ಮಡಿಕೇರಿ ಫೆ.2 : ನಕ್ಸಲ್ ಸಂಘಟನೆಯ ಶಂಕಿತ ಮುಖಂಡ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಕ್ಸಲ್ ಪ್ರಕರಣವನ್ನು ಎದುರಿಸುತ್ತಿರುವ ರೂಪೇಶ್ ನನ್ನು ಬಿಗಿ ಭದ್ರತೆಯಲ್ಲಿ ಮಡಿಕೇರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಕೇರಳ ಹಾಗೂ ಕರ್ನಾಟಕ ಪೊಲೀಸರ ಬಿಗಿ ಭದ್ರತೆಯಲ್ಲಿ ಬಂದ ರೂಪೇಶ್ ಘೋಷಣೆಗಳನ್ನು ಕೂಗಿದನು. ಕೇರಳ ರಾಜ್ಯದ ವೈವೂರು ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ರೂಪೇಶ್ನನ್ನು ಬುಧವಾರ ಸಂಜೆ ವೇಳೆಯಲ್ಲಿ ಮಡಿಕೇರಿಗೆ ಕರೆತಂದು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರಿಸಲಾಗಿತ್ತು. ಗುರುವಾರ ಬೆಳಗೆ ಶಸ್ತ್ರ ಸಜ್ಜಿತ ಕೊಡಗು ಕಮಾಂಡೋ ಮತ್ತು ಕೇರಳ ಥಂಡರ್ ಬೋಲ್ಟ್ ಕಮಾಂಡೋಗಳ ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆತರಲಾಯಿತು.
ಲೇಖಕ: admin
ನಾಪೋಕ್ಲು ಫೆ.2 : ಕಾಫಿ ಮಂಡಳಿಯಿಂದ ರೈತರಿಗೆ ಸಿಗುವ ಸೌಲಭ್ಯಗಳು, ಮತ್ತು ಕಾಫಿ ತೋಟದ ನಿರ್ವಹಣೆ, ಮಣ್ಣು ಪರೀಕ್ಷೆ ಸಮಗ್ರ ಮಾಹಿತಿ ಹಾಗೂ ಮುಂದಿನ ದಿನಗಳಲ್ಲಿ ರೈತರ ತೋಟಗಳಿಗೆ ಭೇಟಿ ನೀಡಿ ಮಣ್ಣು ಪರೀಕ್ಷೆ ಮಾಡುವುದು ಹಾಗೂ ಬೆಳೆಗಾರರಿಗೆ ಮತ್ತು ಕಾರ್ಮಿಕರಿಗೆ ಕಾಫಿ ಗಿಡಗಳ ನಿರ್ವಹಣೆ ಕುರಿತು ತರಬೇತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಕಾಫಿ ಮಂಡಳಿಯ ಉಪನಿರ್ದೇಶಕ ಡಾ. ಚಂದ್ರಶೇಖರ್ ಮಾಹಿತಿ ನೀಡಿದರು. ಸಮೀಪದ ಕಕ್ಕಬ್ಬೆಯ ಪ್ರಾಥಮಿಕಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಕಾಫಿ ಮಂಡಳಿ ಹಾಗೂ ಬೆಳೆಗಾರರ ನಡುವಿನ ಸಂವಾದ ಕಾರ್ಯಕ್ರಮದಲ್ಲಿ ಕಿರು ಚಿತ್ರಪ್ರದರ್ಶನದ ಮೂಲಕ ಮಾಹಿತಿ ನೀಡಿದರು. ಕಾಫಿ ಮಂಡಳಿಯ ಅಧಿಕಾರಿಗಳಾದ (ಜೆ ಎಲ್ ಓ) ಅಜಿತ್ ಕುಮಾರ್ ರಾವತ್, ಚಟ್ಟಳ್ಳಿ ಕಾಫಿ ಸಂಶೋಧನಾ ಕೇಂದ್ರದ ಮಂಜುನಾಥ್ ರೆಡ್ಡಿ ಇದ್ದ ಬೆಳಗಾರರ ಸಮಸ್ಯೆಯ ಬಗ್ಗೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು. ಪ್ರಾಥಮಿಕಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕಲ್ಯಾಟಂಡ ರಘು ತಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮ…
ಮಡಿಕೇರಿ ಫೆ.2 : ರೊಬೆಸ್ಟಾ ಎಡ್ವೆಂಚರಸ್ ಆಂಡ್ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಫೆ.5 ರಂದು ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರಿನಲ್ಲಿ ರಾಷ್ಟ್ರಮಟ್ಟದ 4X4 ಆಫ್ ರೋಡ್ ರ್ಯಾಲಿ ನಡೆಯಲಿದೆ ಎಂದು ಆಯೋಜಕರಾದ ಉದ್ದಪ್ಪಂಡ ತಿಮ್ಮಣ್ಣ ತಿಳಿಸಿದ್ದಾರೆ. ಕ್ಯಾಂಪ್ ಎಟ್ ಬೆಟ್ಟತ್ತೂರಿನಲ್ಲಿ (ಜಿಪಿಎಸ್ ಲೊಕೇಶನ್ : ತ್ರಿ ಹಿಲ್ಸ್ ರೆಸಾರ್ಟ್) ಅಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ರ್ಯಾಲಿ ನಡೆಯಲಿದ್ದು, ಹೊರ ರಾಜ್ಯಗಳ ಪ್ರತಿಭಾವಂತ ಸ್ಪರ್ಧಿಗಳು ಪಾಲ್ಗೊಳ್ಳಲಿದ್ದಾರೆ. ಸ್ಪರ್ಧೆಯಲ್ಲಿ ಸ್ಟಾಕ್ ಪೆಟ್ರೋಲ್, ಸ್ಟಾಕ್ ಡೀಸಲ್ ಮತ್ತು ಪ್ರೂವ್ ಮೊಡಿಫೈಡ್ ವಿಭಾಗಗಳಿದೆ. ಹೆಚ್ಚಿನ ಮಾಹಿತಿಗೆ 9901312776, 9448448399 ಸಂಪರ್ಕಿಸುವಂತೆ ಉದ್ದಪ್ಪಂಡ ತಿಮ್ಮಣ್ಣ ಕೋರಿದ್ದಾರೆ.
ಮಡಿಕೇರಿ ಫೆ.2 : ಕೊಡಗು ಪ್ರೆಸ್ಕ್ಲಬ್ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ಅಶ್ವಿನಿ ಆಸ್ಪತ್ರೆ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಯೋಗ್ ಆಸ್ಪತ್ರೆ, ವಾಕ್ ಮತ್ತು ಶ್ರವಣ ಇನ್ ಪ್ಲಾಂಟ್ಕ್ಲಿನಿಕ್ ಹಾಗೂ ಜಸ್ಟೀಸ್ ಕೆ.ಎಸ್.