ಲೇಖಕ: admin

ವಿರಾಜಪೇಟೆ ಫೆ.2 : ವಿರಾಜಪೇಟೆಯ ಖಾಸಗಿ ಬಸ್ಸು ನಿಲ್ದಾಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡಿ ಜೀವನ ಸಾಗಿಸುತಿದ್ದ 60 ವರ್ಷದ ವೃದ್ಧೆಯೊಬ್ಬರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. 2022 ಡಿ.25 ರಂದು ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಸೇರಿಸುವ ಸಂದರ್ಭ ಹೆಸರನ್ನು ಪ್ರೇಮ ಎಂದು ದಾಖಲಿಸಿಕೊಳ್ಳಲಾಗಿದೆ. ಶವವನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ವಾರಸುದಾರರು ಯಾರೆಂದು ತಿಳಿದಿಲ್ಲ. ಮೃತರ ಮಾಹಿತಿ ತಿಳಿದು ಬಂದಲ್ಲಿ ವಿರಾಜಪೇಟೆ ನಗರ ಪೊಲೀಸ್ ಠಾಣೆ 08274-257333 ಮತ್ತು ನಗರ ಠಾಣಾಧಿಕಾರಿ 9480804955 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Read More

ಮಡಿಕೇರಿ ಫೆ.2 : ಹಿಂದೂ ಸಂಘಟನೆಗಳ ಇಬ್ಬರು ಪ್ರಮುಖರನ್ನು ಕೊಡಗಿನಿಂದ ಗಡಿಪಾರು ಮಾಡುವ ಕುರಿತು ಉಪವಿಭಾಗಾಧಿಕಾರಿಗಳ ನ್ಯಾಯಾಲಯದಿಂದ ಸಂಬಂಧಿಸಿದ ಆರೋಪಿಗಳಿಗೆ ಹೇಳಿಕೆ ನೀಡುವಂತೆ ನೋಟೀಸ್ ನೀಡಿರುವ ಕ್ರಮವನ್ನು ಖಂಡಿಸಿ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಗಡಿಪಾರಿನ ಪ್ರಸ್ತಾಪವನ್ನು ಕೈಬಿಡಬೇಕೆಂದು ಒತ್ತಾಯಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭಾ ನಾಮನಿರ್ದೇಶಿತ ಸದಸ್ಯ ಹಾಗೂ ಹಿಂದೂ ಸಂಘಟನೆಯ ಪ್ರಮುಖ ಕವನ್ ಕಾವೇರಪ್ಪ ಮತ್ತು ಅಶಾಂತಿ ಸೃಷ್ಟಿಸುವ ಆರೋಪದಡಿ ಹಿಂದೂ ಜಾಗರಣಾ ವೇದಿಕೆಯ ಹಿಂದೂ ವಾಹಿನಿಯ ಜಿಲ್ಲಾ ಸಂಚಾಲಕ್ ವಿನಯ್ ಕುಮಾರ್ ಅವರುಗಳನ್ನು ಗಡಿಪಾರು ಮಾಡುವ ಕುರಿತು ಪ್ರಸ್ತಾಪಿಸಿರುವುದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದರು. ಇವರಿಬ್ಬರು ಯಾವುದೇ ಗಂಭೀರ ಆರೋಪಗಳನ್ನು ಎದುರಿಸದಿದ್ದರೂ ಈ ರೀತಿಯ ಕ್ರಮಕ್ಕೆ ಮುಂದಾಗಿರುವುದು ಸರಿಯಲ್ಲ. ದೇಶದ್ರೋಹದ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಯಾವುದೇ ರೀತಿಯ ಕಠಿಣ ಕ್ರಮ ಕೈಗೊಳ್ಳದ ಪೊಲೀಸ್ ಇಲಾಖೆ ದೇಶಭಕ್ತ…

Read More

ಮಡಿಕೇರಿ ಫೆ.2 ; ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅವರ ಅಧ್ಯಕ್ಷತೆಯಲ್ಲಿ ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನ ಕಾರ್ಯಕ್ರಮದ ಬಗ್ಗೆ ಸಭೆ ನಡೆಯಿತು. ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಭಿತ್ತಿ ಪತ್ರ, ಕರಪತ್ರ ಹಾಗೂ ಬ್ಯಾನರ್‍ಗಳನ್ನು ಬಿಡುಗಡೆಗೊಳಿಸಿ ಮಾತನಾಡಿ ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ಕಾರ್ಯಕ್ರಮ ನಡೆಸಲಾಯಿತು. ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಕುಷ್ಠರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯ ಎಂದು ತಿಳಿಸಿದರು. ಜಿಲ್ಲಾ ಕುಷ್ಠರೋಗ ನಿಯಂತ್ರಣ ಕಾರ್ಯಕ್ರಮಾಧಿಕಾರಿ ಡಾ.ಎನ್.ಆನಂದ್ ಅವರು ಮಾತನಾಡಿ ಫೆಬ್ರವರಿ 13 ರವರೆಗೆ ಜಿಲ್ಲಾದ್ಯಂತ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ” ಕಾರ್ಯಕ್ರಮ ನಡೆಯಲಿದೆ. ಪ್ರತಿ ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ, ಹಾಗೂ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಕುಷ್ಠರೋಗದ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು. ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ರೇಡಿಯೋ ಪ್ರಸಾರವನ್ನು ಕೂಡ…

