ಸುಂಟಿಕೊಪ್ಪ ಮಾ.15: ಅಖಿಲ ಭಾರತ ನಾಗರಿಕ ಸೇವಾ ಫುಟ್ಬಾಲ್ ಪಂದ್ಯಾವಳಿಗೆ ಸುಂಟಿಕೊಪ್ಪ ಪಿಡಿಒ ವೇಣುಗೋಪಾಲ್ ನಾಯಕರಾಗಿ ಆಯ್ಕೆಗೊಂಡಿರುವ ಹಿನ್ನಲೆಯಲ್ಲಿ ಸುಂಟಿಕೊಪ್ಪ ಬ್ಲೂಬಾಯ್ಸ್ ಯೂತ್ ಕ್ಲಬ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಶುಭಹಾರೈಸಲಾಯಿತು. ಸುಂಟಿಕೊಪ್ಪ ಗ್ರಾ.ಪಂ ಆವರಣದಲ್ಲಿ ನಡೆದ ಜೌಪಚಾರಿಕ ಕಾರ್ಯಕ್ರಮದಲ್ಲಿ ವೇಣುಗೋಪಾಲ್ ಅವರನ್ನು ಬ್ಲೂಬಾಯ್ಸ್ ಯೂತ್ ಮಾಜಿ ಅಧ್ಯಕ್ಷ ಹಿರಿಯ ಆಟಗಾರ ಬಿ.ಸಿ.ಸತ್ಯಕುಮಾರ್ ಸನ್ಮಾನಿಸಿದರು. ಇದೇ ಸಂದರ್ಭ ಗ್ರಾ.ಪಂ ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ, ಹಿರಿಯ ಪತ್ರಕರ್ತ ವಹೀದ್ ಜಾನ್, ಪಿಡಿಓ ಕ್ರೀಡಾಭಿಮಾನ ಮತ್ತು ಸಾಧನೆಯ ಕುರಿತು ಮಾತನಾಡಿ ಶುಭಕೋರಿದರು. ಬ್ಲೂಬಾಯ್ಸ್ ಯೂತ್ ಕ್ಲಬ್ ಅಧ್ಯಕ್ಷ ಆಲಿಕುಟ್ಟಿ, ಗ್ರಾ.ಪಂ ಸದಸ್ಯರಾದ ರಫೀಕ್ ಖಾನ್, ಶಬ್ಬೀರ್, ಹಿರಿಯ ಪತ್ರಕರ್ತ ಮತ್ತು ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಮಾಜಿ ಕಾರ್ಯದರ್ಶಿ ಬಿ.ಸಿ.ದಿನೇಶ್, ಪವಿ, ಜೇಮ್ಸ್, ಸಂತೋಷ್, ವಸಂತ, ಮಾಜಿ ಸದಸ್ಯ ಸೋಮಯ್ಯ ಹಾಜರಿದ್ದರು. ಒರಿಸ್ಸಾ ರಾಜ್ಯದ ಭುವನೇಶ್ವರದಲ್ಲಿ ನಡೆಯಲಿರುವ 2022-23ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯ ತಂಡದ ಕ್ಯಾಪ್ಟನ್ ಆಗಿ…
ಲೇಖಕ: admin
ಮಡಿಕೇರಿ ಮಾ.15 : ಕಾವೇರಿ ನದಿಯ ಉದ್ಭವ ಕ್ಷೇತ್ರ ತಲಕಾವೇರಿಯ ಕಾವೇರಿ ತೀರ್ಥ ಮತ್ತು ಪ್ರಸಾದವನ್ನು ಇ-ಪ್ರಸಾದ ಪರಿಕಲ್ಪನೆಯಡಿ ಅಂಚೆ ಮೂಲಕ ಭಕ್ತರಿಗೆ ವಿತರಿಸುವ ಆಡಳಿತ ವ್ಯವಸ್ಥೆಯ ಕ್ರಮವನ್ನು ತಲಕಾವೇರಿ ಮೂಲಸ್ವರೂಪ ರಕ್ಷಣಾ ವೇದಿಕೆ ತೀವ್ರವಾಗಿ ವಿರೋಧಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಸಂಚಾಲಕ ಉಳ್ಳಿಯಡ ಎಂ.