ಶನಿವಾರಸಂತೆ ಫೆ.7 : ಕೊಡ್ಲಿಪೇಟೆ ಶ್ರೀ ಗುರುಪೀಠ ಕಲ್ಲಳ್ಳಿ ಮಠದ ಶ್ರೀ ಗುರು ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮವು ಫೆ.9 ಮತ್ತು 10 ರಂದು ನಡೆಯಲಿದೆ ಎಂದು ಕೊಡ್ಲಿಪೇಟೆ ಶ್ರೀ ಗುರುಪೀಠ ಕಲ್ಲಳ್ಳಿ ಮಠ ಹಾಗೂ ಕೊಡ್ಲಿಪೇಟೆ ವೀರಶೈವ ಮಂಡಳಿ ಅಧ್ಯಕ್ಷ ಎಸ್.ಎಸ್.ವರಪ್ರಸಾದ್ ತಿಳಿಸಿದರು. ಶನಿವಾರ ಸಂತೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡ್ಲಿಪೇಟೆ ಶ್ರೀ ಗುರುಪೀಠ ಕಲ್ಲಳ್ಳಿ ಮಠಾಧೀಶರಾದ ಶ್ರೀ ರುದ್ರಮುನಿ ಮಹಾಸ್ವಾಮಿಗಳಿಗೆ ಶ್ರೀ ಗುರು ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮಹೋತ್ಸವದ ಅಂಗವಾಗಿ ಫೆ. 9ರಂದು ಶ್ರೀ ಕ್ಷೇತ್ರ ಕಲ್ಲಳ್ಳಿ ಮಠದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮ ನಡೆಯಲಿದೆ. ಫೆ.10ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಕ್ಷೇತ್ರ ಕಲ್ಲಳ್ಳಿ ಮಠದ ಆವರಣದಲ್ಲಿರುವ ಶ್ರೀ ವೀರಭದ್ರ ಸ್ವಾಮೀ ವೇದಿಕೆಯಲ್ಲಿ ಶ್ರೀ ಗುರು ಪಟ್ಟಾಧಿಕಾರ ಮಹೋತ್ಸವ ಮತ್ತು ಧರ್ಮಸಭಾ ಕಾರ್ಯಕ್ರಮ ನಡೆಯಲಿದೆ ಎಂದರು. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಶ್ರೀ ಕಾಡು ಸಿದ್ದೇಶ್ವರ ಮಠದ ಶ್ರೀ ಕರಿ ವೃಷಭದೇಸಿ ಕೇಂದ್ರ ಶಿವ ಯೋಗಿಶ್ವರ…
ಲೇಖಕ: admin
ಮಡಿಕೇರಿ ಫೆ.7 : ಬೆಟ್ಟಗೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಒಣ, ಹಸಿ, ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಘಟಕವನ್ನು ನಿರ್ಜನ ಪ್ರದೇಶದಲ್ಲಿ ನಿರ್ಮಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಪ್ರಸ್ತುತ ಘಟಕ ಸ್ಥಾಪನೆಗೆ ಬೆಟ್ಟಗೇರಿ ಗ್ರಾಮದ ಹೃದಯ ಭಾಗದಲ್ಲಿರುವ ಹಳೆಯ ಪಶು ಚಿಕಿತ್ಸಾ ಕೇಂದ್ರದ ಸಮೀಪದ ಜಾಗ ಗುರುತಿಸಲಾಗಿದೆ ಎಂದು ತಿಳಿದು ಬಂದಿದೆ. ಇದರ ಮುಂಭಾಗದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ, ಹಿಂಭಾಗದಲ್ಲಿ ನೂತನ ಪಶು ಚಿಕಿತ್ಸಾ ಕೇಂದ್ರ, ಬಲಬದಿಯಲ್ಲಿ ಊರಿನ ಭಗವತಿ ದೇವಸ್ಥಾನಕ್ಕೆ ಹೋಗುವ ರಸ್ತೆ, ನೂರಾರು ಮನೆ ಹಾಗೂ ಊರಿನ ಅಂಬಲವಿದೆ. ಎಡಭಾಗದಲ್ಲಿ ರಾಷ್ಟ್ರೀಯ ಬ್ಯಾಂಕ್ ಮತ್ತು ಖಾಸಗಿ ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಶಾಲೆಗೆ ತೆರಳುವ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಊರಿನ ಧಾರ್ಮಿಕ ಕೇಂದ್ರವು ಉದ್ದೇಶಿತ ಜಾಗದ ಪಕ್ಕದಲ್ಲೇ ಇದೆ, ಪ್ರತಿನಿತ್ಯ ಸಾವಿರಾರು ಮಂದಿ ಸಂಚರಿಸುತ್ತಾರೆ. ಇಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಗೊಂಡರೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚು ಎಂದು ಗ್ರಾಮಸ್ಥರು ಜಿಲ್ಲಾಧಿಕಾರಿಗಳು…
ಸೋಮವಾರಪೇಟೆ ಜ.7 : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಜಲಜೀವನ್ ಮಿಷನ್ ಯೋಜನೆಯಡಿ ಶಾಂತಳ್ಳಿ ಗ್ರಾ.ಪಂ ನ ಅನೇಕ ಗ್ರಾಮಗಳು ಸೇರಿದಂತೆ ಗೌಡಳ್ಳಿ ಗ್ರಾ.ಪಂ ನ ಶುಂಠಿ ಗ್ರಾಮದಲ್ಲಿ ಅಸಮರ್ಪಕ ಕಾಮಗಾರಿ ನಡೆಸಲಾಗಿದ್ದು, ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಶಾಂತಳ್ಳಿ ಗ್ರಾ.ಪಂ ವ್ಯಾಪ್ತಿಯ ಹರಗ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಪೈಪ್ಲೈನ್ ಅಳವಡಿಸಿ 2 ವರ್ಷ ಕಳೆದರೂ ಈವರೆಗೆ ನೀರಿನ ವ್ಯವಸ್ಥೆಯಾಗಿಲ್ಲ. ಬೇಸಿಗೆಯಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಎದುರಿಸುವಂತಾಗಿದ್ದು, ಲಕ್ಷಾಂತರ ರೂಪಾಯಿ ವೆಚ್ಚದ ಕಾಮಗಾರಿಯಲ್ಲಿ ಅವ್ಯವಹಾರವಾಗಿದೆ ಎಂದು ಶರಣ್ ಗೌಡ, ಡಾಲಿ ಪ್ರಕಾಶ್ ಸೇರಿದಂತೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ತಲ್ತರೆಶೆಟ್ಟಳ್ಳಿಯ ಉದ್ರಳ್ಳಿಯಲ್ಲೂ ಇದೇ ಪರಿಸ್ಥಿತಿ ಬಂದಿದೆ. ಕಳೆದ 2 ವರ್ಷಗಳಿಂದ ಮನವಿ ನೀಡುತ್ತ ಬಂದಿದ್ದರೂ ಈವರೆಗೆ ಕ್ರಮವಹಿಸಿಲ್ಲ. ಅಳವಡಿಸಿರುವ ಪೈಪ್ಲೈನ್ ಕಾಮಗಾರಿಯೂ ಕಳಪೆಯಾಗಿದೆ. ಟ್ಯಾಂಕ್ಗೆ ನೀರು ಹಕುತ್ತಿಲ್ಲ ಎಂದು ಬಗ್ಗನ ಅನಿಲ್ಕುಮಾರ್, ಡಾಲಿ ಪ್ರಕಾಶ್, ಜೀವನ್, ಸುಖಾಂತ್,…
