ಲೇಖಕ: admin

ಮಡಿಕೇರಿ ಜ.12 :  ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಕೊಡಗು ಶಾಖೆ, ಸರಗೂರು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ , ಕೊಡಗು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಭಾರತೀಯ ರೆಡ್‌ಕ್ರಾಸ್ ಸೊಸೈಟಿ  ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ವೈದ್ಯರುಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಮಡಿಕೇರಿಯ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಸಭಾಂಗಣದಲ್ಲಿ  ನಡೆದ ಕಾರ್ಯಕ್ರಮವನ್ನು   ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಸಭಾಪತಿ  ಬಿ.ಕೆ.ರವೀಂದ್ರ ರೈ  ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಇಂತಹ ಕಾರ್ಯಕ್ರಮವನ್ನು ವೈದ್ಯರುಗಳು ಮತ್ತು ಸಮುದಾಯದವರು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ  ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಖಜಾಂಚಿ ಡಾ.  ಕೆ.ಎನ್.ಚಂದ್ರಶೇಖರ್ , ಬಂಜೆತನ ನಿವಾರಣೆ ಕುರಿತಂತೆ ವೈದ್ಯರುಗಳಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯವಾಗಿದ್ದು, ಈ ತರಬೇತಿ ಕಾರ್ಯಕ್ರಮದಲ್ಲಿ ನುರಿತ ವೈದ್ಯರುಗಳ ತಂಡದಿಂದ ಸಂತಾನ ಹೀನತೆಯನ್ನು ನಿವಾರಿಸಲು ಸಹಕಾರಿಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಮಡಿಕೇರಿ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ…

Read More

ಸೋಮವಾರಪೇಟೆ ಜ.12 :  ಸೋಮವಾರಪೇಟೆ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿ ವತಿಯಿಂದ ಸ್ವಾಮಿ ವಿವೇಕಾನಂದರ 160ನೇ ಜಯಂತಿ ಯನ್ನು ಆಚರಿಸಲಾಯಿತು. ಸಮಿತಿಯ ಗೌರವಾಧ್ಯಕ್ಷ ಹಾಗೂ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಪಟ್ಟಣದ ವಿವೇಕಾನಂದರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಅರ್ಪಿಸಿದರು. ಈ ಸಂದರ್ಭ ಸಮಿತಿಯ ಕಾರ್ಯದರ್ಶಿ ಎಸ್.ಮಹೇಶ್, ಖಜಾಂಚಿ ಜಯಣ್ಣ, ರೋಟರಿ ಸಂಸ್ಥೆಯ ನಾಗೇಶ್, ಬಿ.ಎಸ್.ಸುಂದರ್, ನಾಗೇಶ್, ಜೇಸಿ ಸಂಸ್ಥೆ ಅಧ್ಯಕ್ಷರಾದ ರುಬೀನಾ, ಜಾನಪದ ಪರಿಷತ್ ಅಧ್ಯಕ್ಷ ಪ್ರಕಾಶ್, ಜ್ಞಾನವಿಕಾಸ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು  ಹಾಜರಿದ್ದರು.

Read More

ಮಡಿಕೇರಿ ಜ.12 : “ಗ್ರಾಮ ಒನ್” ಯೋಜನೆಯನ್ನು ರಾಜ್ಯದ ಜಿಲ್ಲೆಗಳಲ್ಲಿ ಈಗಾಗಲೇ ಮುಖ್ಯಮಂತ್ರಿ ಅವರು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ ಸಹಯೋಗದೊಂದಿಗೆ ಲೋಕಾರ್ಪಣೆಗೊಳಿಸಿದ್ದು, ಪ್ರಸ್ತುತ ಕೊಡಗು ಜಿಲ್ಲೆಯಲ್ಲಿ 12 ಗ್ರಾಮ ಪಂಚಾಯತ್‍ಗಳಲ್ಲಿ (ಗ್ರೇಡ್-2ರಡಿ) ಸಮಗ್ರ ನಾಗರಿಕ ಸೇವಾ ಕೇಂದ್ರ “ಗ್ರಾಮ ಒನ್” ಆರಂಭಿಸಲು ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿಯ ದೊಡ್ಡಮಳ್ತ್ತೆ, ಶಾಂತಳ್ಳಿ ಹೋಬಳಿಯ ಬೆಟ್ಟದಳ್ಳಿ, ಸೋಮವಾರಪೇಟೆ ಹೋಬಳಿಯ ಗರ್ವಾಲೆ, ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಹೋಬಳಿಯ ಕೆದಕಲ್, ಕುಶಾಲನಗರ ಹೋಬಳಿಯ ನಾಲ್ಕೂರು ಶಿರಂಗಾಲ, ವಿರಾಜಪೇಟೆ ತಾಲೂಕಿನ ಕಾಕೋೀಟುಪರಂಬು, ಪೊನ್ನಂಪೇಟೆ ತಾಲೂಕಿನ ಬಾಳೆಲೆ ಹೋಬಳಿಯ ನಿಟ್ಟೂರು ಹಾಗೂ ಪೊನ್ನಪ್ಪಸಂತೆ, ಹುದಿಕೇರಿ ಹೋಬಳಿಯ ಬಲ್ಯಮಂಡೂರು, ಶ್ರೀಮಂಗಲ ಹೋಬಳಿಯ ಕೆ.ಬಾಡಗ, ಪೊನ್ನಂಪೇಟೆ ಹೋಬಳಿಯ ಬಿ.ಶೆಟ್ಟಿಗೇರಿ ಹಾಗೂ ಕಿರುಗೂರು. ಆಸಕ್ತ ಪ್ರಾಂಚೈಸಿಗಳು https://www.gramaonebls.com/users/registration ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಪ್ರಾಜೆಕ್ಟ್ ಮ್ಯಾನೇಜರ್ ಅಥವಾ ಕೋ-ಆರ್ಡಿನೇಟರ್, ಜಿಲ್ಲಾಧಿಕಾರಿ ಅವರ ಕಚೇರಿ (ದೂರವಾಣಿ ಸಂಖ್ಯೆ: 8861672120/ 8553226664)…

