ಕೂಡಿಗೆ ಜ.12 : ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕೂಡಿಗೆ ಕ್ಲಸ್ಟರ್ ಕೇಂದ್ರದ ವತಿಯಿಂದ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್.ಎಸ್.ಎಸ್.ಘಟಕ ಹಾಗೂ ಎಸ್.ಡಿ.ಎಂ.ಸಿ.ಸಹಯೋಗದೊಂದಿಗೆ ( (ಜ.12 ರಿಂದ) ಆರಂಭಗೊಂಡ ಎರಡು ದಿನಗಳ ಕಾಲದ ಕೂಡಿಗೆ ಕ್ಲಸ್ಟರ್ ಮಟ್ಟದ ಮಕ್ಕಳ ಕಲಿಕಾ ಹಬ್ಬಕ್ಕೆ ಚಾಲನೆ ನೀಡಲಾಯಿತು. ತರಗತಿ ಕೋಣೆಯ ಪಾಠದಿಂದ ಹೊರಬಂದ ಮಕ್ಕಳು ಆಟ- ಪಾಠ, ಹಾಡು- ನೃತ್ಯ, ಕರಕುಶಲ ಕಲೆ ಹಾಗೂ ಚಿತ್ರಕಲೆ ರಚನೆ ಮತ್ತಿತರ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ದಿನವಿಡೀ ತಮ್ಮನ್ನು ತೊಡಗಿಸಿಕೊಂಡು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಮಕ್ಕಳು ಸ್ವತಃ ತಾವೇ ತಯಾರಿಸಿಕೊಂಡಿದ್ದ ಕಾಗದದ ಟೋಪಿ ಧರಿಸಿ ಸಂಭ್ರಮಿಸಿದರು. ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಿಂದ ಆಗಮಿಸಿದ್ದ 4 ರಿಂದ 9ನೇ ತರಗತಿವರೆಗಿನ 120ಕ್ಕೂ ಹೆಚ್ಚಿನ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿ ತಮ್ಮನ್ನು ತಾವು ಮೈಮರೆತು ನಲಿಯುತ್ತಾ ಕಲಿಕೆಯಲ್ಲಿ ತೊಡಗಿದ್ದು, ಕಂಡುಬಂತು. ಮಕ್ಕಳ ಕಲಿಕಾ ಹಬ್ಬಕ್ಕೆ…
ಲೇಖಕ: admin
ಮಡಿಕೇರಿ ಜ.12 : ಮಡಿಕೇರಿ ನಗರದ 23 ವಾರ್ಡ್ಗಳ ಜನರ ಸಮಸ್ಯೆಗಳನ್ನು ಆಲಿಸುವ ಒಂದು ತಿಂಗಳ ಅಭಿಯಾನಕ್ಕೆ ಕೊಡಗು ರಕ್ಷಣಾ ವೇದಿಕೆ ಚಾಲನೆ ನೀಡಿದೆ. ನಗರದ ಮಲ್ಲಿಕಾರ್ಜುನ ನಗರ ಬಡಾವಣೆಯಿಂದ ಅಭಿಯಾನವನ್ನು ಆರಂಭಿಸಿದ ಕೊರವೇ ಅಧ್ಯಕ್ಷ ಅಚ್ಚಾಂಡಿರ ಪವನ್ ಪೆಮ್ಮಯ್ಯ ಅವರ ನೇತೃತ್ವದ ತಂಡ ಮೂಲಭೂತ ಸೌಲಭ್ಯಗಳ ಕೊರತೆಯ ಕುರಿತು ಸ್ಥಳೀಯ ನಿವಾಸಿಗಳಿಗೆ ಮಾಹಿತಿ ಸಂಗ್ರಹಿಸಿತು. ನಗರಸಭಾ ವ್ಯಾಪ್ತಿಯ 23 ವಾರ್ಡ್ಗಳ 11 ಸಾವಿರಕ್ಕೂ ಅಧಿಕ ಮನೆಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ, ಆಡಳಿತ ವ್ಯವಸ್ಥೆಯ ಗಮನಕ್ಕೆ ತರುವ ಪ್ರಯತ್ನ ಮಾಡಲಾಗುತ್ತಿದೆ. ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರಕಿಸಿಕೊಡುವುದೇ ಒಂದು ತಿಂಗಳ ಅಭಿಯಾನದ ಉದ್ದೇಶವಾಗಿದೆ ಎಂದು ಪವನ್ ಪೆಮ್ಮಯ್ಯ ಈ ಸಂದರ್ಭ ತಿಳಿಸಿದರು. ಕೊರವೇ ಮಡಿಕೇರಿ ನಗರ ಘಟಕದ ಅಧ್ಯಕ್ಷ ಶರತ್, ಉಪಾಧ್ಯಕ್ಷ ವರ್ಗೀಸ್, ಪ್ರಧಾನ ಕಾರ್ಯದರ್ಶಿ ಬನ್ಸಿ ನಾಣಯ್ಯ, ಖಜಾಂಚಿ ಸಿದ್ದಿಕ್, ಜಿಲ್ಲಾ ನಿರ್ದೇಶಕ ಸುಲೇಮಾನ್, ಪ್ರಮುಖರಾದ ಮುದ್ದುರ ನಿತಿನ್ ದೇವಯ್ಯ ಮತ್ತಿತರರು ಹಾಜರಿದ್ದರು.
ಮಡಿಕೇರಿ ಜ.12 : ಒಂಟಿ ಸಲಗವೊಂದು ತೋಟಗಳಿಗೆ ಲಗ್ಗೆ ಇಟ್ಟು ಕೃಷಿ ಫಸಲು ನಾಶ ಮಾಡಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಮಗ್ಗುಲ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತರಾದ ಪುಲಿಯಂಡ ಜಗದೀಶ್ ಹಾಗೂ ಕುಪ್ಪಚ್ಚಿರ ಸತೀಶ್ ಅವರುಗಳ ತೋಟಕ್ಕೆ ದಾಳಿ ಮಾಡಿದ ಕಾಡಾನೆ ಕಾಫಿ, ತೆಂಗು, ಅಡಿಕೆ, ಬಾಳೆ ಮತ್ತಿತರ ಗಿಡಗಳನ್ನು ನಾಶಪಡಿಸಿದೆ. ಲಕ್ಷಾಂತರ ರೂ. ನಷ್ಟ ಉಂಟಾಗಿದ್ದು, ಸೂಕ್ತ ಪರಿಹಾರ ನೀಡಬೇಕು ಮತ್ತು ಕಾಡಾನೆಗಳನ್ನು ಕಾಡಿಗಟ್ಟಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಆನೆ ಕಾರ್ಯಪಡೆ ಎ.ಸಿ.ಎಫ್ ಚಂಗಪ್ಪ, ಉಪವಲಯ ಅರಣ್ಯಾಧಿಕಾರಿ ಮೋನಿಶ, ಶ್ರೀಶೈಲ ಸೇರಿದಂತೆ ಆನೆ ಕಾರ್ಯಪಡೆ ತಂಡದ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮದಲ್ಲಿ ಭೀತಿಯ ವಾತಾವರಣವಿದ್ದು, ಕಾರ್ಮಿಕರು ತೋಟಕ್ಕೆ ಬರಲು ಹಿಂಜರಿಯುತ್ತಿದ್ದಾರೆ. ಕಾಫಿ ಕೊಯ್ಲಿನ ಸಂದರ್ಭವಾಗಿರುವುದರಿಂದ ಬೆಳೆಗಾರರು ನಷ್ಟದ ಆತಂಕ ಎದುರಿಸುತ್ತಿದ್ದಾರೆ.
