ಲೇಖಕ: admin

ಮಡಿಕೇರಿ ಜ.9 : ಜಿಲ್ಲೆ, ಹೊರ ಜಿಲ್ಲೆ, ರಾಜ್ಯಗಳ ಎಂಟು ಕೋಟಿ ಮಂದಿಗೆ ನೀರುಣಿಸುವ ‘ಕಾವೇರಿ’ ನದಿಯ ಜಲಾನಯದ ಪ್ರದೇಶವಾಗಿರುವ ‘ಕೊಡಗು’ ಜಿಲ್ಲೆಯ ಕೃಷಿ ಭೂಮಿಗಳನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡಲು ಯಾವುದೇ ಕಾರಣಕ್ಕು ಅವಕಾಶ ನೀಡಬಾರದೆಂದು ಪರಿಸರ ಮತ್ತು ಆರೋಗ್ಯ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಕರ್ನಲ್ ಸಿ.ಪಿ.ಮುತ್ತಣ್ಣ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಂದಾಯ ಸಚಿವ ಆರ್.ಅಶೋಕ್, ಕೊಡಗಿನಲ್ಲಿ ಭೂ ಪರಿವರ್ತನೆಯ ನಿಯಮಗಳನ್ನು ಸರಳೀಕರಿಸಿ, ವಾರದ ಅವಧಿಯಲ್ಲೆ ಭೂ ಪರಿವರ್ತನೆ ಮಾಡಿಕೊಡುವುದಾಗಿ ತಿಳಿಸಿದ್ದಾರೆ. ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಪರಿವರ್ತನೆ ಮಾಡಿಕೊಟ್ಟಲ್ಲಿ ಅದು ಕಾವೇರಿ ನದಿಯ ಮೇಲೆ ವ್ಯತಿರಿಕ್ತ ಪರಿಣಾಮವನ್ನುಂಟು ಮಾಡಬಹುದು. ಕಾವೇರಿ ನೀರನ್ನು ಅವಲಂಬಿಸಿರುವ ಕೋಟ್ಯಾಂತರ ಜನರಿಗೆ ಇದರಿಂದ ಅನ್ಯಾಯವಾಗಲಿದೆ ಎಂದು ತಿಳಿಸಿದರು. ಕೊಡಗಿನ ಕಾಫಿ ತೋಟ, ಗದ್ದೆ, ಜಮ್ಮಾ ಮತ್ತು ಸಾಗು ಭೂಮಿ, ಬಾಣೆಗೆ ಸಂಬಂಧಿಸಿದಂತೆ ಭೂ ಪರಿವರ್ತನೆಗಳು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ನಿಬಂಧನೆಗಳನ್ನು ಉಲ್ಲಂಘಿಸಿದಂತ್ತಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ…

Read More

ಮಡಿಕೇರಿ ಜ.9 : ಕಾರ್ಮಿಕರು ಹಾಗೂ ಕೃಷಿಕರ ಮೂಲಭೂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಜ.18 ರಿಂದ 22ರವರೆಗೆ 17ನೇ ಸಿಐಟಿಯು ಅಖಿಲ ಭಾರತ ಸಮ್ಮೇಳನ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಸಿಐಟಿಯು ಸಮ್ಮೇಳನದ ಸ್ವಾಗತ ಸಮಿತಿಯ ಜಿಲ್ಲಾ ಕಾರ್ಯಾಧ್ಯಕ್ಷ ಪಿ.ಆರ್.ಭರತ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಪತ್ತನ್ನು ಸೃಷ್ಟಿಸುವ ಶ್ರಮಿಕ ವರ್ಗವೇ ಸಂಕಷ್ಟಕ್ಕೆ ಸಿಲುಕಿದ್ದು, ಪರಿಹಾರದ ಹಕ್ಕನ್ನು ಚಲಾಯಿಸಬೇಕಾಗಿದೆ ಎಂದರು. ಅರಮನೆ ಮೈದಾನದಲ್ಲಿ ನಡೆಯುವ ಅಖಿಲ ಭಾರತ ಸಮ್ಮೇಳನದಲ್ಲಿ ದೇಶದ 30 ರಾಜ್ಯಗಳ 2 ಸಾವಿರಕ್ಕೂ ಹೆಚ್ಚಿನ ಪ್ರತಿನಿಧಿಗಳು ಸೇರಿದಂತೆ 40 ವಿವಿಧ ರಾಷ್ಟ್ರಗಳ ಪ್ರತಿನಿಧಿಗಳು ಪಾಲ್ಗೊಳ್ಳುವ ಮೂಲಕ, ಕಾರ್ಮಿಕ ವರ್ಗದ ಮೂಲಭೂತ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಆಳುವ ಪ್ರಭುತ್ವದ ವಿರುದ್ಧದ ಹೋರಾಟಗಳನ್ನು ನಿರ್ಣಯಿಸಲಿರುವುದಾಗಿ ತಿಳಿಸಿದರು. ::: ಕೊಡಗಿನ ಸಮಸ್ಯೆಗಳ ಪ್ರಸ್ತಾಪ ::: ಕೊಡಗು ಜಿಲ್ಲೆಯ ಮುಖ್ಯ ಬೆಳೆಯಾದ ಕಾಫಿ ಮತ್ತು ಕರಿಮೆಣಸು ಕೃಷಿ ಫಸಲಿಗೆ ಸೂಕ್ತ ಧಾರಣೆ ಇಲ್ಲದೆ ಬೆಳೆಗಾರ ಸಂಕಷ್ಟಕ್ಕೆ ಸಿಲುಕಿದ್ದಾನೆ. ಇದರಿಂದ ಜಿಲ್ಲೆಯ ತೋಟಗಳಲ್ಲಿ ಬದುಕು ಕಟ್ಟಿಕೊಂಡಿರುವ ಕಾರ್ಮಿಕ ಸಮೂಹವು ಆರ್ಥಿಕ…

Read More

ಮಡಿಕೇರಿ ಜ.9 : ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷರನ್ನಾಗಿ ರತ್ನಾಕರ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಷಯ ಪ್ರಸ್ತಾಪಿಸಲಾಗುತ್ತಿದ್ದು, ಇದು ನಿಯಮ ಬಾಹಿರ ಆಯ್ಕೆ ಪ್ರಕ್ರಿಯೆಯಾಗಿದೆ ಎಂದು ಸಂಘದ ಜಿಲ್ಲಾ ಉಪಾಧ್ಯಕ್ಷ ವಿ.ರವೀಂದ್ರ ರೈ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವಿರಾರು ಸದಸ್ಯರಿರುವ ಸಂಘದಲ್ಲಿ ಜಿಲ್ಲಾಧ್ಯಕ್ಷರ ಹಾಗೂ ಪದಾಧಿಕಾರಿಗಳ ಆಯ್ಕೆಗೆ ನಿಯಮಗಳನ್ನು ಪಾಲಿಸಬೇಕಾಗಿದೆ. ಯಾವುದೇ ಕಾರ್ಯಕಾರಿಣಿ ಸಭೆ ನಡೆಸದೆ, ದಿನಾಂಕ ನಿರ್ಧರಿಸದೆ ಮತ್ತು ಯಾವ ಸದಸ್ಯರಿಗೂ ಮಾಹಿತಿ ನೀಡದೆ ಏಕಾಏಕಿ ರೆಸಾರ್ಟ್‍ವೊಂದರಲ್ಲಿ ಕೆಲವೇ ವ್ಯಕ್ತಿಗಳು ಸೇರಿಸಿಕೊಂಡು ಅಧ್ಯಕ್ಷರ ಆಯ್ಕೆ ಮಾಡಿರುವುದು ಸರ್ವಾಧಿಕಾರಿ ಧೋರಣೆಯಾಗಿದೆ ಎಂದು ಆರೋಪಿಸಿದರು. ಕಳೆದ 8 ವರ್ಷಗಳಿಂದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಯಾವುದೇ ಸಭೆ ನಡೆಸದೆ ನಿಷ್ಕ್ರಿಯರಾಗಿದ್ದರು. ಕಾರ್ಯಕಾರಿ ಸಮಿತಿಯಿಂದ ಸಭೆ ಕರೆಯುವಂತೆ ಒತ್ತಡ ಹೇರಿದರೂ ಅಧ್ಯಕ್ಷರು ಇಲ್ಲದ ಕಾರಣ ಹೇಳಿಕೊಂಡು  ದಿನದೂಡುತ್ತಿದ್ದಾರೆ. ಆದರೆ ಊಟಕೊಡಿಸುವ ನೆಪದಲ್ಲಿ ಬೆರಳೆಣಿಕೆಯ ಸದಸ್ಯರನ್ನು ಕರೆಸಿ ಸಂಘದ ಪ್ರಧಾನ ಕಾರ್ಯದರ್ಶಿಗೆ ಅಧ್ಯಕ್ಷ ಸ್ಥಾನ…