Read More

ಮಡಿಕೇರಿ ಜ.12 : ಕೊಡಗು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 2023-24ನೇ ಸಾಲಿಗೆ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರವು ಸ್ಥಾಪಿಸಿರುವ ಮೊರಾರ್ಜಿ ದೇಸಾಯಿ ಶಾಲೆಗಳಲ್ಲಿ 6ನೇ ತರಗತಿಯಿಂದ 10 ನೇ ತರಗತಿಯವರೆಗೆ ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 06 ರಿಂದ 12 ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯ ಪುಸ್ತಕ ಹಾಗೂ ಇನ್ನಿತರೆ ಸಾಮಾಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಈ ಶಾಲೆಗಳಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಅಂದರೆ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರವೇಶ ಲಭ್ಯವಿದೆ. ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ…

Read More

ಮಡಿಕೇರಿ ಜ.12 : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ಕೇಂದ್ರ ಸರ್ಕಾರದ ಮಹತ್ತರ ಯೋಜನೆಯಾಗಿದ್ದು, ಗ್ರಾಮೀಣ ಭಾಗದ ಜನರು ಮತ್ತು ಮಹಿಳೆಯರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ವಿರಾಜಪೇಟೆ ತಾಲೂಕು ಪಂಚಾಯಿತಿ ಇ.ಒ. ಕೆ.ಸಿ.ಅಪ್ಪಣ್ಣ ಕರೆ ನೀಡಿದರು. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರುಗಳಿಗೆ ನಡೆದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರಿಗೆ ನರೇಗಾ ಯೋಜನೆಯಲ್ಲಿ ಹಲವಾರು ಸೌಲಭ್ಯಗಳಿದ್ದು, ಅದರ ಸದುಪಯೋಗವನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಸ್ವಾವಲಂಬಿ ಬದುಕು ನಡೆಸಲು ನರೇಗಾ ಸಹಕಾರಿಯಾಗಲಿದೆ ಎಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಸತೀಶ್ ಮಾತನಾಡಿ, ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಆಶಯದಂತೆ ಹಸಿವು ಮುಕ್ತ ಭಾರತವಾಗಬೇಕು. ಈ ನಿಟ್ಟಿನಲ್ಲಿ ನರೇಗಾ ಯೋಜನೆಯು ಗ್ರಾಮೀಣ ಭಾಗದ ಜನರಿಗೆ ಕನಿಷ್ಠ ಆರ್ಥಿಕ ವರ್ಷದಲ್ಲಿ 100 ದಿನಗಳ ಕೂಲಿ ನೀಡುತ್ತಿದ್ದು, ಪುರುಷ ಮತ್ತು ಮಹಿಳೆಯರಿಗೆ ಸಮಾನ ಕೂಲಿ ಇದ್ದು, ಗ್ರಾಮೀಣ ಭಾಗದ ಜನರಿಗೆ…

