ಮಡಿಕೇರಿ ಜ.10 : ಕೊಡಗು ಜಿಲ್ಲಾ ವ್ಯಾಪ್ತಿಯ ಹಾಗೂ ನೆರೆಯ ಜಿಲ್ಲೆಗಳ ದೇವಾಲಯಗಳಲ್ಲಿನ ಗಂಟೆಗಳನ್ನು ಕಳ್ಳತನ ಮಾಡುತ್ತಿದ್ದ ನಾಲ್ವರು ಅಂತರ ರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ವಿಶೇಷ ತಂಡ ಯಶಸ್ವಿಯಾಗಿದೆ. ಮೈಸೂರಿನ ಆರ್.ಎಸ್.ನಾಯ್ಡು ನಗರದ ಅಮ್ಜದ್ ಆಹಮ್ಮದ್ (37), ಅಜ್ಜು ಲೇಜೌಟ್ ನ ಸಮಿವುಲ್ಲಾ (22), ಹೈದರ್ (36) ಹಾಗೂ ಕೆಸರೆ ನಗರದ ಜುಲ್ಪಿಕರ್ (36) ಬಂಧಿತ ಆರೋಪಿಗಳು. ಕಳವು ಮಾಡಿದ ಸುಮಾರು 750 ಕೆ.ಜಿ.ತೂಕದ ವಿವಿಧ ಮಾದರಿಯ ಲೋಹದ ಗಂಟೆಗಳು ಹಾಗೂ 1 ಕಾರು ಸೇರಿದಂತೆ ಒಟ್ಟು ರೂ.10 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡು, ಆರೋಪಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಮಾಯಮುಡಿ ಕಮಟೆ ಶ್ರೀ ಮಹದೇವ ದೇವಸ್ಥಾನ, ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ನಿಟ್ಟೂರು ಕಾರ್ಮಾಡಿನ ಶ್ರೀ ಕಾಲಭೈರವೇಶ್ವರ ದೇವಸ್ಥಾನ, ಬಿಳೂರಿನ ಕಲ್ಲುಗುಡಿ ಶ್ರೀ ಈಶ್ವರ ದೇವಸ್ಥಾನ, ಬೆಸಗೂರಿನ ಶ್ರೀ ಮಹಾದೇವ ದೇವಸ್ಥಾನ…
ಲೇಖಕ: admin
ವಿರಾಜಪೇಟೆ ಜ.10 : ಗಡಿ ಭಾಗದಲ್ಲಿ ಸೂಕ್ತ ತಪಾಸಣೆ ಕೇಂದ್ರಗಳು ಇಲ್ಲದೆ ತೆರಿಗೆ ವಂಚಿಸಿ ರಾಜ್ಯ ಗಡಿ ಪ್ರವೇಶ ಮಾಡುವ ಅಂತರ್ ರಾಜ್ಯ ವಾಹನಗಳಿಂದ ರಾಜ್ಯ ಬೊಕ್ಕಸಕ್ಕೆ ನಷ್ಟ ಉಂಟಾಗುತ್ತಿದೆ. ಜಿಲ್ಲೆಯಲ್ಲಿ ಎಲ್ಲಾ ಗಡಿ ಭಾಗದಲ್ಲಿ ಆರ್.ಟಿ.ಓ. ತಪಾಸಣೆ ಕೇಂದ್ರವನ್ನು ಆರಂಭಿಸುವಂತೆ ಕರ್ನಾಟಕ ರಾಜ್ಯ ಟ್ಯಾಕ್ಸಿ ಡ್ರೈವರ್ಸ್ ಅಸೋಸಿಯೆಷನ್ ನ ಜಿಲ್ಲಾ ಶಾಖೆ ಒತ್ತಾಯಿಸಿದೆ. ಕರ್ನಾಟಕ ರಾಜ್ಯ ಟ್ಯಾಕ್ಸಿ ಡ್ರೈವರ್ಸ್ ಅಸೋಸಿಯೆಷನ್ ಕೊಡಗು ಜಿಲ್ಲಾ ಶಾಖೆಯ ವತಿಯಿಂದ ರಾಜ್ಯದ ಗಡಿಭಾಗವಾದ ವಿರಾಜಪೇಟೆ-ಪೆರುಂಬಾಡಿ ಪೊಲೀಸ್ ತಪಾಸಣೆ ಕೇಂದ್ರ ಬಳಿ ಜಿಲ್ಲಾ ಘಟಕದ ಮಾಜಿ ಗೌರವಧ್ಯಕ್ಷ ಎಂ.ಎ.ರಫೀಕ್ ಮಾತನಾಡಿ, ದಿನ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಜಿಲ್ಲೆಯ ಗಡಿದಾಟಿ ಪ್ರವಾಸಿ ವಾಹನಗಳು ಜಿಲ್ಲೆಗೆ ಮತ್ತು ರಾಜ್ಯ ಇತರ ಭಾಗಗಳಿಗೆ ತೆರಳುತ್ತವೆ. ಆಗಮಿಸುವ ಎಲ್ಲಾ ವಾಹನಗಳ ದಾಖಲೆಗಳನ್ನು ಪರಿಶೀಲನೆ ಮಾಡುವ ತಪಾಸಣೆ ಕೇಂದ್ರಗಳಿ ಇಲ್ಲದಿರುವುದು ನಮ್ಮ ದೌರ್ಬಲ್ಯವಾಗಿದೆ ಎಂದರು. ರಾಜ್ಯದ ತೆರಿಗೆಯನ್ನು ವಂಚಿಸಿ ಜಿಲ್ಲೆಗೆ ವಾಹನಗಳು ಬರುತ್ತಿರುವುದು ಇಲಾಖೆಯ ಗಮನಕ್ಕೆ ಬಂದರು ಮೌನ ವಹಿಸಿರುವುದು ಖಂಡನೀಯ. ಜಿಲ್ಲೆಯಲ್ಲಿ…
