ವಿರಾಜಪೇಟೆ ಮಾ.15 : ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಮುಂದಿನ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಪ್ರಭಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಎರಡು ರಾಷ್ಟ್ರೀಯ ಪಕ್ಷಗಳಿಗೆ ಪೈಪೋಟಿ ನೀಡಲಿದ್ದೇವೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎ.ಮನ್ಸೂರ್ ಆಲಿ ಹೇಳಿದರು. ಜೆಡಿಎಸ್ ಪಕ್ಷದ ವತಿಯಿಂದ ವಿರಾಜಪೇಟೆ ಪುರಭವನದಲ್ಲಿ ಹಮ್ಮಿಕೊಂಡಿದ್ದ “ಮುಂದಿನ ಚುನಾವಣಾ ಪೂರ್ವಭಾವಿ ಸಭೆ’ಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮತದಾರರು ಜೆಡಿಎಸ್ ಪ್ರಾದೇಶಿಕ ಪಕ್ಷದ ಕಡೆ ಒಲವು ತೋರಿದ್ದಾರೆ. ಕಾರ್ಯಕರ್ತರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಚುನಾವಣಾ ಸಂದರ್ಭ ಪಕ್ಷದ ಏಳಿಗೆಗೆ ಕೆಲಸಮಾಡುವ ಮೂಲಕ 2023ಕ್ಕೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಶ್ರಮ ವಹಿಸಬೇಕು ಎಂದರು. ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಕೆ.ಎಂ.ಗಣೇಶ್ ಮಾತನಾಡಿ, ಮಡಿಕೇರಿ ಕ್ಷೇತ್ರದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಗೆಲುವು ಖಚಿತ, ವಿರಾಜಪೇಟೆ ಕ್ಷೇತದಲ್ಲ್ರಿ ತ್ರಿಕೋನ ಸ್ಪರ್ದೇ ನಡೆಯಲಿದೆ. ಈ ಹಿಂದೆ ಕುಮಾರ ಸ್ವಾಮಿ ಮುಖ್ಯ ಮಂತ್ರಿಯಾಗಿದ್ದ ಸಂದರ್ಭ ಕೊಡಗಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದ್ದರು. ಹಾಗೂ ಅವರ ಜನಪರ…
ಲೇಖಕ: admin
ಮಡಿಕೇರಿ ಮಾ.15 : ಮಾ.18 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಡಗಿಗೆ ಆಗಮಿಸಿ ಸುಮಾರು 4 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಿದ್ದಾರೆ ಎಂದು ಸಚಿವ ಬಿ.ಸಿ.ನಾಗೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಮಾರು 30 ಕ್ಕೂ ಹೆಚ್ಚು ಉದ್ಘಾಟನಾ ಕಾರ್ಯಕ್ರಮ ಮತ್ತು 15 ಕ್ಕೂ ಹೆಚ್ಚು ಶಂಕುಸ್ಥಾಪನಾ ಕಾರ್ಯಕ್ರಮವನ್ನು ಇದೇ 18 ರಂದು ಮುಖ್ಯಮಂತ್ರಿ ಅವರು ನೆರವೇರಿಸಲಿದ್ದಾರೆ. ವಿರಾಜಪೇಟೆ ಮತ್ತು ಸೋಮವಾರಪೇಟೆಯಲ್ಲಿ 73 ಕೋಟಿ ರೂ. ವೆಚ್ಚದ ಕುಡಿಯುವ ನೀರು ಕಾಮಗಾರಿ ಯೋಜನೆಗೆ ಚಾಲನೆ ದೊರೆಯಲಿದೆ ಎಂದರು. ಫಲಾನುಭವಿಗಳ ಸಮ್ಮೇಳನ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು ಫಲಾನುಭವಿಗಳ ಜೊತೆ ಸಂವಾದ ನಡೆಸುವುದರ ಜೊತೆಗೆ ಸವಲತ್ತು-ಸೌಲಭ್ಯಗಳನ್ನು ವಿತರಿಸಲಿದ್ದಾರೆ ಎಂದರು. ಸರ್ಕಾರದ ಒಂದಲ್ಲ ಒಂದು ಕಾರ್ಯಕ್ರಮಗಳು ಬಡ ಜನರಿಗೆ ತಲುಪಿಸುವಲ್ಲಿ ಶ್ರಮಿಸಲಾಗಿದೆ. ಆ ನಿಟ್ಟಿನಲ್ಲಿ ಫಲಾನುಭವಿಗಳ ಪ್ರತಿಕ್ರಿಯೆಯನ್ನು ಪಡೆಯಲಾಗುತ್ತದೆ ಎಂದರು.
