ಲೇಖಕ: admin

ಚೆಯ್ಯಂಡಾಣೆ , ಮಾ 14 :   ಸುನ್ನೀ ಯುವ ಜನ ಸಂಘ (ಎಸ್ ವೈ ಎಸ್) ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ಮಾ.15 ರಂದು  “ಪರಂಪರೆಯ ಪ್ರತಿನಿಧಿಗಳಾಗೋಣ”ಎಂಬ ಧ್ಯೇಯವಾಕ್ಯದೊಂದಿಗೆ ಎಸ್ ವೈ ಎಸ್ ಜಿಲ್ಲಾ ಪ್ರತಿನಿಧಿ ಸಮಾವೇಶ  ನಡೆಯಲಿದೆ. ಅಂದು ಪೂರ್ವಹ್ನ    11 ಗಂಟೆಗೆ ಕುಶಾಲನಗರದ ಬಿಜಿಟಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು,   ಎಸ್ ವೈ ಎಸ್ ರಾಜ್ಯ ಕಾರ್ಯದರ್ಶಿ ಅಬ್ದುಲ್ ಹಫೀಲ್ ಸಅದಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕೊಡಗು ಜಿಲ್ಲಾ ಎಸ್ ವೈ ಎಸ್ ಅಧ್ಯಕ್ಷ ಇಲ್ಯಾಸ್ ಅಲ್ ಹೈದರೂಸಿ ತಂಗಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಪರಾಹ್ನ 2.30ಕ್ಕೆ  ಜಿಲ್ಲೆಗೆ ಆಯ್ಕೆಯಾದ ಕೌನ್ಸಿಲರ್ ಗಳಿಗೆ ಕೌನ್ಸಿಲರ್ಸ್ ಮೀಟ್ ನಡೆಯಲಿದ್ದು,  ಕೂರ್ಗ್ ಜಂಇಯತ್ತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಹ್ಸನಿ ಅನ್ವಾರುಲ್ ಹುದಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ನಾಇಬ್ ಖಾಝಿ ಶಾದುಲಿ ಫೈಝಿ ವಹಿಸಲಿದ್ದು, ಪ್ರತಿನಿಧಿ ಸಮಾವೇಶದಲ್ಲಿ ಅಬೂಬಕ್ಕರ್ ಫೈಝಿ ಕುಂಬಡಾಜೆ ತರಬೇತಿ ನೀಡಲಿದ್ದಾರೆ. ಮುಖ್ಯ ಅತಿಥಿಯಾಗಿ ಕೊಡಗು ಜಿಲ್ಲಾ ಮುಸ್ಲಿಂ…

Read More

ಸೋಮವಾರಪೇಟೆ ಮಾ.14 : ಪಟ್ಟಣದ ಶ್ರೀಮುತ್ತಪ್ಪ ಸ್ವಾಮಿ ಹಾಗೂ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಜಾತ್ರಾ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಶ್ರೀ ಮುತ್ತಪ್ಪ ಸ್ವಾಮಿ ಹಾಗೂ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ಮಣಿಕಂಠನ್ ನಂಬೂದರಿ ಅವರ ನೇತೃತ್ವದಲ್ಲಿ ಗಣಪತಿಹೋಮದೊಂದಿಗೆ  ವಿವಿಧ ಪೂಜಾ ವಿಧಿವಿಧಾನಗಳು ನೆರವೇರಿತು. ನಂತರ ಅಧ್ಯಕ್ಷ ಎನ್.ಡಿ.ವಿನೋದ್‍ ಕುಮಾರ್ ಧ್ವಜಾರೋಹಣ ನೆರವೇರಿಸಿದರು. ಸಂಜೆ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಕೇರಳದ ಕೊಳಪುರಂ ಮನಹಿಲ್ಲಂ ತಂತ್ರಿಗಳಾದ ಕೃಷ್ಣಕುಮಾರ್ ಅವರ ನೇತೃತ್ವದಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ವಿಶೇಷ ಆಶ್ಲೇಷ ಪೂಜೆ  ಜರುಗಿದವು. ನಂತರ ನೂತನವಾಗಿ ನಿರ್ಮಿಸಿರುವ ಅನ್ನದಾನ ಮಂಟಪವನ್ನು ಶಾಸಕ ಅಪ್ಪಚ್ಚುರಂಜನ್‍  ಅವರು ದೀಪ ಬೆಳಗುವುದರ ಮೂಲಕ ಲೋಕಾರ್ಪಣೆ ಮಾಡಿದರು. ಈ ಸಂದರ್ಭ  ಚೌಡ್ಲು ಗ್ರಾ.ಪಂ ಅಧ್ಯಕ್ಷ ಪಿ.ಎಂ.ಗಣಪತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಪಾಲ್ಗೊಂಡಿದ್ದರು. ಅಧ್ಯಕ್ಷತೆಯನ್ನು ಶ್ರೀಮುತ್ತಪ್ಪಸ್ವಾಮಿ ಹಾಗೂ ಅಯ್ಯಪ್ಪಸ್ವಾಮಿ ದೇವಾಲಯದ ಅಧ್ಯಕ್ಷ ಎನ್.ಡಿ.ವಿನೋದ್‍ಕುಮಾರ್ ವಹಿಸಿದ್ದರು. ಸೋಮವಾರದಂದು ಮಧ್ಯಾಹ್ನ  ಉತ್ಸವ ಆರಂಭಗೊಂಡಿತು. ಸಂಜೆ ಶ್ರೀಮುತ್ತಪ್ಪ ದೇವರ ವೆಳ್ಳಾಟಂ…

Read More

ನಾಪೋಕ್ಲು ಮಾ.14 : ಮಾರುಕಟ್ಟೆ ಆವರಣದಲ್ಲಿ ಸಂತೆಯ ದಿನವಾದ ಸೋಮವಾರ ಸಾರ್ವಜನಿಕರಿಗೆ ಮತದಾನದ ಅರಿವು ಮೂಡಿಸಲಾಯಿತು. 18 ವರ್ಷ ಮೇಲ್ಪಟ್ಟ ಯುವಕ, ಯುವತಿಯರು ಮತದಾನದಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು, ಎಲ್ಲರೂ ತಮ್ಮ ಹಕ್ಕನ್ನು ಚಲಾಯಿಸಿ ಯೋಗ್ಯ ಜನಪ್ರತಿಧಿಗಳನ್ನು ಆಯ್ಕೆ ಮಾಡುವಂತೆ ಅಧಿಕಾರಿಗಳು ಕೋರಿದರು. ಈ ಸಂದರ್ಭ ವಿದ್ಯುನ್ಮಾನ ಯಂತ್ರಗಳನ್ನು ಬಳಸಿ ಮತ ಚಲಾಯಿಸುವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ನಾಪೋಕ್ಲು ಸೆಕ್ಟರ್ ಅಧಿಕಾರಿ ಪ್ರಮೋದ್ ಹಾಗೂ ಮುರುಗೇಶ್, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ, ಕಂದಾಯ ಪರಿವೀಕ್ಷಕ, ರವಿಕುಮಾರ್, ಗ್ರಾಮ ಸೇವಕರಾದ ಪ್ರಸಾದ್ ಹಾಗೂ ಲಾಲು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.  

Read More

ಧರ್ಮಸ್ಥಳ ಮಾ.14 : ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ವಾರ್ಷಿಕ ಬ್ರಹ್ಮಕಲಶದ ನಿಮಿತ್ತ ದೇವರ ದರ್ಶನದ ಸಮಯದಲ್ಲಿ ವ್ಯತ್ಯಾಸವಾಗಲಿದೆ. ಮಾ.16 ರಂದು ರಾತ್ರಿ 8 ರಿಂದ ಹೊರಾಂಗಣದಿಂದ ಮಾತ್ರ ದೇವರ ದರ್ಶನಕ್ಕೆ ಅವಕಾಶವಿದೆ. ಮಾ.18 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಹೊರಾಂಗಣದಿಂದ ಮಾತ್ರ ದೇವರ ದರ್ಶನಕ್ಕೆ ಅವಕಾಶವಿದೆ.

