ಮಡಿಕೇರಿ ಮಾ.13 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮಡಿಕೇರಿ ಪ್ರಾದೇಶಿಕ ಕೇಂದ್ರ ಕಚೇರಿಯಲ್ಲಿ 2022-23 ನೇ ಶೈಕ್ಷಣಿಕ ಸಾಲಿನ ವಿವಿಧ ವಿಷಯಗಳಿಗೆ ಪ್ರವೇಶಾತಿ ಪ್ರಕ್ರಿಯೆಗಳು ಆರಂಭವಾಗಿದ್ದು, ಇದರ ಸದುಪಯೋಗವನ್ನು ಉದ್ಯೋಗಸ್ಥರು ಹಾಗೂ ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ ಕೋರಿದೆ. ಪ್ರಾದೇಶಿಕ ಕೇಂದ್ರ ಕಚೇರಿಯು ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಸಹ ಕಾರ್ಯನಿರ್ವಹಿಸುತ್ತದೆ ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ. ಆಟೋ ಮತ್ತು ಕ್ಯಾಬ್ ಚಾಲಕರು ಹಾಗೂ ಮಕ್ಕಳಿಗೆ ಶೇ.30, ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಶೇ.15, ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಶೇ.15 ರಷ್ಟು ವಿನಾಯಿತಿ ನೀಡಲಾಗುತ್ತಿದೆ. ಹಾಗೂ ಕೊರೊನಾ ಸಾಂಕ್ರಾಮಿಕ ರೋಗದಿಂದ ಮೃತರಾದ ಪೋಷಕರ ಮಕ್ಕಳಿಗೆ, ತೃತೀಯ ಲಿಂಗಿಗಳಿಗೆ, ದೃಷ್ಠಿಹೀನ ವಿದ್ಯಾರ್ಥಿಗಳಿಗೆ (ಬಿಎಡ್-ಎಂಬಿಎ ಹೊರತುಪಡಿಸಿ) ಪೂರ್ಣಶುಲ್ಕ ವಿನಾಯಿತಿ ನೀಡಲಾಗಿದೆ. ಸ್ನಾತಕ ಕೋರ್ಸ್ಗಳು ಬಿ.ಎ., ಬಿ.ಕಾಂ, ಬಿ.ಲಿಬ್, ಬಿಬಿಎ, ಬಿಸಿಎ, ಬಿಎಸ್ಸಿ. ಸ್ನಾತಕೋತ್ತರ ಕೋರ್ಸ್ಗಳು ಎಂಎ, ಎಂಕಾಂ, ಎಂಬಿಎ, ಎಂಲಿಬ್,…
ಲೇಖಕ: admin
ಮಡಿಕೇರಿ ಮಾ.13 : 2023ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂಬಂಧ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ತಯಾರಿಕೆ, ಸಾಗಾಣಿಕೆ, ದಾಸ್ತಾನು ಮತ್ತು ಮಾರಾಟ ಹಾಗೂ ಇತರ ಅಬಕಾರಿ ಅಕ್ರಮಗಳಿಗೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಗೆ ಮಾಹಿತಿ ನೀಡಲು ಸಹಾಯವಾಣಿ ಕೇಂದ್ರ (ಕಂಟ್ರೋಲ್ ರೂಂ) ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಕಂಟ್ರೋಲ್ ರೂಂನ ಟೋಲ್ ಪ್ರೀ ದೂರವಾಣಿ ಸಂಖ್ಯೆಗೆ ಅಥವಾ ಅಬಕಾರಿ ಅಧಿಕಾರಿಗಳ ಮೊಬೈಲ್ ಸಂಖ್ಯೆಗೆ ಮಾಹಿತಿ ನೀಡಲು ಕೋರಿದೆ. ಜಿಲ್ಲಾ ನಿಯಂತ್ರಣ ಕೊಠಡಿ(ಕಂಟೋಲ್ ರೂಂ) ಟೋಲ್ ಪ್ರೀ ಸಂ.08272-229110, ಅಬಕಾರಿ ನಿರೀಕ್ಷಕರು, ಮಡಿಕೇರಿ ವಲಯ, ಮಡಿಕೇರಿ ಮೊ.