ಗೋಣಿಕೊಪ್ಪ ಜ.7 : ಕೊಡಗು ಪ್ರೆಸ್ ಕ್ಲಬ್, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಗೋಣಿಕೊಪ್ಪ ಕಾಲ್ಸ್ ಸಹಯೋಗದಲ್ಲಿ ಕಾಲ್ಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಬೆಳ್ಳಿ ಮಹೋತ್ಸವ ಕಾರ್ಯಕ್ರಮಕ್ಕೆ ಸಂಭ್ರಮದ ಚಾಲನೆ ನೀಡಲಾಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಬೆಳ್ಳಿ ಮಹೋತ್ಸವ ಲಾಂಛನ ಅನಾವರಣ, ಚಿತ್ರಕಲೆಯೊಂದಿಗೆ ಪ್ರಾರ್ಥನೆ, ಅತಿಥಿಗಳಿಂದ ಚಿತ್ರಕಲೆ ಚಿತ್ತಾರ ಪ್ರಸ್ತುತ ಪಡಿಸಲಾಯಿತು. ಜಿಲ್ಲೆಯ ವಿವಿಧ ಭಾಗಗಳಿಂದ 317 ಸ್ಪರ್ಧಿಗಳು ಭಾಗವಹಿಸಿ ಕಲೆಯ ಮೂಲಕ ಸಂದೇಶ ಸಾರಿದರು. ಪ್ರಕೃತಿ, ಕೊಡಗಿನ ಇತಿಹಾಸ, ಕಾವೇರಿ ಐತಿಹ್ಯ ಕಲೆಯ ಮೂಲಕ ಹೊರ ಹೊಮ್ಮಿತು. ಪುತ್ತಾಮನೆ ವಿದ್ಯಾ ಜಗದೀಶ್ ಪ್ರಕೃತಿ ಹಾಡಿಗೆ ಕಲಾವಿದ ಬಿ. ಆರ್. ಸತೀಶ್ ಚಿತ್ರ ಬಿಡಿಸಿ ಪ್ರಾರ್ಥನೆ ಕಾರ್ಯಕ್ರಮವನ್ನು ವಿಶೇಷವಾಗಿ ನಡೆಸಿಕೊಟ್ಟರು. ಉದ್ಘಾಟನೆ : ಅಂತಾರಾಷ್ಟ್ರೀಯ ಅಥ್ಲೆಟ್ ತೀತಮಾಡ ಅರ್ಜುನ್ ದೇವಯ್ಯ ಲಾಂಛನ ಅನಾವರಣಗೊಳಿಸಿ ಮಾತನಾಡಿ, ಭಾವನೆಗಳನ್ನು ಅಲೆಯಾಗಿ ಬಡಿಯದಂತೆ ನಿಯಂತ್ರಿಸುವ ಸಾಮರ್ಥ್ಯ ಮುಖ್ಯ. ಜೀವನದಲ್ಲಿ ಶಿಸ್ತು ಹೆಚ್ಚು ಸಾಧಿಸಲು ಸಹಕಾರಿಯಾಗುತ್ತದೆ. ಗುರು ಗೌರವ ಕಾಪಾಡಿಕೊಳ್ಳಬೇಕು ಎಂದರು. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ…
ಲೇಖಕ: admin
ಕುಶಾಲನಗರ, ಜ.7: ಜಲಮೂಲಗಳು ಕಲುಷಿತಗೊಳ್ಳದಂತೆ ಪ್ರತಿಯೊಬ್ಬರೂ ಜಾಗೃತಿ ವಹಿಸುವ ಮೂಲಕ ಸ್ವಚ್ಚ ಕಾವೇರಿ ಕನಸು ನನಸಾಗಲು ಸಾಧ್ಯ ಎಂದು ಶ್ರೀ ಮುತ್ತಪ್ಪ ದೇವಾಲಯ ಸೇವಾ ಟ್ರಸ್ಟ್ ಉಪಾಧ್ಯಕ್ಷ ಆರ್.ಚಂದ್ರ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಕುಶಾಲನಗರ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ಶ್ರೀ ಮುತ್ತಪ್ಪ ದೇವಾಲಯ ಟ್ರಸ್ಟ್ ಸಹಯೋಗದೊಂದಿಗೆ ನಡೆದ 140ನೇ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಅವೈಜ್ಞಾನಿಕ ಅಭಿವೃದ್ಧಿ ನಡುವೆ ನದಿ ನೀರು ತನ್ನ ಗುಣಮಟ್ಟ ಕಳೆದುಕೊಳ್ಳುತ್ತಿದ್ದು, ನೇರವಾಗಿ ಬಳಕೆ ಮಾಡಲು ಸಾಧ್ಯವಾಗದಿರುವುದುಆತಂಕಕಾರಿ ಬೆಳವಣಿಗೆಯಾಗಿದೆ ಎಂದ ಅವರು, ಆರತಿ ಬಳಗದ ಮೂಲಕ ಸ್ವಚ್ಚ ಕಾವೇರಿಗಾಗಿ ನಡೆಯುತ್ತಿರುವ ನಿರಂತರ ಕಾರ್ಯಕ್ರಮದ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಉಪಸ್ಥಿತರಿದ್ದ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಕಾರ್ಯಾಧ್ಯಕ್ಷರಾದ ಹೆಚ್.ಎನ್ ಮುರುಳಿಧರ್ ಅವರು, ಮಾತನಾಡಿ, ಜಿಲ್ಲೆಯ ಪ್ರತಿಯೊಂದು ಸಂಘಟನೆಗಳು ಸ್ವಚ್ಚಕಾವೇರಿ ಹೋರಾಟಕ್ಕೆ ಕೈಜೋಡಿಸಬೇಕು ಎಂದರು. ತಮ್ಮ ಸಂಘಟನೆ ಮುಂದಿನ ದಿನಗಳಲ್ಲಿ ಬಳಗದ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ವ್ಯಕ್ತಪಡಿಸಿದರು. ಅರ್ಚಕರಾದ ಕೃಷ್ಣಮೂರ್ತಿ ಭಟ್ ನೇತೃತ್ವದಲ್ಲಿ ಅರ್ಚನೆ ಅಷ್ಟೋತ್ತರ…
ಕುಶಾಲನಗರ, ಜ.7: ಬಿಜೆಪಿ ಪಕ್ಷದ ಬೂತ್ ವಿಜಯ ಅಭಿಯಾನ ಸೋಮವಾರಪೇಟೆ ಮಂಡಲ ಗುಡ್ಡೆಹೊಸೂರು ಶಕ್ತಿ ಕೇಂದ್ರದ ಅತ್ತೂರಿನ ಬೂತ್ಸಂಖ್ಯೆ 178 ರಲ್ಲಿ ನಡೆಯಿತು. ಬೂತ್ ಅಧ್ಯಕ್ಷ ಜಯಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಅಭಿಯಾನವನ್ನು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯುವ ನಿಟ್ಟಿನಲ್ಲಿ ಕಾರ್ಯಕರ್ತರು ನಿರಂತರ ಶ್ರಮವಹಿಸಬೇಕು ಎಂದರು. ಜಿಲ್ಲಾ ಬಿಜೆಪಿ ಅಧ್ಯಕ್ಷರಾಬಿನ್ ದೇವಯ್ಯ ಮಾತನಾಡಿ, ಬೂತ್ ವಿಜಯ ಅಭಿಯಾನದ ಉದ್ದೇಶದ ಬಗ್ಗೆ ಮಾಹಿತಿ ಒದಗಿಸಿದರು. ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್ ಪ್ರಾಸ್ತಾವಿಕ ನುಡಿಗಳಾಡಿದರು. ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಬಿಜೆಪಿ ಸರಕಾರದ ಸಾಧನೆಗಳ ಬಗ್ಗೆ ವಿವರಿಸಿದರು. ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ರವಿ ಕಾಳಪ್ಪ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವಿ.ಕೆ.ಲೋಕೇಶ್, ಕಾರ್ಯದರ್ಶಿ ಪುಷ್ಪಾ ನಾಗೇಶ್, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸತೀಶ್ಕುಂದರ್, ಮಂಡಲ ಒಬಿಸಿ ಮೋರ್ಚಾ ಖಜಾಂಚಿ ಅಭಿಷೇಕ್ , ಶಕ್ತಿ…