ಬೇಕಾಗುವ ಸಾಮಾಗ್ರಿಗಳು : ಬೆಳ್ಳುಳ್ಳಿ – 15-20, ಶುಂಠಿ – ಸ್ವಲ್ಪ, ಹಸಿ ಮೆಣಸಿನಕಾಯಿ – 8-10, ಹೆಚ್ಚಿದ ಈರುಳ್ಳಿ – ಅರ್ಧ ಬಟ್ಟಲು, ಹೆಚ್ಚಿದ ಕೊತ್ತಂಬರಿ ಸೊಪ್ಪು – ಸ್ವಲ್ಪ, ಹೆಚ್ಚಿದ ಪುದೀನ – ಮುಕ್ಕಾಲು ಬಟ್ಟಲು, ದಾಲ್ಚಿನ್ನಿ (ಚಕ್ಕೆ)– ಸ್ವಲ್ಪ, ಲವಂಗ – 8, ಕಾಳುಮೆಣಸು – 1 ಚಮಚ, ದನಿಯಾ ಪುಡಿ – 2 ಚಮಚ, ತುರಿದ ತೆಂಗಿನಕಾಯಿ – ಸ್ವಲ್ಪ, ಚಿಕನ್ ತುಂಡುಗಳು – 3/4 ಕೆಜಿ, ಹೆಚ್ಚಿದ ಈರುಳ್ಳಿ – 1 ಬಟ್ಟಲು, ಹೆಚ್ಚಿದ ಟೊಮೆಟೊ – ಅರ್ಧ ಬಟ್ಟಲು, ನಿಂಬೆ ಹಣ್ಣು – ಅರ್ಧ, ಎಣ್ಣೆ – 3 ಚಮಚ, ಉಪ್ಪು – ರುಚಿಗೆ ತಕ್ಕಷ್ಟು ಮಾಡುವ ವಿಧಾನ : ಮೊದಲಿಗೆ ಮಿಕ್ಸಿ ಜಾರ್’ಗೆ ಬೆಳ್ಳುಳ್ಳಿ, ಶುಂಠಿ, ಹಸಿರು ಮೆಣಸಿನ ಕಾಯಿ, ಈರುಳ್ಳಿ, ಕೊತ್ತಂಬರಿ ಸೊಪ್ಪು, ಪುದೀನ, ಚಕ್ಕೆ, ಲವಂಗ, ಕಾಳುಮೆಣಸು, ದನಿಯಾ ಪುಡಿ, ತುರಿದ ತೆಂಗಿನಕಾಯಿ ಹಾಕಿ, ಸ್ವಲ್ಪ ನೀರು ಬೆರೆಸಿ…
ಮಡಿಕೇರಿ ಜ.12 : ಮದವೇರಿದ ಕಾಡಾನೆ ದಾಳಿ ಮಾಡಿದ ಪರಿಣಾಮ ಸಾಕಾನೆ ತೀವ್ರ ಗಾಯಗೊಂಡ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಶಿಬಿರದ ಸಾಕಾನೆ ಗೋಪಿ ಗಾಯಗೊಂಡಿದ್ದು, ವನ್ಯಜೀವಿ ತಜ್ಞರು ಚಿಕಿತ್ಸೆ ನೀಡುತ್ತಿದ್ದಾರೆ. ಕಾಡಾನೆ ಚಲನವಲನ ಶಿಬಿರದ ಬಳಿಯೇ ಇರುವುದಾಗಿ ಅರಣ್ಯ ಅಧಿಕಾರಿಗಳು ತಿಳಿಸಿದ್ದು, ಸುರಕ್ಷತೆಯ ದೃಷ್ಟಿಯಿಂದ ಸಾಕಾನೆ ಶಿಬಿರಕ್ಕೆ ಎರಡು ದಿನ ಪ್ರವಾಸಿಗರ ನಿರ್ಬಂಧ ಹೇರಲಾಗಿದೆ. ಮಡಿಕೇರಿ ವಿಭಾಗದ ಅರಣ್ಯ ಉಪ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ, ಸೋಮವಾರಪೇಟೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್, ಕುಶಾಲನಗರ ವಲಯ ಅರಣ್ಯ ಅಧಿಕಾರಿ ಕೆ.ವಿ.ಶಿವರಾಮ್ ಸ್ಥಳದಲ್ಲಿ ವಾಸ್ತವ್ಯ ಹೂಡಿದ್ದು, ಕಾಡಾನೆಯನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ.
