ಸುಂಟಿಕೊಪ್ಪ,ಜ.8: ಮಾದಾಪುರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಟೇಟ್ ಆಫ್ ಇಂಡಿಯಾ ವತಿಯಿಂದ ಸಿ.ಎಸ್.ಆರ್. ಯೋಜನೆಯಡಿ ನೀಡಲಾದ ರೂ.4,45,000 ಲಕ್ಷದ ಸ್ಮಾರ್ಟ್ ಕ್ಲಾಸ್ ವಿಜ್ಞಾನ ಪ್ರಯೋಗಾಲಯವನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ್ ಉದ್ಘಾಟಿಸಿದರು. ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ಸರಕಾರಿ ಶಾಲೆಯ ವಿದ್ಯಾರ್ಥಿಗಳ ಕಲಿಕೆಗೆ ವಿಜ್ಞಾನ ಪ್ರಯೋಗಾಲಯ ಸಹಕಾರಿಯಾಗಲಿದ್ದು, ಅವರ ಭವಿಷ್ಯ ರೂಪಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೊಡುಗೆ ಅನನ್ಯವಾದದ್ದು. ವಿದ್ಯಾರ್ಥಿಗಳು ಇದನ್ನು ಸದುಪಯೋಗಿಸಿಕೊಂಡು ಉತ್ತಮ ಫಲಿತಾಂಶ, ಉನ್ನತ ಶಿಕ್ಷಣ ಪಡೆದು ಅರ್ಹ ಹುದ್ದೆ ಗಿಟ್ಟಿಸಿಕೊಂಡು ಪೋಷಕರಿಗೆ, ಸಮಾಜಕ್ಕೆ ಕೀರ್ತಿ ತರಬೇಕೆಂದು ಸಲಹೆ ನೀಡಿದರು. ಎಸ್ಬಿಐ ಅವರು ನೀಡಿದ ದೇಣಿಗೆಯಲ್ಲಿ ಶಾಲೆಗೆ ಸುಣ್ಣ ಬಣ್ಣ ಬಳಿಯಲು ಬಳಸಲಾಗಿದೆ ಎಂದು ಮುಖ್ಯ ಶಿಕ್ಷಕಿ ಶೋಭಾ ಹೇಳಿದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜೋಬಿ ಜೋಸ್, ಸದಸ್ಯರಾದ ಆರ್.ಎಂ.ವರಿಗಿಲಿ ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್, ಕೊಡಗು ಜಿಲ್ಲಾ ಪ್ರಾಥಮಿಕ ಶಾಲೆಯ ನೌಕಕರರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಶಿವಣ್ಣ,…
ಲೇಖಕ: admin
ಮಡಿಕೇರಿ ಜ.9 : ಮಾನವ ಕಲ್ಯಾಣಕ್ಕಾಗಿ ಅನೇಕ ಕಾರ್ಯಗಳನ್ನು ಕೈಗೊಳ್ಳುತ್ತಿರುವ, ‘ಲಜ್ಞಾ ಇಮಾಇಲ್ಲಾ’ ಎಂಬ ಹೆಸರಿನಿಂದ ಕರೆಯಲ್ಪಡುವ ಅಹ್ಮದಿಯಾ ಮುಸ್ಲಿಮ್ ಸಂಘಟನೆಯ ಮಹಿಳಾ ಘಟಕ 100 ವರ್ಷ ಪೂರ್ಣಗೊಂಡು ಶತಾಮನೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆ ಮಕ್ಕಳಿಗೆ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು. “ಲಜ್ನಾ ಇಮಾಇಲ್ಲಾ’ ಅಧ್ಯಕ್ಷೆ ರೂಮಾನ್ ರಿಜ್ವಾನ್ ನೇತೃತ್ವದಲ್ಲಿ ಕಾಟಕೇರಿಯ ಹರ್ಮಂದಿರ್ ಗುರುಕುಲ ಮಾದರಿ ಶಾಲೆಯ ವಿದ್ಯಾರ್ಥಿಗಳಿಗೆ ಮಡಿಕೇರಿಯ ಸರಕಾರಿ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ನಡೆದ ಶಿಬಿರ ನಡೆಯಿತು. 5 ವರ್ಷದಿಂದ 10 ವರ್ಷದೊಳಗಿನ 77 ಮಕ್ಕಳ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಲಾಯಿತು. ತೊಂದರೆ ಇದ್ದ ಮಕ್ಕಳಿಗೆ ಬೇಕಾದ ಔಷಧಿಗಳನ್ನು ವಿತರಿಸಲಾಯಿತು. ಈ ಸಂದರ್ಭ ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ರೂಪೇಶ್, ಮಕ್ಕಳ ವಿಭಾಗದ ಮುಖ್ಯಸ್ಥ ಡಾ. ಪುರುಶೋತ್ತಮ್, ಡಾ.ಅಪರ್ಣ ದತ್, ಡಾ.ಸುನಿತ, ಡಾ.ಆಶ್ಚರ್ಯ ಆರ್.ಪಾಟಿಲ್, ಡಾ.ಆಶ್ಚರ್ಯ ರಾಮಾನುಜನ್, ಡಾ.ಗಿರೀಶ್ ಬಿ.ಎಸ್, ಡಾ.ಅಫ್ರೀನ್, ಡಾ.ಮೆಲ್ವಿನ್, ಡಾ.ರವಿಚಂದ್ರನ್, ಡಾ.ನಳಿನಿ, ಶುಶ್ರೂಶಕ ಅಧಿಕಾರಿಗಳಾದ, ಡಿ.ಹೆಚ್. ಹರಿಣಾಕ್ಷಿ , ಎ.ನಳಿನಿ ಭಾಯಿ, ಎನ್.ಬಿ.ಭಾಗ್ಯಲಕ್ಷ್ಮಿ ಹಾಗೂ ಲ್ಯಾಬ್…
