ಲೇಖಕ: admin

ನಾಪೋಕ್ಲು ಜ.10 : ಕೊಡವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಹಿರಿಯರು ಹುಟ್ಟು ಹಾಕಿದ ಸ್ವಾತಂತ್ರ್ಯ ಪೂರ್ವ ಮಾತೃ ಸಂಸ್ಥೆಯಾದ ಅಖಿಲ ಕೊಡವ ಸಮಾಜದ ಆರ್ಥಿಕ ಪುನಶ್ಚೇತನಕ್ಕಾಗಿ ನೂತನ ಆರ್ಥಿಕ ಉಪ ಸಮಿತಿಯನ್ನು ಮಾಡಲಾಗಿದ್ದು, ಇದರ ಮೂಲಕ ಜನಾಂಗಬಾಂಧವರು ಕೈಜೋಡಿಸಬೇಕು ಎಂದು ಅಖಿಲ ಕೊಡವ ಸಮಾಜದ ಅಧ್ಯಕ್ಷ ಹಾಗೂ ಇಗ್ಗುತ್ತಪ್ಪ ದೇವಾಲಯದ ದೇವತಕ್ಕರಾದ ಪರದಂಡ ಸುಬ್ರಮಣಿ ಕಾವೇರಪ್ಪ ಹೇಳಿದರು. ಸಮೀಪದ ಕಕ್ಕಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಅವರು ಮಾತನಾಡಿ ಕೊಡವ ಜನಾಂಗದ ಪದ್ಧತಿ, ಪರಂಪರೆ ಹಾಗೂ ಸಂಸ್ಕೃತಿಯ ಉಳಿವಿಗಾಗಿ ಎಲ್ಲರೂ ಶ್ರಮಿಸಬೇಕು ಎಂದು ಮನವಿ ಮಾಡಿದರು. ಅಖಿಲ ಕೊಡವ ಸಮಾಜದ ವತಿಯಿಂದ ಏರ್ಪಡಿಸಲಾಗಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ದೇವಾಲಯದ ಭಕ್ತ ಜನ ಸಂಘದ ಅಧ್ಯಕ್ಷ ಕಾಂಡಂಡ ಜೋಯಪ್ಪ, ನೂತನ ಆರ್ಥಿಕ ಸಮಿತಿಯ ಗೌರವ ಕಾರ್ಯದರ್ಶಿ ಅಮ್ಮಣಿಚಂಡ ರಾಜ ನಂಜಪ್ಪ, ಪದಾಧಿಕಾರಿಗಳಾದ ಕೀತಿಯಂಡ ವಿಜಯಕುಮಾರ್( ಶರಿ), ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಬೊಳ್ಳೆರ ವಿನಯ್ ಅಪ್ಪಯ್ಯ, ಮಾಚಿಮಂಡ ರವೀಂದ್ರ ,ಬಾಚಿರ ಜಗದೀಶ್…

