ಲೇಖಕ: admin

ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನವು ಸುಮಾರು 550 ವರ್ಷಗಳ ಇತಿಹಾಸವುಳ್ಳದ್ದಾಗಿದೆ.  ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಈ ದೇವಳವು ಕರ್ನಾಟಕದ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಇದೆ. ಜಿಲ್ಲಾ ಕೇಂದ್ರದಿಂದ ೩೮ ಕಿಲೋಮೀಟರ್ ಆಗ್ನೇಯದಲ್ಲಿದೆ. ತಿರುಪತಿಯ ತಿರುಮಲ ದೇವಸ್ಥಾನದ ಪಶ್ಚಿಮ ದಿಕ್ಕಿನಲ್ಲಿ ಇರುವುದರಿಂದ ಕಾರ್ಕಳದ ವೆಂಕಟರಮಣ ದೇವಸ್ಥಾನವನ್ನು ಪಡುತಿರುಪತಿ ಎಂದೂ ಕರೆಯಲಾಗುತ್ತದೆ. :: ಐತಿಹ್ಯ ಹಾಗೂ ಇತಿಹಾಸ :: ಗೌಡ ಸಾರಸ್ವತ ಬ್ರಾಹ್ಮಣ ಸಮಯದಾಯ ಕ್ರಿಸ್ತಪೂರ್ವ 3ನೇ ಶತಮಾನದಲ್ಲಿ ಉತ್ತರದಿಂದ ಗೋವಾ ಪ್ರದೇಶಕ್ಕೆ ವಲಸೆ ಬಂದು ಕೃಷಿ ಹಾಗೂ ವ್ಯಾಪಾರದಂತಹ ಜೀವನೋಪಾಯ ವೃತ್ತಿಗಳಲ್ಲಿ ನೆಲೆಗೊಂಡಿತು. ಹೀಗೆ ವಲಸೆ ಬಂದವರಲ್ಲಿ ಕೆಲವು ಕುಟುಂಬಗಳು ಉದ್ಯೋಗ ಅರಸಿ ಗೋವಾದಿಂದ ದಕ್ಷಿಣಕ್ಕೆ ಸಾಗಿದರು. ಈ ರೀತಿ ವಲಸೆ ಬಂದವರಲ್ಲಿ ಕಾರ್ಕಳದಲ್ಲಿ ನೆಲೆಗೊಂಡ ಸೋಹಿರೇ ಪ್ರಭು ಅವರ ಕುಟುಂಬವೂ ಒಂದು. ಕಾರ್ಕಳದಲ್ಲಿ ಅವರು ಯಾವ ವೃತ್ತಿ ಮಾಡಿಕೊಂಡಿದ್ದರು ಎಂಬ ಮಾಹಿತಿ ತಿಳಿಯದಿದ್ದರೂ, ಅವರ ಮುಂದಿನ ಪೀಳಿಗೆಯವರು ನಿರ್ವಹಿಸುತ್ತಿದ್ದ ಆಯುರ್ವೇದ ವೈದ್ಯಕೀಯದ ವೃತ್ತಿಯನ್ನು ಗಮನಿಸಿ ಸೋಹಿರೇ ಪ್ರಭುಗಳೂ ಕೂಡ…

Read More

ಆಯುರ್ವೇದ ಮತ್ತು ಮನೆ ಮದ್ದಿನಲ್ಲಿ ಪುದೀನ ಎಲೆಯನ್ನು ವಿಶೇಷವಾಗಿ ಬಳಸಲಾಗುವುದು. ಇದರಲ್ಲಿ ಇರುವ ಔಷಧೀಯ ಗುಣಗಳು ಸಾಕಷ್ಟು ಅನಾರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತವೆ. ಪುದೀನದಲ್ಲಿ ಉತ್ಕರ್ಷಣ ನಿರೋಧಕಗಳು, ಮೆಂಥಾಲ್ ಮತ್ತು ಫೈಟೊನ್ಯೂಟ್ರಿಯಂಟ್‍ಗಳಿವೆ. ಇವು ಕಿಣ್ವಗಳಿಗೆ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತವೆ. ಪುದೀನದಲ್ಲಿ ಇರುವ ಸಾರಭೂತ ತೈಲಗಳು ಬಲವಾದ ಆಂಟಿಬ್ಯಾಕ್ಟೀರಿಯಾ ಮತ್ತು ನಂಜು ನಿರೋಧಕ ಪರಿಣಾಮಗಳನ್ನು ಹೊಂದಿರುತ್ತವೆ. ಅವು ಹೊಟ್ಟೆಯ ಸೆಳೆತವನ್ನು ಶಾಂತಗೊಳಿಸುತ್ತದೆ. ಆಮ್ಲೀಯತೆ ಮತ್ತು ವಾಯುವನ್ನು ಹಿಡಿತದಲ್ಲಿ ಇಡಲು ಸಹಾಯ ಮಾಡುವುದು. ನಿಯಮಿತವಾಗಿ ಪುದೀನ ರಸ ಅಥವಾ ಪುದೀನ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಎದೆಯ ದಟ್ಟಣೆ ಕಡಿಮೆಯಾಗುತ್ತದೆ. ಪುದೀನದಲ್ಲಿ ಇರುವ ಮೆಂಥಾಲ್ ಡಿಕೊಂಗಸ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಶ್ವಾಸಕೋಶದಲ್ಲಿ ಸಂಗ್ರಹಿಸಿದ ಲೋಳೆಯನ್ನು ಸಡಿಲಗೊಳಿಸಲು ಸಹಾಯ ಮಡುತ್ತದೆ. ಮೂಗಿನಲ್ಲಿ ಕಟ್ಟಿಕೊಂಡ ಪೊರೆಗಳನ್ನು ಕುಗ್ಗಿಸಿ ಸುಲಭವಾಗಿ ಉಸಿರಾಡಲು ಸಹಾಯ ಗುವಂತೆ ಮಾಡುವುದು. ಪುದೀನವನ್ನು ಮಿತವಾಗಿ ಬಳಸಿದಾಗ ಸಮಸ್ಯೆಯನ್ನು ಆರೋಗ್ಯಕರ ರೀತಿಯಲ್ಲಿ ನಿಯಂತ್ರಣದಲ್ಲಿ ಇಡಬಹುದು . ಪುದೀನದಲ್ಲಿ ಇರುವ ಮೆಂಥಾಲ್ ಅಂಶವು ಸ್ನಾಯುಗಳನ್ನು ಸಡಿಲಗೊಳಿಸಿ, ನೋವುಗಳನ್ನು ಕಡಿಮೆ…

Read More

ಚಂಡಿಗಢ: ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ಕ್ಯಾಬಿನೆಟ್ ಸಚಿವ ಫೌಜಾ ಸಿಂಗ್ ಸರಾರಿ  ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣ ನೀಡಿ ಅವರು ಸಿಂಗ್ ಸರಾರಿ ರಾಜೀನಾಮೆ ನೀಡಿರುವುದಾಗಿ ಮೂಲಗಳು ಹೇಳಿವೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಹಾಗೆಯೇ ಇರುವುದಾಗಿ ಸರಾರಿ ಹೇಳಿರುವುದಾಗಿ ವರದಿಯಾಗಿದೆ.

Read More

ಮಡಿಕೇರಿ ಜ.7 : ಚೆಟ್ಟಿಮಾನಿ ಬ್ಲೂ ಸ್ಟಾರ್ ಕ್ರಿಕೆಟರ್ಸ್  ವತಿಯಿಂದ ನಡೆದ ಚೆಟ್ಟಿಮಾನಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ  ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು.