ಸೋಮವಾರಪೇಟೆ ಫೆ.7 : ನೇರುಗಳಲೆ ಗ್ರಾ.ಪಂ ವ್ಯಾಪ್ತಿಯ ತಣ್ಣೀರುಹಳ್ಳ ಗ್ರಾಮದಲ್ಲಿ ಅರಣ್ಯ ಹಕ್ಕು ಸಮಿತಿ ಸಭೆ ನಡೆಯಿತು. ಗ್ರಾಮದ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಶಾಸಕ ಅಪ್ಪಚ್ಚುರಂಜನ್ ಅವರು, ಫಲಾನುಭವಿಗಳು ತಮ್ಮ ಜಾಗಕ್ಕೆ ಸಂಬಂಧಿಸಿದಂತೆ ಈವರೆಗೆ ಪಡೆದುಕೊಂಡಿರುವ ದಾಖಲೆಗಳು, ಆಧಾರ್ಕಾರ್ಡ್, ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ನಿಗದಿತ ಅವಧಿಯೊಳಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸಲ್ಲಿಸಬೇಕೆಂದು ಸೂಚಿಸಿದರು. ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭೇಟಿ ನೀಡುವ ಸಂದರ್ಭ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲಾ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮಕೈಗೊಳ್ಳಲಾಗಿದೆ. ಅಕ್ರಮ ಸಕ್ರಮ ಸಮಿತಿ, 94 ಸಿ ಮತ್ತು 94 ಸಿ.ಸಿ., ಅರಣ್ಯ ಹಕ್ಕು ಸಮಿತಿ ಯೋಜನೆಯಡಿ ಕ್ಷೇತ್ರ ವ್ಯಾಪ್ತಿಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ಮಾತನಾಡಿ, ಫಲಾನುಭವಿಗಳು ಸಮಿತಿಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ನಂತರ ಅರಣ್ಯ ಇಲಾಖೆ ಮತ್ತು ಸರ್ವೆ ಇಲಾಖೆಯಿಂದ ಜಂಟಿ ಸರ್ವೆ ನಡೆಸಲಾಗುವುದು.…
ಗೋಣಿಕೊಪ್ಪಲು ಫೆ.7 : ಪ್ರಸ್ತುತ ಐಪಿಎಲ್ ಮಾದರಿಯ ಗೋಣಿಕೊಪ್ಪಲು ಪ್ರೀಮಿಯರ್ ಲೀಗ್ ಕ್ರೀಡಾಕೂಟಕ್ಕೆ ನೂತನ ಅಧ್ಯಕ್ಷರಾಗಿ ಸ್ನೇಕ್ ಸಾಜಿ ಅವರನ್ನು ಆಯ್ಕೆ ಮಾಡಲಾಗಿದೆ. ಜಿಪಿಎಲ್ ಸಂಚಾಲಕರಾಗಿ ಸಿಂಗಿ ಸತೀಶ್ ಹಾಗೂ ಉಪಾಧ್ಯಕ್ಷರಾಗಿ ಅಣ್ಣಪ್ಪ, ಪ್ರದಾನ ಕಾರ್ಯದರ್ಶಿಯಾಗಿ ಶಮ್ಮು, ಖಜಾಂಚಿಯಾಗಿ ಸ್ವಾಮಿ, ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಂಜು, ಸಹ ಕಾರ್ಯದರ್ಶಿಯಾಗಿ ಅಫ್ಸಲ್ (ಅಪ್ಪಿ) ನಿರ್ದೇಶಕರುಗಳಾಗಿ ಬಶೀರ್, ಶಾನಿ, ಫಾಝಿಲ್, ರಂಶಾದ್ , ಚಿದು, ಅಕ್ಷಯ್, ಮುನೀರ್, ದೀಪು, ಹಮೀದ್, ಉಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಪಿಎಲ್ ಸ್ಥಾಪಕ ಅಧ್ಯಕ್ಷ ಶರಫುದ್ದೀನ್ ಹಾಗೂ ನಿಕಟಪೂರ್ವ ಅಧ್ಯಕ್ಷ ಸಿಂಗಿ ಸತೀಶ್ ತಿಳಿಸಿದ್ದಾರೆ ಮಾರ್ಚ್ ತಿಂಗಳಲ್ಲಿ ಗೋಣಿಕೊಪ್ಪಲು ಸರ್ಕಾರಿ ಶಾಲಾ ಮೈದಾನದಲ್ಲಿ 4 ದಿನಗಳ ಕಾಲ ಕ್ರೀಡಾಕೂಟ ನಡೆಯಲಿದ್ದು, ದೇಶದ ಐಪಿಎಲ್ ಮಾದರಿಯಲ್ಲಿ 10 ತಂಡಗಳು ಭಾಗವಹಿಸುವುದಾಗಿ ತಿಳಿಸಿದ್ದಾರೆ.