ಸುಂಟಿಕೊಪ್ಪ,ಜ.9 : ಕಾಜೂರು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಕರ ಜ್ಯೋತಿ ಪ್ರಯುಕ್ತ ಏ.14 ರಂದು ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದೆ. ಜ.14 ರಂದು ಬೆಳಿಗ್ಗೆ 9.30 ಗಂಟೆಗೆ ಗಣಪತಿ ಹೋಮ ಮತ್ತು ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ಜರುಗಲಿದೆ. ಸಂಜೆ 6 ಗಂಟೆಯಿಂದ ದೇವಾಲಯದಲ್ಲಿ ದೀಪ ಬೆಳಗಿಸಿ ನಂತರ ಭಜನಾ ಕಾರ್ಯಕ್ರಮ, ರಾತ್ರಿ 8 ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿನಿಯೋಗದ ನಂತರ ಭಕ್ತಾಧಿಗಳಿಗೆ ಅನ್ನದಾನವನ್ನು ಏರ್ಪಡಿಸಲಾಗಿದೆ ಎಂದು ಅಯ್ಯಪ್ಪ ದೇವಾಲಯದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಸುಂಟಿಕೊಪ್ಪ,ಜ.9 : ಕೊಡಗರಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ ಮಹಿಳೆಯರಿಗೆ ಮಾಹಿತಿ ಹಾಗೂ ಶಿಶು ಪ್ರದರ್ಶನ ಕಾರ್ಯಕ್ರಮ ನಡೆಯಿತು. ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ವಿಚಾರಕಿ ಬಿ.ಎಸ್.ಶಿಲಾ ರೈ ಮಾತನಾಡಿ, ಗರ್ಭಿಣಿಯರು ಟಿ.ಡಿ.ಚುಚ್ಚುಮದ್ದು ತೆಗೆದುಕೊಳ್ಳಬೇಕು. 0.ಯಿಂದ 1 ವರ್ಷ ಮಗುವಿಗೆ ಬಿಸಿಜಿ ಯಿಂದ ಎಂ.ಆರ್. 2 ಮದ್ದು ಗಳನ್ನು ನೀಡಬೇಕು. ಒಂದು ಮಗುವಿನಿಂದ ಇನ್ನೊಂದು ಮಗುವಿಗೆ ಒಂದು ಅಂತರವಿರಬೇಕು ಎಂದು ಹೇಳಿದರು. ಆರೋಗ್ಯ ಕಾರ್ಯಕರ್ತೆ, ಕಿರಿಯ ಮಹಿಳಾ ಆರೋಗ್ಯ ಕಾರ್ಯಕರ್ತೆ ಕೆ.ಸಿ.ಲತಾ, ಆಶಾ, ಕಾರ್ಯರ್ತೆ ಜ್ಯೋತಿ ಭಾಸ್ಕರ ದಿನದ ಮಹತ್ವದ ಕುರಿತು ಮಾತನಾಡಿದರು. ಕೊಡಗರಹಳ್ಳಿ ಗ್ರಾ.ಪಂ.ಸದಸ್ಯ ಚೆನ್ನಬಸವಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಆರೋಗ್ಯವಂತ ಮಕ್ಕಳನ್ನು ಗುರುತಿಸಿ ಬಹುಮಾನವನ್ನು ವಿತರಿಸಿದರು. ಸಮುದಾಯ ಆರೋಗ್ಯ ಅಧಿಕಾರಿ ಟೆಸ್ನಿ ಥೋಮಸ್, ಆಶಾ ಕಾರ್ಯಕರ್ತರಾದ ಕವಿತಾ, ಗೀತ, ಅಂಗನವಾಡಿ ಸಹಾಯಕಿ ಸಂಧ್ಯಾ, ಕೊಡಗರಹಳ್ಳಿ ಸರಕಾರಿ ಮಾದರಿ ಪ್ರಾಥಮಿ ಶಾಲೆಯ ಮುಖ್ಯೋಪಾದ್ಯಾಯನಿ ಭಾಗೀರಥಿ, ಉಪ್ಪುತೋಡು ಅಂಗನವಾಡಿ ಕಾರ್ಯಕರ್ತೆ ಮಹದೇವಮ್ಮ ಸ್ವಾಗತಿಸಿ, ಕೊಡಗರಹಳ್ಳಿ ಅಂಗನವಾಡಿ ಕಾರ್ಯಕರ್ತೆ ಎಸ್.ಎನ್.ಸಾವಿತ್ರಿ ನಿರೂಪಿಸಿ, ವಂದಿಸಿದರು.
