ಲೇಖಕ: admin

ಮಡಿಕೇರಿ ಜ.7 :  ಮೈಸೂರಿನ ಜೆಕೆ ಗ್ರೌಂಡ್ ಮೈದಾನದ ಆಡಿಟೋರಿಯಂ ನಲ್ಲಿ ನಡೆದ ಕರ್ನಾಟಕ ಸ್ಪೋರ್ಟ್ಸ್ ಡಾನ್ಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ನಗರದ ವಿಂಗ್ಸ್ ಆಫ್ ಫ್ಯಾಶನ್ ನೃತ್ಯ ತಂಡದ ವಿದ್ಯಾರ್ಥಿ ಹಾಗೂ ಮುಳಿಯ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ  ಪೂಜಾ ಜಾನಪದ ನೃತ್ಯದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಇವರು  ಫೆಬ್ರವರಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ನೃತ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Read More

ಮಡಿಕೇರಿ ಜ.6 : ಸ್ವಾಮಿ ವಿವೇಕಾನಂದರ 161ನೇ ಜನ್ಮದಿನಾಚರಣೆಯ ಅಂಗವಾಗಿ ಗೋಣಿಕೊಪ್ಪಲಿನ ಸಂಪೂರ್ಣ ಸ್ವಾಸ್ಥ್ಯ ಯೋಗ ಕೇಂದ್ರದ ವತಿಯಿಂದ ಜ.12 ರಂದು “ಸೂರ್ಯ ನಮಸ್ಕಾರ ಚಾಲೆಂಜ್” ಸ್ಪರ್ಧೆ ನಡೆಯಲಿದೆ. ಕೈಕೇರಿಯ ಶ್ರೀ ಭಗವತಿ ದೇವಾಲಯದಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿರುವ ಸ್ಪರ್ಧೆಯನ್ನು ಗೋಣಿಕೊಪ್ಪಲುವಿನ ಉದ್ಯಮಿ ಜಿ.ಲಕ್ಷ್ಮೀ ರೆಡ್ಡಿ ಉದ್ಘಾಟಿಸಲಿದ್ದಾರೆ. ಅಪರಾಹ್ನ 12 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಲಿದ್ದು, ಗೋಣಿಕೊಪ್ಪಲು ಗ್ರಾ.ಪಂ ಅಧ್ಯಕ್ಷರಾದ ಸೌಮ್ಯ ಬಾಲು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗೋಣಿಕೊಪ್ಪಲು ಉಮಾಮಹೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷ ಡಾ.ಕೆ.ಎನ್.ಚಂದ್ರಶೇಖರ್, ಅಂತರಾಷ್ಟ್ರೀಯ ಯೋಗ ಪಟು ಅಮೃತ್ ರಾಕೇಶ್, ಹಾತೂರು ಗ್ರಾ.ಪಂ ಅಧ್ಯಕ್ಷ ಗುಮ್ಮಟ್ಟೀರ ದರ್ಶನ್ ನಂಜಪ್ಪ, ನ್ಯಾಷನಲ್ ಅಕಾಡೆಮಿ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಶಾಂತಿ ಅಚ್ಚಪ್ಪ, ಪೊನ್ನಂಪೇಟೆ ನಾಗರೀಕ ವೇದಿಕೆ ಮಾಜಿ ಅಧ್ಯಕ್ಷ ಪೋಕುಳಚಂಡ ಬಿ.ಪೂಣಚ್ಚ ಪಾಲ್ಗೊಳ್ಳಲಿದ್ದಾರೆ. ಆಹ್ವಾನಿತರಾಗಿ ಶ್ರೀ ಧರ್ಮಸ್ಥಳ ಸೇವಾ ಸಂಘದ ಪ್ರಮುಖರಾದ ನರಸಿಂಹ, ರಾಷ್ಟ್ರೀಯ ಸ್ವಯಂ ಸೇವಕ…