ಪೂವಯ್ಯ ಅಂಚೆ ಮೂಲಕ ಕಾವೇರಿ ತೀರ್ಥ ವಿತರಣೆ ಮಾಡುವುದನ್ನು ತಕ್ಷಣ ನಿಲ್ಲಿಸಬೇಕು. ಮಡಿಕೇರಿಯ ಅಂಚೆ ಕಚೇರಿಯ ಮುಂಭಾಗ ಅಳವಡಿಸಿರುವ ಕಾವೇರಿ ತೀರ್ಥ ಮಾರಾಟದ ಬ್ಯಾನರ್ ನ್ನು ತೆರವುಗೊಳಿಸಬೇಕು. ಇಲ್ಲವಾದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಪ್ರತಿಭಟನೆಯನ್ನು ನಡೆಸುವುದಾಗಿ ಎಚ್ಚರಿಕೆ ನೀಡಿದರು. ತಲಕಾವೇರಿ ಕ್ಷೇತ್ರ ಎನ್ನುವುದು ಇತರ ದೇವ ನೆಲೆಗಳಂತೆ ಅಲ್ಲ. ಕ್ಷೇತ್ರದಲ್ಲಿನ ಬ್ರಹ್ಮಕುಂಡಿಕೆಯಿಂದ ಚಿಲುಮೆಯಾಗಿ ಹರಿದು ಬರುವ ನೀರು ಕಾವೇರಿಯಾಗಿದ್ದು, ಆಕೆಗೆ ಯಾವುದೇ ಸ್ವರೂಪವೂ ಇಲ್ಲ. ಜಲ ರೂಪಿಣಿಯಾದ ಕಾವೇರಿ ಕುಲದೇವತೆಯಾಗಿ ಪೂಜಿಸಲ್ಪಡುತ್ತಾಳೆ. ಇಂತಹ ಕಾವೇರಿಯನ್ನು ತೀರ್ಥ ಪ್ರಸಾದವೆಂದು 300 ರೂ.ಗಳಿಗೆ ಮಾರಾಟ ಮಾಡುವ ಕ್ರಮ ಸರಿಯಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರಕೃತಿಯ ನಡುವೆ ಇರುವ…
ಮಡಿಕೇರಿ ಮಾ.15 : ಜನರಲ್ ಕೆ.ಎಸ್.ತಿಮ್ಮಯ್ಯ ಅವರ 117ನೇ ಜನ್ಮದಿನಾಚರಣೆಯ ಪ್ರಯುಕ್ತ ಮಾ.31 ರಂದು ಜ. ಕೆ.ಎಸ್.ತಿಮ್ಮಯ್ಯ ಅವರ ಪುತ್ಥಳಿ ಹಾಗೂ ನೂತನ ತರಗತಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಏರ್ ಮಾರ್ಷಲ್ ನಂದಾ ಕಾರ್ಯಪ್ಪ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ವಹಿಸಲಿದ್ದಾರೆ. ಇದೇ ಸಂದರ್ಭ ಪದ್ಮಶ್ರೀ ಪ್ರಶಸ್ತಿ ವಿಜೇತೆ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದು ಶಾಲೆಯ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಮಡಿಕೇರಿ ಮಾ.15 : ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಕೊಡಗು ಗೌಡ ಅರೆಭಾಷೆ ಜನಾಂಗ ಬಾಂಧವರಿಗಾಗಿ ವಧು-ವರರ ಸಮಾವೇಶ ಇತ್ತೀಚೆಗೆ ನಡೆಯಿತು. ನಗರದ ಕೊಡಗು ಗೌಡ ವಿದ್ಯಾ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಡಯಟ್ ಕೂಡಿಗೆಯ ನಿವೃತ್ತ ಹಿರಿಯ ಉಪನ್ಯಾಸಕರಾದ ನಾಟೋಲನ ಸಾವಿತ್ರಿ ವಧು ವರರ ಸಮಾವೇಶ ಅರೆಭಾಷೆ ಜನಾಂಗ ಬಾಂಧವರಿಗೆ ಉತ್ತಮ ಸಂಬಂಧಗಳನ್ನು ಬೆಳೆಸಲು ಹೆಚ್ಚು ಸಹಕಾರಿಯಾಗಿದೆ. ಈ ಕಾರ್ಯಕ್ರಮವನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಹೊರದೇಶದಲ್ಲಿ ನೆಲೆಸಿರುವ ಕೊಡಗಿನ ಅರೆಭಾಷೆ ಮಂದಿಗೆ ಇಲ್ಲಿನ ಆಚಾರ ವಿಚಾರಗಳ ಬಗ್ಗೆ ಅರಿವಿರುವುದಿಲ್ಲ. ನಮ್ಮ ಭಾಷೆ, ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಪ್ರತಿಯೊಬ್ಬರು ಕಟ್ಟುನಿಟ್ಟಾಗಿ ಆಚರಿಸಬೇಕೆಂದು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕೋರನ ಸಿ.ವಿಶ್ವನಾಥ ಈ ಬಾರಿ 75 ಕ್ಕೂ ಹೆಚ್ಚಿನ ಆಕಾಂಕ್ಷಿಗಳು ವಧು-ವರರ ಸಮಾವೇಶದಲ್ಲಿ ಪಾಲ್ಗೊಂಡಿರುವುದು ಸಂತಸದ ವಿಚಾರವೆಂದರು. ಪ್ರಮುಖರಾದ ಉಳುವಾರನ ರೋಶನ್ ವಧು-ವರರನ್ನು ವೇದಿಕೆಗೆ ಬರಮಾಡಿಕೊಂಡು ವಿವರಗಳನ್ನು…
ಶ್ರೀಮಂಗಲ ಮಾ.15 : ಟಿ.ಶೆಟ್ಟಿಗೇರಿಯ ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜದ ವಾರ್ಷಿಕ ಮಹಾಸಭೆಯು ಮಾ.20 ರಂದು ಕೊಡವ ಸಮಾಜದ ಅಧ್ಯಕ್ಷ ಚೊಟ್ಟೆಯಾಂಡಮಾಡ ಬೋಸು ವಿಶ್ವನಾಥ್’ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅಂದು ಪೂರ್ವಾಹ್ನ 11 ಗಂಟೆಗೆ ಸರಿಯಾಗಿ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಲಿರುವ ಸಭೆಯಲ್ಲಿ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜದ ಸದಸ್ಯರ ಮಕ್ಕಳಿಗೆ, ದಾನಿ ಕೈಬಿಲೀರ ಪಾರ್ವತಿ ಬೋಪಯ್ಯ ಸ್ಥಾಪಿಸಿದ ದತ್ತಿನಿಧಿ ಬಹುಮಾನ ನೀಡಲಾಗುವುದು. ದತ್ತಿನಿಧಿ ಬಹುಮಾನಕ್ಕೆ ಹಾಗೂ ಠರಾವು ಅರ್ಜಿ ಸಲ್ಲಿಸಲು ಮಾ.18 ಕೊನೆಯ ದಿನವಾಗಿದೆ. ಸಭೆಯಲ್ಲಿ ದಾನಿಗಳಿಗೆ ಶಿಕ್ಷಣ ಕ್ಷೇತ್ರ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಚಿನ್ನದ ಪದಕ ಪಡೆದ ಸದಸ್ಯರ ಮಕ್ಕಳಿಗೆ ಸನ್ಮಾನ ಮಾಡಲಾಗುವುದು. ಸರ್ವ ಸದಸ್ಯರು ಸಭೆಗೆ ಹಾಜರಾಗಬೇಕೆಂದು ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜದ ಕಾರ್ಯದರ್ಶಿ ಮನ್ನೇರ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಮಾ.15 : ಅಂತರ್ಜಾತಿ ವಿವಾಹವಾಗಿದ್ದ ಯುವತಿಯೊಬ್ಬಳು ಪತಿಯ ಮನೆ ಸೇರಿದ ನಾಲ್ಕೇ ದಿನದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾಗಿರುವ ಘಟನೆ ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಗ್ರಾಮದಲ್ಲಿ ನಡೆದಿದೆ. ಹೆಬ್ಬಾಲೆ 6ನೇ ಹೊಸಕೋಟೆ ಗ್ರಾಮದ ನಿವಾಸಿ ರಾಜು ಹಾಗೂ ವನಜಾಕ್ಷಿ ದಂಪತಿ ಪುತ್ರಿ, ಕುಶಾಲನಗರ ಕಾಲೇಜೊಂದರ ವಿದ್ಯಾರ್ಥಿನಿ ಅಕ್ಷಿತ(18) ಎಂಬಾಕೆಯೇ ಮೃತಪಟ್ಟ ದುರ್ದೈವಿಯಾಗಿದ್ದಾಳೆ. ಈ ಘಟನೆ ಕುರಿತು ಸಂಶಯ ವ್ಯಕ್ತಪಡಿಸಿರುವ ಮೃತ ಯುವತಿಯ ಪೋಷಕರು ಕೊಲೆ ಆರೋಪದ ದೂರು ನೀಡಿದ್ದಾರೆ. ಮಾ.10 ರಂದು ಬ್ಯಾಂಕ್ ಗೆ ಹೋಗಿ ಬರುವುದಾಗಿ ಮನೆಯಿಂದ ತೆರಳಿದ್ದ ಅಕ್ಷಿತ ಮಧ್ಯಾಹ್ನದ ವೇಳೆಗೆ ಅಂತರ್ಜಾತಿ ವಿವಾಹವಾಗಿ ಅದೇ ಗ್ರಾಮದ ಹೇಮಂತ್ ನ ಮನೆ ಸೇರಿದ್ದಳು ಎಂದು ಹೇಳಲಾಗಿದೆ. ಮಾ.14 ರಂದು ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತಾದರು ಜೀವ ಉಳಿಯಲಿಲ್ಲ. ಈ ಕುರಿತು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ವಿರಾಜಪೇಟೆ ಮಾ.15 : ಮೀನುಪೇಟೆ ಚೈತನ್ಯ ಮಠಪುರ ಶ್ರೀ ಮುತ್ತಪ್ಪ ದೇವಾಲಯದ 79ನೇ ವಾರ್ಷಿಕ ತೆರೆ ಮಹೋತ್ಸವವು ಮಾ.21, 22 ಹಾಗೂ 23ರಂದು ನಡೆಯಲಿದೆ. ದೇವಾಲಯದ ಆವರಣದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯದೊಂದಿಗೆ ಜರುಗಲಿದೆ ಎಂದು ದೇವಾಲಯದ ಉತ್ಸವ ಆಚರಣಾ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ. ಮಾ.21 ರಂದು ಪ್ರಾತ:ಕಾಲ ಗಣಪತಿ ಹೋಮ ನಡೆಯಲಿದ್ದು, ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣ ನಡೆಯಲಿದೆ. ಸಂಜೆ 6 ಗಂಟೆಗೆ ಮುತ್ತಪ್ಪನ್ ವೆಳ್ಳಾಟಂ ರಾತ್ರಿ 8 ಕ್ಕೆ ಅನ್ನಸಂತರ್ಪಣೆ, 9 ಗಂಟೆಗೆ ಮಯವಿಲ್ ಮನೋರಮ ಟಿವಿ ಚ್ಯಾನಲ್ ಉಗ್ರಂ ಉಜ್ವಲಂ ತಂಡದಿಂದ ಸ್ಟೇಜ್ ಶೋ ನಡೆಯಲಿದೆ. ಮಾ. 