ಮಡಿಕೇರಿ ಜ.10 : ನರಿಯಂದಡ ಗ್ರಾ.ಪಂ ವ್ಯಾಪ್ತಿಯ ಕರಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಕಲಿಕಾ ಚೇತರಿಕೆಯ ಅಂಗವಾಗಿ ವಿ ಮಕ್ಕಳ ಸಂತೆ ನಡೆಯಿತು. ಕಾರ್ಯಕ್ರಮವನ್ನು ಗ್ರಾ.ಪಂ ಸದಸ್ಯೆ ನೇತ್ರಾವತಿ ಉದ್ಘಾಟಿಸಿದರು. ವಿದ್ಯಾರ್ಥಿಗಳು ಬಗೆ ಬಗೆಯ ದಿನಸಿ ವಸ್ತುಗಳು, ತರಕಾರಿ ಮತ್ತಿತರ ವಸ್ತುಗಳನ್ನು ಮಾರಾಟ ಮಾಡಿ ಜನ ಮೆಚ್ಚುಗೆ ಗಳಿಸಿದರು. ಈ ಸಂದರ್ಭ ಗ್ರಾ.ಪಂ ಸದಸ್ಯ ವಿಲೀನ್ ಮಾತನಾಡಿ, ಇಂತಹ ವಿನೂತನ ಕಾರ್ಯಕ್ರಮಗಳು ಶಾಲೆಯಲ್ಲಿ ಅಳವಡಿಸಿಕೊಳ್ಳುವುದರಿಂದ ಮಕ್ಕಳಲ್ಲಿ ವ್ಯಾಪಾರಕ್ಕೆ ಮತ್ತು ಗ್ರಾಹಕರ ನಡುವಿನ ಸಂಬಂಧವನ್ನು ಹೇಗೆ ಬೆಳೆಸಿಕೊಳ್ಳಬಹುದು ಎಂದು ತಿಳಿಯಲಾಗುವುದು ಎಂದರು.. ಶಾಲಾ ಮುಖ್ಯ ಶಿಕ್ಷಕಿ ಲೀಲಾವತಿ, ಸಹ ಶಿಕ್ಷಕ ದಮಯಂತಿ, ಅಂಗನವಾಡಿ ಕಾರ್ಯಕರ್ತೆ ಲಿಬ್ರಾಹಿಂ, ಗ್ರಂಥಾಲಯ ಮೇಲ್ವಿಚಾರಕಿ ರಿನಿ ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ವರದಿ : ನೌಫಲ್ ಕಡಂಗ
ಮಡಿಕೇರಿ ಜ.10 : ಪ್ರಸಕ್ತ (2022-23) ಸಾಲಿನ, 2 ವರ್ಷದ ಬಿ.ಇಡಿ ಕೋರ್ಸ್ಗೆ ಇಲಾಖಾ ವೆಬ್ಸೈಟ್ www.Schooleducation.nic.in ನಲ್ಲಿ ಪ್ರಕಟಿಸಲಾಗಿದ್ದು, ಈ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು, 2023 ರ ಜನವರಿ, 07 ರಿಂದ ಫೆಬ್ರವರಿ, 23 ರವರೆಗೆ ಕೂಡಿಗೆ ಡಯಟ್ ಇಲ್ಲಿ ಮೂಲ ದಾಖಲಾತಿಗಳೊಂದಿಗೆ ಅಭ್ಯರ್ಥಿಗಳು ತಮಗೆ ಸೂಚಿಸಿದ ದಿನಾಂಕದಂದು ಹಾಜರಾಗಿ ದಾಖಲಾತಿ ಪರಿಶೀಲಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಕೂಡಿಗೆಯ ಡಯಟ್ ಹಿರಿಯ ಉಪನ್ಯಾಸಕರಾದ ಸೋಮಲಿಂಗೇಗೌಡ(9902728234), ಉಪನ್ಯಾಸಕರಾದ ಹೇಮಂತ್ ಕುಮಾರ್ (9036365942), ವಿಜಯ್(8105360463) ರೇಣುಕಾ ಸಿ.ಎಲ್ (9740502601), ಗಾಯತ್ರಿ ಬಾಯಿ (9538649531) ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ಮಡಿಕೇರಿ ಜ.10 : “ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯಲ್ಲಿ ಜ.12 ರಂದು ಮಧ್ಯಾಹ್ನ 2 ಗಂಟೆಯ ನಂತರ ಸ್ವಚ್ಛತಾ ಕಾರ್ಯದ ಪ್ರಯುಕ್ತ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಸಾರ್ವಜನಿಕ ಭಕ್ತಾದಿಗಳು ಸಹಕರಿಸಬೇಕೆಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ದೊರೆ ಎಂ.ಎಸ್.ಅವರು ಕೋರಿದ್ದಾರೆ.
