ಲೇಖಕ: admin

ಮಡಿಕೇರಿ ಫೆ.8 : ಬೈಕ್ ಗೆ ಆಂಬ್ಯುಲೆನ್ಸ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಡಿಕೇರಿ- ಚೆಟ್ಟಳ್ಳಿ ರಸ್ತೆಯಲ್ಲಿ ನಡೆದಿದೆ. ಮಡಿಕೇರಿಯಿಂದ ಚೆಟ್ಟಳ್ಳಿಗೆ ತೆರಳುತ್ತಿದ್ದ ಲೋಕೇಶ್ (44) ಎಂಬುವವರೇ ಮೃತ ದುರ್ದೈವಿ. ತಲೆಯ ಭಾಗಕ್ಕೆ ತೀವ್ರ ಗಾಯವಾಗಿದ್ದ ಲೋಕೇಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮೃತಪಟ್ಟರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಶ್ರೀಮಂಗಲ ಫೆ.8 : ಕೊಡಗಿನ ಎರಡು ವಿಧಾನಸಭಾ ಕ್ಷೇತ್ರದಲ್ಲಿ ದೀರ್ಘಕಾಲದಿಂದ ಅಧಿಕಾರದಲ್ಲಿರುವ ಶಾಸಕರು ಜನರ ಆಶೋತ್ತರಗಳಿಗೆ ಸ್ಪಂದಿಸಿಲ್ಲ ಎಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ  ಟೀಕಿಸಿದ್ದಾರೆ. ಕುಟ್ಟ ಕೊಡವ ಸಮಾಜದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು ಕೊಡಗಿನ ವಿರಾಜಪೇಟೆ ಮತ್ತು ಮಡಿಕೇರಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ. ಇತರ ಪಕ್ಷಗಳ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ನಾವು ಹೋದ ಕಡೆಯಲೆಲ್ಲ ಬದಲಾವಣೆ ಅಗತ್ಯತೆ ಬಗ್ಗೆ ಜನ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತೆ ಗೆಲುವು ಸಾಧಿಸಬೇಕೆಂಬ ಸಂಕಲ್ಪದೊಂದಿಗೆ ಪಕ್ಷದ ಕಾರ್ಯಕರ್ತರು ಹಾಗೂ ಮತದಾರರು ಸಂಘಟಿತರಾಗುತ್ತಿದ್ದಾರೆ ಎಂದು ಹೇಳಿದರು.  ವಿಧಾನಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಾ ಜನಾಂಗ, ಜಾತಿ, ಧರ್ಮದವರು ಒಂದೇ ತಾಯಿಯ ಮಕ್ಕಳಂತೆ ಬದುಕಲು ಪೂರಕ ವಾತಾವರಣವನ್ನು ಸೃಷ್ಟಿಸಿದೆ. ಕೊಡಗು ಜಿಲ್ಲೆಯ ಜನ ಇಬ್ಬರು ಶಾಸಕರ ಬೇಜವಾಬ್ದಾರಿ ಆಡಳಿತದಿಂದ ರೋಸಿ ಹೋಗಿದ್ದಾರೆ. ಕಾಂಗ್ರೆಸ್ ನಿಂದ ಮಾತ್ರ ಜನಪರ ಆಡಳಿತ…