ಮಡಿಕೇರಿ ಜ.7 : ತಮಿಳು ಯೂತ್ ಫೆಡರೇಶನ್ ಕೊಡಗು ಘಟಕದಿಂದ ತಮಿಳು ಸಮುದಾಯ ಬಾಂಧವರಿಗಾಗಿ ಫೆ.18 ಮತ್ತು 19ರಂದು ಜಿಲ್ಲಾ ಮಟ್ಟದ 6ನೇ ವರ್ಷದ ಕಾವೇರಿ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಸಂಭ್ರಮ ನಡೆಯಲಿದೆ. ಚೆಟ್ಟಳ್ಳಿಯ ಪ್ರೌಢ ಶಾಲಾ ಮೈದಾನದಲ್ಲಿ ಎರಡು ದಿನಗಳ ಕಾಲ ಕ್ರೀಡಾಕೂಟ ನಡೆಯಲಿದ್ದು, ಫೆ.18ರಂದು ಕ್ರಿಕೆಟ್ ಪಂದ್ಯಾವಳಿ ಆರಂಭಗೊಳ್ಳಲಿದೆ. ಫೆ.19ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಅಂದು ಉಚಿತ ಆರೋಗ್ಯ ತಪಾಸಣೆ, ಮಹಿಳೆಯರಿಗೆ ಹಾಗೂ ಪುರುಷರಿಗೆ ಹಗ್ಗಜಗ್ಗಾಟ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಮಕ್ಕಳಿಗೆ, ಯುವಕರಿಗೆ, ಯುವತಿಯರಿಗೆ, ಮಹಿಳೆಯರಿಗೆ ಹಾಗೂ ವೃದ್ಧರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿದೆ. ಪುಟಾಣಿ ಮಕ್ಕಳ ಹಗ್ಗಜಗ್ಗಾಟ ಸ್ಪರ್ಧೆ ಜರುಗಲಿದ್ದು, ಮಧ್ಯಾಹ್ನದ ನಂತರ ಸಾಂಸ್ಕೃತಿಕ ಉದ್ಘಾಟನೆಗೊಳ್ಳಲಿದ್ದು, ಸಾಂಸ್ಕೃತಿಕ ನೃತ್ಯ ಸ್ಪರ್ಧೆ, ಗೀತಗಾಯನ ಸ್ಪರ್ಧೆ ಹಾಗೂ ವಿವಿಧ ವೈವಿಧ್ಯಮಯ ಮನೋರಂಜನಾ ಕಾರ್ಯಕ್ರಮಗಳು ಗಮನ ಸೆಳೆಯಲಿದೆ. ಸಮಾರೋಪ ಸಮಾರಂಭದಲ್ಲಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದಿರುವ ಸಮುದಾಯ ಬಾಂಧವರನ್ನು ಸನ್ಮಾನಿಸಲಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿ ಹಂತಗಳಲ್ಲಿ ಶೇ.70 ಕ್ಕಿಂತ…
ಮಡಿಕೇರಿ ಜ.4 : ಕೊಡಗು ಜಿಲ್ಲೆಯ ತೋಟ ಮತ್ತು ಗದ್ದೆಗಳನ್ನು ಗಮನಿಸಿದರೆ ಅರಣ್ಯದಲ್ಲಿರಬೇಕಾದ ಜೀವಿಗಳೆಲ್ಲವೂ ಇಲ್ಲೇ ಬಂದು ನೆಲೆ ನಿಂತಂತ್ತಿದೆ. ಕಾಡಾನೆ ಹಾಗೂ ಹುಲಿಯನ್ನು ಕಂಡಿದ್ದ ಬೆಳೆಗಾರ ಇದೀಗ ಎಲ್ಲಾ ಪ್ರಾಣಿಗಳನ್ನು ತಮ್ಮ ಜಮೀನಿನಲ್ಲಿ ಕಂಡು ಬೆರಗಾಗಿದ್ದಾನೆ. ಜಿಲ್ಲೆಯ ಕಾಫಿ ತೋಟ ಮತ್ತು ಭತ್ತದ ಗದ್ದೆಗಳು ಕಾಡಾನೆ ದಾಳಿಯಿಂದ ನಾಶವಾಗುತ್ತಿವೆ. ಕಾಡಾನೆಗಳು ತೋಟಗಳನ್ನೇ ತಮ್ಮ ವಾಸಸ್ಥಾನಗಳನ್ನಾಗಿ ಮಾಡಿಕೊಂಡಿದ್ದರೆ ಹುಲಿ ಆಗೊಮ್ಮೆ, ಈಗೊಮ್ಮೆ ಬಂದು ಹಸುಗಳನ್ನು ಭಕ್ಷಿಸಿ ಹೋಗುತ್ತಿವೆ. ಕಾಡಾನೆ ಉಪಟಳದಿಂದ ರೋಸಿ ಹೋಗಿದ್ದ ಬೆಳೆಗಾರರನ್ನು ಇದೀಗ ಕಾಡೆಮ್ಮೆ, ಕಾಡುಹಂದಿ, ಮುಳ್ಳಂದಿ, ಮಂಗ, ಬಾವಲಿ, ಅಳಿಲುಗಳೂ ಕಾಡಲಾರಂಭಿಸಿವೆ. ಕಾಡಾನೆಗಳು ಕಾಫಿ ಹಣ್ಣನ್ನು ತಿನ್ನುವುದು ಸಾಮಾನ್ಯವಾಗಿ ಬಿಟ್ಟಿದೆ. ಹಿಂಡು ಹಿಂಡಾಗಿ ಬರುತ್ತಿರುವ ಮಂಗಗಳು ಪ್ರತಿಯೊಂದು ಗಿಡದ ಕಾಫಿ ಹಣ್ಣನ್ನು ತಿಂದು ತೇಗುತ್ತಿವೆ. ಇದರೊಂದಿಗೆ ಅಳಿಲು ಮತ್ತು ಬಾವಲಿಗಳು ಕೂಡ ಸೇರಿಕೊಂಡು ಸಹ ಭೋಜನ ಮಾಡುತ್ತಿವೆ. ಕಾಫಿ ಗಿಡಗಳ ಬುಡದಲ್ಲಿ ರಾಶಿ ರಾಶಿ ಕಾಫಿ ಬೇಳೆ ಕಂಡು ಬರುತ್ತಿದ್ದು, ವನ್ಯಜೀವಿಗಳ ಉಪಟಳದ ಬಗ್ಗೆ ಬೆಳೆಗಾರರು ಬೇಸರಗೊಂಡಿದ್ದಾರೆ.…
ಮಡಿಕೇರಿ ಜ.7 : ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಈರಳೆವಳಮುಡಿ ಶಾಖೆಯ ವಾಯುಪುತ್ರ ಭವನ ಜ.15 ರಂದು ಉದ್ಘಾಟನೆಗೊಳ್ಳಲಿದೆ. ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯವ ಉದ್ಘಾಟನಾ ಸಮಾರಂಭದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ರಾಜ್ಯ ಜೀವ ವ್ಯೆವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹಾಗೂ ಸಹಕಾರ ಸಂಘದ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಶಿಥಿಲಾವಸ್ಥೆಗೊಂಡಿದ್ದ ಈರಳೆವಳಮುಡಿ ಶಾಖೆಯ ಹಳೆಯ ಕಟ್ಟಡವನ್ನು ಅಭಿವೃದ್ಧಿ ಪಡಿಸಲಾಗಿದ್ದು, ವಾಯುಪುತ್ರ ಭವನ ಎಂದು ಹೆಸರಿಡಲಾಗಿದೆ. ಇದಕ್ಕೆ ಪೂರಕವಾಗಿ ಕಟ್ಟಡದಲ್ಲಿ ಶ್ರೀಆಂಜನೇಯ ಸ್ವಾಮಿಯ ಪಂಚಮುಖದ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಕಾರ್ಕಳದ ಗುಣೇಶ್ವರ ಶಿಲ್ಪಿಗಳು ಪಂಚಮುಖಿ ಆಂಜನೇಯನ ಮೂರ್ತಿಯನ್ನು ಕೆತ್ತನೆ ಮಾಡಿದ್ದಾರೆ.