ಮಡಿಕೇರಿ ಜ.10 : ಪ್ರಸಕ್ತ(2022-23) ಸಾಲಿನ ಡಿಸೆಂಬರ್ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯು ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರ ಅಧ್ಯಕ್ಷತೆಯಲ್ಲಿ ಜ.18 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ತಿಳಿಸಿದ್ದಾರೆ.
ಕುಶಾಲನಗರ ಜ.10 : ಕೊಡವ ಸಂಸ್ಕೃತಿ ಆಚಾರ, ವಿಚಾರ, ಪದ್ಧತಿ ಮತ್ತು ಪರಂಪರೆಯನ್ನು ಆಚರಿಸುವ ಮೂಲಕ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕೆಲಸ ಆಗಬೇಕಾಗಿದೆ ಎಂದು ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹೇಳಿದರು. ಕುಶಾಲನಗರ ಕೊಡವ ಸಮಾಜದ ಆಶ್ರಯದಲ್ಲಿ ಪುತ್ತರಿ ಒತ್ತೊರ್ಮೆ ಕೂಟ ಉದ್ಘಾಟಿಸಿ ಮಾತನಾಡಿದ ಅವರು, ಯುವಪೀಳಿಗೆ ಆಧುನಿಕತೆಯಕಡೆಗೆ ಮಾರುಹೋಗಿ ಕೊಡವ ಮೂಲ ಸಂಸ್ಕೃತಿಯನ್ನು ಮರೆಯುವ ಪರಿಸ್ಥಿತಿ ಎದುರಾಗುತ್ತಿದೆ. ಯುವಜನಾಂಗಕ್ಕೆ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಿ ಮಾರ್ಗದರ್ಶನ ನೀಡುವಂತಾಗಬೇಕು. ಕೊಡವ ಸಂಸ್ಕೃತಿಯ ಮಹತ್ವವನ್ನು ತಿಳಿಸಿ, ಉಳಿಸಿ ಬೆಳೆಸಲು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಉದ್ಯಮಿಚೇಂದಂಡಜೆಮ್ಸಿ ಪೊನ್ನಪ್ಪ ಮಾತನಾಡಿ, ಕುಶಾಲನಗರಕೊಡವ ಸಮಾಜದಲ್ಲಿ ಸದಸ್ಯರ ಸಂಖ್ಯೆಏರಿಕೆಯಾಗಿದ್ದು, ಸಮುದಾಯದ ಕಾರ್ಯಕ್ರಮಗಳಿಗೆ ಪ್ರತ್ಯೇಕಕಟ್ಟಡದಅವಶ್ಯಕತೆಇದೆ ಈ ಹಿನ್ನಲೆಯಲ್ಲಿ ವಿಶಾಲವಾದಜಾಗ ಖರೀದಿಸಿ ಅತ್ಯಾಧುನಿಕಕಟ್ಟಡ ನಿರ್ಮಾಣ ಮಾಡಬೇಕೆಂದು ಸಲಹೆ ನೀಡಿದರು. ಹಿರಿಯರುಕಿರಿಯರಿಗೆ ಸಂಸ್ಕೃತಿ ಹೇಳಿಕೊಡುವ ಮೂಲಕ ಕೊಡವ ಸಂಸ್ಕೃತಿಯನ್ನು ಉಳಿಸಲು ಪ್ರಯತ್ನಿಸಬೇಕುಎಂದರು. ಕೊಡವ ಸಮಾಜದ ಅಧ್ಯಕ್ಷ ಮಂಡೆಪಂಡ ಬೋಸ್ ಮೊಣ್ಣಪ್ಪ ಮಾತನಾಡಿ, ಕೊಡವ ಸಮಾಜದ ಮೂಲಕ ನಿರಂತರವಾಗಿ…
ಕುಶಾಲನಗರ ಜ.10 : ಕುಶಾಲನಗರ ತಾಲೂಕಿನ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ಥಿರ-ಚರ ಆಸ್ತಿಗಳ ದಾಖಲೆಗಳನ್ನು ಕುಶಾಲನಗರ ಪುರಸಭೆಗೆ ಹಸ್ತಾಂತರಿಸಲಾಯಿತು. ಮುಳ್ಳುಸೋಗೆ ಗ್ರಾ.ಪಂ ಅಭಿವೃದ್ಧಿಅಧಿಕಾರಿ ಸುಮೇಶ್, ಸೋಮವಾರದಾಖಲೆ ಕಡತಗಳೊಂದಿಗೆ ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಶಿವಪ್ಪ ನಾಯ್ಕ್ಅವರಿಗೆ ಹಸ್ತಾಂತರಿಸಿದರು. ಹಸ್ತಾಂತರ ಸಂದರ್ಭತಾಲೂಕು ಪಂಚಾಯಿತಿಕಾರ್ಯನಿರ್ವಹಣಾಧಿಕಾರಿಜಯಣ್ಣ, ಸಹಾಯಕ ನಿರ್ದೇಶಕರವೀಶ್ ಮತ್ತು ಪಂಚಾಯಿತಿ ಸಿಬ್ಬಂದಿಗಳು ಇದ್ದರು.