ಮಡಿಕೇರಿ ಮಾ.15 : ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾ ಗಾಂಧಿ ವೃತ್ತದ ಜಮಾಯಿಸಿದ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಮಾನವ ಸರಪಳಿ ರಚಿಸಿ, ಅಡುಗೆ ಅನಿಲದ ಸಿಲಿಂಡರ್ ಗಳನ್ನು ಪ್ರದರ್ಶಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಮಹಿಳಾ ಕಾಂಗ್ರೆಸ್ ನ ರಾಜ್ಯಾಧ್ಯಕ್ಷೆ ಪುಷ್ಪ ಅಮರನಾಥ್ ಮಾತನಾಡಿ, ಬಡವರ, ಮಹಿಳೆಯರ ಪರ ಕೆಲಸ ಮಾಡಲು ಬಿಜೆಪಿ ಸರ್ಕಾರಕ್ಕೆ ತಾಕತ್ತಿಲ್ಲ. ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡುವ ಇಚ್ಛಾಶಕ್ತಿ ಇಲ್ಲ. ಡಬ್ಬಲ್ ಇಂಜಿನ್ ಸರ್ಕಾರಕ್ಕೆ ಮಾನವೀಯತೆ ಎಂಬುವುದಿದ್ದರೆ ತಕ್ಷಣ ಅಡುಗೆ ಅನಿಲದ ಬೆಲೆ ಮತ್ತು ತೆರಿಗೆ ಹೊರೆಯನ್ನು ಇಳಿಕೆ ಮಾಡಿ ಬಡವರ ಕಷ್ಟಗಳಿಗೆ ಸ್ಪಂದಿಸಲಿ ಎಂದರು. ನಿತ್ಯ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಈ ಬಾರಿಯ ಚುನಾವಣೆಯಲ್ಲಿ ಮತದಾರರು…
ಮಡಿಕೇರಿ ಮಾ.15 : ಸರ್ಕಾರದ ವಿವಿಧ ಯೋಜನೆಯ ಫಲಾನುಭವಿಗಳ ಸಮ್ಮೇಳನವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮಾ.18 ರಂದು ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದ್ದು, ಸಮ್ಮೇಳನದ ಯಶಸ್ಸಿಗೆ ಶ್ರಮಿಸುವಂತೆ ಎಲ್ಲಾ ಹಂತದ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಸಿದ್ಧತೆ ಸಂಬಂಧಿಸಿದಂತೆ ಮಾಹಿತಿ ಪಡೆದು ಸಚಿವರು ಮಾತನಾಡಿದರು. ಫಲಾನುಭವಿಗಳ ಸಮ್ಮೇಳನವು ಸರ್ಕಾರದ ಕಾರ್ಯಕ್ರಮವಾಗಿದ್ದು, ಮುಖ್ಯಮಂತ್ರಿ ಅವರು ಫಲಾನುಭವಿಗಳ ಜೊತೆ ಸಂವಾದ ನಡೆಸಲಿದ್ದಾರೆ ಎಂದು ಸಚಿವರು ತಿಳಿಸಿದರು. ಫಲಾನುಭವಿಗಳ ಸಮ್ಮೇಳನ ಜೊತೆಗೆ ನಗರದಲ್ಲಿ ನಿರ್ಮಾಣವಾಗಿರುವ ಗಾಂಧಿ ಭವನ, ಗ್ರೇಟರ್ ರಾಜಸೀಟು ಉದ್ಯಾನವನ ಸೇರಿದಂತೆ ಹಲವು ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಬಿ.ಸಿ.ನಾಗೇಶ್ ಅವರು ಹೇಳಿದರು. ಕಾರ್ಯಕ್ರಮ ಸಂಬಂಧ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಜಿಲ್ಲಾಡಳಿತದ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಕಾರ್ಯಕ್ರಮ ಯಶಸ್ಸಿಗೆ ಎಲ್ಲಾ ಹಂತದ ಅಧಿಕಾರಿಗಳು ತೊಡಗಿಸಿಕೊಳ್ಳುವಂತೆ ಸಚಿವರು ನಿರ್ದೇಶನ ನೀಡಿದರು.…
