ಮಡಿಕೇರಿ ಮಾ.13 : ರಾಜ್ಯಾದ್ಯಂತ ಬಿಜೆಪಿ ಯುವಮೋರ್ಚಾದ ವತಿಯಿಂದ ನಡೆಯುತ್ತಿರುವ ಪ್ರಗತಿ ರಥ ಯಾತ್ರೆಯ 2 ವಾಹನಗಳು ಈಗಾಗಲೇ ಕೊಡಗಿನಲ್ಲಿ ಸಂಚರಿಸುತ್ತಿದ್ದು, ಮಾರ್ಚ್ 14 ರ ಮಂಗಳವಾರ ದಿಂದ ಮಡಿಕೇರಿ ಗ್ರಾಮಾಂತರ ಮಂಡಲದ ಎಲ್ಲಾ ಗ್ರಾಮಗಳಲ್ಲಿ ಸುಮಾರು 9 ರಿಂದ 10 ದಿನಗಳವರೆಗೆ ಸಂಚರಿಸಲಿದೆ ಎಂದು ಪ್ರಗತಿ ರಥ ಯಾತ್ರೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಸಹಪ್ರಭಾರಿ ಮತ್ತು ಮಡಿಕೇರಿ ಗ್ರಾಮಾಂತರ ಮಂಡಲ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಚೇತನ್ ಬಂಗೇರ ಪತ್ರಿಕಾ ಪ್ರಕಣೆಯಲ್ಲಿ ತಿಳಿಸಿದ್ದಾರೆ. ಫೆಬ್ರವರಿ 27ರಿಂದ ಕೊಡಗಿನಲ್ಲಿ ಆರಂಭವಾಗಿರುವ ಪ್ರಗತಿ ರಥಯಾತ್ರೆಯ 1 ವಾಹನ ಸೋಮವಾರಪೇಟೆ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದು, ಇನ್ನೊಂದು ವಾಹನ ಈಗಾಗಲೇ ವಿರಾಜಪೇಟೆ ಮತ್ತು ಗೋಣಿಕೊಪ್ಪ ತಾಲ್ಲೂಕಿನಾದ್ಯಂತ ಸಂಚರಿಸಿ ಮಡಿಕೇರಿ ಗ್ರಾಮಂತರ ಪ್ರದೇಶಗಳಿಗೆ ಹೊರಡಲು ಸಿದ್ದವಾಗಿದೆ. ಮಾರ್ಚ್ 14 ರಿಂದ ಆರಂಭವಾಗಿ ಮಾರ್ಚ್ 22ರ ವರೆಗೆ ಮಡಿಕೇರಿ ಗ್ರಾಮಾಂತರ ಮಂಡಲಕ್ಕೆ ಒಳಪಡುವ ಒಟ್ಟು 25 ಗ್ರಾಮ ಪಂಚಾಯತ್ (ಶಕ್ತಿಕೇಂದ್ರ) ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಅಂದರೆ ಪೆರಾಜೆ ಯಿಂದ…
ಲೇಖಕ: admin
ಮಡಿಕೇರಿ ಮಾ.13 : ಎರಡು ರಾಷ್ಟ್ರೀಯ ಪಕ್ಷಗಳು ಮತದಾರರನ್ನು ಓಲೈಸುವ ಕೆಲಸ ಮಾಡುತ್ತಿದ್ದು, ಚುನಾವಣೆಯ ನೀತಿ ನಿಯಮಗಳನ್ನು ಗಾಳಿಗೆ ತೂರಿ ಮತದಾರರನ್ನು ಭ್ರಷ್ಟರನ್ನಾಗಿಸುವ ಕೆಲಸ ಮಾಡುತ್ತಿವೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ರಾಷ್ಟ್ರೀಯ ಪಕ್ಷಗಳಿಗೆ ತಮ್ಮ ಸಾಧನೆಗಳನ್ನು ಹೇಳಿಕೊಂಡು ಜನರ ಮುಂದೆ ಹೋಗಲು ಅಜೆಂಡಾಗಳಿಲ್ಲ. ಓಟ್ ಬ್ಯಾಂಕ್ಗಾಗಿ ಚುನಾವಣೆಯ ನೀತಿಗಳನ್ನು ಗಾಳಿಗೆ ತೂರಿ ಮತದಾರರಿಗೆ ಆಮಿಷಗಳನ್ನೊಡ್ಡುತ್ತಿವೆ. ಚನಾವಣಾ ಆಯೋಗ ತಕ್ಷಣ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕೆAದು ಒತ್ತಾಯಿಸಿದರು. ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ, ತನ್ನ ತಪ್ಪುಗಳನ್ನು ಮರೆಮಾಚಲು ಭಾವನಾತ್ಮಕವಾಗಿ ಜನರನ್ನು ಕೆಣಕುತ್ತಿದೆ ಎಂದು ಆರೋಪಿಸಿದರು. ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ರಚನಾತ್ಮಕವಾಗಿ ಭ್ರಷ್ಟ ವ್ಯವಸ್ಥೆಯನ್ನು ವಿರೋಧಿಸುವಲ್ಲಿ ವಿಫಲವಾಗಿವೆ. ಕೊಡಗಿನ ಜ್ವಲಂತ ಸಮಸ್ಯೆಗಳನ್ನು ಸರಿಪಡಿಸುವಲ್ಲಿ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವಲ್ಲಿ ವಿಫಲವಾಗಿರುವ ಬಿಜೆಪಿ ಸರ್ಕಾರದ ವಿರುದ್ಧ ಈ ಪಕ್ಷಗಳು ಯಾವ ರೀತಿಯ ಹೋರಾಟವನ್ನು ಮಾಡಿವೆ ಎಂದು ಪ್ರಶ್ನಿಸಿದರು.…
ಮಡಿಕೇರಿ ಮಾ.13 : ಚುನಾವಣಾ ಭಾಷಣದ ಸಂದರ್ಭ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಮುಸಲ್ಮಾನರ ಧಾರ್ಮಿಕ ಭಾವನೆಗೆ ದಕ್ಕೆ ತಂದಿದ್ದಾರೆ ಎಂದು ಆರೋಪಿಸಿರುವ ಜಾತ್ಯತೀತ ಜನತಾದಳದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾಪೋಕ್ಲುವಿನ ಎಂ.ಎ.ಮನ್ಸೂರ್ ಆಲಿ, ತಕ್ಷಣ ಪೊಲೀಸ್ ಇಲಾಖೆ ಹಾಗೂ ಚುನಾವಣಾ ಆಯೋಗ ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಚೋದನಾಕಾರಿ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿ ಮೂಡಿಸಿ ತಮಾಷೆ ನೋಡುವ ಕೀಳು ಮಟ್ಟದ ರಾಜಕಾರಣವನ್ನು ಮಾಡುತ್ತಿರುವ ಈಶ್ವರಪ್ಪ ಅವರು ಮತ್ತೆ ಮತ್ತೆ ಮತೀಯ ಭಾವನೆಗಳನ್ನು ಕೆಣಕಿ ರಾಜಕೀಯ ಲಾಭ ಮಾಡಿಕೊಳ್ಳಬಹುದೆನ್ನುವ ಭ್ರಮೆಯಲ್ಲಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಜಾಪ್ರಭುತ್ವ ರಾಷ್ಟç ಭಾರತದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಆಶಯದಂತೆ ಎಲ್ಲಾ ಧರ್ಮೀಯರು ಸೌಹಾರ್ದತೆಯಿಂದ ಬದುಕು ಸಾಗಿಸುತ್ತಿದ್ದಾರೆ. ಆದರೆ ಈಶ್ವರಪ್ಪ ಅವರಂತಹ ರಾಜಕಾರಣಿಗಳು ಮುಸಲ್ಮಾನರನ್ನು ಪರಕೀಯರಂತೆ ಪ್ರತಿಬಿಂಬಿಸುತ್ತಾ ನೋವುಂಟು ಮಾಡುತ್ತಿದ್ದಾರೆ. ನಮ್ಮ ಧಾರ್ಮಿಕ ಆಚರಣೆಗಳನ್ನು ಕೀಳಾಗಿ ಕಾಣುವುದನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ. ಚುನಾವಣೆಗಳು ಬರುತ್ತವೆ, ಹೋಗುತ್ತವೆ, ಆದರೆ ಮಾನವ…
