ಮಡಿಕೇರಿ ಜ.3 NEWS DESK : ಕೊಡಗು ಜಿಲ್ಲಾ ಬಂಟರ ಸಂಘದಿಂದ ಮಡಿಕೇರಿ ನಗರ ವ್ಯಾಪ್ತಿಯಲ್ಲಿ ರೂ.10 ರಿಂದ 15 ಕೋಟಿ ವೆಚ್ಚದಲ್ಲಿ ‘ಬಂಟರ ಭವನ’ ನಿರ್ಮಾಣಗೊಳ್ಳಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಬಿ.ಡಿ.ಜಗದೀಶ್ ರೈ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಜ.11 ರಂದು ನಗರದ ಹೋಟೆಲ್ ಸಮುದ್ರದಲ್ಲಿ ಬೆ.10.30 ಗಂಟೆಗೆ ನಡೆಯಲಿರುವ ಮಹಾಸಭೆಯಲ್ಲಿ ಬಹು ನಿರೀಕ್ಷೆಯ ಬಂಟರ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದರು. ನಗರದ ಅಬ್ಬಿಫಾಲ್ಸ್ ರಸ್ತೆಯ ಬಳಿಯಲ್ಲಿ ಡಾ.ಪ್ರೇಮನಾಥ್ ಪೂಂಜಾ ಅವರು ಉದಾರವಾಗಿ ನೀಡಿರುವ 52 ಸೆಂಟ್ಸ್ ಜಾಗದಲ್ಲಿ ಬಂಟರ ಭವನ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಈ ಯೋಜನೆಯನ್ನು ಸಾಕಾರಗೊಳಿಸಲು ಸಮುದಾಯ ಬಾಂಧವರು, ದಾನಿಗಳ ನೆರವನ್ನು ಪಡೆದುಕೊಳ್ಳುವುದಾಗಿ ತಿಳಿಸಿದರು. *ಆಡಳಿತ ಮಂಡಳಿ ರಚನೆ* ಕೊಡಗು ಜಿಲ್ಲಾ ಬಂಟರ ಸಂಘದ ಮಹಾಸಭೆಗೆ ಈಗಾಗಲೆ ಸಂಘದ 486 ಸದಸ್ಯರುಗಳಿಗೆ ಆಹ್ವಾನ ಪತ್ರವನ್ನು ಕಳುಹಿಸಿಕೊಡಲಾಗಿದೆಯೆಂದು ಮಾಹಿತಿ ನೀಡಿದ ಅವರು, ಈ ಮಹಾಸಭೆಯಲ್ಲಿ ನೂತನ ಆಡಳಿತ ಮಂಡಳಿ ರಚನೆಯೂ ನಡೆಯಲಿದೆ.…
ಲೇಖಕ: admin
ಮಡಿಕೇರಿ ಜ.3 NEWS DESK : ಹಾಕತ್ತೂರು ತೊಂಭತ್ತುಮನೆ ಶ್ರೀ ವಿನಾಯಕ ದೇವಾಲಯ ಸಮಿತಿಯ ನೂತನ ಅಧ್ಯಕ್ಷರಾಗಿ ಪಿ.ಈ.ದಿವಾಕರ್ ಹಾಗೂ ಕಾರ್ಯದರ್ಶಿಯಾಗಿ ಕೆ.ಕೆ.ಮಂಜುನಾಥ್ ಆಯ್ಕೆಯಾಗಿದ್ದಾರೆ. ತೊಂಭತ್ತುಮನೆ ಭಜನಾ ಮಂದಿರದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೂತನ ಆಡಳಿತ ಮಂಡಳಿ ರಚಿಸಲಾಯಿತು. ಉಪಾಧ್ಯಕ್ಷರಾಗಿ ಸಿ.