Read More

ಮಡಿಕೇರಿ ಜ.9 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಯುವ ರೆಡ್ ಕ್ರಾಸ್ ಘಟಕ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಂಯುಕ್ತಶ್ರಯದಲ್ಲಿ ಜ.10 ರಂದು ರಕ್ತದಾನ ಶಿಬಿರ ನಡೆಯಲಿದೆ. ನಗರದ ಫೀ.ಮಾ ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಶಿಬಿರವನ್ನು ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ರವಿ ಕರುಂಬಯ್ಯ ನಡೆಸಿಕೊಡಲಿದ್ದಾರೆ.

Read More

ಮಡಿಕೇರಿ ಜ.9 :  ನೆಲ್ಲಿಹುದಿಕೇರಿ ವ್ಯಾಪ್ತಿಯ ನಲ್ವತ್ತೆಕ್ರೆ ಗ್ರಾಮದಲ್ಲಿ ಬೃಹತ್ ಗಾತ್ರದ ನಾಗರಹಾವನ್ನು ಉರಗ  ರಕ್ಷಕ ಸುರೇಶ್ ಪೂಜಾರಿ ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ. ನಲ್ವತ್ತೆಕ್ರೆ ಗ್ರಾಮದ  ಗಣೇಶ್ ಎಂಬವರ ಮನೆಯ ಅಂಗಳದಲ್ಲಿ ಹಾವು ಇರುವ ಬಗ್ಗೆ  ಮಾಹಿತಿ ನೀಡಿದ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಉರಗ ಪ್ರೇಮಿ ಸುರೇಶ್ ಪೂಜಾರಿ ಆರು ಅಡಿ ಉದ್ದದ ನಾಗರ ಹಾವನ್ನು ಹಿಡಿದು ಸುರಕ್ಷಿತವಾಗಿ ಮಾಲ್ದಾರೆ ಅರಣ್ಯಕ್ಕೆ ಬಿಟ್ಟರು. ಮನೆಯ ಬರಲು ಇಲಿ ಅಥವಾ ಕಪ್ಪೆಯನ್ನು ಕಂಡು ಹಾವುಗಳು  ಬರುವುದು ಸಹಜ. ಆದ್ದರಿಂದ ಯಾರು ಹಾವನ್ನು ಕೊಲ್ಲದಂತೆ ಮನವಿ ಮಾಡಿದ ಸುರೇಶ್ ಹಾವುಗಳು ಕಂಡುಬಂದಲ್ಲಿ 8277131863 ಸಂಪರ್ಕಿಸುವಂತೆ ತಿಳಿಸಿದರು.

Read More

ಮಡಿಕೇರಿ ಜ.9 :  ಪಾಲೂರು ಗ್ರಾಮದ ವಾರ್ಷಿಕ ಊರೊರ್ಮೆ  ಸಂಭ್ರಮದಿಂದ ಜರುಗಿತು. ‘ಪಾಲೂರ್ ಕೊಡವಾಮೆ ಕೂಟ’ ಏರ್ಪಡಿಸಿದ್ದ 17ನೇ ವರ್ಷದ ಕಾರ್ಯಕ್ರಮದಲ್ಲಿ ಪಾಲೂರಿನಲ್ಲಿ ನೆಲೆಸಿರುವ ಕೊಡವ ಕುಟುಂಬದ ನೂರಾರು ಸದಸ್ಯರು ಭಾಗಿಯಾಗಿದ್ದರು. ಈ ಸಂದರ್ಭ  ಅಖಿಲ ಕೊಡವ ಸಮಾಜದ ಅಧ್ಯಕ್ಷರಾದ ಪರದಂಡ ಸುಬ್ರಮಣಿ ಅವರು ಮಾತನಾಡಿ “ಕೊಡವ ಜನಾಂಗದ ಅಭಿವೃದ್ಧಿಗೆ ಗ್ರಾಮ ಮಟ್ಟದಲ್ಲಿ ಇಂತಹ ಕಾರ್ಯಕ್ರಮದ  ಅವಶ್ಯಕತೆ ಇದೆ. ಕೊಡವರ ಆಚಾರ ವಿಚಾರಗಳ ಬಗ್ಗೆ ಯುವಜನತೆಗೆ ಅರಿವು ಮೂಡಿಸಲು ಇದು ಉತ್ತಮ ವೇದಿಕೆಯಾಗಿದೆ ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮೇಪಾಡಂಡ ವೇಣು ಉತ್ತಪ್ಪ ಅಧ್ಯಕ್ಷತೆ  ನಡೆದ  ಕಾರ್ಯಕ್ರಮದಲ್ಲಿ  ಗ್ರಾಮದ ಹಿರಿಯ, ಕಾಫಿ ಬೆಳೆಗಾರ ಬೊಳ್ಳಿಯಂಡ ಎಂ.ಪಳoಗಪ್ಪ ಅವರನ್ನು ಗೌರವಿಸಲಾಯಿತು. ಕೊಡವಾಮೆ ಕೂಟದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಕಿರುಚಿತ್ರ, ಸಾಕ್ಷ್ಯಚಿತ್ರ ನಿರ್ದೇಶಕ ಮಂದನೆರವಂಡ ಯುಗ ದೇವಯ್ಯ ಅವರನ್ನು ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಗ್ರಾಮಸ್ಥರಿಗೆ ಹಲವು ಮನೋರಂಜನಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು, ಇದರಲ್ಲಿ ಮುಖ್ಯ ಆಕರ್ಷಣೆಯಾಗಿದ್ದು ‘ಕೊಡವ ವಾಲಗ ಆಟ್’…

