ಮಡಿಕೇರಿ ಮಾ.16 : ಹೊದ್ದೂರು ಗ್ರಾಮ ಪಂಚಾಯ್ತಿ ವ್ಯಾಪ್ತ್ತಿಗೆ ಒಳಪಡುವ ಹೊದವಾಡ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ, ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಹೈದ್ರೂಸ್ ಜುಮಾ ಮಸೀದಿಯ ಅಧ್ಯಕ್ಷ ಬಿ.ಎಸ್.ಅಬೂಬಕ್ಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಅದನ್ನು ದುರಸ್ತಿ ಪಡಿಸುವ ಯಾವುದೇ ಅಭ್ಯರ್ಥಿಯನ್ನು ಗ್ರಾಮಸ್ಥರು ಬೆಂಬಲಿಸಲಿದ್ದಾರೆ. ಕೇವಲ ಚುನಾವಣೆ ಸಂದರ್ಭ ಗ್ರಾಮದ ಜನರನ್ನು ಓಲೈಸಲು ಯಾವುದೇ ರಾಜಕಾರಣಿಗಳು ಗ್ರಾಮಕ್ಕೆ ಬರುವುದು ಬೇಡವೆಂದು ಹೇಳಿದರು. ಮೂರ್ನಾಡಿನಿಂದ ಕುಂಬಳದಾಳು ಮಾರ್ಗವಾಗಿ ಹೊದವಾಡ ಗ್ರಾಮವನ್ನು ಸಂಪರ್ಕಿಸುವ ಸುಮಾರು 9.50 ಕಿ.ಮೀ ರಸ್ತೆಯಲ್ಲಿ ಮೂರ್ನಾಡು ಕಡೆಯಿಂದ 8 ಕಿ.ಮೀ. ರಸ್ತೆಯನ್ನು ವ್ಯವಸ್ಥಿತವಾಗಿ ನಿರ್ಮಿಸಲಾಗಿದೆ. ಅಲ್ಪಸಂಖ್ಯಾತರು ನೆಲೆಸಿರುವ ಸ್ಥಳದಿಂದ ಸುಮಾರು 1.50 ಕಿ.ಮೀ. ರಸ್ತೆಯ ದುರಸ್ತಿ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆಯೆಂದು ಬೇಸರ ವ್ಯಕ್ತಪಡಿಸಿ. ಆಡಳಿತ ನಡೆಸುವವರು ಅಲ್ಪಸಂಖ್ಯಾತರನ್ನು ದ್ವಿತೀಯ ದರ್ಜೆಯ ಪ್ರಜೆಗಳನ್ನಾಗಿ ಪರಿಗಣಿಸುತ್ತಿದ್ದಾರೆ ಎಂದು ಆರೋಪಿಸಿದರು. ಹೊದವಾಡ ಗ್ರಾಮ ವ್ಯಾಪ್ತಿಯಲ್ಲಿ ವಿವಿಧ ಸಮೂಹಗಳಿಗೆ ಸೇರಿದ ಸುಮಾರು 3 ಸಾವಿರ…
ಲೇಖಕ: admin
ನಾಪೋಕ್ಲು ಮಾ.16 : ವಿಶ್ವಕ್ಕೆ ವಿಶಿಷ್ಟ ಸಂಸ್ಕೃತಿಯನ್ನು ಪರಿಚಯಿಸಿದ ಕೊಡಗಿನಲ್ಲಿ ಮತ್ತೆ ಹಾಕಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಾ.18ರಿಂದ ಆರಂಭಗೊಳ್ಳುವ 23ನೇ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯಲ್ಲಿ ದಾಖಲೆಯ 336 ಕೊಡವ ಕುಟುಂಬಗಳು ಪಾಲ್ಗೊಳ್ಳಲಿದ್ದು, ಕೌಟುಂಬಿಕ ಹಾಕಿ ಪಂದ್ಯಾವಳಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾಕಿ ಪಂದ್ಯಾವಳಿಯ ಉದ್ಘಾಟನೆಗೆ ಆಗಮಿಸಲಿದ್ದು ಮತ್ತಷ್ಟು ಮೆರುಗು ಹೆಚ್ಚಲಿದೆ. ಸಮೀಪದ ಬಲ್ಲಮಾವಟಿಯ ಅಪ್ಪಚೆಟ್ಟೋಳಂಡ ಕುಟುಂಬ ಕೌಟುಂಬಿಕ ಹಾಕಿ ಆತಿಥ್ಯ ವಹಿಸಿದ್ದು, ಯಶಸ್ಸಿಗೆ ಹಗಲಿರುಳು ಶ್ರಮಿಸುತ್ತಿದೆ. ಕೌಟುಂಬಿಕ ಕೊಡವ ಹಾಕಿ ಪಂದ್ಯಾವಳಿಯ ಯಶಸ್ಸಿಗೆ ಕುಟುಂಬಸ್ಥರು ಶ್ರಮಿಸುತ್ತಿದ್ದು, ಒಂದು ತಿಂಗಳಿನಿಂದ ಸಮೀಪದ ಚೆರಿಯಪರಂಬುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಸಿದ್ಧತೆ ನಡೆಯುತ್ತಿದೆ. ಕೊಡಗಿನ ಹಾಕಿ ಪ್ರಿಯರು ವೀಕ್ಷಿಸಲು ಎಲ್ಲ ಸೌಲಭ್ಯಗಳನ್ನು ಒಳಗೊಂಡ 32 ಲಕ್ಷ ರೂ.ವೆಚ್ಚದ ಬೃಹತ್ ಗ್ಯಾಲರಿ ನಿರ್ಮಾಣ ಮಾಡಲಾಗುತ್ತಿದೆ. 25000 ಜನರು ಒಟ್ಟಾಗಿ ಪಂದ್ಯ ವೀಕ್ಷಿಸಬಹುದಾಗಿದೆ. ಅಲ್ಲದೆ 600 ಮಂದಿ ಕುಳಿತುಕೊಳ್ಳಲು ವಿಐಪಿ ಗ್ಯಾಲರಿಯನ್ನು ನಿರ್ಮಾಣ ಮಾಡಲಾಗಿದ್ದು, ಮೈದಾನ ಹಾಗೂ ಗ್ಯಾಲರಿ ನಿರ್ಮಾಣ…
ಬೆಂಗಳೂರು ಮಾ.16 : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಫೆಡರೇಷನ್ ಆಫ್ ಕರ್ನಾಟಕ ಸ್ಟೇಟ್ ಲಾರಿ ಓನರ್ಸ್ ಅಂಡ್ ಏಜೆಂಟ್ಸ್ ಅಸೋಸಿಯೇಷನ್ ಮಾ.17 ರಿಂದ ಮುಷ್ಕರ ನಡೆಸಲು ನಿರ್ಧರಿಸಿದೆ. ಕ್ಯೂಆರ್ ಕೋಡ್ ಆಧಾರಿತ ರಿಫ್ಲೆಕ್ಟರ್ ಟೇಪುಗಳನ್ನು ಅಳವಡಿಸಿಕೊಳ್ಳಬೇಕೆನ್ನುವ ನಿಯಮ ರದ್ದುಪಡಿಸಬೇಕು. ಬೆಂಗಳೂರು- ಮೈಸೂರು ರಸ್ತೆಯಲ್ಲಿ ದ್ವಿಚಕ್ರ ಮತ್ತು ಮಂದಗತಿಯಲ್ಲಿ ಚಲಿಸುವ ಟ್ರಾಕ್ಟರ್ ಆಟೋರಿಕ್ಷಾಗಳ ಓಡಾಟ ನಿಷೇಧಿಸಬೇಕು, ನೈಸ್ ರಸ್ತೆಯಲ್ಲಿ ಟೋಲ್ ಶುಲ್ಕವನ್ನು ತೆಗೆದುಹಾಕಬೇಕು, ನಗರದ ಒಳಗೆ ಅವೈಜ್ಞಾನಿಕ ರೂಪದ ವಾಹನಗಳ ಸಂಚಾರವನ್ನು ನಿಷೇಧಿಸಿರುವ ನಿಯಮವನ್ನ ವಾಪಸ್ಸು ಪಡೆಯಬೇಕು ಎಂದು ಸಂಘಟನೆ ಒತ್ತಾಯಿಸಿದೆ. ವಾಣಿಜ್ಯ ವಾಹನಗಳ ಎಫ್.ಸಿ ನವೀಕರಣಕ್ಕೆ ಕ್ಯೂಆರ್ ಕೋಡ್ ಇರುವ ರೆಟ್ರೋ ರಿಫ್ಲೆಕ್ಟರ್ ಟೇಪ್ ಅಳವಡಿಸಿಕೊಂಡು ಬರುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕೆ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ಬೆಂಗಳೂರು ನಗರದಲ್ಲಿ ಸರಕು ಸಾಗಣೆ ವಾಹನಗಳ ಪ್ರವೇಶ ರದ್ದು ಪಡಿಸಿರುವುದನ್ನು ಅಗತ್ಯ ವಸ್ತುಗಳ ಪೂರೈಕೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ಹೂವು, ಹಣ್ಣು,…
