ವಿರಾಜಪೇಟೆ ಫೆ.7 : ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಕೊಡಗಿನ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಕಲ್ಲಕೆರೆ ಮಾದೇವಿ ಚಲನಚಿತ್ರ ತಂಡದಿಂದ ಸನ್ಮಾನಿಸಲಾಯಿತು. ಪಿ.ಅಂಡ್ ಜಿ ಕ್ರೀಯೆಷನ್, ಕಲ್ಲಕೇರೆ ಮಾದೇವಿ ಪೌರಾಣಿಕ ಕೊಡವ ಪ್ರಾದೇಶಿಕ ಭಾಷೆಯ ಚಲನಚಿತ್ರ ತಂಡವು ವಿರಾಜಪೇಟೆ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಣಿ ಮಾಚಯ್ಯ ಅವರನ್ನು ಚಲನಚಿತ್ರ ತಂಡ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಚಲನಚಿತ್ರದ ವಿತರಕರು ಹಾಗೂ ಭಾ.ಜ.ಪ ಪ್ರಮುಖರಾದ ಪಟ್ಟಡ ರೀನಾ ಪ್ರಕಾಶ್ ಮಾತನಾಡಿ, ಕೊಡಗು ವಿಶಿಷ್ಟ ಸಂಸ್ಕೃತಿಗೆ ಹೆಸರುವಾಸಿಯಾಗಿದೆ, ಕಲೆ ಸಾಹಿತ್ಯ ಮತ್ತು ಸಂಸ್ಕೃತಿಗೆ ತನ್ನದೇಯಾದ ರೀತಿಯ ಕೊಡುಗೆಯನ್ನು ನೀಡಿದೆ. ದೇಶ ಸೇವೆ, ಕ್ರೀಡೆ ಮತ್ತು ಕಲೆಗೆ ರಾಜ್ಯ ಮತ್ತು ದೇಶಕ್ಕೆ ಅಪೂರ್ವವಾದ ವ್ಯಕ್ತಿಗಳನ್ನು ಕೊಡುಗೆಯಾಗಿ ನೀಡಿದೆ. ಈ ನಿಟ್ಟಿನಲ್ಲಿ ಕೊಡಗಿನ ಮಗಳಾಗಿ ಕೊಡವರ ವಿಶಿಷ್ಟ ಸಂಸ್ಕೃತಿಯ ಭಾಗವಾದ ಉಮ್ಮತ್ತಾಟ್ ನೃತ್ಯ ಕಲೆಯನ್ನು ಜೀವಂತವಾಗಿರಿಸಿ ಸಾವಿರಾರು ಮಂದಿ ವಿದ್ಯಾರ್ಥಿಗಳಿಗೆ ಕಲಿಕೆಯನ್ನು ನೀಡಿ, ವಿಶ್ವಮಟ್ಟದಲ್ಲಿ ಪರಿಚಯಿಸಿದ ಕೀರ್ತಿ ರಾಣಿ…
ಲೇಖಕ: admin
ವಿರಾಜಪೇಟೆ ಫೆ.7 : ಕೊಡಗಿನ ವ್ಯಕ್ತಿಗಳು ಮದುವೆಗೆಂದು ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿ ಮೃತಪಟ್ಟ ಏಳು ಮಂದಿಯ ಕುಟುಂಬದ ಸದಸ್ಯರಿಗೆ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಪರಿಹಾರದ ಚೆಕ್ ವಿತರಿಸಿದರು. ಶಾಸಕರ ಭವನದಲ್ಲಿ ಕುಟುಂಬದ ಸದಸ್ಯರಿಗೆ ಪರಿಹಾರ ಚೆಕ್ ವಿತರಿಸಿ ಮಾತನಾಡಿದ ಕೆ.ಜಿ ಬೋಪಯ್ಯ ಮೃತರ ಕುಟುಂಬ ವರ್ಗಗಳು ಬಡ ಕೂಲಿ ಕಾರ್ಮಿಕರಾಗಿದ್ದು, ಆರ್ಥಿಕವಾಗಿ ಹಿಂದುಳಿದಿರುವ ಹಿನ್ನಲೆಯಲ್ಲಿ ಅರ್ಜಿದಾರರ ಕೋರಿಕೆಯ ಮೇರೆಗೆ ಮುಖ್ಯ ಮಂತ್ರಿಗಳ ಪರಿಹಾರ ನಿಧಿಯಿಂದ ಮೇಕೂರು-ಹೊಸ್ಕೇರಿ ಗ್ರಾಮದ ನಿವಾಸಿಗಳಾದ ಹೆಚ್.ಎಸ್.ರಾಜೇಶ್, ಎಂ.ಆರ್.ಅನಿಲ್, ದೀಲಿಪ್ (ಪಿಲೀಫ್) ಮತ್ತು ಜಿ.ಎ.