Read More

ಮಡಿಕೇರಿ ಜ.7 :  ಮಡಿಕೇರಿ ಮ್ಯಾನ್ಸ್ ಕಾಂಪೌಂಡ್ ಕ್ಲಬ್ ವತಿಯಿಂದ ಮ್ಯಾನ್ಸ್ ಕಾಂಪೌಂಡ್ (ಜಿಲ್ಲಾ ಕ್ರೀಡಾಂಗಣ) ನಲ್ಲಿ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ಮುಕ್ತ 5+2 ಆಟಗಾರರ ಕಾಲ್ಚೆಂಡು ಪಂದ್ಯಾವಳಿಗೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ವಿಶ್ಮಯಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಫುಟ್ಬಾಲ್ ಕ್ರೀಡೆಯನ್ನು ಪ್ರೋತ್ಸಾಹಿಸಿಕೊಂಡು ಬರುತ್ತಿರುವ ಎಂ.ಸಿ.ಸಿ. ಕ್ಲಬ್‍ನ ಕೆಲವು ವರ್ಷಗಳ ನಂತರ ಪಂದ್ಯಾವಳಿಯನ್ನು ಪ್ರಾರಂಭಿಸಿರುವುದು ಶಾಘನೀಯ. ಮುಂದಿನ ದಿನಗಳಲ್ಲಿ ಇಲಾಖಾ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದಾಗಿ ಭರವಸೆ ನೀಡಿ, ಪಂದ್ಯಾವಳಿ ಯಶಸ್ಸಿಗೆ ಶುಭ ಹಾರೈಸಿದರು. ಇದೇ ಸಂದರ್ಭ ಎಂ.ಸಿ.ಸಿ. ಕ್ಲಬ್‍ನ ಲಾಂಛನವನ್ನು ಬಿಡುಗಡೆ ಮಾಡಲಾಯಿತು. ಕ್ಲಬ್‍ನ ಸದಸ್ಯರುಗಳಿಗೆ ಸಮವಸ್ತ್ರವನ್ನು ಅತಿಥಿಗಳು ವಿತರಣೆ ಮಾಡಿದರು. ಕ್ಲಬ್‍ನ ಅಧ್ಯಕ್ಷ ಕ್ರಿಸ್ಟೋಫರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಎಂ.ಸಿ.ಸಿ. ಕ್ಲಬ್‍ನ ಹಿರಿಯ ಆಟಗಾರರುಗಳಾದ ಎನ್.ಕೆ.ರವೀಂದ್ರ, ಕುಟ್ಟಯ್ಯ ವಾಸು, ಸುಜಿತ್ ಚಿಣ್ಣಪ್ಪ, ಕ್ಲಬ್‍ನ ಕಾರ್ಯದರ್ಶಿ ಉಮೇಶ್‍ಕುಮಾರ್, ಖಜಾಂಚಿ ಪೀಟರ್, ಪದಾಧಿಕಾರಿ ಸಚಿನ್ ವಾಸುದೇವ್ ಹಾಜರಿದ್ದರು. ರಾಜೇಶ್ವರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರೆ,…

Read More

ಕೊಡ್ಲಿಪೇಟೆ ಜ.7 : ಎಸ್‍ಕೆಎಸ್‍ಎಸ್‍ಎಫ್  ಹಾಗೂ ಎಸ್‍ವೈಎಸ್ ಕೊಡ್ಲಿಪೇಟೆ ಶಾಖೆಯ ವತಿಯಿಂದ ಜ.8 ರಂದು  ಮಜ್ಲಿಸುನ್ನೂರ್ 9ನೇ ವರ್ಷದ ವಾರ್ಷಿಕೋತ್ಸವ ಹಾಗೂ ಧಾರ್ಮಿಕ ಪ್ರವಚನ ಕಾರ್ಯಕ್ರಮ  ನಡೆಯಲಿದೆ. ಸಂಜೆ 7 ಗಂಟೆಗೆ  ಶಂಸುಲ್ ಉಲಮಾ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು  ಮಸ್ಜಿದುನ್ನೂರ್ ಹ್ಯಾಂಡ್-ಪೋಸ್ಟ್ ಖತೀಬ ಹಾರಿಸ್ ಬಾಖವಿ ಉದ್ಘಾಟಿಸಲಿದ್ದು, ಸಯ್ಯಿದ್ ಝೈನುಲ್ ಆಬಿದೀನ್ ತಂಙಳ್  ಪ್ರಾರ್ಥನೆಯ ನೇತೃತ್ವ ವಹಿಸಲಿದ್ದಾರೆ. ಎಸ್‍ಕೆಎಸ್‍ಎಸ್‍ಎಫ್  ಹಾಗೂ ಎಸ್‍ವೈಎಸ್ ಕೊಡಗು ಜಿಲ್ಲಾ ಸಮಿತಿಯ ನಾಯಕರುಗಳು, ರಾಜಕೀಯ – ಸಾಮಾಜಿಕ ನೇತಾರರು, ಸ್ಥಳೀಯ ಮಸೀದಿಯ ಧರ್ಮ ಗುರುಗಳು ಮತ್ತು ಆಡಳಿತ ಸಮಿತಿಯ ಪದಾಧಿಕಾರಿಗಳು, ಊರಿನ ಪ್ರಮುಖರು ಹಾಗೂ ದೀನಿ ಸ್ನೇಹಿಗಳು ಭಾಗವಹಿಸಲಿದ್ದಾರೆ ಎಂದು ಎಸ್‍ಕೆಎಸ್‍ಎಸ್‍ಎಫ್  ಹಾಗೂ ಎಸ್‍ವೈಎಸ್ ಕೊಡ್ಲಿಪೇಟೆ ಶಾಖಾಧ್ಯಕ್ಷ ಬಾಸಿತ್ ಹಾಜಿ ಪತ್ರಿಕಾ ಪ್ರಕಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಜ.7 : ಹತ್ತು ಕುಟುಂಬ ಹದಿನೆಂಟು ಗೋತ್ರದ ಗೌಡ ಜನಾಂಗ ಬಾಂಧವರ ನಡುವೆ ಕೊಡಗು ಗೌಡ ಯುವ ವೇದಿಕೆ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು ಬರಲಾಗುತ್ತಿರುವ ಟೆನ್ನಿಸ್ ಬಾಲ್ ಕ್ರಿಕೆಟ್ ಹಬ್ಬವನ್ನು ಈ ಬಾರಿಯೂ ಏಪ್ರಿಲ್ ಕೊನೆಯ ವಾರ ಹಾಗೂ ಮೇ ಮೊದಲ ವಾರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಯುವ ವೇದಿಕೆ ಅಧ್ಯಕ್ಷ ಪೈಕೇರ ಮನೋಹರ್ ಮಾದಪ್ಪ ಅಧ್ಯಕ್ಷತೆಯಲ್ಲಿ ವೇದಿಕೆ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕಳೆದ ಎರಡು ವರ್ಷಗಳಿಂದ ಯುವ ವೇದಿಕೆ ವತಿಯಿಂದಲೇ `ಕುಟುಂಬ’ ಹೆಸರಿನಲ್ಲಿ ಪಂದ್ಯಾವಳಿ ಆಯೋಜನೆ ಮಾಡಿಕೊಂಡು ಬರಲಾಗುತ್ತಿದ್ದು, ಈ ಬಾರಿಯೂ ಕೂಡ `ಕುಟುಂಬ-2023′ ಹೆಸರಿನಲ್ಲಿ ಕ್ರಿಕೆಟ್ ಹಬ್ಬ ಆಚರಿಸುವಂತೆ ತೀರ್ಮಾನ ಕೈಗೊಳ್ಳಲಾಗಿದೆ. ಕ್ರಿಕೆಟ್ ಪಂದ್ಯಾವಳಿಯೊಂದಿಗೆ ವಿವಿಧ ಗ್ರಾಮೀಣ ಕ್ರೀಡಾಕೂಟಗಳನ್ನು ಕೂಡ ಆಯೋಜನೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ಕಟ್ಟೆಮನೆ ರೋಶನ್, ಕ್ರೀಡಾ ಸಮಿತಿ ಅಧ್ಯಕ್ಷ ಬಾಳಾಡಿ ಮನೋಜ್, ಆಹಾರ ಸಮಿತಿ ಅಧ್ಯಕ್ಷ ಪರಿಚನ ಸತೀಶ್, ಶಿಸ್ತು ಸಮಿತಿ ಅಧ್ಯಕ್ಷ…