ಗೋಣಿಕೊಪ್ಪಲು ಜ.12 : ಭಾರತ ಸರ್ಕಾರದ ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ ನಡೆಸುವ 26ನೇ ರಾಷ್ಟ್ರೀಯ ಯುವ ಉತ್ಸವಕ್ಕೆ ಕೊಡಗಿನ ವಿದ್ಯಾರ್ಥಿ ಎಸ್.ಕೆ.ದರ್ಶನ್ ಆಯ್ಕೆಯಾಗಿದ್ದಾರೆ. ಧಾರವಾಡ ವಿಶ್ವವಿದ್ಯಾಲಯ ಅವರಣದಲ್ಲಿ ಜ.12 ರಿಂದ 16ರ ವರಗೆ ನಡೆಯುವ ರಾಷ್ಟ್ರೀಯ ಯುವ ಉತ್ಸವಕ್ಕೆ ಪ್ರತಿ ರಾಜ್ಯದಿಂದ ಮತ್ತು ಕೇಂದ್ರಾಡಳಿತ ಪ್ರದೇಶದಿಂದ ಸುಮಾರು 1000 ಎನ್.ಎಸ್.ಎಸ್ ಸ್ವಯಂ ಸೇವಕ/ಸೇವಕಿಯರು ಭಾಗವಹಿಸುತ್ತಿದ್ದಾರೆ. ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳ ಸ್ವಯಂ ಸೇವಕರ ಆಯ್ಕೆ ನಡೆಸಿ 150 ವಿದ್ಯಾರ್ಥಿಗಳನ್ನು ನಿಯೋಜಿಸಲಾಗಿದೆ. ಅದರಂತೆ ಕೊಡಗು ಜಿಲ್ಲೆಯ ಏಕೈಕ ಸ್ವಯಂ ಸೇವಕರಾಗಿ ಕಾವೇರಿ ಪದವಿ ಕಾಲೇಜು ಗೋಣಿಕೊಪ್ಪಲುವಿನ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕ ಹಾಗೂ ದ್ವೀತಿಯ ಬಿಕಾಂ ವಿದ್ಯಾರ್ಥಿ ಎಸ್.ಕೆ ದರ್ಶನ್ ಆಯ್ಕೆಯಾಗಿರುವುದು ಕಾಲೇಜಿಗೆ ಮತ್ತು ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ಇವರು ಗೋಣಿಕೊಪ್ಪಲು ನಿವಾಸಿ ಎಸ್.ಆರ್ ಕುಮಾರ್ ಮತ್ತು ಎ.ಎಸ್.ಪವಿತ್ರ ಅವರ ಪುತ್ರರಾಗಿದ್ದು, ರಾಷ್ಟ್ರೀಯ ಯುವ ಉತ್ಸವದಲ್ಲಿ ಕೊಡಗನ್ನು ಪ್ರತಿನಿಧಿಸಲಿದ್ದಾರೆ.
ಮಡಿಕೇರಿ ಜ.12 : ಕೊಡಗು ರಕ್ಷಣಾ ವೇದಿಕೆಯ ವತಿಯಿಂದ ಮಡಿಕೇರಿಯ 23 ವಾರ್ಡಿನ 11,000 ಮನೆಗಳಿಗೆ ಭೇಟಿ ನೀಡಿ ಸಮಸ್ಯೆಯನ್ನು ಅರಿಯುವ ನಿರಂತರ ಒಂದು ತಿಂಗಳ ನೂತನ ಅಭಿಯಾನಕ್ಕೆ ನಗರದ ಮಲ್ಲಿಕಾರ್ಜುನ ನಗರ ವಾರ್ಡಿನಲ್ಲಿ ಕೊಡಗು ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪವನ್ ಪೆಮ್ಮಯ ಚಾಲನೆ ನೀಡಿದರು. ಈ ಸಂದರ್ಭ ವೇದಿಕೆಯ ಮಡಿಕೇರಿ ನಗರ ಘಟಕದ ಅಧ್ಯಕ್ಷ ಶರತ್, ಉಪಾಧ್ಯಕ್ಷ ವರ್ಗೀಸ್, ಪ್ರಧಾನ ಕಾರ್ಯದರ್ಶಿ ಬನ್ಸೀ ನಾಣಯ್ಯ , ಖಜಾಂಚಿ ಸಿದ್ದಿಕ್, ಜಿಲ್ಲಾ ನಿರ್ದೇಶಕ ಸುಲೇಮಾನ್, ಮುಖಂಡ ಮುದ್ದುರ ನಿತಿನ್ ದೇವಯ್ಯ ಮತ್ತಿತರರು ಹಾಜರಿದ್ದರು.