Read More

ಸುಂಟಿಕೊಪ್ಪ ಫೆ.2 : ಕರ್ನಾಟಕ ರಕ್ಷಣಾ ವೇದಿಕೆಯ ಸುಂಟಿಕೊಪ್ಪ ಹೋಬಳಿ ಘಟಕ ಅಧ್ಯಕ್ಷರಾದ ನಾಗೇಶ್ ಪೂಜಾರಿ ಹಾಗೂ ಪದಾಧಿಕಾರಿಗಳು ನೂತನ ಠಾಣಾಧಿಕಾರಿ ಶ್ರೀಧರ್ ಅವರಿಗೆ ಮಾಲಾರ್ಪಣೆ ಮಾಡಿ ಸ್ವಾಗತ ಕೋರಿದರು. ಕರವೇ ಹೋಬಳಿ ಅಧ್ಯಕ್ಷ ನಾಗೇಶ್ ಪೂಜಾರಿ ಮಾತನಾಡಿ, ಸುಂಟಿಕೊಪ್ಪ ಪಟ್ಟಣದ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಶನಿವಾರ ಭಾನುವಾರ ದಿನಗಳಲ್ಲಿ ಪ್ರವಾಸಿಗಾರು ಹೆಚ್ಚಿರುವುದರಿಂದ ಸುಂಟಿಕೊಪ್ಪ ವಾಹನ ದಟ್ಟಣೆಯು ಹೆಚ್ಚಾಗಿರುತ್ತದೆ. ಭಾನುವಾರ ಸಂತೆ ದಿನವಾಗಿದು,್ದ ಸಂತೆ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ನಡೆಸದೆ. ಹೆದ್ದಾರಿ ಬದಿಯಲ್ಲಿ ವ್ಯಾಪಾರ ನಡೆಸುವುದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ ಎಂದು ತಿಳಿಸಿದರು. ಗ್ರಾಮ ಪಂಚಾಯಿತಿಯಿಂದ ಮಾರುಕಟ್ಟೆ ಸುಂಕ ಹರಾಜು ಪಡೆದೆ ವಸೂಲಿದಾರರು ಈ ರಸ್ತೆ ಬದಿ ವ್ಯಾಪಾರಸ್ಥರಿಂದ ಸುಂಕ ವಸೂಲಿ ಮಾಡುತ್ತಿರುವುದು ಕಾನೂನು ಬಾಹಿರವಾಗಿದೆ. ಇದಕ್ಕೆ ಕಡಿವಾಣ ಹಾಕಬೇಕು. ದಿನದ 24 ಗಂಟೆ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳಿಗೆ ವಸತಿಗೃಹಗಳು ಇಲ್ಲದೆ ಬಾಡಿಗೆ ಮನೆಗಳ ಆಶ್ರಯ ಪಡೆದಿದ್ದಾರೆ ಇದರ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರುವಂತೆ…

Read More

ಮಡಿಕೇರಿ ಫೆ.2 : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲಾ ಪಂಚಾಯತ್, ಗಾಳಿಬೀಡು ಗ್ರಾಮ ಪಂಚಾಯತ್ ಮತ್ತು ಕರ್ನಾಟಕ ರಾಜ್ಯ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದೊಂದಿಗೆ ಗಾಳಿಬೀಡು ಗ್ರಾ.ಪಂ.ನ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಗುರುವಾರ ನಡೆದ ‘ನರೇಗಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಗ್ರಾಮೀಣ ಅಭಿವೃದ್ಧಿಯಲ್ಲಿ ಮನರೇಗಾ ಯೋಜನೆಯಲ್ಲಿ ಕೊಡಗು ಜಿಲ್ಲೆ ಮಹತ್ವದ್ದಾಗಿದೆ ಎಂದು ಅವರು ಹೇಳಿದರು. ಮನರೇಗಾ ಯೋಜನೆಯ ಪ್ರಗತಿಯಲ್ಲಿ ತಾಂತ್ರಿಕ ಸಿಬ್ಬಂದಿಗಳು ಮಹತ್ತರ ಪಾತ್ರ ವಹಿಸುತ್ತಾರೆ. ಇದುವರೆಗೂ ಜಿಲ್ಲೆಯಲ್ಲಿ ಮನರೇಗಾ ಯೋಜನೆಯನ್ನು ಗ್ರಾಮಮಟ್ಟದ ಜನರಿಗೆ ತಲುಪಿಸುವಲ್ಲಿ ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಾಮೀಣ ಭಾಗದ ಶಾಲೆ, ಅಂಗನವಾಡಿಗಳಿಗೆ ಮೂಲ ಸೌಕರ್ಯ ಒದಗಿಸುವಲ್ಲಿ ನರೇಗಾ ಯೋಜನೆಯು ಯಶಸ್ವಿಯಾಗಿದೆ. ಮುಂದಿನ…

