ಮಡಿಕೇರಿ ಜ.10 : ಕೊಡಗು ಜಿಲ್ಲಾ ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್(ನಿಮಾ)ನ ಸರ್ವ ಸದಸ್ಯರ ಸಭೆಯಲ್ಲಿ ಅಧ್ಯಕ್ಷರಾಗಿ ಡಾ. ಎ.ಆರ್.ರಾಜಾರಾಮ್, ಕಾರ್ಯದರ್ಶಿಯಾಗಿ ಡಾ.ಶ್ಯಾಮ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರದಲ್ಲಿ ನಡೆದ ಈ ಆಯ್ಕೆ ನಡೆದಿದ್ದು, ಕೋಶಾಧಿಕಾರಿಯಾಗಿ ಡಾ. ಪದ್ಮನಾಭ, ನೂತನ ಕಾರ್ಯಕಾರಿ ಮಂಡಳಿಯ ಪೋಷಕರಾಗಿ ಡಾ. ಸಿ. ಆರ್. ಉದಯಕುಮಾರ್ ಮತ್ತು ಡಾ. ಬಿ.ವಿ. ಶೆಣೈ, ಉಪಾಧ್ಯಕ್ಷರಾಗಿ ಡಾ.ಉದಯ ಕುಮಾರ್, ಡಾ.ಅರುಣಾ ಭಟ್ ಮತ್ತು ಡಾ.ವಿವೇಕ್ ರಾವ್, ಜತೆ ಕಾರ್ಯದರ್ಶಿಗಳಾಗಿ ಡಾ.ಮುರಳಿ ಮತ್ತು ಡಾ.ಸುದೇಶ್ ಹೆಗ್ಡೆ ಆಯ್ಕೆಯಾಗಿದ್ದಾರೆ. ತಾಲ್ಲೂಕು ಪ್ರತಿನಿಧಿಗಳಾಗಿ ಡಾ.ರೋಷನ್ (ವಿರಾಜಪೇಟೆ), ಡಾ. ಪುರುಷೋತ್ತಮ್ (ಮಡಿಕೇರಿ), ಡಾ.ಮಹೇಶ್ (ಸೋಮವಾರಪೇಟೆ), ಡಾ.ರಾಜಾರಾಮ್ ಶೆಟ್ಟಿ (ಕುಶಾಲನಗರ) ಮತ್ತು ಡಾ.ಸುಬ್ರಹ್ಮಣ್ಯ ರಾವ್ (ಪೊನ್ನಂಪೇಟೆ), ಮಹಿಳಾ ಪ್ರತಿನಿಧಿಯಾಗಿ ಡಾ.ಶೈಲಜಾ ರಾಜೇಂದ್ರ ಆಯ್ಕೆಯಾದರು. ರಾಜ್ಯ ಕಾರ್ಯಕಾರಿ ಮಂಡಳಿಗೆ ಜಿಲ್ಲಾ ಪ್ರತಿನಿಧಿಗಳನ್ನಾಗಿ ಡಾ.ಪಿ.ಎನ್.ಕುಲಕರ್ಣಿ ಮತ್ತು ಡಾ.ಎನ್.ಕೆ.ರಾಜೇಂದ್ರ ಅವರನ್ನು ಆಯ್ಕೆಮಾಡಲಾಯಿತು. ಸಂಘಟನೆಯ ವಿವಿಧ ಯೋಜನೆಗಳ ಸಂಚಾಲಕರನ್ನು ನೇಮಕ ಮಾಡಲಾಗಿದ್ದು, ಆರೋಗ್ಯ ತಪಾಸಣಾ ಕಾರ್ಯಕ್ರಮಗಳಿಗೆ ಡಾ.ಸಂತೋಷ್ ಮತ್ತು ಡಾ.ಧನ್ಯಾ, ರಕ್ತದಾನ ಶಿಬಿರಗಳಿಗೆ…
ಲೇಖಕ: admin
ಮಡಿಕೇರಿ ಜ.10 : ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷರ ಆಯ್ಕೆ ಅಸಿಂಧುವೆಂದು ಆರೋಪಿಸುವುದು ಸರಿಯಲ್ಲ, ನಿಯಮ ಬದ್ಧವಾಗಿಯೇ ನಾನು ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ ಎಂದು ಸಂಘದ ನೂತನ ಅಧ್ಯಕ್ಷ ರತ್ನಾಕರ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದ ಮಾಜಿ ಅಧ್ಯಕ್ಷ ಬಿ.ಡಿ.