ವಿರಾಜಪೇಟೆ ಜ.11 : ಬೈತೂರಪ್ಪ ದೇವಾಲಯದಲ್ಲಿ ವರ್ಷಂಪ್ರತಿ ನಡೆಯುವ ಉತ್ಸವ ಸಂದರ್ಭದಲ್ಲಿ ಕೇರಳದಿಂದ ಕಾಲ್ನಡಿಗೆಯಲ್ಲಿ ಆಗಮಿಸುವ “ಕೋರತಚ್ಛ” ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಾಲಯಕ್ಕೆ ಆಗಮಿಸಿ ಹಬ್ಬದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಊರಿನವರು ಕೋರತಚ್ಛ ತಂಡವನ್ನು ಆತ್ಮೀಯತೆಯಿಂದ ಬರಮಾಡಿಕೊಂಡು ವಿಶೇಷ ಪೂಜೆ ಸಲ್ಲಿಸಿದರು. ಕೇರಳದ ಉಳಿಕಲ್ಲ್ ತಾಲ್ಲೂಕಿನ ಬಯತೂರ್ ಎಂಬ ಜಾಗದಲ್ಲಿ ವರ್ಷಂಪ್ರತಿ ಹಬ್ಬ ನಡೆಯಲಿದ್ದು, ಕೊಡಗಿನಲ್ಲಿ ಮೈಮೇಲೆ ಬರುವ ಬಹುತೇಕ ದೇವಾನುದೇವತೆಗಳು ಈ ಹಬ್ಬದಲ್ಲಿ ಭಾಗಿಯಾಗಿ ದರ್ಶನ ಪಡೆಯುತ್ತಾರೆ. ಇದರ ದೊಡ್ಡ ಹಬ್ಬ ಜ.24 ಹಾಗೂ 25ರಂದು ನಡೆಯುತ್ತದೆ. 25ರಂದು ಕೊಡಗಿನ ದೇವರುಗಳ ದರ್ಶನ ಕಾಣಸಿಗುತ್ತದೆ.
ಲೇಖಕ: admin
ವಿರಾಜಪೇಟೆ ಜ.11 : ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್. ಎಸ್. ಘಟಕದ ವಾರ್ಷಿಕ ವಿಶೇಷ ಶಿಬಿರವು ದಿಡ್ಡಳಿಯ ಚೆನ್ನಂಗಿ ಬಸವನಹಳ್ಳಿಯ ಸರಕಾರಿ ಗಿರಿಜನ ಆಶ್ರಮ ಶಾಲೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಎನ್.ಎಸ್.ಎಸ್. ಶಿಬಿರಾರ್ಥಿಗಳಿಗೆ ‘ಕಾಡುಹಕ್ಕಿ ಗೂಡು’ ಕಾರ್ಯಕ್ರಮದಡಿಯಲ್ಲಿ ಸಮೀಪದ ಗಿರಿಜನ ಹಾಡಿಯ ಮನೆಯೊಂದರಲ್ಲಿ ಸಂವಾದ ಕಾರ್ಯಕ್ರಮ ಜರುಗಿತು. ಗಿರಿಜನ ಹಾಡಿಯ ಶಾಂತಮ್ಮ ಎಂಬವರ ಮನೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಊರಿನ ಬುಡಕಟ್ಟು ಜನಾಂಗದ ಮುಖಂಡರಾದ ಅಪ್ಪಾಜಿ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿ ಶಿಬಿರಾರ್ಥಿಗಳಿಗೆ ಬುಡಕಟ್ಟು ಜನರ ಜೀವನ ಪದ್ಧತಿ, ಆಹಾರ ಕ್ರಮಗಳು, ಸಂಪ್ರದಾಯಗಳು, ಪದ್ಧತಿ ಪರಂಪರೆ, ಇತಿಹಾಸ, ಜೀವನ ಪದ್ಧತಿ, ಹಬ್ಬಗಳ ಆಚರಣಾ ವಿಧಾನಗಳನ್ನ ಸಂಪೂರ್ಣವಾಗಿ ವಿವರಿಸಿ ಬುಡಕಟ್ಟು ಜನರ ಸಮಸ್ಯೆಗಳನ್ನು ತಿಳಿಸಿಕೊಟ್ಟರು. ಈ ಸಂದರ್ಭ ಎನ್.ಎಸ್.ಎಸ್. ಅಧಿಕಾರಿಗಳಾದ ಅರ್ಜುನ್ ಎಚ್. ಆರ್., ಉಪನ್ಯಾಸಕರಾದ ಬಿ. ಎನ್. ಶಾಂತಿಭೂಷಣ್, ಬಸವನಹಳ್ಳಿ ಶಾಲೆಯ ಮುಖ್ಯ ಶಿಕ್ಷಕರಾದ ಸಿದ್ದಲಿಂಗ ಶೆಟ್ಟಿ, ಶಿಕ್ಷಕರು, ಗ್ರಾಮಸ್ಥರು ಹಾಜರಿದ್ದರು.