ಮಡಿಕೇರಿ ಮಾ.16 : ಭವಿಷ್ಯದ ಪೀಳಿಗೆಗಾಗಿ ಯಾಗಗಳು ಮತ್ತು ಹೋಮಗಳ ಕುರಿತು ಸಿದ್ದಾಪುರದಲ್ಲಿ ಮಾ.26 ರಂದು ದೈವಿಕ ಪ್ರವಚನ ನಡೆಯಲಿದೆ ಎಂದು ಕಾರ್ಯಕ್ರಮದ ಸಂಚಾಲಕಿ ನಡಿಕೇರಿಯಂಡ ಸ್ವಾತಿ ಮಂದಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದಾಪುರದ ಸ್ವರ್ಣಮಾಲಾ ಸಭಾಂಗಣದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆವರೆಗೆ ಕಾರ್ಯಕ್ರಮ ನಡೆಯಲಿದ್ದು, ಕಣ್ಣೂರಿನ ರಿಷಿದೇವ್ ಫೌಂಡೇಶನ್ನ ಸ್ಥಾಪಕ ಹಾಗೂ ಮುಖ್ಯ ಪೋಷಕ ಸದ್ಗುರು ಋಷಿದೇವ್ ಶ್ರೀ ನರೇಂದ್ರನ್ ಜೀ ಅವರು ದೈವಿಕ ಪ್ರವಚ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು. ಬೆಂಗಳೂರಿನ ವಾಟರ್ ಟೆಕ್ನಾಲಜೀಸ್ ಪ್ರೈ.ಲಿ ನ ನಿರ್ದೇಶಕ ಡಾ.ಕೃಷ್ಣ ಮಾದಪ್ಪ ನೈಸರ್ಗಿಕ ಬುದ್ಧಿವಂತಿಕೆ ಮತ್ತು ಪವಿತ್ರ ವಿಜ್ಞಾನಗಳ ಛೇದಕ : ಮಾನವೀಯತೆ ಮತ್ತು ಪರಿಸರದ ಮೇಲೆ ಯಾಗಗಳು ಮತ್ತು ಹೋಮಗಳ ಪ್ರಭಾವ ಎಂಬ ವಿಷಯದ ಕುರಿತು ಮಾತನಾಡಲಿದ್ದು, ಆಧ್ಯಾತ್ಮಿಕ ಚಿಂತಕರಾದ ಶಾರದಾ ಶ್ರೀಧರ್ ಗುರುತ್ವಂ ಎಂಬ ವಿಷಯದ ಕುರಿತು ಮಾಹಿತಿ ನೀಡಲಿದ್ದಾರೆ ಎಂದರು. ಕಣ್ಣೂರಿನ ರಿಷಿದೇವ್ ಫೌಂಡೇಶನ್ನ ಪ್ರಧಾನ ಕಾರ್ಯದರ್ಶಿ ಬಾಬು…
ನಾಪೋಕ್ಲು ಮಾ.16 : ಯಾವ ಮನೆಯಲ್ಲಿ ಸ್ತ್ರೀ ವಿದ್ಯಾವಂತಳಾಗಿರುತ್ತಾಳೋ ಆ ಕುಟುಂಬ ಆರ್ಥಿಕವಾಗಿ ಸದೃಢವಾಗಿರುತ್ತದೆ ಎಂದು ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ಹಿರಿಯ ಶಿಕ್ಷಕಿ ಮುಂಡಂಡ ಕವಿತಾ ಅಯ್ಯಣ್ಣ ಹೇಳಿದರು. ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆದ ಮಹಿಳಾ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಪೋಷಕರ ಗುಣ, ನಡತೆ, ಮಾರ್ಗದರ್ಶನದಿಂದ ಮಕ್ಕಳ ವಿದ್ಯಾಭ್ಯಾಸ, ಉನ್ನತಿ, ಹಣಕಾಸು ನಿರ್ವಹಣೆ ಉತ್ತಮವಾಗಲಿದ್ದು, ಜೀವನ ಸಾರ್ಥಕತೆಯಿಂದ ಕೂಡಿರುತ್ತದೆ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಹಕಾರಿ ಮಹಿಳಾ ಸಮಾಜದ ಅಧ್ಯಕ್ಷೆ ಕುಂಚೆಟ್ಟಿರ ರೇಷ್ಮಾ ಉತ್ತಪ್ಪ, ಮಹಿಳೆಯರು ವಿವಿಧ ರಂಗಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಮಾತನಾಡಿದರು. ಕಾರ್ಯಕ್ರಮದಲ್ಲಿ ಸಮಾಜದ ವತಿಯಿಂದ ಶಿಕ್ಷಕಿ ಮುಂಡಂಡ ಕವಿತಾ ಅಯ್ಯಣ್ಣ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಮಹಿಳೆಯರಿಗಾಗಿ ವಿವಿಧ ಮನರಂಜನಾ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಾದ ಅವರಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಸಮಾಜದ ಉಪಾಧ್ಯಕ್ಷರಾದ ಬೊಪ್ಪಂಡ ಶೈಲಾ ಬೋಪಯ್ಯ, ನಿರ್ದೇಶಕರುಗಳಾದ ಕೇಟೋಳಿರ…
ಮಡಿಕೇರಿ ಮಾ.16 : ನೆಲ್ಯಹುದಿಕೇರಿಯ ಪುರಾತನ ಶ್ರೀ ಸತ್ಯನಾರಾಯಣ ದೇವಾಲಯದ ವಾರ್ಷಿಕೋತ್ಸವವು ಮಾ.19, 20 ಹಾಗೂ 21 ರಂದು ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳೊಂದಿಗೆ ನಡೆಯಲಿದೆ. ಮಾ.19 ರಂದು ಪ್ರಾತಕಾಲ 6.30 ರಿಂದ ಗಣಹೋಮ ಉತ್ಸವ ಪ್ರಾರಂಭವಾಗಲಿದೆ. ಬೆಳಿಗ್ಗೆ 11 ಗಂಟೆಗೆ ಹಾಸನ ಮಹಾಸಂಸ್ಥಾನ ಮಠ ಹಾಗೂ ಕೊಡಗು ಶಾಖಾ ಮಠದ ಗುರುಗಳಾದ ಶ್ರೀ ಶಂಭುನಾಥ ಸ್ವಾಮಿಜಿ ಅವರು ಶ್ರೀ ಸತ್ಯನಾರಾಯಣ ದೇವಾಲಯಕ್ಕೆ ಕಳಸ ಮೆರವಣಿಯೊಂದಿಗೆ ಆಗಮಿಸಲಿದ್ದು, ಶ್ರೀಗಳ ದೃಷ್ಟಿ ತೆಗೆಯುವುದು, ದೇವಾಲಯದ ಪ್ರಾಂಗಣದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರವೇಶ ಮೆಟ್ಟಿಲಿನ ಉದ್ಘಾಟನೆ, ದೇವಾಲಯ ಪ್ರದಕ್ಷಣೆ, ದೇವರ ಕ್ಷೇತ್ರದಲ್ಲಿ ಜ್ಯೋತಿ ಬೆಳಗುವ ಕಾರ್ಯಕ್ರಮ, ದೇವತ ಪ್ರಾರ್ಥನೆ ಹಾಗೂ ಶ್ರೀ ಸತ್ಯನಾರಾಯಣ ದೇವರಿಗೆ ಪಂಚಾಮೃತ ಅಭಿಷೇಕ ಜರುಗಲಿದೆ. ನಂತರ ಗುರುಗಳ ಪಾದ ಪೂಜೆ, ಗುರುಕಾಣಿಕೆ, ಗುರುಗಳಿಂದ ಪ್ರವಚನ, ಶ್ರೀ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದ್ದು, ಸಂಜೆ 6.30 ಗಂಟೆಗೆ ತಕ್ಕರ ಮನೆಯಿಂದ ಭಂಡರಾ ಇಳಿಸುವುದು, 7 ಗಂಟೆಗೆ ದೇವತಾ ಪ್ರಾರ್ಥನೆ,…