Read More

ಮಡಿಕೇರಿ ಮಾ.14 : ಕಂಡಕರೆ ಗಾಂಧಿ ಯುವಕ ಸಂಘದ  ವತಿಯಿಂದ ಕೊಡಗು ಜಿಲ್ಲೆಯಲ್ಲೇ ಮೊದಲ ಬಾರಿಗೆ ಸರ್ವಧರ್ಮೀಯ ಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಕಾರ್ಯಕ್ರಮ ಇದೇ ವರ್ಷ ನಡೆಯಲಿದ್ದು, ಇದರ ಪ್ರಚಾರ ಕಾರ್ಯಕಮದ ಪೋಸ್ಟರ್ ಬಿಡುಗಡೆಯನ್ನು ಮಾಜಿ ಸಚಿವ, ಶಾಸಕ, ಕರ್ನಾಟಕ ವಿಧಾನಸಭಾ ವಿರೋಧ ಪಕ್ಷದ ಉಪನಾಯಕ ಯು.ಟಿ ಖಾದರ್ ಹಾಗೂ ವಿರಾಜಪೇಟೆ  ಅರಮೇರಿ ಶ್ರೀ ಕಳಂಚೇರಿ ಮಠದ ಮಠಾಧಿಪತಿ  ಶ್ರೀ  ಶಾಂತಮಲ್ಲಿ ಕಾರ್ಜುನ ಸ್ವಾಮೀಜಿ  ನಲ್ವತ್ತೇಕರೆಯಲ್ಲಿ ಪೀಪಲ್ಸ್ ವಿಲೇಜ್ ಮನೆ ಹಸ್ತಾಂತರ ಕಾರ್ಯಕ್ರಮದ ಸಂದರ್ಭದಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭ ಗಾಂಧಿ ಯುವಕ‌ ಸಂಘದ ವಿನೂತನ ಕಾರ್ಯಕ್ರಮಕ್ಕೆ ಶಾಸಕ ಯು.ಟಿ ಖಾದರ್ ಶುಭಕೋರಿ ಕಾರ್ಯಕ್ರಮಕ್ಕೆ  ಆಗಮಿಸುವುದಾಗಿ ಭರವಸೆ ನೀಡಿದರು. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಗಾಂಧಿ ಯುವಕ ಸಂಘದ ಸಮಾಜಮುಖಿ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಈ ಸಂದರ್ಭ ಕಾಂಗ್ರೆಸ್ ಯುವ ಮುಖಂಡ ಡಾ.ಮಂಥರ್ ಗೌಡ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ ಶಶಿಧರ್, ಅಜೀಜ್ ನೆಲ್ಲಿಹುದಿಕೇರಿ, ನೆಲ್ಲಿಹುದಿಕೇರಿ ಗ್ರಾ.ಪಂ ಅಧ್ಯಕ್ಷ…

