾದ ವಿನಿಯೋಗ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ. ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ಆಡಳಿತ ಮಂಡಳಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

Read More

ಮಡಿಕೇರಿ ಜ.13 :   ಜನನಿ ಮಹಿಳಾ ಮಂಡಳಿ  ಹಾಗೂ ಬಾಲಗೋಕುಲ ಸಂಯುಕ್ತಾಶ್ರಯದಲ್ಲಿ  ನಗರದ ರಾಘವೇಂದ್ರ ದೇವಾಲಯದ‌ ಆಶಾ ಪ್ರಾವಿಷನ್‌ ಸ್ಟೋರ್‌ ಆವರಣದಲ್ಲಿ  ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಸದಸ್ಯ  ಧನಂಜಯ ಅಗೋಳಿಕಜೆ  ಮಾತನಾಡಿ 1893ರಲ್ಲಿ ಚಿಕಾಗೋದಲ್ಲಿ ನಡೆದ ವರ್ಲ್ಡ್ಸ್ ಪಾರ್ಲಿಮೆಂಟ್ ಆಫ್ ರಿಲಿಜನ್ಸ್‌ನಲ್ಲಿ ಸ್ವಾಮಿ ವಿವೇಕಾನಂದರು ಮಾಡಿದ್ದ ಭಾಷಣ ಇಂದಿಗೂ ಪ್ರಸಿದ್ಧ. ವೇದಾಂತ ಮತ್ತು ಯೋಗದ ಭಾರತೀಯ ತತ್ತ್ವ ಚಿಂತನೆಗಳನ್ನು ವಿಶ್ವ ಭೂಪಟದಲ್ಲಿ ರಾರಾಜಿಸುವಂತೆ ಮಾಡಿದವರಲ್ಲಿ ಸ್ವಾಮಿ ವಿವೇಕಾನಂದರು ಕೂಡಾ ಪ್ರಮುಖರಲ್ಲಿ ಒಬ್ಬರು. ತಮ್ಮ ಪ್ರಖರ ಭಾಷಣಗಳು ಮತ್ತು ಉಪನ್ಯಾಸಗಳ ಮೂಲಕ ಜನರಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸಲು ವಿವೇಕಾನಂದರು ಪ್ರಯತ್ನಿಸಿದರು ಎಂದರು. ಸ್ವಾಮಿ ವಿವೇಕಾನಂದರ ಪುಸ್ತಕಗಳನ್ನು ಓದಿ ಮನನ ಮಾಡಿಕೊಂಡರೆ ಜೀವನದಲ್ಲಿ ಎಂತಹ ಕಷ್ಟಕಾರ್ಪಣ್ಯಗಳು ಬಂದರು ಎದೆಗುಂದದೆ ಸವಾಲುಗಳನ್ನು ಎದುರಿಸುವ ಸಾಮರ್ಥ್ಯವು ನಮಗೆ ಬರುತ್ತದೆ ಹಾಗೆ ನಾವೆಲ್ಲರೂ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಂಡು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿ ಭವ್ಯ,…

Read More

ಮಡಿಕೇರಿ ಜ.12 : ಕುಶಾಲನಗರ ತಾಲ್ಲೂಕು ಹೆಬ್ಬಾಲೆ ಗ್ರಾಮದ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ. ಮೈಸೂರು ಕೆ.ಆರ್.ನಗರ ನಿವಾಸಿ ಮಂಜುನಾಥ (32) ಬಂಧಿತ ಆರೋಪಿಯಾಗಿದ್ದಾನೆ. ಪೊಲೀಸರು 7.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ವಶಪಡಿಸಿಕೊಂಡಿದ್ದಾರೆ.  ಪ್ರಕರಣ ಪತ್ತೆ ಮಾಡಿದ ಕುಶಾಲನಗರ ಗ್ರಾಮಾಂತರ ಸಿ.ಪಿ.ಐ ಹಾಗೂ ತಂಡದ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಪ್ರಶಂಸಿಸಿದ್ದಾರೆ.