ಮಡಿಕೇರಿ ಮಾ.16 : ಅಲ್-ಅಮೀನ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ನಗರದ ಕಾವೇರಿ ಹಾಲ್ ನಲ್ಲಿ 9 ಮುಸ್ಲಿಂ ಬಡ ಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅಲ್-ಅಮೀನ್ ಸಮಿತಿಯ ಮಹಾಪೋಷಕ ಹಾಗೂ ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ ಮಾಸ್ಟರ್, ಅಲ್ -ಅಮೀನ್ ಸಮಿತಿಯು ಬಡ,ಅನಾಥರಾಗಿರುವ 445ಕ್ಕೂ ಅಧಿಕ ಹೆಣ್ಣುಮಕ್ಕಳ ವಿವಾಹ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದೆ. ಇದರಲ್ಲಿ 430 ಕ್ಕೂ ಅಧಿಕ ಸಂಖ್ಯೆಯಲ್ಲಿ ಕೊಡಗು ಜಿಲ್ಲೆಯ ಬಡಕುಟುಂಬದ ಹೆಣ್ಣು ಮಕ್ಕಳಾಗಿದ್ದಾರೆ. ಕಳೆದ ಎರಡು ದಶಕಗಳಿಂದ ಅಲ್-ಅಮೀನ್ ಸಮಿತಿಯು ಬಡ ಹೆಣ್ಣುಮಕ್ಕಳ ವಿವಾಹ ಕಾರ್ಯಕ್ರಮವನ್ನು ನಡೆಸುವುದರ ಮೂಲಕ, ಬಡ ಕುಟುಂಬಗಳ ಕಣ್ಣೀರೊರೆಸುವ ಕೆಲಸವನ್ನು ಮಾಡುತ್ತಾ ಬಂದಿದೆ. ಈ ವರ್ಷ 9 ಬಡ ಹೆಣ್ಣುಮಕ್ಕಳ ವಿವಾಹವನ್ನು ಯಶಸ್ವಿಯಾಗಿ ನಡೆಸಿ ಕೊಡಲಾಗಿದೆ ಎಂದು ಹೇಳಿದರು. ಕೊಡಗು ಜಿಲ್ಲಾ ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ಹಾಗೂ ಕುಶಾಲನಗರ ದಾರುಲ್ ಹುದಾ ಮದರಸ ಪ್ರಾಂಶುಪಾಲ ತಮ್ಲೀಖ್ ದಾರಿಮಿ ಮುಖ್ಯ ಭಾಷಣ ಮಾಡಿ, ಹೊಸ ಕನಸುಗಳೊಂದಿಗೆ ನವ ವಧು-ವರರಿಗೆ ದಾಂಪತ್ಯ…
ಮಡಿಕೇರಿ ಮಾ.16 : ಭಾರತ ಸರ್ಕಾರ, ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಹಾಗೂ ಕೊಡಗು ಜಿಲ್ಲಾ ಯುವ ಕೇಂದ್ರದ ವತಿಯಿಂದ ದೇವಪುರ ಗ್ರಾ.ಪಂ ಯ ತಿತಿಮತಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ವಿಜ್ಞಾನ ದಿನ ಆಚರಿಸಲಾಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಪ್ರಬಂಧ ಸ್ಪರ್ಧೆ ನಡೆಯಿತು. ವಿಜೇತ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ದೇವಪುರ ಗ್ರಾ.ಪಂ ಪಿಡಿಓ, ಶಾಲೆಯ ಮುಖ್ಯ ಶಿಕ್ಷಕರಾದ ಗಂಗಮ್ಮ, ಸಹ ಶಿಕ್ಷಕರಾದ ನಾಗಶ್ರೀ, ಅನಿಲ, ವೈಲೇಟ್, ಸುರೇಂದ್ರ, ಯುವ ಜನ ವ್ಯವಹಾರ ಮತ್ತು ಕ್ರೀಡಾ ಇಲಾಖೆಯ ಸಹಾಯಕ ಲೆಕ್ಕಧಿಕಾರಿ ಹಾಜರಿದ್ದರು.