Read More

ಮಡಿಕೇರಿ ಜ.9 : ಮ್ಯಾನ್ಸ್ ಕಾಂಪೌಂಡ್ ಕ್ಲಬ್ (ಎಂಸಿಸಿ) ವತಿಯಿಂದ ಮ್ಯಾನ್ಸ್ ಕಾಂಪೌಂಡ್ ಬಳಿಯ ಫುಟ್ಬಾಲ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಭಗವತಿ (ಎ) ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಭಗವತಿ (ಬಿ) ತಂಡ ರನ್ನರ್ಸ್ ಸ್ಥಾನ ಪಡೆದುಕೊಂಡಿತು. ಪೆನಾಲ್ಟಿ ಶೂಟೌಟ್‍ನಲ್ಲಿ ಭಗವತಿ (ಎ) ತಂಡ, ಭಗವತಿ (ಬಿ) ತಂಡದ ವಿರುದ್ಧ 3-2 ಗೋಲುಗಳ ಅಂತರದಿಂದ ಅಂತಿಮ ಪಂದ್ಯದಲ್ಲಿ ಜಯಸಾಧಿಸಿತು. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಗವತಿ (ಬಿ) ತಂಡ ಸುಪ್ರಿಂ ವಿರುದ್ಧ 4-7 ಗೋಲುಗಳ ಗೆಲುವು ಸಾಧಿಸಿತು. ಸೆಮಿಫೈನಲ್‍ನಲ್ಲಿ ಭಗವತಿ (ಎ) ಅಂಬೇಡ್ಕರ್ ಎಫ್‍ಸಿ ವಿರುದ್ಧ 4-1 ಗೋಲುಗಳಿಂದ ಜಯಗಳಿಸಿತು. ಭಗವತಿ (ಬಿ) ತಂಡ ಎಂಸಿಸಿ ವಿರುದ್ಧ 4-1 ಗೋಲುಗಳ ಜಯ ದಾಖಲಿಸಿತು. ಸೌಹಾರ್ದ ಪಂದ್ಯದಲ್ಲಿ ಪ್ರೆಸ್ ತಂಡ ಪೊಲೀಸ್ ತಂಡದ ವಿರುದ್ಧ 2-0 ಗೋಲುಗಳ ಗೆಲುವು ಸಾಧಿಸಿತು. ಎಂಸಿಸಿ ಲೆಜೆಂಡ್ಸ್ ಹಾಗೂ ಪ್ರೆಸ್ ತಂಡದ ನಡುವಿನ ಪಂದ್ಯದಲ್ಲಿ 2-2 ಸಮಗೋಲುಗಳಾದ್ದರಿಂದ ಪೆನಾಲ್ಟಿ ಶೂಟೌಟ್‍ನಲ್ಲಿ ಎಂಸಿಸಿ ಲೆಜೆಂಡ್ಸ್ ಪ್ರೆಸ್ ತಂಡದ…

Read More

ನಾಪೋಕ್ಲು ಜ.9 : ಶ್ರದ್ಧಾ ಕೇಂದ್ರಗಳು ಸುಸ್ಥಿತಿಯಲ್ಲಿದ್ದರೆ ನಾಡಿನಲ್ಲಿ ಸುಖ, ಶಾಂತಿ, ನೆಮ್ಮದಿ ಪ್ರಾಪ್ತಿಯಾಗಲು ಸಾಧ್ಯ ಎಂದು ಶ್ರೀ ಭಗವತಿ ದೇವಾಲಯದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನಿವೃತ್ತ ಮುಖ್ಯ ಶಿಕ್ಷಕ ಕುಲ್ಲೇಟ್ಟಿರ ಗುರುವಪ್ಪ ಹೇಳಿದರು. ಭಗವತಿ ದೇವಾಲಯದ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ಶ್ರೀ ಭಗವತಿ ದೇವಸ್ಥಾನ ಅಭಿವೃದ್ಧಿ ಸಮಿತಿಯ (ಫಂಡಿನ) ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿರು. ದೇವಾಲಯಗಳ ಅಭಿವೃದ್ಧಿಗೆ ಪ್ರತಿಯೊಬ್ಬ ಭಕ್ತರು ತಮ್ಮ ಕೈಲಾದ ಸಹಕಾರವನ್ನು ನೀಡುವುದರ ಮೂಲಕ ದೇವರನ್ನು ಸ್ಮರಿಸುವಂತಾಗಬೇಕೆಂದರು. ದೇವಾಲಯದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ, ಕೆಲವೊಂದು ನಿರ್ಧಾರಗಳಿಗೆ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಲಾಯಿತು. ಈ ಸಂದರ್ಭ ಶ್ರೀ ಅಯ್ಯಪ್ಪ ದೇವಾಲಯದ ವಾರ್ಷಿಕ ಪೂಜೆ ಹಾಗೂ ಭ್ರಹ್ಮರಾಕ್ಷಸ ಗೆ ಹಾಲು ಪಾಯಸ ವಿಶೇಷ ಪೂಜಾ ವಿಧಿ ವಿಧಾನಗಳ ಸೇವೆ ನಡೆಯಿತು. ಮಹಾಸಭೆಯಲ್ಲಿ ಉಪಾಧ್ಯಕ್ಷ ಬೊಪ್ಪಂಡ ಕುಶಾಲಪ್ಪ, ತಕ್ಕರಾದ ನಾಟೋಳಂಡ ಸಚಿನ್, ತಿರೋಡಿರ ಲಕ್ಷ್ಮಣ, ಕೇಲೇಟ್ಟಿರ ಮುತ್ತಪ್ಪ, ಕುಲ್ಲೇಟ್ಟಿರ ಶಂಕರಿ ಹಾಗೂ ಸಮಿತಿ ಸದಸ್ಯರು, ಊರಿನ…

Read More

ಮಡಿಕೇರಿ ಜ.9 : ಕೊಡಗು ಜಿಲ್ಲೆಯಲ್ಲಿರುವ ದೈವ ಆರಾಧಕರು ಹಾಗೂ ದೈವ ನರ್ತಕರ ಸಭೆ ಜ.13 ರಂದು ಬೆಳಗ್ಗೆ 10 ಗಂಟೆಗೆ ಮಡಿಕೇರಿಯ ಬಾಲಭವನ ಸಭಾಂಗಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಪಿ.ಎಂ.ರವಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ತುಳುನಾಡಿನ ದೈವಾರಾಧನೆಯ ಬಹಳಷ್ಟು ದೈವ ಕ್ಷೇತ್ರಗಳಿವೆ. ದೈವ ಆರಾಧಕರು ಹಾಗೂ ದೈವ ನರ್ತಕರು ಕೂಡ ಇದ್ದಾರೆ. ಇತ್ತೀಚಿನ ದಿನಗಳಲ್ಲಿ ದೈವ ಮತ್ತು ದೈವಾರಾಧನೆಯನ್ನು ಅವಮಾನಿಸುವ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ಅವಮಾನಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲದೆ ಜಿಲ್ಲೆಯಲ್ಲಿರುವ ತುಳುನಾಡಿನ ದೈವ ಕ್ಷೇತ್ರಗಳ ಇತಿಹಾಸವನ್ನು ದಾಖಲೀಕರಣ ಮಾಡಿ ಪುಸ್ತಕದ ರೂಪದಲ್ಲಿ ಹೊರ ತರುವುದು, ದೈವಕೋಲ ಮತ್ತು ನೇಮೋತ್ಸವವನ್ನು ಕ್ರಮಬದ್ಧವಾಗಿ ನಡೆಸುವುದು, ದೈವಾರಾಧಕರು ಹಾಗೂ ದೈವ ನರ್ತಕರಿಗೆ ಸರಕಾರ ಘೋಷಿಸಿರುವ ಮಾಸಾಶನದ ಬಗ್ಗೆ ಫಲಾನುಭವಿಗಳಿಗೆ ಮಾಹಿತಿ ನೀಡುವುದು, ದೈವಕ್ಷೇತ್ರಗಳ ಅಭಿವೃದ್ಧಿ ಕುರಿತು ಸರಕಾರಕ್ಕೆ ಮಾಹಿತಿ ಮತ್ತು ಮನವಿ ನೀಡುವುದು,…