Read More

ಚೆಟ್ಟಳ್ಳಿ ಜ.12 : ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಈರಳೆವಳಮುಡಿ ಶಾಖೆಯಲ್ಲಿ ಪ್ರತಿಷ್ಠಾಪಿಸಲಿರುವ ಶ್ರೀಪಂಚಮುಖಿ ವಾಯುಪುತ್ರಮೂರ್ತಿಯನ್ನು ಚೆಟ್ಟಳ್ಳಿ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಹಾಗೂ ಚೆಟ್ಟಳ್ಳಿ ಗ್ರಾಮಸ್ಥರು ಪೂರ್ಣಕುಂಭ ಕಲಶದೊಂದಿಗೆ ಬರಮಾಡಿಕೊಂಡರು. ವಿಜಯ ಪ್ಲಾಂಟೇಷನ್ ಮಾಲೀಕ ಎಸ್.ಜಿ.ಶ್ರೀನಿವಾಸ್ ಹಾಗೂ ಬಲ್ಲಾರಂಡ ಮಣಿಉತ್ತಪ್ಪ ವಿಶೇಷ ಪೂಜೆ ಸಲ್ಲಿಸಿದರು.  ಚೆಟ್ಟಳ್ಳಿ ಶ್ರೀನರೇಂದ್ರ ಮೋದಿ ರೈತ ಸಹಕಾರ ಭವನದಿಂದ ಸಹಕಾರ ಸಂಘದ ಮುಖ್ಯ ಕಚೇರಿಯವರೆಗೆ ಪಟ್ಟಣದುದ್ದಕ್ಕೂ ಮೆರವಣಿಗೆಯಲ್ಲಿ ಸಾಗಿ ಕಾವೇರಿಮಾತೆಗೆ, ಪಶುಪತಿನಾಥನಿಗೆ ಪೂಜೆ ಸಲ್ಲಿಸಲಾಯಿತು. ನಂತರ ಈರಳೆವಳಮುಡಿ ಶಾಖೆಗೆ ಕೊಂಡೊಯ್ಯಲಾಯಿತು. ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಶ್ರೀ ಪಂಚಮುಖಿ ವಾಯುಪುತ್ರಮೂರ್ತಿಯನ್ನು ಪ್ರತಿಷ್ಠಾಪಿಸುತಿದ್ದೇವೆ. ಸಂಕ್ರಾತಿ ದಿನವಾದ ಜ.15ರಂದು ವಿವಿಧ ಪೂಜಾಕೈಂರ್ಕದೊಂದಿಗೆ ಸಂಘದ ಈರಳೆವಳಮುಡಿ ಶಾಖೆಯ ಆವರಣದಲ್ಲಿ ಅನಾವರಣಗೊಳಿಸುವುದಾಗಿ ಮಣಿಉತ್ತಪ್ಪ ತಿಳಿಸಿದರು. ಈ ಸಂದರ್ಭ ವೀರಾಂಜನೆಯ ಯುವಕ ಸಂಘದ ಅಧ್ಯಕ್ಷ ಬಲ್ಲಾರಂಡ ಕಂಠಿ ಕಾರ್ಯಪ್ಪ, ಗೌರಿಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷ ಪುತ್ತರಿರ ಶಿವುನಂಜಪ್ಪ, ಕಾರ್ಕಳದ ಶಿಲ್ಪಿ ಗುಣವಂತೇಶ್ವರ ಭಟ್, ಚೆಟ್ಟಳ್ಳಿ ಸಹಕಾರ ಸಂಘದ ಉಪಾಧ್ಯಕ್ಷ ಕಣಜಾಲು…

Read More

ಮಡಿಕೇರಿ ಜ.12 : ಮಡಿಕೇರಿಯ ಮಂಗಳಾದೇವಿ ನಗರದ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಜ.14 ಮತ್ತು 15 ರಂದು ಶ್ರೀ ರಾಜರಾಜೇಶ್ವರಿ, ಮಹಾಗಣಪತಿ ಹಾಗೂ ನಾಗದೇವರುಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ವಾರ್ಷಿಕೋತ್ಸವದ ಪ್ರಯುಕ್ತ ಎರಡು ದಿನಗಳ ಕಾಲ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಜ.14 ರಂದು ಸಂಜೆ 6 ರಿಂದ ಪ್ರಾರ್ಥನೆ, ಪುಣ್ಯಾಹ, ಸಪ್ತಶುದ್ಧಿ, ಪ್ರಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತು ಪೂಜೆ, ವಾಸ್ತು ಹೋಮ, ದಿಶಾಬಲಿ, ಮಹಾ ಪೂಜೆ ಹಾಗೂ ಪ್ರಸಾದ ವಿತರಣೆಯಾಗಲಿದೆ. ಜ.15 ರಂದು ಬೆಳಗ್ಗೆ 8 ಗಂಟೆಗೆ ಪುಣ್ಯಾಹ, ಗಣಪತಿ ಹೋಮ, ಚಂಡಿಕಾ ಹೋಮ, ನವಕಲಶ ಪೂಜೆ, ಪ್ರಧಾನ ಹೋಮ, ನಾಗದೇವರಿಗೆ ತಂಬಿಲ ಪೂಜೆ, ಆಶ್ಲೇಷ ಬಲಿ ಕಲಶಾಭಿಷೇಕ ನಡೆಯಲಿದ್ದು, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಪ್ರಸಾದ ವಿನಿಯೋಗ ಹಾಗೂ ಅನ್ನದಾನ ನೆರವೇರಲಿದೆ. ಸಂಜೆ 5.30 ರಿಂದ 6.30ರ ವರೆಗೆ ರಂಗಪೂಜೆ, 7 ಗಂಟೆಗೆ ಬಲಿ ಉತ್ಸವ…