ವಿ.ಸುನಿಲ್, ಸಹ ಕಾರ್ಯದರ್ಶಿಯಾಗಿ ಮುರುಳಿ ಟಿ.ವೈ, ಖಜಾಂಚಿಯಾಗಿ ಮಾಧವ ಟಿ.ಕೆ., ಗೌರವ ಸಲಹೆಗಾರರಾಗಿ ಎ.ಕೆ.ಕಾರ್ಯಪ್ಪ, ಕಾರ್ಯಾಧ್ಯಕ್ಷರಾಗಿ ಪಿ.ಪಿ.ಸುಕುಮಾರ್ ನೇಮಕಗೊಂಡಿದ್ದಾರೆ. ಕಾರ್ಯಕಾರಿ ಸದಸ್ಯರುಗಳಾಗಿ ಕೆ.ಎ.ತಿಮ್ಮಯ್ಯ, ಬಿ.ಎಸ್.ಕಿಶೋರ್, ಎಂ.ಬಿ.ಹರೀಶ್, ಬಿ.ಎಸ್.ಜನಾರ್ಧನ, ಕೆ.ಕೆ.ಹರೀಶ್, ಬಿ.ವಿಶ್ವನಾಥ್, ಟಿ.ಆರ್.ಸಾಜು, ಮನು ಬೆಳ್ಳಿಯಪ್ಪ, ಎಂ.ಬಿ.ರಮೇಶ್, ವಿ.ಟಿ.ಚೇತನ್, ಧನು ಶೇಖರ, ಟಿ.ಜಿ.ರೋಹನ್, ಮಣಿಕಂಠ ಮೋಹನ್ ದಾಸ್ ಅವರನ್ನು ಆಯ್ಕೆ ಮಾಡಲಾಯಿತು.
ಮಡಿಕೇರಿ ಜ.3 NEWS DESK : ಹಿರಿಯ ರಾಜಕರಣಿ ದಿ.ಎ.ಕೆ.ಸುಬ್ಬಯ್ಯ ಅವರ ಪತ್ನಿ ದಿ.ಪೊನ್ನಮ್ಮ ಸುಬ್ಬಯ್ಯ ಅವರ 10ನೇ ಪುಣ್ಯಸ್ಮರಣೆ ಅಂಗವಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು, ತಮ್ಮ ತಾಯಿಗೆ ಗೌರವ ನಮನ ಸಲ್ಲಿಸಿದರು. ಪೊನ್ನಂಪೇಟೆ ತಾಲ್ಲೂಕಿನ ಹುದಿಕೇರಿಯ ಬೆಳ್ಳೂರಿನಲ್ಲಿರುವ ತಮ್ಮ ತಾಯಿ ಹಾಗೂ ತಂದೆಯವರ ಸಮಾಧಿ ಬಳಿಗೆ ತೆರಳಿದ ಶಾಸಕರು, ಪುಷ್ಪ ನಮನ ಸಲ್ಲಿಸಿ, ಗೌರವಾರ್ಪಣೆ ಸಲ್ಲಿಸಿ ಪ್ರಾರ್ಥಿಸಿದರು. ಶಾಸಕರ ಸಹೋದರ ದಂಪತಿಗಳಾದ ನರೇನ್ ಕಾರ್ಯಪ್ಪ ಹಾಗೂ ಚಂದಲೇ ಕಾರ್ಯಪ್ಪ, ರವಿ ಸೋಮಯ್ಯ , ಶಾಸಕರ ಚಿಕ್ಕಮ್ಮ ಗಂಗಮ್ಮ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೀದೇರಿರ ನವೀನ್, ಪಕ್ಷದ ಪ್ರಮುಖರಾದ ಅಜ್ಜಿಕುಟ್ಟಿರ ಗಿರೀಶ್, ಪಮ್ಮು, ಅಣ್ಣಳಮಾಡ ಹರೀಶ್, ಭವೀನ್, ಇಸ್ಮಾಯಿಲ್, ಆಂಟೋನಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಜ.3 : ಆದಿಮ ಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರು 2026-27ರಲ್ಲಿ ನಡೆಯಲಿರುವ 16ನೇ ರಾಷ್ಟ್ರೀಯ ಜನಗಣತಿ ಸಂದರ್ಭ ಪ್ರತ್ಯೇಕವಾಗಿ `ಕೊಡವ’ ಎಂದು ದಾಖಲೀಕರಣಗೊಳ್ಳುವಂತೆ ಜನಜಾಗೃತಿ ಮೂಡಿಸುವ ಸಲುವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ 23ನೇ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ಜ.8 ರಂದು ಭಾಗಮಂಡಲದಲ್ಲಿ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬೆಳಿಗ್ಗೆ 10.30 ಗಂಟೆಗೆ ಭಾಗಮಂಡದಲ್ಲಿ ಶಾಂತಿಯುತವಾಗಿ ಮಾನವ ಸರಪಳಿ ನಿರ್ಮಿಸಲಾಗುವುದು ಮತ್ತು ಕೊಡವರ ಪರವಾದ ಸಿಎನ್ಸಿಯ ವಿವಿಧ ಬೇಡಿಕೆಗಳ ಕುರಿತು ಸರಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದ್ದಾರೆ. ಕೊಡವಲ್ಯಾಂಡ್ ಭೂ ರಾಜಕೀಯ ಸ್ವಯಂ ಆಡಳಿತ, ಕೊಡವರಿಗೆ ವಿಶ್ವರಾಷ್ಟç ಸಂಸ್ಥೆಯ ಇಂಡಿಜಿನಸ್ ಪಿಪಲ್ಸ್ ರೈಟ್ಸ್, ಎಸ್.ಟಿ.ಪಟ್ಟಿಯಲ್ಲಿ ವರ್ಗೀಕರಣ, ಸಿಕ್ಕಿಂನ “ಸಂಘ” ಮತಕ್ಷೇತ್ರದಂತೆ ಸಂಸತ್ ಮತ್ತು ವಿಧಾನಸಭೆಯಲ್ಲಿ ವಿಶೇಷ ಪ್ರಾತಿನಿಧ್ಯ ನೀಡಬೇಕು. ಕೊಡವರ ಪೂರ್ವಾರ್ಜಿತ ಭೂ ಹಕ್ಕು ಮತ್ತು ಧಾರ್ಮಿಕ ಸಂಸ್ಕಾರ ತೋಕ್ ಹಕ್ಕು ಚಿರಸ್ಥಾಯಿಯಾಗಿ ಮುಂದುವರೆಯಬೇಕು, ಕೊಡವ…
ಮಡಿಕೇರಿ ಡಿ.3 NEWS DESK : ಹುಣ್ಣಿಮೆ ಅಂಗವಾಗಿ ನಮಾಮಿ ಕಾವೇರಿ ಬಳಗದ ವತಿಯಿಂದ ಜೀವನದಿ ಕಾವೇರಿಗೆ ಜಿಲ್ಲೆಯ ವಿವಿಧ ನದಿ ಪಾತ್ರದಲ್ಲಿ ಮಹಾ ಆರತಿ ಕಾರ್ಯಕ್ರಮ ನಡೆಯಿತು. ಮಾದಾಪಟ್ಟಣ, ಕೂಡು ಮಂಗಳೂರು, ಕೂಡ್ಲೂರು ಗ್ರಾಮದ ಕಾವೇರಿ ನದಿ ತಟದಲ್ಲಿ ಆರತಿ ಬೆಳಗಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ನದಿ ಸಂರಕ್ಷಣೆ ಮತ್ತು ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಯಿತು.