Read More

ಚೆಯ್ಯಂಡಾಣೆ ಫೆ.8 : ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ತೋಟಗಾರಿಕೆ ಇಲಾಖೆ, ಕೊಡಗು ಜಿಲ್ಲಾ ಪಂಚಾಯತ್  ಇದರ ವತಿಯಿಂದ ನರಿಯಂದಡ ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟದ ಸದಸ್ಶೆಯರಿಗೆ ಹಾಗೂ ಗ್ರಾಮಸ್ಥರಿಗೆ ಎರಡು ದಿನಗಳ ಜೇನು ಕೃಷಿ ಕಾರ್ಯಾಗಾರ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಿದ್ದಂಡ ರಾಜೇಶ್ ಅಚ್ಚಯ್ಯ ದೀಪ ಬೆಳಗಿಸುದರ ಮೂಲಕ ಚಾಲನೆ ನೀಡಲಾಯಿತು. ಜೇನು ಕೃಷಿ ತರಬೇತಿ ಕಾರ್ಯಾಗಾರದಲ್ಲಿ ಒಟ್ಟು 30 ಜನರಿಗೆ ಅವಕಾಶ ಕಲ್ಪಿಸಲಾಗಿದೆ. ಇದರಲ್ಲಿ ಸಂಜೀವಿನಿ ಒಕ್ಕೂಟದ ಸದಸ್ಯೆಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಜೇನು ಕೃಷಿಯ ಬಗ್ಗೆ ಹಿರಿಯ ತೋಟಗಾರಿಕಾ ಇಲಾಖೆಯ ಸಹಾಯಕ ಅಧಿಕಾರಿ ವಸಂತ್ ಮಾತನಾಡಿ ಇಂದಿನ ಕಾರ್ಯಾಗಾರದಲ್ಲಿ ಭಾಗವಹಿಸಿದವರಿಗೆ ಜೇನು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ನೀಡಲಾಗುವುದು,ಹಾಗೂ ಒಂದೊಂದು ಜೇನು ಪೆಟ್ಟಿಗೆಯನ್ನು ಶೇಕಡಾ 75 ರ ಸಹಾಯ ಧನದಲ್ಲಿ  ವಿತರಿಸಲಾಗುವುದು, ಸಹಾಯಧನದಲ್ಲಿ ಒಂದು ಪೆಟ್ಟಿಗೆ, ಸ್ಟಾಂಡ್ ಹಾಗೂ ಒಂದು ಜೇನು ಕುಟುಂಬದ ಬೆಲೆ 4500/- ರೂಪಾಯಿ ಇದರಲ್ಲಿ ಶೇಕಡಾ 25 ರೈತರ…

Read More

ವಿರಾಜಪೇಟೆ ಫೆ.8 : ವಿರಾಜಪೇಟೆ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಕೆ.ವಿ.ಸಂತೋಷ್ (52) ಅವರು ಇಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ರಾಜಕೀಯ ಮಾತ್ರವಲ್ಲದೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಸಂತೋಷ್ ಅವರ ನಿಧನದ ಹಿನ್ನೆಲೆ ಇಂದು ವಿರಾಜಪೇಟೆ ಪಟ್ಟಣದಲ್ಲಿ ಸಂಜೆ 5 ಗಂಟೆಯಿಂದ 6 ರವರೆಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಂತಾಪ ಸೂಚಿಸಲಾಯಿತು.

Read More

ಗೋಣಿಕೊಪ್ಪಲು ಫೆ.8 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 16 ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಗೋಣಿಕೊಪ್ಪಲಿನಲ್ಲಿ ಮಾರ್ಚ್ 4 ಮತ್ತು 5 ರಂದು ನಡೆಯಲಿದೆ.       ಎರಡು ದಿನಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯ ಪ್ರತಿಭೆಗಳಿಗೆ ತಮ್ಮ ಕಲಾ ಪ್ರೌಢಿಮೆಯನ್ನು ಪ್ರಸ್ತುತಪಡಿಸಲು ಅವಕಾಶವಿದೆ.          ಆಸಕ್ತರು  ದಿನಾಂಕ 15.02.2023ರ ಒಳಗಾಗಿ ತಮ್ಮ ಕಲೆಯ ವಿಡಿಯೋವನ್ನು ವಾಟ್ಸಪ್ ಮೂಲಕ ಅಥವಾ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬಹುದು ಎಂದು ಸ್ವಾಗತ ಸಮಿತಿಯ ಮಹಾ ಪ್ರಧಾನ ಕಾರ್ಯದರ್ಶಿ ಕೋಳೆರ ದಯಾ ಚಂಗಪ್ಪ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.   ಸ್ವಾಗತ ಸಮಿತಿ,   16ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ,   ಕಾಮತ್ ನವಮಿ ಸಭಾಂಗಣ,   ಗೋಣಿಕೊಪ್ಪಲು 571213 ಡಿ.ಚಂದನ.    9986939357 ಕೆ.ವಿ.ರಾಮಕೃಷ್ಣ     9902306833