ಮಡಿಕೇರಿ ಜ.9 : ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ತ್ರೈಮಾಸಿಕ ಸಭೆ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಂಡಳಿ ಕಚೇರಿ ವನವಿಕಾಸ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಕೊಡಗು ಜಿಲ್ಲೆಯಲ್ಲಿ ಔಷಧೀಯ ಸಸ್ಯಗಳ ಉದ್ಯಾನ ನಿರ್ಮಾಣ ಸಂಬಂಧ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಹಿಂದಿನ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಪ್ರಗತಿ ಬಗ್ಗೆ ಅಧ್ಯಕ್ಷರು ಮಾಹಿತಿ ಪಡೆದುಕೊಂಡರು. ಆರ್ಥಿಕ ವರಾಂತ್ಯದವರೆಗೆ ಹಮ್ಮಿಕೊಳ್ಳಬಹುದಾದ ಕಾರ್ಯಕ್ರಮಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಮುಂದಿನ ಆರ್ಥಿಕ ವರ್ಷದಲ್ಲಿ ಹೆಚ್ಚಿನ ಅನುದಾನಕ್ಕಾಗಿ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿ, ಅರ್ಥಪೂರ್ಣ ಕಾರ್ಯಕ್ರಮ ಹಮ್ಮಿಕೊಳ್ಳುವ ಸಂಬಂಧ ಮಂಡಳಿ ಸದಸ್ಯರು ಸಲಹೆ ನೀಡಿದರು. ಸನ್ಮಾನ : ಸಭೆ ಆರಂಭಕ್ಕೂ ಮುನ್ನ ರಾಜ್ಯ ಅರಣ್ಯ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಮತ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕಿ ರಾಧಾದೇವಿ ಅವರನ್ನು ಸನ್ಮಾನಿಸಲಾಯಿತು. ಮಂಡಳಿಯ ಕಾರ್ಯಚಟುವಟಿಕೆಗಳಿಗೆ ಸಹಕಾರ ನೀಡಿದಕ್ಕಾಗಿ ಸನ್ಮಾನಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮಂಡಳಿ ಸದಸ್ಯ ಕಾರ್ಯದರ್ಶಿ ಅನಿತ…
ಮಡಿಕೇರಿ ಜ.9 : “ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ಜನವರಿ, 10 ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 66/11 ಕೆವಿ ಪೊನ್ನಂಪೇಟೆ, 66/11 ಕೆವಿ, ವಿರಾಜಪೇಟೆ, 33/11 ಕೆವಿ, ಶ್ರೀಮಂಗಲ, 33/11 ಕೆವಿ, ಸಿದ್ದಾಪುರ 33/11ಕೆವಿ ಮೂರ್ನಾಡು ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ ವಿರಾಜಪೇಟೆ, ಬಿ ಶೆಟ್ಟಗೇರಿ, ಬೇತ್ರೀ, ಕಡಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.