22 ರಂದು ಸಂಜೆ 5 ಗಂಟೆಗೆ ಮುತ್ತಪ್ಪನ್ ವೆಳ್ಳಾಟಂ, 5-30 ಕ್ಕೆ ಮೊದಕಲಶದೋಂದಿಗೆ ತಾಲಪ್ಪೊಲಿ ಮೆರವಣಿಗೆ ನಡೆಯಲಿದೆ. ಸಿಂಗಾರಿ ಮೇಳಂ, ದೀಪದೋಂದಿಗೆ ನೃತ್ಯ ಕಾರ್ಯಕ್ರಮ ಹಾಗೂ ಚೆಂಡೆ ಮೇಳದೊಂದಿಗೆ ಮಹಿಳೆಯರ ತಾಲಪ್ಪೊಲಿ ಸಾತ್ ನೀಡಲಿದ್ದಾರೆ. ಮೆರವಣಿಗೆಯು ನಗರದ ತೆಲುಗರ ಬೀದಿಯಿಂದ ಹೊರಟು ಮುಖ್ಯ ಬೀದಿಗಳಲ್ಲಿ…
ಸೋಮವಾರಪೇಟೆ ಮಾ.14 : ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಗಣಸಿ ಎಂಬಲ್ಲಿ ನಡೆದಿದೆ. ಸೋಮವಾರಪೇಟೆಯ ಬೆಟ್ಟದಕೊಪ್ಪ ಗ್ರಾಮದ ಕೃಷಿಕ ರಮೇಶ್ ಎಂಬುವವರ ಪುತ್ರ ಮನೋಹರ್(33) ಮೃತಪಟ್ಟವರು. ಮನೋಹರ್ ತಿಪಟೂರಿನಲ್ಲಿ ಪತ್ನಿ, ಮಕ್ಕಳೊಂದಿಗೆ ವಾಸವಿದ್ದು, ಕೊಬ್ಬರಿ ಕಾರ್ಖಾನೆಯಲ್ಲಿ ಕೆಲಸ ಮಾಡಿಕೊಂಡಿದ್ದರು. ತನ್ನೂರಿನಿಂದ ತಿಪಟೂರಿಗೆ ಸ್ಕೂಟರ್ನಲ್ಲಿ ತೆರಳುತ್ತಿದ್ದ ಸಂದರ್ಭ ರಾತ್ರಿ ಅಪಘಾತ ಸಂಭವಿಸಿದೆ. ತಲೆ ಮತ್ತು ಎದೆ ಭಾಗಕ್ಕೆ ತೀವ್ರ ಗಾಯಗೊಂಡು ಮೃತಪಟ್ಟರು. ಮೃತರು ಪತ್ನಿ, ಇಬ್ಬರು ಮಕ್ಕಳು, ತಂದೆ, ತಾಯಿಯನ್ನು ಅಗಲಿದ್ದಾರೆ.
ಸೋಮವಾರಪೇಟೆ ಮಾ.14 : ಶ್ರೀ ಮುತ್ತಪ್ಪಸ್ವಾಮಿ ಹಾಗೂ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಸಮಿತಿ ವತಿಯಿಂದ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ವಿಜೃಂಭಣೆಯ ಜಾತ್ರೋತ್ಸವ ಮಂಗಳವಾರದಂದು ಸಂಜೆ ತೆರೆ ಕಂಡಿತು. ಪಟ್ಟಣ ಮಾತ್ರವಲ್ಲದೇ ಅಕ್ಕ ಪಕ್ಕದ ಗ್ರಾಮಸ್ಥರು ಉತ್ಸವದಲ್ಲಿ ಪಾಲ್ಗೊಂಡಿದ್ದರು. ಶ್ರೀ ಮುತ್ತಪ್ಪ, ಶ್ರೀ ತಿರುವಪ್ಪ, ಶ್ರೀ ವಿಷ್ಣುಮೂರ್ತಿ, ಶ್ರೀ ಭಗವತಿ, ಶ್ರೀ ರಕ್ತಚಾಮುಂಡಿ, ಶ್ರೀ ಕಂಡಕರ್ಣ, ಶ್ರೀ ಕರಿಂಗುಟ್ಟಿಶಾಸ್ತಾವು, ಶ್ರೀಪೊಟ್ಟನ್ ಶ್ರೀ ಗುಳಿಗನ್ ದೈವಗಳ ಕೋಲಗಳು ನಡೆದವು. ಧಾರ್ಮಿಕ ಉತ್ಸವದಲ್ಲಿ ಎಲ್ಲಾ ಜಾತಿ ಜನಾಂಗ ಮಾತ್ರವಲ್ಲದೆ, ಎಲ್ಲಾ ಧರ್ಮಿಯರೂ ಭಾಗವಹಿಸುವುದು ವಿಶೇಷವಾಗಿತ್ತು.ಭಕ್ತಾದಿಗಳಿಗೆ ಅನ್ನದಾನ ಏರ್ಪಡಿಸಲಾಗಿತ್ತು. ಪಟ್ಟಣದ ಮುಖ್ಯ ಬೀದಿಗಳಲ್ಲಿ ಸೋಮವಾರ ರಾತ್ರಿ ಸಿಂಗಾರಿಮೇಳ ಮೆರವಣಿಗೆ ನಡೆಯಿತು.