ಬಾಬು ಅವರುಗಳ ಕುಟುಂಬಕ್ಕೆ ತಲ ಎರಡು ಲಕ್ಷ ರೂಗಳಂತೆ ಪರಿಹಾರ ವಿತರಿಸಿರುವುದಾಗಿ ತಿಳಿಸಿದರು. ವಿತರಣೆಗೊಂಡ ಪರಿಹಾರದ ಹಣವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಮುಂದುವರೆಯಬೇಕು ಎಂದು ಸದಸ್ಯರಿಗೆ ಹೇಳಿದರು. ಈ ಸಂದರ್ಭ ಶಾಸಕರ ಆಪ್ತ ಕಾರ್ಯದರ್ಶಿ ಮಲ್ಲಂಡ ಮಧು ದೇವಯ್ಯ, ತಾಲೂಕು ಕಛೇರಿಯ ಪ್ರಧಾನ ಕಾರ್ಯದರ್ಶಿ ಸಹಯಕರಾದ ಸಿ.ಎಂ.ನಿಶಾನ್, ಪುತ್ತಂ ಪ್ರದೀಪ್ ಪಾಲಿಬೆಟ್ಟ, ಮತ್ತು ಕುಟುಂಬದ ಸದಸ್ಯರು…
ವಿರಾಜಪೇಟೆ ಫೆ.7 : ಕೊಡಗು ಕ್ರೀಡೆಗಳ ತವರೂರು. ಕೆಲವು ವರ್ಷಗಳಿಂದ ಕ್ರೀಡೆಗಳ ಆಯೋಜನೆಯು ನಾನಾ ಕಾರಣಗಳಿಂದ ಕಣ್ಮರೆಯಾಗಿತ್ತು. ಆದರೆ ಪ್ರಸ್ತುತ ಸಾಲೀನಲ್ಲಿ ಕ್ರೀಡೆಗಳ ಗತವೈಭವ ಮರುಕಳಿಸಿದೆ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ತಾಲೂಕು ಕೆದಮುಳ್ಳೂರು ಗ್ರಾಮ ಪಂಚಾಯಿತಿ, ತೋಮರ ಗ್ರಾಮದ ದಿ. ಲೇಜೆಂಡ್ಸ್ ತೋರ ಕ್ರೀಡಾ ಸಂಸ್ಥೆಯ ವತಿಯಿಂದ ತೋಮರ ಕ್ರೀಡಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಸಂಸ್ಥೆಯ 3ನೇ ವರ್ಷದ ಹೊನಲು ಬೆಳಕಿನ ಟಿ.ಕೆ.ಪಿ.ಎಲ್ ಪ್ರೋ ಕಬ್ಬಡಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಸಾಮಥ್ರ್ಯವು ಹೆಚ್ಚಾಗುತ್ತದೆ. ಯುವಕರಲ್ಲಿ ಸಂಬಂಧಗಳು ಬೆಸುಗೈದು ಒಗ್ಗಟ್ಟು ಎಂಬುದು ಗಟ್ಟಿಯಾಗುತ್ತದೆ. ಗ್ರಾಮೀಣಾ ಭಾಗ ಕ್ರೀಡಾ ಪಟುಗಳು ದೇಶಿಯ ಮತ್ತು ಅಂತರ್ ರಾಷ್ಟ್ರೀಯ ಮಟ್ಟಲ್ಲಿ ಸಾಧನೆಗೈದು ಗ್ರಾಮದ ಹೆಸರು ರಾರಾಜಿಸುವಂತೆ ಮಾಡಿದ್ದಾರೆ. ಕಬ್ಬಡಿ ಗ್ರಾಮೀಣಾ ಭಾಗದ ಕ್ರೀಡೆಯಾಗಿದ್ದು ಇಂದು ದೇಶವ್ಯಾಪಿ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪಸರಿಸಿ ಉತ್ತಮ ಪ್ರೋತ್ಸಹ ದೊರಕುತ್ತಿದೆ. ಕ್ರೀಡೆಗಳಲ್ಲಿ ಭಾಗವಹಿಸುವ ಕ್ರೀಡಾ ಪಟುಗಳು ಮೈದಾನದಲ್ಲಿ ತಮ್ಮ ಕ್ರೀಡಾ…
ಮಡಿಕೇರಿ ಫೆ.6 : ಕನಿಷ್ಠ ಕೂಲಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಫೆ.8ರಂದು ನಡೆಯುವ ಪ್ರತಿಭಟನೆಯಲ್ಲಿ ಕೊಡಗಿನ 200ಕ್ಕೂ ಹೆಚ್ಚು ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ (ಎಐಟಿಯುಸಿ) ಜಿಲ್ಲಾಧ್ಯಕ್ಷ ಎಚ್.ಎಂ.ಸೋಮಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಮಿಕರ ಕನಿಷ್ಟ ಕೂಲಿಯನ್ನು ಕನಿಷ್ಟ ಐದು ವರ್ಷಗಳಿಗೊಮ್ಮೆ ಪರಿಷ್ಕರಿಸಬೇಕೆಂಬ ನಿಯಮವಿದೆ. ಆದರೆ ಕೂಲಿ ಪರಿಷ್ಕರಣೆಯ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆಸದಿರುವುದು ವಿಪರ್ಯಸ ಎಂದು ಬೇಸರ ವ್ಯಕ್ತಪಡಿಸಿದರು. ಸರ್ಕಾರ ನಿಗಧಿ ಮಾಡಿರುವುದಕ್ಕಿಂತ ಕಡಿಮೆ ಕೂಲಿ ನೀಡಲಾಗುತ್ತಿದೆ, ಮೊದಲು ಇದ್ದ ಕನಿಷ್ಟ ಕೂಲಿಯನ್ನು ರಾಜ್ಯ ಸರ್ಕಾರ ಶೇ.10 ರಷ್ಟು ಕಡಿಮೆ ಮಾಡಿ ದರವನ್ನು ಪ್ರಕಟಿಸಿದೆ. ಕೂಲಿಯನ್ನು ನಿರ್ಧರಿಸಲು ಇರುವ ಎಲ್ಲಾ ನಿಯಮವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಕನಿಷ್ಟ ಕೂಲಿಯ ಪರಿಷ್ಕರಣೆಯೇ ಬೇರೆ ಹಾಗೂ ಕನಿಷ್ಟ ಕೂಲಿ ನಿರ್ಧರಿಸುವುದೇ ಬೇರೆ ಎಂಬ ವಾದವನ್ನು ಮಂಡಿಸುತ್ತ ತನ್ನನ್ನು ತಾನು ಸಮರ್ಥಿಸಿಕೊಳ್ಳುವ ಪ್ರಯತ್ನದಲ್ಲಿ ತೊಡಗಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರ ಕನಿಷ್ಟ ಕೂಲಿ ನಿರ್ಧರಿಸುವಾಗ ಕಾನೂನಾತ್ಮಕ ಮಾರ್ಗಸೂಚಿಗಳನ್ನೇ ಅನುಸರಿಸಬೇಕು, ಕನಿಷ್ಟ…
ನಾಪೋಕ್ಲು ಫೆ.6 : ನಾಪೋಕ್ಲು ವಿರಾಜಪೇಟೆ ಮುಖ್ಯರಸ್ತೆಯ ಕೊಳಕೇರಿ ಯಿಂದ ಕೋಕೇರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ದುಸ್ಥಿತಿಯಿಂದ ಕೂಡಿದ್ದು ನಡೆದಾಡಲು ಸಾಧ್ಯವಿಲ್ಲದಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿ ಸೋಮವಾರ ಪ್ರತಿಭಟನೆ ನಡೆಸಿದರು. ರಸ್ತೆಯನ್ನುಯನ್ನು ತಕ್ಷಣ ದುರಸ್ತಿಪಡಿಸುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು ತಪ್ಪಿದಲ್ಲಿ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು. ಕೋಕೇರಿ- ಕೊಳಕೇರಿ ಸಂಪರ್ಕ ರಸ್ತೆಯಲ್ಲಿ ಹಲವು ವರ್ಷಗಳಿಂದ ರಸ್ತೆ ಕಾಮಗಾರಿ ನಡೆದಿಲ್ಲ, ರಸ್ತೆ ಡಾಂಬರೀಕರಣ ಮಾಡಿಲ್ಲ. ವಾಹನ ಸಂಚಾರ ಮತ್ತು ನಡೆದಾಡಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಜನಪ್ರತಿನಿಧಿಗಳು ಭರವಸೆ ಮಾತ್ರ ನೀಡುತ್ತಿದ್ದಾರೆ ಎಂದು ಗ್ರಾಮಸ್ಥ ಹರೀಶ್ ಆರೋಪಿಸಿದರು. ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಅಬ್ದುಲ್ ರಜಾಕ್ ಮಾತನಾಡಿ ಕೊಳಕೇರಿ-ಕೋಕೇರಿ ಸಂಪರ್ಕ ರಸ್ತೆಯ ದುರಸ್ತಿಗಾಗಿ ನಾಲ್ಕೈದು ಬಾರಿ ಪ್ರತಿಭಟನೆ ನಡೆಸಲಾಗಿದೆ. ಗ್ರಾಮಸ್ಥರೇ ಹೊಂಡ-ಗುಂಡಿ ಗಳನ್ನು ಮುಚ್ಚಿ ರಸ್ತೆ ದುರಸ್ತಿ ಪಡಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳದಿದ್ದಲ್ಲಿ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಹೇಳಿದರು. ಕೆ.ವೈ.ಅಶ್ರಫ್, ಎಂ.ಎ.ಮೊಯ್ದು, ಎಂ.ಎಂ.ಮಹಮ್ಮದ್, ಎಂ.ಎಂ.ಇಸ್ಮಾಯಿಲ್, ಟಿ.ಪಿ.ಬಶೀರ್, ಅಸಿನಾರ್, ಎಂ.ಎ.ಅಲಿ, ಎಂ.ಎ.ಫಲ್ಹಾಲು,…