ಮಡಿಕೇರಿ ಜ.9 : ಹೃದಯಾಘಾತದಿಂದ ಬಾಲಕನೋರ್ವ ಮೃತಪಟ್ಟಿರುವ ಘಟನೆ ಕುಶಾಲನಗರದ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ. ಮಂಜಾಚಾರಿ ಎಂಬುವವರ ಪುತ್ರ ಕೊಪ್ಪದ ಭಾರತಮಾತಾ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಕೀರ್ತನ್ (12) ಮೃತ ದುರ್ದೈವಿ. ಈತನ ತಂದೆ ಇದೇ ಶಾಲೆಯಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶನಿವಾರ ರಾತ್ರಿ ನಿದ್ರಿಸುತ್ತಿದ್ದ ಕೀರ್ತನ್ ಎರಡು ಬಾರಿ ಕಿರುಚಿಕೊಂಡಿದ್ದು, ಪೋಷಕರು ಕುಶಾಲನಗರ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಅತ್ಯಂತ ಸಣ್ಣ ವಯಸ್ಸಿನಲ್ಲಿ ಹೃದಯಾಘಾತದಿಂದ ಬಾಲಕ ಮೃತಪಟ್ಟಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ದಿಗ್ಭ್ರಮೆ ಮೂಡಿದೆ.
ಮಡಿಕೇರಿ ಜ.9 : ಮೂರ್ನಾಡು ಸಮೀಪದ ಮುತ್ತಾರ್ಮುಡಿ ಗ್ರಾಮದಲ್ಲಿರುವ ಸಂರಕ್ಷಿತ ಭದ್ರಕಾಳಿ ದೇವರ ಕಾಡಿಗೆ ಅಕ್ರಮ ಪ್ರವೇಶ ಮಾಡಿ 2 ಹೆಣ್ಣು ಕಾಡು ಕುರಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪದಡಿ ಮಡಿಕೇರಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಕಾಫಿ ಕೆಲಸಕ್ಕಾಗಿ ಮುತ್ತಾರ್ಮುಡಿಗೆ ಬಂದಿರುವ ತಮಿಳುನಾಡಿನ ಸೇಲಂ ಜಿಲ್ಲೆ ಅತ್ತೂರು ನಿವಾಸಿಗಳಾದ ಜಯರಾಮ್, ಮಥಾಯಂ, ಅಶೋಕ್ ಹಾಗೂ ಮುತ್ತಾರ್ಮುಡಿ ಗ್ರಾಮದ ನಿವಾಸಿ ತಮ್ಮಯ್ಯ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಶನಿವಾರ ರಾತ್ರಿ ಮಡಿಕೇರಿ ವಲಯಕ್ಕೆ ಸೇರಿದ ಮುತ್ತಾರ್ಮುಡಿ ಗ್ರಾಮದ ಭದ್ರಕಾಳಿ ದೇವರ ಕಾಡಿಗೆ ತಂಡವೊಂದು ಬೇಟೆಗೆ ತೆರಳಿರುವ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಮಡಿಕೇರಿ ವಿಭಾಗದ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಮೂವರು ಬೇಟೆಗಾರರನ್ನು ಬಂಧಿಸಿದರು. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ ಸಂದರ್ಭ ಅಲ್ಲಿನ ನಿವಾಸಿ ತಮ್ಮಯ್ಯ ಎಂಬುವವರ ಬಂದೂಕು ಬಳಸಿ 2 ಹೆಣ್ಣು ಕಾಡುಕುರಿಗಳನ್ನು ಬೇಟೆಯಾಡಿರುವುದಾಗಿ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ…