ಮಡಿಕೇರಿ ಮಾ.16 : ಕೊಡಗು ಜಿಲ್ಲೆಗೆ ಮಾ.18 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಲಿದ್ದಾರೆ.
ಮಡಿಕೇರಿ ಮಾ.16 : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಕೊಡಗು ಜಿಲ್ಲಾ ಮಹಾಸಭೆ ಹಾಗೂ ಪುನಾರಚನೆ ಸಮಾವೇಶವು ಕುಶಾಲನಗರದಲ್ಲಿ ನಡೆಯಿತು. ಕುಶಾಲನಗರದ ಬಿಜಿಟಿ ಆಡಿಟೋರಿಯಮ್ ನಲ್ಲಿ ರಾಜ್ಯ ನಾಯಕ ಕೆ.ಎ.ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಅವರ ನೇತೃತ್ವದಲ್ಲಿ ನಡೆದ ಸಭೆಯನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಫೀಳ್ ಸಅದಿ ಉದ್ಘಾಟಿಸಿದರು. ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಕೊಳಕೇರಿ, ಪ್ರಧಾನ ಕಾರ್ಯದರ್ಶಿಯಾಗಿ ಆಹ್ಮದ್ ಮದನಿ ಗುಂಡಿಕೆರೆ, ಕೋಶಾಧಿಕಾರಿಯಾಗಿ ಅಬ್ದುಲ್ಲ ನೆಲ್ಲಿಹುದಿಕೇರಿ, ಉಪಧ್ಯಕ್ಷರಾಗಿ ಅಬೂಬಕ್ಕರ್ ಮದನಿ ಮಾಲ್ದಾರಿ, ಕಾರ್ಯದರ್ಶಿಗಳಾಗಿ (ದಅ್ವಾ) ಅಬ್ದುಲ್ ಅಝೀಜ್ ಸಖಾಫಿ ಕೊಡಲಿಪೇಟೆ (ಸಂಘಟನೆ) ಯಾಕೂಬ್ ಮಾಸ್ಟರ್ ಕೊಳಕೇರಿ (ಸಾಂತ್ವನ) ಅಝೀಝ್ ಮುಸ್ಲಿಯಾರ್ ಮಾಲ್ದರಿ (ಸೋಷಿಯಲ್) ಅರಾಫತ್ ನಾಪೊಕ್ಲು (ಕಲ್ಚರಲ್) ಹಸೈನಾರ್ ಮುಸ್ಲಿಯಾರ್ ಸುಂಟಿಕೊಪ್ಪ (ಇಸಾಬಾ) ಶರೀಫ್ ಹೊಸತೋಟ ಎಂಬವರನ್ನು ಆಯ್ಕೆ ಮಾಡಲಾಯಿತು. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಯ್ಯಿದ್ ಇಲ್ಯಾಸ್ ಅಲ್ ಹೈದ್ರೋಸಿ ತಙ್ಙಳ್ ಎರುಮಾಡ್, ವಿ.ಪಿ.ಮೊಯ್ದೀನ್ ಪೊನ್ನತ್ ಮೊಟ್ಟೆ, ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ, ಸಮದ್ ನಿಝಾಮಿ…