ಮಡಿಕೇರಿ ಮಾ.15 : ಸಾರ್ವಜನಿಕರಿಗೆ ಸರ್ಕಾರದ ಸೇವೆಗಳನ್ನು ಒಂದೇ ಸೂರಿನಡಿಯಲ್ಲಿ ಎಲ್ಲಾ ಇಲಾಖೆಗಳ ಆಯ್ಕೆ ಸೇವೆಗಳನ್ನು ನಗರ ಸ್ಥಳಿಯ ಸಂಸ್ಥೆಯ ಭಾಗದ ನಾಗರೀಕರಿಗೆ ನೀಡುವ ಸದುದ್ದೇಶದಿಂದ “ಕರ್ನಾಟಕ ಒನ್” ಸೇವಾ ಕೇಂದ್ರಗಳನ್ನು ಸ್ಥಾಪಿಸಲು ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅದರಂತೆ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಈ ಕೆಳಕಂಡ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕರ್ನಾಟಕ ಒನ್ ಸೇವಾ ಕೇಂದ್ರಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಮಡಿಕೇರಿ ನಗರ ಸಭೆ (1 ಕೇಂದ್ರ), ಕುಶಾಲನಗರ ಪಟ್ಟಣ ಪಂಚಾಯತ್ (2 ಕೇಂದ್ರ), ಸೋಮವಾರಪೇಟೆ ಪಟ್ಟಣ ಪಂಚಾಯತ್ (1 ಕೇಂದ್ರ), ವಿರಾಜಪೇಟೆ ಪಟ್ಟಣ ಪಂಚಾಯತ್ (2 ಕೇಂದ್ರ). ಜಿಲ್ಲೆಯಲ್ಲಿ ಒಟ್ಟು 6 ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದ್ದು, ಆಸಕ್ತ ಪ್ರಾಂಚೈಸಿಗಳು https://www.karnatakaone.gov.in/Public/FranchiseeTerms ಲಿಂಕ್ನ ಮೂಲಕ ಮಾತ್ರವೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮಾರ್ಚ್, 20 ರ ರಾತ್ರಿ 8 ಗಂಟೆಯವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಪ್ರಾಜೆಕ್ಟ್ ಮ್ಯಾನೇಜರ್, ಜಿಲ್ಲಾಧಿಕಾರಿಯವರ ಕಚೇರಿ (ದೂ.ಸಂ.9900385301)…
ಮಡಿಕೇರಿ ಮಾ.15 : ಲೆಪ್ಟಿನೆಂಟ್ ಜನರಲ್ ಬುಟ್ಟಿಯಂಡ.ಕೆ.ಬೋಪಣ್ಣ ನೇತೃತ್ವದಲ್ಲಿ ನಿವೃತ್ತ 9 ಹಿರಿಯ ಸೇನಾಧಿಕಾರಿಗಳ ತಂಡ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿ, ವೀಕ್ಷಿಸಿದರು. 34 ನ್ಯಾಷನಲ್ ಡಿಫೆನ್ಸ್ ಕಾಲೇಜಿಗೆ ಸೇರಿದ ತಂಡವು ನಿವೃತ್ತ ಲೆಫ್ಟಿನೆಂಟ್ ಜನರಲ್ ಬಿ.ಕೆ.