ಮಡಿಕೇರಿ ಜ.7 : ಆರೋಗ್ಯ ಇಲಾಖೆಯ ನೌಕರನೊಬ್ಬ ಶಾಲಾ ವಿದ್ಯಾರ್ಥಿಗಳಿಗೆ ಮತಪ್ರಚಾರದ ಪುಸ್ತಕಗಳನ್ನು ಹಂಚಿ ಮತಾಂತರ ಯತ್ನ ಮಾಡುತ್ತಿದ್ದ ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆಯ ಪ್ರಮುಖರು ನೀಡಿದ ದೂರಿನನ್ವಯ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿಂದೂ ಜಾಗರಣಾ ವೇದಿಕೆಯ ಪ್ರಮುಖ ಟಿ.ಎ.ಕುಮಾರ್ ಅವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ನಿಶಾಂತ್ ನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದರು. ಈತನ ಬಳಿ ಕ್ರೈಸ್ತ ಮತಕ್ಕೆ ಸಂಬಂಧಿಸಿದ ಪುಸ್ತಕಗಳು ದೊರಕಿವೆ. ನಗರದ ಹೃದಯ ಭಾಗದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಹಂಚುತ್ತಿದ್ದ ಸಂದರ್ಭ ಹಿಂದೂ ಜಾಗರಣಾ ವೇದಿಕೆಯ ಪ್ರಮುಖರು ಪೊಲೀಸರಿಗೆ ಮಾಹಿತಿ ನೀಡಿದರು ಎಂದು ಹೇಳಲಾಗಿದೆ.
ಮಡಿಕೇರಿ ಜ.7 : ಸರ್ಕಾರ ಕ್ರಷರ್ ಮತ್ತು ಕಲ್ಲುಕೋರೆ ಮಾಲೀಕರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿರುವ ಹಿನ್ನೆಲೆ ಶನಿವಾರದಿಂದ ಜಿಲ್ಲೆಯ ಎಲ್ಲಾ ಕ್ವಾರಿ ಮತ್ತು ಕ್ರಷರ್ಗಳು ಚಾಲನೆಯಲ್ಲಿರುತ್ತದೆ ಎಂದು ಕೊಡಗು ಜಿಲ್ಲಾ ಕ್ವಾರಿ ಅಂಡ್ ಕ್ರಷರ್ ಓನರ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ವಿ.ಎಮ್.ವಿಜಯ್ ಹಾಗೂ ಕಾರ್ಯದರ್ಶಿ ಬಿ.ಕೆ. ರಮೇಶ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕ್ವಾರಿ ಮತ್ತು ಕ್ರಷರ್ ಮಾಲೀಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸ್ಟೇಟ್ ಫೆಡರೇಷನ್ ಆಫ್ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಅಸೋಸಿಯೇಷನ್ ವತಿಯಿಂದ ರಾಜ್ಯದಲ್ಲಿರುವ ಎಲ್ಲಾ ಕ್ವಾರಿ ಮತ್ತು ಕ್ರಷರ್ ಗಳಲ್ಲಿ ಯಾವುದೇ ಪ್ರೊಡಕ್ಷನ್ ಮತ್ತು ಸೇಲ್ಸ್ ಮಾಡದಂತೆ ಬಂದ್ ಮಾಡಿ ಮುಷ್ಕರ ನಡೆಸಲಾಗಿದ್ದು, ಅದರಂತೆ ಕೊಡಗಿನ ಎಲ್ಲಾ ಕ್ವಾರಿ ಮತ್ತು ಕ್ರಷರ್ ಗಳನ್ನು ಸುಮಾರು 17 ದಿನಗಳವರೆಗೆ ಬಂದ್ ಮಾಡಿ ಮುಷ್ಕರ ನಡೆಸಲಾಗಿತ್ತು. ಆದರೆ ಸರ್ಕಾರ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ನೀಡಿರುವ ಹಿನ್ನೆಲೆ ಇಂದಿನಿAದ ಜಿಲ್ಲೆಯ ಎಲ್ಲಾ ಕ್ವಾರಿ ಮತ್ತು ಕ್ರಷರ್ ಗಳು ಚಾಲನೆಯಲ್ಲಿರಲಿದ್ದು, ಮುಷ್ಕರಕ್ಕೆ…
ಸೋಮವಾರಪೇಟೆ ಜ.7 : ಒಕ್ಕಲಿಗರ ಪ್ರಗತಿಪರ ಮಹಿಳಾ ವೇದಿಕೆಯ ನೂತನ ಸಾಲಿನ ಅಧ್ಯಕ್ಷರಾಗಿ ಪೂರ್ಣಿಮಾ ಗೋಪಾಲ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಆಶಾ ಯೊಗೇಂದ್ರ ಆಯ್ಕೆಯಾದರು. ಒಕ್ಕಲಿಗರ ಸಮುದಾಯ ಭವನದಲ್ಲಿ ಇತ್ತೀಚೆಗೆ ಅಧ್ಯಕ್ಷರಾದ ಲೋಕೇಶ್ವರಿ ಗೋಪಾಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಉಪಾಧ್ಯಕ್ಷರಾಗಿ ಹರಿಣಿ ಕುಶಾಲಪ್ಪ, ಖಜಾಂಚಿಯಾಗಿ ತನ್ಮಯಿ ಪ್ರವೀಣ್, ಭಾತ್ಮೀದಾರರಾಗಿ ಚಂದ್ರಿಕಾ ಕುಮಾರ್ ಆಯ್ಕೆಯಾದರು.