Read More

ಮಡಿಕೇರಿ ಜ.6 : ಕೊಡವ ಜನಾಂಗವನ್ನು ರಾಷ್ಟ್ರದ ಇತರ ನಾಗರಿಕರಿಗೆ ಸಮಾನವಾಗಿ ಪರಿಗಣಿಸುವ ಮೂಲಕ ಕೊಡವ ತಾಯ್ನಾಡು ಮತ್ತು ಕೊಡವರ ಭಾವನೆಗಳನ್ನು ಗೌರವಿಸಬೇಕು. ಇದಕ್ಕಾಗಿ ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯನ್ನು ರೂಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವ ಕಾರ್ಯವಿಧಾನಕ್ಕೆ ತ್ವರಿತವಾಗಿ ಚಾಲನೆ ನೀಡಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿತು. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಧರಣಿ ನಡೆಸಿದ ಸಂಘಟನೆಯ ಪ್ರಮುಖರು “ಕೊಡವ ಲ್ಯಾಂಡ್” ಪರ ಘೋಷಣೆಗಳನ್ನು ಕೂಗಿದರು. ಸರ್ಕಾರಗಳು ಅತಿ ಸೂಕ್ಷ್ಮ ಕೊಡವ ಬುಡಕಟ್ಟು ಜನಾಂಗವನ್ನು ಸಮಾನ ನಾಗರಿಕರಂತೆ ಪರಿಗಣಿಸಬೇಕು ಮತ್ತು ತಾಯ್ನಾಡನ್ನು ಇತರ ಭಾಷಾವಾರು ರಾಜ್ಯಗಳಂತೆ ಗೌರವಯುತವಾಗಿ ಕಾಣಬೇಕು. ಆದರೆ ದುಃಖಕರ ವಿಚಾರವೆಂದರೆ ಸರ್ಕಾರಗಳು ಕೊಡವ ಪ್ರದೇಶವನ್ನು ತಮ್ಮ ಸಂಪನ್ಮೂಲ ಉತ್ಪಾದಿಸುವ ಆಕ್ರಮಿತ ಕಾಲೋನಿ ಎಂದು ಪರಿಗಣಿಸುತ್ತಿವೆ ಎಂದು ನಾಚಪ್ಪ ಬೇಸರ ವ್ಯಕ್ತಪಡಿಸಿದರು. ಸಾಂವಿಧಾನಿಕ ಸಂಸದೀಯ ಸಹಭಾಗಿತ್ವದ ಪ್ರಜಾಪ್ರಭುತ್ವದಲ್ಲಿ ಸಿಎನ್‍ಸಿ ಸಂಘಟನೆ ಹಾಗೂ ಕೊಡವರು ಯಾವುದೇ ಜಾಗ ಅಥವಾ…

Read More

ಮಡಿಕೇರಿ ಜ.6 : ರಾಜ್ಯದಲ್ಲಿ ವಸತಿ ಶಾಲೆಗಳ ಶಿಕ್ಷಣದ ಗುಣಮಟ್ಟ ಮತ್ತು ಫಲಿತಾಂಶ ಉತ್ತಮವಾಗಿದ್ದು, ಬೇಡಿಕೆಯೂ ಸಹ ಹೆಚ್ಚಿದೆ. ಈ ಹಿನ್ನೆಲೆ ಮುಂದಿನ ಶೈಕ್ಷಣಿಕ ವರ್ಷದಿಂದ 6 ನೇ ತರಗತಿಗೆ 50 ರಿಂದ 100 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಓಬವ್ವ ಆತ್ಮ ರಕ್ಷಣೆ ಕಲೆ’ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದಲ್ಲಿ ಅಂಬೇಡ್ಕರ್, ಮೊರಾರ್ಜಿ ದೇಸಾಯಿ, ಏಕಲವ್ಯ, ಕಿತ್ತೂರು ರಾಣಿ ಚೆನ್ನಮ್ಮ, ನಾರಾಯಣ ಗುರು ಹೀಗೆ ಒಟ್ಟು 830 ವಸತಿ ಶಾಲೆಗಳಿದ್ದು, 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ವಸತಿ ಶಾಲೆಗಳಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು…