ಸಂ.9449597139, ಅಬಕಾರಿ ಉಪ ಅಧೀಕ್ಷಕರು, ಮಡಿಕೇರಿ ಉಪ ವಿಭಾಗ, ಮಡಿಕೇರಿ ಮೊ.ಸಂ.9449597137, ಅಬಕಾರಿ ನಿರೀಕ್ಷಕರು, ಸೋಮವಾರಪೇಟೆ ವಲಯ, ಸೋಮವಾರಪೇಟೆ ಮೊ.ಸಂ.7619297765, ಅಬಕಾರಿ ಉಪ ಅಧೀಕ್ಷಕರು, ಸೋಮವಾರಪೇಟೆ ಉಪ ವಿಭಾಗ, ಸೋಮವಾರಪೇಟೆ ಮೊ.ಸಂ.9449252456, ಅಬಕಾರಿ ನಿರೀಕ್ಷಕರು, ವಿರಾಜಪೇಟೆ ವಲಯ, ವಿರಾಜಪೇಟೆ ಮೊ.ಸಂ.9449597141 ಹಾಗೂ ಅಬಕಾರಿ ಉಪ ಅಧೀಕ್ಷಕರು, ವಿರಾಜಪೇಟೆ ಉಪ ವಿಭಾಗ, ವಿರಾಜಪೇಟೆ ಮೊ.ಸಂ.9448879969 ನ್ನು ಸಂಪರ್ಕಿಸಬಹುದು ಎಂದು…
ಮಡಿಕೇರಿ ಮಾ.13 : ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಮತ್ತು ಪಕ್ಷದ ಕೊಡಗು ಜಿಲ್ಲಾ ಉಸ್ತುವಾರಿ ಆರ್.ಧ್ರುವ ನಾರಾಯಣ್ ಅವರ ನಿಧನಕ್ಕೆ ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ, ಕೆಪಿಸಿಸಿ ಉಪಾಧ್ಯಕ್ಷ ಪಿ.ಸಿ.ಹಸೈನಾರ್, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ಹಾಗೂ ತಾ.ಪಂ ಮಾಜಿ ಸದಸ್ಯ ಕೆ.ಐ.ಮಹಮ್ಮದ್ ರಫೀಕ್ ಸಂತಾಪ ಸೂಚಿಸಿದ್ದಾರೆ. ಮೇರು ವ್ಯಕ್ತಿತ್ವದ ಸಜ್ಜನ ರಾಜಕಾರಣಿ, ಉತ್ತಮ ಸಂಘಟಕ, ಅಜಾತಶತ್ರು ಧ್ರುವ ನಾರಾಯಣ್ ಅವರ ಅಗಲಿಕೆ ಅತೀವ ದು:ಖವನ್ನುಂಟು ಮಾಡಿದೆ. ಹಿರಿಯ ನಾಯಕನನ್ನು ಕಳೆದುಕೊಂಡು ಕಾಂಗ್ರೆಸ್ ಬಡವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಮಾ.13 : ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಶಾಸಕ, ಮಾಜಿ ಸಂಸದ ಹಾಗೂ ಪಕ್ಷದ ಕೊಡಗು ಜಿಲ್ಲಾ ಉಸ್ತುವಾರಿ ಆರ್.ಧ್ರುವ ನಾರಾಯಣ್ ಅವರ ನಿಧನಕ್ಕೆ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಂತಾಪ ವ್ಯಕ್ತಪಡಿಸಿದೆ. ಪಕ್ಷದ ಕಚೇರಿಯಲ್ಲಿ ಧ್ರುವನಾರಾಯಣ್ ಅವರ ಭಾವಚಿತ್ರಕ್ಕೆ ಪಕ್ಷದ ಪ್ರಮುಖರು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ಬಿ.