ಮಡಿಕೇರಿ ಮಾ.13 : ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೆ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಧಾರ್ಮಿಕ ಭಾವನೆಗಳನ್ನು ಕೆಣಕಿ ರಾಜಕೀಯ ಲಾಭ ಮಾಡಿಕೊಳ್ಳುವ ಹುನ್ನಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ಹಾಗೂ ತಾ.ಪಂ ಮಾಜಿ ಸದಸ್ಯ ಕೆ.ಐ.ಮಹಮ್ಮದ್ ರಫೀಕ್, ಆಜಾನ್ ಕುರಿತು ನೀಡಿರುವ ಹೇಳಿಕೆ ಖಂಡನೀಯವೆoದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಾತಿ, ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಒಡಕು ಮೂಡಿಸಿ ರಾಜಕೀಯ ಲಾಭ ಮಾಡಿಕೊಳ್ಳುವ ತಂತ್ರಗಾರಿಕೆಯನ್ನು ಈಶ್ವರಪ್ಪ ಅವರು ಕರಗತ ಮಾಡಿಕೊಂಡಿದ್ದಾರೆ. ಚುನಾವಣಾ ಪ್ರಚಾರಕ್ಕೆ ಹೋದಲೆಲ್ಲ ಮುಸಲ್ಮಾನರ ಆಜಾನ್ ಕುರಿತು ಕೀಳಾಗಿ ಮಾತನಾಡಿದ್ದಾರೆ. ನಾವು ನಂಬಿರುವ ದೇವರ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡಿ ಅಲ್ಪಸಂಖ್ಯಾತರ ಮನಸ್ಸಿಗೆ ನೋವುಂಟು ಮಾಡಿದ್ದಾರೆ ಎಂದು ಟೀಕಿಸಿದ್ದಾರೆ. ಆಡಳಿತ ಪಕ್ಷ ತಾನು ಮಾಡಿದ ಅಭಿವೃದ್ಧಿ ಕಾರ್ಯಗಳ ಆಧಾರದಲ್ಲಿ ಚುನಾವಣೆಯನ್ನು ಎದುರಿಸಬೇಕಾಗುತ್ತದೆ. ಆದರೆ ಇದು ಸಾಧ್ಯವಾಗದೆ ಸೋಲಿನ ಹತಾಶ ಮನೋಭಾವದಲ್ಲಿರುವ ಈಶ್ವರಪ್ಪ ಅವರು ಆಜಾನ್ ನ್ನು ವ್ಯಂಗ್ಯ…
ಮಡಿಕೇರಿ ಮಾ.13 : ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೋಮವಾರ ಚಾಲನೆ ನೀಡಿದರು. ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಬಾಕ್ಸಿಂಗ್ ಒಳಾಂಗಣ ಕ್ರೀಡಾಂಗಣದಲ್ಲಿ 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಆಲ್ಬೆಂಡಜೋಲ್ 400 ಎಂ.