Read More

ಮಡಿಕೇರಿ ಜ.6 : ಕುಶಾಲನಗರ ತಾಲ್ಲೂಕು ಹೆಬ್ಬಾಲೆ ಗ್ರಾಮದ ಮನೆಯೊಂದಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಿರುವ ಪ್ರಕರಣ ದಾಖಲಾಗಿದೆ. ಸ್ಥಳೀಯ ವ್ಯಾಪಾರಿ ನಾರಾಯಣ ಎಂಬುವವರ ಮನೆಗೆ ನುಗ್ಗಿದ ಕಳ್ಳರು 7.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 13 ಸಾವಿರ ರೂ. ನಗದನ್ನು ದೋಚಿದ್ದಾರೆ ಎಂದು ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಕುಶಾಲನಗರ ಡಿವೈಎಸ್‌ಪಿ ಆರ್.ವಿಗಂಗಾಧರಪ್ಪ, ವೃತ್ತ ನಿರೀಕ್ಷಕ ಮಹೇಶ್, ಗ್ರಾಮಾಂತರ ಠಾಣಾಧಿಕಾರಿ ಚಂದ್ರಶೇಖರ್ ಸೇರಿದಂತೆ ಶ್ವಾನದಳ ಹಾಗೂ ಬೆರಳಚ್ಚುಗಾರರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More

ಮಡಿಕೇರಿ ಜ.6 : ನವ ಕಾನೂನು ಪದವೀಧರರಿಗೆ 2022-23 ನೇ ಸಾಲಿನ ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಜನವರಿ 16 ರಿಂದ ಸಲ್ಲಿಸಬಹುದಾಗಿದೆ. ಸ್ವಯಂ ದೃಢೀಕರಿಸಿ ಫೆಬ್ರವರಿ, 15 ರೊಳಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು, ಮಡಿಕೇರಿ, 2 ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು, ಮಡಿಕೇರಿ (ಕಾರ್ಯ ನಿರ್ವಹಣೆ ವಿರಾಜಪೇಟೆ), ಸೋಮವಾರಪೇಟೆ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ನ್ಯಾಯಾಲಯ, ಪೊನ್ನಂಪೇಟೆ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ನ್ಯಾಯಾಲಯ, ಕುಶಾಲನಗರ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ನ್ಯಾಯಾಲಯ ಇಲ್ಲಿಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಯು 2022-23 ನೇ ಸಾಲಿನಲ್ಲಿ ಅನುಷ್ಠಾನಗೊಳ್ಳುತ್ತಿದ್ದು, ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ವಕೀಲರ ಷರತ್ತಿನಡಿಯಲ್ಲಿ 2021 ರ ಜೂನ್, 01 ರಿಂದ 2022 ರ ಮೇ, 31 ರವರೆಗಿನ ಅವಧಿಯಲ್ಲಿ ವಕೀಲ ವೃತ್ತಿಗೆ ನೋಂದಾಯಿಸಿದವರಿಗೆ ಮಾತ್ರ ಅನ್ವಯವಾಗುವುದು. ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನದ ಮೊತ್ತ ಪ್ರತಿ…

Read More

ಮಡಿಕೇರಿ ಜ.6 : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಕೈಗೊಂಡು ಅರ್ಹ ನಾಗರಿಕರನ್ನು ಮತ್ತು ಯುವ ಮತದಾರರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡಲು 2022 ರ ನವೆಂಬರ್, 09 ರಿಂದ 2022 ರ ಡಿಸೆಂಬರ್, 08 ರವರೆಗೆ ಹಕ್ಕು ಮತ್ತು ಆಕ್ಷೇಪಣೆಯನ್ನು ಸ್ವೀಕರಿಸಲಾಗಿದೆ. ಹಾಗೆಯೇ 2022 ರ ನವೆಂಬರ್, 12, ನವೆಂಬರ್, 20, ಡಿಸೆಂಬರ್, 03 ಮತ್ತು ಡಿಸೆಂಬರ್, 04 ರಂದು ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ನೋಂದಣಿ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು 2023 ರ ಜನವರಿ, 05 ರಂದು ಎಲ್ಲಾ ಮತಗಟ್ಟೆಗಳಲ್ಲಿ, ತಹಶೀಲ್ದಾರರ, ಉಪ ವಿಭಾಗಾಧಿಕಾರಿ, ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿಲ್ಲೆಯ ಅಧಿಕೃತ ವೆಬ್‍ಸೈಟ್ https://kodagu.nic.in ರಲ್ಲಿ ಪ್ರಕಟಿಸಲಾಗಿದೆ. ಪ್ರಸ್ತುತ ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 4,44,098 ಮತದಾರರು ಇದ್ದು, 208-ಮಡಿಕೇರಿ ವಿಧಾನಸಭಾ…