ಸುಂಟಿಕೊಪ್ಪ,ಜ.11 : ತಮಿಳು ಸಂಘದ ವತಿಯಿಂದ ಜ.15 ರಂದು 23ನೇ ವರ್ಷದ ಪೊಂಗಲ್ ಹಾಗೂ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ವಿಘ್ನೇಶ್ ತಿಳಿಸಿದರು. ಅಂದು ಬೆಳಿಗ್ಗೆ 10 ಗಂಟೆಗೆ ಮಾದಾಪುರ ರಸ್ತೆಯಲ್ಲಿರುವ ವೃಕ್ಷೋಧ್ಭವ ಮಹಾಗಣಪತಿ ದೇವಸ್ಥಾನದಿಂದ ಹಾಲಿನ ಕಳಸದೊಂದಿಗೆ ಮೆರವಣಿಗೆ ಹೊರಟು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಶ್ರೀ ಚಾಮುಂಡೇಶ್ವರಿ ದೇವಸ್ಥನಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜಾ ಕೈಂಕರ್ಯಗಳು ನೇರವೇರಿಸಿದರು. ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಭಕ್ತಾಧಿಗಳಿಗೆ 1 ಗಂಟೆಯಿಂದ ಸಂಜೆ 3 ಗಂಟೆಯವರೆಗೆ ಅನ್ನÀ ಸಂತರ್ಪಣೆಯನ್ನು ನೇರವೇರಿಸಲಾಗುವುದು. ನಂತರ 3.30ರಿಂದ ಸಂಜೆ 6 ಗಂಟೆಯವರೆಗೆ ಪುರುಷರಿಗೆ ಮಹಿಳೆಯರಿಗೆ ಮಕ್ಕಳಿಗೆ ವಿವಿಧ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ. ಚಾಮುಂಡೇಶ್ವರಿ ದೇವಿಯ ವಿಗ್ರಹವನ್ನು ಇರಿಸಿ ವಿದ್ಯುತ್ದೀಪ ಅಲಂಕೃತ ಮಂಟಪದ ಮೆರವಣಗೆಯು ಸುಂಟಿಕೊಪ್ಪ ಪಟ್ಟಣದಲ್ಲಿ ಸಾಗಲಿದೆ. ರಾತ್ರಿ ದೇವಸ್ಥಾನದಲ್ಲಿ ಶ್ರೀ ಚಾಮುಂಡೇಶ್ವರಿ ವಿಶೇಷ ಪೂಜೆಯ ನಂತರ ಭಕ್ತಾಧಿಗಳಿಗೆ ಪ್ರಸಾದ (ಪೊಂಗಳ್) ವಿನಿಯೋಗ ನಡೆಯಲಿದೆ. ಎಂದು ಪತ್ರಿಕಾ ಹೇಳಿಕೆಯಲ್ಲಿ ತಮಿಳು ಸಂಘದ ಅಧ್ಯಕ್ಷರಾದ ವಿಘ್ನೇಶ್ ತಿಳಿಸಿದ್ದಾರೆ. ಈ…
ಸುಂಟಿಕೊಪ್ಪ,ಜ.11 : ತಮಿಳು ಸಂಘ ಮತ್ತು ಪೊಂಗಳ್ ಆಚರಣಾ ಸಮಿತಿ ನೂತನ ಅಧ್ಯಕ್ಷರಾಗಿ ವಿಘ್ನೇಶ್ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಗಿ ಆರ್.ಅರುಣ್ ಕುಮಾರ್, ಖಜಾಂಚಿಯಾಗಿ ವೇಲುಮುರುಗನ್ ಉಪಾಧ್ಯಕ್ಷರಾಗಿ ಶರವಣ, ಸಂಘಟನಾ ಕಾರ್ಯದರ್ಶಿಯಾಗಿ ಎಸ್.ಸೂರ್ಯ ಅವರನ್ನು ಆಯ್ಕೆ ಮಾಡಲಾಯಿತು.