Read More

ಮಡಿಕೇರಿ ಜ.12 : ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯ ನಿರ್ಮಾಣ ಸಂಬಂಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಹುಬ್ಬಳ್ಳಿಯ ಸಂಕಲ್ಪ ಗ್ರೂಪ್‍ನ ಕಟ್ಟಡ ವಾಸ್ತುಶಿಲ್ಪಿ ಮುಖ್ಯಸ್ಥ ಮಹೇಶ್ ಹಿರೇಮಠ ಹಾಗೂ ಸುಷ್ಕಮ ಸ್ಥಳ ವೀಕ್ಷಿಸಿದರು. ನಗರದ ಹೊರ ವಲಯದ ಕೆ.ನಿಡುಗಣೆ ಗ್ರಾ.ಪಂ.ವ್ಯಾಪ್ತಿಯಲ್ಲಿರುವ ಜಾಗವನ್ನು ಪರಿಶೀಲಿಸಿದರು. ಕೆ.ನಿಡುಗಣೆ ಗ್ರಾ.ಪಂ. ವ್ಯಾಪ್ತಿಯಲ್ಲಿ 3 ಎಕರೆ ಜಾಗವಿದ್ದು, ಅದರ ಪಕ್ಕದಲ್ಲಿರುವ ಸರ್ಕಾರಿ ಜಾಗದ ಗಡಿ ಗುರುತಿಸಿ ಡಿಜಿಟಲ್ ಸರ್ವೇ ಮಾಡುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಜಿಲ್ಲಾ ಕೇಂದ್ರದಲ್ಲಿ ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಮಿನಿ ತಾರಾಲಯ ನಿರ್ಮಾಣ ಮಾಡಬೇಕಿದೆ ಆ ನಿಟ್ಟಿನಲ್ಲಿ ತ್ವರಿತವಾಗಿ ಕ್ರಮವಹಿಸಬೇಕು ಎಂದರು. ಹುಬ್ಬಳ್ಳಿಯ ಸಂಕಲ್ಪ ಗ್ರೂಪ್‍ನ ಕಟ್ಟಡ ವಾಸ್ತುಶಿಲ್ಪಿ ಮುಖ್ಯಸ್ಥ ಮಹೇಶ್ ಹಿರೇಮಠ ಮಾತನಾಡಿ, ಕೆ.ನಿಡುಗಣೆ ಗ್ರಾ.ಪಂ. ವ್ಯಾಪ್ತಿಯ ಜಾಗವನ್ನು ಸರ್ವೇ ಮಾಡಿಸಿ ಗಡಿ ಗುರುತಿಸಬೇಕು. ನಂತರ ಮತ್ತೊಂದು ಸಾರಿ ವೀಕ್ಷಣೆ ಮಾಡಿ ಅಂತಿಮಗೊಳಿಸಲಾಗುವುದು ಎಂದರು. ನೋಡಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್ ಅವರು ಮಾತನಾಡಿ 5…

Read More

ಮಡಿಕೇರಿ ಜ.12 : ಚಾಲನೆಯಲ್ಲಿದ್ದ ಹಿಟ್ಟಿನ ಗಿರಣಿ ಬೆಲ್ಟ್‌ಗೆ ಆಕಸ್ಮಿಕವಾಗಿ ತಾಯಿಯ ತಲೆ ಸಿಲುಕಿದಾಗ ಸಮಯ ಪ್ರಜ್ಞೆ ಮೆರೆದು ತಾಯಿಯ ಪ್ರಾಣ ಉಳಿಸಿದ ವಿದ್ಯಾರ್ಥಿ ದೀಕ್ಷಿತ್ (9) 2022-23ನೇ ಸಾಲಿನ ರಾಷ್ಟ್ರೀಯ ಶೌರ್ಯ ಪ್ರಶಸ್ತಿಗೆ ಪಾತ್ರನಾಗಿದ್ದಾನೆ. ದೀಕ್ಷಿತ್ ತಾಯಿ ಅರ್ಪಿತಾ ಕೂಡೂರು ಗ್ರಾಮದ ಹಿಟ್ಟಿನ ಗಿರಣಿಯಲ್ಲಿ ಅಕ್ಕಿ ಪುಡಿ ಮಾಡಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಚಾಲನೆಯಲ್ಲಿದ್ದ ಗಿರಣಿಯ ಬೆಲ್ಟ್‌ಗೆ ಅವರ ತಲೆಗೆ ಸಿಲುಕಿಕೊಂಡು, ಜೋರಾಗಿ ಕಿರುಚಿಕೊಂಡರು. ಗಿರಣಿ ಪಕ್ಕದಲ್ಲಿ ಆಟವಾಡುತ್ತಿದ್ದ ಬಾಲಕ ದೀಕ್ಷಿತ್ ತಾಯಿಯ ಕೂಗು ಕೇಳಿಸಿಕೊಂಡು ಓಡಿ ಬಂದು ಹಿಟ್ಟಿನ ಗಿರಣಿಯ ವಿದ್ಯುತ್ ಸರಬರಾಜಿನ ಸ್ವಿಚ್ ಆಫ್ ಮಾಡುವ ಮೂಲಕ ಸಮಯ ಪ್ರಜ್ಞೆ ಮೆರೆದು ತಾಯಿಯನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದನು. ದೆಹಲಿಯಲ್ಲಿ ಜ.26 ರಂದು ಗಣರಾಜ್ಯೋತ್ಸವ ಅಂಗವಾಗಿ ನಡೆಯಲಿರುವ 2022-23ನೇ ಸಾಲಿನ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ದೀಕ್ಷಿತ್ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಸ್ವೀಕರಿಸಲಿದ್ದಾನೆ ಎಂದು ಬಾಲಕನ ಪೋಷಕರು ತಿಳಿಸಿದ್ದಾರೆ. ಈತ ಇಲ್ಲಿನ ಕೂಡೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ…