Read More

ಮಡಿಕೇರಿ ಫೆ.7 : ಇತರೆ ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿ ಉಪ ವಿಭಾಗೀಯ ಮಟ್ಟದಲ್ಲಿ ಅನುಮೋದನೆಯಾಗಿರುವ ಅರ್ಜಿಗಳ ಸಂಬಂಧ ಮರು ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇತರೆ ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆ ಆಗಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಗ್ರಾಮ ಅರಣ್ಯ ಹಕ್ಕು ಸಮಿತಿಯಲ್ಲಿ ಮತ್ತೊಂದು ಬಾರಿ ಪರಿಶೀಲಿಸುವಂತೆ ಸಲಹೆ ಮಾಡಿದರು. ಜಿಲ್ಲೆಯ ನೊಕ್ಯ ಮತ್ತು ಸಿದ್ದಾಪುರ ಗ್ರಾ.ಪಂ.ವ್ಯಾಪ್ತಿಯಲ್ಲಿ ಸ್ಮಶಾನ ಭೂಮಿ ಅಭಿವೃದ್ಧಿ ಸಂಬAಧ ಗ್ರಾಮ ಅರಣ್ಯ ಸಮಿತಿ ಗಮನಕ್ಕೆ ತರುವಂತಾಗಬೇಕು ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದಯಾನಂದ ಅವರು ಹೇಳಿದರು. ಈ ಬಗ್ಗೆ ಮೂರು ದಿನದಲ್ಲಿ ಪರಿಶೀಲಿಸಿ ವರದಿ ನೀಡುವಂತೆ ಐಟಿಡಿಪಿ ಇಲಾಖಾ ಅಧಿಕಾರಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಅವರು ನಾಗರಹೊಳೆಯ ಆಶ್ರಮ ಶಾಲೆ ಕಟ್ಟಡವು…

Read More

ಮಡಿಕೇರಿ ಫೆ.7 : ಸೋಮವಾರಪೇಟೆ ತಾಲ್ಲೂಕು 8ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಫೆ.11ರಂದು ಗೌಡಳ್ಳಿ ಬಿ.ಜಿ.ಎಸ್ ಶಾಲಾ ಮೈದಾನದಲ್ಲಿ ಅರ್ಥಪೂರ್ಣವಾಗಿ ನಡೆಯಲಿದೆ ಎಂದು ಸಮ್ಮೇಳನದ ಪ್ರಚಾರ ಸಮಿತಿ ಅಧ್ಯಕ್ಷ ಹಿರಿಕರ ರವಿ ಹೇಳಿದರು. ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಕ.ಸಾ.ಪ.ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್, ತಾಲ್ಲೂಕು ಅಧ್ಯಕ್ಷ ಎಸ್.ಡಿ.ವಿಜೇತ್ ನೇತೃತ್ವದಲ್ಲಿ, ವಿವಿಧ ಸಮಿತಿಗಳ ಪದಾಧಿಕಾರಿಗಳು ಕನ್ನಡ ಹಬ್ಬವನ್ನು ಯಶಸ್ವಿಗೊಳಿಸಲು ಸಿದ್ಧತೆಯಲ್ಲಿ ತೊಡಕಿಕೊಂಡಿದ್ದಾರೆ ಎಂದು ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಫೆ.11ರ ಶನಿವಾರ ಬೆಳಿಗ್ಗೆ 7.30ಕ್ಕೆ ದೊಡ್ಡಮಳ್ತೆ ಶ್ರೀ ಹೊನ್ನಮ್ಮ ಕೆರೆಯಿಂದ ಬೈಕ್ ಜಾಥ ಹೊರಡಲಿದೆ. ಬೆಳಿಗ್ಗೆ 8 ಗಂಟೆಗೆ ಸೋಮವಾರಪೇಟೆ ತಹಸೀಲ್ದಾರ್ ಎಸ್.ಎನ್.ನರಗುಂದ ಬಿಜಿಎಸ್ ಶಾಲಾ ಆವರಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕ.ಸಾ.ಪ.ಜಿಲ್ಲಾಧ್ಯಕ್ಷರಾದ ಎಂ.ಪಿ.ಕೇಶವಕಾಮತ್, ಕನ್ನಡ ಧ್ಜಜ ಹಾಗೂ ತಾಲ್ಲೂಕು ಅಧ್ಯಕ್ಷ ಎಸ್.ಡಿ.ವಿಜೇತ್ ಕನ್ನಡ ಪರಿಷತ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೀಟಿಕಟ್ಟೆ ಕೆನರಾ ಬ್ಯಾಂಕ್ ಜಂಕ್ಷನ್‌ನಿಂದ 9 ಗಂಟೆಗೆ ಗಂಟೆಗೆ ಸಮ್ಮೇಳನಾಧ್ಯಕ್ಷರನ್ನು ಮಂಗಳವಾದ್ಯ, ಪೂರ್ಣಕುಂಭ, ಕಲಾ ತಂಡಗಳು, ಸ್ತಬ್ಧ ಚಿತ್ರಗಳ…

