ಮಡಿಕೇರಿ ಫೆ.7 : ಸುಂಟಿಕೊಪ್ಪ ಸಮೀಪ ಫೆ.6 ರಂದು ಸಂಜೆ ಲಾರಿ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ. ನಂಜನಗೂಡು ನಿವಾಸಿ ಜಯಸೂರ್ಯ (25) ಮೃತ ದುರ್ದೈವಿ. ಸೋಮವಾರ ಸಂಜೆ ಸುಂಟಿಕೊಪ್ಪದಿAದ ಕುಶಾಲನಗರದ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಮೈಸೂರಿನಿಂದ ಮಂಗಳೂರಿಗೆ ಅಡುಗೆ ಅನಿಲದ ಖಾಲಿ ಸಿಲಿಂಡರ್ ಗಳನ್ನು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಿಂದ ತೀವ್ರವಾಗಿ ಗಾಯಗೊಂಡ ಜಯಸೂರ್ಯ ಅವರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ನಿಧನ ಹೊಂದಿದರು. ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಲೇಖಕ: admin
ಮಡಿಕೇರಿ ಫೆ.7 : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ.18 ರಂದು ವಿವಿಧ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯದ ಧರ್ಮದರ್ಶಿ ಗೋವಿಂದ ಸ್ವಾಮಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಿಗ್ಗೆ 9 ಗಂಟೆಯಿಂದ ಕಾಶಿಲಿಂಗಕ್ಕೆ ಕ್ಷೀರಾಭಿಷೇಕ ಹಾಗೂ ಪಂಚಾಮೃತ ಅಭಿಷೇಕ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಂತರ ಭಕ್ತಾಧಿಗಳಿಂದ ಪಂಚಲಿಂಗಕ್ಕೆ ಪವಿತ್ರ ಗಂಗಾಜಲದಿoದ ಅಭಿಷೇಕ ಮತ್ತು ಶಿವನ ಮೂರ್ತಿಗೆ ಪುಷ್ಪಾರ್ಚನೆಯಾಗಲಿದೆ. ಸಂಜೆ 7 ಗಂಟೆಗೆ ಭಕ್ತಾಧಿಗಳಿಗೆ ದೀಪಲಂಕಾರ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ರಾತ್ರಿ 8 ಗಂಟೆಗೆ ತಾಯಿಯ ದರ್ಶನ ಇರುತ್ತದೆ. ಮಧ್ಯಾಹ್ನ ಹಾಗೂ ರಾತ್ರಿ ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಂಜೆ ಭಕ್ತಿ ಪ್ರಧಾನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ::: ಗಂಗಾಜಲ ಅಭಿಷೇಕ ::: ಪಂಚಲಿಂಗಕ್ಕೆ ಪವಿತ್ರ ಗಂಗಾಜಲದಿಂದ ಅಭಿಷೇಕ ಮತ್ತು ಶಿವನಮೂರ್ತಿಗೆ ಪುಷ್ಪಾರ್ಚನೆಯನ್ನು ಖುದ್ದು ತಾವೇ ಮಾಡಲಿಚ್ಛಿಸುವವರು ದೇವಾಲಯದ ಕಚೇರಿಯನ್ನು ಸಂಪರ್ಕಿಸಬಹುದು.…
ಕುಶಾಲನಗರ ಫೆ.7 : ಸೇವಾ ಮನೋಭಾವ ಜನರ ಮನಸ್ಸಿನಿಂದ ಸೃಷ್ಟಿಯಾಗಬೇಕು ಎಂದು ರೋಟರಿ 3181 ಜಿಲ್ಲಾ ರಾಜ್ಯಪಾಲ ಪ್ರಕಾಶ್ ಕಾರಂತ್ ತಿಳಿಸಿದರು. ಕುಶಾಲನಗರ ರೋಟರಿ ಸಂಸ್ಥೆಯ ಅಧಿಕೃತ ಭೇಟಿ ಕಾರ್ಯಕ್ರಮದ ನಂತರ ನಡೆದ ಸಮಾರಂಭದಲ್ಲಿ ಮಾತನಾಡಿ, ಸಂಘ ಸಂಸ್ಥೆಗಳ ಪ್ರಮುಖರುದಾನ ನೀಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಕಾಯಕವನ್ನುಜನರಿಗೆ ತಿಳಿಸುವ ಮೂಲಕ ಇನ್ನೊಬ್ಬರಿಗೆ ಪ್ರೇರಣೆಯಾಗಬೇಕು ಎಂದ ಪ್ರಕಾಶ್ಕಾರಂತ್, ಸಮಾಜದ ಕೆಳಸ್ತರದ ಜನರಿಗೆ ಸಹಾಯ ಹಸ್ತ ಚಾಚುವ ಮನಸ್ಥಿತಿ ಹೊಂದಬೇಕೆಂದುಕರೆ ನೀಡಿದರು. ಜನರೊಂದಿಗೆ ರೋಟರಿ ನಿರಂತರ ವಿಚಾರ ವಿನಿಮಯಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಉತ್ತಮ ಸಮಾಜದ ನಿರ್ಮಾಣದಗುರಿ ಹೊಂದಿದೆಎಂದರು. ಕೊಡುವ ಮನಸ್ಸಿನ ಮೂಲಕ ತೃಪ್ತಿ ಗಳಿಸಲು ಸಾಧ್ಯಎಂದು ತಿಳಿಸಿದ ಪ್ರಕಾಶ್ ಕಾರಂತ್ ರೋಟರಿ ದತ್ತಿ ನಿಧಿ ಮೂಲಕ ವಿಶ್ವದಾದ್ಯಂತ ನಿರಂತರ ಸೇವಾ ಕಾರ್ಯ ನಡೆಯುತ್ತಿದೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸೈನಿಕರಾದ ಆಮೆಮನೆ ಜರ್ನಾಧನ್, ಉದ್ಗಮ್ ಶಾಲೆಯ ಬ್ಯಾಡ್ಮಿಂಟನ್ ಕ್ರೀಡಾಪಟು ಕು.ಅನಿಶ್ ಎಸ್. ದೇವಾಡಿಗ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭ ತೊರೆನೂರು ಸರ್ಕಾರಿ ಶಾಲೆಯ…
ಗೋಣಿಕೊಪ್ಪಲು ಫೆ 7 : 16ನೇ ಯ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಗೋಣಿಕೊಪ್ಪಲಿನಲ್ಲಿ ಮಾ.4 ಮತ್ತು 5 ರಂದು ನಡೆಯಲಿದೆ. ಆ ಸಂದರ್ಭದಲ್ಲಿ ಜಿಲ್ಲೆಯ ಯುವಕವಿಗಳಿಗೆ ಕವಿಗೋಷ್ಠಿಯಲ್ಲಿ ತಮ್ಮ ಕವನ ಪ್ರಸ್ತುತಪಡಿಸಲು ಅವಕಾಶವಿರುತ್ತದೆ. ಆಸಕ್ತರು ಈ ಕೆಳಗೆ ಸೂಚಿಸಿದ ದೂರವಾಣಿ ಸಂಖ್ಯೆಗೆ ದಿನಾಂಕ 12.02.2023ರ ಒಳಗಾಗಿ ತಮ್ಮ ಕವನವನ್ನು ವಾಟ್ಸಪ್ ಮೂಲಕ ಕಳುಹಿಸಿಕೊಡುತಕ್ಕದ್ದು. ಅಥವಾ ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಕಳಿಸತಕ್ಕದ್ದು, ಸ್ವಾಗತ ಸಮಿತಿ, 16ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ, ಕಾಮತ್ ನವಮಿ ಸಭಾಂಗಣ, ಗೋಣಿಕೊಪ್ಪಲು-571213 ವಾಟ್ಸಾಪ್ ಮೂಲಕ ಕಳಿಸಬೇಕಾದ ದೂರವಾಣಿ ಸಂಖ್ಯೆ ಶೀಲಾ ಬೋಪಣ್ಣ 9945794414, ಟಿ.