ಲೇಖಕ: admin

ಮಡಿಕೇರಿ ಫೆ.3 : ಕೊಡಗಿನ ಗಡಿ ಭಾಗದಲ್ಲಿ ಸೂಕ್ತ ತಪಾಸಣಾ ಕೇಂದ್ರಗಳು ಇಲ್ಲದಿರುವುದರಿಂದ ತೆರಿಗೆ ವಂಚನೆ ಮಾಡಿ ನಿಯಮ ಬಾಹಿರವಾಗಿ ಅಂತರ್ ರಾಜ್ಯ ವಾಹನಗಳು ಪ್ರವೇಶ ಮಾಡುತ್ತಿವೆ ಎಂದು ಆರೋಪಿಸಿರುವ ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಅಸೋಸಿಯೇಷನ್, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ನ ರಾಜ್ಯ ಸಂಘಟನಾ ಕಾರ್ಯದರ್ಶಿ ವಿನ್ಸೆಂಟ್ ಬಾಬು ಹೊರ ರಾಜ್ಯಗಳ ಟ್ಯಾಕ್ಸಿಗಳು ನಿಯಮ ಉಲ್ಲಂಘಿಸಿ ಸಂಚರಿಸುತ್ತಿರುವುದರಿಂದ ಜಿಲ್ಲೆಯ ಟ್ಯಾಕ್ಸಿ ಮಾಲೀಕರು ಹಾಗೂ ಚಾಲಕರು ನಿರುದ್ಯೋಗದ ಸಮಸ್ಯೆ ಎದುರಿಸುವಂತ್ತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕೊಡಗಿನ ಪೊನ್ನಂಪೇಟೆ ತಾಲೂಕಿನ ಪೆರುಂಬಾಡಿ ಮತ್ತು ವಿರಾಜಪೇಟೆ ತಾಲೂಕಿನ ಕುಟ್ಟದಲ್ಲಿ ಸಾರಿಗೆ ಇಲಾಖೆಯ ಚೆಕ್‍ಪೋಸ್ಟ್ (ಆರ್.ಟಿ.ಓ) ಗಳಿಲ್ಲ. ಇದೇ ಕಾರಣದಿಂದ ಕೊಡಗು ಜಿಲ್ಲೆಯ ಮೂಲಕ ಕೇರಳ ಮತ್ತು ಇತರ ರಾಜ್ಯಗಳ ವಾಹನಗಳು ಕರ್ನಾಟಕವನ್ನು ಪವೇಶಿಸುತ್ತಿವೆ. ರಾಜ್ಯ ಸರ್ಕಾರಕ್ಕೆ ಕೋಟ್ಯಾಂತರ ರೂ.ಗಳ ತೆರಿಗೆ ಹಣ ನಷ್ಟವಾಗುತ್ತಿದೆ ಎಂದು ಆರೋಪಿಸಿದರು. ಕರ್ನಾಟಕದಿಂದ ಕೇರಳ…