Read More

ಮಡಿಕೇರಿ ಫೆ.7 : ಮಹಿಳೆಯರ ಸ್ವಾವಲಂಬಿ ಬದುಕಿಗೆ ಆಸರೆಯಾಗಿರುವ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಮಡಿಕೇರಿಯಲ್ಲಿ ಆರಂಭಗೊಂಡಿದೆ. ಜಿಲ್ಲೆಯಾದ್ಯಂತ ಸ್ತ್ರೀಶಕ್ತಿ, ಸಂಜೀವಿನಿ ಗುಂಪುಗಳು ತಾವು ಬೆಳೆದ ತರಕಾರಿ ಹಾಗೂ ಉತ್ಪಾದಿಸಿದ ವಿವಿಧ ಉತ್ಪನ್ನಗಳ ಮಾರಾಟ ಕಲ್ಪಿಸುವಲ್ಲಿ ಕೊಡಗು ಜಿಲ್ಲಾ ಪಂಚಾಯಿತಿ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಸಂಜೀವಿನಿ-ಡೇ ನಲ್ಮ್ (ಎನ್‌ಆರ್‌ಎಲ್‌ಎಂ) ಯೋಜನೆಯಡಿ ಎರಡು ದಿನಗಳ ಕಾಲ ನಗರದ ಗಾಂಧಿ ಮೈದಾನದಲ್ಲಿ ಮೇಳ ನಡೆಯುತ್ತಿದೆ. ಜಿಲ್ಲಾ ಮಟ್ಟದ ಸ್ವಸಹಾಯ ಗುಂಪುಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಜೀವ ವೈವಿಧ್ಯ ಮಂಡಳಿ ರಾಜ್ಯ ಅಧ್ಯಕ್ಷ ನಾಪಂಡ ರವಿಕಾಳಪ್ಪ ಮತ್ತು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಂಗಳವಾರ ಉಪದ್ಘಾಟಿಸಿದರು. ಮಳಿಗೆಗಳನ್ನು ವೀಕ್ಷಿಸಿ, ಮಾಹಿತಿ ಪಡೆದ ರವಿ ಕಾಳಪ್ಪ ಅವರು ಸ್ತ್ರೀ ಶಕ್ತಿ ಸಂಜೀವಿನಿ ಗುಂಪುಗಳಿಗೆ ಸರ್ಕಾರದ ವತಿಯಿಂದ ಸಹಾಯಧನ ಕಲ್ಪಿಸಿ ಆರ್ಥಿಕ ಉತ್ತೇಜನಕ್ಕೆ ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ ಸ್ತ್ರೀ ಶಕ್ತಿ ಸಂಜೀವಿನಿ ಗುಂಪುಗಳು ಉತ್ಪಾದಿಸಿದ ವಿವಿಧ ರೀತಿಯ ಉತ್ಪನ್ನಗಳು…