ಮಡಿಕೇರಿ ಫೆ.7 : ಸಂಜೀವಿನಿ ಸ್ವ ಸಹಾಯ ಸಂಘಗಳ ಮಹಿಳಾ ಉದ್ಯಮಿಗಳು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಾಡುವ ಸಲುವಾಗಿ ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ನಗರದ ಗಾಂಧಿ ಮೈದಾನದಲ್ಲಿ ಏರ್ಪಡಿಸಲಾದ ‘ಜಿಲ್ಲಾ ಮಟ್ಟದ ವ್ಯಾಪಾರ ಮೇಳಕ್ಕೆ ಚಾಲನೆ ದೊರೆಯಿತು. ನಂತರ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಸೇರಿದಂತೆ ಅಧಿಕಾರಿಗಳು ಮೇಳದಲ್ಲಿ ಭಾಗಿಯಾದ ಮಳಿಗೆಗಳಿಗೆ ಭೇಟಿ ನೀಡಿ, ಮಹಿಳೆಯರು ತಯಾರಿಸಿದ ವಸ್ತುಗಳನ್ನು ಪರಿಶೀಲಿಸಿ ಶುಭ ಕೋರಿದರು. ಮೇಳದಲ್ಲಿ ಗ್ರಾಮೀಣ ಭಾಗದ ಆಹಾರೋತ್ಪನ್ನಗಳು, ಕರಕುಶಲ ವಸ್ತುಗಳು ಸೇರಿದಂತೆ ಮತ್ತಿತರ ಸಾಮಾಗ್ರಿಗಳು ಗಮನ ಸೆಳೆಯತ್ತಿದೆ.
ಮಡಿಕೇರಿ ಫೆ.7 : ಗೋಣಿಕೊಪ್ಪ ಪಂಚಾಯಿತಿ ವ್ಯಾಪ್ತಿಯ ಕಾಂಕ್ರೀಟಿಕರಣಗೊಂಡ ಸಂತ ಮೈಕಲ್ ಶಾಲೆ ರಸ್ತೆ ಮತ್ತು ಹಳೆ ಪೋಸ್ಟ್ ಆಫೀಸ್ ರಸ್ತೆಗೆ ನೂತನವಾಗಿ ಸ್ವಾಮಿ ವಿವೇಕಾನಂದ ರಸ್ತೆ ಎಂದು ನಾಮಕರಣಗೊಳಿಸಿ, ಶಾಸಕ ಕೆ.ಜಿ.ಬೋಪಯ್ಯ ನೂತನ ರಸ್ತೆಯನ್ನು ಉದ್ಘಾಟಿಸಿದರು. ಈ ಸಂದರ್ಭ ಗ್ರಾ. ಪಂಚಾಯಿತಿ ಸದಸ್ಯರು ಮತ್ತು ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.
ಮಡಿಕೇರಿ ಫೆ.7 : ವಿರಾಜಪೇಟೆ ತಾಲ್ಲೂಕು, ಹಾಲುಗುಂದ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ಅನುದಾನದಲ್ಲಿ ಕೈಗೊಳ್ಳುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಗ್ರಾ.ಪಂ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.