Read More

ವಿರಾಜಪೇಟೆ ಜ.7 ಮಧ್ಯಾಹ್ನದ ಬಿಸಿಯೂಟ ಸಜ್ಜುಗೊಳಿಸುವ ಹಂತದಲ್ಲಿ ಕಾಲಿಗೆ ಬಿಸಿ ನೀರು ಬಿದ್ದು ಗಂಭೀರ ಸ್ವರೂಪದ ಸುಟ್ಟಗಾಯಗಳಾದ ಮಹಿಳೆಯೊಬ್ಬರು ಇಲಾಖೆಯ ಯಾವುದೇ ನೆರವು ಇಲ್ಲದೆ ಸಂಕಷ್ಟಕ್ಕೆ ಒಳಗಾಗಿರುವ ಘಟನೆ ಪರಾಣೆಯಲ್ಲಿ ನಡೆದಿದೆ. ಮಡಿಕೇರಿ ತಾಲೂಕಿನ ಕೊಣಂಜಗೇರಿ ಗ್ರಾ.ಪಂ ವ್ಯಾಪ್ತಿಯ ಪಾರಾಣೆ ಗ್ರಾಮದ ನಿವಾಸಿ ಎ.ಕೆ. ಸೋಮಯ್ಯ ಅವರ  ಪತ್ನಿ ಮತ್ತು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಸೇವೆಯಲ್ಲಿರುವ ಎ.ಎಸ್. ಶಾಂತಿ 9( 58) ಗಾಯಳಾಗಿ  ತೊಂದರೆಗೆ ಸಿಲುಕಿರುವ ಮಹಿಳೆ . ಪತ್ರಿಕೆಯೊಂದಿಗೆ ತನ್ನ ಸಂಕಷ್ಟ ತೋಡಿಕೊಂಡಿರುವ ಅವರು,  ಸುಮಾರು ಎರಡುವ ವರ್ಷಗಳಿಂದ ಅಕ್ಷರ ದಾಸೋಹ ಯೋಜನೆ ಅಡಿಯಲ್ಲಿ ಅಡುಗೆ ಸಹಾಯಕಿಯಾಗಿ ದುಡಿಯುತ್ತಿದ್ದೇನೆ. ಜ.2 ರಂದು  ಕುದಿಯುವ ಬಿಸಿ  ನೀರಿನ ಪಾತ್ರೆಯನ್ನು ಇಳಿಸುವ ವೇಳೆಯಲ್ಲಿ ಆಕಸ್ಮಿಕವಾಗಿ ಕುದಿಯುವ  ನೀರು ಎಡಕಾಲಿನ ಮೇಲೆ ಬಿದ್ದು ಗಂಭೀರ ಗಾಯಗಳಾಗಿದೆ. ನಾಪೋಕ್ಲು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಂತರ  ಮಡಿಕೇರಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆಚ್ಚಿನ ಚಿಕಿತ್ಸೆ ಪಡೆದಿದ್ದೇನೆ.  ಮನೆಯಲ್ಲಿ ಪತಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ.…

Read More

ನಾಪೋಕ್ಲು ಜ.7 : ಎಮ್ಮೆಮಾಡು ಗ್ರಾ.ಪಂ  ವ್ಯಾಪ್ತಿಯಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆ ಉದ್ಘಾಟನೆ ಮತ್ತು ವಿವಿಧ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು. ಗ್ರಾಮದಲ್ಲಿ 51 ಲಕ್ಷ ರೂಗಳಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು. ಬಳಿಕ ಎಮ್ಮೆಮಾಡು ಪ್ರೌಢ ಶಾಲೆಗೆ 17 ಲಕ್ಷದಲ್ಲಿ ನಿರ್ಮಿಸಲಾಗುತ್ತಿರುವ ನೂತನ ಸಭಾಂಗಣ ಮತ್ತು ಪಾಡಿಯಾಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 27 ಲಕ್ಷ ರೂಗಳಲ್ಲಿ ನಿರ್ಮಾಣ ಮಾಡಲಿರುವ ಶಾಲಾ ಕೊಠಡಿಗಳಿಗೆ ಗುದ್ದಲಿ ಪೂಜೆಯನ್ನು ನೆರೆವೇರಿಸಿದರು. ಬಳಿಕ ಮಾತನಾಡಿದ ಶಾಸಕ ಬೋಪಯ್ಯ ಜನರಿಂದ ಒಮ್ಮೆ ಚುನಾಯಿತರಾಗಿ ಆಯ್ಕೆಯಾದರೆ ಎಲ್ಲಾ ಸಮಾಜದ  ಅಭಿವೃದ್ಧಿಗಾಗಿ ಕೆಲಸ ಮಾಡಬೇಕಾಗಿರುವುದು ನಮ್ಮ ಜವಾಬ್ದಾರಿ, ಅದನ್ನು ಅರಿತು ಎಲ್ಲಾ ಸಮಾಜದ ಜನರಿಗಾಗಿ ಕೆಲಸಗಳನ್ನು ನಾನು ಮಾಡಿದ್ದೇನೆ ಎಂದರು. ಎಮ್ಮೆಮಾಡು ಗ್ರಾಮದ ಮುಖ್ಯ ರಸ್ತೆಯಲ್ಲಿ ಸ್ವಲ್ಪ ಕಾಮಗಾರಿ ಬಾಕಿ ಉಳಿದಿದ್ದು, ಮುಂದಿನ ತಿಂಗಳ ಉರೂಸ್ ಕಾರ್ಯಕ್ರಮದ ಮುಂಚಿತವಾಗಿ ಕಾಮಗಾರಿ ಪೂರ್ಣ ಗೊಳಿಸುವಂತೆ ಸಂಬಂಧಪಟ್ಟ ಅಭಿಯಂತರರಿಗೆ ಸೂಚಿಸಲಾಗಿದೆ ಎಂದರು. ಈ ಸಂದರ್ಭ…