Read More

ಮಡಿಕೇರಿ ಜ.9 : ಮಡಿಕೇರಿ ನಗರದ ಕೊಹಿನೂರು ರಸ್ತೆಯ ಬದಿಯಲ್ಲಿ ಬಾಡಿಗೆ ಲಾರಿಗಳನ್ನು ನಿಲ್ಲಿಸುತ್ತಿರುವುದರಿಂದ ಸಮೀಪದ ವ್ಯಾಪಾರಿಗಳಿಗೆ ಹಾಗೂ ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಲಾರಿಗಳ ನಿಲುಗಡೆಗೆ ಪರ್ಯಾಯ ವ್ಯವಸ್ಥೆ ಸೂಚಿಸಬೇಕೆಂದು ಒತ್ತಾಯಿಸಿ ಸ್ಥಳೀಯ ವರ್ತಕರು ಹಾಗೂ ಹೊಟೇಲ್ ಉದ್ಯಮಿಗಳು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಜನನಿಬಿಡ ಪ್ರದೇಶವಾಗಿರುವ ಕೊಹಿನೂರು ರಸ್ತೆಯಲ್ಲಿ ಲಾರಿಗಳನ್ನು ನಿಲುಗಡೆಗೊಳಿಸುತ್ತಿರುವುದರಿಂದ ಇಲ್ಲಿನ ವಾಣಿಜ್ಯ ಮಳಿಗೆ, ಅಂಗಡಿ, ಹೊಟೇಲ್ ವ್ಯಾಪಾರಕ್ಕೆ ಅಡಚಣೆಯಾಗುತ್ತಿದೆ. ಪ್ರವಾಸಿಗರು ವಾಹನ ನಿಲುಗಡೆಗೆ ಹರಸಾಹಸ ಪಡುತ್ತಿದ್ದಾರೆ. ಅಲ್ಲದೆ ಇಲ್ಲಿ ಸಾರ್ವಜನಿಕ ಶೌಚಾಲಯವೂ ಇದ್ದು, ಇದನ್ನು ಬಳಸಲು ಸಾರ್ವಜನಿಕರಿಗೆ ಅಡಚಣೆಯಾಗುತ್ತಿದೆ. ನಗರಸಭೆಯಿಂದ ಬಾಡಿಗೆ ವಾಹನಗಳ ನಿಲುಗಡೆಗೆ ನೂತನ ಖಾಸಗಿ ಬಸ್ ನಿಲ್ದಾಣದ ಸಮೀಪ ಸ್ಥಳ ಸೂಚಿಸಿ ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಬಾಡಿಗೆ ಲಾರಿಗಳನ್ನು ಇಲ್ಲಿ ನಿಲುಗಡೆಗೊಳಿಸಲು ಸೂಚನೆ ನೀಡಬೇಕೆಂದು ವರ್ತಕರು ಮನವಿಯಲ್ಲಿ ತಿಳಿಸಿದ್ದಾರೆ. ಲಾರಿ ಮಾಲೀಕರು ಮತ್ತು ಚಾಲಕರ ಸಂಘ ಕೂಡ ಸಾರ್ವಜನಿಕರು ಹಾಗೂ ವರ್ತಕರ ಮನವಿಗೆ ಸ್ಪಂದಿಸಿ ನಿಲ್ದಾಣವನ್ನು ಸ್ಥಳಾಂತರಗೊಳಿಸಿ ಸಹಕರಿಸಬೇಕೆಂದು ವರ್ತಕರು ಕೋರಿಕೊಂಡಿದ್ದಾರೆ.…

Read More