ಮಡಿಕೇರಿ ಫೆ.6 : ಮಹಿಳಾ ಫಲಾನುಭವಿಯೊಬ್ಬರಿಂದ ಲಂಚದ ರೂಪದಲ್ಲಿ ರೂ.10 ಸಾವಿರ ಸ್ವೀಕರಿಸುತ್ತಿದ್ದ ಆರೋಪದಡಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ, ಓರ್ವ ನಿರ್ದೇಶಕಿ ಹಾಗೂ ವಾಹನ ಚಾಲಕನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಗಮದ ವ್ಯವಸ್ಥಾಪಕ ಚಂದ್ರಶೇಖರ್, ಕಚೇರಿ ನಿರ್ದೇಶಕಿ ಚೆಲುವಾಂಬ ಹಾಗೂ ವಾಹನ ಚಾಲಕ ತಿರುಮಲೇಶ್ ಎಂಬುವವರನ್ನು ವಿಚಾರಣೆಗೊಳಪಡಿಸಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸಬ್ಸಿಡಿ ಆಧಾರಿತ ಸಾಲ ಯೋಜನೆಯಡಿ ಮಹಿಳೆಯೋರ್ವರು ಕೋಳಿ ಅಂಗಡಿಗಾಗಿ 2021ರ ಅಕ್ಟೋಬರ್ನಲ್ಲಿ 3 ಲಕ್ಷ ರೂ. ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಮಹಿಳೆಗೆ ಮೊದಲ ಹಂತದ ಹಣ ಪಾವತಿಯಾಗಿತ್ತು. 2ನೇ ಹಂತದ 1 ಲಕ್ಷ ರೂ. ಹಣ ಬಿಡುಗಡೆಗೆ ಆರೋಪಿಗಳು 10 ಸಾವಿರ ರೂ.ಗಳ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ಫಲಾನುಭವಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಸೋಮವಾರ ದೂರುದಾರರಿಂದ ಹಣ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಾಳಿ ಮಾಡಿ ಮೂವರನ್ನು ಹಣ ಸಹಿತ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಡಿಜಿಪಿ ಪ್ರಶಾಂತ್…
ಮಡಿಕೇರಿ ಫೆ.6 : ಹೊದವಾಡ ಓಸೀಸ್ ಅರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ 19ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿಯು ಮಾ.4 ರಿಂದ 12ರ ವರೆಗೆ ನಡೆಯಲಿದೆ ಎಂದು ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಎಸ್.ಆದಾಂ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಪಂದ್ಯಾವಳಿಯ ಧ್ವಜವನ್ನು ಆಯೋಜಕರಿಗೆ ಹಸ್ತಾಂತರಿಸಿ ಮಾತನಾಡಿದ ಅವರು, ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಪಂದ್ಯಾವಳಿ ನಡೆಯಲಿದ್ದು, ರಾಜ್ಯ ಹಾಗೂ ಜಿಲ್ಲಾ ಮಟ್ಟದ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಈಗಾಗಲೇ 80 ತಂಡಗಳು ನೊಂದಾಯಿಸಿಕೊಂಡಿದ್ದು, 150ಕ್ಕೂ ಹೆಚ್ಚು ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು. ಕೊಡಗು ಮುಸ್ಲಿಂ ಕಪ್ನ ಸ್ಥಪಕಾಧ್ಯಕ್ಷ ಕೆ.