ಲೇಖಕ: admin

ಮಡಿಕೇರಿ ಜ.11 : ಮಡಿಕೇರಿ ನಗರದ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ನೀಡಲಾಗುವ ಬಿಸಿಯೂಟದ ಅಕ್ಕಿಯಲ್ಲಿ ಪ್ಲಾಸ್ಟಿಕ್ ತುಂಡುಗಳು ಮಿಶ್ರಿತವಾಗಿದೆ ಎಂದು ಆರೋಪಿಸಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಿದ್ದಾರೆ. ಪ್ಲಾಸ್ಟಿಕ್ ಮಿಶ್ರಿತ ಅಕ್ಕಿಯಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಆತಂಕ ವ್ಯಕ್ತಪಡಿಸಿರುವ ಅಧ್ಯಕ್ಷ ಆರ್.ಪಿ.ಚಂದ್ರಶೇಖರ್ ಅಕ್ಕಿಯನ್ನು ಸರಬರಾಜು ಮಾಡಿರುವ ಗುತ್ತಿಗೆದಾರನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಮತ್ತು ಶಾಲೆಗೆ ಗುಣಮಟ್ಟದ ಅಕ್ಕಿಯನ್ನು ಪೂರೈಸಬೇಕು ಎಂದು ಒತ್ತಾಯಿಸಿದ್ದಾರೆ. ತಪ್ಪಿದಲ್ಲಿ ವಿದ್ಯಾರ್ಥಿಗಳ ಪೋಷಕರ ಸಹಕಾರದೊಂದಿಗೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬಿಸಿಯೂಟಕ್ಕಾಗಿ ದಾಸ್ತಾನಿರಿಸಿರುವ ಅಕ್ಕಿಯಲ್ಲಿ ಮಣಿಯ ರೂಪದ ಪ್ಲಾಸ್ಟಿಕ್ ತುಂಡುಗಳಿರುವುದು ಕಂಡು ಬಂದಿದೆ. ಅಕ್ಕಿಯನ್ನು ತೊಳೆಯುವಾಗ ನೀರಿನಲ್ಲಿ ತೇಲುತ್ತಿತ್ತು ಎಂದು ಚಂದ್ರಶೇಖರ್ ಅಪರ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರ ಗಮನ ಸೆಳೆದರು. ಎಸ್ ಡಿ ಎಂ ಸಿ ಸದಸ್ಯ ದಿನೇಶ್ ಈ ಸಂದರ್ಭ ಹಾಜರಿದ್ದರು.

Read More

ಮಡಿಕೇರಿ ಜ.11 : ಮಡಿಕೇರಿ ತಾಲ್ಲೂಕಿನ ಕುರುಳಿ ಗ್ರಾಮದಲ್ಲಿ ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ದೊರೆತ ಮಾಹಿತಿಯಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಕಾರ್ಯಚರಣೆ ನಡೆಸಿದರು. ರೂ. 61,600/- ಗಳನ್ನು ದಂಡ ವಿಧಿಸಲಾಗಿದ್ದು, ಕೃತ್ಯಕ್ಕೆ ಬಳಸಲಾಗಿದ್ದ ಕಬ್ಬಿಣದ ತೆಪ್ಪ ನಾಪೋಕ್ಲು ಪೊಲೀಸ್ ಠಾಣೆಯ ವಶದಲ್ಲಿದೆ.