ಬೋಪಣ್ಣ, ಪಿವಿಎಸ್ ಎಂ, ಎವಿಎಸ್ಎಂ, ವಿಎಸ್ಎಂ ನೇತೃತ್ವದಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿ ಅಮರ್ ಜವಾನ್ ಸ್ಮಾರಕಕ್ಕೆ ಪುಪ್ಪ ನಮನ ಸಲ್ಲಿಸಿದರು. ಈ ತಂಡದಲ್ಲಿ ನಿವೃತ್ತರಾದ ಮೇಜರ್ ಜನರಲ್ ಸಿ.ಎಸ್.ಮೇಜರ್ ಜನರಲ್ ಮೋಹನ್ ದಾಸ್, ಮೇಜರ್ ಜನರಲ್ ಎಂ.ಎಂ.ಸಿಂಗ್, ಮೇಜರ್ ಜನರಲ್ ಅಹಲುವಾಲಿಯ, ಮೇಜರ್ ಜನರಲ್ ಕರ್ಲಾ, ಏರ್ ಕಮೋಡರ್ ಪ್ರವೀಣ್ ಭದ್ವಾರ್, ಬ್ರಿಗೇಡಿಯರ್ ಸುರೀಂದರ್ ಸಿಂಗ್, ಬ್ರಿಗೇಡಿಯರ್ ಡಿ.ಕೆ.ಖನ್ನಾ, ಏರ್ ಮಾರ್ಷಲ್ ದಿ.ಬಿಂದ್ರಾ ಅವರ ಪತ್ನಿ ಪಮ್ಮಿ ಬಿಂದ್ರಾ, ಗುಲ್ ಕರ್ಲಾ ಇದ್ದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೋರಂ ನ ಅಧ್ಯಕ್ಷರಾದ ಕರ್ನಲ್ ಕಂಡ್ರತಂಡ ಸಿ.ಸುಬ್ಬಯ್ಯ ಅವರು ನಿಯೋಗಕ್ಕೆ ತಿಮ್ಮಯ್ಯ ಸ್ಮಾರಕ…
ಕಡಂಗ ಮಾ.15 : ಕರಡ ಗ್ರಾಮದ ಶ್ರೀ ಮಲೆತಿರಿಕೆ ದೇವಾಲಯದ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ಜರುಗಿದವು. ಪೂಜಾ ಕಾರ್ಯಕ್ರದಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು ಸಾಂಪ್ರದಾಯಿಕ ಪೂಜೆ ಸಲ್ಲಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪೆಡದರು. ವರದಿ : ನೌಫಲ್ ಕಡಂಗ
ಮಡಿಕೇರಿ ಮಾ.15 : ಬಿಜೆಪಿ ಸರ್ಕಾರ ಕೆಳಗಿಳಿದರೆ ಮಾತ್ರ ಗಗನಕ್ಕೇರಿರುವ ಅಗತ್ಯ ವಸ್ತುಗಳ ಬೆಲೆ ಇಳಿಕೆಯಾಗಲು ಸಾಧ್ಯವೆಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಅಭಿಪ್ರಾಯಪಟ್ಟಿದ್ದಾರೆ. ಮಡಿಕೇರಿಯಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು. ಬಿಜೆಪಿ ಸರ್ಕಾರ ಬಂದ ನಂತರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರಿಕೆಯಾಗುತ್ತಲೇ ಇದೆ. 410 ರೂ. ಇದ್ದ ಗ್ಯಾಸ್ ಬೆಲೆ ಇಂದು 1200 ರೂ.ಗೆ ತಲುಪಿದೆ. ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಎಂದು ಹೇಳುವ ಬಿಜೆಪಿಗರು ಮೊದಲು ಅಗತ್ಯ ವಸ್ತುಗಳ ಬೆಲೆಯನ್ನು ಇಳಿಕೆ ಮಾಡಿ ಜನಸಾಮಾನ್ಯರ ಪರ ಇದ್ದೇವೆ ಎನ್ನುವುದನ್ನು ಸಾಬೀತು ಪಡಿಸಲಿ ಎಂದು ಸವಾಲು ಹಾಕಿದರು. ಶೋಭಕ್ಕ, ಮಾಳವಿಕಾ, ಜೊಲ್ಲೆ ಅಕ್ಕ, ತಾರಕ್ಕ ಬಿಜೆಪಿ ಮಹಿಳಾ ಮೋರ್ಚಾದ ಎಲ್ಲಾ ಪದಾಧಿಕಾರಿಗಳೇ ನಿಮ್ಮ ಮನೆಯಲ್ಲಿ ಅಡುಗೆ ಮಾಡಲ್ವಾ, ದರ ಏರಿಕೆ ಬಗ್ಗೆ ನೀವ್ಯಾಕೆ ಮಾತಾನಾಡುತ್ತಿಲ್ಲ…