ಮಡಿಕೇರಿ,ಜ. 12 : ಕೊಡಗು ಜಿಲ್ಲೆಯಲ್ಲಿ ಫುಟ್ಬಾಲ್ ಆಟ ಶೇ.100ರಷ್ಟು ಏಳಿಗೆ ಕಂಡಿದೆ. ಕೊಡಗು ಜಿಲ್ಲೆಯಿಂದ ಹಲವಾರು ಮಂದಿ ಕರ್ನಾಟಕ ರಾಜ್ಯ ಹಾಗೂ ಭಾರತ ದೇಶಕ್ಕಾಗಿ ಆಡಿದ್ದಾರೆ ಎಂದು ರಾಷ್ಟ್ರೀಯ ಫುಟ್ಬಾಲ್ ಆಟಗಾರ ಹಾಗೂ ಎಂಸಿಸಿ ಹಿರಿಯ ಆಟಗಾರ ಬೆಪ್ಪುರನ ಅಣ್ಣಪ್ಪ ಹೇಳಿದರು. ಮ್ಯಾನ್ಸ್ ಕಾಂಪೌಂಡ್ ಕ್ಲಬ್(ಎಂಸಿಸಿ) ವತಿಯಿಂದ ಇಲ್ಲಿನ ಫುಟ್ಬಾಲ್ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಮುಕ್ತ ಫುಟ್ಬಾಲ್ ಪಂದ್ಯಾವಳಿಯ ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಜಿಲ್ಲೆಯಲ್ಲಿ ಫುಟ್ಬಾಲ್ ಆಟಕ್ಕೆ ಹೆಚ್ಚಿನ ಪ್ರೋತ್ಸಾಹ ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. 1968ರಲ್ಲಿ ಆರಂಭಗೊಂಡ ಎಂಸಿಸಿ ಕ್ಲಬ್ೆಲ್ಲರ ಸಹಕಾರದಿಂದ ಮುನ್ನಡೆಯುತ್ತಿದೆ. 5-7 ಆಟಗಾರರ ಪಂದ್ಯಾವಳಿಯೊಂದಿಗೆ ಪೂರ್ಣ ಪ್ರಮಾಣದ 11 ಆಟಗಾರರ 45 ನಿಮಿಷಗಳ ಪಂದ್ಯಾವಳಿ ಆಯೋಜಿಸುವಂತಾಗಬೇಕು. ಪ್ರತಿದಿನ ಅಭ್ಯಾಸ ಮಾಡಿದಲ್ಲಿ ಉನ್ನತ ಮಟ್ಟಕ್ಕೇರಲು ಸಾಧ್ಯ. ಆಟಗಾರರು ಕೊಡಗು ಮಾತ್ರವಲ್ಲದೆ, ಮೈಸೂರ, ಬೆಂಗಳೂರು ಸೇರಿದಂತೆ ಹೊಗಡೆ ಆಡಿದಾಗ ರಾಜ್ಯ, ರಾಷ್ಟ್ರೀಯ ತಂಡದಲ್ಲಿ ಆಯ್ಕೆಯಾಗಲು ಸಾಧ್ಯವಾಗುತ್ತದೆ ಎಂದು ಕಿವಿಮಾತು ಹೇಳಿದರು. ಎಂಸಿಸಿ…
ಮಡಿಕೇರಿ ಜ.12 : ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಪ್ರಯುಕ್ತ ಜ.15 ರಂದು ನಡೆಯುವ ರಾಷ್ಟ್ರೀಯ ಯುವ ಸಪ್ತಾಹ ಪ್ರಯುಕ್ತ ಜಿಲ್ಲೆಯಲ್ಲಿ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಮಡಿಕೇರಿ ಸಾಯಿ ಹಾಕಿ ಟರ್ಫ್, ಪೊನ್ನಂಪೇಟೆ ಹಾಕಿ ಟರ್ಫ್(ಜೂನಿಯರ್ ಕಾಲೇಜು ಮೈದಾನ) ಹಾಗೂ ಕೂಡಿಗೆ ಕ್ರೀಡಾ ಶಾಲೆ ಹಾಕಿ ಟರ್ಫ್ಗಳಲ್ಲಿ ಯೋಗಥಾನ್ ನಡೆಯಲಿದೆ. ಯೋಗ ಅಭ್ಯಾಸವು ಜನವರಿ, 12 ಮತ್ತು 13 ರಂದು ಎಲ್ಲಾ ಶಾಲೆಗಳು, ಕಾಲೇಜುಗಳಲ್ಲಿ ತಮ್ಮ ದೈಹಿಕ ಶಿಕ್ಷಣ ಶಿಕ್ಷಕರು/ ಯೋಗ ಬೋಧಕರ ನೆರವಿನೊಂದಿಗೆ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಲಿದ್ದಾರೆ. ಜನವರಿ, 14 ರಂದು ಬೆಳಗ್ಗೆ 9 ಗಂಟೆಗೆ ಮಡಿಕೇರಿ, ಪೊನ್ನಂಪೇಟೆ ಮತ್ತು ಕೂಡಿಗೆಯಲ್ಲಿ ಯೋಗ ಅಭ್ಯಾಸ ನಡೆಯಲಿದೆ. ಜನವರಿ 15 ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಮಡಿಕೇರಿ, ಪೊನ್ನಂಪೇಟೆ ಮತ್ತು ಕೂಡಿಗೆಯಲ್ಲಿ ಯೋಗಥಾನ್ ನಡೆಯಲಿದೆ. ಯೋಗದ ವಿವರಗಳಿಗೆ http://youtu.be/RgiLepPugrY ಲಿಂಕ್ ಅನ್ನು ಕ್ಲಿಕ್ ಮಾಡಿ ಪಡೆಯಬಹುದು. ಬಿಳಿ ಬಣ್ಣದ ಟಿ ಶರ್ಟ್ ಧರಿಸಿ ಯೋಗ ಮಾಡುವುದು. ಭಾಗವಹಿಸುವವರು ತಮ್ಮ…
ಮಡಿಕೇರಿ ಜ.12 : ಮನೆಯಲ್ಲಿ ಸೇರಿಕೊಂಡಿದ್ದ ನಾಗರ ಹಾವನ್ನು ಉರಗ ತಜ್ಞ ಪ್ರವೀಣ್ ರಕ್ಷಿಸಿದ್ದಾರೆ. ಮಡಿಕೇರಿಯ ವಿದ್ಯಾನಗರದ ನಿವಾಸಿ ಸುಮ ಎಂಬವರ ಮನೆಯಲ್ಲಿ ನಾಗರ ಹಾವು ಕಾಣಿಸಿಕೊಂಡಿದ್ದು, ಸುಂಟಿಕೊಪ್ಪ ಸಮೀಪದ ಏಳನೇ ಹೊಸಕೋಟೆಯ ಸ್ನೇಕ್ ಪ್ರವೀಣ್ ಅವರಿಗೆ ಮಾಹಿತಿ ನೀಡಿದ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಉರಗ ತಜ್ಞ ಪ್ರವೀಣ್ ನಾಗರಹಾವನ್ನು ಹಿಡಿದು ರಕ್ಷಿಸಿ ಅದನ್ನು ರಕ್ಷಿತಾರಣ್ಯಕ್ಕೆ ಬಿಟ್ಟರು. ಹಾವುಗಳು ಕಂಡುಬಂದಲ್ಲಿ ಅವುಗಳಿಗೆ ಯಾವುದೇ ರೀತಿಯ ಹಿಂಸೆ ನೀಡದೆ 8197689934 ಸಂಖ್ಯೆಗೆ ಕರೆ ಮಾಡುವಂತೆ ಪ್ರವೀಣ್ ಮನವಿ ಮಾಡಿದರು.