ಸೋಮವಾರಪೇಟೆ ಜ.7 : ಮೀಸಲು ಅರಣ್ಯದ ಸರಹದ್ದಿನಲ್ಲಿ ಅರಣ್ಯ ಇಲಾಖೆಯ ವತಿಯಿಂದ ನಿರ್ಮಾಣವಾಗುತ್ತಿರುವ ರೈಲ್ವೆ ಬ್ಯಾರಿಕೇಡ್ ಅವೈಜ್ಞಾನಿಕವಾಗಿದ್ದು, ಕಾಡಾನೆಗಳು ಬ್ಯಾರಿಕೇಡ್ನಲ್ಲಿ ನುಸುಳಿ ಬರುತ್ತಿವೆ ಎಂದು ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್.ವಿಶ್ವ ಆರೋಪಿಸಿದರು. ಸ್ಥಳೀಯ ಶಾಸಕ ಅಪ್ಪಚ್ಚು ರಂಜನ್ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಕೆ.ಡಿಪಿ.ಸಭೆಯಲ್ಲಿ ಅವರು ಅರೋಪ ಮಾಡಿದರು. ಎ.ಸಿ.ರೂಂ ನಲ್ಲಿ ಕುಳಿತ ಅಧಿಕಾರಿಗಳು ಯೋಜನೆ ರೂಪಿಸುತ್ತಾರೆ. ಅಂತಹವರ ಅಸಡ್ಡೆಯಿಂದ ಸರ್ಕಾರದ ಕೋಟ್ಯಾಂತರ ರೂ. ಹಣ ಪೋಲಾಗುತ್ತದೆ ಎಂದ ಅವರು ಎರಡು ಪಟ್ಟಿಯ ರೈಲ್ವೆ ಬ್ಯಾರಿಕೇಡ್ ನಿರ್ಮಿಸುತ್ತಿದ್ದಾರೆ. ಈಗ ಕಾಡಾನೆಗಳು ಪಟ್ಟಿಯೊಳಗೆ ನುಗ್ಗಿ ಕೃಷಿ ಭೂಮಿಗೆ ಲಗ್ಗೆಯಿಡುತ್ತಿವೆ. ಇನ್ನಾದರೂ ಮೂರು ಪಟ್ಟಿಗಳನ್ನು ಅಳವಡಿಸುವಂತೆ ಆಗ್ರಹಿಸಿದರು. ಸರ್ಕಾರದಿಂದ ಅನುಮೋದನೆಗೊಂಡ ಯೋಜನೆಯಾಗಿದ್ದು, ಈಗ ಬದಲಾಯಿಸಲು ಸಾಧ್ಯವಿಲ್ಲ. ಕಾಮಗಾರಿ ನಂತರ ಮತ್ತೊಂದು ಪಟ್ಟಿ ಅಳವಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಎಸಿಎಫ್ ಗೋಪಾಲ್ ಹೇಳಿದರು. ಶಾಸಕರು ಮಾತನಾಡಿ, ರಾಜ್ಯದಲ್ಲಿ ಅತಿ ಕಡಿಮೆ ವಿದ್ಯುತ್ ಬಳಸುವ ಬಳಕೆದಾರರೆಂದರೆ ಕಾಫಿ ಬೆಳೆಗಾರರು. ಅವರ 10 ಎಚ್.ಪಿ.…