Read More

ಮಡಿಕೇರಿ ಜ.10 : ಅಂತರರಾಷ್ಟ್ರೀಯ ಸೇವಾ ಸಂಸ್ಥೆಯಾದ ರೋಟರಿಯು ಮಹಿಳೆಯರಿಗೆ ಆದ್ಯತೆ ನೀಡಿದ್ದು, ರೋಟರಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸದಸ್ಯೆಯರಾಗಿ ಸೇಪ೯ಡೆಯಾಗುತ್ತಿರುವುದು ಮಹತ್ವದ ವಿಚಾರವಾಗಿದೆ ಎಂದು ರೋಟರಿ ಜಿಲ್ಲೆ 3181 ನ ಗವನ೯ರ್ ಪ್ರಕಾಶ್ ಕಾರಂತ್ ಶ್ಲಾಘಿಸಿದ್ದಾರೆ. ಮಡಿಕೇರಿ ರೋಟರಿ ವುಡ್ಸ್ ಗೆ ಅಧಿಕೖತ ಭೇಟಿ ನೀಡಿ ಸಭಾ ಕಾಯ೯ಕ್ರಮ ಉದ್ಗಾಟಿಸಿ ಮಾತನಾಡಿದ ರೋಟರಿ ಜಿಲ್ಲಾ ಗವನ೯ರ್ ಪ್ರಕಾಶ್ ಕಾರಂತ್, ಪರಿಪೂಣ೯ತೆಯತ್ತ ಸಾಗಲು ಕಾಲದಿಂದ ಕಾಲಕ್ಕೆ ಬದಲಾವಣೆ ಅಗತ್ಯ. ರೋಟರಿಯು ಸದಾ ಬದಲಾವಣೆಗೆ ಒಗ್ಗುತ್ತಾ, ಅಂಥ ಬದಲಾವಣೆಗಳಿಗೆ ತಕ್ಕಂತೆ ತನ್ನ ಕಾಯ೯ಯೋಜನೆಗಳನ್ನು ರೂಪಿಸುತ್ತಿದೆ. ಮಹಿಳಾ ಸದಸ್ಯರನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸೇಪ೯ಡೆ ಮಾಡುತ್ತಾ ಮಹಿಳೆಯರಿಗೂ ಸೂಕ್ತ ಅವಕಾಶ ಕಲ್ಪಿಸುತ್ತಾ ಬಂದಿರುವ ರೋಟರಿಗೆ 117 ವಷ೯ಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಈ ವಷ೯ ಜೆನಿಫರ್ ಜೋನ್ಸ್ ಎಂಬ ಮಹಿಳೆಯೇ ಅಂತರರಾಷ್ಟ್ರೀಯ ಅಧ್ಯಕ್ಷೆಯಾಗಿ ನೇಮಕವಾಗಿ ಅತ್ಯಂತ ಸಶಕ್ತವಾಗಿ ಕಾಯ೯ನಿವ೯ಹಿಸುತ್ತಿರುವುದು ಶ್ಲಾಘನೀಯ ಮತ್ತು ಹೆಮ್ಮೆಯ ವಿಚಾರ. ಮಹಿಳೆಯರ ಸಮಾನ ಹಕ್ಕುಗಳಿಗೆ ರೋಟರಿಯು ಮನ್ನಣೆ ನೀಡಿದೆ. ಶೇ.30 ರಷ್ಟು…

Read More

ಮಡಿಕೇರಿ ಜ.10 : ಕೊಡಗು ಜಿಲ್ಲಾ ವ್ಯಾಪ್ತಿಯ ಹಾಗೂ ನೆರೆಯ ಜಿಲ್ಲೆಗಳ ದೇವಾಲಯಗಳಲ್ಲಿನ ಗಂಟೆಗಳನ್ನು ಕಳ್ಳತನ ಮಾಡುತ್ತಿದ್ದ ನಾಲ್ವರು ಅಂತರ ರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ವಿಶೇಷ ತಂಡ ಯಶಸ್ವಿಯಾಗಿದೆ. ಮೈಸೂರಿನ ಆರ್.ಎಸ್.ನಾಯ್ಡು ನಗರದ ಅಮ್ಜದ್ ಆಹಮ್ಮದ್ (37), ಅಜ್ಜು ಲೇಜೌಟ್ ನ ಸಮಿವುಲ್ಲಾ (22), ಹೈದರ್ (36) ಹಾಗೂ ಕೆಸರೆ ನಗರದ ಜುಲ್ಪಿಕರ್ (36) ಬಂಧಿತ ಆರೋಪಿಗಳು. ಕಳವು ಮಾಡಿದ ಸುಮಾರು 750 ಕೆ.ಜಿ.ತೂಕದ ವಿವಿಧ ಮಾದರಿಯ ಲೋಹದ ಗಂಟೆಗಳು ಹಾಗೂ 1 ಕಾರು ಸೇರಿದಂತೆ ಒಟ್ಟು ರೂ.10 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡು, ಆರೋಪಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಮಾಯಮುಡಿ ಕಮಟೆ ಶ್ರೀ ಮಹದೇವ ದೇವಸ್ಥಾನ, ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ನಿಟ್ಟೂರು ಕಾರ್ಮಾಡಿನ ಶ್ರೀ ಕಾಲಭೈರವೇಶ್ವರ ದೇವಸ್ಥಾನ, ಬಿಳೂರಿನ ಕಲ್ಲುಗುಡಿ ಶ್ರೀ ಈಶ್ವರ ದೇವಸ್ಥಾನ, ಬೆಸಗೂರಿನ ಶ್ರೀ ಮಹಾದೇವ ದೇವಸ್ಥಾನ…