Read More

ಚೆಯ್ಯಂಡಾಣೆ  ಫೆ.3 : ಮೂರು ಶತಮಾನಗಳ ಇತಿಹಾಸವಿರುವ  ಹಲವಾರು ಪವಾಡಗಳಿಗೆ ಹೆಸರಾದ ಎಡಪಾಲ ಅಂಡತ್ ಮಾನಿ ದರ್ಗಾ ಶರೀಫ್ ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಪವಾಡ ಪುರುಷರ ಹೆಸರಿನಲ್ಲಿ ಪ್ರತಿವರ್ಷ  ನಡೆಸಿಕೊಂಡು ಬರುತ್ತಿರುವ ವಾರ್ಷಿಕ ಉರೂಸ್ ಸಮಾರಂಭವು ಈ ಬಾರಿ ಫೆ.5 ರಿಂದ 7ರ ವರೆಗೆ ವಿವಿಧ ಕಾರ್ಯಕ್ರಮ ಗಳೊಂದಿಗೆ  ನಡೆಯಲಿದೆ ಎಂದು ಎಡಪಾಲ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಯು. ಶಾಫಿ ತಿಳಿಸಿದ್ದಾರೆ. ಫೆ.5 ರಂದು  ಸಂಜೆ 4 ಗಂಟೆಗೆ ಎಡಪಾಲ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಯು.ಶಾಫಿ ಧ್ವಜಾರೋಹಣ ನೆರವೇರಲಿಸಲಿದ್ದಾರೆ. ರಾತ್ರಿ ಸಿರಾಜುದ್ದೀನ್ ದಾರಿಮಿ ಕಕ್ಕಾಡ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಫೆ.6 ರಂದು ಸಂಜೆ ಸನ್ಮಾನ ಹಾಗೂ ದುಆ ಮಜ್ಲಿಸ್ ನಡೆಯಲಿದ್ದು, ಸಯ್ಯದ್ ಹಮೀದಲಿ ಶಿಹಾಬ್ ತಂಘಳ್ ಪಾಣಕ್ಕಾಡ್ ನೇತೃತ್ವ ವಹಿಸಲಿದ್ದಾರೆ. ಮುಖ್ಯ ಭಾಷಣವನ್ನು ಅಲ್ ಹಾಜ್ ಕೆ.ಎಂ. ಮೊಯ್ದು ಪೈಝಿ ಮಾಡಲಿದ್ದಾರೆ. ರಾತ್ರಿ ಶಮೀರ್ ಆಶ್ರಫಿ ಕಾಟ್ಟಾ0ಪಳ್ಳಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಫೆ.7ರಂದು ರಾತ್ರಿ ಉಸ್ತಾದ್ ಬಶೀರ್ ಪೈಝಿ ದೇಶ…

Read More

ಮಡಿಕೇರಿ ಫೆ.3 : ಮಂಡ್ಯ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೊಡಗು ಮೂಲದ ಬಲಮುರಿ ಗ್ರಾಮದ ಚೇಯ್ಯಂಡ ತಿಮ್ಮಯ್ಯ ಅವರು ನೇಮಕಗೊಂಡಿದ್ದಾರೆ. ಚೇಯ್ಯಂಡ ಈರಪ್ಪ ಹಾಗೂ ಲೀಲಾ ದಂಪತಿಗಳ ಪುತ್ರರಾಗಿರುವ ಇವರು ಈ ಹಿಂದೆ ಬೆಸ್ಕಾಂ ಎಸ್ಪಿಯಾಗಿ  ಕಾರ್ಯನಿರ್ವಹಿಸಿದ್ದರು.

Read More

ಮಡಿಕೇರಿ ಫೆ.3 : ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದoತೆ ಮೂವರು ಆರೋಪಿಗಳನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. 12 ಲಕ್ಷ ರೂ. ಮೌಲ್ಯದ 190 ಗ್ರಾಂ ಚಿನ್ನಾಭರಣ ಮತ್ತು 3 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಕುಶಾಲನಗರದ ಡಿವೈಎಸ್ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಗ್ರಾಮದ ಎಂ.ಎ.ಇಬ್ರಾಹಿಂ (27), ಕೋಕೇರಿ ಗ್ರಾಮದ ಸುದೀಪ್ (21) ಹಾಗೂ ಮಡಿಕೇರಿಯ ಅಜಾದ್ ನಗರ ಬಡಾವಣೆಯ ಎಂ.ಎಂ.ವಾಸಿo (29) ಬಂಧಿತ ಆರೋಪಿಗಳು. ಇವರೊಂದಿಗೆ ಇನ್ನೂ ಮೂವರು ಭಾಗಿಯಾಗಿದ್ದು, ಇವರುಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಕಳ್ಳತನದ ಹಣದಿಂದ ಖರೀದಿಸಿದ ಮೂರು ಕಾರುಗಳು ಮತ್ತು ಕಳ್ಳತನ ಮಾಡಿದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಇವರುಗಳ ಬಂಧನದಿಂದ ಕುಶಾಲನಗರ ವ್ಯಾಪ್ತಿಯ 2, ನಾಪೋಕ್ಲು ವ್ಯಾಪ್ತಿಯ 2 ಮತ್ತು ವೀರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯ 1 ಪ್ರಕರಣವನ್ನು ಬಯಲಿಗೆಳೆಯಲಾಗಿದೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜು, ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ವೃತ್ತ ನಿರೀಕ್ಷಕ…

Read More

ಮಡಿಕೇರಿ ಫೆ.3 : ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ, ಸಹಕಾರ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.