ಹೆಗಡೆ ಸ್ಮಾರಕದಂತ ವಿಭಾಗದ ಸಹಯೋಗದಲ್ಲಿ ಅಶ್ವಿನಿ ಆಸ್ಪತ್ರೆಯಲ್ಲಿ ಫೆ.4 ರಂದ ಆರೋಗ್ಯ ತಪಾಸಣಾ ಉಚಿತ ಶಿಬಿರ ಏರ್ಪಡಿಸಿದ್ದು, ಸಭಾ ಕಾರ್ಯಕ್ರಮ ಅಂದು ಬೆಳಗ್ಗೆ 11.30ಕ್ಕೆ ಆಸ್ಪತೆ ಆವರಣದಲ್ಲಿ ನಡೆಯಲಿದೆ. ಕೊಡಗು ಪ್ರೆಸ್ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ.ಪೂವಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಕೊಡಗು ಪ್ರೆಸ್ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಮಹಾಪೆÇೀಷಕ ಜಿ.ರಾಜೇಂದ್ರ ಮತ್ತು ಭಾರತೀಯ ವಿದ್ಯಾಭವನ, ಕೊಡಗು ಕೇಂದ್ರದ ಅಧ್ಯಕ್ಷ, ಅಶ್ವಿನಿ ಆಸ್ಪತ್ರೆ ಸಲಹಾ ಸಮಿತಿ ಸದಸ್ಯ ಕೆ.ಎಸ್. ದೇವಯ್ಯ ಉದ್ಘಾಟಿಸುವರು. ಮಡಿಕೇರಿ ಅಶ್ವಿನಿ ಆಸ್ಪತ್ರೆ ವಿಶ್ವಸ್ಥ ಎಂ.ಸಿ.ಗೋಖಲೆ, ಕಾರ್ಯದರ್ಶಿ ಕುಪ್ಪಂಡರಾಜಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ, ಕೊಡಗು ಪ್ರೆಸ್ಕ್ಲಬ್ ಬೆಳ್ಳಿ…
ಮಡಿಕೇರಿ ಫೆ.2 : ರಾಫೆಲ್ಸ್ ಇಂಟರ್ನ್ಯಾಷನಲ್ ಸ್ಕೂಲ್ ಹಾಗೂ ಕಾಲೇಜು ಪ್ರಾಯೋಜಕತ್ವದಲ್ಲಿ ಕೊಂಡಂಗೇರಿ ಶಾಲಾ ಮೈದಾನದಲ್ಲಿ ಫೆ.23 ರಿಂದ 26 ವರೆಗೆ ನಡೆಯಲಿರುವ 14 ನೇ ವರ್ಷದ ಕೊಂಡಂಗೇರಿ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯಾವಳಿಯ ಆಟಗಾರರ ಅರ್ಜಿಯನ್ನು 16 ತಂಡದ ನಾಯಕರಿಗೆ ಆಯೋಜಕರಾದ ಸಾಧಿಕ್ ಹಾಗೂ ಸಲೀಂ ಕೊಂಡಂಗೇರಿಯಲ್ಲಿ ವಿತರಿಸಿದರು. ಕ್ರೀಡಾಕೂಟದಲ್ಲಿ ಕೊಂಡಂಗೇರಿ ಗ್ರಾಮದ 16 ತಂಡಗಳು ಭಾಗವಹಿಸುತ್ತಿದ್ದು, ಫೆ.23 ರಂದು ಉದ್ಘಾಟನಾ ಸಮಾರಂಭದಲ್ಲಿ ಕೊಂಡಂಗೇರಿಯ ಲೆಜೆಂಡ್ಸ್ ಎರಡು ತಂಡಗಳ ನಡುವೆ ಪ್ರದರ್ಶನ ಪಂದ್ಯ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಫಾರಮ್ ವಿತರಣಾ ಕಾರ್ಯಕ್ರಮದಲ್ಲಿ ಕೊಂಡಂಗೇರಿ ಕ್ರಿಕೆಟ್ ಪ್ರೀಮಿಯರ್ ಲೀಗ್ ನ 16 ತಂಡಗಳ ನಾಯಕರು ಭಾಗವಹಿಸಿದ್ದರು.
ನಾಪೋಕ್ಲು ಫೆ.2 : ಸುನ್ನಿ ಯುವಜನ ಸಂಘ (ಎಸ್ ವೈ ಎಸ್ )ದ ನಾಪೋಕ್ಲು ಶಾಖೆಯ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ಅಬ್ದುಲ್ ಅಝೀಝ್ ಹಾಜಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಪೋಕ್ಲು ಪಟ್ಟಣದಲ್ಲಿರುವ ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಕಚೇರಿಯಲ್ಲಿ ನಡೆದ ಎಸ್ ವೈ ಎಸ್ ನಾಪೋಕ್ಲು ಶಾಖೆಯ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಕಾರ್ಯದರ್ಶಿಯಾಗಿ ರಹೀಮ್ ಮಾಸ್ಟರ್, ಉಪಾಧ್ಯಕ್ಷರಾಗಿ ಬಿ.ಎ. ಅಬ್ಬಾಸ್, ಖಜಾಂಚಿಯಾಗಿ ಪಿ.ಎಂ. ಅರಫಾತ್, ದಹವಾ ಕಾರ್ಯದರ್ಶಿಯಾಗಿ ಶಾಹಿದ್ ಹಿಮಮಿ, ಸಾಂತ್ವನ ವಿಭಾಗದ ಕಾರ್ಯದರ್ಶಿಯಾಗಿ ಸಾದಿಕ್ ನಿಜಾಮಿ, ಅರ್ಷಾದ್, ಸದಸ್ಯರಾಗಿ ಪಿ.ಯು. ರಜಾಕ್, ಅಝೀಝ್ ಕಾರೆಕ್ಕಾಡ್, ಬಿ. ಯು.ಅಬ್ದುಲ್ ರಹ್ಮಾನ್,ಉಸೈನ್ ಲಿಮ್ರ, ಪಿ.ಎಂ.ಅನೀಫ್,ಅಹಮದ್ ಸಿ.ಎಚ್,ಆಯ್ಕೆಯಾದರು. ನೂತನ ಪದಾಧಿಕಾರಿಗಳಿಗೆ ಹಿಂದಿನ ಅಧ್ಯಕ್ಷ ಇಬ್ರಾಹಿಂ ಮುಸ್ಲಿಯಾರ್ ಹಾಗೂ ಆಡಳಿತ ಮಂಡಳಿಯವರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ಎಸ್ ವೈ ಎಸ್ ಜಿಲ್ಲಾ ಕಾರ್ಯದರ್ಶಿ ವಿ.ಪಿ.ಮೊಯಿದೀನ್ , ಮುಸ್ಲಿಂ ಜಮಾಅತ್ ಮುಖಂಡ ಎಂ.ಎಂ.ಮನ್ಸೂರ್ ಆಲಿ, ಅಮೀನ್ ಮುಸ್ಲಿಯಾರ್, ಸಿ. ಎಚ್, ಅಹಮದ್, ಮುನೀರ್ ಮುಸ್ಲಿಯಾರ್…
ಮಡಿಕೇರಿ ಫೆ.2 : ಪೋಷಣ್ ಅಭಿಯಾನ ಯೋಜನೆಯಡಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮಡಿಕೇರಿ ತಾಲ್ಲೂಕು ಸಂಯೋಜಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಮಾಸಿಕ ಗೌರವಧನ ರೂ.20 ಸಾವಿರ ನಿಗದಿಪಡಿಸಿ ಮಡಿಕೇರಿ ತಾಲ್ಲೂಕಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್ ವಿಷಯಾಧಾರಿತ ಪದವಿ ಹೊಂದಿದ್ದು, ಟೆಕ್ನಾಲಜಿ ಅಂಡ್ ಸಾಪ್ಟ್ವೇರ್ ಅಪ್ಲಿಕೇಷನ್ ಸಪೋರ್ಟ್ನಲ್ಲಿ 2 ವರ್ಷ ಕೆಲಸ ನಿರ್ವಹಿಸಿದ ಅನುಭವ ಹೊಂದಿರಬೇಕು. ಕನ್ನಡ ಭಾಷೆಯಲ್ಲಿ ಮಾತನಾಡುವ ಮತ್ತು ಬರೆಯುವ ಪ್ರಾವೀಣ್ಯತೆ ಹಾಗೂ ಕ್ಷೇತ್ರ ಕಾರ್ಯ ನಿರ್ವಹಣೆಗೆ ಸಿದ್ಧರಿರಬೇಕು. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ವಿದ್ಯಾರ್ಹತೆಯ ಅಂಕಪಟ್ಟಿಗಳು ಮತ್ತು ಅನುಭವ ಪ್ರಮಾಣ ಪತ್ರಗಳೊಂದಿಗೆ ಫೆಬ್ರವರಿ, 13 ರ ಸಂಜೆ 5 ಗಂಟೆಯೊಳಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ(ದೂ.ಸಂ.08272-298379) ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಮಂಜುನಾಥ್ ತಿಳಿಸಿದ್ದಾರೆ.