ಎ.ಅಬ್ದುಲ್ ರಶೀದ್ ಮಾತನಾಡಿ, ಈಗಾಗಲೇ ಪಂದ್ಯಾವಳಿಯ ಲೋಗೋ ಅನಾವರಣಗೊಳಿಸಲಾಗಿದ್ದು, ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದರು. ಆಸಕ್ತ ತಂಡಗಳು ರೂ.1000 ಮುಂಗಡ ಹಣ ಪಾವತಿಸಿ ತಂಡದ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು. ಇಲ್ಲಿಯವರೆಗೆ ನಡೆದ ಪಂದ್ಯಾವಳಿಗೆ ಸರ್ಕಾರದಿಂದ ಯಾವುದೇ ಅನುದಾನ ದೊರೆಯದೆ ಇರುವುದು…
ಮಡಿಕೇರಿ ಫೆ.6 : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯಲ್ಲಿ ಪಲ್ಟಿಯಾದ ಘಟನೆ ನಾಪೋಕ್ಲು ಸಮೀಪ ಪಾಲೂರು ಗ್ರಾಮದಲ್ಲಿ ಸೋಮವಾರ ನಡೆದಿದೆ. ನಾಪೋಕ್ಲುವಿನಿಂದ ಬೆಟ್ಟಗೇರಿಗೆ ಹಿಂತಿರುಗುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಮಡಿಕೇರಿ ಫೆ.6 : ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರ ನೇತೃತ್ವದಲ್ಲಿ ಬಿ ಎಸ್ ಪಿ ಪಕ್ಷದ ಕೊಡಗು ಜಿಲ್ಲಾಧ್ಯಕ್ಷ ಮೋಹನ್ ಮೌರ್ಯ ಅವರು ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಪಕ್ಷದ ವರಿಷ್ಠ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೋಹನ್ ಮೌರ್ಯ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಮಡಿಕೇರಿ ಫೆ.6 : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಕೊಡಗು ಜಿಲ್ಲೆ ವತಿಯಿಂದ ಫೆಬ್ರವರಿ, 13 ರಿಂದ 15 ರವರೆಗೆ ಜಿಲ್ಲಾ ಮಟ್ಟದ ಕಲಿಕಾ ಹಬ್ಬ ಮೂರ್ನಾಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಸಂತೋಷದಾಯಕವಾದ ಕಲಿಕೆ ಹಾಗೂ ಕಲಿಕೆಯಲ್ಲಿ ಜೀವನ ಕೌಶಲ್ಯಗಳನ್ನು ಬೆಳೆಸುವುದು ಕಲಿಕಾ ಹಬ್ಬದ ಪರಿಕಲ್ಪನೆಯಾಗಿದೆ. ಈ ಕಾರ್ಯಕ್ರಮದಲ್ಲಿ ಪೋಷಕರು, ಶಿಕ್ಷಣಾಸಕ್ತರು ಭಾಗವಹಿಸಬಹುದು ಎಂದು ಸಮಗ್ರ ಶಿಕ್ಷಣ ಕರ್ನಾಟಕ ಪದನಿಮಿತ್ತ ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿಗಳು ಹಾಗೂ ಉಪ ನಿರ್ದೇಶಕರಾದ ರಂಗಧಾಮಯ್ಯ ಅವರು ತಿಳಿಸಿದ್ದಾರೆ.