ಮಡಿಕೇರಿ ಜ.10 : ನ್ಯಾಯಮೂರ್ತಿ ಸದಾಶಿವ ಆರೋಗದ ವರದಿಯನ್ನು ತಕ್ಷಣವೇ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಆಗ್ರಹಿಸಿ (ಪ್ರೊ.ಬಿ ಕೃಷ್ಣಪ್ಪ ಸ್ಥಾಪಿತ) ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಬೇಡಿಕೆಯ ಈಡೇರಿಕೆಗಾಗಿ ಆಗ್ರಹಿಸಿದರು. ಈ ಸಂದರ್ಭ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಮಾತನಾಡಿ, ಸಾಮಾಜಿಕ ಪರಿವರ್ತನೆಗೆ ಹೋರಾಡಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪರಿಶಿಷ್ಟರಲ್ಲೇ ಅತ್ಯಂತ ದುರ್ಬಲರಾದ ವರ್ಗಗಳಿಗೆ ವಿಶೇಷ ರಕ್ಷಣೆ ಹಾಗೂ ಮೀಸಲಾತಿ ಅಗತ್ಯತೆಗಳನ್ನು ಜನಸಂಖ್ಯೆ ಆಧಾರದಲ್ಲಿಯೂ ಮತ್ತು ಆರ್ಥಿಕ ಹಿಂದುಳಿದಿರುವಿಕೆಯನ್ನು ಆಧರಿಸಿ ಪ್ರತಿಪಾದಿಸಿದ್ದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಜನಪರ ಸಂಘಟನೆಗಳೆಲ್ಲಾ ಒಂದಾಗಿ ಪರಿಶಿಷ್ಟ ಒಳಮೀಸಲಾತಿ ಜಾರಿಯಾಗಬೇಕೆಂದು ಹೋರಾಟ ಮಾಡಿದ್ದರ ಪರಿಣಾಮ ಈ ಹಿಂದಿನ ಧರ್ಮಸಿಂಗ್ ನೇತೃತ್ವದ ಸರ್ಕಾರ ಒಂದು ಆಯೋಗವನ್ನು ರಚನೆ ಮಾಡಿ ಆ ಆಯೋಗದ ಅಧ್ಯಕ್ಷರನ್ನಾಗಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಅವರನ್ನು ನೇಮಕ ಮಾಡಿತ್ತು. ನ್ಯಾಯಮೂರ್ತಿ ಸದಾಶಿವರವರು ಏಳು ವರ್ಷಕ್ಕೂ…
ಮಡಿಕೇರಿ ಜ.10 : ಕೊಡಗು ಜಿಲ್ಲೆಯಲ್ಲಿ ಶೀಘ್ರ ಜಿಲ್ಲಾ ಮಟ್ಟದ ತುಳು ಸಮ್ಮೇಳನವನ್ನು ನಡೆಸಲು ಎಲ್ಲಾ ತುಳು ಭಾಷಿಕ ಸಮುದಾಯದ ಪ್ರಮುಖರ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ತುಳುವೆರ ಜನಪದ ಕೂಟದ ಜಿಲ್ಲಾಧ್ಯಕ್ಷ ಬಿ.ಬಿ.ಐತ್ತಪ್ಪ ರೈ ಅವರ ಅಧ್ಯಕ್ಷತೆಯಲ್ಲಿ ನಗರದ ಬಾಲಭವನ ಸಭಾಂಗಣದಲ್ಲಿ ನಡೆದ ತುಳು ಸಮ್ಮೇಳನದ ಪೂರ್ವ ಸಿದ್ಧತಾ ಸಭೆಯಲ್ಲಿ ವಿವಿಧ ತುಳು ಭಾಷಿಕರ ಸಮುದಾಯದ ಪ್ರಮುಖರು ಹಾಗೂ ಕೂಟದ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಲಾಯಿತು. ಸಮ್ಮೇಳನದಲ್ಲಿ ಆಕರ್ಷಣೀಯ ಸ್ತಬ್ಧಚಿತ್ರ, ತುಳುರಥ, ಮೆರವಣಿಗೆ, ವಿಚಾರಗೋಷ್ಠಿ ನಡೆಸಲು ವಿವಿಧ ಉಪ ಸಮಿತಿಗಳನ್ನು ರಚಿಸುವುದು ಮತ್ತು ಮುಖ್ಯ ಅತಿಥಿಗಳ ಭಾಗವಹಿಸುವಿಕೆ ಕುರಿತು ಚರ್ಚಿಸಲಾಯಿತು. 