ಮಡಿಕೇರಿ NEWS DESK ಜ.3 : ತುಳುನಾಡ ಜನರ ನಂಬುಗೆಯ ದೈವಗಳಲ್ಲೊಂದಾದ “ಕೊರಗಜ್ಜ” ದೈವದ ಕುರಿತಾದ ಸಿನಿಮಾ ನಿರ್ದೇಶಕ ಸುಧೀರ್ ಅತ್ತಾವರ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ತ್ರಿವಿಕ್ರಮ ಸಿನಿಮಾಸ್ ಮತ್ತು ಸಕ್ಸಸ್ ಲೈಫ್ ಬ್ಯಾನರ್ ನಡಿ ಚಿತ್ರ ನಿರ್ಮಾಣಗೊಂಡಿದೆ. ಚಿತ್ರದ ಪ್ರಚಾರಕ್ಕಾಗಿ ‘ಕೊರಗಜ್ಜ’ ಚಿತ್ರದಲ್ಲಿರುವ ಆರು ಹಾಡುಗಳನ್ನು ಪ್ರೇಕ್ಷಕರಿಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ ಸಿನಿಮಾದ ಪ್ರಚಾರಕ್ಕಾಗಿ ಕೊರಗಜ್ಜ ರೀಲ್ಸ್ ಎಂಬ ಸ್ಪರ್ಧೆಯನ್ನು ಚಿತ್ರತಂಡ ಆಯೋಜಿಸಿದೆ. ಇದನ್ನು ಕೊಡಗು ಜಿಲ್ಲಾ ದೈವ ಆರಾಧಕರು ಹಾಗೂ ದೈವ ನರ್ತಕರ ಸಂಘ ತೀವ್ರವಾಗಿ ವಿರೋಧಿಸಿದೆ. ಈ ನಿರ್ಧಾರದಿಂದ ಚಿತ್ರತಂಡ ಹಿಂದೆ ಸರಿಯಬೇಕು, ತಪ್ಪಿದಲ್ಲಿ ಕಾನೂನು ಹೋರಾಟಕ್ಕೂ ಸಿದ್ಧ ಇರುವುದಾಗಿ ಸಂಘದ ಸ್ಥಾಪಕಾಧ್ಯಕ್ಷ ಪಿ.ಎಂ.ರವಿ ಎಚ್ಚರಿಕೆ ನೀಡಿದ್ದಾರೆ. ತುಳುನಾಡು ಮತ್ತು ಕೆಲವೇ ಪ್ರದೇಶಕ್ಕೆ ಸೀಮಿತವಾಗಿರುವ ದೈವ ಆರಾಧನೆಯನ್ನು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡುವ ಮೂಲಕ ಅಪಹಾಸ್ಯ ಮಾಡುವುದು ಸರಿಯಲ್ಲ. ದೈವ ಆರಾಧನೆಗೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ದೈವ ನರ್ತನ ಮಾಡುವವರು ಹಾಗೂ ದೈವ ಆರಾಧನೆ…
ನಾಪೋಕ್ಲು ಜ.3 NEWS DESK : ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವಾರ್ಷಿಕೋತ್ಸವವು ಉತ್ತಮ ವೇದಿಕೆಯಾಗಿದೆ ಎಂದು ಕಕ್ಕಬ್ಬೆ ಕೇಂದ್ರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೇಟೋಳಿರ ಪಿ.ಕುಟ್ಟಪ್ಪ ಹೇಳಿದರು. ಕಕ್ಕಬ್ಬೆ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಪೈಯಡಿ ಹಂಸ, ಬಾತ್ಮೀದಾರ ಕಲ್ಯಾಟಂಡ ಸುಧಾ ಗಣಪತಿ, ನಿರ್ದೇಶಕರಾದ ಬೊಳಿಯಾಡಿರ ಸಂತು ಸುಬ್ರಮಣಿ, ಅಂಜಪರವಂಡ ಎ.ಕುಶಾಲಪ್ಪ, ಮುಕ್ಕಾಟಿರ ರಮೇಶ್, ಕೋಟೆರ ನೈಲ್ ಚಂಗಪ್ಪ, ಪರದಂಡ ಪ್ರಮೀಳಾ ಪೆಮ್ಮಯ್ಯ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಕೆ.ಬಿ.ಲೀಲಾವತಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ನಡೆದ ಧ್ವಜಾರೋಹಣವನ್ನು ಕಕ್ಕಬ್ಬೆ-ಕುಂಜಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿಲ್ಪ ಲೋಕೇಶ್ ನೆರವೇರಿಸಿದರು. ಪ್ರೌಢಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ನಿರ್ದೇಶಕ ಬೊಳಿಯಾಡಿರ ಸಂತುಸುಬ್ರಮಣಿ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಅನಿಲ್ ರಾಜ್ ವರದಿ ವಾಚಿಸಿದರು. ಶಿಕ್ಷಕಿ ಪಿ.ಸಿ.