Read More

ಮಡಿಕೇರಿ ಜ.11 : ಮಡಿಕೇರಿ ತಾಲ್ಲೂಕು ಮದೆನಾಡು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದ ಕಬಡ್ಡಿ ಪಂದ್ಯಾಟದಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ಇದೀಗ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಬ್ರದರ್ಸ್ ದೇವರಕೊಲ್ಲಿ ತಂಡಕ್ಕೆ ಪಂಚಾಯಿತಿ ವತಿಯಿಂದ ಸಮವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು. ಪಂಚಾಯತ್ ಅಭಿವೃದ್ದಿ ಅಧಿಕಾರಿಯಾದ ನಂಜುಂಡ ಸ್ವಾಮಿ, ಪಂಚಾಯತ್ ಅಧ್ಯಕ್ಷರಾದ ರಾಮ್ಮಯ್ಯ, ಪಂಚಾಯತ್ ಸದಸ್ಯ ಸೈದಲವಿ, ಹಿರಿಯ ಕ್ರೀಡಾಪಟು, ಸಾಮಾಜಿಕ ಕಾರ್ಯಕರ್ತ ಮುಸ್ತಫ, ತಂಡದ ತರಬೇತುದಾರ ಸಮೀರ್  ಹಾಗೂ ತಂಡದ ಸದಸ್ಯರುಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಜ.11: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಪಕ್ಷದ ಪೂರ್ವಭಾವಿ ಸಭೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೊಡಗಿನ ಎರಡು ಕ್ಷೇತ್ರಗಳಲ್ಲಿ SDPI ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ರೂಪರೇಷ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಪಕ್ಷದ ಜಿಲ್ಲಾಧ್ಯಕ್ಷ ಕಲೀಲ್ ಮಡಿಕೇರಿ, ಪ್ರಧಾನ ಕಾರ್ಯದರ್ಶಿ ಬಶೀರ್ ಅಹಮದ್, ರಾಜ್ಯ ಸಮಿತಿ ಸದಸ್ಯ ನವಾಸ್ ಉಳ್ಳಾಲ್, ಪ್ರಮುಖರಾದ ಮನ್ಸೂರ್, ಅಮೀನ್ ಮೊಹಿಸಿನ್, ಅಬ್ದುಲ್ಲಾ ಅಡ್ಕಾರ್, ಮುಸ್ತಫಾ ಮಡಿಕೇರಿ, ಮಡಿಕೇರಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಉಸ್ಮಾನ್ ಸುಂಟಿಕೊಪ್ಪ  ಸಭೆಯಲ್ಲಿ ಇದ್ದರು.

Read More

ಮಡಿಕೇರಿ ಜ.11 : ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಗ್ರಾಹಕರಾಗಿದ್ದು, ‘ಗ್ರಾಹಕರೇ ದೊರೆಗಳು’ ಎಂಬುದನ್ನು ಯಾರೂ ಸಹ ಮರೆಯಬಾರದು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಗೌರಮ್ಮಣ್ಣಿ  ಅವರು ಪ್ರತಿಪಾದಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವೇದಿಕೆ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ, ಕುಶಾಲನಗರ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ವೈದ್ಯಕೀಯ ಕಾಲೇಜು ಸಭಾಂಗಣದಲ್ಲಿ ಬುಧವಾರ ನಡೆದ ‘ರಾಷ್ಟ್ರೀಯ ಗ್ರಾಹಕರ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಮೂಲಕ ವಸ್ತು/ಪದಾರ್ಥಗಳನ್ನು ಕೊಳ್ಳುವುದು ಹೆಚ್ಚಾಗಿದೆ. ಗ್ರಾಹಕರಿಗೆ ಮೋಸ, ವಂಚನೆ ಉಂಟಾದಲ್ಲಿ ಗ್ರಾಹಕರ ಹಕ್ಕುಗಳ ಪರಿಹಾರ ವೇದಿಕೆಗೆ ದೂರು ಸಲ್ಲಿಸಬೇಕು ಎಂದು ಅವರು ತಿಳಿಸಿದರು. ಜಾಹೀರಾತು ನೋಡಿ ಪದಾರ್ಥ/ವಸ್ತುಗಳನ್ನು ಖರೀದಿ ಮಾಡಬಾರದು. ಅದರ ಗುಣಮಟ್ಟ ಪರಿಶೀಲಿಸಿ ಕೊಳ್ಳುವಂತಾಗಬೇಕು. ಜಾಹೀರಾತುಗೆ ಯಾರೂ ಸಹ ಮರಳು ಆಗಬಾರದು ಎಂದು ಅವರು ಹೇಳಿದರು. ಯಾವ ಸ್ಥಳದಲ್ಲಿಯೇ ಪದಾರ್ಥ/ವಸ್ತುಗಳನ್ನು ಕೊಂಡಿದ್ದರೂ…