Read More

ನಾಪೋಕ್ಲು ಜ.7 : ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರದ ಗದ್ದುಗೆ ಏರಲು ಕಾರ್ಯಕರ್ತರು ತಳಮಟ್ಟದಿಂದಲೇ ಶ್ರಮಿಸಿ ಪಕ್ಷದ ಸಾಧನೆಗಳನ್ನು ಪ್ರತಿಯೊಬ್ಬ ಮತದಾರನಿಗೂ ಮನವರಿಕೆ ಮಾಡಿಕೊಡಬೇಕು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಕರ್ನಾಟಕ ರಾಜ್ಯ ಬಿಜೆಪಿ ಯ “ಬೂತ್ ವಿಜಯ ಅಭಿಯಾನದ ಅಂಗವಾಗಿ ನಾಪೋಕ್ಲು ಭಗವತಿ ದೇವಾಲಯದ ಸಮುದಾಯಭವನದಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಮಾತನಾಡಿದರು. ಪ್ರಧಾನಿ ಮೋದಿ ಅವರ ಉತ್ತಮ ಆಡಳಿತ ಹಾಗೂ ಪಕ್ಷದ ತತ್ವ ಸಿದ್ಧಾಂತಗಳ ಆಧಾರದಲ್ಲಿ ಮತಯಾಚನೆ ಮಾಡಿ ಸದಢ ಸರ್ಕಾರವನ್ನು ಅಧಿಕಾರಕ್ಕೆ ತರಲು ಮುಂದಾಗಬೇಕು ಎಂದರು ಕಿವಿ ಮಾತು ಹೇಳಿದರು. ಈ ಸಂದರ್ಭ ಶಾಸಕರಾದ ಕೆ.ಜಿ.ಬೋಪಯ್ಯ, ಮಂಡೆಪಂಡ ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯರಾದ ಮಂಡೆಪಂಡ ಸುಜಾಕುಶಾಲಪ್ಪ, ರಾಜ್ಯ ಸಮಿತಿ ಸದಸ್ಯ ಅಪ್ಪಚೆಟ್ಟೋಳಂಡ ಮನುಮುತ್ತಪ್ಪ ಮಾತನಾಡಿ ಮುಂದಿನ ಚುನಾವಣೆಯಲ್ಲಿ ಗೆಲುವಿಗೆ ಬೇಕಾದ ಕಾರ್ಯತಂತ್ರದ ಬಗ್ಗೆ ಮಾರ್ಗದರ್ಶನ ಹಾಗೂ ಅನಿಸಿಕೆ ವ್ಯಕ್ತಪಡಿಸಿದರು. ಈ ಸಂದರ್ಭ ನಾಪೋಕ್ಲು ಬಿಜೆಪಿ ಶಕ್ತಿಕೇಂದ್ರದ…

Read More