ಮಡಿಕೇರಿ ಮಾ.16 : ಮುಂಬರುವ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು, ಕೊಡವರ ಬೇಡಿಕೆಗಳನ್ನೂ ತಮ್ಮ ಪ್ರಣಾಳಿಕೆಯಲ್ಲಿ ಪ್ರಕಟಿಸಬೇಕೆಂದು ಕೊಡವಾಮೆರ ಕೊಂಡಾಟ ಸಂಘಟನೆ ಆಗ್ರಹಿಸಿದೆ. ಕೊಡಗಿನ ಆದಿ ಮೂಲ ನಿವಾಸಿ ಜನಾಂಗವಾಗಿದ್ದು, ಕೊಡಗಿನಲ್ಲಿ ಸುಮಾರು ಒಂದು ಲಕ್ಷ, ಮೈಸೂರು ಜಿಲ್ಲೆಯಲ್ಲಿ ಸುಮಾರು 25000, ಬೆಂಗಳೂರಿನಲ್ಲಿ ಸುಮಾರು 60,000 ಹಾಗೂ ರಾಜ್ಯದ ಇತರೆಡೆಗಳಲ್ಲಿ ಸರಿಸುಮಾರು 40,000 ಮತದಾರರನ್ನು ಹೊಂದಿರುವ, ಕೊಡವ ಜನಾಂಗಕ್ಕೆ ಇದುವರೆಗೂ ಯಾವುದೇ ರಾಜಕೀಯ ಪಕ್ಷವೂ ಸೂಕ್ತ ಮನ್ನಣೆಯನ್ನು ನೀಡಿಲ್ಲ. ಮುಂಬರುವ ವಿಧಾನ ಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ನಮ್ಮ ಬೇಡಿಕೆಗೆ ಸ್ಪಂದಿಸುವ ಭರವಸೆ ನೀಡುವ ರಾಜಕೀಯ ಪಕ್ಷವನ್ನು ಜನಾಂಗ ಬೆಂಬಲಿಸುವ ಯೋಚನೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಕೊಡವ ಪ್ರಮುಖ ಬೇಡಿಕೆಗಳಾದ ಕೊಡವ ಭಾಷೆಯನ್ನು, ಅಧಿಕೃತ ರಾಜ್ಯಭಾಷೆಯಾಗಿ ಘೋಷಿಸುವುದು, ಕೊಡವರನ್ನ ಆದಿ ಬುಡಕಟ್ಟು ಜನಾಂಗವೆಂದು ಅಧಿಕೃತಗೊಳಿಸಲು ಕೇಂದ್ರಕ್ಕೆ ಶಿಫಾರಸು ಮಾಡುವುದು, ಕೊಡವ, ಕಾರೋಣ ಕೂಟ , ಕೈಮಡ, ಐನ್ ಮನೆಗಳನ್ನು ವಿಶೇಷ ಸ್ಮಾರಕಗಳಂತೆ ರಕ್ಷಿಸಲು ಅನುದಾನ, ತಲೆಕಾವೇರಿ, ಇಗ್ಗುತಪ್ಪ ದೇವಾಲಯಗಳನ್ನು ಮುಜರಾಯಿ ಇಲಾಖೆಯ ಕಪಿ ಮುಷ್ಟಿಯಿಂದ…
ಲೇಖಕ: admin
ಮಡಿಕೇರಿ ಮಾ.16 : ಮನೆಯಲ್ಲಿ ಕಟ್ಟಿ ಹಾಕಿದ ಸಾಕು ನಾಯಿಗಳನ್ನು ಚಿರತೆಯೊಂದು ಎಳೆದೊಯ್ದು ಭಕ್ಷಿಸುತ್ತಿರುವ ಘಟನೆ ದೇವಸ್ತೂರು ಗ್ರಾಮದಲ್ಲಿ ನಿರಂತರವಾಗಿ ನಡೆಯುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಗ್ರಾಮದ ಸಾಕು ನಾಯಿಗಳು ಇದ್ದಕ್ಕಿದ್ದಂತೆ ನಾಪತ್ತೆಯಾಗುತ್ತಿದ್ದವು. ಈ ಬಗ್ಗೆ ಗ್ರಾಮಸ್ಥರಲ್ಲೇ ಚರ್ಚೆ ನಡೆದಿತ್ತು, ಆದರೆ ಬುಧವಾರ ರಾತ್ರಿ ಸ್ಥಳೀಯ ನಿವಾಸಿ ನಂದೀರ ಹರಿ ಚಂಗಪ್ಪ ಎಂಬುವವರ ನಾಯಿಯನ್ನು ಚಿರತೆ ಎಳೆದೊಯ್ದ ಘಟನೆ ನಡೆದಿದೆ. ಕಟ್ಟಿ ಹಾಕಿದ ನಾಯಿ ಕಿರುಚಿಕೊಂಡಾಗ ಹರಿ ಚಂಗಪ್ಪ ಅವರು ನೋಡಲು ಬಂದರು. ಅವರು ಬರುವಷ್ಟರಲ್ಲೇ ಚಿರತೆ ನಾಯಿಯನ್ನು ಎಳೆದೊಯ್ದಿದೆ. ಮನೆಯ ಆವರಣದಲ್ಲಿ ಚಿರತೆಯ ಹೆಜ್ಜೆ ಗುರುತುಗಳು ಕಂಡು ಬಂದಿದ್ದು, ಸ್ಥಳೀಯರು ಭಯಗೊಂಡಿದ್ದಾರೆ. ಗ್ರಾಮಸ್ಥರು ಮಾಹಿತಿ ನೀಡಿದ ಹಿನ್ನೆಲೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ಅನಾಹುತಗಳು ಸಂಭವಿಸುವ ಮೊದಲು ಚಿರತೆಯನ್ನು ಸೆರೆ ಹಿಡಿದು ಸ್ಥಳಾಂತರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದರು.
ಮಡಿಕೇರಿ ಮಾ.16 : ಮದೆ ಗ್ರಾ.ಪಂ ವ್ಯಾಪ್ತಿಯಲ್ಲಿ ರೂ 1.15 ಕೋಟಿ ಅನುದಾನದಲ್ಲಿ ನಡೆಯುವ ವಿವಿಧ ಕಾಮಗಾರಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು. ಇದೇ ಸಂದರ್ಭ ಪೂರ್ಣಗೊಂಡ ರಸ್ತೆ ಕಾಮಗಾರಿಯನ್ನು ಉದ್ಘಾಟಿಸಿದರು.
ಮಡಿಕೇರಿ ಮಾ.16 : ರಾಜ್ಯದ ಪ್ರಥಮ ಕ್ರೀಡಾಶಾಲೆಯಾದ ಕೂಡಿಗೆ ಕ್ರೀಡಾಶಾಲೆಯಲ್ಲಿ 36 ವಷ೯ಗಳ ಕಾಲ ಶಿಕ್ಷಕಿಯಾಗಿ ಕಾಯ೯ನಿವ೯ಹಿಸಿದ್ದ ಕುಂತಿ ಬೋಪಯ್ಯ ಅವರ ಸೇವಾ ಸಾಧನೆ ಸಂಬಂಧಿತ ಸಾಕ್ಷ್ಯ ಚಿತ್ರ “ಕುಂತಿ ಟೀಚರ್” ಮಾ.19 ರಂದು ಮಡಿಕೇರಿಯಲ್ಲಿ ತೆರೆಕಾಣಲಿದೆ. ಮಡಿಕೇರಿಯ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಮಾ.19 ರಂದು ಸಂಜೆ 6 ಗಂಟೆಗೆ ಆಯೋಜಿತ ಕಾಯ೯ಕ್ರಮದಲ್ಲಿ ಸಾಕ್ಷ್ಯ ಚಿತ್ರವನ್ನು ಚಿಂತಕರಾದ ಡಾ.ಎಂ.ಜಿ.ಪಾಟ್ಕರ್, ಭಾರತೀಯ ವಿದ್ಯಾಭವನ ಕೊಡಗು ಘಟಕದ ಅಧ್ಯಕ್ಷ ಕೆ.ಎಸ್.ದೇವಯ್ಯ ಲೋಕಾಪ೯ಣೆ ಮಾಡಲಿದ್ದಾರೆ. ಕುಂತಿ ಅವರು ಕ್ರೀಡಾ ಶಾಲೆಯಲ್ಲಿ ದಾಖಲೆ ಅವಧಿಗೆ ಸೇವೆ ಸಲ್ಲಿಸಿದ ಕೀತಿ೯ ಹೊಂದಿದ್ದು, ಗ್ರಾಮೀಣ ಪ್ರದೇಶದ ಕ್ರೀಡಾಶಾಲೆಯ ಉನ್ನತಿಗೆ ಅವರು ಶ್ರಮಿಸಿದ ರೀತಿಯನ್ನು ಸಾಕ್ಷ್ಯ ಚಿತ್ರದಲ್ಲಿ ಬಿಂಬಿತವಾಗಿದೆ. ಕುಂತಿ ಅವರ ಕುರಿತು ಶಾಲೆಯ ಶಿಕ್ಷಕ ವಗ೯, ವಿದ್ಯಾಥಿ೯ಗಳು, ನಿಕಟ ವತಿ೯ಗಳ ಹೇಳಿಕೆಯನ್ನು 50 ನಿಮಿಷದ ಈ ಚಿತ್ರ ಹೊಂದಿದೆ. ಸಾಕ್ಷ್ಯ ಚಿತ್ರವನ್ನು ಪತ್ರಕತ೯ ಅನಿಲ್ ಎಚ್.ಟಿ. ನಿದೇ೯ಶನ ಮಾಡಿದ್ದು, ವಿರಾಜಪೇಟೆಯ ಸಂಕೇತ್ ಸ್ಟುಡಿಯೋದಲ್ಲಿ ಸಂಕಲನ ಮಾಡಲಾಗಿದೆ.