Read More

ಮಡಿಕೇರಿ ಜ.11 : ಮಡಿಕೇರಿ ನಗರಕ್ಕೆ ಕುಡಿಯುವ ನೀರು ಒದಗಿಸುವ ಕೂಟುಹೊಳೆಯಲ್ಲಿ ನೀರಿನ ಕೊರತೆ ಉಂಟಾಗಿದ್ದು, ನೀರು ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದೆ. ಇದಕ್ಕೆ ನಗರಸಭೆಯ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯವೇ ಕಾರಣವೆಂದು ನಗರ ಕಾಂಗ್ರೆಸ್ ಅಧ್ಯಕ್ಷ ಹಾಗೂ ನಗರಸಭಾ ಸದಸ್ಯ ಬಿ.ವೈ.ರಾಜೇಶ್ ಆರೋಪಿಸಿದ್ದಾರೆ. ಕೂಟುಹೊಳೆಯ ಸ್ಥಿತಿಗತಿಯನ್ನು ಪರಿಶೀಲಿಸಿದ ನಂತರ ಮಾತನಾಡಿದ ಅವರು ಜನವರಿ ತಿಂಗಳಾಯಿತ್ತೆಂದರೆ ಕೂಟುಹೊಳೆಯಲ್ಲಿ ನೀರಿನ ಕೊರತೆ ಎದುರಾಗುವುದು ಸಾಮಾನ್ಯ. ಇದರ ಅರಿವಿದ್ದರೂ ಕುಂಡಾಮೇಸ್ತ್ರಿ ಯೋಜನೆಯ ಪ್ರದೇಶದಿಂದ ನೀರು ಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳದೆ ಇರುವುದು ನಗರಸಭೆಯ ಜಡ್ಡುಗಟ್ಟಿದ ಆಡಳಿತ ವ್ಯವಸ್ಥೆಗೆ ಸಾಕ್ಷಿಯಾಗಿದೆ ಎಂದು ಟೀಕಿಸಿದರು. ಜನವರಿಯ ನಂತರ ನೀರಿನ ಅಭಾವ ನಗರವನ್ನು ಕಾಡುತ್ತದೆ ಎನ್ನುವ ಕಾರಣಕ್ಕಾಗಿ ಕೋಟ್ಯಾಂತರ ಹಣವನ್ನು ವಿನಿಯೋಗಿಸಿ ಕುಂಡಾಮೇಸ್ತ್ರಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಆದರೆ ಇದರ ಲಾಭವನ್ನು ಜನರಿಗೆ ತಲುಪಿಸುವ ಕಾರ್ಯದಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಪ್ರಸ್ತುತ ವರ್ಷದ ಆರಂಭದಿಂದಲೇ ಕೂಟುಹೊಳೆಯ ನೀರು ಕ್ಷೀಣಿಸುತ್ತಾ ಬಂದಿದೆ. ಇದೇ ಕಾರಣಕ್ಕೆ ನಗರದ ಬಹುತೇಕ ಭಾಗಕ್ಕೆ ಬೇಡಿಕೆಗೆ ಅನುಗುಣವಾಗಿ ನೀರು…

Read More

ಮಡಿಕೇರಿ ಜ.11 : ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು  ಜ.28 ರಂದು ಬೆಟ್ಟಗೇರಿ ಉದಯ ಪ್ರೌಢಶಾಲೆಯಲ್ಲಿ ನಡೆಯಲಿದೆ. ಸಮ್ಮೇಳನದಲ್ಲಿ ಯುವಕವಿಗಳಿಂದ ಕವಿ ಗೋಷ್ಠಿ, ಗಾಯಕರುಗಳಿಂದ ಗುಂಪು ಗಾಯನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಬಹುದಾಗಿದೆ. ಕವನವು 12 ರಿಂದ 20 ಸಾಲುಗಳ ಮಿತಿಯಲ್ಲಿ ಇರತಕ್ಕದ್ದು. ಮಡಿಕೇರಿ ತಾಲೂಕಿನ ಯುವಕವಿಗಳಿಗೆ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಕವನ ವಾಚನ ಮಾಡುವವರು ತಮ್ಮ ಹೆಸರು, ವಿಳಾಸ, ವಾಟ್ಸಾಪ್ ಸಂಖ್ಯೆ ಫೋಟೋ ದೊಂದಿಗೆ ದಿನಾಂಕ 16.01.2023ರ ಒಳಗಾಗಿ ತಾವು ರಚಿಸಿದ ಕವನವನ್ನು ಶ್ರೀ ಅಂಬೇಕಲ್ ನವೀನ್, ಕಾರ್ಯಾಧ್ಯಕ್ಷರು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಚೇರಿ, ಸುದರ್ಶನ ವೃತ್ತದ ಬಳಿ, ಮಡಿಕೇರಿ. ಇಲ್ಲಿಗೆ ಕಳುಹಿಸತಕ್ಕದ್ದು ಅಥವಾ ವಾಟ್ಸಪ್ ಮೂಲಕ ದೂರವಾಣಿ ಸಂಖ್ಯೆ 9448005642 ಯನ್ನು ಸಂಪರ್ಕಿಸಿ ಕವನ ಮತ್ತು ಅರ್ಜಿಯನ್ನು ಸಲ್ಲಿಸತಕ್ಕದ್ದು. ಗುಂಪು ಗೀತ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಲಿಚ್ಛಿಸುವ ತಂಡಗಳು…

Read More

ಮಡಿಕೇರಿ ಜ.11 : ಕೊಡಗಿನ ಮಣ್ಣು ಪೋಷಕಾಂಶಗಳಿಂದ ಕೂಡಿದ ‘ಚಿನ್ನ’ವೇ ಆಗಿದ್ದು, ಈ ಮಣ್ಣಿನ ಆರೋಗ್ಯ ಸಂರಕ್ಷಣೆಯ ಮೂಲಕ ಜಿಲ್ಲೆಯ ಬೆಳೆಗಾರರು ಉತ್ತಮ ಕೃಷಿ ನಡೆಸಲು ಸಾಧ್ಯವಿದೆ ಎಂದು ಚೆಟ್ಟಳ್ಳಿ ಕಾಫಿ ಸಂಶೋಧನಾ ಉಪ ಕೇಂದ್ರದ ಉಪ ನಿರ್ದೇಶಕ ಕೆ.ಚಂದ್ರಪ್ಪ ಅಭಿಪ್ರಾಯಪಟ್ಟರು. ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲ್ಲೂಕು ಘಟಕದ ವತಿಯಿಂದ ಚೆಟ್ಟಳ್ಳಿಯ ಕಾಫಿ ಸಂಶೋಧನಾ ಕೇಂದ್ರದ ಪ್ರಮುಖರೊಂದಿಗಿನ ‘ಸಂವಾದ’ದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ಜಿಲ್ಲೆಯ ಮಣ್ಣು ಉತ್ತಮವಾಗಿದ್ದರು, ನಿರಂತರವಾದ ಮಳೆ ಮೊದಲಾದ ಕಾರಣಗಳಿಂದ ಮಣ್ಣಿನಲ್ಲಿರುವ ಪೋಷಕಾಂಶಗಳು ಅಸಮತೋಲಿತವಾಗಿರುತ್ತದೆ. ಈ ಹಿನ್ನೆಲೆ ಬೆಳೆಗಾರರು ತಮ್ಮ ತೋಟದ ಮಣ್ಣಿನ ಪರೀಕ್ಷೆಯ ಮೂಲಕ, ಕೇಂದ್ರ ನೀಡುವ ಸಲಹೆ ಸೂಚನೆಗಳನ್ನು ಆಧರಿಸಿ ಅಗತ್ಯ ಪೋಷಕಾಂಶಗಳನ್ನು ಮಣ್ಣಿಗೆ ಒದಗಿಸುವುದು ಅತ್ಯವಶ್ಯವಾಗಿದೆ ಎಂದರು. ಯಾವುದೇ ಪರೀಕ್ಷೆಗಳಿಲ್ಲದೆ ಅನಗತ್ಯವಾಗಿ ಮಣ್ಣಿಗೆ ಹೆಚ್ಚಿನ ರಸಗೊಬ್ಬರಗಳನ್ನು ನೀಡುವ ಮೂಲಕ ಮಣ್ಣು ಸತ್ತ್ವವನ್ನು ಕಳೆದುಕೊಳ್ಳದಂತೆ ಎಚ್ಚರ ವಹಿಸಬೇಕೆಂದು ಸಲಹೆ ನೀಡಿದರು. ಬೆಳೆಗಾರರು ತಮ್ಮ ತೋಟದ ಮಣ್ಣನ್ನು ಕನಿಷ್ಟ 3 ವರ್ಷಗಳಿಗೊಮ್ಮೆ ಪರೀಕ್ಷಿಸಿಕೊಂಡು, ಮಣ್ಣಿನ ಆಮ್ಲೀಯತೆಯ…