ಕೆ. ವಾಮನ 7619270529 ಎಂದು ಸ್ವಾಗತ ಸಮಿತಿಯ ಮಹಾ ಪ್ರದಾನ ಕಾರ್ಯದರ್ಶಿ ಕೋಳೆರ ದಯಾ ಚಂಗಪ್ಪ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ನಾಪೋಕ್ಲು ಫೆ.7 : ಇತ್ತೀಚಿನ ದಿನಗಳಲ್ಲಿ ಪರಿಸರಕ್ಕೆ ಮಾರಕವಾಗಿರುವ ಇ-ತ್ಯಾಜ್ಯದ ಪ್ರಮಾಣ ಹೆಚ್ಚುತ್ತಿದ್ದು, ಅವುಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಸಂಸ್ಥೆ ನಾಪೋಕ್ಲುವಿನಲ್ಲಿ ಇ-ತ್ಯಾಜ್ಯ ಸಂಗ್ರಹಿಸುವ ಕಾರ್ಯವನ್ನು ಕೈಗೆತ್ತಿಕೊಂಡಿದೆ ಎಂದು ಸಂಸ್ಥೆಯ ವಲಯಾಧ್ಯಕ್ಷ ಲಯನ್ ಮುಕ್ಕಾಟಿರ ಎಂ.ವಿನಯ ತಿಳಿಸಿದ್ದಾರೆ. ನಾಪೋಕ್ಲುವಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿಯೊಬ್ಬರ ಮನೆಯಲ್ಲಿ ಇ-ತ್ಯಾಜ್ಯದ ಪ್ರಮಾಣ ಹೆಚ್ಚುತ್ತಿದೆ. ಇ-ತ್ಯಾಜ್ಯ ಉಪಯೋಗಕ್ಕೆ ಬಾರದೇ ಇರುವಂತಹ ಎಲೆಕ್ಟ್ರಾನಿಕ್ ವಸ್ತುಗಳು, ಕಂಪ್ಯೂಟರ್ ತ್ಯಾಜ್ಯಗಳು, ಕೆಟ್ಟು ಹೋಗಿರುವ ಎಲೆಕ್ಟ್ರಿಕಲ್ ಉಪಕರಣಗಳು, ಮೊಬೈಲ್ಗಳು ಇತ್ಯಾದಿ ವಸ್ತುಗಳಿಂದ ಪರಿಸರ ಮಾಲಿನ್ಯದ ಜೊತೆಗೆ ಆರೋಗ್ಯಕ್ಕೂ ದುಷ್ಪರಿಣಾಮ ಉಂಟಾಗಲಿದೆ ಎಂದರು. ದೇಶದಲ್ಲಿ ಸುಮಾರು 32 ಲಕ್ಷ ಟನ್ ಇ-ತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, ಹೆಚ್ಚುತ್ತಿರುವ ಬೇಡಿಕೆ, ಪರಿಸರ ಸ್ನೇಹಿ ವಸ್ತುಗಳ ಅಲಭ್ಯತೆ, ಸೂಕ್ತ ವೈಜ್ಞಾನಿಕ ರೀತಿ ವಿಲೇವಾರಿ ಕೊರತೆಯಿಂದ ಸಮಸ್ಯೆ ಹೆಚ್ಚುತ್ತಿದೆ. ಪಾದರಸ, ಲಿಥಿಯಂ, ಬೋರಿಯಂ ನಂತಹ ರಾಸಾಯನಿಕಗಳು ನದಿ, ಸರೋವರಗಳಲ್ಲಿ ಮಾಲಿನ್ಯಕ್ಕೆ ಕಾರಣವಾಗುತ್ತಿದ್ದು, ಅವೈಜ್ಞಾನಿಕ ದಹನದಿಂದ ಗಾಳಿಗೆ ಸೇರಿ ಸೀನಾ ಕ್ಯಾಡಿಯಂ ಅನಿಲಗಳು ಮಾರಕ…
ಮಡಿಕೇರಿ ಫೆ.7 : ಕರಿಕೆ- ಭಾಗಮಂಡಲ ರಸ್ತೆಯನ್ನು ತಕ್ಷಣ ಅಭಿವೃದ್ಧಿ ಪಡಿಸಬೇಕು ಮತ್ತು ಮಳೆಗಾಲದಲ್ಲಿ ಬಿದ್ದಿರುವ ಮಣ್ಣಿನ ರಾಶಿಯನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಪ್ರಮುಖರು ಜಿಲ್ಲಾಧಿಕಾರಿ ಹಾಗೂ ಲೋಕೋಪಯೋಗಿ ಇಲಾಖೆ ಅಭಿಯಂತರರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಮುಂದಿನ 15 ದಿನಗಳೊಳಗೆ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡದಿದ್ದಲ್ಲಿ ಕರಿಕೆ ಗ್ರಾಮಸ್ಥರ ಸಹಕಾರದೊಂದಿಗೆ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಮನವಿ ಸಲ್ಲಿಸಿ ಮಾತನಾಡಿದ ಕರಿಕೆ ಗ್ರಾ.ಪಂ ಉಪಾಧ್ಯಕ್ಷ ಎನ್.ಬಾಲಚಂದ್ರ ನಾಯರ್ ಕರಿಕೆ ಗ್ರಾಮದ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಕೊಡಗಿನ ಗಡಿಭಾಗದ ರಸ್ತೆಯ ಅಭಿವೃದ್ಧಿಯನ್ನೇ ಸರ್ಕಾರ ಮರೆತಿದೆ ಎಂದು ಆರೋಪಿಸಿದರು. ಕರಿಕೆ ಗ್ರಾಮವು ಜಿಲ್ಲಾ ಕೇಂದ್ರವಾದ ಮಡಿಕೇರಿಯಿಂದ ಕೇವಲ 68 ಕಿ.ಮೀ. ದೂರದಲ್ಲಿದೆ. ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಗೆ ಹೊಂದಿಕೊಂಡಿದೆ. ಪುಣ್ಯಕ್ಷೇತ್ರಗಳಾದ ತಲಕಾವೇರಿ ಮತ್ತು ಎಮ್ಮೆಮಾಡುವಿಗೆ ತೆರಳಲು ಇದೇ ರಸ್ತೆಯನ್ನು ಅವಲಂಬಿಸಬೇಕಾಗಿದೆ. ಅಂತರ ರಾಜ್ಯ ವ್ಯಾಪಾರ, ವಹಿವಾಟು, ಸರಕು ಸಾಗಾಣಿಕೆಗೂ ಇದು…
ಕಡಂಗ ಫೆ.7 : ಕಡಂಗ ಪ್ರೀಮಿಯರ್ ಕ್ರಿಕೆಟ್ ಲೀಗ್ -2023 ಪಂದ್ಯಾವಳಿಯು ಫೆ.9 ರಿಂದ 12 ರವರೆಗೆ ಕಡಂಗ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಮಾಜಿ ಕಾರ್ಯದರ್ಶಿ ಎಂ.ಬಿ.ನೌಫಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 8 ವರ್ಷಗಳ ಹಿಂದೆ-2016ರಲ್ಲಿ ಕೆಪಿಎಲ್ ಕ್ರಿಕೆಟ್ ಕ್ರೀಡಾಕೂಟವು ಆಯೋಜಿಸಲಾಗಿದ್ದು, ಇದೀಗ ಎಂಟನೇ ವರ್ಷಕ್ಕೆ ಕ್ರೀಡಾಕೂಟಕ್ಕೆ ಫೆ.9 ರಂದು ಬೆಳಿಗ್ಗೆ 10 ಗಂಟೆಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಲಿದ್ದಾರೆ ಎಂದರು. ಕ್ರೀಡಾಕೂಟದ ಅಧ್ಯಕ್ಷ ಆಸ್ಕರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶಾಂತಕುಮಾರಿ, ನೆಲಚಂಡ ಕಿರಣ್ ಕಾರ್ಯಪ್ಪ ,ಸುಲೇಮಾನ್ ಅಬ್ದುಲ್ಲಾ ಜುನಿದ್, ಗಣು