ಮಡಿಕೇರಿ ಮಾ.14 : ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ವಿವಿಧೆಡೆ ಸಾಧಾರಣ ಮಳೆಯಾಗಿದೆ. ನಾಪೋಕ್ಲು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅರ್ಧ ಇಂಚಿನಷ್ಟು ಮಳೆ ಸುರಿದಿದೆ. ಮರಗೋಡು, ಮದೆನಾಡು, ಬೆಟ್ಟಗೇರಿ, ಗಾಳಿಬೀಡು, ಭಾಗಮಂಡಲ ಮತ್ತಿತರೆಡೆ ಸಾಧಾರಣ ಮಳೆಯಾಗಿದೆ. ಮಡಿಕೇರಿ ನಗರ ಮತ್ತು ಸೋಮವಾರಪೇಟೆ ಸುತ್ತಮುತ್ತ ತುಂತುರು ಮಳೆ ಮಳೆಯಾಗಿದ್ದು, ವಿರಾಜಪೇಟೆಯಲ್ಲಿ ಮೋಡ ಕವಿದ ವಾತಾವರಣವಿತ್ತು. ಉತ್ತಮ ಮಳೆಯಾಗಿದ್ದರೆ ಬೆಂಕಿಯಿoದ ನಾಶವಾಗಿರುವ ಅರಣ್ಯ ಭಾಗಕ್ಕೆ ಸಹಕಾರಿಯಾಗುತ್ತಿತ್ತು. ಆದರೆ ನಿರೀಕ್ಷೆಯಷ್ಟು ಮಳೆಯಾಗದೆ ನಿರಾಶೆ ಮೂಡಿಸಿದೆ. ನಾಪೋಕ್ಲು ವಿಭಾಗದಲ್ಲಿ ಸ್ವಲ್ಪ ಹೆಚ್ಚು ಮಳೆಯಾಗಿರುವುದರಿಂದ ಕಾಫಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಬೀರಿದೆ. ಕಾಫಿ ಮತ್ತು ಕರಿಮೆಣಸು ಕೊಯ್ಲು ಕಾರ್ಯ ಮುಗಿಸಿದ್ದು, ಪ್ರಸ್ತುತ ಉತ್ತಮ ಮಳೆಯಾದರೆ ಮುಂದಿನ ವರ್ಷ ಉತ್ತಮ ಫಸಲನ್ನು ಪಡೆಯಲು ಸಾಧ್ಯವಾಗುತ್ತದೆ. ಮಳೆಯಾಗದಿದ್ದರೆ ಸ್ಪಿಂಕ್ಲರ್ ಮೊರೆ ಹೋಗಬೇಕಾಗುತ್ತದೆ, ಇದರಿಂದ ಬೆಳೆಗಾರರು ನಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ಕಾಫಿ ತೋಟಗಳೇ ಇರುವ ಪ್ರದೇಶ ಉತ್ತಮ ಮಳೆಯ ನಿರೀಕ್ಷೆಯಲ್ಲಿದೆ. ಬಿಸಿಲಿನ ತಾಪಕ್ಕೆ ಕಾಡ್ಗಿಚ್ಚು ಏರ್ಪಟ್ಟು ಅರಣ್ಯ ಬೆಂಕಿಗಾಹುತಿಯಾಗುತ್ತಿದೆ. ಕಾಡಿನಲ್ಲಿ ನೀರಿನ ಕೊರತೆ ಉಂಟಾಗಿ…