ಬಿ.ಸತೀಶ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿದ್ದ, ಸಂಘಟನೆಯಲ್ಲಿ ಪ್ರಮುಖವಾಗಿದ್ದ, ಉತ್ತಮ ರಾಜಕಾರಣಿ, ಹಸನ್ಮುಕಿ ಆರ್.ಧ್ರುವನಾರಾಯಣ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು. ಕೆಪಿಸಿಸಿ ಸದಸ್ಯ ಕೆ.ಎ.ಯಾಕೂಬ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಾಂಗ್ರೆಸ್ ಅಧ್ಯಕ್ಷ ಬಿ.ಜಯೇಂದ್ರ, ಇತರೇ ಹಿಂದೂಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಬಿ.ಜಿ.ಇಂದ್ರೇಶ್, ಕಾಂಗ್ರೆಸ್ ಮುಖಂಡರುಗಳಾದ ಕೆ.ಎ.ಆದಂ, ಲ್ವಾರೆನ್ಸ್ ಹಾನಗಲ್ಲು, ನಗರಾಧ್ಯಕ್ಷರಾದ ಹೆಚ್.ಎ.ನಾಗರಾಜು ಮಾತನಾಡಿ, ಆರ್. ಧ್ರುವನಾರಾಯಣ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸಲ್ಲಿಸಿದ ಸೇವೆ,…
ಮಡಿಕೇರಿ ಮಾ.13 : ಜನನಿ ಮಹಿಳಾ ಮಂಡಳಿಯ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ರಾಘವೇಂದ್ರ ದೇವಾಲಯ ರಸ್ತೆಯ ನೇತಾಜಿ ಜಂಕ್ಷನ್ ನ ಹೇಮಾವತಿ ಪ್ರಸನ್ನ ಅವರ ಮನೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೊಡಗು ಡಿಸಿಸಿ ಬ್ಯಾಂಕಿನ ನಿವೃತ್ತ ಉಪ ಪ್ರಧಾನ ವ್ಯವಸ್ಥಾಪಕರಾದ ಪ್ರೇಮ ಕಾರ್ಯಪ್ಪ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕುರಿತು ತಿಳಿಸಿದರು. ಕುಟುಂಬದಲ್ಲಿ ಮಹಿಳೆಯರು ಪ್ರತಿನಿತ್ಯ ಮಾಡಬೇಕಾದ ಕೆಲಸ ಕಾರ್ಯಗಳ ಜೊತೆಗೆ ಮಕ್ಕಳನ್ನು ಯಾವ ರೀತಿಯಲ್ಲಿ ಸಂಸ್ಕಾರಯುಕ್ತರನ್ನಾಗಿ ಮಾಡಬಹುದು. ಇದರೊಂದಿಗೆ ಉತ್ತಮ ಸಮಾಜವನ್ನು ಹೇಗೆ ಕಟ್ಟಬಹುದು ಎಂಬುದರ ಕುರಿತು ತಿಳಿಸಿದರು. ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಂಡು ಸದೃಢ ಭಾರತ ನಿರ್ಮಿಸುವಲ್ಲಿ ತಮ್ಮ ತಮ್ಮ ಜವಾಬ್ಧಾರಿಯನ್ನು ಯಾವ ರೀತಿ ನಿರ್ವಹಿಸಬೇಕು ಎಂದು ತಿಳಿಸಿದರು. ಪ್ರಮುಖರಾದ ಲಿಸಿ ಅಮ್ಮಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನನಿ ಮಹಿಳಾ ಮಂಡಳಿಯ ಸದಸ್ಯರಿಗೆ ಹಾಗೂ ಮಹಿಳಯರಿಗೆ ರಸಪ್ರಶ್ನೆ ಕಾರ್ಯಕ್ರಮ, ಗಾದೆಯನ್ನು ಪೂರ್ಣಗೊಳಿಸುವುದು, ಅಕ್ಷರ ಬಂಧ, ಆಶುಭಾಷಾ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.…