ಕುಶಾಲಪ್ಪ ಪಾಲ್ಗೊಳ್ಳಲಿದ್ದಾರೆ ಎಂದರು. ಎಂಟು ಬಲಿಷ್ಠ ತಂಡಗಳ ನಡುವೆ ಪಂದ್ಯಾವಳಿ ನಡೆಯಲಿದ್ದು, ಕಡಂಗ ಸುತ್ತಮುತ್ತಲಿನ ಗ್ರಾಮದ ಯುವ ಕ್ರೀಡಾಪಟುಗಳ ಪ್ರತಿಭೆಗಳನ್ನು ಹೊರ ತರುವುದು ಕ್ರೀಡಾಕೂಟದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು. ಕಳೆದ ಎಂಟು ವರ್ಷಗಳಿಂದ ಕ್ರೀಡಾಕೂಟದ ಆಯೋಜಕರು ಬಡ ವಿದ್ಯಾರ್ಥಿಗಳಿಗೆ ಬುಕ್ ವಿತರಣೆ, ಬಡ ರೋಗಿಗಳಿಗೆ ಸಹಾಯ ನೀಡುವುದು …
ಮಡಿಕೇರಿ ಫೆ.7 : ಶನಿವಾರಸಂತೆ ರೋಟರಿ ಕ್ಲಬ್ ವತಿಯಿಂದ ಸಮಾಜದ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳಿಗೆ ಸಮಾಜ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಜೋನ್ 6 ರ ಗವರ್ನರ್ ಮೇಜರ್ ಡೋನರ್ ಪ್ರಕಾಶ್ ಕಾರಂತ್ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ಯೂಥ್ ಮೊಮೆಂಟ್ ಸೋಮವಾರಪೇಟೆ ಕಾರ್ಯಕರ್ತೆ ಸುನಿತಾ, ಶನಿವಾರ ಸಂತೆಯ ಹಿಂದೂ ರುದ್ರ ಭೂಮಿಯ ಲಿಂಗಪ್ಪ, ಸಮಾಜ ಸೇವಕ ಗೌಡಳ್ಳಿಯ ಗಣೇಶ್ , ಸಮುದಾಯ ಆರೋಗ್ಯ ಕೇಂದ್ರ ಶನಿವಾರ ಸಂತೆಯ ನೌಕರ ಸತ್ಯನಾರಾಯಣ ಮತ್ತು ಶನಿವಾರ ಸಂತೆ ಗ್ರಾ.ಪಂ ತ್ಯಾಜ್ಯ ವಿಲೇವಾರಿ ವಾಹನದ ಚಾಲಕ ನಾಗೇಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ರೋಟರಿ ಕ್ಲಬ್ ನ ಅಧ್ಯಕ್ಷ ರೊಟೇರಿಯನ್ ಕೆ.ಪಿ. ಜಯಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಅಸಿಸ್ಟೆಂಟ್ ಗವರ್ನರ್ ಮೇಜರ್ ಡೋನರ್ ಸತೀಶ್ ಕುಮಾರ್, ವಲಯ ಸೇನಾನಿ ಹೆಚ್.ವಿ. ದಿವಾಕರ್ , ರೊಟೇರಿಯನ್ ಚಂದ್ರಕಾಂತ್ , ವಲಯ ಸೇನಾನಿ ದಿವಾಕರ್, ಚಂದ್ರಕಾಂತ್,…
ಮಡಿಕೇರಿ ಫೆ.7 : ಕೊಡಗು ಐರಿ ಸಮಾಜ ಸಹಯೋಗದಲ್ಲಿ ಕೊಡಗಿನ ಐರಿ ಜನಾಂಗದ ಮಧ್ಯೆ ಏ.22 ಮತ್ತು 23 ರಂದು 9ನೇ ವರ್ಷದ ಕೌಟುಂಬಿಕ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಆಯೋಜನಾ ಸಮಿತಿ ಸಂಚಾಲಕ ಐಮಂಡ ಗೋಪಾಲ್ ಸೋಮಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಐರಿ ಮಕ್ಕಡ ಕೂಟ ಆತಿಥ್ಯವಹಿಸಲಿದೆ ಎಂದು ತಿಳಿಸಿದರು. ಈ ಬಾರಿ ಬಹಳ ವಿಭಿನ್ನವಾಗಿ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ಕ್ರಿಕೆಟ್ ಮಾತ್ರವಲ್ಲದೆ ಮಹಿಳೆಯರಿಗೆ ಹಗ್ಗ ಜಗ್ಗಾಟ, ಜನಾಂಗದ ಹೆಣ್ಣುಮಕ್ಕಳಿಗೆ ಪ್ರದರ್ಶನ ಕ್ರಿಕೆಟ್ ಪಂದ್ಯಾಟ ಹಾಗೂ ಇತರ ಆಟೋಟ ಸ್ಪರ್ಧೆಗಳು ನಡೆಯಲಿವೆ. ಅಲ್ಲದೆ ಪುರುಷರಿಗೆ ಮತ್ತು ಮಹಿಳೆಯರಿಗೆ 100 ಮೀ. ಓಟ, ಹಿರಿಯ ಪುರುಷರು ಮತ್ತು ವಿವಾಹಿತ ಮಹಿಳೆಯರಿಗೆ 100 ಮೀಟರ್ ಓಟ, ಪುಟಾಣಿಗಳಿಗೆ ವಿವಿಧ ಬಗೆಯ ಆಟೋಟ ಹಾಗೂ ಹಲವು ಬಗೆಯ ಮನರಂಜನಾ ಸ್ಪರ್ಧೆಗಳನ್ನ ಆಯೋಜಿಸಲಾಗಿದೆ ಎಂದರು. ಸಮಗ್ರ ಚಾಂಪಿಯನ್ ತಂಡಕ್ಕೆ ಐನ್ ಮನೆ ಪ್ರಶಸ್ತಿ…
ಮಡಿಕೇರಿ ಫೆ.7 : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಕೊಡವ ಅಧಿಕೃತ ಲಿಪಿಯ ಬಗ್ಗೆ ನಿರ್ಧಾರ ಕೈಗೊಂಡಿದ್ದು, ಸರ್ಕಾರ ತಕ್ಷಣ ಇದನ್ನು ಅಂಗೀಕರಿಸಿ, ಜಿಲ್ಲೆಯ ವಾಣಿಜ್ಯ ಮಳಿಗೆ ಮತ್ತು ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ಭಾಷೆಯೊಂದಿಗೆ ಬಳಸಲು ಆದೇಶ ನೀಡಬೇಕೆಂದು ಕರ್ನಾಟಕ ಭಾಷಾ ಅಲ್ಪಸಂಖ್ಯಾತರ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರತೀಕ್ ಪೊನ್ನಣ್ಣ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾಗಮಂಡಲದ ದೇವಾಯದಲ್ಲಿ ಸಿಕ್ಕ ಶಾಸನ ಕೊಡವ ಲಿಪಿಯಲ್ಲಿರುವ ಮೊದಲ ಶಾಸನವಾಗಿದೆ. ಇದು 1370ರ ಇಸವಿಯದಾಗಿದ್ದು, ಅದರಂತೆ 1887ರಲ್ಲಿ ಡಾ.ಕೊರವಂಡ ಅಪ್ಪಯ್ಯ ಅವರು ಲಿಪಿಯನ್ನು ಬಿಡುಗಡೆ ಮಾಡಿದ್ದಾರೆ ಎಂದರು. ನಂತರ 1970ರಲ್ಲಿ ಸುಮಾರು 12 ಲಿಪಿಗಳನ್ನು ಸಂಶೋಧನೆ ಮಾಡಿ ಡಾ.ಐ.ಎಂ.ಮುತ್ತಣ್ಣ ಅವರು ಕೊಡವ ಭಾಷೆಗೆ ಸರಳವಾಗಿರುವ ಒಂದು ಲಿಪಿಯನ್ನು ತಂದಿದ್ದಾರೆ. ಅಲ್ಲದೆ ನಂತರ ದಿನಗಳಲ್ಲಿ ಐದು ಲಿಪಿಗಳು ಕೊಡವ ಭಾಷೆಗೆ ಬಂದವು. ಇದೀಗ ಅಧಿಕೃತವಾಗಿ ಯಾವ ಲಿಪಿಯನ್ನು ಬಳಸಬೇಕು ಎಂಬ ಗೊಂದಲಕ್ಕೆ ತೆರೆ ಎಳೆದಿರುವ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಕೊಡವ ಅಧಿಕೃತ ಲಿಪಿಯನ್ನು…