ನಾರಾಯಣ ಅವರ ಉಪಸ್ಥಿತಿಯಲ್ಲಿ ಸಂಘದ ಸದಸ್ಯರುಗಳ ಹಾಜರಾತಿಯಲ್ಲಿ ಸಂಘದ ಮಹಾಸಭೆಯನ್ನು ನಡೆಸಲಾಗಿದೆ. ಈ ಸಭೆ ಅಸಿಂಧುವೆಂದು ಆರೋಪಿಸುವವರು ಸಂಘದ ಬೈಲ ಓದಿ ನೋಡಿಲ್ಲ, ಇಂತಹವರಿಂದ ಕಾನೂನಿನ ಪಾಠದ ಅಗತ್ಯತೆ ತಮಗಿಲ್ಲವೆಂದು ಹೇಳಿದರು. ಕೊಡಗು ಜಿಲ್ಲಾ ಬಂಟರ ಸಂಘದ ಮಹಾಸಭೆಗೂ ಮುಂಚಿತವಾಗಿ, ಮತದಾನದ ಹಕ್ಕುಳ್ಳ ಸದಸ್ಯರಿಗೆ ಸಭೆಯ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಸಭೆಯಲ್ಲಿ ಹಾಜರಿದ್ದ ಸದಸ್ಯರುಗಳ ಸಮ್ಮುಖದಲ್ಲೆ ನೂತನ ಆಡಳಿತ ಮಂಡಳಿಯನ್ನು ರಚಿಸಲಾಗಿದೆ ಮತ್ತು ಇದನ್ನು ಸಭಾ ನಡಾವಳಿಯಲ್ಲೂ ದಾಖಲಿಸಲಾಗಿದೆ ಎಂದರು. ನೂತನ ಆಡಳಿತ ಮಂಡಳಿಯಲ್ಲಿ ಅಧ್ಯಕ್ಷನಾಗಿ ರತ್ನಾಕರ ಶೆಟ್ಟಿಯಾದ ನಾನು, ಪ್ರಧಾನ ಕಾರ್ಯದರ್ಶಿಯಾಗಿ ಶಬರೀಶ್ ಶೆಟ್ಟಿ, ಉಪಾಧ್ಯಕ್ಷರಾಗಿ ಪ್ರದೀಪ್ ಶೆಟ್ಟಿ, ಜಂಟಿ ಕಾರ್ಯದರ್ಶಿಯಾಗಿ ಮದನ್ ಶೆಟ್ಟಿ ಮತ್ತು…
ವಿರಾಜಪೇಟೆ ಜ.10 : ಬಿಟ್ಟಂಗಾಲ ಸಮೀಪದ ವಿ. ಬಾಡಗದ ಹೈ ಪ್ಲೈಯರ್ಸ್ ತಂಡದ ವತಿಯಿಂದ ಫೆ.23 ರಿಂದ ದ. ಕೊಡಗಿನ 3 ನಾಡು ವ್ಯಾಪ್ತಿಯ ತಂಡಗಳಿಗಾಗಿ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಹೈಪ್ಲೈಯರ್ಸ್ ತಂಡದ ಅಧ್ಯಕ್ಷ ಅಮ್ಮಣಿಚಂಡ ರಂಜಿ ಪೂಣಚ್ಚ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇರಳಿನಾಡು, ಕುತ್ತುನಾಡು ಮತ್ತು ಬೊಟ್ಟಿಯತ್ ನಾಡು ವ್ಯಾಪ್ತಿಯ ಕೊಡವ ಕುಟುಂಬ ತಂಡಗಳಿಗಾಗಿ ಆಯೋಜಿಸಲಾಗಿರುವ ಈ ಹಾಕಿ ಪಂದ್ಯಾವಳಿಯು ವಿ. ಬಾಡಗ ಗ್ರಾಮದಲ್ಲಿ ಮೊದಲ ಬಾರಿಗೆ ಜರುಗುತ್ತಿದೆ. ವಿ.ಬಾಡಗದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಒಟ್ಟು 4 ದಿನಗಳ ಕಾಲ ನಡೆಯುವ ಈ ಕೌಟುಂಬಿಕ ಹಾಕಿ ಪಂದ್ಯಾವಳಿಗಾಗಿ ಈಗಾಗಲೇ ಸಿದ್ಧತೆಗಳು ಆರಂಭಗೊಂಡಿದ್ದು, ಹೆಚ್ಚಿನ ತಂಡಗಳ ನೋಂದಣಿಯನ್ನು ನಿರೀಕ್ಷಿಸಲಾಗಿದೆ ಎಂದು ರಂಜಿ ಪೂಣಚ್ಚ ಮಾಹಿತಿ ನೀಡಿದರು. ಹಾಕಿ ಕೂರ್ಗ್ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲು ಉದ್ದೇಶಿಸಿರುವ ಈ ಹಾಕಿ ಪಂದ್ಯಾವಳಿಯು ಹಾಕಿ ಕರ್ನಾಟಕ ಸಂಸ್ಥೆಯ ನಿಯಮಾವಳಿಗೆ ಬದ್ಧವಾಗಿ ನಡೆಯಲಿದೆ. ನಾಕ್ಔಟ್ ಮಾದರಿಯಲ್ಲಿ…