ಸೋಮವಾರಪೇಟೆ ಮಾ.13 : ಜಿಲ್ಲಾ ಬಿಜೆಪಿ ಯುವ ಮೋರ್ಚಾದ ವತಿಯಿಂದ ಯುವಶಕ್ತಿ ಸಂಗಮ ಕಾರ್ಯಕ್ರಮದ ಅಂಗವಾಗಿ ಯುವಮೋರ್ಚಾ ಕಾರ್ಯಕರ್ತರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಬೈಕ್ ಜಾಥ ನಡೆಸಿದರು. ನಂತರ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಸಮಾವೇಶದಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಕೊಡಗಿನ ಜನ ರಾಷ್ಟ್ರ ಪ್ರೇಮಕ್ಕೆ ಹೆಸರಾದವರು. ಇಂದು ಜಿಲ್ಲೆಯಲ್ಲಿ ಯುವಶಕ್ತಿಯೂ ಬಿಜೆಪಿ ಬೆಂಬಲಕ್ಕೆ ನಿಂತಿದೆ. ನಾವೀಗ ಭಾರತವನ್ನು ಕಾಂಗ್ರೆಸ್ ಮುಕ್ತ ದೇಶವನ್ನಾಗಿಸುವ ಸಂಕಲ್ಪ ತೊಡಬೇಕಾಗಿದೆ. ದೇಶದಲ್ಲಿ ಮತ್ತೆ ಭ್ರಷ್ಟಾಚಾರ ತಲೆ ಎತ್ತದಂತೆ ನೋಡಿಕೊಳ್ಳಬೇಕಿದೆ ಎಂದರು. ಜಿಲ್ಲೆಯಲ್ಲಿ ಬಿಜೆಪಿ ಬಲಿಷ್ಠವಾಗಿದೆ, ಅಭಿವೃದ್ಧಿ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಿದ್ದೇವೆ. ಶಾಸಕ ಅಪ್ಪಚ್ಚು ರಂಜನ್ ಅವರು ಅನೇಕ ರಸ್ತೆಗಳ ಅಭಿವೃದ್ಧಿ ಯೋಜನೆಗೆ ಸರ್ಕಾರದಿಂದ ಅಗತ್ಯ ಅನುದಾನ ತರುವಲ್ಲಿ ಸಫಲರಾಗಿದ್ದಾರೆ. ಮಡಿಕೇರಿ ಕ್ಷೇತ್ರದ ಸರ್ವಾಂಗೀಣ ಪ್ರಗತಿಗೆ ಕಾರಣರಾಗಿದ್ದಾರೆ ಎಂದರು. ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಇಲ್ಲಿಯವರೆಗೆ ಜಿಲ್ಲೆಗೆ ಯಾವುದೇ ಸರ್ಕಾರಗಳು ನೀಡದಂತ ಅನೇಕ ಕೊಡುಗೆಗಳನ್ನು ಬಿಜೆಪಿ ನೀಡಿದೆ. ಕಾಂಗ್ರೆಸ್ ಸರ್ಕಾರ ಕೇವಲ ವೋಟ್…
ಮಡಿಕೇರಿ ಮಾ.13 : ನೆಹರು ಯುವ ಕೇಂದ್ರ ಮಡಿಕೇರಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ನೇತಾಜಿ ಯುವಕ ಮಂಡಲ ಸಂಯೋಗದಲ್ಲಿ ತಾಳತ್ತಮನೆ ನೇತಾಜಿ ಯುವ ಮಂಡಳಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ತಾಳತ್ತಮನೆಯ ನೇತಾಜಿ ಯುವಕ ಮಂಡಳದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿ ಮಹಿಳಾ ದಿನದ ಮಹತ್ವ ತಿಳಿಸಿದರು. ಸಭಾ ಕಾರ್ಯಕ್ರಮದ ನಂತರದ ದಿನಗ ಅಂಗವಾಗಿ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳು ನಡೆಯಿತು. ಹಾಗಲಕಾಯಿ ತಿನ್ನುವ ಸ್ಪರ್ಧೆಯಲ್ಲಿ ರೀಟಾ ಪ್ರಥಮ, ನೇತ್ರಾವತಿ ದ್ವಿತೀಯ, ನವೀನ ತೃತೀಯ ಸ್ಥಾನ ಪಡೆದುಕೊಂಡರು. ಕಣ್ಮುಚ್ಚಿ ಆನೆ ಬಾಲ ಬಿಡಿಸುವ ಸ್ಪರ್ಧೆಯಲ್ಲಿ ನೇತ್ರಾವತಿ ಪ್ರಥಮ, ವೀಣಾ ದ್ವಿತೀಯ, ಮೋಹಿನಿ ತೃತೀಯ, ಲೇಖನ ಬರೆಯುವ ಸ್ಪರ್ಧೆಯಲ್ಲಿ ಸರೋಜಾ ಪ್ರಥಮ, ಮೋಹಿನಿ ದ್ವಿತೀಯ, ವೀಣಾ ತೃತೀಯ ಬಹುಮಾನ ಪಡೆದುಕೊಂಡರು. ವಿಜೇತರಿಗೆ ಪ್ರಮುಖರಾದ ಪಾರ್ಲಕೋಟಿ ಜೀವನ್ ಹಾಗೂ ನವೀನ ಬಹುಮಾನ ವಿತರಿಸಿದರು. ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಮಾಜಿ ಅಧ್ಯಕ್ಷರು ಇತರ ಸದಸ್ಯರುಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಚೆಯ್ಯಂಡಾಣೆ ಮಾ.13 : ಸ್ಥಳೀಯ ಸರಕಾರಿ ಪ್ರಾಥಮಿಕ ಆರೋಗ್ಯ ಉಪಕೇಂದ್ರ ‘ಎ’ ವತಿಯಿಂದ ನರಿಯಂದಡ ಕೇಂದ್ರ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ -19, ಸಾಂಕ್ರಾಮಿಕ ರೋಗಗಳು, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್ (ಪಿಎಂಜೆಎವೈ ) ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಯಿತು. ಪ್ರಥಮ ಬಹುಮಾನವನ್ನು 9 ನೇ ತರಗತಿ ವಿದ್ಯಾರ್ಥಿ ಎಂ.ಎಂ.ತಂಜನ್, ದ್ವಿತೀಯ ಬಹುಮಾನವನ್ನು 8ನೇ ತರಗತಿಯ ಸಿ.ಎಸ್. ದೀಪಿಕಾ, ತೃತೀಯ ಬಹುಮಾನವನ್ನು 9ನೇ ತರಗತಿಯ ಅಂಕಿತ ಪಡೆದು ಕೊಂಡರು. ಕಾರ್ಯಕ್ರಮದಲ್ಲಿ ನರಿಯಂದಡ ಕೇಂದ್ರ ಪ್ರೌಢ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಸುನೀತಾ, ಸ್ಥಳೀಯ ಆಯೋಗ್ಯ ಕೇಂದ್ರದ ಆರೋಗ್ಯಧಿಕಾರಿ ಕನಕಾವತಿ, ಆಶಾ ಕಾರ್ಯಕರ್ತೆಯರು, ಶಾಲಾ ಶಿಕ್ಷಕ ವೃಂದದವರು ಹಾಜರಿದ್ದರು. ವರದಿ : ಅಶ್ರಫ್