Read More

ನಾಪೋಕ್ಲು ಮಾ.14 : ಹಳೇ ತಾಲೂಕಿನ ಮನೆಯೊಂದರ ಪಕ್ಕದಲ್ಲಿರುವ ಕಾಫಿಗಿಡದಲ್ಲಿದ್ದ  ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರುಗ ತಜ್ಞ ಮೂರ್ನಾಡಿನ ಪ್ರಜ್ವಲ್ ಕುಮಾರ್ ಸುರಕ್ಷಿತವಾಗಿ ಸೆರೆ ಹಿಡಿದು ರಕ್ಷಣೆ ಮಾಡಿದ್ದಾರೆ. ಹಳೇ ತಾಲೂಕು ನಿವಾಸಿ ಕುಂದೈರೀರ ಸತೀಶ್ ಎಂಬುವವರ ಮನೆಯ ಪಕ್ಕದಲ್ಲಿರುವ ತೋಟದ ಕಾಫಿಗಿಡದ ಮೇಲಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಅಸ್ಸಾಂ ಕಾರ್ಮಿಕರು ಕಂಡು ಸತೀಶ್ ಅವರಿಗೆ ತಿಳಿಸಿದ್ದಾರೆ. ಹಾವನ್ನು ವೀಕ್ಷಿಸಿದ ಮನೆಯವರು ಭಯಭೀತರಾಗಿ ಉರಗ ತಜ್ಞ ಪ್ರಜ್ವಲ್ ಅವರಿಗೆ ಮಾಹಿತಿನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪ್ರಜ್ವಲ್ ಹಾಗೂ ಸ್ನೇಹಿತರು ಹರಸಾಹಸದಿಂದ ಕಾಫಿಗಿಡದ ಮೇಲಿದ್ದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾದರು. ಹಾವನ್ನು ಮಾಕುಟ್ಟ ಅರಣ್ಯಕ್ಕೆ ಬಿಡಲಾಗುವುದೆಂದು ಪ್ರಜ್ವಲ್ ತಿಳಿಸಿದರು. ಅಪಾರ ಸಂಖ್ಯೆಯಲ್ಲಿ ಗ್ರಾಮಸ್ಥರು ಸೇರಿರುವ ಬಗ್ಗೆ ಮಾಹಿತಿ ತಿಳಿದ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮಾಹಿತಿ ಪಡೆದರು. ಈ ಸಂದರ್ಭ ಪ್ರಜ್ವಲ್ ಸ್ನೇಹಿತರಾದ ಪುನೀತ್, ಶ್ರೇಯಸ್, ಶಮಂತ್, ಭಾರದ್ವಾಜ್ ಹಾಗೂ ಗ್ರಾಮಸ್ಥರು ಹಾಜರಿದ್ದರು. ನಾಪೋಕ್ಲು…

Read More

ಸುಂಟಿಕೊಪ್ಪ ಮಾ.14 : ಸಾರಿಗೆ ಇಲಾಖೆ ವತಿಯಿಂದ ಸುಂಟಿಕೊಪ್ಪದ ಆಟೋ ಚಾಲಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯ ಬಗ್ಗೆ ಮಾಹಿತಿ ನೀಡಲಾಯಿತು. ಸುಂಟಿಕೊಪ್ಪದ ಆಟೋ ಚಾಲಕರ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್.ಎಂ.ಮಧುರ ಮಾತನಾಡಿ, ಆಟೋರಿಕ್ಷಾ, ಕ್ಯಾಬ್ ಚಾಲಕರು ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಮೆಟ್ರಿಕ್ ನಂತರ ಉನ್ನತ ವಿದ್ಯಾಭ್ಯಾಸವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಸಿಗುವ ಉಚಿತ ವಿದ್ಯಾನಿಧಿ ಯೋಜನೆ ಮಾಹಿತಿ ನೀಡಿದರು. ಸರ್ಕಾರ ಚಾಲಕರ ಮಕ್ಕಳಿಗೆ ಈ ಯೋಜನೆಯನ್ನು ಜಾರಿಗೆ ತಂದಿದ್ದು, ಚಾಲಕರು ತಮ್ಮ ಡ್ರೈವಿಂಗ್ ಲೈಸನ್ಸ್ ಜೊತೆ ಆಧರ್ ಸಂಖ್ಯೆಯೊಂದಿಗೆ ಆನ್ಲೈನ್ ಮುಖಾಂತರ ಸೇವಾಸಿಂಧು ವೆಬ್ ಪೋರ್ಟಲ್‍ನಲ್ಲಿ ಸುಂಟಿಕೊಪ್ಪ ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಿದರೆ ಆಧಾರ್ ಜೋಡಿತ ನಿಮ್ಮ ಬ್ಯಾಂಕ್ ಖಾತೆಗಳಿಗೆ ನೇರವಾಗಿ ನಗದು ವರ್ಗಾವಣೆ ಆಗುತ್ತದೆ ಎಂದು ತಿಳಿಸಿದರು. ಇದೇ ಸಂದರ್ಭ ವಾಹನ ಚಾಲಕರಿಗೆ ತಮ್ಮ ವಾಹನಕ್ಕೆ ಸಂಬಂಧಿಸಿದ ದಾಖಲಾತಿಗಳ ಬಗ್ಗೆ ಕಿವಿಮಾತು ಹೇಳಿದ ಅವರು, ವಾಹನ ಚಾಲಕರು ಚಾಲನಾ ಅನುಮತಿ ಪತ್ರ…