ಜಿ. ಮಾತ್ರೆ ವಿತರಿಸಿ ಚಾಲನೆ ನೀಡಿದರು. ಮಕ್ಕಳು ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು. ಆಟವಾಡಿದ ನಂತರ ಸಾಬೂನಿನಿಂದ ಕೈಕಾಲು ತೊಳೆಯಬೇಕು. ರಕ್ತಹೀನತೆ ಮತ್ತು ಅಪೌಷ್ಟಿಕತೆ ತಡೆಯಬೇಕು. ಆರೋಗ್ಯದ ಕಡೆ ಗಮನಹರಿಸಬೇಕು ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿ ಮಾರ್ಚ್, 14 ರಿಂದ 25 ರವರೆಗೆ ಮೋಪ್ ಅಪ್ ಡೇ (ಒoಠಿ uಠಿ ಜಚಿಥಿ) ಕಾರ್ಯಕ್ರಮ ನಡೆಯಲಿದ್ದು, 1 ರಿಂದ 19 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಆಲ್ಬೆಂಡಜೋಲ್-400 ಎಂ.ಜಿ ಮಾತ್ರೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು. ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ (ಎನ್ಡಿಡಿ) ಕೊಡಗು ಜಿಲ್ಲೆಯಲ್ಲಿ 1 ರಿಂದ 19 ವರ್ಷದೊಳಗಿನ…
ಮಡಿಕೇರಿ ಮಾ.13 : ಎಸ್ವೈಎಸ್ ಮಡಿಕೇರಿ ಸರ್ಕಲ್ ನ ಮಹಾಸಭೆಯು ಬೇತ್ರಿ ನುಸ್ರತುಲ್ ಇಸ್ಲಾಂ ಮದ್ರಸದಲ್ಲಿ ಇಸ್ಮಾಹಿಲ್ ಝೈನಿ ಉಸ್ತಾತದರ ಅಧ್ಯಕ್ಷತೆಯಲ್ಲಿ ನಡೆಯಿತು. ಶಂಸುದ್ದೀನ್ ಅಮ್ಜದಿ ಉಸ್ತಾದರು ಸ್ವಾಗತವನ್ನು ಮತ್ತು ವರದಿಯನ್ನು ನಡೆಸಿದರು. ವೀಕ್ಷಕರಾಗಿ ಆಗಮಿಸಿದ ಹಮೀದ್ ಮುಸ್ಲಿಯಾರ್ ಕೊಳಕೇರಿ ನೂತನ ಸಮಿತಿಯನ್ನು ರಚಿಸಿದರು. ಅಧ್ಯಕ್ಷರಾಗಿ ಹನೀಫ್ ರಹ್ಮಾನಿ ಕೊಂಡಂಗೇರಿ, ಪ್ರದಾನ ಕಾರ್ಯದರ್ಶಿಯಾಗಿ ಶಮೀರ್ ಬೇತ್ರಿ, ಕೋಶಾಧಿಕಾರಿಯಾಗಿ ಅಬ್ದುಲ್ಲ ಮುಸ್ಲಿಯಾರ್ ಬಲಮುರಿ ಹಾಗೂ ಉಪಾಧ್ಯಕ್ಷರಾಗಿ ಹಮೀದ್ ಹಂಝಧಿ ಕೊಂಡಂಗೇರಿ, ದಹ್ವಾ ಕಾರ್ಯದರ್ಶಿಯಾಗಿ ಕಬೀರ್ ಝುಹರಿ, ಸಾಂತ್ವನ ಕಾರ್ಯದರ್ಶಿಯಾಗಿ, ರಸಾಕ್ ಬಲಮುರಿ, ಸೋಶಿಯಲ್ ಕಾರ್ಯದರ್ಶಿಯಾಗಿ ಹನೀಫ ಬೇತ್ರಿ,ಹಾಗೂ ಸದಸ್ಯರುಗಳಾಗಿ ಸಂಷುಧೀನ್ ಅಮ್ಜದಿ, ಇಬ್ರಾಹಿಂ ಬೇತ್ರಿ,ಇಸ್ಮಾಹಿಲ್ ಝೈನಿ,ಇಬ್ರಾಹಿಂ ಹಾಜಿ ಕೊಂಡಂಗೇರಿ, ರಶೀದ್ ಬೇತ್ರಿ, ಅಸ್ಕರ್ ಮೂರ್ನಾಡ್, ಫೈಝಲ್ ಕೊಂಡಂಗೇರಿ, ಖಾದರ್ ಹಾಕತೂರು, ಸಂಶುದೀನ್ ಮುಸ್ಲಿಯಾರ್ ಕೊಂಡಗೇರಿ, ಉಸ್ಮಾನ್ ಮೂರ್ನಾಡ್, ಕಾಸಿಮ್ ಸಕ್ವಾಫಿ ಕೊಂಡಗೆರಿ ಅವರನ್ನು ನೇಮಕ ಮಾಡಲಾಯಿತು.