ವಿರಾಜಪೇಟೆ ಜ.7 : ವಿದ್ಯಾರ್ಥಿಗಳು ಕ್ಷಣಿಕ ಸುಖಕ್ಕಾಗಿ ತಮ್ಮ ಬದಕನ್ನು ನಾಶ ಮಾಡಿಕೊಳದೇ ನಿಮ್ಮಲ್ಲಿರುವ ಪ್ರತಿಭೆಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಗೋಣಿಕೊಪ್ಪ ಕಾವೇರಿ ಕಾಲೇಜಿನ ಪ್ರಾಂಶುಪಾಲ ಡಾ.ಮಾಳೇಟಿರ ಕಾವೇರಪ್ಪ ಹೇಳಿದರು. ಇತ್ತಿಚೆಗೆ ನಡೆದ ವಿರಾಜಪೇಟೆಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿ ದೆಸೆಯಲ್ಲಿ ಅನೇಕ ಆಕರ್ಷಣೆಗಳು ಬರುತ್ತದೆ, ಅವುಗಳಿಗೆ ಬಲಿಯಾಗಬಾರದು. ತಂದೆತಾಯಿಯ ಆಶೋತ್ತರ ಏನು, ಅವರು ತಮ್ಮ ವಿದ್ಯಗೆ ಹೇಗೆ ಶ್ರಮ ವಹಿಸುತ್ತಿದ್ದಾರೆ ಎಂಬುವುದನ್ನು ಅರಿತು ಅವರ ಆಶಯದಂತೆ ಮುನ್ನಡೆಯಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಟ್ಟರಾಜು ಮಾತನಾಡಿ, ಇಂದಿನವರೆಗಿನ ಪಠ್ಯೇತರ ಚಟುವಟಿಕೆಗಳಿಗೆ ಈಗ ವಿರಾಮ ಕಾಲ, ಇನ್ನು ಪಠ್ಯ ಚಟುವಟಿಕೆಯ ಕಾಲ ಸನ್ನಿಹಿತವಾಗಿದೆ. ಅಂದರೆ ಇನ್ನು ಪರೀಕ್ಷೆಗಳ ಕಾಲ ಆದರಿಂದ ಕಾಲ ವ್ಯರ್ಥ ಮಾಡದೆ ಪರೀಕ್ಷೆಗಳಿಗೆ ಸಿದ್ದರಾಗಿ ಹಾಗೂ ಸಂಸ್ಥೆಗೆ ಉತ್ತಮ ಫಲಿತಾಂಶ ಬರುವಂತೆ ಶ್ರಮ ವಹಿಸಿ. ಉಪನ್ಯಾಸಕರು…
ಮಡಿಕೇರಿ ಜ.7 : ಜವಾಹರ್ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ ಮಾಡಿದ್ದು, 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಕೋರಿದ್ದಾರೆ. ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಜವಾಹರ್ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ನವೋದಯ ವಿದ್ಯಾಲಯವು ಸರ್ಕಾರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದ್ದು, ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶವಿದೆ. ಆದ್ದರಿಂದ ಈ ಪರೀಕ್ಷೆ ಬರೆಯಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಿದ್ದು, ಅರ್ಜಿ ಸಲ್ಲಿಸಲು ಜನವರಿ, 31 ಕೊನೆಯ ದಿನವಾಗಿದೆ. ಈ ಅವಕಾಶವನ್ನು 5ನೇ ತರಗತಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಬಳಸಿಕೊಳ್ಳುವಂತಾಗಬೇಕು. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಈಗಿನಿಂದಲೇ ಅಗತ್ಯ ತಯಾರಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ನುಡಿದರು. ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಆಯಾಯ ಜಿಲ್ಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅವಕಾಶವಿದೆ. ಆ ನಿಟ್ಟಿನಲ್ಲಿ ಮಡಿಕೇರಿ ತಾಲ್ಲೂಕಿನ…