Read More

ಕುಶಾಲನಗರ ಮಾ.14 :  ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದಲ್ಲಿ  ಶ್ರೀ ಉಮಾಮಹೇಶ್ವರ ಸ್ವಾಮಿಯ ಮಹಾ ರಥೋತ್ಸವ ವೈಭವಯುತವಾಗಿ ನಡೆಯಿತು. ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವದಲ್ಲಿ ನೂರಾರು ಭಕ್ತರು ಭಾಗಿಯಾಗಿ ತೇರನ್ನು ಎಳೆಯುವ ಮೂಲಕ ದೇವರ ಕೃಪೆಗೆ ಪಾತ್ರರಾದರು.  ಪುಷ್ಪ ಹಾಗೂ ವಿವಿಧ ಧ್ವಜಗಳಿಂದ ಅಲಂಕೃತ ಗೊಂಡಿದ್ದ ತೇರಿನಲ್ಲಿ ಉಮಾಮಹೇಶ್ವರ ದೇವರ ವಿಗ್ರಹ ಪ್ರತಿಷ್ಠಾಪಿಸಲಾಯಿತು. ದೇವಾಲಯದ ಅರ್ಚಕ ಸಚ್ಚಿನ್ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಮಹಾಮಂಗಳಾರತಿ ಬಳಿಕ ಮಧ್ಯಾಹ್ನ 1.00 ಗಂಟೆ ವೇಳೆಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಬಾಲಕನ ವೀರಗಾಸೆ ನೃತ್ಯ ಕಲಾ ಪ್ರದರ್ಶನ ರಥೋತ್ಸವಕ್ಕೆ ಮೆರುಗು ನೀಡಿತು. ಮೆರಣಿಗೆಯುದ್ದಕ್ಕೂ ರಥಕ್ಕೆ ಈಡುಗಾಯಿಯೊಂದಿಗೆ ಹೂ, ಬಾಳೆಹಣ್ಣನ್ನು ಎಸೆದು ಭಕ್ತಿ ಮೆರೆದರು. ರಥೋತ್ಸವದಲ್ಲಿ ಹಾಸನ, ಮೈಸೂರು ಜಿಲ್ಲೆಗಳ ಗಡಿಗ್ರಾಮದ ಜನರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ನೂರಾರು ಜನರು ಪಾಲ್ಗೊಂಡಿದ್ದರು. ರಥೋತ್ಸವವು ಮಂಗಳವಾದ್ಯ ದೊಂದಿಗೆ ಗ್ರಾಮದಲ್ಲಿ ಸಂಚರಿಸಿ ನಂತರ ತೇರು ಊರಿನ ಸಂತೆಮಾಳದ ಬಳಿ ಸಮಾಪನ ಗೊಂಡಿತು. ಹೊಳೆಗುಡಿ ಜಾತ್ರೆ ಎಂದೇ ಪ್ರಸಿದ್ಧಿಯಾಗಿರುವ…