Read More

ನಾಪೋಕ್ಲು ಜ.11 : ವಿದ್ಯಾ ಸಂಸ್ಥೆಗಳು ವಿದ್ಯಾರ್ಥಿಗಳ ಮತ್ತು ಪೋಷಕರ ನಿರೀಕ್ಷೆಯನ್ನು ಹುಸಿಗೊಳಿಸದೆ ಮಕ್ಕಳ ಉತ್ತಮ ಭವಿಷ್ಯವನ್ನು ರೂಪುಗೊಳಿಸಲು ಕಾರ್ಯ ಪ್ರವೃತ್ತವಾಗಿದೆ ಎಂದು ಸ್ಥಳೀಯ ಅಂಕುರ್ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ರತ್ನ ಚರ್ಮನ ಹೇಳಿದರು. ಅಂಕುರ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಪಾಠದ ಜೊತೆ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಲಾಗುತ್ತಿದ್ದು, ಇದರಿಂದ ಮಕ್ಕಳ ಉಜ್ವಲ ಭವಿಷ್ಯಕ್ಕೆ ಸಹಕಾರಿಯಾಗಲಿದೆ ಎಂದ ಅವರು ಸಂಸ್ಥೆಯ ಉದ್ದೇಶ ಹಾಗೂ ಸಂಸ್ಥೆ ನಡೆದು ಬಂದ ದಾರಿಯ ಬಗ್ಗೆ ಮೇಲುಕು ಹಾಕಿದರು. ಸಂಸ್ಥೆಯ ಅಧ್ಯಕ್ಷ ಕೇಟೋಳಿರ ರಾಜಾ ಚರ್ಮಣ ಜ್ಯೋತಿ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಟ್ರಸ್ಟ್ ಕಾಮೆಂಡ ಕಂಬಯ್ಯ, ನಿವೃತ್ತ ಪ್ರಾಂಶುಪಾಲ ಪ್ರೊ. ಕಲ್ಯಾಟ0ಡ ಪೂಣಚ್ಚ, ಪೆಮ್ಮುಡಿಯಂಡ ಅಪ್ಪಣ್ಣ, ಮುಕ್ಕಾಟಿರ ವಿನಯ್, ಕು0ಡಿಯೋಳಂಡ ಗಣೇಶ್ ಮುತ್ತಪ್ಪ, ಬಡುವಂಡ್ರ ಅರುಣ್ ಅಪ್ಪಚ್ಚು, ಮುಂಡಂಡ ಜಯಕುಮಾರ್, ಕೇಟೋಳಿರ ಗಾಯನ್ ಗೌರಮ್ಮ ಸೇರಿದಂತೆ ಪೋಷಕರು. ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕಿ…

Read More

ಮಡಿಕೇರಿ ಜ.11 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ, ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ಜನವರಿ, 12 ರಂದು ಬೆಳಗ್ಗೆ 10.30 ಗಂಟೆಗೆ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಶಾಸಕರು ಹಾಗೂ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರಾದ ಕೆ.ಜಿ.ಬೋಪಯ್ಯ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಸಿ.ದಯಾನಂದ, ಶಾಸಕರಾದ ಸುಜಾ ಕುಶಾಲಪ್ಪ, ವಿರಾಜಪೇಟೆ ಪುರಸಭೆ ಅಧ್ಯಕ್ಷರಾದ ಸುಶ್ಮಿತಾ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ,…

Read More