ವಿರಾಜಪೇಟೆ ಜ.10 : ಅರಮೇರಿ ಶ್ರೀ ಕಳಂಚೇರಿ ಮಠದಲ್ಲಿ ಹೊಂಬೆಳಕು ಮಾಸಿಕ ತತ್ವಚಿಂತನ ಗೋಷ್ಠಿಯ 206ನೇ ಕಿರಣ ಕಾರ್ಯಕ್ರಮ ನಡೆಯಿತು. ನಾಪೋಕ್ಲುವಿನ ಕಾಫಿ ಬೆಳೆಗಾರ ನೂರಾಂಬಾಡ್ ಎಸ್.ಉದಯಶಂಕರ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ರಾಷ್ಟ್ರದ ಪ್ರಗತಿಯಲ್ಲಿ ಕೃಷಿಕರ ಪಾತ್ರ ಅತ್ಯಮೂಲ್ಯವಾದದ್ದು. ಆದರೂ ಸರಕಾರಗಳ ನೀತಿಗಳು ಕೃಷಿಕರ ಪರವಾಗಿಲ್ಲ. ಕೃಷಿಕರು ತಮ್ಮ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಸಿಗದೆ ಕಾರ್ಪೋರೇಟ್ ದೊರೆಗಳನ್ನು ಅವಲಂಭಿಸಬೇಕಾಗಿ ಬಂದಿರುವುದು ಪ್ರಸಕ್ತ ಸ್ಥಿತಿ. ಆರ್ಥಿಕವಾಗಿ ದುಸ್ಥಿತಿ ಅನುಭವಿಸುತ್ತಿರುವ ಕೃಷಿಕರ ನೆರವಿಗೆ ಕಟ್ಟಕಡೆಯ ಆಶ್ರಯವಾದ ಬ್ಯಾಂಕ್ಗಳೂ ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಮಡಿಕೇರಿಯ ಉದ್ಯಮಿ, ಕೃಷಿ ತಜ್ಞ “ಕಾಫಿ ಕೃಷಿ, ಅಂದು-ಇಂದು” ಎಂಬ ವಿಷಯದಲ್ಲಿ ಉಪನ್ಯಾಸ ನೀಡಿ ಜಿಲ್ಲೆಯ ಬೆಳೆಗಾರರು ಅಸಂಪ್ರದಾಯಿಕ ಬೆಳೆಯಿಂದಾಗಿ ನಿರಂತರ ಸೋಲನ್ನು ಅನುಭವಿಸುತ್ತಿದ್ದಾರೆ. ತಮ್ಮ ಉತ್ಪನ್ನಗಳಿಗೆ ಮಾರುಕಟ್ಟೆ ಕಂಡು ಹಿಡಿಯುವಲ್ಲಿ ವಿಫಲರಾಗುತ್ತಿದ್ದಾರೆ. ವನ್ಯಜೀವಿಗಳ ಉಪಟಳದಿಂದಾಗಿ ಕಾಫೀ ಬೆಳೆಗಾರರು ಆತಂಕದ ಬದುಕನ್ನು ಸಾಗಿಸುತ್ತಿದ್ದಾರೆ. ಇದು ಉತ್ಪನ್ನಗಳ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತಿದೆ. ವಿದೇಶ…
ಮಡಿಕೇರಿ ಜ.10 : ವರ್ಷಕ್ಕೆ 2 ಬಾರಿಯಾದರೂ ದಂತ ವೈದ್ಯಕೀಯ ತಪಾಸಣೆ ಮಾಡಿದರೆ ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳಬಹುದೆಂದು ದಂತ ವೈದ್ಯೆ ಡಾ.ಅನುಶ್ರೀ ಸಲಹೆ ನೀಡಿದರು. ನಿಟ್ಟೆ ವಿಶ್ವವಿದ್ಯಾಲಯಕ್ಕೆ ಒಳಪಡುವ ಎ.ಬಿ ಶೆಟ್ಟಿ ಜ್ಞಾಪಕಾರ್ಥ ದಂತ ವಿಜ್ಞಾನ ಸಂಸ್ಥೆ ಹಾಗೂ ಮಡಿಕೇರಿ ಅಶ್ವಿನಿ ಆಸ್ಪತ್ರೆ ಸಹಭಾಗಿತ್ವದಲ್ಲಿ ಮಡಿಕೇರಿ ಕೊಡಗು ವಿದ್ಯಾಲಯದ ಅಪೊರ್ಚ್ಯುನಿಟಿ ಶಾಲೆಯ ವಿಶೇಷಚೇತನ ಮಕ್ಕಳಿಗೆ ಉಚಿತ ದಂತ ಆರೋಗ್ಯ ತಪಾಸಣೆ ನೆರವೇರಿಸಿ ಮಾತನಾಡಿದ ಅವರು, ದಂತ ಆರೋಗ್ಯ ಕಾಪಾಡಿಕೊಳ್ಳಲು ೬ ತಿಂಗಳಿಗೆ ಒಂದು ಬಾರಿ ದಂತ ತಪಾಸಣೆ ನಡೆಸುವುದು ಅಗತ್ಯ. ಹಲ್ಲುಗಳಲ್ಲಿ ಸಣ್ಣ-ಪುಟ್ಟ ಕಲೆಗಳಿದ್ದರೂ ಯಾವುದೇ ಹಿಂಜರಿಕೆ ಇಲ್ಲದೆ ದಂತ ವೈದ್ಯರಲ್ಲಿ ತಪಾಸಣೆ ಮಾಡಿಸಬೇಕೆಂದು ಹೇಳಿದರು. ಸಾಮಾನ್ಯವಾಗಿ ದೈಹಿಕವಾಗಿ ಬಲಹೀನವಿರುವ ವಿಶೇಷಚೇತನ ಮಕ್ಕಳು ತಮ್ಮ ಹಲ್ಲುಗಳನ್ನು ಉಜ್ಜಲು ಹಿಂದೇಟು ಹಾಕುತ್ತಾರೆ. ಸರಿಯಾಗಿ ಹಲ್ಲನ್ನು ಸ್ವಚ್ಛಗೊಳಿಸದ ಕಾರಣ ಹಲ್ಲಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆದುದರಿಂದ ಇಂತಹ ಮಕ್ಕಳಿಗೆ ವಿದ್ಯುತ್ ಚಾಲಿತ ’ಟೂತ್ಬ್ರಷ್’ಗಳನ್ನು ನೀಡಬೇಕು. ಇದರ ಮೂಲಕ ಸುಲಭವಾಗಿ ಹಲ್ಲುಗಳನ್ನು ಸ್ವಚ್ಛಗೊಳಿಸಬಹುದಾಗಿದೆ ಎಂದರು.…
: ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2023ರ ವೇಳಾಪಟ್ಟಿ : 09-03-2023 – ಕನ್ನಡ, ಅರೇಬಿಕ್, 11-03-2023 -ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ. 13-03-2023- ಅರ್ಥಶಾಸ್ತ್ರ. 14-03-2023- ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ. 15-03-2023- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್. 16-03-2023 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ. 17-03-2023 – ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ಕೇರ್, ಬ್ಯೂಟಿ ಅಂಡ್ 18-03-2023- ಭೂಗೋಳಶಾಸ್ತ್ರ, ಜೀವಶಾಸ್ತ್ರ. 20-03-2023- ಇತಿಹಾಸ, ಭೌತಶಾಸ್ತ್ರ. 21-03-2023 80. 23-03-2023-20 vs. 25-03-2023 -ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ. 27-03-2023 – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, – ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ. 29-03-2023 -ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ. ******* 2022-23ನೇ ಸಾಲಿನ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಜನವರಿ 23, 2023 ರಿಂದ ಫೆಬ್ರವರಿ 4.2023ರ ವರೆಗೆ ನಡೆಯಲಿದೆ. ದ್ವಿತೀಯ ಪಿಯು ಪೂವ ಸಿದ್ಧತಾ ಪರೀಕ್ಷೆಗಳನ್ನು ಆಯಾ…