15 ಸಾವಿರಕ್ಕಿಂತಲೂ ಹೆಚ್ಚಿನ ಸಂಖ್ಯೆಯ ತುಳು ಬಾಂಧವರನ್ನು ಸೇರಿಸುವುದು, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅವರನ್ನು ಮುಖ್ಯ ಅತಿಥಿಗಳನ್ನಾಗಿ ಆಹ್ವಾನಿಸುವುದು ಮತ್ತು ಮುಂದಿನ ಸಭೆಯಲ್ಲಿ ಸಮ್ಮೇಳನದ ದಿನಾಂಕ ಅಂತಿಮಗೊಳಿಸಲು ನಿರ್ಧರಿಸಲಾಯಿತು. ಸಮ್ಮೇಳನದ ಯಶಸ್ಸಿಗೆ ಎಲ್ಲಾ ತುಳು ಭಾಷಿಕ ಸಮುದಾಯ ಒಗ್ಗಟ್ಟಾಗಿ ಶ್ರಮಿಸುವ ಕುರಿತು ಸಭೆಯಲ್ಲಿ ಭರವಸೆ ದೊರೆಯಿತು. ತುಳುವೆರ ಜನಪದ…
ಮಡಿಕೇರಿ ಜ.10 : ಇದೇ ಜ. 19 ರಂದು ಶಿವಯೋಗಿ ಸಿದ್ದರಾಮ ಮತ್ತು ಮಹಾಯೋಗಿ ವೇಮನ ಜಯಂತಿಯನ್ನು ನಗರದ ಭಾರತೀಯ ವಿದ್ಯಾಭವನದಲ್ಲಿ ಆಚರಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದೆ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಹಾಗೆಯೇ ಅಂಬಿಗರ ಚೌಡಯ್ಯ ಜಯಂತ್ಯೋತ್ಸವವನ್ನು ಇದೇ ಜನವರಿ 21 ರಂದು ಹಾರಂಗಿ ಅಥವಾ ಶಿರಂಗಾಲ ಗ್ರಾಮದಲ್ಲಿ ಆಯೋಜಿಸಲು ನಿರ್ಧರಿಸಲಾಯಿತು. ಫೆಬ್ರುವರಿ 1 ರಂದು ಆಯೋಜಿಸಬೇಕಿದ್ದ ಮಡಿವಾಳ ಮಾಚಿದೇವ ಜಯಂತಿಯನ್ನು ಫೆಬ್ರುವರಿ 11 ರಂದು ನಗರದ ದಾಸವಾಳ ರಸ್ತೆ ಬಳಿ ಇರುವ ವೀರಭದ್ರೇಶ್ವರ ದೇವಾಲಯದಲ್ಲಿ ಆಚರಿಸಲು ತೀರ್ಮಾನಿಸಲಾಯಿತು. ಹಾಗೆಯೇ ಸವಿತಾ ಮಹರ್ಷಿ ಜಯಂತಿಯನ್ನು ಫೆಬ್ರುವರಿ 27 ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಬಳಿಕ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ಸರ್ಕಾರದ ನಿಯಮದಂತೆ ಜಯಂತ್ಯೋತ್ಸವವನ್ನು ಆಯೋಜಿಸಬೇಕು. ಶಿಷ್ಟಚಾರವನ್ನು ಪಾಲಿಸಬೇಕು. ಜಯಂತ್ಯೋತ್ಸವ ಸಂಬಂಧ ಜಿಲ್ಲಾಡಳಿತದ ಜೊತೆ ಸಮಾಜದ ಎಲ್ಲರೂ ಕೈಜೋಡಿಸಬೇಕು ಎಂದು ಕೋರಿದರು. ಮಡಿವಾಳ ಸಮಾಜದ ಪ್ರಮುಖರಾದ ಸುಕುಮಾರ್ ಅವರು…
ಮಡಿಕೇರಿ ಜ.10 : ಮಡಿಕೇರಿಯ ಮೆಡಿಕಲ್ ಕಾಲೇಜಿನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಶಾಲನಗರದ ನೇತಾಜಿ ಬಡಾವಣೆಯಲ್ಲಿ ನಡೆದಿದೆ. ಬಡಾವಣೆಯ ನಿವಾಸಿ ಸಂತೋಷ್ ಎಂಬುವವರ ಪುತ್ರಿ ಜಸ್ಮಿತ (19) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ಯುವತಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.