ಮಡಿಕೇರಿ ಮಾ.16 : ಅಮ್ಮತ್ತಿ – ಹೊಸೂರು – ಗೋಣಿಕೊಪ್ಪ ಲೋಕೋಪಯೋಗಿ ರಸ್ತೆಯ ಗದ್ದೆಮನೆ ಭಾಗದಲ್ಲಿ ಹಾನಿಗೀಡಾದ ರಸ್ತೆ ಮತ್ತು ಚರಂಡಿ ದುರಸ್ಥಿಗೆ ರೂ.45 ಲಕ್ಷ ಮಂಜೂರಾಗಿದ್ದು, ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಗ್ರಾ.ಪಂ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.
ಮಡಿಕೇರಿ ಮಾ.15 : ಎಂ.ಡಿ.ಎಂ.ಎ ಎಂಬ ಹೆಸರಿನ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಮಾಲು ಸಹಿತ ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಮಡಿಕೇರಿ ನಿವಾಸಿ ಎಂ.ಹೆಚ್.ಸಯ್ಯದ್ ಹುಸೇನ್(27) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಆತನ ಬಳಿಯಿದ್ದ 3.06 ಗ್ರಾಂ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣಗಳ ಕುರಿತು ಪೊಲೀಸ್ ಇಲಾಖೆಗೆ ಸಾರ್ವಜನಿಕರ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಸೈಬರ್ ಕ್ರೈಂ (ಸೆನ್) ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಜೆ.ಕೆ.ರಾಘವೇಂದ್ರ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು. ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಎಂ.ಡಿ.ಎಂ.ಎ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಖಚಿತ ಮಾಹಿತಿ ಈ ತಂಡಕ್ಕೆ ಲಭಿಸಿತ್ತು. ಅದರಂತೆ ದಾಳಿ ನಡೆಸಿ ಪರಿಶೀಲಿಸಿದಾಗ ಆರೋಪಿ ಬಳಿ ಮಾದಕ ವಸ್ತು ಪತ್ತೆಯಾಗಿದೆ. ಸ್ಥಳದಲ್ಲೇ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ ಮಾ.15 : ಕುಶಾಲನಗರ, ಜಿಲ್ಲೆಯ ಉದಯೋನ್ಮುಖ ಚಲನಚಿತ್ರ ನಟಿ ಹಾಗೂ ನಿರ್ದೇಶಕಿ ಸಿಂಚನ ಪೊನ್ನವ್ವ ನಿರ್ದೇಶನದ ಕೊಡವ ಭಾಷೆಯ ಚಲನಚಿತ್ರ *ಕೌಡಿಕಳಿ*ಚಿತ್ರ ಕರ್ನಾಟಕ ರಾಜ್ಯದ ಪ್ರತಿಷ್ಠಿತ 14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ-2023 ಕ್ಕೆ ಆಯ್ಕೆಯಾಗಿದೆ. ಇಂಡಿಯನ್ ವಿಭಾಗದಲ್ಲಿ ದೇಶದ ಹಲವು ಭಾಷೆಗಳ ನಡುವೆ ಇದೇ ಪ್ರಥಮ ಬಾರಿಗೆ ಕೊಡವ ಭಾಷೆಯ ಚಲನಚಿತ್ರವೊಂದು ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಇಂಡಿಯನ್ ವಿಭಾಗದಲ್ಲಿ ಒಟ್ಟು 14 ಚಿತ್ರಗಳು ಆಯ್ಕೆಯಾಗಿದ್ದು ಐದು ಕನ್ನಡ ಚಲನಚಿತ್ರಗಳು ಆಯ್ಕೆಗೊಂಡಿವೆ. ಓಂ ಸ್ಟುಡಿಯೋ ಮತ್ತು ಪಿಂಗಾರ ಕ್ರಿಯೇಷನ್ಸ್ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಆರ್ ಪ್ರೀತಮ್ ಶೆಟ್ಟಿ ಅವರ ಕಥೆ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕ ಅವಿನಾಶ್ ಶೆಟ್ಟಿ ಹಾಗೂ ಪತ್ರಕರ್ತೆ ವನಿತಾ ಚಂದ್ರಮೋಹನ್ ನಿರ್ಮಿಸಿರುವ ಕೊಡವ ಭಾಷೆಯ ಚಲನಚಿತ್ರ “ಕೌಡಿ ಕಳಿ” ಕೊಡಗು ಮೈಸೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಚಿತ್ರಿಕರಣಗೊಂಡಿತ್ತು.