Read More

ನಾಪೋಕ್ಲು ಜ.6 : ಯವಕಪಾಡಿ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಕಾಡಾನೆಗಳ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳುವಂತೆ ಯವಕಪಾಡಿ ಗ್ರಾಮಸ್ಥರು ಆಗ್ರಹಿಸಿದ್ದರು. ಕೊಡಗು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಯನ್ನು ಕಚೇರಿಯಲ್ಲಿ ಭೇಟಿ ಮಾಡಿದ ಗ್ರಾಮಸ್ಥರು ಬೇಡಿಕೆಯ ಈಡೇರಿಕೆಗಾಗಿ ಗ್ರಾಮಸ್ಥರ ಸಹಿ ಇರುವ ಮನವಿ ಪತ್ರವನ್ನು ಸಲ್ಲಿಸಿದರು. ಕಕ್ಕಬೆ ಕುಂಜಿಲ ಗ್ರಾ.ಪಂ ವ್ಯಾಪ್ತಿಯ ಯವಕಪಾಡಿ ಗ್ರಾಮವು ಬ್ರಹ್ಮಗಿರಿ ಮೀಸಲು ಅರಣ್ಯ ವ್ಯಾಪ್ತಿಯಲ್ಲಿದ್ದು, ಅರಣ್ಯ ಹಕ್ಕು, ಸಮುದಾಯ ಅರಣ್ಯ ಹಕ್ಕು ಪ್ರದೇಶಗಳನ್ನು ಹೊಂದಿರುತ್ತಾರೆ. ಅರಣ್ಯದಂಚಿನಲ್ಲಿ ವಾಸವಾಗಿರುವ ಗಿರಿಜನರು ಕಾಡಾನೆಗಳ ಉಪಟಳಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ. ತಡಿಯ೦ಡಮೊಳ್ ಬೆಟ್ಟ ಶ್ರೇಣಿಯು ಈ ವ್ಯಾಪ್ತಿಯಲ್ಲಿದ್ದು, ಪ್ರವಾಸಿಗರು ವೀಕ್ಷಣೆಗೆ ಆಗಮಿಸುತ್ತಿದ್ದಾರೆ. ಆದರೆ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ವಿಪರೀತವಾಗಿದ್ದು, ಕೃಷಿ ಪಸಲು ನಾಶವಾಗುತ್ತಿದೆ. ಈಗಾಗಲೇ ಮೂವರು ಗ್ರಾಮಸ್ಥರು ಕಾಡಾನೆಗಳ ತುಳಿತಕ್ಕೆ ಬಲಿಯಾಗಿದ್ದು, ಕೃಷಿಕರು, ಕೂಲಿಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು, ವಾಹನ ಚಾಲಕರು ಈ ವ್ಯಾಪ್ತಿಯಲ್ಲಿ ಭಯದಿಂದ ಸಂಚರಿಸುವಂತಾಗಿದೆ. ಹಾಡು ಹಗಲೇ ಕಾಡಾನೆಗಳು ರಸ್ತೆಯಲ್ಲಿ ಸಂಚರಿಸುತ್ತಿದ್ದು ಜನರು ಪ್ರತಿದಿನ ಆತಂಕದಲ್ಲೇ ಜೀವನ ನಡೆಸುವಂತಾಗಿದೆ…