Read More

ಮಡಿಕೇರಿ ಫೆ.2 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಫೆಬ್ರವರಿ, 3 ರಿಂದ 6 ರವರೆಗೆ ನಗರದ ರಾಜಸೀಟು ಉದ್ಯಾನವನದಲ್ಲಿ ‘ಫಲಪುಷ್ಪ ಪ್ರದರ್ಶನ’ ನಡೆಯಲಿದೆ. ಫಲಪುಷ್ಪ ಪ್ರದರ್ಶನದ ಉದ್ಘಾಟನೆಯು ಫೆಬ್ರವರಿ, 03 ರಂದು ಸಂಜೆ 4 ಗಂಟೆಗೆ ರಾಜಸೀಟು ಉದ್ಯಾನವನದಲ್ಲಿ ನಡೆಯಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ತೋಟಗಾರಿಕೆ ಮತ್ತು ಯೋಜನೆ ಹಾಗೂ ಸಾಂಖ್ಯಿಕ ಸಚಿವರಾದ ಎನ್.ಮುನಿರತ್ನ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಜಿ.ಪಂ.ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ತೋಟಗಾರಿಕೆ ಇಲಾಖೆಯ ನಿರ್ದೇಶಕರಾದ…

Read More

ಮಡಿಕೇರಿ ಫೆ.2 : ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಅವರು ಫೆ.3 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಭಾಪತಿ ಅವರು ಫೆ.3 ರಂದು ಬೆಳಗ್ಗೆ 10.30 ಗಂಟೆಗೆ ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆಯುವ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಭಾಪತಿಯವರ ಆಪ್ತ ಕಾರ್ಯದರ್ಶಿ ಡಾ.ಜಿ.ವಿಶ್ವನಾಥ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಫೆ.2 :ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸಗಳಲ್ಲಿ ತೊಡಗಿರುವ ಮಡಿಕೇರಿಯಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಯೋಜನೆಗಳಲ್ಲಿ ಒಂದಾದ ಟ್ಯಾಬ್ ವಿತರಣಾ ಕಾರ್ಯಕ್ರಮವು ಫೆಬ್ರವರಿ, 03 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಇರುವ ಶಾಸಕರ ಕಚೇರಿಯಲ್ಲಿ ನಡೆಯಲಿದೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರು ಟ್ಯಾಬ್ ವಿತರಿಸಲಿದ್ದಾರೆ ಎಂದು ಕಾರ್ಮಿಕ ಅಧಿಕಾರಿ ಅವರು ತಿಳಿಸಿದ್ದಾರೆ. ಟ್ಯಾಬ್ ವಿತರಣೆ : ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸಗಳಲ್ಲಿ ತೊಡಗಿರುವ ಮಡಿಕೇರಿಯಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಯೋಜನೆಗಳಲ್ಲಿ ಒಂದಾದ ಟ್ಯಾಬ್ ವಿತರಣಾ ಕಾರ್ಯಕ್ರಮವು…

Read More

ಸುಂಟಿಕೊಪ್ಪ,ಫೆ.2: ಮಾದಾಪುರ ಇಗ್ಗೋಡ್ಲು ಆಶ್ರಯ ಕಾಲೋನಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಯುವಕ ಸಂಘದ ರಜತ ಮಹೋತ್ಸವದ ಅಂಗವಾಗಿ ಫೆ.6 ಮತ್ತು 7 ರಂದು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮದಿನದ ಪ್ರಯುಕ್ತ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಇಗೋಡ್ಲು ಆಶ್ರಯ ಕಾಲೋನಿ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಫೆ.2 ಕುಶಾಲನಗರ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವು ಫೆ.3 ರಂದು ಕುಶಾಲನಗರ ರೈತ ಸಹಕಾರ ಭವನದಲ್ಲಿ ನಡೆಯಲಿದೆ. ಫೆಬ್ರವರಿ, 3 ರಂದು ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ ನಡೆಯಲಿದೆ. ಕುಶಾಲನಗರ ಪುರಸಭೆ ಅಧ್ಯಕ್ಷರಾದ ಬಿ.ಜಯವರ್ಧನ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೆ.ಎಸ್.ಮೂರ್ತಿ ಇತರರು ಪಾಲ್ಗೊಳ್ಳಲಿದ್ದಾರೆ. ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡಲಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ನಾಡಗೀತೆ ಹಾಡಲಿದ್ದಾರೆ. ಬಳಿಕ ಗಣ್ಯರ ನೆನಪಿನ ದ್ವಾರಗಳ ಉದ್ಘಾಟನೆ, ಸಮ್ಮೇಳನದ ಉದ್ಘಾಟನಾ ಸಮಾರಂಭವು ಫೆಬ್ರವರಿ, 03 ರಂದು ಬೆಳಗ್ಗೆ 10.30 ಗಂಟೆಗೆ ನಡೆಯಲಿದೆ. ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕರ್ನಾಟಕ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ ಸುಜಾ ಕುಶಾಲಪ್ಪ, ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೆ.ಎಸ್.ಮೂರ್ತಿ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್,…

Read More