ಮಡಿಕೇರಿ ಫೆ.2 : ಕೇಂದ್ರ ಸರ್ಕಾರದ 2023 ರ ಬಜೆಟ್ ಪ್ರಗತಿಗೆ ಪೂರಕವಾಗಿದೆ. ಎಲ್ಲರನ್ನು ಒಳಗೊಂಡ ಅಭಿವೃದ್ಧಿ, ಕೊನೆಯ ಆರ್ಥಿಕ ಗುರಿ ತಲುಪುವುದು, ಮೂಲ ಸೌಕರ್ಯ ಹೂಡಿಕೆ, ಸಾಮರ್ಥ್ಯ ಬಲಪಡಿಸುವುದು, ಗ್ರೀನ್ ಡೆವಲಪ್ಮೆಂಟ್, ಯುವ ಶಕ್ತಿ ಹೀಗೆ ಸಪ್ತ ವಿಷಯಗಳ ಬಗ್ಗೆ ಗಮನ ಹರಿಸಿದೆ. ಉದ್ಯೋಗ ಸೃಷ್ಟಿ ಗೆ 10 ಲಕ್ಷ ಕೋಟಿಗಳನ್ನು ಮೀಸಲಿಟ್ಟಿರುವುದು ಗಮನಾರ್ಹ. ಹಾಗೂ ಏಳು ಲಕ್ಷ ರೂ ಆದಾಯಕ್ಕೆ ತೆರಿಗೆಯಿಲ್ಲದಿರುವುದು ಮಧ್ಯಮವರ್ಗದವರಿಗೆ ಪ್ರಯೋಜನವಾಗಿದೆ. ಅಂಚೆ ಕಚೇರಿಗಳಲ್ಲಿ ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ತಂದಿರುವುದು ಮತ್ತು ರಫ್ತು ಉತ್ತೇಜನ ಕಾರ್ಯಕ್ರಮಗಳು ಮಹತ್ವದ್ದಾಗಿದೆ. ಭಾರತವು ವಿಶ್ವದಲ್ಲಿಯೇ ಆರ್ಥಿಕತೆಯಲ್ಲಿ 5 ನೇ ಸ್ಥಾನವನ್ನು ಹೊಂದಿದ್ದು, ಈ ಬಜೆಟ್ ಮತ್ತಷ್ಟು ಆರ್ಥಿಕ ಬೆಳವಣಿಗೆ ಸಾಧಿಸಲು ಪೂರಕವಾಗಿದೆ. (( ಬಿ. ಎನ್. ಶಾಂತಿಭೂಷಣ್, ಅರ್ಥಶಾಸ್ತ್ರ ಉಪನ್ಯಾಸಕರು. ಸೆಂಟ್ ಆನ್ಸ್ ಪದವಿ ಕಾಲೇಜು, ವಿರಾಜಪೇಟೆ ))
ಸಿದ್ದಾಪುರ ಫೆ.2 : ಸರ್ವಧರ್ಮ ಸಂಕೇತದ ಇತಿಹಾಸ ಪ್ರಸಿದ್ಧ ಆರ್ಕಾಡ್ ಪಟ್ಟಾಣ್ ಬಾಬಾ ಶಾವಲಿ ಉರೂಸ್ ನೇರ್ಚೆ ಫೆ. 3 ರಿಂದ 6ರ ವರೆಗೆ ಸರ್ವಧರ್ಮ ಸಮ್ಮೇಳನ ಹಾಗೂ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಪಾಲಿಬೆಟ್ಟ ಮುಸ್ಲಿಂ ಜಮಾಅತ್ ಅಧ್ಯಕ್ಷ ಪಿ.ಕೆ ಇಸ್ಮಾಯಿಲ್ ಹಾಜಿ ತಿಳಿಸಿದ್ದಾರೆ . ಫೆ .3 ರಂದು ಜುಮಾ ನಮಾಜ್ ಬಳಿಕ ಆರ್ಕಾಡ್ ಪಟ್ಟಾಣ್ ಬಾಬಾ ದರ್ಗಾಗೆ ತೆರಳಿ ವಿಶೇಷ ಪ್ರಾರ್ಥನೆಯೊಂದಿಗೆ ಮುಖಾಂ ಝಿಯಾರತ್ ಬಳಿಕ ಜುಮಾ ಮಸೀದಿ ಕಮಿಟಿ ಅಧ್ಯಕ್ಷ ಪಿ.