Read More

ವಿರಾಜಪೇಟೆ ಜ.10 : ಗಡಿ ಭಾಗದಲ್ಲಿ ಸೂಕ್ತ ತಪಾಸಣೆ ಕೇಂದ್ರಗಳು ಇಲ್ಲದೆ ತೆರಿಗೆ ವಂಚಿಸಿ ರಾಜ್ಯ ಗಡಿ ಪ್ರವೇಶ ಮಾಡುವ ಅಂತರ್ ರಾಜ್ಯ ವಾಹನಗಳಿಂದ ರಾಜ್ಯ ಬೊಕ್ಕಸಕ್ಕೆ ನಷ್ಟ ಉಂಟಾಗುತ್ತಿದೆ. ಜಿಲ್ಲೆಯಲ್ಲಿ ಎಲ್ಲಾ ಗಡಿ ಭಾಗದಲ್ಲಿ ಆರ್.ಟಿ.ಓ. ತಪಾಸಣೆ ಕೇಂದ್ರವನ್ನು ಆರಂಭಿಸುವಂತೆ ಕರ್ನಾಟಕ ರಾಜ್ಯ ಟ್ಯಾಕ್ಸಿ ಡ್ರೈವರ್ಸ್ ಅಸೋಸಿಯೆಷನ್ ನ ಜಿಲ್ಲಾ ಶಾಖೆ ಒತ್ತಾಯಿಸಿದೆ. ಕರ್ನಾಟಕ ರಾಜ್ಯ ಟ್ಯಾಕ್ಸಿ ಡ್ರೈವರ್ಸ್ ಅಸೋಸಿಯೆಷನ್ ಕೊಡಗು ಜಿಲ್ಲಾ ಶಾಖೆಯ ವತಿಯಿಂದ ರಾಜ್ಯದ ಗಡಿಭಾಗವಾದ ವಿರಾಜಪೇಟೆ-ಪೆರುಂಬಾಡಿ ಪೊಲೀಸ್ ತಪಾಸಣೆ ಕೇಂದ್ರ ಬಳಿ ಜಿಲ್ಲಾ ಘಟಕದ ಮಾಜಿ ಗೌರವಧ್ಯಕ್ಷ ಎಂ.ಎ.ರಫೀಕ್ ಮಾತನಾಡಿ, ದಿನ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಜಿಲ್ಲೆಯ ಗಡಿದಾಟಿ ಪ್ರವಾಸಿ ವಾಹನಗಳು ಜಿಲ್ಲೆಗೆ ಮತ್ತು ರಾಜ್ಯ ಇತರ ಭಾಗಗಳಿಗೆ ತೆರಳುತ್ತವೆ. ಆಗಮಿಸುವ ಎಲ್ಲಾ ವಾಹನಗಳ ದಾಖಲೆಗಳನ್ನು ಪರಿಶೀಲನೆ ಮಾಡುವ ತಪಾಸಣೆ ಕೇಂದ್ರಗಳಿ ಇಲ್ಲದಿರುವುದು ನಮ್ಮ ದೌರ್ಬಲ್ಯವಾಗಿದೆ ಎಂದರು. ರಾಜ್ಯದ ತೆರಿಗೆಯನ್ನು ವಂಚಿಸಿ ಜಿಲ್ಲೆಗೆ ವಾಹನಗಳು ಬರುತ್ತಿರುವುದು ಇಲಾಖೆಯ ಗಮನಕ್ಕೆ ಬಂದರು ಮೌನ ವಹಿಸಿರುವುದು ಖಂಡನೀಯ. ಜಿಲ್ಲೆಯಲ್ಲಿ…

Read More

ಮಡಿಕೇರಿ ಜ.10 : ನರಿಯಂದಡ ಗ್ರಾ.ಪಂ  ವ್ಯಾಪ್ತಿಯ ಕರಡ ಗ್ರಾಮದ  ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಕಲಿಕಾ ಚೇತರಿಕೆಯ ಅಂಗವಾಗಿ ವಿ ಮಕ್ಕಳ ಸಂತೆ  ನಡೆಯಿತು. ಕಾರ್ಯಕ್ರಮವನ್ನು ಗ್ರಾ.ಪಂ ಸದಸ್ಯೆ ನೇತ್ರಾವತಿ ಉದ್ಘಾಟಿಸಿದರು. ವಿದ್ಯಾರ್ಥಿಗಳು ಬಗೆ ಬಗೆಯ ದಿನಸಿ ವಸ್ತುಗಳು, ತರಕಾರಿ ಮತ್ತಿತರ ವಸ್ತುಗಳನ್ನು ಮಾರಾಟ ಮಾಡಿ ಜನ ಮೆಚ್ಚುಗೆ ಗಳಿಸಿದರು. ಈ ಸಂದರ್ಭ  ಗ್ರಾ.ಪಂ  ಸದಸ್ಯ ವಿಲೀನ್ ಮಾತನಾಡಿ,  ಇಂತಹ ವಿನೂತನ ಕಾರ್ಯಕ್ರಮಗಳು ಶಾಲೆಯಲ್ಲಿ ಅಳವಡಿಸಿಕೊಳ್ಳುವುದರಿಂದ ಮಕ್ಕಳಲ್ಲಿ ವ್ಯಾಪಾರಕ್ಕೆ ಮತ್ತು ಗ್ರಾಹಕರ ನಡುವಿನ ಸಂಬಂಧವನ್ನು ಹೇಗೆ ಬೆಳೆಸಿಕೊಳ್ಳಬಹುದು ಎಂದು ತಿಳಿಯಲಾಗುವುದು ಎಂದರು.. ಶಾಲಾ ಮುಖ್ಯ ಶಿಕ್ಷಕಿ ಲೀಲಾವತಿ, ಸಹ ಶಿಕ್ಷಕ  ದಮಯಂತಿ, ಅಂಗನವಾಡಿ ಕಾರ್ಯಕರ್ತೆ ಲಿಬ್ರಾಹಿಂ, ಗ್ರಂಥಾಲಯ ಮೇಲ್ವಿಚಾರಕಿ ರಿನಿ ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ವರದಿ : ನೌಫಲ್ ಕಡಂಗ   

Read More

ಮಡಿಕೇರಿ ಜ.10 : ಪ್ರಸಕ್ತ (2022-23) ಸಾಲಿನ, 2 ವರ್ಷದ ಬಿ.ಇಡಿ ಕೋರ್ಸ್‍ಗೆ ಇಲಾಖಾ ವೆಬ್‍ಸೈಟ್ www.Schooleducation.nic.in ನಲ್ಲಿ ಪ್ರಕಟಿಸಲಾಗಿದ್ದು, ಈ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು, 2023 ರ ಜನವರಿ, 07 ರಿಂದ ಫೆಬ್ರವರಿ, 23 ರವರೆಗೆ ಕೂಡಿಗೆ ಡಯಟ್ ಇಲ್ಲಿ ಮೂಲ ದಾಖಲಾತಿಗಳೊಂದಿಗೆ ಅಭ್ಯರ್ಥಿಗಳು ತಮಗೆ ಸೂಚಿಸಿದ ದಿನಾಂಕದಂದು ಹಾಜರಾಗಿ ದಾಖಲಾತಿ ಪರಿಶೀಲಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಕೂಡಿಗೆಯ ಡಯಟ್ ಹಿರಿಯ ಉಪನ್ಯಾಸಕರಾದ ಸೋಮಲಿಂಗೇಗೌಡ(9902728234), ಉಪನ್ಯಾಸಕರಾದ ಹೇಮಂತ್ ಕುಮಾರ್ (9036365942), ವಿಜಯ್(8105360463) ರೇಣುಕಾ ಸಿ.ಎಲ್ (9740502601), ಗಾಯತ್ರಿ ಬಾಯಿ (9538649531) ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

Read More

ಮಡಿಕೇರಿ ಜ.10 : “ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯಲ್ಲಿ ಜ.12 ರಂದು ಮಧ್ಯಾಹ್ನ 2 ಗಂಟೆಯ ನಂತರ ಸ್ವಚ್ಛತಾ ಕಾರ್ಯದ ಪ್ರಯುಕ್ತ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಸಾರ್ವಜನಿಕ ಭಕ್ತಾದಿಗಳು ಸಹಕರಿಸಬೇಕೆಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ದೊರೆ ಎಂ.ಎಸ್.ಅವರು ಕೋರಿದ್ದಾರೆ.

Read More

ಮಡಿಕೇರಿ ಜ.10 : ಪ್ರಸಕ್ತ(2022-23) ಸಾಲಿನ ಡಿಸೆಂಬರ್ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯು ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರ ಅಧ್ಯಕ್ಷತೆಯಲ್ಲಿ ಜ.18 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ತಿಳಿಸಿದ್ದಾರೆ.