Read More

ಮಡಿಕೇರಿ ಜ.6 : ಮೈಸೂರಿನ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹೃದ್ರೋಗ ತಪಾಸಣಾ ತಜ್ಞ ವೈದ್ಯರು ಜ.9 ರಂದು ಮಡಿಕೇರಿ ಮತ್ತು ಕುಶಾಲನಗರದಲ್ಲಿ ಲಭ್ಯ ಇರಲಿದ್ದಾರೆ. ನಗರದ ನಾರಾಯಣ ಸೂಪರ್ ಸ್ಪೆಷಾಲಿಟಿ ಒಪಿಡಿ ಕೇಂದ್ರ (ರವಿ ಆರ್ಥೋಪೆಡಿಕ್ ಸೆಂಟರ್)ದಲ್ಲಿ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಸಂಜೆ 4 ಗಂಟೆಯಿಂದ 5 ಗಂಟೆಯವರೆಗೆ ಕುಶಾಲನಗರದ ಶ್ರೀ ಬಾಲಾಜಿ ಆಸ್ಪತ್ರೆಯಲ್ಲಿ ಹೃದ್ರೋಗ ತಜ್ಞ ಡಾ.ಆನಂದ್ ಲಿಂಗನ್ ತಪಾಸಣೆ ನಡೆಸಲಿದ್ದಾರೆ. ನೋಂದಣಿಗಾಗಿ 8904258788, 9513408004, 9353595537, 9980924260 ಸಂಪರ್ಕಿಬಹುದಾಗಿದೆ.

Read More

ಸುಂಟಿಕೊಪ್ಪ,ಜ.6: ಮಡಿಕೇರಿ ನಗರದಲ್ಲಿ ಭಿಕ್ಷಾಟನೆ ಮಾಡುತ್ತಾ ಅಲೆಯುತ್ತಿದ್ದ ನಾಲ್ವರು ನಿರಾಶ್ರಿತರನ್ನು 7ನೇ ಹೊಸಕೋಟೆ ಗ್ರಾ.ಪಂ ವ್ಯಾಪ್ತಿಯ ತೊಂಡೂರು ಗ್ರಾಮದ ವಿಕಾಸ್ ಜನಸೇವಾ ಟ್ರಸ್ಟ್ ಜೀವನ ದಾರಿ ಆಶ್ರಮದ ಅಧ್ಯಕ್ಷ ರಮೇಶ್ ರಕ್ಷಿಸಿ ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಬೆಂಗಳೂರಿನ ಈಸ್ಟ್ ಪಾಯಿಂಟ್ ವಿದ್ಯಾಸಂಸ್ಥೆಯ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಯಿತು. ಮಡಿಕೇರಿ ನಗರದಲ್ಲಿದ್ದ ಗೋಪಿ, ಕಿರಣ್, ದಲಾಯಿ ಹಾಗೂ ಸರಸಮ್ಮ ರಕ್ಷಿಸಲ್ಪಟ್ಟವರು. ಇವರು ಗುಣಮುಖರಾಗಿ ಚೇತರಿಸಿ ಕೊಂಡ ನಂತರ ತೊಂಡೂರು ಗ್ರಾಮದಲ್ಲಿರುವ ವಿಕಾಸ್ ಜನಸೇವಾ ಟ್ರಸ್ಟ್ ಜೀವನ ದಾರಿ ಆಶ್ರಮದಲ್ಲಿ ಆಶ್ರಯ ನೀಡುವುದಾಗಿ ರಮೇಶ್ ತಿಳಿಸಿದರು. ಈ ಸಂದರ್ಭ ಆಶ್ರಮದ ಜಯಂತಿ, ಶಿವು ಹಾಗೂ ಮಾಹಿತಿ ನೀಡಿದ ಪೊಲೀಸ್ ಇಲಾಖೆಯವರು ಹಾಜರಿದ್ದರು. ಸಾರ್ವಜನಿಕರು ಇವರ ಮಾನವೀಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Read More