Read More

ಮಡಿಕೇರಿ ಫೆ.3 : ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯಿ)ದಿಂದ ಅಂತರ ದಕ್ಷಿಣ ವಲಯದ ಬಾಲಕಿಯರ ಹಾಕಿ ಪಂದ್ಯಾವಳಿಯು ಫೆಬ್ರವರಿ, 7 ಮತ್ತು 8 ರಂದು ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಕಿ ಟರ್ಫ್ ಮೈದಾನದಲ್ಲಿ ನಡೆಯಲಿದೆ. ಕೇರಳದ ಕೊಲ್ಲಂ, ಹೈದರಾಬಾದ್ ಮತ್ತು ಮಡಿಕೇರಿಯ ಕ್ರೀಡಾ ಪ್ರಾಧಿಕಾರದ ಹಾಕಿ ತಂಡಗಳು ಪಾಲ್ಗೊಳ್ಳಲಿವೆ. ಫೆಬ್ರವರಿ, 7 ರಂದು ಮಧ್ಯಾಹ್ನ 3 ಗಂಟೆಗೆ ಬಾಲಕಿಯರ ಹಾಕಿ ಪಂದ್ಯಾವಳಿಗೆ ಚಾಲನೆ ದೊರೆಯಲಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಷ್ಮಯಿ ಅವರು ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಹಾಗೆಯೇ ಫೆಬ್ರವರಿ, 8 ರಂದು ಸಂಜೆ 5 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಭಾರತೀಯ ಕ್ರೀಡಾ ಪ್ರಾಧಿಕಾರದ ತರಬೇತಿ ಕೇಂದ್ರದ ಮೇಲ್ವಿಚಾರಕರಾದ ಮಿನಿ ಉಣ್ಣಿರಾಜ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಫೆ.3 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗ ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‍ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರ ಏರ್ಪಡಿಸಲಾಗಿದೆ. ಆಸಕ್ತರು ಫೆಬ್ರುವರಿ 8 ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ದ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ 0821-2515944 ಈ ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ. ಕೆಎಲ್‍ಎನ್. ಮೂರ್ತಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಫೆ.3: ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ 36ನೇ ವರ್ಷದ ಶಾಲಾ ವಾರ್ಷಿಕೋತ್ಸವವು ವಿದ್ಯಾಲಯದಲ್ಲಿ ಸಂಭ್ರಮದಿಂದ ನಡೆಯಿತು. ಕೆ.ನಿಡುಗಣೆ ಗ್ರಾ.ಪಂ.ಅಧ್ಯಕ್ಷ ಡೀನ್ ಬೋಪಣ್ಣ, ಜಿಲ್ಲೆಯ ಹಿರಿಯ ಲೇಖಕ ಕಿಗ್ಗಾಲು ಗಿರೀಶ್, ಕೇಂದ್ರೀಯ ವಿದ್ಯಾಲಯದ ಪ್ರಾಚಾರ್ಯ ಅರ್ಜುನ್ ಸಿಂಗ್ ಹಾಗೂ ನವೋದಯ ವಿದ್ಯಾಲಯದ ಪ್ರಾಚಾರ್ಯ ಪಿ.ಒ.ಪಂಕಜಾಕ್ಷನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಚಾರ್ಯ ಪಿ.ಒ.ಪಂಕಜಾಕ್ಷನ್ ಶೈಕ್ಷಣಿಕ ಸಾಲಿನಲ್ಲಿ ನಡೆದ ಶಾಲಾ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಮತ್ತು ವಿಶೇಷ ಸಾಧನೆಗಳ ವಿವರಗಳನ್ನೊಳಗೊಂಡ ವರದಿ ಮಂಡಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಹಾಗೂ ವಲಯ ಮಟ್ಟದಲ್ಲಿ ಸಾಧನೆಯನ್ನು ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಕಳೆದ ಸಾಲಿನಲ್ಲಿ ಸಿಬಿಎಸ್‍ಇ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಮನರಂಜನ ಕಾರ್ಯಕ್ರಮ ನಡೆದವು. ಶಿಕ್ಷಣದಲ್ಲಿ ಕಲೆ ಎಂಬ ಪರಿಕಲ್ಪನೆಯನ್ನು ಆಧರಿಸಿ ಮತ್ತು ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಚಿತವಾದ ಕೊಡವ ನೃತ್ಯರೂಪಕವು ಪ್ರದರ್ಶಿತಗೊಂಡವು. ಈ ನೃತ್ಯ ರೂಪಕ್ಕೆ ಒಂದು ತಿಂಗಳು ತರಬೇತಿ…