ಮಡಿಕೇರಿ ಫೆ.7 : ಮುಂದಿನ ದಿನಗಳಲ್ಲಿ ಕೊಡಗಿನಲ್ಲೂ ನಾಟಕೋತ್ಸವ ಆಯೋಜಿಸುವ ಚಿಂತನೆ ಇದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಹೇಳಿದರು. ಕೊಡಗು ಪ್ರೆಸ್ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ‘ಪರಶುರಾಮ’ ನಾಟಕ ಪ್ರದರ್ಶನ ಸಂದರ್ಭದಲ್ಲಿ ಮಾತನಾಡಿದರು. ಮೈಸೂರು ಮತ್ತಿತರ ಭಾಗಗಳಿಗೆ ಹೋಲಿಸಿದರೆ ಕೊಡಗಿನಲ್ಲಿ ನಾಟಕ ನೋಡುವವರ ಸಂಖ್ಯೆ ಕಡಿಮೆ ಇದೆ. ಇತರ ಜಿಲ್ಲೆಗಳಲ್ಲಿ ನವರಾತ್ರಿ ಸಂದರ್ಭ 9 ದಿನಗಳೂ ನಾಟಕ ಪ್ರದರ್ಶನ ಏರ್ಪಡಿಸಲಾಗುತ್ತದೆ. ಸಾಧ್ಯವಾದರೆ ಮಡಿಕೇರಿಯಲ್ಲೂ ಮುಂದಿನ ದಿನಗಳಲ್ಲಿ ಇಂತಹ ಪ್ರಯೋಗ ಮಾಡುವ ಪ್ರಯತ್ನ ನಡೆಸಲಾಗುವುದು ಎಂದರು. ಪರಶುರಾಮ ನಾಟಕದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಪ್ರದರ್ಶನದ ಬಗ್ಗೆ ಮೆಚ್ಚುಗೆಯ ಮಾತನಾಡಿದರು. ಪುರಾಣದ ಬಗ್ಗೆ ಮತ್ತಷ್ಟು ತಿಳಿದುಕೊಳ್ಳಲು ಇಂತಹ ನಾಟಕಗಳು ಸಹಾಯ ಮಾಡುತ್ತದೆ ಎಂದು ಹೇಳಿದರು. ಕೊಡಗು ಪ್ರೆಸ್ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ಕುಟ್ಟಪ್ಪ ಜಿಲ್ಲಾಧಿಕಾರಿ ಚಿಂತನೆಗೆ ಪೂರಕವಾಗಿ ಮಾತನಾಡಿ, ಸ್ಥಳೀಯ, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ನಾಟಕೋತ್ಸವವನ್ನು ಎಲ್ಲರೂ ಸೇರಿ…
ಭಾರತೀಯ ಅಂಚೆ ಇಲಾಖೆಯಲ್ಲಿ 40,889 ಪೊಸ್ಟ್ ಮ್ಯಾನ್ (ಗ್ರಾಮೀಣ ಡಾಕ್ ಸೇವಕ್) ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಸಲಾಗಿದೆ. ಹುದ್ದೆಗಳ ಸಂಖ್ಯೆ: 40,889 (ದೇಶದಲ್ಲಿ) 3036 (ಕರ್ನಾಟಕದಲ್ಲಿ) ಹುದ್ದೆಗಳು ಮತ್ತು ವೇತನ ಬ್ರ್ಯಾಂಚ್ ಪೋಸ್ಟ್ಮಾಸ್ಟರ್: 12,000-29,380 ರೂ. ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್: 10,000-24,470 ರೂ. ಪೋಸ್ಟ್ಮ್ಯಾನ್: 10,000-24,470 ರೂ. ವಿದ್ಯಾರ್ಹತೆ: ಕನಿಷ್ಠ ಎಸ್ಎಸ್ಎಲ್ಸಿ / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು. ಆಸಕ್ತರು ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆ ದಿನಾಂಕಕ್ಕೆ ಸರಿಯಾಗಿ ಅಭ್ಯರ್ಥಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ 40 ವರ್ಷ ಮೀರಿರಬಾರದು. ಎಸ್ಸಿ/ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ. ಆಯ್ಕೆ ಪ್ರಕ್ರಿಯೆ: ಆನ್ಲೈನ್ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಶೀಲನೆ ಮಾಡಿ, ನಂತರ ಮೆರಿಟ್ ಪಟ್ಟಿ…