Read More

ಕುಶಾಲನಗರ ಜ.10 : ಕೊಡವ ಸಂಸ್ಕೃತಿ ಆಚಾರ, ವಿಚಾರ, ಪದ್ಧತಿ ಮತ್ತು ಪರಂಪರೆಯನ್ನು ಆಚರಿಸುವ ಮೂಲಕ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕೆಲಸ ಆಗಬೇಕಾಗಿದೆ ಎಂದು ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹೇಳಿದರು. ಕುಶಾಲನಗರ ಕೊಡವ ಸಮಾಜದ ಆಶ್ರಯದಲ್ಲಿ ಪುತ್ತರಿ ಒತ್ತೊರ್ಮೆ ಕೂಟ ಉದ್ಘಾಟಿಸಿ ಮಾತನಾಡಿದ ಅವರು, ಯುವಪೀಳಿಗೆ ಆಧುನಿಕತೆಯಕಡೆಗೆ ಮಾರುಹೋಗಿ ಕೊಡವ ಮೂಲ ಸಂಸ್ಕೃತಿಯನ್ನು ಮರೆಯುವ ಪರಿಸ್ಥಿತಿ ಎದುರಾಗುತ್ತಿದೆ. ಯುವಜನಾಂಗಕ್ಕೆ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಿ ಮಾರ್ಗದರ್ಶನ ನೀಡುವಂತಾಗಬೇಕು. ಕೊಡವ ಸಂಸ್ಕೃತಿಯ ಮಹತ್ವವನ್ನು ತಿಳಿಸಿ, ಉಳಿಸಿ ಬೆಳೆಸಲು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಉದ್ಯಮಿಚೇಂದಂಡಜೆಮ್ಸಿ ಪೊನ್ನಪ್ಪ ಮಾತನಾಡಿ, ಕುಶಾಲನಗರಕೊಡವ ಸಮಾಜದಲ್ಲಿ ಸದಸ್ಯರ ಸಂಖ್ಯೆಏರಿಕೆಯಾಗಿದ್ದು, ಸಮುದಾಯದ ಕಾರ್ಯಕ್ರಮಗಳಿಗೆ ಪ್ರತ್ಯೇಕಕಟ್ಟಡದಅವಶ್ಯಕತೆಇದೆ ಈ ಹಿನ್ನಲೆಯಲ್ಲಿ ವಿಶಾಲವಾದಜಾಗ ಖರೀದಿಸಿ ಅತ್ಯಾಧುನಿಕಕಟ್ಟಡ ನಿರ್ಮಾಣ ಮಾಡಬೇಕೆಂದು ಸಲಹೆ ನೀಡಿದರು. ಹಿರಿಯರುಕಿರಿಯರಿಗೆ ಸಂಸ್ಕೃತಿ ಹೇಳಿಕೊಡುವ ಮೂಲಕ ಕೊಡವ ಸಂಸ್ಕೃತಿಯನ್ನು ಉಳಿಸಲು ಪ್ರಯತ್ನಿಸಬೇಕುಎಂದರು. ಕೊಡವ ಸಮಾಜದ ಅಧ್ಯಕ್ಷ ಮಂಡೆಪಂಡ ಬೋಸ್ ಮೊಣ್ಣಪ್ಪ ಮಾತನಾಡಿ, ಕೊಡವ ಸಮಾಜದ ಮೂಲಕ ನಿರಂತರವಾಗಿ…

Read More

ಕುಶಾಲನಗರ ಜ.10 : ಕುಶಾಲನಗರ ತಾಲೂಕಿನ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ಥಿರ-ಚರ ಆಸ್ತಿಗಳ ದಾಖಲೆಗಳನ್ನು ಕುಶಾಲನಗರ ಪುರಸಭೆಗೆ ಹಸ್ತಾಂತರಿಸಲಾಯಿತು. ಮುಳ್ಳುಸೋಗೆ ಗ್ರಾ.ಪಂ ಅಭಿವೃದ್ಧಿಅಧಿಕಾರಿ ಸುಮೇಶ್, ಸೋಮವಾರದಾಖಲೆ ಕಡತಗಳೊಂದಿಗೆ ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಶಿವಪ್ಪ ನಾಯ್ಕ್‍ಅವರಿಗೆ ಹಸ್ತಾಂತರಿಸಿದರು. ಹಸ್ತಾಂತರ ಸಂದರ್ಭತಾಲೂಕು ಪಂಚಾಯಿತಿಕಾರ್ಯನಿರ್ವಹಣಾಧಿಕಾರಿಜಯಣ್ಣ, ಸಹಾಯಕ ನಿರ್ದೇಶಕರವೀಶ್ ಮತ್ತು ಪಂಚಾಯಿತಿ ಸಿಬ್ಬಂದಿಗಳು ಇದ್ದರು.

Read More