ಕೆ ಇಸ್ಮಾಯಿಲ್ ಹಾಜಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಮಸೀದಿಯ ಖತಿಬ್ ಅಲಿ ಸಖಾಫಿ ಉದ್ಘಾಟನೆ ಮಾಡಲಿದ್ದು. ಧಾರ್ಮಿಕ ಪಂಡಿತ ಸಯ್ಯದ್ ಮೆಹರೂಫ್ ಅಲ್ ಜಫ್ರಿ ತಂಗಳ್ ದುಆ ದುವ ನೇತೃತ್ವ ವಹಿಸಲಿದ್ದಾರೆ. ರಾತ್ರಿ ಮತ ಪ್ರಭಾಷಣ ಮತ್ತು ದಿಕ್ರ್ ದುವಾ ಮಜ್ಲೀಸ್ ನೇತೃತ್ವವನ್ನ ಸಯ್ಯದ್ ಸರುಫುದ್ದೀನ್ ಐಲ್ ಹೈದ್ರೊಸಿ ತಂಗಳ್ ವಹಿಸಲಿದ್ದಾರೆ. ಫೆ.4 ರಂದು ರಾತ್ರಿ ಧಾರ್ಮಿಕ ಪಂಡಿತ ಆಫೀಜ್ ಜುನೈದು ಜೌಹರಿ ಅಲ್ ಅಝರಿ ಪ್ರಭಾಷಣ…
ಮಡಿಕೇರಿ ಫೆ.1 : ಮುಂದಿನ 25 ವರ್ಷಗಳಲ್ಲಿ ಆರ್ಥಿಕವಾಗಿ ಭಾರತವನ್ನು ವಿಶ್ವದ 3 ನೇ ಶಕ್ತಿಶಾಲಿ ರಾಷ್ಟ್ರವನ್ನಾಗಿ ಮಾಡುವ ಭವಿಷ್ಯದ ಬಜೆಟ್ ಇದಾಗಿದೆ. ದೇಶದ ಸಮಗ್ರ ಅಭಿವೃದ್ಧಿಗಾಗಿ ಮುಂದಾಲೋಚನೆಯಿಂದ ಬಜೆಟ್ ನ್ನು ರೂಪಿಸಲಾಗಿದೆ. ರೈತರು ಹಾಗೂ ಮಧ್ಯಮ ವರ್ಗದ ಏಳಿಗೆಗೆ ಆದ್ಯತೆ ನೀಡಲಾಗಿದೆ. ಮಾನವ ರಹಿತ ತಾಂತ್ರಿಕತೆ ಮತ್ತು ಕೃತಕ ಬುದ್ಧಿ ಮತ್ತೆಯ ಯೋಜನೆಗೆೆ ಬಜೆಟ್ ನಲ್ಲಿ ಪ್ರೋತ್ಸಾಹ ನೀಡಲಾಗಿದ್ದು, ದೇಶಾದ್ಯಂತ ಇದಕ್ಕೆ ಸಂಬಂಧಿಸಿದ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೆತ್ತಿಕೊಳ್ಳುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಒಟ್ಟಿನಲ್ಲಿ ಕೇಂದ್ರದ ಬಜೆಟ್ ಭವ್ಯ ಭಾರತದ ನಿರ್ಮಾಣಕ್ಕೆ ಪೂರಕವಾಗಿದೆ. (( ತೇಲಪಂಡ ಶಿವಕುಮಾರ್ ನಾಣಯ್ಯ, ಸದಸ್ಯರು, ಕಾರ್ಯಕಾರಿ ಸಮಿತಿ, ಕೊಡಗು ಜಿಲ್ಲಾ ಬಿಜೆಪಿ ))