Read More

ಮಡಿಕೇರಿ ಫೆ.7 : ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯಿ)ದಿಂದ ‘ಅಂತರ ದಕ್ಷಿಣ ವಲಯದ’ ಬಾಲಕಿಯರ ಹಾಕಿ ಪಂದ್ಯಾವಳಿಗೆ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಕಿ ಟರ್ಫ್ ಮೈದಾನದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಅವರು ಮಂಗಳವಾರ ಚಾಲನೆ ನೀಡಿದರು. ಕೇರಳದ ಕೊಲ್ಲಂ, ಹೈದರಾಬಾದ್ ಮತ್ತು ಮಡಿಕೇರಿ ಕ್ರೀಡಾ ಪ್ರಾಧಿಕಾರದ ಬಾಲಕಿಯರ ಹಾಕಿ ತಂಡಗಳು ಪಾಲ್ಗೊಂಡಿದ್ದವು. ಈ ಸಂದರ್ಭದಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದ ತರಬೇತಿ ಕೇಂದ್ರದ ಮೇಲ್ವಿಚಾರಕರಾದ ಮಿನಿ ಉಣ್ಣಿರಾಜ್ ಇತರರು ಇದ್ದರು.

Read More

ನಾಪೋಕ್ಲು ಫೆ.7 : ಸ್ಥಳೀಯ ಕಲ್ಲುಮೊಟ್ಟೆ ಕೆ.ಎಂ.ಸಿ.ಸಿ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್  ವತಿಯಿಂದ  ಆಯೋಜಿಸಲಾದ 5ನೇ ವರ್ಷದ ಕಲ್ಲುಮೊಟ್ಟೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಿರಾಜ್ ಫ್ರೆಂಡ್ಸ್ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಚೆರಿಯಪರಂಬು ಜನರಲ್ ಕೆ. ಎಸ್ ತಿಮ್ಮಯ್ಯ ಕ್ರೀಡಾಂಗಣರದಲ್ಲಿ ನಡೆದ ಆಕರ್ಷಕ  ಫೈನಲ್ ಪಂದ್ಯಾಟದಲ್ಲಿ ರಾಝಿಕ್ ನಾಯಕತ್ವದ ಹಾಟ್ ರೋಡ್ಸ್ ತಂಡವನ್ನು ಮಣಿಸಿ, ಪರವಂಡ ಸಿರಾಜ್ ನಾಯಕತ್ವದ ಸಿರಾಜ್ ಫ್ರೆಂಡ್ಸ್ ತಂಡ ನಗದು ಮತ್ತು ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.ಹಾಟ್ ರೋಡ್ಸ್  ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಕಳೆದ ಎರಡು ದಿನಗಳಿಂದ ನಡೆದ ಪಂದ್ಯಾವಳಿಯಲ್ಲಿ ಸುಮಾರು 6 ತಂಡಗಳು ಪಾಲ್ಗೊಂಡಿದ್ದವು.  ಪಂದ್ಯಾವಳಿಯಲ್ಲಿ ಉತ್ತಮ ಬ್ಯಾಟ್ಸ್ ಮೆನ್ ಪ್ರಶಸ್ತಿಯನ್ನು ಹಾಟ್ ರೋಡ್ಸ್ ತಂಡದ ಉದಯ  ಪಡೆದುಕೊಂಡರು.ಉತ್ತಮ ಆಲ್-ರೌಂಡರ್ ಪ್ರಶಸ್ತಿಯನ್ನು   ಸಿರಾಜ್ ಫ್ರೆಂಡ್ಸ್ ತಂಡದ ಉಬೈದ್ ಪಡೆದರು. ಉತ್ತಮ ಬೌಲರ್ ಪ್ರಶಸ್ತಿಯನ್ನು ಹಾಟ್ ರೋಡ್ಸ್ ತಂಡದ ಸಿದ್ದೀಕ್ ಆಯ್ಕೆಯಾದರು ,ಉದಯೋನ್ಮುಖ ಆಟಗಾರನಾಗಿ ಸಿರಾಜ್ ಫ್ರೆಂಡ್ಸ್ ತಂಡದ ಸಾದಿಕ್, ಹಿರಿಯ ಆಟಗಾರ ಪ್ರಶಸ್ತಿಯನ್ನು ಸಿರಾಜ್…

Read More