Read More

ಮಡಿಕೇರಿ ಫೆ.3 : ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸಗಳಲ್ಲಿ ತೊಡಗಿರುವ ಜಿಲ್ಲೆಯಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶಾಸಕರಾದ ಕೆ.ಜಿ.ಬೋಪಯ್ಯ ಮತ್ತು ಎಂ.ಪಿ.ಅಪ್ಪಚ್ಚುರಂಜನ್ ಟ್ಯಾಬ್ ವಿತರಿಸಿದರು. ಶಾಸಕ ಕೆ.ಜಿ.ಬೋಪಯ್ಯ ಅವರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಇರುವ ಶಾಸಕರ ಕಚೇರಿಯಲ್ಲಿ ಹಾಗೂ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಜಿಲ್ಲಾ ಪಂಚಾಯತ್‍ನ ಶಾಸಕರ ಕಚೇರಿ ಆವರಣದಲ್ಲಿ ವಿತರಿಸಿದರು. ಮಡಿಕೇರಿ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಒಟ್ಟು 50 ಟ್ಯಾಬ್‍ಗಳನ್ನು ಶಾಸಕದ್ವಯರು ವಿತರಿಸಿದರು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಕುಟುಂಬದ ಮಕ್ಕಳಿಗೆ ಟ್ಯಾಬ್‍ನ್ನು ವಿತರಿಸಲಾಗುತ್ತಿದ್ದು, ಈ ಸೌಲಭ್ಯವನ್ನು ಪಡೆದುಕೊಂಡು ಉನ್ನತ ಶಿಕ್ಷಣ ಪಡೆಯುವಂತೆ ಸಲಹೆ ಮಾಡಿದರು. ತಾಲ್ಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ, ಇತರರು ಇದ್ದರು.

Read More

ಮಡಿಕೇರಿ ಫೆ.3 : ತಾಲ್ಲೂಕಿನ ಮರಗೋಡು ಗ್ರಾಮದ ನಿವಾಸಿ ಪಿ.ಜಿ.ರುಕ್ಮಿಣಿ (70) ಎಂಬುವವರು ಫೆ.1 ರಿಂದ ನಾಪತ್ತೆಯಾಗಿರುವ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎತ್ತರ 5 ಅಡಿ, ಕಪ್ಪು ಬಟ್ಟೆಯಲ್ಲಿ ಬಿಳಿ ಹೂಗಳಿರುವ ನೈಟಿ, ಕಾಲಿಗೆ ಗಂಬೂಟು ಹಾಕಿದ್ದಾರೆ. ಅರೆಗನ್ನಡ ಮತ್ತು ಕನ್ನಡ ಮಾತನಾಡುತ್ತಾರೆ. ಗೋಧಿ ಬಣ್ಣ, ತೆಳ್ಳಗಿನ ಶರೀರ, ಗೌಡ ಜನಾಂಗಕ್ಕೆ ಸೇರಿದವರಾಗಿದ್ದಾರೆ. ಇವರ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಪೊಲೀಸ್ ಉಪನಿರೀಕ್ಷಕರು, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ 08272-228777 ಅಥವಾ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ 08272- 229000 ನ್ನು ಸಂಪರ್ಕಿಸಬಹುದೆAದು ಪೊಲೀಸ್ ಪ್ರಕಟಣೆ ಕೋರಿದೆ.

Read More