Read More

ಮಡಿಕೇರಿ ಜ.12 : ಇಂದಿನ ಯುವ ಜನಾಂಗವು ಉತ್ತಮವಾದ ದಾರಿಯಲ್ಲಿ ನಡೆದರೆ ಮಾತ್ರ , ಭವಿಷ್ಯದ ಭಾರತವನ್ನು ಸದೃಢವಾಗಿ ಕಟ್ಟಲು ಸಾಧ್ಯ ಎಂದು ಶಾಸಕ ಕೆ.ಜಿ.ಬೋಪಯ್ಯ ಕಿವಿ ಮಾತುಹೇಳಿಸದರು. ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಗುಣಮಟ್ಟ ಭರವಸಾ ಕೋಶ , ಎನ್.ಎಸ್.ಎಸ್ ಘಟಕ ಹಾಗೂ ಜಿಲ್ಲಾಡಳಿತ, ಜಿ.ಪಂ ಕೊಡಗು , ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಮಡಿಕೇರಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕೊಡಗು ಜಿಲ್ಲಾ ಯುವ ಒಕ್ಕೂಟ , ವಿರಾಜಪೇಟೆ, ಸೋಮವಾರಪೇಟೆ , ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ  ಸಂಯುಕ್ತ ಆಶ್ರಯದಲ್ಲಿ ನಡೆದ   “ರಾಷ್ಟ್ರೀಯ ಯುವ ದಿನ” ಹಾಗೂ “ಯುವ ಸಪ್ತಾಹ”  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಬಿ.ಪ್ರಸಾದ್‌ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಯಾವುದೇ ಆಸೆ ಆಮಿಷಗಳು , ಮಾದಕ ಚಟಗಳಿಗೆ ಒಳಗಾಗದೇ ಶಿಸ್ತುಬದ್ಧ ಹಾಗೂ ಸಂಯಮದ ಜೀವನವನ್ನು…

Read More

ವಿರಾಜಪೇಟೆ ಜ.12 : ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಗ್ರೀಷ್ಮಗೆ ಬೆಸ್ಟ್ ಮ್ಯಾನೇಜರ್ ಪ್ರಶಸ್ತಿ ಲಭಿಸಿದೆ. ಗೋಣಿಕೊಪ್ಪ ಕಾವೇರಿ ಕಾಲೇಜಿನಲ್ಲಿ ನಡೆದ ಕಂಪ್ಯೂಟರ್ ಸೈನ್ಸ್ ವಿಭಾಗದ ಫೆಸ್ಟ್‍ನಲ್ಲಿ ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿಕಾಂ.ನ ಕಂಪ್ಯೂಟರ್ ವಿಭಾಗದ ವಿದ್ಯಾರ್ಥಿ ಗ್ರೀಷ್ಮ ಈ ಪ್ರಶಸ್ತಿ ಪಡೆದಿರುವುದಾಗಿ ಕಾಲೇಜು ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ ಜ.12 : ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಹಿಂದೆ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರೊ. ಪಟ್ಟಡ ಪೂವಣ್ಣ ನಿವೃತ್ತಿಗೊಂಡ ಸ್ಥಾನಕ್ಕೆ ನೂತನ ಪ್ರಾಂಶುಪಾಲರಾಗಿ ಬಿದ್ದಂಡ ಡಾ. ರೇಖಾ ಚಿಣ್ಣಪ್ಪ ನೇಮಕಗೊಂಡಿದ್ದಾರೆ. ಇವರು ಜನವರಿ 2 ರಂದು ಅಧಿಕಾರವನ್ನು ವಹಿಸಿಕೊಂಡಿದ್ದಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.

Read More