ಬಬಿತ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಶರತ್ ವಂದಿಸಿದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಜ.3 NEWS DESK : ಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ಎಮ್ಮೆಮಾಡು ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರಾಮ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ ಅವರನ್ನು ಆತ್ಮೀಯವಾಗಿ ಗೌರವಿಸಿ ಬೀಳ್ಕೊಡಲಾಯಿತು. ನಾಪೋಕ್ಲು ಗ್ರಾಮ ಪಂಚಾಯಿತಿಯಲ್ಲಿ ಗ್ರಾಮಾಭಿವೃದ್ಧಿ ಅಧಿಕಾರಿಗಳಾಗಿ ಚೋಂದಕ್ಕಿ ಅವರು ಏಳು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಇದೀಗ ನಿವೃತ್ತಿ ಹೊಂದಿದ ಕಾರಣ ಎಮ್ಮೆಮಾಡು ಹಾಗೂ ನಾಪೋಕ್ಲು ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ನಾಪೋಕ್ಲು ಪಂಚಾಯಿತಿ ಅಧ್ಯಕ್ಷ ವನಜಾಕ್ಷಿ ರೇಣುಕೇಶ್ ಅವರ ಅಧ್ಯಕ್ಷತೆ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್, ಬಲ್ಲಮಾವಟ್ಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೌರಿರ ಶರತ್, ನಾಪೋಕ್ಲು ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರು ಕಂಗಂಡ ಶಶಿ ಮಂದಣ್ಣ ಹಾಗೂ ಸದಸ್ಯರ, ಸಿಬ್ಬಂದಿ, ಎಮ್ಮೆಮಾಡು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಚಂಬರಂಡ ಐಸಮ್ಮ, ಸದಸ್ಯರ ಹಾಗೂ ಸಿಬ್ಬಂದಿ ಉಪಸಿತರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜ.3 NEWS DESK : ಮಡಿಕೇರಿ ನಗರ ಠಾಣೆ ಮತ್ತು ಮಡಿಕೇರಿ ಸಂಚಾರ ಠಾಣೆಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಭೇಟಿ ನೀಡಿ ಠಾಣೆಯ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಕಾನೂನು ಸುವ್ಯವಸ್ಥೆ, ಅಪರಾಧ ತಡೆ ಮತ್ತು ಪತ್ತೆ, ಸಂಚಾರ ಸುವ್ಯವಸ್ಥೆ ಮುಂತಾದ ವಿಚಾರಗಳ ಬಗ್ಗೆ ಚರ್ಚಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ಮಡಿಕೇರಿ NEWS DESK ಜ.2 : ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಸ್.ಜೆ.ಸೋಮಶೇಖರ್ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. ಜಿ.ಪಂ ಸಿಇಒ ಆನಂದ್ ಪ್ರಕಾಶ್ ಮೀನಾ ಅವರಿಂದ ಅಧಿಕಾರ ಸ್ವೀಕರಿಸಿದರು. ನೂತನ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಡಿಎಫ್ಒ ಅಭಿಷೇಕ್ , ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿಖಿಲ್ ಚಕ್ಕಿ, ತಹಶಿಲ್ದಾರರಾದ ಪ್ರವೀಣ್ ಕುಮಾರ್, ಕಿರಣ್ ಗೌರಯ್ಯ, ಶ್ರೀಧರ, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಅಭಿನಂದಿಸಿದರು. ನೂತನ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಈ ಹಿಂದೆ ಪಂಚಾಯತ್ ರಾಜ್ ಇಲಾಖೆಯಲ್ಲಿ ಆಯುಕ್ತರಾಗಿ, ಚಿತ್ರದುರ್ಗ ಜಿಲ್ಲೆಯಲ್ಲಿ ಜಿ.ಪಂ.ಸಿಇಒ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ.