ಮಡಿಕೇರಿ ಜ.10 : ಹಿರಿಯ ಸಾಹಿತಿ, ಲೇಖಕಿ ಡಾ.ಸಾರಾ ಅಬೂಬಕರ್(87) ಮಂಗಳವಾರ ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ನಾಲ್ವರು ಪುತ್ರರು ಹಾಗೂ ಅಪಾರ ಬಂಧುಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ. ಮೂಲತಃ ಕಾಸರಗೋಡಿನ ಚಂದ್ರಗಿರಿ ತೀರದವರಾದ ಸಾರಾ ವಿವಾಹವಾದ ಬಳಿಕ ಮಂಗಳೂರಿನ ಹ್ಯಾಟ್ ಹಿಲ್ ಬಳಿ ವಾಸವಾಗಿದ್ದರು. ‘ಚಂದ್ರಗಿರಿ ತೀರದಲ್ಲಿ’ ಕಾದಂಬರಿಯ ಮೂಲಕ ಪ್ರಸಿದ್ಧಿಗೆ ಬಂದಿದ್ದ ಸಾರಾ ಅಬೂಬಕರ್ ಅನೇಕ ಕೃತಿಗಳನ್ನು ರಚಿಸಿ ಖ್ಯಾತರಾಗಿದ್ದರು. ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಮಂಗಳೂರಿನ ಬಂದರ್ ಝೀನತ್ ಬಕ್ಷ್ ಮಸೀದಿ ಆವರಣದ ದಫನ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಹಿಳಾ ಧ್ವನಿಯಾಗಿದ್ದ ಸಾರಾ ಅಬೂಬಕರ್ ಅವರು 1936ರ ಜೂನ್ 30ರಂದು ಕಾಸರಗೋಡಿನ ಚಂದ್ರಗಿರಿ ತೀರದ ಗ್ರಾಮವೊಂದರಲ್ಲಿ ಜನಿಸಿದರು. ನ್ಯಾಯವಾದಿ ಪಿ.ಅಹ್ಮದ್ ಮತ್ತು ಜೈನಾಬಿ ದಂಪತಿಯ ಪುತ್ರಿಯಾಗಿರುವ ಅವರು ಹುಟ್ಟೂರಲ್ಲೇ ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ್ದರು. ಕಾಸರಗೋಡಿನಲ್ಲಿ ಹೈಸ್ಕೂಲ್ ಪೂರೈಸಿದ ಸಾರಾ ತನ್ನ ಅಜ್ಜಿ ಹೇಳುತ್ತಿದ್ದ ಕಥೆಗಳಿಂದಾಗಿ ಅವರು ಎಳೆಯದರಲ್ಲೇ ಸಾಹಿತ್ಯ ಕ್ಷೇತ್ರದತ್ತ ಆಕರ್ಷಿತರಾಗಿದ್ದರು.…
ಮಡಿಕೇರಿ ಜ.10 : ಅಗ್ನಿ ಆಕಸ್ಮಿಕದಿಂದ ಪೆಯಿಂಟ್ ಮತ್ತು ಫ್ಯಾನ್ಸಿ ಮಳಿಗೆ ಹಾಗೂ ಗೋದಾಮು ಸಂಪೂರ್ಣವಾಗಿ ಸುಟ್ಟುಕರಕಲಾದ ಘಟನೆ ಗೋಣಿಕೊಪ್ಪಲಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ಇಮ್ತಾರಾಂ ಎಂಬುವವರಿಗೆ ಸೇರಿದ ಸ್ವಂತ ಮಳಿಗೆಗಳು ಇದಾಗಿದ್ದು, ಇಡೀ ಕಟ್ಟಡ ಬೆಂಕಿಗಾಹುತಿಯಾಗಿದೆ. ಪೆಯಿಂಟ್ ದಾಸ್ತಾನು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಸುಮಾರು 80 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಗೋಣಿಕೊಪ್ಪ ಅಗ್ನಿಶಾಮಕ ದಳದ ಅಧಿಕಾರಿ ಪಳಂಗಪ್ಪ ಅವರ ನೇತೃತ್ವದ ತಂಡ ಅಗ್ನಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟಿತು. ಸಾರ್ವಜನಿಕರು ಕೂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು. ಇಮ್ತಾರಾಂ ಕಳೆದ 35 ವರ್ಷಗಳಿಂದ ಗೋಣಿಕೊಪ್ಪಲಿನಲ್ಲಿ ವ್ಯಾಪಾರ ನಡೆಸುತ್ತಿದ್ದಾರೆ.