Read More

ನಾಪೋಕ್ಲು ಮಾ.14 : ನಾಪೋಕ್ಲು ಕಂದಾಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ಅಣುಕು ಮತದಾನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ನಾಪೋಕ್ಲು ಸಂತೆ ಮಾರುಕಟ್ಟೆಯಲ್ಲಿ ಚುನಾವಣಾ ಸೆಕ್ಟರ್ ಅಧಿಕಾರಿಗಳಾದ ಮುರುಗೇಶ್ ಮತ್ತು ಪ್ರಮೋದ್ ನೇತೃತ್ವದಲ್ಲಿ ಇವಿಯಂ ಮತಯಂತ್ರದ ಬಳಕೆ ಮತ್ತು ಮತದಾನ ಮಾಡುವ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಹಲವಾರು ಸಂಖ್ಯೆಯಲ್ಲಿ ಸಾರ್ವಜನಿಕರು  ಮತ ಚಲಾಯಿಸಿದರು. ಈ ಸಂದರ್ಭ ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾ.ಪಂ  ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ, ಕಂದಾಯ ಇಲಾಖೆಯ ಸಿಬ್ಬಂದಿಗಳಾದ ಪ್ರಸಾದ್, ಲಾಲು, ಸ್ಥಳೀಯರಾದ ಅಹಮದ್ ಸಿ.ಎಚ್.ಮಹಮ್ಮದ್, ಗಣೇಶ್, ಪ್ರಕಾಶ್ ಮತ್ತಿತರರು ಹಾಜರಿದ್ದರು. ವರದಿ :ಝಕರಿಯ ನಾಪೋಕ್ಲು 

Read More

ಸುಂಟಿಕೊಪ್ಪ ಮಾ.13 : ಒರಿಸ್ಸಾ ರಾಜ್ಯದ ಭುವನೇಶ್ವರದಲ್ಲಿ ನಡೆಯಲಿರುವ 2022-23ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಫುಟ್ ಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡದ ಕ್ಯಾಪ್ಟನ್ ಆಗಿ ಸುಂಟಿಕೊಪ್ಪ ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಿ. ಹೆಚ್. ವೇಣುಗೋಪಾಲ್ ಅವರು ಆಯ್ಕೆಯಾಗಿದ್ದಾರೆ.  ತಾ. 18 ರಿಂದ 23ರ ವರೆಗೆ ಒರಿಸ್ಸಾ ರಾಜ್ಯದ ಭುವನೇಶ್ವರದಲ್ಲಿರುವ ಕಳಿಂಗ ಸ್ಟೇಡಿಯಂ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ರಾಷ್ಟ್ರಮಟ್ಟದ ನಾಗರಿಕ ಸೇವಾ ಫುಟ್ ಬಾಲ್ ಪಂದ್ಯಾಟ ನಡೆಯಲಿದ್ದು  ವೇಣುಗೋಪಾಲ್ ಅವರು 20 ಮಂದಿ ಫುಟ್ ಬಾಲ್ ಆಟಗಾರರನ್ನು ಒಳಗೊಂಡ ಕರ್ನಾಟಕ ರಾಜ್ಯದ ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದ ವರ್ಷ ನವದೆಹಲಿಯಲ್ಲಿ ನಡೆದ ಅಖಿಲ ಭಾರತ ನಾಗರಿಕ ಸೇವಾ ಫುಟ್ ಬಾಲ್ ಪಂದ್ಯಾಟದಲ್ಲಿಯೂ ಕೂಡ ಮೂಲತಃ ಸೋಮವಾರಪೇಟೆ ತಾಲೂಕಿನ ಬೀಟಿಕಟ್ಟೆಯವರಾಗಿರುವ ವೇಣುಗೋಪಾಲ್ ಅವರು ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನ ನೀಡಿ ಮೆಚ್ಚುಗೆಗೆ ಪಾತ್ರರಾಗಿದ್ದರು.

Read More