ಮಡಿಕೇರಿ ಜ.7 : ವಿಧಾನಸಭಾ ಚುನಾವಣೆ ಸಂಬಂಧ ಸೆಕ್ಟರ್ ಅಧಿಕಾರಿಗಳ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಸೆಕ್ಟರ್ ಅಧಿಕಾರಿಗಳು ಮತ್ತು ಪೊಲೀಸ್ ಸೆಕ್ಟರ್ ಅಧಿಕಾರಿಗಳು ಜಂಟಿಯಾಗಿ ತಮ್ಮ ವ್ಯಾಪ್ತಿಯ ಮತಗಟ್ಟೆ ಪ್ರದೇಶ ಗ್ರಾಮಗಳಿಗೆ ಭೇಟಿ ನೀಡಿ ಅಗತ್ಯ ಮಾಹಿತಿ ಒದಗಿಸುವಂತೆ ಸೂಚಿಸಿದರು. ಈಗಾಗಲೇ ವಿಧಾನಸಭಾ ಚುನಾವಣೆ ಸಿದ್ಧ್ದತೆಗಳು ನಡೆದಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳು ಇದೆಯೇ ಎಂಬುದನ್ನು ಖಾತರಿಪಡಿಸಿಕೊಂಡು ಮಾಹಿತಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಸೆಕ್ಟರ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಎಲ್ಲಾ ಮತಗಟ್ಟೆಗಳಿಗೆ ತೆರಳಿ ಶೌಚಾಲಯ, ಕುಡಿಯುವ ನೀರು, ಪೀಠೋಪಕರಣ, ರ್ಯಾಂಪ್ಹಾಗೂ ವಿದ್ಯುತ್ ವ್ಯವಸ್ಥೆ ಇತರೆ ಸೌಕರ್ಯಗಳು ಇದೆಯೇ ಎಂಬುದನ್ನು ಪರಿಶೀಲಿಸಿ ವರದಿ ನೀಡುವಂತೆ ಸೆಕ್ಟರ್ ಅಧಿಕಾರಿಗಳಿಗೆ ಸೂಚಿಸಿದರು. ತಮ್ಮ ಮತಗಟ್ಟೆ ವ್ಯಾಪ್ತಿಯಲ್ಲಿ ಸೂಕ್ಷ್ಮ ಪ್ರದೇಶಗಳು ಕಂಡುಬರುತ್ತದೆಯೇ ಎಂಬ ಬಗ್ಗೆ ವರದಿ ನೀಡಬೇಕು.…
ಮಡಿಕೇರಿ ಜ.7 : ಪ್ರಸಕ್ತ (2022-23) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ, 20 ರವರೆಗೆ ಅವಧಿ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ http://shp.karnataka.gov.in ಸಲ್ಲಿಸಬಹುದು. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ & ಎಸ್.ಟಿ. ರೂ.2.50 ಲಕ್ಷ, ಪ್ರವರ್ಗ-2ಎ,2ಬಿ,3ಎ,3ಬಿ ರೂ.1.00 ಲಕ್ಷ ಆಗಿದೆ. ಹೆಚ್ಚಿನ ಮಾಹಿತಿಗೆ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮೊಬೈಲ್ ಸಂಖ್ಯೆ ಮಡಿಕೇರಿ ತಾಲ್ಲೂಕು ಕಚೇರಿ ಮೊ.ಸಂಖ್ಯೆ: 8762476790, ವಿರಾಜಪೇಟೆ ತಾಲ್ಲೂಕು ಕಚೇರಿ ಮೊ.ಸಂಖ್ಯೆ :9844531040, ಸೋಮವಾರಪೇಟೆ ತಾಲ್ಲೂಕು ಕಚೇರಿ ಮೊ.ಸಂಖ್ಯೆ: 9481772143 ನ್ನು ಕಚೇರಿ ವೇಳೆಯಲ್ಲಿ ಕರೆ ಮಾಡಿ ಮಾಹಿತಿ ಪಡೆಯಬಹುದು.…