ಮಡಿಕೇರಿ ಜ.10 : ದಕ್ಷಿಣ ಕೊಡಗಿನಲ್ಲಿ ಮತ್ತೆ ಹುಲಿ ದಾಳಿಯಾಗಿದ್ದು, ಎಮ್ಮೆಯೊಂದು ಬಲಿಯಾಗಿದೆ. ಬಲ್ಯಮಂಡೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚೇಂದೀರ ಸುರೇಶ್ ಎಂಬುವವರಿಗೆ ಸೇರಿದ ಎಮ್ಮೆ ಇದಾಗಿದೆ. ಗ್ರಾಮದಲ್ಲಿ ಆತಂಕದ ಪರಿಸ್ಥಿತಿ ಇದ್ದು, ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಎರಡು ತಿಂಗಳ ಹಿಂದೆ ಹುಲಿಗಳು ಹಸುಗಳನ್ನು ಬಲಿ ಪಡೆದ ಘಟನೆಗಳು ನಡೆದಿತ್ತು. ಅರಣ್ಯ ಇಲಾಖೆ ತಕ್ಷಣ ಎಚ್ಚೆತ್ತುಕೊಂಡು ಹುಲಿ ಸೆರೆಗೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಡಿಕೇರಿ ಜ.10 : ಮೈಸೂರಿನ ನಾರಾಯಣ ಮಲ್ಪಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಜ.13 ರಂದು ಮಡಿಕೇರಿ, ವಿರಾಪೇಟೆಯಲ್ಲಿ ಹಾಗೂ ಕುಶಾಲನಗರದಲ್ಲಿ ಲ್ಯಾಪರೋಸ್ಕೋಪಿಕ್ ಮತ್ತು ಜೀರ್ಣಾಂಗ ಕ್ಯಾನ್ಸರ್ ತಪಾಸಣೆ ಶಿಬಿರ ನಡೆಯಲಿದೆ. ಕುಶಾಲನಗರದ ಮೆಡಿಪ್ಲೆಕ್ಸ್ ಡಯಾಗ್ನೋಸ್ಟಿಕ್ ಸೆಂಟರ್ನಲ್ಲಿ ಬೆಳಿಗ್ಗೆ 10 ರಿಂದ 11 ಗಂಟೆವರೆಗೆ, ಮಡಿಕೇರಿಯ ರವಿ ಆರ್ಥೋಪೆಡಿಕ್ ಸೆಂಟರ್ನಲ್ಲಿ 11.30 ರಿಂದ ಮಧ್ಯಾಹ್ನ 12.30ರ ವರೆಗೆ, ವಿರಾಜಪೇಟೆಯ ಮಗ್ಗುಲ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಸೆಂಟರ್ನಲ್ಲಿ ಮಧ್ಯಾಹ್ನ 1.30 ರಿಂದ ಮಧ್ಯಾಹ್ನ 2.30ರ ವರೆಗೆ ಲ್ಯಾಪರೋಸ್ಕೋಪಿಕ್ ಮತ್ತು ಗ್ಯಾಸ್ಟ್ರೋ ಆಂಕೋ ಶಸ್ತ್ರಚಿಕಿತ್ಸಕ ಡಾ.ಎಚ್.ಎಂ.ಲೋಕೇಶ್ ತಪಾಸಣೆ ನಡೆಸಲಿದ್ದಾರೆ. ಶಿಬಿರದಲ್ಲಿ ಲ್ಯಾಪರೋಸ್ಕೋಪಿಕ್ ಸರ್ಜರಿ, ಪಿತ್ತಕೋಶದ ಕಲ್ಲುಗಳು, ಹರ್ನಿಯಾ, ಅಪೆಂಡಿಸೈಟಿಸ್, ಜೀರ್ಣಾಂಗ ಕ್ಯಾನ್ಸರ್, ಗ್ಯಾಸ್ಟ್ರೈಟಿಸ್, ಹೊಟ್ಟೆ, ಕರುಳು, ಲಿವರ್ ಮತ್ತು ಪ್ಯಾಂಕ್ರಿಯಾಸ್ ಕಾಯಿಲೆಗಳು, ಬೊಜ್ಜುತನಕ್ಕೆ ಚಿಕಿತ್ಸೆ ನೀಡಲಾಗುವುದು. ನೋಂದಣಿಗಾಗಿ 8884458890, 9513408004, 8277468176 ಸಂಪರ್ಕಿಸಬಹುದಾಗಿದೆ.