ಮಡಿಕೇರಿ ಮಾ.15 : ಇತಿಹಾಸ ಪ್ರಸಿದ್ಧದ ಬೊಟ್ಟಿಯತ್ ನಾಡ್ ಈಶ್ವರ ದೇವರ ವಾರ್ಷಿಕೋತ್ಸವದ ಪ್ರಯುಕ್ತ ನೆರ್ಪು ಪ್ರಯುಕ್ತ ಇಂದು ಎತ್ತ್ ಪೋರ್ ಮತ್ತು ವಿವಿಧ ಪೂಜಾ ಕಾರ್ಯಕ್ರಮ ನಡೆಯಿತು. ಪೊನ್ನಂಪೇಟೆ ತಾಲೂಕು ಕುಂದಾ ಮುಗುಟಿಗೇರಿ ಗ್ರಾಮದಲ್ಲಿರುವ ಆರು ಗ್ರಾಮಗಳಿಗೆ ಸೇರಿದ ನಾಡ್ ದೇವಸ್ಥಾನ ಅಥವಾ ಈಶ್ವರ ದೇವಸ್ಥಾನಕ್ಕೆ ಶತಶತಮಾನಗಳ ಇತಿಹಾಸವಿದ್ದು, ಇದರ ವಾರ್ಷಿಕ ಉತ್ಸವ ಈಗಾಗಲೇ ಮಾ. 8 ರಂದು ಸಂಜೆ ಕೊಡಿಮರ ನಿಲ್ಲಿಸುವುದರ ಮೂಲಕ ಆರಂಭಗೊಂಡಿತ್ತು. ಸಾವಿರಾರು ವರ್ಷಗಳ ಇತಿಹಾಸವಿರುವ ಬೊಟ್ಟಿಯತ್ ನಾಡ್ ಈಶ್ವರ ದೇವಸ್ಥಾನದಲ್ಲಿರುವ ಶಿವಲಿಂಗವು ಉದ್ಭವ ಲಿಂಗವಾಗಿದ್ದು ಆರು ಗ್ರಾಮಗಳು ಈ ದೇವಸ್ಥಾನಕ್ಕೆ ಸೇರುತ್ತದೆ. ಕುಂದಾ, ಮುಗುಟಿಗೇರಿ, ಈಚೂರು, ಹುದೂರು, ಹಳ್ಳಿಗಟ್ಟು, ಅರ್ವತೋಕ್ಲು ಈ ಆರು ಗ್ರಾಮಗಳಿಗೆ ಸೇರಿರುವ ನಾಡ್ ದೇವಸ್ಥಾನದಲ್ಲಿ ಮಾ. 8 ರಿಂದ ಪ್ರತಿನಿತ್ಯ ಮುಂಜಾನೆ ಮತ್ತು ಸಂಜೆ ಉತ್ಸವ ಮೂರ್ತಿ ಹೊರಗೆ ಬರುವ ಮೂಲಕ ವಿಶೇಷ ಪೂಜೆ ಸೇರಿದಂತೆ ಮಧ್ಯಾಹ್ನ ಮತ್ತು ಸಂಜೆ ಭಕ್ತರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮಾ. 13 ಹಾಗೂ…
ವಿರಾಜಪೇಟೆ ಮಾ.15 : ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಮುಂದಿನ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಪ್ರಭಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಎರಡು ರಾಷ್ಟ್ರೀಯ ಪಕ್ಷಗಳಿಗೆ ಪೈಪೋಟಿ ನೀಡಲಿದ್ದೇವೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎ.ಮನ್ಸೂರ್ ಆಲಿ ಹೇಳಿದರು. ಜೆಡಿಎಸ್ ಪಕ್ಷದ ವತಿಯಿಂದ ವಿರಾಜಪೇಟೆ ಪುರಭವನದಲ್ಲಿ ಹಮ್ಮಿಕೊಂಡಿದ್ದ “ಮುಂದಿನ ಚುನಾವಣಾ ಪೂರ್ವಭಾವಿ ಸಭೆ’ಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮತದಾರರು ಜೆಡಿಎಸ್ ಪ್ರಾದೇಶಿಕ ಪಕ್ಷದ ಕಡೆ ಒಲವು ತೋರಿದ್ದಾರೆ. ಕಾರ್ಯಕರ್ತರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಚುನಾವಣಾ ಸಂದರ್ಭ ಪಕ್ಷದ ಏಳಿಗೆಗೆ ಕೆಲಸಮಾಡುವ ಮೂಲಕ 2023ಕ್ಕೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಶ್ರಮ ವಹಿಸಬೇಕು ಎಂದರು. ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಕೆ.ಎಂ.ಗಣೇಶ್ ಮಾತನಾಡಿ, ಮಡಿಕೇರಿ ಕ್ಷೇತ್ರದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಗೆಲುವು ಖಚಿತ, ವಿರಾಜಪೇಟೆ ಕ್ಷೇತದಲ್ಲ್ರಿ ತ್ರಿಕೋನ ಸ್ಪರ್ದೇ ನಡೆಯಲಿದೆ. ಈ ಹಿಂದೆ ಕುಮಾರ ಸ್ವಾಮಿ ಮುಖ್ಯ ಮಂತ್ರಿಯಾಗಿದ್ದ ಸಂದರ್ಭ ಕೊಡಗಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದ್ದರು. ಹಾಗೂ ಅವರ ಜನಪರ…
ಮಡಿಕೇರಿ ಮಾ.15 : ಮಾ.18 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಡಗಿಗೆ ಆಗಮಿಸಿ ಸುಮಾರು 4 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಿದ್ದಾರೆ ಎಂದು ಸಚಿವ ಬಿ.ಸಿ.ನಾಗೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಮಾರು 30 ಕ್ಕೂ ಹೆಚ್ಚು ಉದ್ಘಾಟನಾ ಕಾರ್ಯಕ್ರಮ ಮತ್ತು 15 ಕ್ಕೂ ಹೆಚ್ಚು ಶಂಕುಸ್ಥಾಪನಾ ಕಾರ್ಯಕ್ರಮವನ್ನು ಇದೇ 18 ರಂದು ಮುಖ್ಯಮಂತ್ರಿ ಅವರು ನೆರವೇರಿಸಲಿದ್ದಾರೆ. ವಿರಾಜಪೇಟೆ ಮತ್ತು ಸೋಮವಾರಪೇಟೆಯಲ್ಲಿ 73 ಕೋಟಿ ರೂ. ವೆಚ್ಚದ ಕುಡಿಯುವ ನೀರು ಕಾಮಗಾರಿ ಯೋಜನೆಗೆ ಚಾಲನೆ ದೊರೆಯಲಿದೆ ಎಂದರು. ಫಲಾನುಭವಿಗಳ ಸಮ್ಮೇಳನ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು ಫಲಾನುಭವಿಗಳ ಜೊತೆ ಸಂವಾದ ನಡೆಸುವುದರ ಜೊತೆಗೆ ಸವಲತ್ತು-ಸೌಲಭ್ಯಗಳನ್ನು ವಿತರಿಸಲಿದ್ದಾರೆ ಎಂದರು. ಸರ್ಕಾರದ ಒಂದಲ್ಲ ಒಂದು ಕಾರ್ಯಕ್ರಮಗಳು ಬಡ ಜನರಿಗೆ ತಲುಪಿಸುವಲ್ಲಿ ಶ್ರಮಿಸಲಾಗಿದೆ. ಆ ನಿಟ್ಟಿನಲ್ಲಿ ಫಲಾನುಭವಿಗಳ ಪ್ರತಿಕ್ರಿಯೆಯನ್ನು ಪಡೆಯಲಾಗುತ್ತದೆ ಎಂದರು.