ಮಡಿಕೇರಿ ಮಾ.15 : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಮಾ.22 ರಂದು ಯುಗಾದಿ ಹಬ್ಬಾಚರಣೆ ಹಾಗೂ ಏ.10 ರಂದು ದೇವಾಲಯದ ವಾರ್ಷಿಕ ಉತ್ಸವ ನಡೆಯಲಿದೆ. ಮಾ.22 ರಂದು ಯುಗಾದಿ ಹಬ್ಬಾಚರಣೆ ಪ್ರಯುಕ್ತ ಬೆಳಿಗ್ಗೆ 7 ಗಂಟೆಯಿಂದ ವಿಶೇಷ ಪೂಜೆ, ಪಂಚಾಂಗ ಶ್ರವಣ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ನಂತರ ಅನ್ನಸಂತರ್ಪಣೆ ನೆರವೇರಲಿದೆ. ವಾರ್ಷಿಕ ಉತ್ಸವದ ಪ್ರಯುಕ್ತ ಏ.10 ರಂದು ಬೆಳಿಗ್ಗೆ 7 ಗಂಟೆಗೆ ಮಹಾಗಣಪತಿ ಹೋಮ, ಮಧ್ಯಾಹ್ನ 12 ಗಂಟೆಗೆ ಮಹಾ ಪೂಜೆ ಹಾಗೂ ತೀರ್ಥ ಪ್ರಸಾದ ವಿತರಣೆ ನಡೆಯಲಿದ್ದು, 1 ಗಂಟೆಗೆ ತಕ್ಕಾರ ಮನೆಯಿಂದ ಬಂಡಾತ ತರುವುದು, 1.30 ಗಂಟೆಗೆ ಹಬ್ಬಾಚರಣೆ ನಂತರ ಅನ್ನಸಂತರ್ಪಣೆ ನೆರವೇರಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯ ಟ್ರಸ್ಟ್ ನ ಅಧ್ಯಕ್ಷರು, ಸದಸ್ಯರು ಮನವಿ ಮಾಡಿದ್ದಾರೆ.
ಮಡಿಕೇರಿ ಮಾ.15 : ಧಾರ್ಮಿಕ ನಂಬಿಕೆಯನ್ನು ಅವಹೇಳನ ಮಾಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾಗಾಂಧಿ ವೃತ್ತದಲ್ಲಿ ಬಿಜೆಪಿ ಹಾಗೂ ಈಶ್ವರಪ್ಪ ಅವರ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯವ್ಯಾಪಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಮಡಿಕೇರಿ ಕ್ಷೇತ್ರದ ಎಸ್ಡಿಪಿಐ ಅಭ್ಯರ್ಥಿ ಹಾಗೂ ನಗರಸಭಾ ಸದಸ್ಯ ಅಮೀನ್ ಮೊಹಿಸಿನ್ ಮಾತನಾಡಿ ಅಭಿವೃದ್ಧಿ ಪರ ಚಿಂತನೆ ಹರಿಸದ ಬಿಜೆಪಿ ಮಂದಿ ಧಾರ್ಮಿಕ ಭಾವನೆಗಳನ್ನು ಕೆಣಕಿ ರಾಜಕಾರಣ ಮಾಡುತ್ತಿದ್ದಾರೆ. ಪ್ರಸ್ತುತ ಉದ್ಭವಿಸುತ್ತಿರುವ ಹಣದುಬ್ಬರ, ನಿರುದ್ಯೋಗದ ಸಮಸ್ಯೆಗಳ ಬಗ್ಗೆ ಮಾತನಾಡದ ಬಿಜೆಪಿ, ಸಮುದಾಯಗಳ ಭಾವನೆಗೆ ಧಕ್ಕೆಯುಂಟುಮಾಡುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು. ಸಮಾಜದಲ್ಲಿ ಒಡಕು ಮೂಡಿಸಿ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿ ಬಿಜೆಪಿ ಇದೆ. ಆದರೆ ಯಾವುದೇ ಕಾರಣಕ್ಕು ಆ ಪಕ್ಷ…