Read More

ಸೋಮವಾರಪೇಟೆ ಜ.12 :ಸ್ವಾಮಿ ವಿವೇಕಾನಂದರು ಮಹಾನ್ ಆಧ್ಯಾತ್ಮಿಕ ವ್ಯಕ್ತಿ ಹಾಗೂ ದಾರ್ಶನಿಕರಾಗಿದ್ದರು. ಯುವ ಜನತೆಗೆ ಸ್ಪೂರ್ತಿಯಾಗಿದ್ದರು ಎಂದು ಜಯವೀರಮಾತೆ ಚರ್ಚ್ ನ ಧರ್ಮಗುರು ಎಂ.ರಾಯಪ್ಪ ಹೇಳಿದರು. ಸೋಮವಾರಪೇಟೆ ಪುಷ್ಪಗಿರಿ ಜೇಸಿ ಸಂಸ್ಥೆಯ ವತಿಯಿಂದ ಸಂತ ಜೋಸೆಫರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ದಿನ ಹಾಗೂ ರಾಷ್ಟ್ರೀಯ ಯುವದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿವೇಕಾನಂದರು ಸಹಿಷ್ಣುತಾ ಭಾವವನ್ನು ಪ್ರಪಂಚಕ್ಕೆ ಸಂದೇಶ ನೀಡಿದರು. ಇವರ ಯುವ ಜನಾಂಗದ ಬಗ್ಗೆ ಹೆಚ್ಚಿನ ವಿಶ್ವಾಸ ಹೊಂದಿದ್ದರು. ಈ ಕಾರಣದಿಂದ ಮಹಾನ್ ಚೇತನ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು. ಶನಿವಾರಸಂತೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪರಶಿವಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವಸ್ತುಗಳ ದುಶ್ಚಟಗಳಿಂದ ಮುಕ್ತರಾದರೆ ನಿಮ್ಮ ಭವಿಷ್ಯ ಉಜ್ವಲವಾಗಲಿದೆ. ದುಶ್ಚಟಗಳಿಗೆ ಬಲಿಯಾದರೆ ಇಡೀ ಜೀವನ ನಾಶವಾಗಲಿದೆ ಎಂದು ಕಿವಿಮಾತು ಹೇಳಿದರು. ಇತ್ತೀಚಿನ ದಿನಗಳಲ್ಲಿ ಕೆಲ ವಿದ್ಯಾರ್ಥಿಗಳು ಈ ಪಿಡುಗಿಗೆ ಬಲಯಾಗುತ್ತಿರುವ ಬಗ್ಗೆ ತಿಳಿದು ಬಂದಿದೆ. ಶಿಕ್ಷಕರು ಮಾಹಿತಿಯನ್ನು ಕಲೆ ಹಾಕಿ…

Read More

ಸೋಮವಾರಪೇಟೆ ಜ.12 : ಸೊಮವಾರಪೇಟೆಯ ಯಡೂರು ಗ್ರಾಮದ ಬಿ.ಟಿ.ಚನ್ನಯ್ಯ ಗೌರಮ್ಮ ಪ್ರಥಮ ದರ್ಜೆ ಕಾಲೇಜಿಗೆ ಗುರುವಾರ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಆಡಳಿತ ವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಪ್ರಥಮ ಹಾಗೂ ದ್ವಿತೀಯ ಬಿ.ಎ.ಯಲ್ಲಿ ಒಂದು ವಿಷಯದಲ್ಲಿ ಎಲ್ಲಾ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿರುವ ಬಗ್ಗೆ ಪ್ರಾಂಶುಪಾಲರು ಹಾಗೂ ಉಪನ್ಯಾಸಕರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಕೆಲವು ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಇಷ್ಟ ಬಂದಾಗ ಬರುವುದು, ಹೋಗುವುದರ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಶಾಸಕರು ಭೇಟಿ ನೀಡಿದ ಸಂದರ್ಭ ವಸ್ತು ಸ್ಥಿತಿ ಬೆಳಕಿಗೆ ಬಂತು. ಕೆಲವು ವಿದ್ಯಾರ್ಥಿಗಳು ಆಟವಾಡುತಿದ್ದರೆ, ಉಪನ್ಯಾಸಕರುಗಳು ಕೊಠಡಿಯಲ್ಲಿ ಹರಟೆಯಲ್ಲಿ ತೊಡಗಿದ್ದರು. ಕೆಲವು ತರಗತಿಗಳಲ್ಲಿ ಬಹುತೇಕ ವಿದ್ಯಾರ್ಥಿಗಳು ಗೈರಾಗಿದ್ದು ಕಂಡು ಬಂತು. ಈ ಸಂಧರ್ಭ ಪ್ರಾಂಶುಪಾಲರನ್ನು ಪ್ರಶ್ನಿಸಿದ ಶಾಸಕರು ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕಾಲೇಜಿಗೆ ಬರುತ್ತಿಲ್ಲ. ಹಿಂದೆ 500-600 ವಿದ್ಯಾರ್ಥಿಗಳಿದ್ದ ಕಾಲೇಜಿನಲ್ಲಿ ಇಂದು 143 ವಿದ್ಯಾರ್ಥಿಗಳಿದ್ದಾರೆ. ನೀವುಗಳು ಈ ಕಾಲೇಜನ್ನು ಮುಚ್ಚಿಸಿ ಬಿಡ್ತಿರಿ ಎಂದು ಹರಿಹಾಯ್ದರು.…

Read More