ಮಡಿಕೇರಿ ಮಾ.13 : ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುತ್ತಿರುವ ಮಾಸ್ಟರ್ ಗೇಮ್ಸ್ ಚಾಂಪಿಯನ್ ಶಿಪ್ನಲ್ಲಿ ಕೊಡಗಿನ ಮೂವರು ಹಿರಿಯ ಕ್ರೀಡಾಪಟುಗಳು ಭಾರತವನ್ನು ಪ್ರತಿನಿಧಿಸಿ ಒಟ್ಟು 5 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದರಲ್ಲೂ ವಿಶೇಷವೆಂಬಂತೆ ಇಬ್ಬರು ಸಹೋದರರು ಈ ಹಿರಿಯರ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಸಾಧನೆ ಮಾಡಿ ಬೆರಗು ಗೊಳಿಸಿದ್ದಾರೆ. ಗೋಣಿಕೊಪ್ಪ ಹಾಗೂ ಕದನೂರು ಗ್ರಾಮಗಳ ನಿವಾಸಿಗಳಾದ ಪಾಲೆಕಂಡ ಬೆಳ್ಳಿಯಪ್ಪ ಹಾಗೂ ಪಾಲೆಕಂಡ ಬೋಪಯ್ಯ ಭಾರತವನ್ನು ಪ್ರತಿನಿಧಿಸಿದ ಅಪರೂಪದ ಸಹೋದರರಾಗಿದ್ದಾರೆ. ಇವರಿಬ್ಬರೂ ಭಾರತದಲ್ಲಿ ನಡೆದ ಮಾಸ್ಟರ್ಸ್ ಗೇಮ್ಸ್ ಕ್ರೀಡಾಕೂಟದಲ್ಲಿ ಇದುವರೆಗೆ 13 ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ. ಪಾಲೆಕಂಡ ಬೋಪಯ್ಯ ಅವರು ಜಾವಲಿನ್ ಥ್ರೋ ಹಾಗೂ ಡಿಸ್ಕಸ್ ಥ್ರೋನಲ್ಲಿ ಹಾಗು ಬೆಳ್ಳಿಯಪ್ಪ ಅವರು 100, 200, 1500 ಮೀಟರ್ ಕಾಲ್ನಡಿಗೆ ರೇಸ್ನಲ್ಲಿ ಭಾಗವಹಿಸಿದ್ದಾರೆ. ಹಿರಿಯರ ಕ್ರೀಡಾಕೂಟದಲ್ಲಿ ಬಿ.ಎಸ್.ಎನ್.ಎಲ್.ನ ನಿವೃತ್ತ ಉದ್ಯೋಗಿ, ಕರ್ನಾಟಕದ ಮಾಸ್ಟರ್ಸ್ ಕ್ರೀಡಾಕೂಟ ಸಂಘದ ಅಧ್ಯಕ್ಷೆ ಮರಾಮಡ ಮಾಚಮ್ಮ ಅವರು ಕೂಡ ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕ ಗಳಿಸಿದ್ದಾರೆ.
ಮಡಿಕೇರಿ ಮಾ.13 : ಶಾಲಾ ಶಿಕ್ಷಣ, ಸಾಕ್ಷರತಾ, ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರು ಮಾರ್ಚ್, 15 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಮಾರ್ಚ್, 15 ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿ ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎ.ಆರ್.ರವಿ ಅವರು ತಿಳಿಸಿದ್ದಾರೆ.
ಮಡಿಕೇರಿ ಮಾ.13 : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾರ್ಚ್, 17 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಮಿನಿ ಉದ್ಯೋಗ ಮೇಳ’ ನಡೆಯಲಿದೆ. ಉದ್ಯೋಗ ಮೇಳದಲ್ಲಿ ಲಿಥಿಯಂ ಅರ್ಬನ್ ಟೆಕ್ನಾಲಾಜಿಸ್(ಡ್ರೈವರ್ ಜಾಬ್), ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಎಸ್ಎಲ್ಎನ್ ಕಾಫಿ ಪ್ರೈ.ಲಿ., ಕುಶಾಲನಗರ, ಮಡಿಕೇರಿ ಸ್ಮಾರ್ಟ್ ಬಜಾರ್ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ.08272-225851 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಉಮಾ ಅವರು ತಿಳಿಸಿದ್ದಾರೆ.
ಮಡಿಕೇರಿ ಮಾ.13 : ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ಮಾರ್ಚ್, 15 ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ 66/11ಕೆವಿ ಪೊನ್ನಂಪೇಟೆ, 66/11 ಕೆವಿ ವಿರಾಜಪೇಟೆ, 33/11 ಕೆವಿ ಶ್ರೀಮಂಗಲ, 33/11 ಕೆವಿ ಸಿದ್ದಾಪುರ 33/11 ಕೆವಿ ಮೂರ್ನಾಡು ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ ವಿರಾಜಪೇಟೆ, ಬಿ ಶೆಟ್ಟಗೇರಿ, ಬೇತ್ರೀ, ಕಡಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಅವರು ಕೋರಿದ್ದಾರೆ.