ಮಡಿಕೇರಿ ಜ.10 : ಕರ್ನಾಟಕ ರಾಜ್ಯ ಯುವ ಸಂಘಗಳ ವತಿಯಿಂದ ನೀಡಲಾಗುವ ರಾಜ್ಯ ಯುವ ಪ್ರಶಸ್ತಿಗೆ ಕಗೋಡ್ಲು ಗ್ರಾಮದ ಕೆ.ಎಂ. ಮೋಹನ್ ಆಯ್ಕೆಯಾಗಿದ್ದಾರೆ. ಇವರು ಕಗೋಡ್ಲು ಕಾವೇರಿ ಯುವಕ ಸಂಘದ ಸದಸ್ಯರಾಗಿ, ಮಡಿಕೇರಿ ತಾಲೂಕು ಯುವ ಒಕ್ಕೂಟದ ಉಪಾಧ್ಯಕ್ಷರಾಗಿ, ಕೊಡಗು ಜಿಲ್ಲಾ ಯುವ ಒಕ್ಕೂಟದ ಖಜಾಂಚಿತಾಗಿ, ಭಗವತಿ ದೇವಾಲಯ ಸಮಿತಿ ಸದಸ್ಯರಾಗಿ, ಕಗೋಡ್ಲು ಗಣೇಶ್ ಸೇವಾ ಸಮಿತಿ ಕಗೋಡ್ಲು ಸದಸ್ಯರಾಗಿ ಅನೇಕ ವರ್ಷಗಳಿಂದ ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವುದನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಸುಬ್ರಮಣ್ಯದಲ್ಲಿ ಜ.18 ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದೆಂದು ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟ ಅಧ್ಯಕ್ಷ ಪಿ.ಪಿ ಸುಕುಮಾರ್ ಪತ್ರಿಕಾ ಪ್ರಟಕಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಜ.10 : ಪ್ರತಿಯೊಬ್ಬರು ಸೇವಾ ಮನೋಭಾವ, ಪ್ರಕೃತಿ ಪ್ರೇಮ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ರೋಟರಿಯ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಕರೆ ನೀಡಿದ್ದಾರೆ. ಮಡಿಕೇರಿಯ ರೋಟರಿ ಹಾಲ್ನಲ್ಲಿ ಸಂಜೆ ನಡೆದ ರೋಟರಿಯ ವಿವಿಧ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸೇವಾ ಮನೋಭಾವ ಮತ್ತು ಸಾಮಾಜಿಕ ಕಳಕಳಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ರೋಟರಿ ಸಂಸ್ಥೆಗೆ ಹೊಸ ಸದಸ್ಯರ ಅವಶ್ಯಕತೆ ಇದೆ. ಯುವ ಸಮೂಹವನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆ ಮಾಡಿಕೊಂಡು ಸದಸ್ಯತ್ವವನ್ನು ನೀಡಬೇಕು. ಮಹಿಳಾ ಸದಸ್ಯತ್ವವನ್ನು ಕೂಡ ಹೆಚ್ಚಿಸಬೇಕೆಂದು ತಿಳಿಸಿದರು. ಮಡಿಕೇರಿ ರೋಟರಿ ಸಂಸ್ಥೆಯ ಅಧ್ಯಕ್ಷ ಕೆ.ಸಿ.ಕಾರ್ಯಪ್ಪ ಸ್ವಾಗತಿಸಿದರು. ಜಿಲ್ಲಾ ರೋಟರಿ ಅಸಿಸ್ಟೆಂಟ್ ಗವರ್ನರ್ ಕೆ.ಎಸ್.ರತನ್ ತಮ್ಮಯ್ಯ, ಜೋನಲ್ ಲೆಫ್ಟಿನೆಂಟ್ ಎನ್.ಡಿ.ಅಚ್ಚಯ್ಯ, ಕಾರ್ಯದರ್ಶಿ ಸುದೈ ನಾಣಯ್ಯ ಹಾಗೂ ಗೀತಾ ಗಿರೀಶ್ ಉಪಸ್ಥಿತರಿದ್ದರು. ಫೆನ್ಸಿಂಗ್ ಕ್ರೀಡೆಯಲ್ಲಿ ಸಾಧನೆ ಮಾಡಿದ ವಿಜಯ್ ದೇವಯ್ಯ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ::: ರಕ್ತದಾನ ಶಿಬಿರ ::: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಗ್ಗೆ ನಡೆದ ರಕ್ತದಾನ…