ಮಡಿಕೇರಿ ಮಾ.13 : ವಿಕೆ3 ಪಿಕ್ಚರ್ಸ್ ಬ್ಯಾನರ್ ನಲ್ಲಿ ಈರಮಂಡ ಹರಿಣಿ ವಿಜಯ್ ಮತ್ತು ಕೊಟ್ಟುಕತ್ತಿರ ಯಶೋಧ ಪ್ರಕಾಶ್ ಅವರ ನಿರ್ಮಾಣದಲ್ಲಿ ತಯಾರಾದ ಕೊಡವ ಕಾದಂಬರಿ ಆಧಾರಿತ, ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಲನಚಿತ್ರ ಇಲ್ಲಿಯವರೆಗೆ ಬರೋಬ್ಬರಿ 62 ಅಂತರ ರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ ಚಿತ್ರದ ಯಶಸ್ಸಿನ ಕುರಿತು ಹರ್ಷ ವ್ಯಕ್ತಪಡಿಸಿತು. ನಿರ್ಮಾಪಕಿ ಈರಮಂಡ ಹರಿಣಿ ವಿಜಯ್ ಮಾತನಾಡಿ ಕೊಡಗಿನ ಸಂಸ್ಕೃತಿ, ಆಚಾರ, ವಿಚಾರ, ಪರಿಸರದ ಮೇಲೆ ಬೆಳಕು ಚೆಲ್ಲಿರುವ ಮತ್ತು ಸ್ವಾವಲಂಬಿ ಮಹಿಳೆಯೊಬ್ಬಳು ಸಮಾಜಮುಖಿಯಾಗಿ ಸೇವೆ ಸಲ್ಲಿಸುವ ಕಥಾಹಂದರದ “ನಾಡ ಪೆದ ಆಶಾ” ಕೊಡವ ಭಾಷೆಯ ಚಲನಚಿತ್ರವಾದರೂ ಎಲ್ಲಾ ಜಾತಿ, ಮತ, ಬೇರೆ ಭಾಷೆಯವರು ಚಿತ್ರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ ಪ್ರೋತ್ಸಾಹ ನೀಡಿದ್ದಾರೆ ಎಂದರು. ಸಿನಿಮಾ ವಿಮರ್ಶಕರ ಅನಿಸಿಕೆಗಳು ಈ ಚಿತ್ರವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಮತ್ತು ಇದುವರೆಗೆ ಪಾಲ್ಗೊಂಡ ವಿವಿಧ ಅಂತರರಾಷ್ಟ್ರೀಯ ಸಿನಿಮೋತ್ಸವಗಳಲ್ಲಿ ಪ್ರಶಸ್ತಿಗಳನ್ನು ಪಡೆಯಲು ಸಾಧ್ಯವಾಗಿದೆ.…
ಮಡಿಕೇರಿ ಮಾ.13 : ಕೊಡವ ಕೂಟಾಳಿಯಡ ಕೂಟದಿಂದ ಮಹಿಳಾ ದಿನಾಚರಣೆ ಅಂಗವಾಗಿ ವಿಶೇಷ ಚೇತನರಾದ ಗೋಣಿಕೊಪ್ಪದ ಕಂಜಿತಂಡ ಯಶೋಧಾ ವತ್ಸಲಾ ಅವರನ್ನು ಸನ್ಮಾನಿಸಲಾಯಿತು. ಯಶೋಧಾ ಅವರ ಮನೆ ಗೆ ಭೇಟಿ ನೀಡಿದ ಕೂಟದ ಪ್ರಮುಖರು ಹಾಗೂ ಪದಾಧಿಕಾರಿಗಳು ವಿಶೇಷ ಚೇತನರಾದರೂ ಸ್ವಾವಲಂಬಿ ಬದುಕು ನಡೆಸುತ್ತ, ನಡೆಯಲು ಆಗದವರಿಗೆ ಗಾಲಿ ಕುರ್ಚಿಗಳು ಒದಗಿಸುವ ಮೂಲಕ ಸಾಮಾಜಿಕ ಜವಾಬ್ದಾರಿ ನಿಭಾಯಿಸುತ್ತಿರುವ ಯಶೋಧಾ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷೆ ಚಿಮ್ಮಚ್ಚಿರ ಪವಿತ ರಜನ್, ಕಾರ್ಯದರ್ಶಿ ಚೆಟ್ಟೋಳಿರ ಶರತ್ ಸೋಮಣ್ಣ, ಸಲಹೆಗಾರ ಚಂಗುಲಂಡ ಸೂರಜ್, ಸಾಂಸ್ಕೃತಿಕ ನಿರ್ದೇಶಕಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಸದಸ್ಯ ಕಾಳಮಂಡ ರಾಬಿನ್ ಅಚ್ಚಮ್ಮ ಇದ್ದರು.






